ಸಿದ್ದಾಪುರ ಆ.2 : ಶಾಂತಿ ಸಹಬಾಳ್ವೆಯ ಸಹೋದರತ್ವ ಸಾರಿದ ಬ್ರಹ್ಮಶ್ರೀ ನಾರಾಯಣ ಗುರುಗಳ ಆದರ್ಶಗಳನ್ನು ಮೈಗೂಡಿಸಿಕೊಂಡು ಸಮಾಜ ಸುಧಾರಣೆ ಮೂಲಕ ಅಭಿವೃದ್ಧಿಯೊಂದಿಗೆ ಮುನ್ನಡೆಯಲು ಸಾಧ್ಯವಾಗಲಿದ್ದು, ಶಿಕ್ಷಣದೊಂದಿಗೆ ಮುಖ್ಯವಾಹಿನಿಗೆ ಬರಬೇಕೆಂದು ವಿರಾಜಪೇಟೆ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಅಭಿಪ್ರಾಯ ವ್ಯಕ್ತಪಡಿಸಿದರು. ಸಿದ್ದಾಪುರದ ಸ್ವರ್ಣ ಮಾಲಾ ಸಭಾಂಗಣದಲ್ಲಿ ಶ್ರೀ ನಾರಾಯಣ ಗುರು ಪರಿಪಾಲನಾ ಯೋಗಂ ಜಿಲ್ಲಾ ಘಟಕದ ವತಿಯಿಂದ ನಡೆದ ಬ್ರಹ್ಮಶ್ರೀ ನಾರಾಯಣ ಗುರುಗಳ 169ನೇ ಜಯಂತಿ ಆಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, 19ನೇ ಶತಮಾನದಲ್ಲಿ ನಾರಾಯಣ ಗುರುಗಳು ಪ್ರತಿಪಾದನೆ ಮಾಡಿದಂತ ತತ್ವ ಸಿದ್ಧಾಂತ ಆದರ್ಶಗಳನ್ನ ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಂಡು ಅಭಿವೃದ್ಧಿಯೊಂದಿಗೆ ಮುನ್ನಡೆದಲ್ಲಿ ಇಂತಹ ಆಚರಣೆಗಳು ಯಶಸ್ಸು ಕಾಣಲು ಸಾಧ್ಯವಾಗಲಿದೆ. ಕೊಡಗು ಜಿಲ್ಲೆಯಲ್ಲೂ ಎಸ್ ಎನ್ ಡಿ ಪಿ ಸಂಘಟನೆ ನಿರಂತರ ಸೇವಾ ಮನೋಭಾವದ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡು ಮುನ್ನಡೆಯುತ್ತಿದ್ದು ಸಮಾಜದ ಏಳಿಗೆಗಾಗಿ ಶ್ರಮಿಸುತ್ತಿರುವುದು ಶ್ಲಾಘನೆಯ ಇಂತಹ ಆಚರಣೆಗಳಿಗೆ ಹೆಚ್ಚು ಸಹಕಾರ ನೀಡುವ ಮೂಲಕ ಮತ್ತಷ್ಟು ಬಲಿಷ್ಠ ಸಂಘಟನೆಯಾಗಿ ಯುವ…
ಲೇಖಕ: admin
ಮಡಿಕೇರಿ ಸೆ.2 : ಮಡಿಕೇರಿಯ ಹಳೆಯ ಬಸ್ ನಿಲ್ದಾಣದಲ್ಲಿರುವ ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ವೃತ್ತಕ್ಕೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಹಾನಿಗೊಳಗಾದ ವೃತ್ತವನ್ನು ಸಾರಿಗೆ ನಿಗಮ ದುರಸ್ತಿ ಪಡಿಸಿದೆ. ಅಜ್ಜಮಾಡ ದೇವಯ್ಯ ಪ್ರತಿಮೆ ಇರುವ ವೃತ್ತಕ್ಕೆ ಬಸ್ ಡಿಕ್ಕಿಯಾಗಿ ವೃತ್ತಕ್ಕೆ ಹಾನಿಯಾದ ಹಿನ್ನೆಲೆ ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ದೂರು ದಾಖಲಿಸಿದ್ದರು.
ಮಡಿಕೇರಿ ಸೆ.2 : ಕೇಂದ್ರ ಸರ್ಕಾರವು 2018-19 ನೇ ಸಾಲಿನ ಬಜೆಟ್ನ ಕಿಸಾನ್ ಕ್ರೇಡಿಟ್ ಕಾರ್ಡ್ ಸೌಲಭ್ಯವನ್ನು ಮೀನುಗಾರಿಕೆ ಚಟುವಟಿಕೆ ಹಾಗೂ ಮೀನು ಕೃಷಿಕರಿಗೆ ವಿಸ್ತರಣೆ ಮಾಡಿ ಘೋಷಿಸಿದೆ. ಈ ಯೋಜನೆಯಡಿ ಮೀನು ಕೃಷಿಕರು ಅಲ್ಪಾವದಿ ಸಾಲವನ್ನು ಬ್ಯಾಂಕ್ಗಳ ಷರತ್ತು ಮತ್ತು ನಿಬಂಧನೆಗಳಿಗೆ ಒಳಪಟ್ಟು ಪಡೆಯಬಹುದಾಗಿದೆ. ಈಗಾಗಲೇ ಕಿಸಾನ್ ಕ್ರೆಡಿಟ್ ಕಾರ್ಡ್ ಪಡೆದುಕೊಂಡಿರುವ ರೈತರು ಮೀನುಗಾರಿಕೆ ಚಟುವಟಿಕೆಗಳಿಗೂ ಬ್ಯಾಂಕ್ಗಳಿಂದ ಅಲ್ಪಾವದಿ ಸಾಲವನ್ನು ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿ ಹಾಗೂ ಸಾಲದ ಅರ್ಜಿ ನಮೂನೆಗಳನ್ನು ಪಡೆದು ಭರ್ತಿ ಮಾಡಿ ಸೆಪ್ಟೆಂಬರ್, 15 ರೊಳಗೆ ಸಂಬಂಧಪಟ್ಟ ತಾಲ್ಲೂಕು ಮೀನುಗಾರಿಕೆ ಇಲಾಖೆಗೆ ಸಲ್ಲಿಸುವಂತೆ ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
ಮಡಿಕೇರಿ ಸೆ.1 : ಬದಲಾದ ಇಂದಿನ ಕಾಲಘಟ್ಟದಲ್ಲಿ ಕೊಡವ ಭೂಮಿ ಮತ್ತು ಅತ್ಯಂತ ಸೂಕ್ಷ್ಮ ಕೊಡವ ಬುಡಕಟ್ಟು ಜನಾಂಗದ ಸಂರಕ್ಷಣೆಯ ಅನಿವಾರ್ಯತೆ ಎದುರಾಗಿದೆ ಎಂದು ಹೈ ಕೋರ್ಟ್ ನ್ಯಾಯವಾದಿ ಕೀರನ್ ನಾರಾಯಣ್ ಪ್ರತಿಪಾದಿಸಿದ್ದಾರೆ. ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಮಡಿಕೇರಿ ನಗರದ ಹೊರ ವಲಯದ ಕ್ಯಾಪಿಟಲ್ ವಿಲೇಜ್ ಮಂದ್ ನಲ್ಲಿ ನಡೆದ 29ನೇ ವರ್ಷದ ಸಾರ್ವತ್ರಿಕ “ಕೈಲ್ ಪೊಳ್ದ್” ಹಬ್ಬದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ಕೊಡವರ ಅನನ್ಯ ಭೂಮಿ ಮತ್ತು ಸುಂದರವಾದ ಕೊಡವ ರೇಸ್ ಅನ್ನು ಒಟ್ಟಿಗೆ ಸಂರಕ್ಷಿಸಬೇಕಾಗಿದೆ. ಶಿಕ್ಷಣ, ಆರ್ಥಿಕ ಪ್ರಗತಿ ಮತ್ತು ಭವಿಷ್ಯವನ್ನು ಹುಡುಕಿಕೊಂಡು ಇಂದು ಯುವ ಜನಾಂಗ ಕೊಡಗಿನಿಂದ ಹೊರ ಹೋಗುತ್ತಿದ್ದಾರೆ. ಆದ್ದರಿಂದ ಭೂಮಿ ಮತ್ತು ಕೊಡವ ಜನಾಂಗವನ್ನು ಒಟ್ಟಿಗೆ ಸಂರಕ್ಷಿಸುವುದು ಬಹಳ ಮುಖ್ಯ. ಕೊಡವಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆಯನ್ನು ಸಾಧಿಸುವ ಮೂಲಕ ಆ ಎಲ್ಲಾ ಉತ್ತಮ ಅವಕಾಶಗಳನ್ನು ಸೃಷ್ಟಿಸಲಾಗುತ್ತದೆ ಮತ್ತು ಕೊಡವ ಜನಾಂಗದ ಸರ್ವಾಂಗೀಣ ಸಬಲೀಕರಣ ಸಶಕ್ತಗೊಳಿಸಲು ಹಾದಿ ಸುಗಮವಾಗುತ್ತದೆ ಎಂದು…
ಮಡಿಕೇರಿ ಸೆ.1 : ಇತ್ತೀಚೆಗೆ ಮಡಿಕೇರಿಯ ಕೆಎಸ್ ಆರ್ ಟಿಸಿ ಡಿಪೋದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಸಿಬ್ಬಂದಿ ಅಭಿಷೇಕ್ ಅವರನ್ನು ಜಿಲ್ಲಾಸ್ಪತ್ರೆಯಲ್ಲಿ ಭೇಟಿಯಾದ ಶಾಸಕ ಡಾ.ಮಂತರ್ ಗೌಡ, ಆರೋಗ್ಯ ವಿಚಾರಿಸಿದರು. ಕುಟುಂಬದ ಸದಸ್ಯರಿಗೆ ಧೈರ್ಯ ತುಂಬಿದ ಶಾಸಕರು, ಸೂಕ್ತ ರೀತಿಯಲ್ಲಿ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚನೆ ನೀಡಿದರು.
ಮಡಿಕೇರಿ ಸೆ.1 : ಗಾಂಧಿ ಭವನ ನಿರ್ವಹಣೆ ಹಾಗೂ ಗೌರವ ಸಲಹಾ ಸಮಿತಿ ಸಭೆಯು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ನಗರದ ಗಾಂಧಿ ಭವನದಲ್ಲಿ ನಡೆಯಿತು. ಗಾಂಧಿ ಭವನವನ್ನು ಗಾಂಧೀಜಿ ಅವರ ಚಿಂತನೆ, ತತ್ವ ಹಾಗೂ ಅಧ್ಯಯನಕ್ಕಾಗಿಯೇ ಮೀಸಲಿಡಬೇಕಿದ್ದು, ಆ ನಿಟ್ಟಿನಲ್ಲಿ ಕಾರ್ಯಕ್ರಮಗಳಿಗೆ ಅವಕಾಶ ಮಾಡಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಜಿಲ್ಲೆಯಲ್ಲಿರುವ ವಿವಿಧ ಇಲಾಖೆಗಳ ಸರ್ಕಾರದ ಅಧಿಕೃತ ಕಾರ್ಯಕ್ರಮಗಳು ಹಾಗೂ ಶಾಲಾ-ಕಾಲೇಜುಗಳ ಕಾರ್ಯಕ್ರಮ ಆಯೋಜನೆಗೆ ಅವಕಾಶ ಕಲ್ಪಿಸಲು ಸಭೆಯಲ್ಲಿ ನಿರ್ಧರಿಸಲಾಯಿತು. ಸರ್ಕಾರದ ವಿವಿಧ ಇಲಾಖೆಗಳ ಕಾರ್ಯಕ್ರಮ ಆಯೋಜಿಸಲು ಮತ್ತು ಶೈಕ್ಷಣಿಕ ಹಾಗೂ ಸಾಂಸ್ಕøತಿಕ ಚಟುವಟಿಕೆ ಏರ್ಪಡಿಸಲು ಶುಲ್ಕ ಪಾವತಿಯ ವೆಚ್ಚ ನಿಗಧಿ ಮಾಡುವ ಬಗ್ಗೆ ಸುದೀರ್ಘ ಚರ್ಚೆ ನಡೆಯಿತು. ‘ಆ ನಿಟ್ಟಿನಲ್ಲಿ ಸರ್ಕಾರದ ವಿವಿಧ ಇಲಾಖೆಗಳ ಕಾರ್ಯಕ್ರಮಗಳಿಗೆ ಒಂದು ದಿನಕ್ಕೆ 3 ಸಾವಿರ ರೂ. ಹಾಗೂ ಶಾಲಾ ಕಾಲೇಜು ಕಾರ್ಯಕ್ರಮಗಳಿಗೆ 2 ಸಾವಿರ ರೂ. ನಿಗದಿ ಮಾಡಲು ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಯಿತು.’ ಸರ್ಕಾರಿ ಅಥವಾ ಶಾಲಾ-ಕಾಲೇಜು…
ಮಡಿಕೇರಿ ಸೆ.1 : ಕೊಡಗು ಜಿಲ್ಲಾ ಪಂಚಾಯತ್ನಲ್ಲಿ ಕಳೆದ ಒಂದು ವರ್ಷಗಳಿಂದ ಯೋಜನಾ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ ಜಗದೀಶ್ ಎಸ್.ಮತ್ತು ಅಧೀಕ್ಷಕರಾದ ಪಿ.ಪಿ.ಇಂದಿರಾ ಅವರನ್ನು ಆತ್ಮೀಯವಾಗಿ ಬೀಳ್ಕೊಡಲಾಯಿತು. ನಗರದ ಜಿ.ಪಂ.ಕಚೇರಿ ಸಭಾಂಗಣದಲ್ಲಿ ಜಿ.ಪಂ.ಸಿಇಒ ವರ್ಣಿತ್ ನೇಗಿ ಅವರು ಫಲ-ತಾಂಬೂಲ ನೀಡಿ ಶಾಲು ಹೊದಿಸಿ ಸನ್ಮಾನಿಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಯೋಜನಾಧಿಕಾರಿ ಜಗದೀಶ್ ಅವರು 25 ವರ್ಷಕಾಲ ಸರ್ಕಾರಿ ಸೇವೆ ಸಲ್ಲಿಸಿದ್ದು ಖುಷಿ ತಂದಿದೆ. ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ವಿವಿಧ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸಿದ್ದು ಸಂತಸ ತಂದಿದೆ ಎಂದರು. ಸರ್ಕಾರಿ ವೃತ್ತಿಯಲ್ಲಿ ಸಮಯ ಪ್ರಜ್ಞೆ ಮತ್ತು ತಾಳ್ಮೆ ಬಹು ಮುಖ್ಯವಾದುದಾಗಿದೆ. ಇವೆರಡನ್ನು ಅಳವಡಿಸಿಕೊಂಡಲ್ಲಿ ವೃತ್ತಿ ಜೀವನದಲ್ಲಿ ಯಶಸ್ಸು ಸಾಧಿಸಬಹುದು ಎಂದರು. ಅಧೀಕ್ಷಕರಾದ ಪಿ.ಪಿ.ಇಂದಿರಾ ಅವರು ಮಾತನಾಡಿ 35 ವರ್ಷಗಳ ಸರ್ಕಾರಿ ವೃತ್ತಿ ಜೀವನ ಸಾಕಷ್ಟು ತೃಪ್ತಿ ತಂದಿದ್ದು, ವೃತ್ತಿ ಜೀವನದಲ್ಲಿ ಸಹಕರಿಸಿದ ಎಲ್ಲಾ ಅಧಿಕಾರಿ ಸಿಬ್ಬಂದಿಗಳನ್ನು ಸ್ಮರಿಸಿದರು. ಜಿ.ಪಂ.ಸಿಇಒ ವರ್ಣಿತ್ ನೇಗಿ ಅವರು ಮಾತನಾಡಿ,…
ಮಡಿಕೇರಿ ಸೆ.1 : ಕೊಡಗು ಪತ್ರಕರ್ತರ ಸಂಘ, ಅಖಿಲ ಕರ್ನಾಟಕ ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘ ಕೊಡಗು ಘಟಕ ಹಾಗೂ ಕೊಡಗು ಪತ್ರಿಕಾ ಭವನ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ ಸೆ.4 ರಂದು ಪತ್ರಿಕಾ ವಿತರಕರ ದಿನಾಚರಣೆ ನಡೆಯಲಿದೆ. ಅಂದು ಬೆಳಿಗ್ಗೆ 10.30 ಗಂಟೆಗೆ ನಗರದ ಪತ್ರಿಕಾ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಅಧ್ಯಕ್ಷ ಮಲ್ಲಿಕಾರ್ಜುನ ಬಂಗ್ಲೆ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಎ.ಮುರುಳೀಧರ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾಜಿ ವಿಧಾನ ಸಭಾಧ್ಯಕ್ಷ ಕೆ.ಜಿ.ಬೋಪಯ್ಯ, ಮಡಿಕೇರಿ ಶಕ್ತಿ ಪತ್ರಿಕೆಯ ಪ್ರಧಾನ ಸಂಪಾದಕ ಜಿ.ರಾಜೇಂದ್ರ, ಹಾಸನ ಜನಮಿತ್ರ ಸಂಪಾದಕ ಹಾಗೂ ಭೂಮಿಕ ನ್ಯೂಸ್ ಏಜೆನ್ಸಿ ಮಾಲೀಕ ಕೆ.ಆರ್.ನವೀನ್, ಅಖಿಲ ಕರ್ನಾಟಕ ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘದ ನಿರ್ದೇಶಕ ಟಿ.ಜಿ.ಸತೀಶ್ ಪಾಲ್ಗೊಳ್ಳಲಿದ್ದಾರೆ ಎಂದು ಕೊಡಗು ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಉಜ್ವಲ್ ರಂಜಿತ್ ತಿಳಿಸಿದ್ದಾರೆ.
ಮಡಿಕೇರಿ ಸೆ.1 : ತೆಕ್ಕಿಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಓಣಂ ಹಬ್ಬವನ್ನು ಸಂಭ್ರಮದಿಂದ ಸಾಂಪ್ರದಾಯಿಕವಾಗಿ ಆಚರಿಸಲಾಯಿತು. ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ತಾವು ಸಂಗ್ರಹಿಸಿದ ಹೂವುಗಳನ್ನು ಉಪಯೋಗಿಸಿ ಪೂಕಳಂ (ಹೂವಿನ ರಂಗೋಲಿ) ಬಿಡಿಸಿದರು. ಶಾಲಾ ಸ್ಥಾಪಕಾಧ್ಯಕ್ಷ ಟಿ.ಎಂ.ಶಹೀದ್ ತೆಕ್ಕಿಲ್ ಶುಭ ಹಾರೈಸಿದರು. ಹಬ್ಬದ ಅಂಗವಾಗಿ ಆಟ, ವರ್ಣ ರಂಜಿತ ಸ್ಪರ್ಧೆಗಳನ್ನು ನಡೆಯಿತು. ಆಚರಣೆಗೆ ಸಂಬಂಧಿಸಿದಂತೆ ಓಣಂ ಔತಣವನ್ನು ಏರ್ಪಡಿಸಲಾಯಿತು. ಅರಂತೋಡು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ 2023-24 ವಿಜೇತ ವಿದ್ಯಾರ್ಥಿಗಳಿಗೆ ಪ್ರಶಸ್ತಿಗಳನ್ನು ವಿತರಿಸಲಾಯಿತು. ಓಣಂ ಗೀತೆಯನ್ನು ಪ್ರಸ್ತುತಪಡಿಲಾಯಿತು. ಈ ಸಂದರ್ಭ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಉನೈಸ್ ಪೆರಾಜೆ, ಗೌರವಾಧ್ಯಕ್ಷ ತಾಜ್ ಮಹಮ್ಮದ್, ಆಡಳಿತ ಮಂಡಳಿಯ ಸದಸ್ಯ ಉಮ್ಮರ್ ಹಾಜಿ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ದಿನಕರ ಸಣ್ಣಮನೆ, ಶಾಲಾ ಮುಖ್ಯೋಪಾಧ್ಯಾಯ ಜೆ.ಡಿ.ಸಂಪತ್ , ಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಮಡಿಕೇರಿ ಸೆ.1 : ಕೈಲ್ ಮುಹೂರ್ತ (ಕೈಲ್ಪೊಳ್ದ್) ಅಂಗವಾಗಿ ಮೇಕೇರಿಯಲ್ಲಿ ಸೆ.3 ರಂದು ಗ್ರಾಮೀಣ ಕ್ರೀಡಾಕೂಟ ನಡೆಯಲಿದೆ. ಮೇಕೇರಿಯ ಸ್ವಾಗತ ಯುವಕ ಸಂಘ, ಜಿಲ್ಲಾ ಯುವ ಒಕ್ಕೂಟ ಕೊಡಗು, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಕೊಡಗು, ಯುವಸಬಲೀಕರಣ ನೆಹರು ಯುವಕೇಂದ್ರ, ಮಡಿಕೇರಿ ಮತ್ತು ಮಡಿಕೇರಿ ತಾಲ್ಲೂಕು ಯುವ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ ಬೆಳಗ್ಗೆ 8.30 ರಿಂದ ಆಟೋಟ ಸ್ಪರ್ಧೆಗಳು ಜರುಗಲಿದ್ದು, ಸಾರ್ವಜನಿಕ ಪುರುಷರಿಗೆ ಬಲೂನಿಗೆ ಗುಂಡು ಹೊಡೆಯುವುದು, ಸಾರ್ವಜನಿಕ ಪುರುಷರಿಗೆ ಮತ್ತು ಮಹಿಳೆಯರಿಗೆ ಭಾರದ ಗುಂಡು ಎಸೆತ, 3ರಿಂದ 4 ವಷದೊಳಗಿನ ಪುಟಾಣಿ ಮಕ್ಕಳಿಗೆ ಕಾಳು ಹೆಕ್ಕುವುದು, 4 ರಿಂದ 5.5 ವರ್ಷದೊಳಗಿನ ಮಕ್ಕಳಿಗೆ ಕಪ್ಪೆ ಕುಪ್ಪಳಿಸುವುದು, 1 ರಿಂದ 10ನೇ ತರಗತಿಗನುಗುಣವಾಗಿ ಬಾಲಕ ಮತ್ತು ಬಾಲಕಿಯರಿಗೆ ಪ್ರತ್ಯೇಕ 75 ಮೀ ಹಾಗೂ 100 ಮೀ ಓಟದ ಸ್ಪರ್ಧೆ, ಸಾರ್ವಜನಿಕ ಮಹಿಳೆಯರಿಗೆ ನಿಂಬೆ ಚಮಚ ಓಟ, ಸಂಗೀತ ಕುರ್ಚಿ, ಸಾರ್ವಜನಿಕ ಪುರುಷರಿಗೆ ರಸ್ತೆ ಓಟ, ಸ್ಲೋ ಬೈಕ್ ರೇಸ್, ಗೋಣಿಚೀಲ ಓಟ,…






