ಮಡಿಕೇರಿ ಸೆ.1 : ಮಡಿಕೇರಿಯ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ನೀಡಲಾಗುವ ಪ್ರತಿಷ್ಟಿತ ನೇಷನ್ ಬಿಲ್ಡರ್ ಪ್ರಶಸ್ತಿಗೆ ಈ ಬಾರಿ ಐವರು ಶಿಕ್ಷಕರು ಆಯ್ಕೆಯಾಗಿದ್ದಾರೆ. ಮಡಿಕೇರಿ ರೋಟರಿ ಸಭಾಂಗಣದಲ್ಲಿ ಸೆ.5 ರಂದು ಸಂಜೆ 7 ಗಂಟೆಗೆ ನಡೆಯುವ ಗುರು ನಮನ ಹೆಸರಿನ ಸಮಾರಂಭದಲ್ಲಿ ನೇಷನ್ ಬಿಲ್ಡರ್ ಪ್ರಶಸ್ತಿಯನ್ನು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂಥರ್ ಗೌಡ ಪ್ರಧಾನ ಮಾಡಲಿದ್ದಾರೆ. ಕೊಡಗರಹಳ್ಳಿಯ ಶಾಂತಿನಿಕೇತನ ಶಾಲೆಯಲ್ಲಿ ಪ್ರಾಂಶುಪಾಲೆಯಾಗಿರುವ ಶಿಕ್ಷಣ ಕ್ಷೇತ್ರದಲ್ಲಿ 50 ವಷ೯ಗಳಿಗೂ ಮಿಕ್ಕಿ ಸಾಧನೆ ಮಾಡಿರುವ ಮೇರಿಫಾತಿಮಾ, ನಿವೃತ್ತ ಶಿಕ್ಷಕಿ ಮಡಿಕೇರಿಯ ದೇವಕಿ, ಭಾಗಮಂಡಲದ ಶ್ರೀ ಕಾವೇರಿ ಪದವಿ ಪೂರ್ವ ಕಾಲೇಜಿನ ಮುಖ್ಯ ಶಿಕ್ಷಕ ಶ್ರೀಕೖಷ್ಣ ಭಟ್, ಮಡಿಕೇರಿಯ ತಿಮ್ಮಯ್ಯ ಪಬ್ಲಿಕ್ ಸ್ಕೂಲ್ ನ ಪ್ರಾಂಶುಪಾಲೆ ಕೆ.ಸರಸ್ವತಿ, ಮಡಿಕೇರಿ ಸಂತಮೈಖಲರ ಶಾಲೆಯ ದೈಹಿಕ ಶಿಕ್ಷಕಿ ಸಗಯ ಮೇರಿ ಅವರು ಈ ವಷ೯ ರೋಟರಿ ಮಿಸ್ಟಿ ಹಿಲ್ಸ್ ನ ನೇಷನ್ ಬಿಲ್ಡರ್ ಪ್ರಶಸ್ತಿ ಪಡೆಯಲಿದ್ದಾರೆ. ಕಾಯ೯ಕ್ರಮದಲ್ಲಿ ರೋಟರಿ ಸಹಾಯಕ ಗವನ೯ರ್ ದೇವಣಿರ ತಿಲಕ್, ವಲಯ ಸೇನಾನಿ…
ಲೇಖಕ: admin
ಮಡಿಕೇರಿ ಆ.31 : ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯ ನರಿಯಂದಡ ಗ್ರಾಮದ ಬಸ್ ನಿಲ್ದಾಣದ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ಓರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪರಂಬಾಡಿ ನಿವಾಸಿ ಶರ್ಫುದ್ದೀನ್ (27) ಎಂಬಾತ ಬಂಧಿತ ಆರೋಪಿಯಾಗಿದ್ದು, ಈತನ ಬಳಿ ಇದ್ದ 180 ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಡಿಕೇರಿ ಉಪ ವಿಭಾಗದ ಡಿವೈಎಸ್ಪಿ ಎಂ.ಜಗದೀಶ್, ಗ್ರಾಮಾಂತರ ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ, ನಾಪೋಕ್ಲು ಪಿಎಸ್ಐ ಈ.ಮಂಜುನಾಥ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದರು. ಪೊಲೀಸ್ ಅಧಿಕಾರಿಗಳು ಸಿಬ್ಬಂದಿಗಳ ಕಾರ್ಯ ದಕ್ಷತೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಶ್ಲಾಘಿಸಿದ್ದಾರೆ.
ನವದೆಹಲಿ ಆ.31 : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು 2023 ರ FIDE ಚೆಸ್ ವಿಶ್ವಕಪ್ನಲ್ಲಿ ಬೆಳ್ಳಿ ಪದಕವನ್ನು ಗೆದ್ದ ಆರ್.ಪ್ರಗ್ನಾನಂದ ಅವರನ್ನು ಭೇಟಿ ಮಾಡಿದರು. ಪ್ರಗ್ನಾನಂದ ಸಾಧನೆ ಕುರಿತು ಹೆಮ್ಮೆ ವ್ಯಕ್ತಪಡಿಸಿದರು. ಪೋಷಕರೊಂದಿಗೆ ಮಾತನಾಡಿ ಹರ್ಷ ಹಂಚಿಕೊಂಡರು.
ಮಡಿಕೇರಿ ಆ.31 : ಕೇರಳ ರಾಜ್ಯದಲ್ಲಿ ಅಕ್ರಮವಾಗಿ ಮಾರಾಟ ಮಾಡಲು ಕೊಡಗು ಜಿಲ್ಲೆಯಲ್ಲಿ ನಕಲಿ ಮದ್ಯ ತಯಾರಿಸುತ್ತಿದ್ದ ಜಾಲವನ್ನು ಬೇಧಿಸುವಲ್ಲಿ ಕೊಡಗು ಪೊಲೀಸರು ಯಶಸ್ವಿಯಾಗಿದ್ದಾರೆ.NEWS DESK ಭಾಗಮಂಡಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ಬೆಳಕಿಗೆ ಬಂದಿದ್ದು, ತಾವೂರು ಗ್ರಾಮದ ನಿವಾಸಿ ಹಾಸೀಂ (47) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.NEWS DESK ತಾವೂರು ಗ್ರಾಮದ ತೋಟದ ಲೈನ್ ಮನೆಯೊಂದರಲ್ಲಿ ಕೇರಳ ಮೂಲದ ವ್ಯಕ್ತಿ ಅಕ್ರಮ ಮದ್ಯ ತಯಾರಿಸುತ್ತಿರುವ ಕುರಿತು ಪೊಲೀಸರಿಗೆ ಖಚಿತ ಮಾಹಿತಿ ಲಭಿಸಿತ್ತು. ಈ ಹಿನ್ನೆಲೆ ದಾಳಿ ನಡೆಸಿದ ಪೊಲೀಸರು ಆರೋಪಿ ಸಹಿತ ಮದ್ಯ ತಯಾರಿಸಲು ಬಳಸುವ 60 ಕೆ.ಜಿ 300 ಗ್ರಾಂ CAUSTIC CARAMEL, 2000 ಖಾಲಿ ಬಾಟಲ್, ಕ್ಯಾಪ್ ಮತ್ತು ಲೆಬಲ್ ಗಳನ್ನು ವಶಪಡಿಸಿಕೊಂಡರು. ಮಡಿಕೇರಿ ಉಪ ವಿಭಾಗದ ಡಿವೈಎಸ್ಪಿ ಎಂ.ಜಗದೀಶ್, ಗ್ರಾಮಾಂತರ ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ, ಭಾಗಮಂಡಲ ಪಿಎಸ್ಐ ಶೋಭಾ ಲಮಾಣಿ ಹಾಗೂ ಸಿಬ್ಬಂದಿಗಳು ವಿಶೇಷ ತಂಡವನ್ನು ರಚಿಸಿ ತನಿಖೆ ಕೈಗೊಂಡು ಕಾರ್ಯಾಚರಣೆ ನಡೆಸಿದರು.NEWS DESK…
ಮಡಿಕೇರಿ ಆ.31 : ಮಡಿಕೇರಿ ವಿಭಾಗದ ಕೆಎಸ್ಆರ್ಟಿಸಿ ಡಿಪೋದಲ್ಲಿ ಕರ್ತವ್ಯದಲ್ಲಿದ್ದ, ಇದೀಗ ರಾಮನಾಥಪುರಕ್ಕೆ ವರ್ಗಾವಣೆಗೊಂಡಿರುವ ವ್ಯವಸ್ಥಾಪಕರನ್ನು ತಕ್ಷಣ ಸೇವೆಯಿಂದ ವಜಾಗೊಳಿಸಬೇಕೆಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಪಿ.ಚಂದ್ರಕಲಾ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ವ್ಯವಸ್ಥಾಪಕಿಯ ವಿರುದ್ಧದ ಆರೋಪಗಳು ಗಂಭೀರ ಸ್ವರೂಪದಿಂದ ಕೂಡಿರುವುದರಿಂದ ಕೇವಲ ವರ್ಗಾವಣೆ ಒಂದೇ ಶಿಕ್ಷೆಯಾಗಬಾರದು, ತಕ್ಷಣ ಇವರನ್ನು ಸೇವೆಯಿಂದ ವಜಾಗೊಳಿಸಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ. ಕೆಎಸ್ಆರ್ಟಿಸಿ ನೌಕರ ಹೆಬ್ಬಾಲೆಯ ಅಭಿಷೇಕ್ ಎಂಬುವವರು ಇತ್ತೀಚೆಗೆ ಕೆಎಸ್ಆರ್ಟಿಸಿ ಡಿಸಿ ಹಾಗೂ ವ್ಯವಸ್ಥಾಪಕರ ಎದುರೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಪ್ರಯತ್ನಕ್ಕೆ ವ್ಯವಸ್ಥಾಪಕರ ಕಿರುಕುಳವೇ ಕಾರಣವೆಂದು ಅಭಿಷೇಕ್ ಆರೋಪಿಸಿದ್ದಾರೆ. ಕಳೆದ 8 ವರ್ಷಗಳಿಂದ ತಮ್ಮ ಪ್ರಭಾವ ಬಳಸಿ ಮಡಿಕೇರಿಯಲ್ಲೇ ಸೇವೆ ಸಲ್ಲಿಸುತ್ತಿದ್ದ ವ್ಯವಸ್ಥಾಪಕರ ವಿರುದ್ಧ ಕಿರುಕುಳದ ಆರೋಪ ಹೊರಿಸಿ ಇಲ್ಲಿನ ನೌಕರರು ಹಾಗೂ ಕಾರ್ಮಿಕ ವರ್ಗ ಹಲವು ಬಾರಿ ಲಿಖಿತ ರೂಪದಲ್ಲಿ ದೂರು ನೀಡಿದ್ದರೂ ಅಧಿಕಾರಿಗಳು ಕ್ರಮ ಕೈಗೊಂಡಿರಲಿಲ್ಲ. ನೌಕರರ ಇಚ್ಛೆಯಂತೆ ವ್ಯವಸ್ಥಾಪಕರನ್ನು ವರ್ಗಾವಣೆಗೊಳಿಸಲೇಬೇಕೆಂದು ಕಳೆದ 3 ತಿಂಗಳಿನಿಂದ ನಾವುಗಳು…
ಮಡಿಕೇರಿ ಆ.31 : ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಕುಶಾಲನಗರ ಸಮೀಪದ ದುಬಾರೆ ಮತ್ತು ಹಾರಂಗಿ ಸಾಕಾನೆ ಶಿಬಿರದಿಂದ ಒಟ್ಟು ನಾಲ್ಕು ಆನೆಗಳನ್ನು ಗುರುವಾರ ಕಳುಹಿಸಿಕೊಡಲಾಯಿತು. ದುಬಾರೆ ಶಿಬಿರದ ಧನಂಜಯ (45), ಗೋಪಿ (41) ಕಂಚನ್ (24) ಹಾಗೂ ಹಾರಂಗಿ ಶಿಬಿರದಲ್ಲಿದ್ದ ವಿಜಯ (63) ಆನೆಗಳನ್ನು ಲಾರಿಯಲ್ಲಿ ಕರೆದೊಯ್ಯಲಾಯಿತು. ಆನೆಗಳ ಮಾವುತರಾದ ಭಾಸ್ಕರ, ನವೀನ್ ಕುಮಾರ್, ಬೋಜಪ್ಪ, ವಿಜಯ ಕಾವಾಡಿಗಳಾದ ಮಣಿ, ಶಿವು, ಭರತ್, ಮಣಿಕಂಠ ಹಾಗೂ ಸಿಬ್ಬಂದಿಗಳು ಜೊತೆಯಲ್ಲಿ ತೆರಳಿದರು. ಕಂಚನ್ ಆನೆಯನ್ನು ಹೊರತುಪಡಿಸಿ ಉಳಿದ ಎಲ್ಲಾ ಆನೆಗಳು ಹಿಂದಿನ ವರ್ಷಗಳಲ್ಲಿ ದಸರಾದಲ್ಲಿ ಪಾಲ್ಗೊಂಡಿದ್ದವು ಎಂದು ಕುಶಾಲನಗರ ವಲಯ ಅರಣ್ಯ ಅಧಿಕಾರಿ ಕೆ.ವಿ.ಶಿವರಾಂ ಮಾಹಿತಿ ನೀಡಿದ್ದಾರೆ.
ಮಡಿಕೇರಿ ಆ.31 : ದಿನದಿಂದ ದಿನಕ್ಕೆ ಮಡಿಕೇರಿ ನಗರ ಬೆಳೆಯುತ್ತಿದೆ, ಆದರೆ ನಗರಸಭೆಯಲ್ಲಿ 165 ಕ್ಕೂ ಅಧಿಕ ಹುದ್ದೆಗಳು ಖಾಲಿ ಇರುವುದರಿಂದ ನಗರದ ಅಭಿವೃದ್ಧಿ ಕಾರ್ಯಗಳನ್ನು ಸಮರ್ಪಕವಾಗಿ ನಿರ್ವಹಿಸಲು ಸಾಧ್ಯವಾಗುತ್ತಿಲ್ಲ. ಹುದ್ದೆಗಳ ಭರ್ತಿಗೆ ಸರ್ಕಾರದ ಮೊರೆ ಹೋಗಲು ನಗರಸಭೆಯ ಸಾಮಾನ್ಯ ಸಭೆ ನಿರ್ಧರಿಸಿದೆ. ಮಡಿಕೇರಿ ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ ಅವರ ಅಧ್ಯಕ್ಷತೆಯಲ್ಲಿ ನಗರಸಭೆಯ ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಖಾಲಿ ಹುದ್ದೆಗಳು ಅಭಿವೃದ್ಧಿ ಕಾರ್ಯಗಳಿಗೆ ಅಡಚಣೆಯಾಗುತ್ತಿರುವ ಕುರಿತು ವಿಷಯ ಪ್ರಸ್ತಾಪವಾಯಿತು. ತ್ವರಿತವಾಗಿ ಹುದ್ದೆಗಳು ಭರ್ತಿಯಾಗದಿದ್ದಲ್ಲಿ ಮುಂದಿನ ದಿನಗಳಲ್ಲಿ ಮತ್ತಷ್ಟು ಸಮಸ್ಯೆಗಳು ಎದುರಾಗಬಹುದು ಎಂದು ಸದಸ್ಯರು ಗಮನ ಸೆಳೆದಾಗ ಸರ್ವ ಸದಸ್ಯರ ಒಪ್ಪಿಗೆಯಂತೆ ಸರ್ಕಾರದ ಬಳಿಗೆ ನಿಯೋಗ ತೆರಳಿ ಮನವಿ ಸಲ್ಲಿಸಲು ನಿರ್ಧರಿಸಲಾಯಿತು. ಕಳೆದ ಸಭೆಯ ನಡಾವಳಿಗಳನ್ನು ಓದಿ ಅನುಮೋದಿಸುವ ಹಂತದಲ್ಲಿ, ನಗರ ವ್ಯಾಪ್ತಿಯ ಪ್ರತಿ ಮನೆಯ ಆಸ್ತಿಯ ವಿವರಗಳನ್ನು ದಾಖಲು ಮಾಡುವ ಸರ್ವೆ ಕಾರ್ಯಕ್ಕೆ ತಲಾ 50 ರೂ. ನಿಗಧಿಪಡಿಸಿರುವ ವಿಚಾರವನ್ನು ಸದಸ್ಯ ಮನ್ಸೂರ್ ಪ್ರಸ್ತಾಪಿಸಿದರು. ಅಧ್ಯಕ್ಷೆ ಅನಿತಾ ಪೂವಯ್ಯ…
ವಿರಾಜಪೇಟೆ ಆ.31 : ವಿರಾಜಪೇಟೆಯ ಕಾವೇರಿ ಕಾಲೇಜಿನಲ್ಲಿ “ರಕ್ಷಾ ಬಂಧನ ನಡೆಸಲಾಯಿತು. ಮಂಗಳೂರಿನ ರಾಷ್ಟ್ರೀಯ ಸ್ವಯಂ ಸಂಘದ ವಿಭಾಗ ಪ್ರಚಾರ ಪ್ರಮುಖರಾದ ಸೂರಜ್ ಕುಮಾರ್ ವಿದ್ಯಾರ್ಥಿಗಳಿಗೆ ರಕ್ಷಾ ಬಂಧನದ ಮಹತ್ವದ ಬಗ್ಗೆ ಮಾಹಿತಿ ನೀಡಿದರು. ರಾಷ್ಟ್ರದ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ, ಪ್ರತಿಯೊಬ್ಬ ಯುವಜನತೆ ತನ್ನನ್ನು ರಾಷ್ಟ್ರ ರಕ್ಷಣೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳ ಪಾತ್ರವನ್ನು ಸವಿವರವಾಗಿ ತಿಳಿಸಿದರು. ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಆನಂದ್ ಕಾರ್ಲಾ ಅವರು ವಿದ್ಯಾರ್ಥಿಗಳಿಗೆ ರಕ್ಷಾ ಬಂಧನ ಆಚರಣೆ ಬಗ್ಗೆ ತಿಳಿಸಿಕೊಟ್ಟರು. ಕಾರ್ಯಕ್ರಮದಲ್ಲಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎನ್.ಎಂ.ನಾಣಯ್ಯ ಉಪಸ್ಥಿತರಿದ್ದರು. ಕಾಲೇಜಿನ ಉಪನ್ಯಾಸಕ ವೃಂದದವರು ಹಾಗೂ ಸಿಬ್ಬಂದಿಗಳು ಹಾಜರಿದ್ದರು. ಕಾರ್ಯಕ್ರಮದ ಕೊನೆಯಲ್ಲಿ ಎಲ್ಲರಿಗೂ ಪರಸ್ಪರ ರಕ್ಷೆಯನ್ನು ವಿತರಿಸಿ ಕಟ್ಟಿಸಲಾಯಿತು.
ಮಡಿಕೇರಿ ಆ.31 : ನ್ಯಾಯಾಧೀಶರಾಗಿ ನೇಮಕಗೊಂಡ ಮಡಿಕೇರಿ ವಕೀಲರ ಸಂಘದ ಸದಸ್ಯ ಅಬು ತಾಹೀರ್ ಅವರನ್ನು ಮಡಿಕೇರಿ ವಕೀಲರ ಸಂಘದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು. ಈ ಸಂದಭ೯ ಮಾತನಾಡಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಶ್ಯಾಂ ಪ್ರಸಾದ್, ನ್ಯಾಯಾಧೀಶರ ಸ್ಥಾನ ಅತ್ಯಂತ ಗೌರವ ಮತ್ತು ಪ್ರತಿಷ್ಟೆಯದ್ದಾಗಿದೆ. ನ್ಯಾಯದಾನ ನೀಡುವಲ್ಲಿ ಸಮಪ೯ಕವಾಗಿ ಕಾಯ೯ನಿವ೯ಹಿಸಿ ಎಂದು ಹಾರೈಸಿದರು. ಮಡಿಕೇರಿ ವಕೀಲರ ಸಂಘದ ಅಧ್ಯಕ್ಷ ಎಂ.ಎ.ನಿರಂಜನ್ ಮಾತನಾಡಿ, ಅಬು ತಾಹೀರ್ ಅವರ ಸಾಧನೆ ಯುವ ವಕೀಲರಿಗೂ ಪ್ರೇರಣೆಯಾಗಲಿ. ಮತ್ತಷ್ಟು ಯುವ ವಕೀಲರು ಸ್ಪಧಾ೯ತ್ಮಕ ಪರೀಕ್ಷೆ ಬರೆಯುವ ಮೂಲಕ ನ್ಯಾಯಾಧೀಶರಾಗಿ ಆಯ್ಕೆಯಾಗುವಂತಾಗಲಿ ಎಂದು ಆಶಯ ವ್ಯಕ್ತಪಡಿಸಿದರು. ವಕೀಲ ಟಿ.ಎಚ್. ಅಬೂಬಕರ್ ಈ ಸಂದಭ೯ ನೂತನವಾಗಿ ನ್ಯಾಯಾಧೀಶರಾಗಿ ಆಯ್ಕೆಯಾದ ತನ್ನ ಕಛೇರಿ ಸಹೋದ್ಯೋಗಿ ಅಬು ತಾಹಿರ್ ಅವರ ಕುರಿತಂತೆ ಮಾತನಾಡಿದರು. ಕಾಯ೯ಕ್ರಮದಲ್ಲಿ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಾದ ಪ್ರಶಾಂತಿ, ಸಿವಿಲ್ ನ್ಯಾಯಾಧೀಶರಾದ ಮುನಿರತ್ನ, ಸಿವಿಲ್ ನ್ಯಾಯಾಧೀಶರಾದ ನಾಗೇಶ್, ವಕೀಲರ ಸಂಘಧ ಕಾಯ೯ದಶಿ೯ ಡಿ.ಎಂ.ಕೇಶವ, ಉಪಾಧ್ಯಕ್ಷ ಎಂ.ಪಿ.ನಾಗರಾಜು, ಸಕಾ೯ರಿ ಅಭಿಯೋಜಕರು,…
ಮಡಿಕೇರಿ ಆ.31 : ಗೃಹ ಲಕ್ಷ್ಮಿ ಯೋಜನೆಯಡಿ ನೋಂದಾಯಿಸಿಕೊಂಡ ಜಿಲ್ಲೆಯ 79,659 ಮಂದಿಗೆ 15,23,18,000 ರೂ.ಗಳನ್ನು ಅವರ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆ ಮಾಡಲಾಗಿದೆಯೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖಾ ಪ್ರಕಟಣೆ ತಿಳಿಸಿದೆ. ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2ಸಾವಿರ ರೂ.ಗಳನ್ನು ನೇರ ನಗದು ವರ್ಗಾವಣೆ (ಡಿ.ಟಿ.ಟಿ.) ಮಾಡುವ ಗೃಹಲಕ್ಷ್ಮಿ ಯೋಜನೆಯನ್ನು ಆ.30 ರಾಜ್ಯಮಟ್ಟದಲ್ಲಿ ವಿದ್ಯುಕ್ತವಾಗಿ ಚಾಲನೆಗೊಂಡಿದ್ದು, ಇಂದು ಮೊದಲ ಹಂತದಲ್ಲಿ ಹಣವನ್ನು ಫಲಾನುಭವಿಗಳ ಖಾತೆಗೆ ವರ್ಗಾಯಿಸಲಾಗಿದೆ. ಕೊಡಗು ಜಿಲ್ಲೆಯಲ್ಲಿ 1,31,863 ಫಲಾನುಭವಿಗಳಿದ್ದು, ಈ ಪೈಕಿ 106198 ಫಲಾನುಭವಿಗಳು ಈಗಾಗಲೇ ಗೃಹಲಕ್ಷ್ಮಿ ಯೋಜನೆಯಡಿ ನೋಂದಾಯಿಸಿದ್ದು, ಮೊದಲ ಹಂತದ ಹಣ ವರ್ಗಾವಣೆಯಾಗಿದ್ದು, ಮುಂದಿನ ಹಂತದಲ್ಲಿ ಉಳಿದವರಿಗೆ ಹಣ ವರ್ಗಾವಣೆಯಾಗಲಿದೆ.






