ಮಡಿಕೇರಿ ಆ.7 : “ವಿಶ್ವ ಆದಿಮಸಂಜಾತ ಸ್ಥಳೀಯ ಜನರ” ಅಂತರಾಷ್ಟ್ರೀಯ ದಿನದ ಪ್ರಯುಕ್ತ ಆ.9 ರಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಿ ಕೊಡವ ಸ್ವಯಂ ನಿರ್ಣಯ ಹಕ್ಕು ಮತ್ತು ಕೊಡವ ಲ್ಯಾಂಡ್ ಭೂ ರಾಜಕೀಯ ಸ್ವಾಯತತ್ತೆಯನ್ನು ಒಳಗೊಂಡ ವಿವಿಧ ರಾಜ್ಯಾಂಗದತ್ತ ಹಕ್ಕುಗಳ ಬೇಡಿಕೆಗಳ ಕುರಿತು ಗಮನ ಸೆಳೆಯಲಿದೆ ಎಂದು ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಬುಧವಾರ ಬೆಳಗ್ಗೆ 10.30 ಗಂಟೆಗೆ ಶಾಂತಿಯುತ ಧರಣಿ ನಡೆಸಿ ಸ್ವಯಂ ನಿರ್ಣಯದ ಹಕ್ಕುಗಳನ್ನು ಮಂಡಿಸಲಾಗುವುದು ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 2023ನೇ ವರ್ಷವನ್ನು ಪ್ರಪಂಚದಾದ್ಯಂತದ ಆದಿಮಸಂಜಾತ ಸ್ಥಳೀಯ ಜನರ ಸ್ವಯಂ ನಿರ್ಣಯದ ಹಕ್ಕುಗಳ ವರ್ಷವೆಂದು ಯುಎನ್ಒ/ವಿಶ್ವ ರಾಷ್ಟ್ರ ಸಂಸ್ಥೆ ಘೋಷಿಸಿದೆ. ಕೊಡವರು ಕೊಡವ ಪ್ರದೇಶದ ಆದಿಮಸಂಜಾತ ಸ್ಥಳೀಯ ಬುಡಕಟ್ಟು ಜನಾಂಗವಾಗಿದೆ. ಆದ್ದರಿಂದ ಆಂತರಿಕ ರಾಜಕೀಯ ಸ್ವ-ನಿರ್ಣಯದ ಹಕ್ಕುಗಳು ಮತ್ತು ಕೊಡವಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಕುರಿತು ಆಡಳಿತ ವ್ಯವಸ್ಥೆಯ ಗಮನ ಸೆಳೆಯಲು ಧರಣಿ ನಡೆಸಲಾಗುತ್ತಿದೆ. ಸ್ವಯಂ…
ಲೇಖಕ: admin
ಮಡಿಕೇರಿ ಆ.7 : ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ನೂತನ ಜಿಲ್ಲಾಧ್ಯಕ್ಷ ಪಿ.ಎ.ಹನೀಫ್ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರನ್ನು ಭೇಟಿ ಮಾಡಿದರು. ಈ ಸಂದರ್ಭ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ. ಶಶಿಧರ್ ಹಾಗೂ ಕಾಂಗ್ರೆಸ್ ಪ್ರಮುಖರು ಹಾಜರಿದ್ದರು.
ನಾಪೋಕ್ಲು ಆ.7 : ಇತಿಹಾಸ ಪ್ರಸಿದ್ಧ ನಾಪೋಕ್ಲು ಸಮೀಪದ ಚೆರಿಯಪರಂಬು ದರ್ಗಾ ಶರೀಫ್ ನಲ್ಲಿ ಅಂತ್ಯ ವಿಶ್ರಾಂತಿ ಪಡೆಯುತ್ತಿರುವ ಶಹೀದ್ ಅಬ್ದುಲ್ ರಹ್ಮಾನ್ ವಲಿಯುಲ್ಲಾಹಿ (ನ.ಮ)ಹಾಗೂ ಹೌಲಿಯಾಗಳ ಹೆಸರಿನಲ್ಲಿ ಪ್ರತಿವರ್ಷ ಆಚರಿಸಿಕೊಂಡು ಬರುತ್ತಿರುವ ಉರೂಸ್ ಸಮಾರಂಭವು 2024 ಫೆ.9ರಿಂದ 13ರ ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಚೆರಿಯಪರಂಬು ಮುಹಿಯುದ್ದೀನ್ ಜುಮಾ ಮಸೀದಿಯ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ. ವರದಿ :ಝಕರಿಯ ನಾಪೋಕ್ಲು
ಮಡಿಕೇರಿ ಆ.7 : ಮಡಿಕೇರಿಯಲ್ಲಿ ನಡೆದ ಕರ್ನಾಟಕದ ಬೆಸ್ಟ್ ಡ್ಯಾನ್ಸರ್ ಆಡಿಷನ್ ನಲ್ಲಿ ನಗರದ ಜನರಲ್ ತಿಮ್ಮಯ್ಯ ಪಬ್ಲಿಕ್ ಸ್ಕೂಲ್ನ 4ನೇ ತರಗತಿ ವಿದ್ಯಾರ್ಥಿನಿ ಪಿ.ಜಿ.ಸಿಂಚನ ಕಾವೇರಮ್ಮ ಪಾಲ್ಗೊಂಡು ಮುಂದಿನ ಮೆಗಾ ಆಡಿಷನ್ ಗೆ ಆಯ್ಕೆಯಾಗಿದ್ದಾಳೆ. ಇವಳು ನಾಟ್ಯಕಲಾ ಡ್ಯಾನ್ಸ್ ಸ್ಟುಡಿಯೋ ನೃತ್ಯ ಶಾಲೆಯ ತರಬೇತುದಾರ ಅಭಿಷೇಕ್ ಅವರಲ್ಲಿ ನೃತ್ಯ ತರಬೇತಿ ಪಡೆಯುತ್ತಿದ್ದಾಳೆ. ಸಿಂಚನ ಕೋಪಟ್ಟಿ ಗ್ರಾಮದ ಪೊಡನೋಳನ ಗಿರೀಶ್ ಹಾಗೂ ಪವಿತ್ರ ದಂಪತಿಗಳ ಪುತ್ರಿ.
ಮಡಿಕೇರಿ ಆ. 7 : ನಾಪೋಕ್ಲುವಿನ ಕರ್ನಾಟಕ ಪಬ್ಲಿಕ್ ಶಾಲೆಯ ಪ್ರೌಢ ಶಾಲಾ ವಿಭಾಗದಲ್ಲಿ ರೋಟರಿ ಇಂಟರಾಕ್ಟ್ ಕ್ಲಬ್ ನ ನೂತನ ಸಮಿತಿಯ ಪದಗ್ರಹಣ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮ ವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದ ರೋಟರಿ ಮಿಸ್ಟಿ ಹಿಲ್ಸ್ ನ ಇಂಟರಾಕ್ಟ್ ಸಮಿತಿ ಅಧ್ಯಕ್ಷ ಕಟ್ಟೆಮನೆ ಸೋನಾಜಿತ್, ಪದಗ್ರಹಣಾಧಿಕಾರಿಯಾಗಿ ಪ್ರಮಾಣ ವಚನ ಬೋಧಿಸಿದರು. ವಿದ್ಯಾಥಿ೯ಗಳಲ್ಲಿ ನಾಯಕತ್ವ ಗುಣ ಮತ್ತು ಸಾಮಾಜಿಕ ಹೊಣೆಗಾರಿಕೆ ಬೆಳೆಸುವಲ್ಲಿ ರೋಟರಿಯ ವಿದ್ಯಾಥಿ೯ ಘಟಕಗಳು ಸಹಕಾರಿ ಎಂದೂ ಸೋನಾಜಿತ್ ಹೇಳಿದರು. ರೋಟರಿ ಮಿಸ್ಟಿ ಹಿಲ್ಸ್ ನ ಅಧ್ಯಕ್ಷ ಪ್ರಮೋದ್ ಕುಮಾರ್ ರೈ ಮಾತನಾಡಿ, ನಾಪೋಕ್ಲುವಿನ ಕನಾ೯ಟಕ ಪಬ್ಲಿಕ್ ಶಾಲೆಯಲ್ಲಿ ಮಿಸ್ಟಿ ಹಿಲ್ಸ್ ವತಿಯಿಂದ 12 ವಷ೯ಗಳ ಹಿಂದೆ ಇಂಟರ್ಯಾಕ್ಟ್ ಘಟಕ ಪ್ರಾರಂಭಿಸಿದ್ದು ಅತ್ಯಂತ ಸಕ್ರಿಯವಾಗಿ ವಿದ್ಯಾಥಿ೯ಗಳು ಕಾಯ೯ಯೋಜನೆ ಕೈಗೊಳ್ಳುತ್ತಿದ್ದಾರೆ. ಈ ಮೂಲಕ ಸಾಮಾಜಿಕ ಬದ್ದತೆಯನ್ನು ಈ ವಿದ್ಯಾಥಿ೯ಗಳಲ್ಲಿ ಕಾಣಬಹುದಾಗಿದೆ ಎಂದು ಹೇಳಿದರು. ಮುಖ್ಯ ಅತಿಥಿಗಳಾಗಿ ಕಾರ್ಯದರ್ಶಿ ರತ್ನಾಕರ್ ರೈ, ಜಗದೀಶ್, ಅಜಿತ್ ನಾಣಯ್ಯ, ಕಾರ್ಯಪ್ಪ, ಉಪ ಪ್ರಾಂಶುಪಾಲ…
ವಿರಾಜಪೇಟೆ ಆ.7 : ಕೊಡಗಿನಲ್ಲಿ ಮುಂಗಾರು ಮಳೆಯ ಏರಿಳಿತದ ನಡುವೆ ಕೃಷಿ ಚಟುವಟಿಕೆಗಳು ಚುರುಕುಗೊಂಡಿವೆ. ಇದರ ಮಧ್ಯೆ “ಗ್ರಾಮೀಣ ಕೆಸರು ಗದ್ದೆ ಕ್ರೀಡಾಕೂಟ” ವೈಭವದಿಂದ ನಡೆಯುತ್ತಿದೆ. ವಿರಾಜಪೇಟೆಯ ಅರಮೇರಿ ಕಳಂಚೇರಿ ಮಠದ ಎಸ್.ಎಂ.ಎಸ್. ವಿದ್ಯಾಪೀಠ ಇಂತಹದ್ದೊಂದು ಕ್ರೀಡಾಕೂಟ ದೇಸೀ ಸೊಗಡನ್ನು ಅನಾವರಣಗೊಳಿಸಿತ್ತು. ಕೆಸರುಗದ್ದೆ ಕ್ರೀಡಾಕೂಟದಲ್ಲಿ ವಾಲಿಬಾಲ್, ಥ್ರೋಬಾಲ್, ಕಬ್ಬಡ್ಡಿ, ರನ್ನಿಂಗ್ ಮೊದಲಾದ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳುವ ಮೂಲಕ ಮಕ್ಕಳು ಮನಸೋ ಇಚ್ಛೆ ಖುಷಿಪಟ್ಟರು. ಮೋಡ ಮುಸುಕಿದ ವಾತಾವರಣ, ಭತ್ತದ ನಾಟಿಗೆ ಸಿದ್ಧಗೊಂಡಿದ್ದ ಕೆಸರು ಗದ್ದೆಯಲ್ಲಿ, ಕೆಸರಿನಲ್ಲಿ ಶಾಲಾ ವಿದ್ಯಾರ್ಥಿಗಳು ಗದ್ದೆಗೆ ಇಳಿದು ನಾನಾ ಸ್ಪರ್ಧೆಗಳಲ್ಲಿ ಪಾಲ್ಗೊಂಡರು. ಪ್ರತ್ಯೇಕವಾಗಿ ಕೆಸರು ಗದ್ದೆ ಓಟ, ವಾಲಿಬಾಲ್, ಥ್ರೋಬಾಲ್, ವಿವಿಧ ಸ್ಪರ್ಧೆಗಳು ನಡೆದವು. ಇದರೊಂದಿಗೆ ಕೆಸರಿನಲ್ಲಿ ವಿದ್ಯಾರ್ಥಿಗಳ ರೋಚಕ ನೃತ್ಯ ಕ್ರೀಡೆಗೆ ಸಾಂಸ್ಕೃತಿಕ ಮೆರುಗನ್ನು ನೀಡಿತು, ಬಹುತೇಕ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಪಾಲ್ಗೊಂಡಿದ್ದರು. ಕೆಸರು ಗದ್ದೆಯಲ್ಲಿ ಎದ್ದು ಬಿದ್ದು ಖುಷಿಪಟ್ಟರು. ಶಿಕ್ಷಕರು ಇದಕ್ಕೆ ಪ್ರೋತ್ಸಾಹ ನೀಡಿದರು. ಎಸ್.ಎಂ. ಎಸ್ ಶಾಲೆಯಲ್ಲಿ ಕಳೆದ 15 ವರ್ಷಗಳಿಂದ ಕೆಸರು ಗದ್ದೆ ಗ್ರಾಮೀಣ…
ಬೆಂಗಳೂರು : ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ವ್ಯಕ್ತ ಪಡಿಸಿದ್ದಾರೆ. ಸಿದ್ದರಾಮಯ್ಯ ಟ್ವೀಟ್ ಮಾಡಿ, ಕನ್ನಡದ ಖ್ಯಾತ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನ ಅವರ ಅಕಾಲಿಕ ನಿಧನದ ವಾರ್ತೆ ಆಘಾತವನ್ನುಂಟುಮಾಡಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ. ಸ್ಪಂದನಾ ಅವರ ಅಗಲಿಕೆಯಿಂದ ನೊಂದಿರುವ ವಿಜಯ ರಾಘವೇಂದ್ರ ಹಾಗೂ ಬಿ.ಕೆ ಶಿವರಾಂ ಅವರ ಕುಟುಂಬಕ್ಕೆ ನನ್ನ ಸಂತಾಪಗಳು ಎಂದು ಟ್ವೀಟ್ ಮಾಡಿದ್ದಾರೆ.
ಮಡಿಕೇರಿ ಆ.7 : ಕರ್ನಾಟಕ ರಾಜ್ಯ ಗ್ರಾ.ಪಂ ನೌಕರರ ಸಂಘ ಸಿಐಟಿಯು ಸಂಯೋಜಿತ ಜಿಲ್ಲಾ ಮಟ್ಟದ ವಿಶೇಷ ಸಭೆ ಮಡಿಕೇರಿ ಬಾಲ ಭವನದಲ್ಲಿ ನಡೆಯಿತು. ಜಿಲ್ಲಾಧ್ಯಕ್ಷ ಪಿ.ಆರ್ ಭರತ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಗ್ರಾ.ಪಂ ನೌಕರರು ಎದುರಿಸುತ್ತಿರುವ ಸಮಸ್ಯೆಗಳು ಸರಕಾರದ ಜೊತೆ ನಡೆಸಿರುವ ಚರ್ಚೆಯ ಬಗ್ಗೆ ಪ್ರಸ್ತಾಪಿಸಲಾಯಿತು. ಸಿ ಐ ಟಿ ಯು ರಾಜ್ಯಾಧ್ಯಕ್ಷರಾಗಿ, ಪ್ರದಾನ ಕಾರ್ಯದರ್ಶಿಯಾಗಿ ಹೆಚ್ಚು ಕಾಲ ಸಲ್ಲಿಸಿದ ದಿವಂಗತ ವಿ.ಪಿ.ಕುಲಕರ್ಣಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ವಿ.ಪಿ.ಕುಲಕರ್ಣಿ ಅವರ ಸೇವೆ ಗ್ರಾ.ಪಂ ನೌಕರರಿಗೆ ಸರ್ಕಾರದಿಂದ ಕೊಡಿಸಿದ ಅನುಕೂಲಗಳ ಬಗ್ಗೆ ಹಲವಾರು ವಿಷಯವನ್ನು ರಾಜ್ಯ ಪ್ರದಾನ ಕಾರ್ಯದರ್ಶಿ ಜಿ.ರಾಮಕೃಷ್ಣ ಪ್ರಸ್ತಾಪಿಸಿದರು. ವೇದಿಕೆಯಲ್ಲಿ ಉಪಾಧ್ಯಕ್ಷರಾದ ಎಂ.ಎಸ್. ಮಹದೇವ್, ವಿದ್ಯಾ ಶ್ರೇಯಸ್, ಹಾಸಿಫ್ ವೇಣು, ಖಜಾಂಚಿ ವಸಂತ್, ಹಾಗೂ ಇತರರು ಹಾಜರಿದ್ದರು.
ಮಡಿಕೇರಿ ಆ.7 : ರಾಜ್ಯದ ಕ್ರೀಡಾ ತವರೂರು ಕೊಡಗು ಕ್ರೀಡೆಯಲ್ಲಿ ಸದಾ ಸುದ್ದಿಯಲ್ಲಿರುವ ಜಿಲ್ಲೆ.ಅಪ್ರತಿಮ ಕ್ರೀಡಾಪಟುಗಳನ್ನು ಪುಟ್ಟ ಜಿಲ್ಲೆ ಕೊಡಗು ಅಂತರರಾಷ್ಟ್ರೀಯ ಮಟ್ಟಕ್ಕೆ ಪರಿಚಯಿಸಿದೆ. ಬಾಲ್ಯದಿಂದಲೇ ಕ್ರೀಡೆಯಲ್ಲಿ ಸೂಕ್ತ ತರಬೇತಿ,ಶಾಲಾ ಮಟ್ಟದಿಂದಲೇ ಕ್ರೀಡಾಕೂಟಗಳಲ್ಲಿ ಭಾಗವಹಿಸಲು ಅವಕಾಶ ದೊರೆತರೆ ಮಾತ್ರ ಕ್ರೀಡಾ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಲು ಸಾಧ್ಯ. ವಿದ್ಯಾರ್ಥಿಗಳು ಪ್ರಾಥಮಿಕ ಶಾಲೆಯಿಂದಲೇ ಕ್ರೀಡೆಯ ಬಗ್ಗೆ ಆಸಕ್ತಿವಹಿಸಿಕೊಂಡರೆ ಮಾತ್ರ ಉತ್ತಮ ಕ್ರೀಡಾಪಟುಗಳಾಗಿ ರೂಪುಗೊಳ್ಳಲು ಸಾಧ್ಯ. ಆದರೆ ಮಕ್ಕಳಿಗೆ ಆಟದ ಪಾಠ ಹೇಳಿಕೊಡಲು ದೈಹಿಕ ಶಿಕ್ಷಕರೇ ಇಲ್ಲದಂತಾಗಿದೆ. ಹೌದು ಕ್ರೀಡಾ ತವರಿನಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಮಕ್ಕಳಿಗೆ ಕ್ರೀಡೆಯ ಬಗ್ಗೆ ತರಬೇತಿ ನೀಡಲು ದೈಹಿಕ ಶಿಕ್ಷಕರಿಲ್ಲದೆ ಕ್ರೀಡೆಯಿಂದ ವಿದ್ಯಾರ್ಥಿಗಳು ವಂಚಿತರಾಗುತ್ತಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಪ್ರಾಥಮಿಕ, ಪ್ರೌಢಶಾಲೆ ಸರ್ಕಾರಿ ಹಾಗೂ ಅನುದಾನಿತ ಶಾಲೆಯಲ್ಲಿ 80 ಕ್ಕಿಂತ ಹೆಚ್ಚು ವಿದ್ಯಾರ್ಥಿಗಳಿರುವ ಒಟ್ಟು 58 ಶಾಲೆಗಳಲ್ಲಿ ದೈಹಿಕ ಶಿಕ್ಷಕರ ಹುದ್ದೆ ಖಾಲಿ ಇದೆ. ಪ್ರಸಕ್ತ ಶೈಕ್ಷಣಿಕ ವರ್ಷ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕೊಡಗಿನ 10 ದೈಹಿಕ ಶಿಕ್ಷಕರು ಬೇರೆ ಜಿಲ್ಲೆಗಳಿಗೆ…
ಬೆಂಗಳೂರು: ಸ್ಯಾಂಡಲ್ ವುಟ್ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ಅವರಿಗೆ ಹೃದಯಾಘಾತದಿಂದ ನಿಧನಾರಾಗಿದ್ದಾರೆ. ವಿದೇಶ ಪ್ರವಾಸಕ್ಕೆ ತೆರಳಿದ್ದ ವೇಳೆ ಸಂಭವಿಸಿದ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಬ್ಯಾಂಕಾಕ್ ಪ್ರವಾಸಕ್ಕೆ ತೆರಳಿದ ವೇಳೆ ದುರಂತ ಸಂಭವಿಸಿದೆ. ಬ್ಯಾಂಕಾಕ್ ನಲ್ಲಿ ಹೃದಯಾಘಾತವಾಗಿ, ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸದ್ಯ ಲೋ ಬಿಪಿ ಹಾಗು ಹೃದಯಾಘಾತ ಆಗಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಸ್ಪಂದನಾ ನಿವೃತ್ತ ಹಿರಿಯ ಪೊಲೀಸ್ ಅಧಿಕಾರಿ ಬಿ.ಕೆ ಶಿವರಾಂ ಅವರ ಪುತ್ರಿಯಾಗಿದ್ದಾರೆ.






