ಮಡಿಕೇರಿ ಆ.5 : ಈಶಾನ್ಯ ರಾಜ್ಯ ಮಣಿಪುರದಲ್ಲಿ ನಾಗರಿಕ ಸಮಾಜ ತಲೆ ತಗ್ಗಿಸುವಂತೆ ನಡೆದ ಮಹಿಳೆಯರ ಬೆತ್ತಲೆ ಮೆರವಣಿಗೆ ಮತ್ತು ಅತ್ಯಾಚಾರ ಪ್ರಕರಣವನ್ನು ಖಂಡಿಸಿ, ಅತ್ಯಾಚಾರಿಗಳಿಗೆ ಮರಣದಂಡನೆ ವಿಧಿಸುವಂತೆ ಆಗ್ರಹಿಸಿ ಕೊಡಗು ಜಿಲ್ಲಾ ಮಹಿಳೋದಯ ಮಹಿಳಾ ಒಕ್ಕೂಟ(ಓಡಿಪಿ) ನಗರದಲ್ಲಿ ಪ್ರತಿಭಟನೆ ನಡೆಸಿತು. ಕೊಡಗು ಜಿಲ್ಲಾ ಮಹಿಳೋದಯ ಮಹಿಳಾ ಒಕ್ಕೂಟದ ವಲಯ ಸಂಯೋಜಕರಾದ ಜಾಯ್ಸ್ ಮೆನೇಜಸ್, ಓಡಿಪಿ ಸಂಸ್ಥೆ ಮೈಸೂರಿನ ಸಂಯೋಜಕರಾದ ಮೋಲಿ ಅವರ ನೇತೃತ್ವದಲ್ಲಿ ಸಂಘಟನೆಯ ಸದಸ್ಯರು ಗಾಂಧಿ ಮೈದಾನದಿಂದ ಜನರಲ್ ತಿಮ್ಮಯ್ಯ ವೃತ್ತವನ್ನು ಹಾದು ಜಿಲ್ಲಾಡಳಿತ ಭವನದವರೆಗೆ ಪ್ರತಿಭಟನಾ ಘೋಷಣೆಗಳೊಂದಿಗೆ ಮೆರವಣಿಗೆ ನಡೆಸಿದರು. ಜಿಲ್ಲಾಡಳಿತ ಭವನದ ಮುಂಭಾಗ ನಡೆದ ಪ್ರತಿಭಟನೆ ಸಂದರ್ಭ ಕೊಡಗು ಮಹಿಳಾ ಒಕ್ಕೂಟ(ಓಡಿಪಿ)ದ ವಲಯ ಸಂಯೋಜಕಿ ಜಾಯ್ಸ್ ಮೆನೇಜಸ್ ಮಾತನಾಡಿ, ಮಣಿಪುರದಲ್ಲಿ ಮಹಿಳೆಯರನ್ನು ಬೆತ್ತಲುಗೊಳಿಸಿ ಮೆರವಣಿಗೆ ನಡೆಸಿರುವ ಮತ್ತು ಅತ್ಯಾಚಾರಗೈದಿರುವ ಅಮಾನುಷ ಘಟನೆ ನಡೆದಿದೆ. ಇದಕ್ಕೆ ಕಾರಣರಾದವರನ್ನು ಕಠಿಣ ಕಾನೂನು ಕ್ರಮಕ್ಕೆ ಒಳಪಡಿಸಿವುದರೊಂದಿಗೆ ಮರಣ ದಂಡನೆ ವಿಧಿಸಬೇಕೆಂದು ಆಗ್ರಹಿಸಿದರು. ಪ್ರಸ್ತುತ ದೇಶ ವ್ಯಾಪಿ ಮಹಿಳೆಯರ ಮೇಲೆ ದೌರ್ಜನ್ಯ,…
ಲೇಖಕ: admin
ಮಡಿಕೇರಿ ಆ.5 : ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರಿಗೆ ಮತ್ತೆ ಸಂಸತ್ ಸ್ಥಾನ ದೊರೆಯುತ್ತಿರುವುದನ್ನು ಸ್ವಾಗತಿಸಿ ಕುಶಾಲನಗರದಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸಂಭ್ರಮಾಚರಣೆ ನಡೆಯಿತು. ರಾಹುಲ್ ಗಾಂಧಿ ಅವರ ಪ್ರಕರಣದಲ್ಲಿ ಗುಜರಾತ್ ಹೈ ಕೋರ್ಟ್ ವಿಧಿಸಿದ ಶಿಕ್ಷೆಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದ ಕ್ರಮವನ್ನು ಬ್ಲಾಕ್ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಸ್ವಾಗತಿಸಿ ಸಂಭ್ರಮಿಸಿದರು ಕುಶಾಲನಗರ ಪಟ್ಟಣದ ಮುಖ್ಯ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಗಣಪತಿ ದೇವಾಲಯದ ಮುಂಭಾಗ ಸೇರಿದ ಕಾಂಗ್ರೆಸ್ ಪ್ರಮುಖರು ಹಾಗೂ ಕಾರ್ಯಕರ್ತರು ನ್ಯಾಯಾಲಯದ ಆದೇಶವನ್ನು ಸ್ವಾಗತಿಸಿ ಸಿಹಿ ಹಂಚಿದರು. ಕೆ.ಪಿ.ಸಿ.ಸಿ ಸದಸ್ಯ ಮಂಜುನಾಥ್ ಗುಂಡೂರಾವ್, ನಗರ ಕಾಂಗ್ರೆಸ್ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಉಪಾಧ್ಯಕ್ಷ ಶಿವಶಂಕರ್, ಜಿ.ಪಂ ಮಾಜಿ ಸದಸ್ಯ ಪಿ.ಎಂ.ಲತೀಫ್, ಪುರಸಭೆ ಸದಸ್ಯ ಶೇಕ್ ಕಲೀಮುಲ್ಲ, ದಿನೇಶ್, ಕುಶಾಲನಗರ ಬ್ಲಾಕ್ ಯುವ ಕಾಂಗ್ರೆಸ್ ನ ಅಧ್ಯಕ್ಷ ಕಿರಣ್ ಕುಮಾರ್, ಪಕ್ಷದ ಸಾಮಾಜಿಕ ಜಾಲಾತಾಣದ ಪ್ರಮುಖ ಅಬ್ದುಲ್ ರಜಾಕ್ ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.
ಮಡಿಕೇರಿ ಆ.5 : ಕೊಡವ ಸಾಹಿತ್ಯ ಉಳಿಯಬೇಕಾದರೆ ಓದುಗರು ಮತ್ತು ಕೊಡವ ಭಾಷೆ ಬಳಸುವವರ ಸಂಖ್ಯೆ ಹೆಚ್ಚಾಗಬೇಕು ಎಂದು ಹಿರಿಯ ಸಾಹಿತಿ ಹಾಗೂ ಎಂ.ಎ ಕೊಡವ ವಿಭಾಗದ ಉಪನ್ಯಾಸಕ ಬಾಚರಣಿಯಂಡ ಅಪ್ಪಣ್ಣ ಅಭಿಪ್ರಾಯಪಟ್ಟಿದ್ದಾರೆ. ಕೊಡವ ಎಂ.ಎ ಸ್ನಾತಕೋತ್ತರ ವಿಭಾಗ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಹಾಗೂ ಕೊಡವ ಮಕ್ಕಡ ಕೂಟದ ಸಹಯೋಗದಲ್ಲಿ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ಸಾಹಿತಿ ಕೊಟ್ಟುಕತ್ತಿರ ಜಾಲಿ ಸೋಮಣ್ಣ ಬರೆದಿರುವ, ಕೊಡವ ಮಕ್ಕಡ ಕೂಟದ 71ನೇ ಪುಸ್ತಕ “ಕರ್ಮ-ಪ್ರಾರಬ್ಧ” ವನ್ನು ಅನಾವರಣಗೊಳಿಸಿ ಅವರು ಮಾತನಾಡಿದರು. ಪುಸ್ತುತ ದಿನಗಳಲ್ಲಿ ಓದುಗರ ಸಂಖ್ಯೆ ಕಡಿಮೆಯಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ ಅಪ್ಪಣ್ಣ, ಓದಲು ಎಷ್ಟು ಸಾಧ್ಯವೊ ಅಷ್ಟು ಓದಬೇಕು. ಇದರಿಂದ ಸಾಹಿತ್ಯ, ಭಾಷೆ, ಜನಪದ ಕಲೆಯ ಬೆಳವಣಿಗೆಯಾಗಲಿದೆ. ನಾವು ಓದಿದ ಪ್ರತಿ ಪುಸ್ತಕವನ್ನು ಸಂಗ್ರಹದ ರೂಪದಲ್ಲಿ ಇಡಬೇಕು. ಅಲ್ಲದೆ ಅದರ ಸಾರಾಂಶವನ್ನು ಮತ್ತೊಬ್ಬರಿಗೆ ತಿಳಿಸುವ ಮೂಲಕ ಸಾಹಿತ್ಯ ಬೆಳವಣಿಗೆಗೆ ಮುಂದಾಗಬೇಕು ಎಂದರು. ಕೊಡವ ಮಕ್ಕಡ ಕೂಟದ ವತಿಯಿಂದ ಬೊಳ್ಳಜಿರ ಬಿ.ಅಯ್ಯಪ್ಪ…
ವಿರಾಜಪೇಟೆ ಆ.5 : ಅಖಿಲ ಕೊಡವ ಸಮಾಜ ಪೊಮ್ಮಕ್ಕಡ ಪರಿಷತ್ ವತಿಯಿಂದ ವಿರಾಜಪೇಟೆಯ ಅಖಿಲ ಕೊಡವ ಸಮಾಜದ ಸಭಾಂಗಣದಲ್ಲಿ ಕಕ್ಕಡ ಪದಿನೆಟ್ಟ್ ನಮ್ಮೆ ಅದ್ದೂರಿಯಾಗಿ ಆಚರಿಸಲಾಯಿತು. ಇದೇ ಸಂದರ್ಭ ಮಡಿಕೇರಿ ಆಕಾಶವಾಣಿಯಲ್ಲಿ ಉದ್ಘೋಷಕಿಯಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ ಕೂಪದೀರ ಶಾರದಾ ನಂಜಪ್ಪ ಅವರನ್ನು ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ, ಶಾರದಾ ನಂಜಪ್ಪ ಅವರು ಆಕಾಶವಾಣಿಯಲ್ಲಿ ನಾನೊಬ್ಬ ಉದ್ಯೋಗಿಯಾಗಿ ಸಂಬಳಕ್ಕೆ ಕೆಲಸ ಮಾಡಿದ್ದೇನೆ ಹೊರತು ಹೆಚ್ಚೇನೂ ಮಾಡಿಲ್ಲ, ಆದರೆ ಜನರು ನನಗೆ ತೋರಿಸುತ್ತಿರುವ ಪ್ರೀತಿ ನನ್ನನ್ನು ಮೂಕವಿಸ್ಮಿತಳಾಗಿ ಮಾಡಿದೆ. ಸರ್ಕಾರಿ ಕೆಲಸ ದೇವರ ಕೆಲಸವಾಗಿದ್ದು ಅದನ್ನು ಕೇವಲ ಸಂಬಳಕ್ಕಾಗಿ ಮಾಡದೆ ಮನತೃಪ್ತಿಗಾಗಿ ಮಾಡಿದಾಗ ನಾವು ಜನರಿಗೆ ಹತ್ತಿರವಾಗುತ್ತೇವೆ ಎಂದ ಅವರು ಆಕಾಶವಾಣಿಯ ನೋವು ನಲಿವುಗಳನ್ನು ಹಂಚಿಕೊಂಡರು. ಆಕಾಶವಾಣಿಯಲ್ಲಿ ಸೇವೆ ಸಲ್ಲಿಸಿದ್ದ 30 ವರ್ಷ ಹಲವು ಕಾರ್ಯಕ್ರಮಗಳನ್ನು ಜನರಿಗೆ ನೀಡಲೂ ಕೇಳುಗರೇ ಕಾರಣ, ಕೇಳುಗರು ಕಾರ್ಯಕ್ರಮಗಳನ್ನು ಬಯಸಿದ್ದಾಗ ಮಾತ್ರ ನಮಗೆ ನೀಡಲು ಸಾಧ್ಯ ಎಂದರು. ಹಾಗೇ ಕೊಡವ ಭಾಷೆ ಹಾಗೂ ಕೊಡವರ ಮೇಲೆ…
ಮಡಿಕೇರಿ ಆ.5 : ಕಂಜಕ್ಟವೈಟೀಸ್(Madras Eye) ಇದು ಒಂದು ವೈರಸ್ನಿಂದ ಹರಡುವ ಕಾಯಿಲೆ, ಕಣ್ಣಿನ ಬಿಳಿಭಾಗವನ್ನು ಆವರಿಸುವ ಕಣ್ಣಿನ ಮುಂಭಾಗದಲ್ಲಿ ಇರುವ ಪದರದ ಸೋಂಕಿಗೆ (ಉರಿಊತ) ಇದಕ್ಕೆ ಕಂಜಕ್ಟವೈಟೀಸ್ ಎನ್ನುತ್ತಾರೆ. ಇದು ಹೆಚ್ಚಾಗಿ ಮಳೆಗಾಲದ ಆರಂಭ ಹಂತದಲ್ಲಿ ಕಂಡು ಬರುವ ಸಾಧ್ಯತೆಗಳು ಹೆಚ್ಚು. ಸೋಂಕಿತ ವ್ಯಕ್ತಿಯ ಕಣ್ಣಿನಿಂದ ಬರುವ ದ್ರವದ (Discharge) ಸಂಪರ್ಕದಿಂದ ಆರೋಗ್ಯವಂತ ವ್ಯಕ್ತಿಗೆ ಹರಡುತ್ತದೆ. ಸೋಂಕಿತ ವ್ಯಕ್ತಿಗಳು ಕಪ್ಪು ಕನ್ನಡಕ ಬಳಸುವುದರಿಂದ ಬೇರೆಯವರಿಗೆ ಸೋಂಕು ಹರಡುವುದನ್ನು ತಡೆಗಟ್ಟಬಹುದು. ಹೆಚ್ಚು ಜನಸಂದಣಿ ಇರುವ ಪ್ರದೇಶಗಳಲ್ಲಿ ಕಂಡು ಬರುತ್ತದೆ. ವಿಶೇಷವಾಗಿ ಶಾಲಾ ಕಾಲೇಜು, ವಸತಿ ನಿಲಯಗಳಲ್ಲಿ ಮತ್ತು ಅತಿಥಿ ಗೃಹಗಳಲ್ಲಿ (ಪಿ.ಜಿ) ಈ ಸೋಂಕು ಬೇಗ ಹರಡುವ ಸಾಧ್ಯತೆ ಹೆಚ್ಚು. 3 ರಿಂದ 5 ದಿನಗಳಲ್ಲಿ ಗುಣ ಮುಖವಾಗುತ್ತದೆ. ಎಲ್ಲಾ ವಯಸ್ಸಿನವರಲ್ಲಿ ಕಂಡು ಬರುತ್ತದೆ. ಲಕ್ಷಣಗಳು: ಕಣ್ಣು ಕೆಂಪಾಗುವಿಕೆ, ನೀರು ಸೋರುವಿಕೆ, ಅತಿಯಾದ ಕಣ್ಣೀರು, ಕಣ್ಣಿನಲ್ಲಿ ತುರಿಕೆ, ಸತತ ಕಣ್ಣು ನೋವು ಹಾಗೂ ಚುಚ್ಚುವಿಕೆ, ಬೆಳಕನ್ನು ನೋಡಲು ಸಾಧ್ಯವಾಗದಿರುವುದು, ದೃಷ್ಠಿ ಮುಸಕಾಗುವುದು/…
ಮಡಿಕೇರಿ ಆ.5 : ಕರ್ನಾಟಕ ಲೋಕಾಯುಕ್ತ, ಕೊಡಗು ಜಿಲ್ಲೆ, ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ಆಗಸ್ಟ್, 9 ರಂದು ವಿರಾಜಪೇಟೆ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಹಾಗೂ ಆ.11 ರಂದು ಮಡಿಕೇರಿ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಆಯಾಯ ದಿನಗಳಂದು ಬೆಳಗ್ಗೆ 11 ಗಂಟೆಯಿಂದ 1 ಗಂಟೆಯವರೆಗೆ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ವಿತರಿಸಲಿದ್ದಾರೆ. ಭರ್ತಿ ಮಾಡಿದ ಮತ್ತು ನೋಟರಿಯಿಂದ ಅಫಿಡೆವಿಟ್ ಮಾಡಿಸಿದ ಅರ್ಜಿಯನ್ನು ಸ್ವೀಕರಿಸಲಾಗುವುದು. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ/ ನೌಕರರ ವಿರುದ್ದ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದು. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ಕೋರಿದೆ. ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ, ಮಡಿಕೇರಿಯ ದೂ.ಸಂ.08272-295297 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.
ಮಡಿಕೇರಿ ಆ.5 : ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತಾಲಯದ ಮನವಿಯಂತೆ ಉಚ್ಛ ನ್ಯಾಯಾಲಯದ ನ್ಯಾಯಾಧೀಶರು ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಿರ್ಣಯಿಸಿದಂತೆ, ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್ನಲ್ಲಿ ದಾಖಲಾದ ಪ್ರಕರಣಗಳಿಗೆ ಅನ್ವಯವಾಗುವಂತೆ ಸಂಚಾರಿ ಇ-ಚಲನ್ ಮೂಲಕ ವಿಧಿಸಿದ ದಂಡದ ಮೊತ್ತದಲ್ಲಿ ಶೇ.50 ರಷ್ಟು ರಿಯಾಯಿತಿ ನೀಡಿ ಸರ್ಕಾರ ಆದೇಶ ಹೊರಡಿಸಿದೆ. ಈ ರಿಯಾಯಿತಿಯು 2023 ರ ಸೆಪ್ಟೆಂಬರ್, 9 ರವರೆಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗಲಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಬಿ.ಪ್ರಸಾದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಡಿಕೇರಿ ಆ.5 : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಕೊಡಗು ಗೌಡ ಯುವ ವೇದಿಕೆ ಮತ್ತು ನರಿಯಂದಡ ಅಯ್ಯಪ್ಪ ಯುವಕ ಸಂಘ ಇವರ ಸಹಯೋಗದಲ್ಲಿ ‘ಆಟಿ ಜಂಬರ’ ಕಾರ್ಯಕ್ರಮವು ಆ.13 ರಂದು ಬೆಳಗ್ಗೆ 9 ಗಂಟೆಗೆ ಪಾರಾಣೆ ಗೌಡ ಸಮಾಜದಲ್ಲಿ ನಡೆಯಲಿದೆ. ನರಿಯಂದಡ ಅಯ್ಯಪ್ಪ ಯುವಕ ಸಂಘದ ಅಧ್ಯಕ್ಷರಾದ ಬೆಳಿಯಂಡ್ರ ಹರಿಪ್ರಸಾದ್, ಪಾರಾಣೆ ಗೌಡ ಸಮಾಜದ ಅಧ್ಯಕ್ಷರಾದ ಮುಕ್ಕಾಟಿ ಕುಶಾಲಪ್ಪ, ಮಾಜಿ ಸೈನಿಕರು ಹಾಗೂ ನರಿಯಂದಡ ಅಯ್ಯಪ್ಪ ಯುವಕ ಸಂಘದ ಸ್ಥಾಪಕ ಅಧ್ಯಕ್ಷರಾದ ಬೆಳಿಯಂಡ್ರ ಲಕ್ಷ್ಮಣ್, ಕೊಡಗು ಗೌಡ ಯುವ ವೇದಿಕೆಯ ಅಧ್ಯಕ್ಷರಾದ ಪಾಣತ್ತಲೆ ಜಗದೀಶ್ ಮಂದಪ್ಪ ಇತರರು ಪಾಲ್ಗೊಳ್ಳಲಿದ್ದಾರೆ. (ತೋಟಂಬೈಲ್ ಅನಂತ್ ಕುಮಾರ್ ಅವರ ಒಕ್ಕಣೆ ನಂತರ ನಾಟಿ ನೆಟ್ಟ್ ಆಟಿ ಜಂಬರ ಉದ್ಘಾಟನೆ) ನಂತರ ಬೆಳಗ್ಗೆ 9.30 ಗಂಟೆಗೆ ಆಟಿ ಆಟೋಟ ಪ್ರದರ್ಶನ, ಬಳಿಕ ಬೆಳಗ್ಗೆ 11.30 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದೆ. ಶಾಸಕರಾದ ಎ.ಎಸ್.ಪೊನ್ನಣ್ಣ, ಡಾ.ಮಂಥರ್ ಗೌಡ, ಕೊಡಗು ಗೌಡ ಯುವ ವೇದಿಕೆಯ ಅಧ್ಯಕ್ಷರಾದ…
ಮಡಿಕೇರಿ ಆ.5 : ಕೊಡಗು ಜಿಲ್ಲೆಯಲ್ಲಿ ಆ.7 ರಿಂದ ಮೂರು ತಿಂಗಳವರೆಗೆ ‘ಪರಿಣಾಮಕಾರಿ ಮಿಷನ್ ಇಂದ್ರಧನುಷ್ 5.0 ಕಾರ್ಯಕ್ರಮ’ವನ್ನು ಹಮ್ಮಿಕೊಳ್ಳಲಾಗಿದು,್ದ ಈ ಕಾರ್ಯಕ್ರಮದ ಉದ್ಘಾಟನೆಯು ಆಗಸ್ಟ್, 7 ರಂದು ಬೆಳಗ್ಗೆ 10.30 ಗೆ ನಗರದ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಹಾಗೂ ಬೋಧಕ ಆಸ್ಪತ್ರೆಯ ಮಕ್ಕಳ ಲಸಿಕಾ ವಿಭಾಗದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ಸತೀಶ್ ಕುಮಾರ್ ತಿಳಿಸಿದ್ದಾರೆ.
ಮಡಿಕೇರಿ ಆ.5 : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕರ್ನಾಟಕ ಸರ್ಕಾರ ನಡೆಸಲಿರುವ ಪಿಡಿಒ, ಎಫ್ಡಿಎ, ಎಸ್ಡಿಎ ಹುದ್ದೆಗಳ ನೇಮಕಾತಿಗೆ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ತರಬೇತಿ ನೀಡಲು ನಿರ್ಧರಿಸಿದೆ. ಆಸಕ್ತರು ಆ.14 ರೊಳಗೆ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ದೂ.ಸಂ. 0821-2515944 ನ್ನು ಸಂಪರ್ಕಿಸಬಹುದು ಎಂದು ಕರಾಮುವಿ ಕುಲಸಚಿವರಾದ ಪ್ರೊ.ಕೆ.ಎಲ್.ಎನ್.ಮೂರ್ತಿ ತಿಳಿಸಿದ್ದಾರೆ.






