ಬೆಂಗಳೂರು ಸೆ.1 : ಚಂದ್ರಯಾನ-3ರ ಯಶಸ್ಸಿನ ಹುಮ್ಮಸ್ಸಿನಲ್ಲಿರುವ ಇಸ್ರೋ ತಂಡ ಇದೀಗ ಸೂರ್ಯನ ಮೇಲೆ ಅಧ್ಯಯನ ನಡೆಸಲು ಸಜ್ಜಾಗಿದೆ. ಸೆ.2 ಶನಿವಾರದಂದು ಆದಿತ್ಯ ಎಲ್ 1 ಮಿಷನ್ ಉಡಾವಣೆಯಾಗುತ್ತಿದೆೆ. ಇದರ ಯಶಸ್ಸಿಗಾಗಿ ಇಸ್ರೋ ಮುಖ್ಯಸ್ಥ ಎಸ್.ಸೋಮನಾಥ್ ಅವರು ಇಂದು ತಿರುಪತಿಯ ಸುಳ್ಳೂರುಪೇಟೆಯ ಶ್ರೀಚೆಂಗಾಲಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ದೇವಾಲಯಕ್ಕೆ ಶುಕ್ರವಾರ ಭೇಟಿ ನೀಡಿದ ಅವರು ವಿಶೇಷ ಪೂಜೆ ಸಲ್ಲಿಸಿ ಆದಿತ್ಯ ಎಲ್ 1 ಯಶಸ್ಸಿಗಾಗಿ ಪ್ರಾರ್ಥಿಸಿದರು. ಶನಿವಾರ ಬೆಳಗ್ಗೆ 11:50ಕ್ಕೆ “ಆದಿತ್ಯ ಎಲ್ 1” ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿoದ ಉಡಾವಣೆಯಾಗಲಿದೆ. ಈ ಕಾರ್ಯಾಚರಣೆ ಗಮ್ಯ ಸ್ಥಾನವನ್ನು ತಲುಪಲು 125 ದಿನಗಳನ್ನು ತೆಗೆದುಕೊಳ್ಳಲಿದೆ. ಬಳಿಕ ಸೂರ್ಯನ ಮೇಲೆ ಅಧ್ಯಯನ ನಡೆಸಲಿದೆ ಎಂದು ಎಸ್.ಸೋಮನಾಥ್ ತಿಳಿಸಿದ್ದಾರೆ.
ಲೇಖಕ: admin
ಬೆಂಗಳೂರು ಸೆ.1 : ಹಾಸನ ಲೋಕಸಭಾ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಅನರ್ಹಗೊಳಿಸಿ ಹೈಕೋರ್ಟ್ ಶುಕ್ರವಾರ ಆದೇಶ ಹೊರಡಿಸಿದೆ. ಕಳೆದ ಬಾರಿ ಲೋಕಸಭಾ ಚುನಾವಣೆ ಸಂದರ್ಭ ಪ್ರಮಾಣ ಪತ್ರದಲ್ಲಿ ಸುಳ್ಳು ಮಾಹಿತಿ ನೀಡಿದ್ದಾರೆ ಎನ್ನುವ ಆರೋಪದಡಿ ಕೋರ್ಟ್ನಲ್ಲಿ ವಿಚಾರಣೆ ನಡೆಯುತ್ತಿತ್ತು. ಹಾಸನ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿರುದ್ಧ ಸೋಲು ಕಂಡಿದ್ದ ಅಂದಿನ ಬಿಜೆಪಿ ಅಭ್ಯರ್ಥಿ ಅರಕಲಗೂಡು ಮಂಜು ಅವರು 2019ರಲ್ಲಿ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿ ಪ್ರಜ್ವಲ್ ಆಸ್ತಿ ಘೋಷಣೆ ವಿವರ, ಪ್ರಮಾಣ ಪತ್ರದಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿದ್ದರು. ಪ್ರಕರಣದ ವಿಚಾರಣೆಯ ನಂತರ ಹೈಕೋರ್ಟ್ ಪ್ರಜ್ವಲ್ ರೇವಣ್ಣ ಅವರನ್ನು ಅನರ್ಹಗೊಳಿಸಿ ಆದೇಶಿಸಿದೆ.
ಮಡಿಕೇರಿ ಸೆ.1 : ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕೊಡಗು ಜಿಲ್ಲಾ ನೆಹರು ಯುವ ಕೇಂದ್ರ, ಯುವ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯ, ಜಿಲ್ಲಾ ಯುವ ಒಕ್ಕೂಟ, ಮಡಿಕೇರಿ ತಾಲ್ಲೂಕು ಯುವ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ ಹಾಕತ್ತೂರು ತೊಂಭತ್ತುಮನೆ ತ್ರಿನೇತ್ರ ಯುವಕ ಸಂಘದ ವತಿಯಿಂದ ಸೆ.3 ರಂದು ಗ್ರಾಮೀಣ ಕ್ರೀಡಾಕೂಟ ನಡೆಯಲಿದೆ. ಪತ್ರಿಕಾ ಪ್ರಕಟಣೆ ನೀಡಿರುವ ತ್ರಿನೇತ್ರ ಯುವಕ ಸಂಘದ ಕಾರ್ಯದರ್ಶಿ ಎಂ.ಎಂ.ಅಬೂಬಕ್ಕರ್, ತೊಂಭತ್ತುಮನೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಬೆಳಗ್ಗೆ 9 ಗಂಟೆಗೆ ಕ್ರೀಡಾಕೂಟಕ್ಕೆ ಚಾಲನೆ ದೊರೆಯಲಿದೆ. ಕೊಡಗು ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಹಾಗೂ ತೊಂಭತ್ತುಮನೆ ತ್ರಿನೇತ್ರ ಯುವಕ ಸಂಘದ ಅಧ್ಯಕ್ಷರೂ ಆಗಿರುವ ಪಿ.ಪಿ.ಸುಕುಮಾರ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ. ಮುಖ್ಯ ಅತಿಥಿಗಳಾಗಿ ಹಾಕತ್ತೂರು ಗ್ರಾ.ಪಂ ಅಧ್ಯಕ್ಷ ಬಿ.ಕೆ.ಯತೀಶ್, ಸದಸ್ಯರಾದ ಹೆಚ್.ಟಿ.ಕಿರಣ, ಶೈನಿ, ತೊಂಭತ್ತುಮನೆ ಶಾಲಾಭಿವೃದ್ಧಿ ಹಾಗೂ ಮೇಲಸ್ತುವಾರಿ ಸಮಿತಿ ಅಧ್ಯಕ್ಷ ಕೆ.ವೈ.ಜಲೀಲ್, ಮಡಿಕೇರಿ ತಾಲೂಕು ಅಧ್ಯಕ್ಷ ಬಾಳಾಡಿ ದಿಲೀಪ್…
ನಾಪೋಕ್ಲು ಸೆ.1 : ಪೋಷಕರ ಸಹಕಾರವಿದ್ದರೆ ಮಾತ್ರ ಮಕ್ಕಳು ಕ್ರೀಡೆಯಲ್ಲಿ ಉನ್ನತಿ ಹೊಂದಲು ಸಾಧ್ಯ ಎಂದು ಹಿರಿಯ ಕ್ರೀಡಾಪಟು ಅರೆಯಡ ಗಣೇಶ್ ಬೆಳ್ಯಪ್ಪ ಹೇಳಿದರು. ಭಗವತಿ ಯುವಕ ಸಂಘದ ವತಿಯಿಂದ ಸರ್ಕಾರಿ ಪ್ರಾಥಮಿಕ ಶಾಲೆಯ ಆಟದ ಮೈದಾನದಲ್ಲಿ ಕೈಲ್ ಮುಹೂರ್ತ (ಕೈಲ್ಪೊಳ್ದ್) ಹಬ್ಬದ ಕ್ರೀಡಾಕೂಟದ ಸಮಾರಂಭದಲ್ಲಿ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಅವರು, ಕ್ರೀಡೆಯಲ್ಲಿ ಗೆಲ್ಲುವುದಕ್ಕಿಂತ ಪಾಲ್ಗೊಳ್ಳುವುದು ಮುಖ್ಯ. ಇಂತಹ ಕ್ರೀಡಾಕೂಟದಿಂದ ಗ್ರಾಮೀಣ ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಾಧ್ಯ ಎಂದರು. ನಿವೃತ್ತ ಉದ್ಯೋಗಿ ನಾಟೋಳಂಡ ರಮೇಶ್ ಭೀಮಯ್ಯ ಮಾತನಾಡಿ, ಮಾನಸಿಕವಾಗಿ,ಶಾರೀರಿಕವಾಗಿ ಸದೃಢರಾಗಲು ಕ್ರೀಡೆ ಅವಶ್ಯಕ. ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ಪಾಲ್ಗೊಳ್ಳುವಂತಾಗಲು ತಂದೆ ತಾಯಿಯರ ಜವಾಬ್ದಾರಿ ಮುಖ್ಯ ಎಂದು ಹೇಳಿದರು. ಗ್ರಾ.ಪಂ ಸದಸ್ಯ ಕುಲ್ಲೇಟಿರ ಅರುಣ್ ಬೇಬ ಮಾತನಾಡಿ, ಶಾಲೆಯ ಆಟದ ಮೈದಾನದಲ್ಲಿ ಕ್ರೀಡೆಯಲ್ಲಿ ಪಾಲ್ಗೊಂಡು ಹಲವು ಕ್ರೀಡಾಪಟುಗಳು ಹೊರಹೊಮ್ಮಿದ್ದಾರೆ. ಎಲ್ಲರೂ ಒಗ್ಗೂಡಲು ಕ್ರೀಡೆ ಸಹಕಾರಿ ಎಂದರು. ಭಗವತಿ ಯುವಕ ಸಂಘದ ಅಧ್ಯಕ್ಷ ಕುಲ್ಲೇಟಿರ ದೇವಯ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ನಿವೃತ್ತ ರಾಜ್ಯ ಎಫೆಕ್ಸ್…
ನಾಪೋಕ್ಲು ಸೆ.1 : ಯವಕಪಾಡಿ ಹಾಗೂ ಮರಂದೋಡ ಗ್ರಾಮ ವ್ಯಾಪ್ತಿಯಲ್ಲಿ ಭತ್ತದ ಬೆಳೆಗೆ ನೀರಿಲ್ಲದೆ ಸಮಸ್ಯೆ ಉಂಟಾಗಿದೆ.ಪೈರುಗಳು ಒಣಗುತ್ತಿದ್ದು, ಕೆರೆಗಳಿಂದ ನೀರು ಹಾಯಿಸಿ ಫೈರುಗಳನ್ನು ಉಳಿಸಿಕೊಳ್ಳುವ ಸ್ಥಿತಿ ಉದ್ಭವಿಸಿದೆ ಎಂದು ಈ ಭಾಗದ ರೈತರು ಆತಂಕ ವ್ಯಕ್ತಪಡಿಸಿದ್ದಾರೆ. ಪ್ರತಿ ವರ್ಷ ಆಗಸ್ಟ್ ತಿಂಗಳಲ್ಲಿ ಉತ್ತಮ ಮಳೆ ಸುರಿಯುತ್ತಿತ್ತು.ಈ ಬಾರಿ ಒಂದು ಹನಿ ಮಳೆ ಬಿದ್ದಿಲ್ಲ.ಪ್ರತಿದಿನವೂ ಬಿಸಿಲು ಕಾಯುತ್ತಿದ್ದು ಇದ್ದ ಅಲ್ಪ ಸ್ವಲ್ಪ ನೀರಿನ ಪ್ರಮಾಣವು ಇಂಗುತ್ತಿದೆ. ಬೆಳಗ್ಗೆ ನೀರಿಲ್ಲದೆ ಸಮಸ್ಯೆ ಅನುಭವಿಸುವಂಥಾಗಿದೆ. ಸಂಬಂಧಪಟ್ಟ ಇಲಾಖೆಗಳು ಸಮೀಕ್ಷೆ ನಡೆಸಿ ರೈತರಿಗೆ ಪರಿಹಾರ ಒದಗಿಸಿ ಕೊಡಬೇಕು ಎಂದು ರೈತ ಕಕ್ಕಬ್ಬೆ-ಕುಂಜಿಲ ಗ್ರಾ.ಪಂ ಸದಸ್ಯ ಚೋಯಮಾಡಂಡ ಹರೀಶ್ ಮೊಣ್ಣಪ್ಪ ಒತ್ತಾಯಿಸಿದರು. ಇದನ್ನು ಪರಿಗಣಿಸಿ ಮರಂದೋಡ ಗ್ರಾಮದ ರೈತರ ಗದ್ದೆಗಳಿಗೆ ಕೃಷಿ ಇಲಾಖೆ ಅಧಿಕಾರಿ ನಾರಾಯಣ ರೆಡ್ಡಿ, ಕಂದಾಯ ಪರಿರೀಕ್ಷಕ ರವಿಕುಮಾರ್, ಗ್ರಾಮಲೆಕ್ಕಿಗ ಜನಾರ್ಧನ, ಭೇಟಿ ನೀಡಿ ಸಮೀಕ್ಷೆ ನಡೆಸಿ ಗ್ರಾಮದ ರೈತರಿಂದ ಮಾಹಿತಿ ಸಂಗ್ರಹಿಸಿದರು. ವರದಿ : ದುಗ್ಗಳ ಸದಾನಂದ
ಮಡಿಕೇರಿ ಸೆ.1 : ಬೆಂಗಳೂರಿನ ವಿಧಾನಸೌಧದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಶಾಸಕ ಎ.ಎಸ್ ಪೊನ್ನಣ್ಣ ಅವರ ಕಚೇರಿಯನ್ನು ಉದ್ಘಾಟಿಸಲಾಯಿತು. ವಿಧಾನಸೌಧದ 2 ನೇ ಮಹಡಿಯ 237,238 ಕೊಠಡಿಯಲ್ಲಿ ನೂತನವಾಗಿ ಆರಂಭವಾಗಿರುವ ಕಚೇರಿಯಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಈ ಸಂದರ್ಭ ಕೆಪಿಸಿಸಿ ವಕ್ತಾಕರ ಸಂಕೇತ್ ಪೂವಯ್ಯ, ಶಾಸಕ ಪೊನ್ನಣ್ಣ ಪತ್ನಿ ಕಾಂಚನ ಪೊನ್ನಣ್ಣ, ಕಾಂಗ್ರೆಸ್ ಪ್ರಮುಖರಾದ ತನ್ನೀರ ಮೈನಾ, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್, ವಿರಾಜಪೇಟೆ ಪ.ಪಂ ಸದ್ಯಸ ಮತೀನ್, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೇರಿರ ನವೀನ್, ಕಾಂಗ್ರೆಸ್ ಪ್ರಮುಖ ರೆಹಮಾನ್ ಖಾನ್ ಸೇರಿದಂತೆ ಕೊಡಗಿನ ಕಾಂಗ್ರಸ್ ಪಕ್ಷದ ಪ್ರಮುಖರು ಹಾಜರಿದ್ದರು.
ಸುಂಟಿಕೊಪ್ಪ ಸೆ.1 : ಕೂಡಿಗೆ ಕ್ರೀಡಾ ಶಾಲಾ ಮೈದಾನದಲ್ಲಿ ನಡೆದ ತಾಲೂಕು ಮಟ್ಟದ ಪಂದ್ಯಾವಳಿಯಲ್ಲಿ ಕೊಡಗರಹಳ್ಳಿಯ ಸುಂಟಿಕೊಪ್ಪ ನಾಡು ಪ್ರೌಢಶಾಲಾ ಬಾಲಕರ ಹಾಕಿ ತಂಡವು ವಿಜೇತಗೊಂಡು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ಜಿಲ್ಲಾ ಮಟ್ಟದ ಪಂದ್ಯಾವಳಿಯಲ್ಲಿ ಮಡಿಕೇರಿಯಲ್ಲಿ ನಡೆಯಲಿದೆ ಎಂದು ಕೊಡಗರಹಳ್ಳಿ ಸುಂಟಿಕೊಪ್ಪ ನಾಡು ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಮಹೇಂದ್ರ ತಿಳಿಸಿದ್ದಾರೆ.
ಸುಂಟಿಕೊಪ್ಪ ಸೆ.1 : ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವತಿಯಿಂದ ಸುಂಟಿಕೊಪ್ಪ ಮಂಜನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದ ಸಭಾಂಗಣದಲ್ಲಿ ಸಹೋದರ-ಸಹೋದರಿ ಸಂಕೇತವನ್ನು ಸಾರುವ ರಕ್ಷಾ ಬಂಧನ ಆಚರಿಸಲಾಯಿತು. ಜಿಲ್ಲಾ ಸಾಮರಸ್ಯ ವೇದಿಕೆಯ ಪ್ರಮುಖರಾದ ಡಿ.ನರಸಿಂಹ ಮಾತನಾಡಿ, ರಕ್ಷಾ ಬಂಧನದ ಮಹತ್ವತೆಯ ಬಗ್ಗೆ ತಿಳಿಸಿದರು. ನಂತರ ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲರಿಗೂ ರಕ್ಷಾ ಬಂಧನವನ್ನು ಪರಸ್ಪರ ಕಟ್ಟಿಕೊಳ್ಳುವ ಮೂಲಕ ವಿನಿಮಯ ಮಾಡಿಕೊಂಡು ಸಿಹಿ ಹಂಚಿ ಸಂಭ್ರಮಿಸಿದರು. ಈ ಸಂದರ್ಭ ತಾಲೂಕು ಕಾಲೇಜು ಪ್ರಮುಖ ವೇಲು ಮುರುಗನ್, ಮುಖ್ಯ ಶಿಕ್ಷಕ ರಾಹುಲ್, ಶಾಖಾ ಕಾರ್ಯ ವಾಹಕ ವಿಜಯ್, ರಾಖೇಶ್, ಇತರರು ಹಾಜರಿದ್ದರು.
ಸೋಮವಾರಪೇಟೆ ಸೆ.1 : ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ತಾಲ್ಲೂಕು ಒಕ್ಕಲಿಗರ ಸಂಘದ ವತಿಯಿಂದ ಬಿಟಿಸಿಜಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ತಾಲ್ಲೂಕು ಮಟ್ಟದ ಪದವಿ ಪೂರ್ವ ಕಾಲೇಜು ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯ ಬಾಲಕಿಯರ ವಿಭಾಗದಲ್ಲಿ ಬಿಟಿಸಿಜಿ ಕಾಲೇಜು ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ದ್ವಿತೀಯ ಸ್ಥಾನವನ್ನು ಮಾದಾಪುರ ಚನ್ನಮ್ಮ ಪದವಿ ಪೂರ್ವ ಕಾಲೇಜು ತಂಡ ಪಡೆಯಿತು. ಬಾಲಕರ ವಿಭಾಗದಲ್ಲಿ ಕುಶಾಲನಗರ ವಿವೇಕಾನಂದ ಕಾಲೇಜು ಪ್ರಥಮ ಹಾಗೂ ಮಾದಾಪುರ ಚನ್ನಮ್ಮ ಕಾಲೇಜು ದ್ವಿತೀಯ ಸ್ಥಾನ ಪಡೆಯಿತು. ಬಿಟಿಸಿಜಿ ಕಾಲೇಜಿನ ಪ್ರಾಂಶುಪಾಲರಾದ ಮಿಲ್ಡ್ರೆಡ್ ಗೋನ್ಸಾಲ್ವೆಸ್, ದೈಹಿಕ ಶಿಕ್ಷಣ ಶಿಕ್ಷಕರಾದ ರಂಗಸ್ವಾಮಿ, ಇಂದಿರಾ ಬಹುಮಾನ ವಿತರಿಸಿದರು. ಶಿಕ್ಷಕಿಯರಾದ ಸೌಮ್ಯ, ದಿವ್ಯ ಇದ್ದರು.
ಸೋಮವಾರಪೇಟೆ ಸೆ.1 : ಜೇಸಿಐ ಕಳಶದ ವತಿಯಿಂದ ಮಹಾವೀರ ಭವನದಲ್ಲಿ ನಡೆದ ಗ್ರೋತ್ ಅಂಡ್ ಡೆವಲಪ್’ಮೆಂಟ್ ಸಮ್ಮೇಳನದಲ್ಲಿ ಸೋಮವಾರಪೇಟೆ ಜೇಸಿ ಅಧ್ಯಕ್ಷೆ ವಲಯ 14ರ ಅಧ್ಯಕ್ಷೆ ಎಂ.ಎ.ರುಬೀನಾ ಗೆ ಮಹಿಳಾ ಸಾಧನ ಸಖಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸಮ್ಮೇಳನದಲ್ಲಿ ಅತಿ ಹೆಚ್ಚು ಅಭಿವೃದ್ಧಿ ಮತ್ತು ಬೆಳವಣಿಗೆಯನ್ನು ಮಾಡಿ, ಹೆಚ್ಚಿನ ಅಂಕ ಪಡೆದ ಮೊದಲ ಹತ್ತು ಘಟಕಗಳಿಗೆ ಪ್ರಶಸ್ತಿ ಪುರಸ್ಕಾರ ನೀಡಲಾಗಿದ್ದು, ಇದರಲ್ಲಿ ಸೋಮವಾರಪೇಟೆ ಜೇಸಿ ಸಂಸ್ಥೆ ಆರನೇ ಸ್ಥಾನ ಪಡೆಯಿತು. ಜೆಸಿಐ ರಾಷ್ಟ್ರೀಯ ಅಧ್ಯಕ್ಷ ಕಾರ್ತಿಕೇಯನ್ ಅವರಿಂದ ಪ್ರಶಸ್ತಿಯನ್ನು ಅಧ್ಯಕ್ಷೆ ರುಬೀನಾ ಮತ್ತು ತಂಡ ಪಡೆದುಕೊಂಡರು. ಜೆಸಿಐ ಎಕ್ಸಲೆಂಟ್ ಅಚ್ಯೂಮೆಂಟ್, ಎಕ್ಸ್ಟೆಂಡಿಂಗ್ ನ್ಯೂ ಲೋಕಲ್ ಆರ್ಗನೈಸೇಷನ್ ಮತ್ತು ಪ್ರತಿಭಾ ಅನ್ವೇಷಣಾ ಪರೀಕ್ಷೆಗೆ ವಿಶೇಷ ಮನ್ನಣೆಯನ್ನು ಸೋಮವಾರಪೇಟೆ ಘಟಕ ಪಡೆದುಕೊಂಡಿದೆ ಎಂದು ರುಬಿನಾ ತಿಳಿಸಿದ್ದಾರೆ. ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದ ಧರ್ಮಕರ್ತರಾದ ಡಾ. ಜಿ.ಭೀಮೇಶ್ವರ ಜೋಷಿ, ವಲಯ ಉಪಾಧ್ಯಕ್ಷರುಗಳಾದ ಎಚ್.ಆರ್.ಪ್ರಶಾಂತ, ಕೆ.ಡಿ.ಪ್ರಶಾಂತ್, ಕಳಶ ಘಟಕದ ಅಧ್ಯಕ್ಷ ಚರಣ್ ಇದ್ದರು.






