ಮಡಿಕೇರಿ ಆ.6 : ಪೊಲೀಸ್ ಸಿಬ್ಬಂದಿಯೊಬ್ಬರು ಮರದಿಂದ ಬಿದ್ದು ಮೃತಪಟ್ಟಿರುವ ಘಟನೆ ಸುಂಟಿಕೊಪ್ಪದ ಕಾನ್ಬೈಲ್ ನಲ್ಲಿ ನಡೆದಿದೆ. ಮಡಿಕೇರಿ ಕೇತ್ರದ ಮಾಜಿ ಶಾಸಕ ಎಂ.ಪಿ.ಅಪ್ಪಚ್ಚುರAಜನ್ ಅವರ ಗನ್ ಮ್ಯಾನ್ ಆಗಿದ್ದ ಲೋಕೇಶ್ ಪೂಜಾರಿ(37) ಮೃತ ದುರ್ದೈವಿಯಾಗಿದ್ದಾರೆ. ತಮ್ಮ ತೋಟದಲ್ಲಿ ಮಾವಿನ ಮರ ಏರಿ ಅದರ ಕೊಂಬೆಗೆ ಕಸಿ ಮಾಡುವ ಸಂದರ್ಭ ರಕ್ತದೊತ್ತಡ ಕಡಿಮೆಯಾಗಿ 50 ಅಡಿ ಎತ್ತರದಿಂದ ನೆಲಕ್ಕೆ ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತಾದರು ಆ ವೇಳೆಗೆ ಅವರು ಮೃತಪಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ. ಮೃತ ಲೋಕೇಶ್ ಪತ್ನಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಕೊಡಗು ಜಿಲ್ಲಾ ಪೊಲೀಸ್ ಇಲಾಖೆ ಸಿಬ್ಬಂದಿಯಾಗಿದ್ದ ಲೋಕೇಶ್ ಕಳೆದ 12 ವರ್ಷಗಳ ಕಾಲ ಅಪ್ಪಚ್ಚು ರಂಜನ್ ಅವರ ಗನ್ಮ್ಯಾನ್ ಆಗಿ ಕರ್ತವ್ಯ ನಿರ್ವಹಿಸಿದ್ದರು. ಈ ಘಟನೆ ಕುರಿತು ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಹಸ್ತಾಂತರಿಸಲಾಯಿತು. ::: ಕಂಬನಿ ::: ಲೋಕೇಶ್ ನಿಧನದ ಸುದ್ದಿ…
ಲೇಖಕ: admin
ಮಡಿಕೇರಿ ಆ.6 : ಕುಶಾಲನಗರ ಅರೆಭಾಷಿಕ ಸಮುದಾಯದ ಪದ್ಮಾವತಿ ಗೌಡ ಮಹಿಳಾ ಒಕ್ಕೂಟ ಹಾಗೂ ಗೌಡ ಮಹಿಳಾ ಸ್ವ – ಸಹಾಯ ಸಂಘದ ವತಿಯಿಂದ ಆಟಿ ಸಂಭ್ರಮ -2023 ಕಾರ್ಯಕ್ರಮ ಸ್ಥಳೀಯ ಗೌಡ ಸಮಾಜದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಗೌಡ ಸಮಾಜದ ಅಧ್ಯಕ್ಷ ಚಿಲ್ಲನ ಗಣಿಪ್ರಸಾದ್ ಉದ್ಘಾಟಿಸಿದರು. ಈ ಸಂದರ್ಭ ನಿವೃತ್ತ ಯೋಧ ದೇವಜನ ಚಿಣ್ಣಪ್ಪ, ಗೌಡ ಯುವಕ ಸಂಘದ ಅಧ್ಯಕ್ಷ ಕೊಡಗನ ಹರ್ಷ, ಮಹಿಳಾ ಒಕ್ಕೂಟದ ಅಧ್ಯಕ್ಷ ಚೀಯಂಡಿ ಶಾಂತಿ, ನಿರ್ದೇಶಕರಾದ ಚೆರಿಯಮನೆ ಪಾರ್ವತಿ, ಗೌಡ ಸ್ವ ಸಹಾಯ ಸಂಘದ ಅಧ್ಯಕ್ಷೆ ಸೂದನ ಲೀಲಾವತಿ, ಶಾರದಾ ಬಸಪ್ಪ, ಪಟ್ಟಂದಿ ಬೀನಾ ಸೀತಾರಾಂ ಮೊದಲಾದವರಿದ್ದರು. ಎಡಿಕೇರಿ ಪ್ರೀತು ಸುಜಿತ್ ಅವರು ಸಿದ್ದಪಡಿಸಿದ್ದ ಮರಗೆಣಸಿನ ಹಪ್ಪಳ, ಚಿಲ್ಲನ ಲತಾ ಗಣಿಪ್ರಸಾದ್ ಅವರ ಮರಕೆಸದ ಪತ್ರೊಡೆ ಹಾಗೂ ಆಟಿಸೊಪ್ಪಿನ ರಸದ ಶಾವಿಗೆ, ನಡುವಟ್ಟಿರ ವನಿತ ಸುಜಿತ್ ಅವರ ಬಾಳೆ ಹೂವಿನ ಪಲ್ಯ, ಕಲಾ ಆನಂದ್ ಅವರ ಡ್ರೈ ಫಿಶ್ ಕರಿ, ಫಿಶ್ ಎಗ್ ರೋಸ್ಟ್ ಇನ್ನು…
ಮಡಿಕೇರಿ ಆ.6 : ಕೊಡವ ಕೂಟಾಳಿಯಡ ಕೂಟ ಸಂಘಟನೆಯು ಇತ್ತೀಚೆಗೆ ಕೊಡವ ಮಕ್ಕಳಿಗಾಗಿ ಆನ್ಲೈನ್ ನಲ್ಲಿ *ಕೊಡಗ್’ರ ಚುಪ್ಪಿ ಕೋಗಿಲೆಯ-ಭಾಗ -3″* ಎಂಬ ಗಾಯನ ಸ್ಪರ್ಧೆಯನ್ನು ಏರ್ಪಡಿಸಿತ್ತು. ಕೊಡಗು ಜಿಲ್ಲೆಯಲ್ಲದೆ ಬೇರೆ ಜಿಲ್ಲೆಯಿಂದ ಹಲವಾರು ಪುಟ್ಟ ಕೊಡವ ಮಕ್ಕಳು ಈ ಗಾಯನ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಈ ಸ್ಪರ್ಧೆಯ ಮೊದಲ ಸುತ್ತಿನಲ್ಲಿ ತೀರ್ಪುಗಾರರು 15 ಮಕ್ಕಳನ್ನು ಎರಡನೇ ಸುತ್ತಿಗೆ ಆಯ್ಕೆ ಮಾಡಲಾಯಿತು. ಎರಡನೆ ಸುತ್ತಿನಲ್ಲಿ ಭಾಗವಹಿಸಿದ ಸ್ಪರ್ಧಿಗಳ ಪೈಕಿ ಮೊದಲನೇ ಬಹುಮಾನ ರೂ. 25೦೦/ನಗದು ಮತ್ತು *ಕೊಡಗ್’ರ ಚುಪ್ಪಿ ಕೋಗಿಲೆ* ಎನ್ನುವ ಬಿರುದನ್ನು ನಾಪೋಕ್ಲುವಿನ ಚೀಯಕ್’ಪೂವಂಡ ಸ್ವರ ತಂಗಮ್ಮ ತನ್ನದಾಗಿಸಿಕೊಂಡರು. ಎರಡನೆ ಬಹುಮಾನ ರೂ. 2೦೦೦/ನಗದನ್ನು ಕಾಂಡಂಡ ಪರಿಧಿ ಪೂವಮ್ಮ , ನಾಪೋಕ್ಲು ಹಾಗೂ ಮೂರನೇ ಬಹುಮಾನ ರೂ. 15೦೦/ ವನ್ನು ತಾಪಂಡ ಹರ್ಷಿತ್ ಪೊನ್ನಪ್ಪ ಪಡೆದುಕೊಂಡರು. ಉಳಿದಂತೆ ಚೆಯ್ಯಂಡ ದೇಶಿಕ್ ನವೀನ್ ಚೆಯ್ಯಂಡಾಣೆ, ಕೊಟ್ಟಂಗಡ ಅನ್ವಿತ ಬೊಳ್ಳಮ್ಮ ಬಲ್ಯಮಂಡೂರ್, ಕಾಂಡಂಡ ಯಶ್ನ ಪೊನ್ನಕ್ಕ ಕೊಳಕೇರಿ, ನೆಲ್ಲಚಂಡ ಪೊನ್ನಮ್ಮ ನಲ್ವತೊಕ್ಲು, ಮಾದಂಡ ದೀತ್ಯಾ ಕಾವೇರಿ ವಿರಾಜಪೇಟೆ,…
ಮಡಿಕೇರಿ ಆ.6 : ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ಆ.8 ರಂದು ಮಂಗಳವಾರ ಕೊಡಗು ಪೊಲೀಸ್ ವರಿಷ್ಟಾಧಿಕಾರಿ ಕೆ.ರಾಮರಾಜನ್ ಅವರೊಂದಿಗೆ ಸಂವಾದ ಕಾಯ೯ಕ್ರಮ ಆಯೋಜಿಸಲಾಗಿದೆ. ಮಡಿಕೇರಿ ವ್ಯಾಪ್ತಿಯಲ್ಲಿ ಪೊಲೀಸ್ ಇಲಾಖೆಗೆ ಸಂಬಂಧಿಸಿದಂತೆ ವಿವಿಧ ಕಾನೂನು ಸಮಸ್ಯೆಗಳ ಬಗ್ಗೆ ಪೊಲೀಸ್ ವರಿಷ್ಠಾಧಿಕಾರಿ ರೋಟರಿ ಸೇರಿದಂತೆ ಜಿಲ್ಲೆಯ ವಿವಿಧ ಸಂಘಸಂಸ್ಥೆಗಳ ಪ್ರಮುಖರೊಂದಿಗೆ ಆ 8 ರಂದು ಮಂಗಳವಾರ ಸಂಜೆ 7 ಗಂಟೆಗೆ ಮಡಿಕೇರಿಯ ರೋಟರಿ ಸಭಾಂಗಣದಲ್ಲಿ ಸಂವಾದ ನಡೆಸಲಿದ್ದಾರೆ. ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ಪ್ರಮೋದ್ ಕುಮಾರ್ ರೈ, ಕಾಯ೯ದಶಿ೯ ರತ್ನಾಕರ್ ರೈ, ಸಹಾಯಕ ಗವನ೯ರ್ ದೇವಣಿರ ತಿಲಕ್ ಪಾಲ್ಗೊಳ್ಳಲಿದ್ದಾರೆ ಎಂದು ಕಾಯ೯ಕ್ರಮ ಸಂಚಾಲಕ ಅನಿಲ್ ಎಚ್.ಟಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಡಿಕೇರಿ ಆ.6 : ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಕ್ರೀಡಾ ಸಮಿತಿ ಹಾಗೂ ಕೊಡಗು ಪ್ರೆಸ್ ಕ್ಲಬ್ ಬೆಳ್ಳಿಹಬ್ಬ ಕ್ರೀಡಾ ಸಮಿತಿ ವತಿಯಿಂದ ನಗರದ ಪತ್ರಿಕಾ ಭವನದಲ್ಲಿ ಪತ್ರಕರ್ತರಿಗಾಗಿ ಆಯೋಜಿಸಿದ್ದ ಒಳಾಂಗಣ ಕ್ರೀಡಾಕೂಟ ಯಶಸ್ವಿಯಾಗಿ ನಡೆಯಿತು. ಜಿಲ್ಲೆಯ ವಿವಿಧ ಭಾಗಗಳಿಂದ ಪತ್ರಕರ್ತರು ಕೇರಂ, ಟೇಬಲ್ ಟೆನ್ನಿಸ್, ಚೆಸ್, ಮೈಂಡ್ ಗೇಮ್ ನಲ್ಲಿ ಪಾಲ್ಗೊಂಡು ಸಂಭ್ರಮಿಸಿದರು. ಮಹಿಳೆಯರ ಕೇರಂ ಸಿಂಗಲ್ಸ್ ವಿಭಾಗದಲ್ಲಿ ಬಿ.ಆರ್. ಸವಿತಾ ರೈ ಪ್ರಥಮ, ಉದಿಯಂಡ ಜಯಂತಿ ದ್ವಿತೀಯ ಸ್ಥಾನ ಪಡೆದುಕೊಂಡರು. ಪುರುಷರ ಕೇರಂ ಸಿಂಗಲ್ಸ್ ವಿಭಾಗದಲ್ಲಿ ಶಿವರಾಜು ಪ್ರಥಮ, ನವೀನ್ ಡಿಸೋಜ ದ್ವಿತೀಯ, ಡಬಲ್ಸ್ ವಿಭಾಗದಲ್ಲಿ ವಿನೋದ್, ಜಯಪ್ರಕಾಶ್ ಜೋಡಿ ಪ್ರಥಮ, ಆದರ್ಶ್, ನವೀನ್ ಡಿಸೋಜ ಜೋಡಿ ದ್ವಿತೀಯ ಸ್ಥಾನ ಗಳಿಸಿದರು. ಟೇಬಲ್ ಟೆನ್ನಿಸ್ ಸಿಂಗಲ್ಸ್ ನಲ್ಲಿ ಅಜ್ಜಮಾಡ ರಮೇಶ್ ಕುಟ್ಟಪ್ಪ ಪ್ರಥಮ, ಅಲ್ಲಾರಂಡ ವಿಠಲ ನಂಜಪ್ಪ ದ್ವಿತೀಯ, ಡಬಲ್ಸ್ ನಲ್ಲಿ ಅಜ್ಜಮಾಡ ರಮೇಶ್ ಕುಟ್ಟಪ್ಪ, ಮಂಜು ಸುವರ್ಣ ಜೋಡಿ ಪ್ರಥಮ, ಅಲ್ಲಾರಂಡ ವಿಠಲ, ಗಣೇಶ್ ಜೋಡಿ…
ಮಡಿಕೇರಿ ಆ.6 : ಮಡಿಕೇರಿಯ ಸಮರ್ಥ ಕನ್ನಡಿಗರು ಸಂಸ್ಥೆಯ ವತಿಯಿಂದ ನ್ ಲೈನ್ ನೖತ್ಯ ಸ್ಪರ್ಧೆಯನ್ನು ಆಯೋಜಿಸಲಾಗಿದೆ.ಈ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ನವೆಂಬರ್ ತಿಂಗಳಲ್ಲಿ ಸಂಸ್ಥೆ ಹಮ್ಮಿಕೊಳ್ಳುವ ಪ್ರತಿಭೋತ್ಸವದಲ್ಲಿ ಬಹುಮಾನ ನೀಡಲಾಗುವುದು ಎಂದು ಸಂಸ್ಥೆಯ ಜಿಲ್ಲಾ ಸಂಚಾಲಕಿ ಕೆ.ಜಯಲಕ್ಷ್ನಿ ತಿಳಿಸಿದ್ದಾರೆ. : ನೃತ್ಯ ಸ್ಪರ್ಧೆಯ ನಿಯಮಗಳು : ಕನ್ನಡ ದೇಶಭಕ್ತಿ ಗೀತೆಗಳಿಗೆ ನೃತ್ಯ ಮಾಡಬೇಕು.ಕಾಲಾವಕಾಶ 3 ನಿಮಿಷ, ಸ್ಪರ್ಧೆಗೆ ಯಾವುದೇ ಶುಲ್ಕವಿಲ್ಲ, ನೃತ್ಯದ ವೀಡಿಯೋ ಕಳುಹಿಸಲು ಕೊನೆಯ ದಿನಾಂಕ ಆಗಸ್ಟ್ 20., ವಿಡಿಯೋ ಕಳುಹಿಸಬೇಕಾದ ಮೊಬೈಲ್ ಸಂಖ್ಯೆಗಳು – 3 ರಿಂದ 6 ವರ್ಷದ ಮಕ್ಕಳು…6363179214, 7 ರಿಂದ 12 ವರ್ಷದ ಮಕ್ಕಳು..9480783156 13 ರಿಂದ 18 ವರ್ಷದ ಮಕ್ಕಳು… 9740875383. . ಮಾಹಿತಿಗೆ ಸಂಪರ್ಕ ಸಂಖ್ಯೆ 9663119670
ಮಡಿಕೇರಿ ಆ.5 : ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹಾಗೂ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಕುರಿತು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಆಕ್ಷೇಪಾರ್ಹ ಹೇಳಿಕೆ ನೀಡಿರುವುದು ಖಂಡನೀಯವೆoದು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ತೀತಿರ ಧರ್ಮಜ ಉತ್ತಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಹಿರಿಯ ಶಾಸಕರಾಗಿರುವ ಆರಗ ಜ್ಞಾನೇಂದ್ರ ಅವರು ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಆದರೆ ವಿರೋಧ ಪಕ್ಷದ ನಾಯಕನಿಗೆ ಗೌರವ ನೀಡುವಷ್ಟು ಕನಿಷ್ಠ ಜ್ಞಾನ ಅವರಲ್ಲಿ ಇಲ್ಲದಾಗಿದೆ. ಖರ್ಗೆ ಅವರ ಮೈಬಣ್ಣದ ಬಗ್ಗೆ ನೀಡಿರುವ ಹೇಳಿಕೆ ಆರಗ ಅವರ ಘನತೆಗೆ ಶೋಭೆ ತರುವುದಿಲ್ಲ ಎಂದು ಟೀಕಿಸಿದ್ದಾರೆ. ಬಿಜೆಪಿ ನಮ್ಮದು ಸುಸಂಸ್ಕೃತರ ಪಕ್ಷ ಎಂದು ಹೇಳಿಕೊಳ್ಳುತ್ತದೆ, ಆದರೆ ಆರಗ ಜ್ಞಾನೇಂದ್ರ ಅವರ ಹೇಳಿಕೆಯನ್ನು ಗಮನಿಸಿದರೆ ಇದು ಯಾವ ಸಂಸ್ಕೃತಿ, ವರ್ಣಬೇಧ ನೀತಿಯನ್ನು ಇನ್ನೂ ಜೀವಂತವಾಗಿಡಲಾಗಿದೆಯೇ ಎನ್ನುವ ಪ್ರಶ್ನೆ ಮೂಡುತ್ತದೆ. ಒಬ್ಬ ಸಜ್ಜನ ರಾಜಕಾರಣಿ, ವಿರೋಧ ಪಕ್ಷದ ನಾಯಕ ಹಾಗೂ ದಲಿತ ಮುಖಂಡನಿಗೆ…
ಮಡಿಕೇರಿ ಆ.5 : ಅಜಾದಿ ಕಾ ಅಮೃತ ಮಹೋತ್ಸವ ಪ್ರಯುಕ್ತ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ‘ಮೇರಿ ಮಾಟಿ ಮೇರಿ ದೇಶ್’ (ನನ್ನ ಮಣ್ಣು, ನನ್ನ ದೇಶ) ಎಂಬ ಅಭಿಯಾನದ ಮೂಲಕ ಸಸಿಗಳನ್ನು ನೆಡುವುದು ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲು ಉದ್ದೇಶಿಸಲಾಗಿದ್ದು, ಇದಕ್ಕೆ ಎಲ್ಲಾ ಹಂತದ ಅಧಿಕಾರಿಗಳು ಕೈಜೋಡಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ. ಗ್ರಾಮ ಪಂಚಾಯಿತಿಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಸಸಿಗಳನ್ನು ನೆಡುವುದು ಮತ್ತು ಪಂಚ್ ಪ್ರಾಣ್ ಪ್ರತಿಜ್ಞೆಯನ್ನು ಬೋಧಿಸುವುದು, ಜೊತೆಗೆ ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಯೋಧರನ್ನು ಸನ್ಮಾನಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಬೇಕಿದೆ. ಈ ಕಾರ್ಯಕ್ರಮವನ್ನು ಗ್ರಾಮ ಮತ್ತು ತಾಲ್ಲೂಕು ಪಂಚಾಯಿತಿಗಳಲ್ಲಿ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಆಯೋಜಿಸಬೇಕಿದೆ. ಆ ನಿಟ್ಟಿನಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಹೇಳಿದರು. ಜಿ.ಪಂ.ಸಿಇಒ ವರ್ಣಿತ್ ನೇಗಿ ಅವರು ಮಾತನಾಡಿ ಕಾರ್ಯಕ್ರಮವನ್ನು ಎಲ್ಲಾ ಗ್ರಾ.ಪಂ.ಗಳಲ್ಲಿ ಯಶಸ್ವಿಯಾಗಿ ಆಯೋಜಿಸಲು ತಮ್ಮ ವ್ಯಾಪ್ತಿಯಲ್ಲಿ ಗ್ರಾ.ಪಂ.ಅಧ್ಯಕ್ಷರು ಹಾಗೂ ಸದಸ್ಯರನ್ನು ಆಹ್ವಾನಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲು ಶ್ರಮಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.…
ಮಡಿಕೇರಿ ಆ.5 : ಕೊಡಗು ಜಿಲ್ಲೆಯ ವಿವಿಧ ಸಿ.ಜೆ ಮತ್ತು ಜೆಎಂಎಫ್ಸಿ ನ್ಯಾಯಾಲಯಗಳಲ್ಲಿ ಖಾಲಿ ಇರುವ ಸಹಾಯಕ ಸರ್ಕಾರಿ ಅಭಿಯೋಜಕರುಗಳ ಹುದ್ದೆಯಲ್ಲಿ ಗುತ್ತಿಗೆ ಆಧಾರದಲ್ಲಿ ತಾತ್ಕಾಲಿಕವಾಗಿ ಸಹಾಯಕ ಸರ್ಕಾರಿ ಅಭಿಯೋಜಕರಾಗಿ ಕೆಲಸ ನಿರ್ವಹಿಸಲು ಆಸಕ್ತಿಯುಳ್ಳ ಅರ್ಹ ವಕೀಲರುಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಗುತ್ತಿಗೆ ಆಧಾರದ ಮೇಲೆ ಸೇವೆ ಸಲ್ಲಿಸಲು ಅರ್ಹ ಅಭ್ಯರ್ಥಿಗಳು ಸಂಚಿತ ಸಂಭಾವನೆಯಾಗಿ ರೂ.35 ಸಾವಿರ ಪಡೆಯಲು ಅರ್ಹರಿರುತ್ತಾರೆ. ಅರ್ಜಿ ಸಲ್ಲಿಸಲು ನಿಗದಿಪಡಿಸಲಾದ ಕೊನೆಯ ದಿನಾಂಕ ಆಗಸ್ಟ್, 20 ಕ್ಕೆ 3 ವರ್ಷಗಳಿಗೆ ಕಡಿಮೆ ಇಲ್ಲದಂತೆ ವಕೀಲರಾಗಿ ಸೇವೆ ಸಲ್ಲಿಸುತ್ತಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು. ಅರ್ಹ ಅಭ್ಯರ್ಥಿಗಳು ಸದಸ್ಯ ಕಾರ್ಯದರ್ಶಿ ಗುತ್ತಿಗೆ ಆಧಾರದ ಸಹಾಯಕ ಸರ್ಕಾರಿ ಅಭಿಯೋಜಕರ ನೇಮಕಾತಿ ಸಮಿತಿ ಮತ್ತು ಸರ್ಕಾರಿ ಅಭಿಯೋಜಕರು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಮಡಿಕೇರಿ ಕೊಡಗು ಜಿಲ್ಲೆ, ಇವರಿಗೆ ಆಗಸ್ಟ್ 20 ರೊಳಗೆ ಅರ್ಜಿಯನ್ನು ಪೂರ್ಣ ಲಗತ್ತುಗಳೊಂದಿಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ ಸರ್ಕಾರಿ ಅಭಿಯೋಜಕರು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ…
ಮಡಿಕೇರಿ ಆ.5 : ಸ್ವಸ್ಥಿಕ್ ಯುವ ವೇದಿಕೆ ಬನ್ನಿಮಂಟಪ ಗಣೇಶೋತ್ಸವ ಸಮಿತಿಯ 22ನೇ ವರ್ಷದ ಗಣೇಶೋತ್ಸವ ಪೂಜಾ ಕಾರ್ಯಕ್ರಮ ಹಾಗೂ ಶೋಭಾಯಾತ್ರೆಯ ಉಪಸಮಿತಿಗಳನ್ನು ರಚಿಸಲಾಗಿದೆ ಎಂದು ಸಮಿತಿಯ ಸ್ಥಾಪಕ ಅಧ್ಯಕ್ಷರು ಕುಲದೀಪ್ ತಿಳಿಸಿದ್ದಾರೆ. ಅಧ್ಯಕ್ಷರಾಗಿ ಪುನೀತ್ ಭೀಮಯ್ಯ, ಉಪಧ್ಯಾಕ್ಷರಾಗಿ ಸಿ.ಯು.ವಿಘ್ನೇಶ್, ಪ್ರಧಾನ ಕಾರ್ಯದರ್ಶಿಯಾಗಿ ಗಣೇಶ್, ಸಹ ಕಾರ್ಯದರ್ಶಿಯಾಗಿ ರಮೇಶ್, ಜಂಟಿ ಕಾರ್ಯದರ್ಶಿಯಾಗಿ ಹೊಯ್ಸಳ, ಮನೋಹರ್ ನೇಮಕಗೊಂಡಿದ್ದಾರೆ. ಖಜಾಂಚಿಯಾಗಿ ವಿನಯ್, ಸಹ ಖಜಾಂಚಿಯಾಗಿ ಸಂದೇಶ್, ಜಂಟಿ ಖಜಾಂಚಿಯಾಗಿ ಕವನ್, ನಿಖಿಲ್ ಆಯ್ಕೆಯಾಗಿದ್ದಾರೆ. ನಿರ್ದೇಶಕರುಗಳಾಗಿ ಮಂಜು, ಮೊನಿಷ್, ಮಿಥುನ್, ಗೌರವಾಧ್ಯಕ್ಷರಾಗಿ ಎ.ಕೆ.ಸತೀಶ್, ಸಂದೇಶ್, ಶಿವರಾಜ್, ಹೇಮಂತ್ ಕುಮಾರ್, ಸಲಹೆಗಾರರಾಗಿ ಪ್ರೇಮ ರಾಮಯ್ಯ, ರಶ್ಮಿ ಪ್ರವೀಣ್, ಸವಿತಾ ರಾಕೇಶ್, ಮಂಜುನಾಥ್, ಎ.ಎಂ.ನಿತಿನ್, ಕಾರ್ತಿಕ್, ಶ್ರೀನಿಧಿ ರಾಜ್ ನೇಮಕಗೊಂಡಿದ್ದಾರೆ. ಅಲಂಕಾರ ಸಮಿತಿಗೆ ಸಿ.ವಿ.ವಿಕ್ರಂ, ಭರತ್, ಲಿಖಿತ್ ಲೀ, ಪೂಜಾ ಸಮಿತಿಗೆ ವರ್ಶಿತ್, ಪೋಪಿನ್, ಧ್ವನಿವರ್ಧಕ ಸಮಿತಿಗೆ ಗಣೇಶ್, ಮೆರವಣಿಗೆ ಸಮಿತಿಗೆ ಸೋನಾಲ್ ಪೂಜಾರಿ, ಆಹಾರ ಸಮಿತಿಗೆ ಪ್ರಶಾಂತ್, ಜಯಣ್ಣ ಪ್ರಮುಖರಾಗಿ ಪ್ರಸಾದ್ ಅವರುಗಳನ್ನು ನೇಮಕ ಮಾಡಲಾಗಿದೆ ಎಂದು…






