ಮಡಿಕೇರಿ ನ.22 NEWS DESK : ಕಸ್ತೂರಿ ರಂಗನ್ ವರದಿ ವಿರೋಧ ಹೋರಾಟ ಸಮಿತಿಯವರು ಆಯೋಜಿಸಿದ ಸಿ ಮತ್ತು ಡಿ ಜಮೀನಿನ ಸಮಸ್ಯೆಯ ಕುರಿತಾದ ಚರ್ಚೆಯ ಸಭೆಯಲ್ಲಿ, ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಭಾಗವಹಿಸಿದರು. ಕಸ್ತೂರಿರಂಗನ್ ವಿರೋಧಿ ಸಮಿತಿಯ ಪ್ರಮುಖರು ತಮ್ಮ ಆತಂಕವನ್ನು ಮಂಡಿಸಿ, ಸಿ ಮತ್ತು ಡಿ ಜಾಗದ ವಿಚಾರ ಕುರಿತು ತಮ್ಮ ಅನಿಸಿಕೆ ಹೇಳಿಕೊಂಡರು. ಬಳಿಕ ಮಾತನಾಡಿದ ಶಾಸಕರು ಸಿ ಮತ್ತು ಡಿ ಜಮೀನು ವಿಷಯದಲ್ಲಿ ಇರುವ ಕಾನೂನು ವಿಷಯಗಳನ್ನು ಸಭೆಗೆ ಮನವರಿಗೆ ಮಾಡಿದರಲ್ಲದೆ, ಮುಂದೆ ಯಾವ ರೀತಿ ಇದಕ್ಕೆ ಪರಿಹಾರ ಕಂಡುಕೊಳ್ಳಬಹುದು ಎಂದು ವಿವರಿಸಿದರು. ಹೋರಾಟ ಸಮಿತಿಯ ಅಧ್ಯಕ್ಷರಾದ ಧರ್ಮಜ ಉತ್ತಪ್ಪ ಅಧ್ಯಕ್ಷತೆ ವಹಿಸಿದ್ದರು. ಮಡಿಕೇರಿ ಶಾಸಕರಾದ ಡಾ. ಮಂತರ್ ಗೌಡ, ಕರ್ನಾಟಕ ಕ್ರೀಡಾ ಉಪಾಧ್ಯಕ್ಷರು ಚೆಪ್ಪುಡೀರ ಅರುಣ್ ಮಾಚಯ್ಯ, ಮಾಜಿ ಶಾಸಕರಾದ ಕೆ.ಜಿ ಬೋಪಯ್ಯ ಹಾಗೂ ಹೋರಾಟ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.…
ಲೇಖಕ: admin
ವಿರಾಜಪೇಟೆ ನ.22 NEWS DESK : ಚೆಯ್ಯಂಡಾಣೆಯ ಕೊಕೇರಿ “ನೀಲಿಯತ್ ಲೇಡೀಸ್ ಕ್ಲಬ್” ವತಿಯಿಂದ ಆಯೋಜಿಸಿದ ಮಹಿಳಾ ಕ್ರಿಕೆಟ್ ಪಂದ್ಯಾವಳಿಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು. ಚೆಯ್ಯಂಡಾಣೆಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕರು, ಸಮಾಜದ ಎಲ್ಲಾ ಚಟುವಟಿಕೆಗಳಲ್ಲಿ ಮಹಿಳೆಯರು ಪ್ರಮುಖ ಪಾತ್ರ ವಹಿಸುತ್ತಿರುವುದು ಸಮಾಜದ ಏಳಿಗೆಗೆ ಉತ್ತಮವಾದ ಬೆಳವಣಿಗೆ. ಹಾಗೆಯೇ ಇತ್ತೀಚಿನ ದಿನಗಳಲ್ಲಿ ಎಲ್ಲಾ ರೀತಿಯ ಕ್ರೀಡೆಗಳಲ್ಲಿ ಮಹಿಳೆಯರ ಸಾಧನೆ ಅತ್ಯಂತ ಶ್ಲಾಘನೀಯವಾಗಿ ಮೂಡಿ ಬರುತ್ತಿದೆ. ವಿಶೇಷವಾಗಿ ಕ್ರೀಡೆಗೆ ಹೆಸರುವಾಸಿಯಾಗಿರುವ ನಮ್ಮ ಕೊಡಗು ಜಿಲ್ಲೆಯಲ್ಲಿ ಹೆಚ್ಚಿನ ಮಹಿಳೆಯರು/ಯುವತಿಯರು ತಮ್ಮನ್ನು ಕ್ರೀಡೆಯಲ್ಲಿ ತೊಡಗಿಸಿಕೊಂಡಿರುವುದು ನಾಡಿಗೆ ಮಾತ್ರ ಅಲ್ಲ ದೇಶಕ್ಕೆ ಹೆಮ್ಮೆಯ ಸಂಗತಿ ಎಂದು ಬಣ್ಣಿಸಿದರು. ಇಂದಿನ ಈ ಮಹಿಳಾ ಕ್ರಿಕೆಟ್ ಪಂದ್ಯಾಟ ಇಂತಹದೇ ಪ್ರತಿಭೆಗಳ ಅನಾವರಣಕ್ಕೆ ಸಾಕ್ಷಿಯಾಗಲಿ ಎಂದು ಶುಭ ಹಾರೈಸಿದರು. ಈ ಸಂದರ್ಭ ಪೆಮ್ಮಂಡ ನಂದ ನಾಣಯ್ಯ, ಪಂಚಾಯಿತಿ ಅಧ್ಯಕ್ಷರು ಪೆಮ್ಮಂಡ ಕೌಶಿ ಕಾವೇರಮ್ಮ, ಉಪಾಧ್ಯಕ್ಷರು ಕೋಡಿರ ವಿನೋದ್ ನಾಣಯ್ಯ, ಸದಸ್ಯರು…
ಮಡಿಕೇರಿ ನ.22 NEWS DESK : ಕೊಡಗು ಜಿಲ್ಲೆಯ ಕಲೆ, ಕ್ರೀಡೆ, ಸಂಸ್ಕøತಿ, ಖಾದ್ಯ, ಕೊಡಗಿನ ದಿನಚರಿ, ಧೈವಿಕತೆ, ಅರಣ್ಯ, ಪ್ರವಾಸಿ ಸ್ಥಳ, ಧಾರ್ಮಿಕ ಸ್ಥಳ, ಪ್ರವಾಸೋದ್ಯಮ ಮತ್ತು ಸಾಹಸೋದ್ಯಮ, ಬೆಳೆ ಹಾಗೂ ಇತರೆ ಎಲ್ಲಾ ವಿಷಯಗಳ ಸಮಗ್ರ ಮಾಹಿತಿಯನ್ನೊಳಗೊಂಡ 160 ಪುಟಗಳ ಕನ್ನಡ ಹಾಗೂ ಆಂಗ್ಲ ಭಾμÉಯ ಕಾಫಿ ಟೇಬಲ್ ಪುಸ್ತಕವನ್ನು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ನಗರದ ಜಿ.ಪಂ.ಸಭಾಂಗಣದಲ್ಲಿ ಬಿಡುಗಡೆ ಮಾಡಿದರು. ಈ ಸಂದರ್ಭ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ಶಾಸಕ ಡಾ.ಮಂತರ್ ಗೌಡ, ಜಿಲ್ಲಾಧಿಕಾರಿ ವೆಂಕಟ್ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಉಪಕಾರ್ಯದರ್ಶಿ ಚಂದ್ರಶೇಖರ್, ಸಹಾಯಕ ಕಾರ್ಯದರ್ಶಿ ಅಬ್ದುಲ್ ನಬಿ, ಜೀವನ್ ಕುಮಾರ್ ಇತರರು ಇದ್ದರು.
ಮಡಿಕೇರಿ ನ.22 NEWS DESK : ಕೊಡಗು ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಿಂದಾಗಿ ಲೋಕೋಪಯೋಗಿ, ಪಂಚಾಯತ್ ರಾಜ್ ಹಾಗೂ ನೀರಾವರಿ ಇಲಾಖೆ ವ್ಯಾಪ್ತಿಯ ರಸ್ತೆಗಳು ಹದಗೆಟ್ಟಿದ್ದು, ಈಗಾಗಲೇ ಮಳೆಗಾಲ ಮುಗಿದಿರುವುದರಿಂದ ಶೀಘ್ರ ರಸ್ತೆ ಕಾಮಗಾರಿ ಕೈಗೊಂಡು ಪೂರ್ಣಗೊಳಿಸುವಂತೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಸೂಚನೆ ನೀಡಿದ್ದಾರೆ. ನಗರದ ಜಿ.ಪಂ.ಸಭಾಂಗಣದಲ್ಲಿ ನಡೆದ 2025-26 ನೇ ಸಾಲಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ(20 ಅಂಶಗಳ ಕಾರ್ಯಕ್ರಮ ಸೇರಿದಂತೆ) ಜಿಲ್ಲಾ ಮಟ್ಟದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಮಳೆ ನಿಂತು 20 ದಿನಗಳಾಗಿದ್ದು, ಕೂಡಲೇ ಕಾಮಗಾರಿ ಆರಂಭಿಸಬೇಕು. ಸರ್ಕಾರದಿಂದಲೂ ಸಹ ರಸ್ತೆ ಕಾಮಗಾರಿಗೆ ಹಣ ಬಿಡುಗಡೆಯಾಗಿದ್ದು, ರಸ್ತೆ ಕಾಮಗಾರಿ ಕೈಗೊಂಡು ಸಾರ್ವಜನಿಕರ ಓಡಾಟಕ್ಕೆ ಅನುಕೂಲ ಮಾಡುವಂತೆ ಎನ್.ಎಸ್.ಭೋಸರಾಜು ಅವರು ಸ್ಪಷ್ಟ ನಿರ್ದೇಶನ ನೀಡಿದರು. ಕೊಡಗು ಜಿಲ್ಲೆಯಲ್ಲಿ ಲೋಕೋಪಯೋಗಿ ಇಲಾಖೆ ಕೆಲಸಗಳು ತೃಪ್ತಿದಾಯಕವಾಗಿಲ್ಲ. ಮಳೆ ನಿಂತು 20 ದಿನವಾದರೂ ಕಾಮಗಾರಿಯನ್ನು ಕೈಗೊಳ್ಳದಿರುವುದು ಬೇಸರ ತರಿಸಿದೆ ಎಂದು ಸಚಿವರು ತೀವ್ರ ಅತೃಪ್ತಿ ವ್ಯಕ್ತಪಡಿಸಿದರು.…
ಮಡಿಕೇರಿ ನ.21 NEWS DESK : ಮಡಿಕೇರಿಯ ಕೊಡಗು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ತ್ರೈಮಾಸಿಕ ಪ್ರಗತಿ ಪರಿಶೀಲ ಸಭೆ ನಡೆಯಿತು. ಸಭೆಯಲ್ಲಿ ಇಲಾಖೆವಾರು ವರದಿಯನ್ನು ಪಡೆದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಸಣ್ಣ ನೀರಾವರಿ ಹಾಗೂ ತಂತ್ರಜ್ಞಾನ ಸಚಿವರು ಮತ್ತು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್ ಭೋಸರಾಜು ಅವರೊಂದಿಗೆ ಚರ್ಚಿಸುತ್ತಾ ಪ್ರತಿಯೊಂದು ಇಲಾಖೆಯ ವರದಿಯನ್ನು ಕೂಲಂಕುಶವಾಗಿ ಪರಿಶೀಲಿಸಿದರು. ಎಲ್ಲಾ ಇಲಾಖೆಯ ಅಧಿಕಾರಿಗಳು ತಮ್ಮ ವರದಿಯನ್ನು ಸಲ್ಲಿಸಿದರು. ಸಭೆಯಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ, ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರು ಚೆಪ್ಪುಡೀರ ಅರುಣ್ ಮಾಚಯ್ಯ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರು ತಿತೀರ ಧರ್ಮಜ ಉತ್ತಪ್ಪ, ಜಿಲ್ಲಾಧಿಕಾರಿ ವೆಂಕಟರ್ರಾಜಾ, ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಉಪವಿಭಾಗಾಧಿಕಾರಿಗಳು, ತಹಶೀಲ್ದಾರರು, ಕೆಡಿಪಿ ಸದಸ್ಯರುಗಳು ಹಾಗೂ ಎಲ್ಲಾ ಪ್ರಮುಖ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಸೋಮವಾರಪೇಟೆ ನ.21 NEWS DESK : ರಸ್ತೆ ಕಾಮಗಾರಿಯಲ್ಲಿ ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಕಳಪೆ ಕಾಮಗಾರಿಯಾಗದಂತೆ ಇಂಜಿನಿಯರ್ಗಳು ನೋಡಿಕೊಳ್ಳಬೇಕು. ಕಳಪೆಯಾದರೆ ಕ್ಷಮೆಯ ಪ್ರಶ್ನೆಯೇ ಇಲ್ಲ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಬೋಸರಾಜು ಹೇಳಿದರು. ಅರೇಯೂರು ಗ್ರಾಮದಲ್ಲಿ ನಡೆದ 14 ಕೋಟಿ ರೂ, ಗಳ ವೆಚ್ಚದ ಮಸಗೋಡು, ಅರೆಯೂರು, ಹೊಸಳ್ಳಿ, ಕಣಿವೆ ಮಾರ್ಗದ ರಸ್ತೆಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ರಸ್ತೆ ಕಾಮಗಾರಿ ಮುರ್ನಾಲ್ಕು ದಿನಗಳಲ್ಲಿ ಪ್ರಾರಂಭವಾಗಲಿದೆ. 100 ದಿನಗಳ ಒಳಗೆ ಕಾಮಗಾರಿ ಮುಕ್ತಾಯಗೊಳಿಸಬೇಕಾಗಿದೆ. ಈ ಗ್ರಾಮಗಳ ರಸ್ತೆ ಕಾಮಗಾರಿಗೆ ಇತಿಹಾಸದಲ್ಲೇ ಮೊದಲ ಬಾರಿಗೆ 14 ಕೋಟಿ ರೂ.ಗಳ ಅನುದಾನವನ್ನು ಸರ್ಕಾರ ನೀಡಿದೆ. ಗ್ರಾಮಸ್ಥರ ರಸ್ತೆ ಸಮಸ್ಯೆಯನ್ನು ಶಾಸಕರು ಅರ್ಥ ಮಾಡಿಕೊಂಡು ಅನುದಾನ ಕಲ್ಪಿಸಿರುವುದು ಶ್ಲಾಘನೀಯ. ಕಳೆದ 25 ವರ್ಷಗಳ ನಂತರ ಕೊಡಗಿನ ಜನತೆ ಡಾ.ಮಂತರ್ಗೌಡ ಮತ್ತು ಎ.ಎಸ್.ಪೊನ್ನಣ್ಣ ಅವರನ್ನು ಆಯ್ಕೆ ಮಾಡಿದ್ದಾರೆ. ಇಬ್ಬರು ಶಾಸಕರ ಬೇಡಿಕೆಗಳನ್ನು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಪ್ರೀತಿಯಿಂದ ಈಡೆರಿಸುತ್ತಿದ್ದಾರೆ ಎಂದು ಹೇಳಿದರು. ಕೊಡಗಿನಲ್ಲಿ ಹೆಚ್ಚಿನ…
ಪುತ್ತೂರು ನ.21 NEWS DESK : ಸ್ವಾಮೀ ವಿವೇಕಾನಂದರು ಬದುಕಿದ್ದು ಕೇವಲ 39 ವರ್ಷಗಳು ಮಾತ್ರ ಆದರೆ ಯುವಕರಿಗೆ ಮತ್ತು ಮನುಕುಲಕ್ಕೆ ಅವರು ನೀಡಿದ ಸಂದೇಶಕ್ಕೆ ಅಳಿವೇ ಇಲ್ಲ. ಇದರ ಒಂದಷ್ಟು ಭಾಗವನ್ನಾದರೂ ನಾವು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದ ಕ್ಯಾಪ್ಟನ್ ಬೃಜೇಶ್ ಚೌಟ ಹೇಳಿದರು. ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ನಡೆದ ಕಾಲೇಜು ವಾರ್ಷಿಕೋತ್ಸವ ಸಮಾರಂಭ ನವರಂಗ್-2025 ಇದರ ಮುಖ್ಯ ಅತಿಥಿಗಳಾಗಿ ಮಾತಾಡಿದರು. ಭಾರತೀಯರು ಭಯದಲ್ಲೇ ಬದುಕುವವರು ಎನ್ನುವ ಮಾತಿದೆ. ಇದಕ್ಕೆ ಅನೇಕ ಕಾರಣಗಳೂ ಇವೆ. ಆದರೆ ಆ ಮಾತನ್ನು ತೊಡೆದು ಹಾಕಿ ಭಯಮುಕ್ತರಾಗಿ ಬದುಕುವ ವ್ಯಾಪಕ ಅವಕಾಶಗಳಿವೆ ಎಂದರು. ಮಂಗಳೂರಿನಲ್ಲಿ 250ಕ್ಕೂ ಹೆಚ್ಚು ಮನೆಯಲ್ಲೇ ಬೆಳೆದ ಕಂಪೆನಿಗಳಿವೆ ಇವು ಸುಮಾರು 25000 ಉದ್ಯೋಗಿಗಳಿಗೆ ಅವಕಾಶವನ್ನು ನೀಡುತ್ತಿದ್ದು ಸಧ್ಯದಲ್ಲೇ ಇದೊಂದು ಐಟಿ ಹಬ್ ಆಗಿ ಬೆಳೆಯಲಿದೆ ಎಂದರು. ಈ ನೆಲದ ಸಾಮಥ್ರ್ಯಕ್ಕೆ ಅನುಗುಣವಾಗಿ ಹೊಸತನದ ಪ್ರಾರಂಭಕ್ಕೆ ಸರ್ವ ಪ್ರಯತ್ನವನ್ನು ಮಾಡೋಣ,…
ಬೆಂಗಳೂರು ನ.21 NEWS DESK : ಇಂಡಿಯನ್ ಸೊಸೈಟಿ ಆಫ್ ಏರೋಸ್ಪೇಸ್ ಮೆಡಿಸಿನ್ (ಐಎಸ್ ಎಎಂ) ನ 64 ನೇ ವಾರ್ಷಿಕ ಸಮ್ಮೇಳನವು ಬೆಂಗಳೂರಿನ ಇನ್ಸ್ಟಿಟ್ಯೂಟ್ ಆಫ್ ಏರೋಸ್ಪೇಸ್ ಮೆಡಿಸಿನ್ (ಐಎಎಂ) ನಲ್ಲಿ 2025ರ ನವೆಂಬರ್ 20-21 ರಂದು ನಡೆಯಿತು. ದೇಶದ ನಾನಾ ಮೂಲೆಗಳಿಂದ ಮತ್ತು ವಿದೇಶಗಳಿಂದ ಆಗಮಿಸಿದ್ದ ಮಿಲಿಟರಿ ಮತ್ತು ನಾಗರಿಕ ಗಣ್ಯರ ಸಮಕ್ಷಮದಲ್ಲಿ ವಾಯುಪಡೆಯ ಮುಖ್ಯಸ್ಥ (ಸಿಎಎಸ್) ಏರ್ ಚೀಫ್ ಮಾರ್ಷಲ್ ಎ.ಪಿ.ಸಿಂಗ್ ಅವರು ಸಮ್ಮೇಳನವನ್ನು ಉದ್ಘಾಟಿಸಿದರು. ಸಮ್ಮೇಳನದ ಘೋಷವಾಕ್ಯ ‘ಏರೋಸ್ಪೇಸ್ ಔಷಧಗಳಲ್ಲಿ ನಾವೀನ್ಯತೆಗಳು: ಅನಂತ ಸಾಧ್ಯತೆಗಳು’ ಎಂಬುದಾಗಿದ್ದು, ಅದರಲ್ಲಿ ವಿಮಾನ ಚಾಲಕರ ಸುರಕ್ಷತೆ ಮತ್ತು ಅತ್ಯುತ್ತಮ ಕಾರ್ಯಕ್ಷಮತೆಯ ಅವಶ್ಯಕತೆಗಳನ್ನು ಸಮತೋಲನಗೊಳಿಸುವಲ್ಲಿ ಏರೋಸ್ಪೇಸ್ ಮೆಡಿಸಿನ್ ವೃತ್ತಿಪರರ ನವೀನ ವಿಧಾನಗಳನ್ನು ಬಿಂಬಿಸಲಾಯಿತು. ಸಮ್ಮೇಳನದಲ್ಲಿ ಸಶಸ್ತ್ರ ಪಡೆಗಳ ಪ್ರತಿನಿಧಿಗಳು, ಭಾರತೀಯ ವಾಯುಪಡೆ ಮತ್ತು ನಾಗರಿಕ ವಿಮಾನಯಾನದ ವಿಮಾನ ಸಿಬ್ಬಂದಿ ಮತ್ತು ಡಿಆರ್ ಡಿಒ, ಎಚ್ ಎಎಲ್ ಮತ್ತು ಇಸ್ರೋದ ವಿಜ್ಞಾನಿಗಳು ಭಾಗವಹಿಸಿದ್ದರು. ವೈದ್ಯಕೀಯ ಸೇವೆಗಳ (ವಾಯು) ಮಹಾನಿರ್ದೇಶಕ ಏರ್ ಮಾರ್ಷಲ್ ಸಂದೀಪ್…
ಮಡಿಕೇರಿ ನ.21 NEWS DESK : ಹದಿನೈದು ವರ್ಷಕ್ಕಿಂತ ಕಡಿಮೆ ಸೇವೆ ಸಲ್ಲಿಸಿ ಸೈನಿಕ ಪಿಂಚಣಿ ವಂಚಿತರಾದವರಿಗೂ ‘ಪಿಂಚಣಿ ಸೌಲಭ್ಯ’ವಿದ್ದು, ಇದನ್ನು ಪಡೆದುಕೊಳ್ಳುವಂತೆ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಕೊಡಗು ಘಟಕದ ಗೌರವ ಅಧ್ಯಕ್ಷ ಕೊಟ್ಟುಕತ್ತೀರ ಸೋಮಣ್ಣ ಅವರು ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಸೈನ್ಯದಲ್ಲಿ 15 ವರ್ಷಕ್ಕಿಂತ ಕಡಿಮೆ ಸೇವೆ ಸಲ್ಲಿಸಿ ನಿವೃತ್ತರಾದವರಿಗೆ ಪಿಂಚಣಿ ಸೌಲಭ್ಯ ದೊರಕುವುದಿಲ್ಲ. ಇಂದಿಗೂ ಪಿಂಚಣಿ ಸೌಲಭ್ಯ ಇಲ್ಲದ ಹದಿನೈದು ವರ್ಷಕ್ಕಿಂತ ಕಡಿಮೆ ಸೇವೆ ಸಲ್ಲಿಸಿದ ಮಾಜಿ ಸೈನಿಕರು ಇಲ್ಲವೆ ವಿಧವೆಯರು ಈ ಸೌಲಭ್ಯವನ್ನು ಹೊಂದಿಕೊಳ್ಳಲು ಅವಕಾಶವಿದೆ. ಈ ಪಿಂಚಣಿ ಯೋಜನೆಯಡಿ 8 ಸಾವಿರ ರೂ.ಗಳನ್ನು ಮಾಸಿಕ ಪಡೆಯಲು ಅವಕಾಶವಿದೆಯೆಂದು ಮಾಹಿತಿಯನ್ನಿತ್ತರು. ಯೋಜನೆಯಡಿ ಸೌಲಭ್ಯ ಪಡೆಯಲು ಬಯಸುವವರ ಆದಾಯ ವಾರ್ಷಿಕ 80 ಸಾವಿರ ರೂ. ಒಳಗಿರಬೇಕು ಮತ್ತು 4 ಏಕರೆಗಿಂತ ಹೆಚ್ಚಿನ ಜಮೀನು ಹೊಂದಿರಬಾರದೆನ್ನುವ ನಿಯಮವಿರುವುದಾಗಿಯೂ ಮಾಹಿತಿ ನೀಡಿದರು. ಹದಿನೈದು ವರ್ಷಕ್ಕಿಂತ ಕಡಿಮೆ ಸೈನ್ಯದ ಸೇವೆ ಸಲ್ಲಿಸಿ ನಿವೃತ್ತರಾಗಿ…
ಮಡಿಕೇರಿ ನ.21 NEWS DESK : ಸೇವಾ ಭದ್ರತೆಗಳಿಲ್ಲದೆ ಅತ್ಯಂತ ಕಡಿಮೆ ವೇತನಕ್ಕೆ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಪಂಚಾಯ್ತಿ ನೌಕರರ ಮೂಲಭೂತ ಸಮಸ್ಯೆಗಳ ಕುರಿತು ಮುಂದಿನ ಚಳಿಗಾಲದ ಅಧಿವೇಶನದಲ್ಲಿ ಜನಪ್ರತಿನಿಧಿಗಳು ಪ್ರಸ್ತಾಪಿಸಿ, ಸಂಕಷ್ಟzಲ್ಲಿರುವ ನೌಕರರಿಗೆ ನ್ಯಾಯ ಒದಗಿಸಿಕೊಡಬೇಕೆಂದು ಕರ್ನಾಟಕ ರಾಜ್ಯ ಗ್ರಾಮ ಪಂಚಾಯ್ತಿ ನೌಕರರ ಸಂಘ(ಸಿಐಟಿಯು)ನ ಜಿಲ್ಲಾ ಅಧ್ಯಕ್ಷ ಪಿ.ಆರ್.ಭರತ್ ಆಗ್ರಹಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಗ್ರಾಮ ಪಂಚಾಯ್ತಿಗಳಲ್ಲಿ ಸುಮಾರು 63 ಸಾವಿರ ಮಂದಿ ಕರ ವಸೂಲಿಗಾರರಾಗಿ, ಡಾಟಾ ಎಂಟ್ರಿ ಆಪರೇಟರ್ಗಳಾಗಿ, ಜವಾನರಾಗಿ, ಸ್ವಚ್ಛತಾಕರ್ಮಿಗಳಾಗಿ, ವಾಟರ್ಮೆನ್ಗಳಾಗಿ ಅತ್ಯಂತ ಕಡಿಮೆ ವೇತನಕ್ಕೆ ದುಡಿಯುತ್ತಿದ್ದಾರೆ. ಇವರನ್ನು ರಾಜ್ಯ ಸರ್ಕಾರ ಪಂಚಾಯ್ತಿ ನೌಕರರೆಂದು ಪರಿಗಣಿಸಬೇಕು ಮತ್ತು ನಿಗದಿತ ವೇತನ ನೀಡಬೇಕೆಂದು ಆಗ್ರಹಿಸಿದರು. ಕಾರ್ಮಿಕ ಆಯೋಗ ಈಗಾಗಲೆ ಪಂಚಾಯ್ತಿಯಲ್ಲಿ ದುಡಿಯುವ ಕಾರ್ಮಿಕರಿಗೆ 25 ಸಾವಿರ ಕನಿಷ್ಟ ವೇತನ ನೀಡಬಹುದೆಂದು ತಿಳಿಸಿದ್ದು, ಇದರ ಕಡತ ಸೇರಿದಂತೆ ಪಂಚಾಯ್ತಿ ನೌಕರರ ಬೇಡಿಕೆಗಳ ಮನವಿಗಳು ಮುಖ್ಯ ಮಂತ್ರಿಗಳ ಬಳಿಯಲ್ಲಿದೆ. ಈಗಾಗಲೆ ವಿಷಯಕ್ಕೆ ಸಂಬಂಧಿಸಿದಂತೆ ಪಂಚಾಯತ್ ರಾಜ್ ಸಚಿವರಿಗೆ ಮನವಿ ನೀಡಿ,…






