ಮಡಿಕೇರಿ ಆ.3 : ಭಾರತ ಆಹಾರ ನಿಗಮದಲ್ಲಿ ಲಭ್ಯತೆಯನುಸಾರ ಆಗಸ್ಟ್-2023 ರ ಮಾಹೆಗೆ ಸಾರ್ವಜನಿಕ ವಿತರಣಾ ಪದ್ಧತಿಯಡಿ ನ್ಯಾಯಬೆಲೆ ಅಂಗಡಿಗಳ ಮೂಲಕ ಪಡಿತರ ಚೀಟಿದಾರರಿಗೆ ‘ಸಾರವರ್ಧಿತ’ (ಪೌಷ್ಟಿಕಾಂಶ) ಅಕ್ಕಿಯನ್ನು ವಿತರಣೆ ಮಾಡಲಾಗುತ್ತಿದ್ದು, ಸಾರ್ವಜನಿಕ ಪಡಿತರದಾರರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗದೇ ಸಾರವರ್ಧಿತ ಅಕ್ಕಿಯನ್ನು ಪಡೆದು ಸದುಪಯೋಗಿಸಿಕೊಳ್ಳಬೇಕೆಂದು ಸಾರ್ವಜನಿಕ ಪಡಿತರದಾರರಲ್ಲಿ ಆಹಾರ ಇಲಾಖೆ ಕೋರಿದೆ. ಅಂತ್ಯೋದಯ ಪಡಿತರ ಚೀಟಿಗಳಿಗೆ (ಎಎವೈ) ಪ್ರತಿ ಪಡಿತರ ಚೀಟಿಗೆ ಅಕ್ಕಿ- 35 ಕೆ.ಜಿ ಉಚಿತ, ಪಿಹೆಚ್ಹೆಚ್ ಪಡಿತರ ಚೀಟಿಗಳಿಗೆ (ಬಿಪಿಎಲ್) (ಆದ್ಯತಾ) ಪ್ರತಿ ಸದಸ್ಯರಿಗೆ ಅಕ್ಕಿ-5 ಕೆ.ಜಿ. ಉಚಿತ, ಅಂತರ್ ನ್ಯಾಯಬೆಲೆ ಅಂಗಡಿ / ಅಂತರ್ ಜಿಲ್ಲೆ /ಅಂತರ್ ರಾಜ್ಯ ಪಡಿತರ ಚೀಟಿಗಳಿಗೆ ಪೋರ್ಟಬಲಿಟಿ ಜಾರಿಯಲ್ಲಿರುವುದರಿಂದ ಯಾವುದೇ ವರ್ಗದ ಪಡಿತರ ಚೀಟಿಗೆ ಜಿಲ್ಲೆಯ/ ರಾಜ್ಯದ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ.
ಲೇಖಕ: admin
ಮಡಿಕೇರಿ ಆ.3 : ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ವತಿಯಿಂದ ಪರಿಶಿಷ್ಟ ಜಾತಿ ಭೋವಿ ಜನಾಂಗಕ್ಕೆ ಸೇರಿದ ಭೂರಹಿತ ಕೃಷಿ ಕಾರ್ಮಿಕರ ಕುಟುಂಬದ ಮಹಿಳೆಯರಿಗೆ ಭೂಮಿ ಖರೀದಿಸಲು ಹಾಗೂ ಭೂಮಿ ಮಾರಾಟ ಮಾಡಲು ಇಚ್ಚಿಸುವ ಪರಿಶಿಷ್ಟ ಜಾತಿ/ ಪಂಗಡ ಹೊರತುಪಡಿಸಿ, ಇತರೆ ಜನಾಂಗಕ್ಕೆ ಸೇರಿರುವ ಭೂ ಮಾಲೀಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿಯ ಭೋವಿ ಜನಾಂಗಕ್ಕೆ ಸೇರಿದ ಭೂರಹಿತ ಕೃಷಿ ಕಾರ್ಮಿಕರ ಕುಟುಂಬದ ಮಹಿಳೆಯರಿಗೆ ಮಾತ್ರ ಕೃಷಿಗೆ ಯೋಗ್ಯವಾಗಿರುವ ಕನಿಷ್ಠ 2 ಎಕರೆ ಖುಷ್ಕಿ ಅಥವಾ ಕನಿಷ್ಠ 1 ಎಕರೆ ತರಿ/ ಭಾಗಾಯ್ತು ಜಮೀನುಗಳನ್ನು ಒದಗಿಸುವುದು ಈ ಯೋಜನೆ ಅನುಷ್ಠಾನದ ಉದ್ದೇಶವಾಗಿದೆ. ಈ ಯೋಜನೆಯಡಿಯಲ್ಲಿ ಸಾಲ ಸೌಲಭ್ಯ ಪಡೆಯಲು ಇಚ್ಚಿಸುವ ಅರ್ಜಿದಾರರು ಕಚೇರಿಯಿಂದ ಉಚಿತವಾಗಿ ಅರ್ಜಿ ಪಡೆದು ಆಗಸ್ಟ್, 31 ರೊಳಗೆ ದಾಖಲಾತಿಗಳನ್ನು ಅರ್ಜಿಯೊಂದಿಗೆ ಲಗತ್ತಿಸಿ ಜಿಲ್ಲಾ ಕಚೇರಿಗೆ ಸಲ್ಲಿಸಲು ಕೋರಿದೆ. ಫಲಾಪೇಕ್ಷಿಯು ಸಲ್ಲಿಸಬೇಕಾದ ದಾಖಲಾತಿಗಳು : ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ರೇಷನ್ಕಾರ್ಡ್, ಪೋಟೋ, ಗ್ರಾಮ ಸಭೆಯ…
ಮಡಿಕೇರಿ ಆ.3 : ಕೊಡಗು ಜಿಲ್ಲಾ ವಿದ್ಯುತ್ ಗ್ರಾಹಕರ ಕುಂದು ಕೊರತೆ ನಿವಾರಣಾ ವೇದಿಕೆಗೆ ಸದಸ್ಯರು ಬೇಕಾಗಿರುತ್ತದೆ. ಆದ್ದರಿಂದ ಈ ಸದಸ್ಯತ್ವ ಹೊಂದಲು ಬಯಸುವವರು ವಿದ್ಯುತ್ ಕ್ಷೇತ್ರದ ಬಗ್ಗೆ ಅನುಭವವುಳ್ಳವರು ಅಥವಾ ಸೂಕ್ತ ಜ್ಞಾನ ಹೊಂದಿರುವ ಅಭ್ಯರ್ಥಿಗಳು ತಮ್ಮ ವೈಯುಕ್ತಿಕ ಮಾಹಿತಿಯೊಂದಿಗೆ ಅರ್ಜಿಯನ್ನು ಆಗಸ್ಟ್, 10 ರೊಳಗೆ ಕಾರ್ಯನಿರ್ವಾಹಕ ಎಂಜಿನಿಯರ್(ವಿ) ಅವರ ಕಚೇರಿ, ಕಾರ್ಯ ಮತ್ತು ಪಾಲನೆ ವಿಭಾಗ ಮಡಿಕೇರಿ ಇ-ಮೇಲ್ eeemdk@cescmysore.org, cesceemdk @gmail.com ಈ ಕಚೇರಿಗೆ ವಿವರವನ್ನು ಸಲ್ಲಿಸುವಂತೆ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.
ಮಡಿಕೇರಿ ಆ.3 : ಕೊಡವ ಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆಯ ಕುರಿತು ಸಿಎನ್ಸಿ ಬೇಡಿಕೆಗೆ ಪೂರಕವಾಗಿ ಆಯೋಗವನ್ನು ರಚಿಸಬೇಕೆಂದು ಖ್ಯಾತ ಅರ್ಥಶಾಸ್ತ್ರಜ್ಞ ಡಾ.ಸುಬ್ರಮಣಿಯನ್ ಸ್ವಾಮಿ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಹೈಕೋರ್ಟ್ ನಲ್ಲಿ ನಡೆಯಿತು. ವಿಚಾರಣೆಯನ್ನು ಸೆ.5 ಕ್ಕೆ ಮುಂದೂಡಲಾಗಿದ್ದು, ಮೂವರು ಪ್ರತಿವಾದಿಗಳು ಮುಂದಿನ 4 ವಾರಗಳಲ್ಲಿ ಉತ್ತರ ನೀಡುವಂತೆ ಕೋರ್ಟ್ ನಿರ್ದೇಶನ ನೀಡಿತು. ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ.ವರಾಳೆ ಹಾಗೂ ನ್ಯಾಯಮೂರ್ತಿ ಎಂಜೆಎಸ್.ಕಮಲ್ ಅವರ ವಿಭಾಗೀಯ ಪೀಠವು ಪ್ರಕರಣದ ವಿಚಾರಣೆ ನಡೆಸಿತು. ಡಾ. ಸುಬ್ರಮಣಿಯನ್ ಸ್ವಾಮಿ ಅವರು ಇಂದು ವಿಚಾರಣೆಗೆ ಹಾಜರಾಗಿ ಹೈಕೋರ್ಟ್ ವಿಭಾಗೀಯ ಪೀಠದ ಮುಂದೆ ಪ್ರಕರಣವನ್ನು ವಾದಿಸಿದರು. ಅರ್ಜಿದಾರರ ಪರವಾಗಿ ವಕೀಲರಾದ ಎಂ.ಎಸ್.ನಾರಾಯಣ ಕಿರಣ್, ವಿಕ್ರಮ್ ಹೆಗ್ಡೆ ಹಾಗೂ ಪಾರ್ಥ್ ಅವರು ಹಾಜರಾಗಿದ್ದರು. ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಹಾಗೂ ವಿಎಚ್ಎಸ್ ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜಗದೀಶ್ ಶೆಟ್ಟಿ ಹೈಕೋರ್ಟ್ನಲ್ಲಿ ಉಪಸ್ಥಿತರಿದ್ದರು. ಡಾ.ಸುಬ್ರಮಣಿಯನ್ ಸ್ವಾಮಿ ಅವರು ಹೈಕೋರ್ಟ್ಗೆ ಸಲ್ಲಿಸಿದ ರಿಟ್ ಅರ್ಜಿ ಸಂಖ್ಯೆ-7769/2023 ರ ಪಿಐಎಲ್ ದೀರ್ಘಕಾಲ…
ನಾಪೋಕ್ಲು ಆ.3 : ವಿದ್ಯಾರ್ಥಿಗಳು ಸೇವಾ ಮನೋಭಾವನೆಯನ್ನು ಬೆಳೆಸಿಕೊಂಡು ಶಿಸ್ತನ್ನು ಮೈಗೂಡಿಸಿಕೊಂಡು ಸಮಾಜಕ್ಕೆ ಉತ್ತಮ ಪ್ರಜೆಗಳಾಗಿ ಬೆಳೆಯಬೇಕು ಎಂದು ವಾಟೆಕಾಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಟಿ.ಬಿ.ಕುಮಾರಸ್ವಾಮಿ ಹೇಳಿದರು. ಮೂರ್ನಾಡು ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯಾಸಂಸ್ಥೆಯ ನಿರ್ದೇಶಕ ಹಾಗೂ ಕ್ಲೀನ್ ಇಂಡಿಯಾ ಬ್ರಿಗೇಡ್ ಪ್ರಾಜೆಕ್ಟ್ ಡೈರೆಕ್ಟರ್ ರಾಜ ಮಾದಪ್ಪ ಮಾತನಾಡಿ, ವಿದ್ಯಾರ್ಥಿಗಳು ಶುಚಿತ್ವವನ್ನು ಮನೆಯಿಂದಲೇ ಪ್ರಾರಂಭಿಸಬೇಕು. ಆಗ ಮಾತ್ರ ನಮ್ಮ ಸುತ್ತಮುತ್ತಲ ಪರಿಸರವನ್ನು ಶುಚಿಯಾಗಿಟ್ಟುಕೊಳ್ಳಬಹುದು ಎಂದರು. ವೇದಿಕೆಯಲ್ಲಿ ವಿದ್ಯಾಸಂಸ್ಥೆಯ ಗೌರವ ಕಾರ್ಯದರ್ಶಿ ವೇಣು ಅಪ್ಪಣ್ಣ , ಉಪಾಧ್ಯಕ್ಷ ಸುಬ್ರಮಣಿ ,ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ದೇವಕಿ , ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ದಮಯಂತಿ ಉಪನ್ಯಾಸಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಮಡಿಕೇರಿ ಆ.3 : ಡಾ.ಕಸ್ತೂರಿ ರಂಗನ್ ವರದಿಯ ಸಾಧಕ, ಬಾಧಕಗಳ ಬಗ್ಗೆ ಬೆಳಕು ಚೆಲ್ಲುವ ನಿಟ್ಟಿನಲ್ಲಿ ಆ.11 ರಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರುವ ಸೇನೆ ವತಿಯಿಂದ ಜಿಲ್ಲೆಯಲ್ಲಿ ವಿಚಾರಗೋಷ್ಠಿ ನಡೆಯಲಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿರಾಜಪೇಟೆ ಅಥವಾ ಸಿದ್ದಾಪುರದಲ್ಲಿ ವಿಚಾರಗೋಷ್ಠಿ ಮತ್ತು ಸಂವಾದವನ್ನು ಆಯೋಜಿಸಲಾಗುವುದು. ಗೋಷ್ಠಿಯಲ್ಲಿ ಪರಿಸರ ತಜ್ಞರು, ಸಂಪನ್ಮೂಲ ವ್ಯಕ್ತಿಗಳು ಹಾಗೂ ಮಲೆನಾಡು ಪ್ರದೇಶದ ಎಲ್ಲಾ ಜಿಲ್ಲೆಗಳ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ ಎಂದರು. ಪರಿಸರವನ್ನು ಕಾಪಾಡುವ ಕಾರಣ ನೀಡಿ ಸೂಕ್ಷ್ಮ ವಲಯ ಎಂದು ಘೋಷಿಸಲು ಕಸ್ತೂರಿ ರಂಗನ್ 2013 ಏಪ್ರಿಲ್ 15 ರಂದು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿರುವ ವರದಿಯು ಅವೈಜ್ಞಾನಿಕವಾಗಿದ್ದು, ಇದು ರೈತರಿಗೆ ಮಾರಕವಾಗಿದೆ. ಮಲೆನಾಡು ಪ್ರದೇಶದಲ್ಲಿ ವಾಸಿಸುತ್ತಿರುವ ರೈತರು, ಕಾರ್ಮಿಕರು, ಆದಿವಾಸಿ ಬುಡಕಟ್ಟು ಜನರ ಬದುಕು ಮತ್ತು ಮೂಲಭೂತ ಹಕ್ಕನ್ನು ಕಸಿದುಕೊಳ್ಳುವ ವರದಿಯಾಗಿದೆ. ಇದನ್ನು ಈ ಹಿಂದೆ ಕಾಂಗ್ರೆಸ್ ಮತ್ತು ಇತರ ಸರ್ಕಾರಗಳು ತಿರಸ್ಕರಿಸಿದ್ದು, ಪ್ರಸ್ತುತ…
ಸುಂಟಿಕೊಪ್ಪ,ಆ.3: ಗುರುವಾರದಂದು ನಿಗಧಿಯಾಗಿದ್ದ ಗ್ರೇಡ್ 1 ಪಂಚಾಯಿತಿಯ 2ನೇ ಅವಧಿಯ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯು ತಾಂತ್ರಿಕ ದೋಷದ ಹಿನ್ನಲೆಯಲ್ಲಿ ಆ.10ಕ್ಕೆ ಮುಂದೂಡಲಾಗಿದೆ ಎಂದು ಚುನಾವಣಾ ಅಧಿಕಾರಿ ವರದರಾಜ್ ತಿಳಿಸಿದ್ದಾರೆ. ಅಧ್ಯಕ್ಷ ಸ್ಥಾನವು ಬಿಸಿಎಂ (ಎ) ಮತ್ತು ಉಪಾಧ್ಯಕ್ಷ ಸ್ಥಾನವು ಪರಿಶಿಷ್ಟ ಜಾತಿ ಮಹಿಳೆ ಮೀಸಲಾಗಿದ್ದು, ಸಲ್ಲಿಕೆಯಾಗಿದ್ದ 7 ಅಧ್ಯಕ್ಷ ಆಕಾಂಕ್ಷಿಗಳ ನಾಮಪತ್ರ ಪರಿಶೀಲನೆ ಸಂದರ್ಭ ಸಂಬಂಧಿಸಿದ ಆಭ್ಯರ್ಥಿಗಳು ಆಯಾ ತಾಲೂಕು ತಹಶೀಲ್ದಾರ್ ನೀಡಿದ ಜಾತಿ ಪ್ರಮಾಣಪತ್ರ, ನಾಮಪತ್ರದ ಜೊತೆಗೆ ಸಲ್ಲಿಸಬೇಕಾಗಿದ್ದು, ಪ್ರಸ್ತುತ ಅಭ್ಯರ್ಥಿಗಳು ಸಲ್ಲಿಸಿದ ನಾಮಪತ್ರಗಳು ತಿರಸ್ಕೃತಗೊಂಡಿದೆ. ಈ ಹಿನ್ನೆಲೆ ಪ್ರಮಾಣ ಪತ್ರ ಒದಗಿಸಲು 7 ದಿನಗಳ ಕಾಲಾವಕಾಶ ನೀಡಿ ಚುನಾವಣೆಯನ್ನು ಆ.10 ರ ಗುರುವಾರಕ್ಕೆ ಮುಂದೂಡಿ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ವರದರಾಜ್ ಆದೇಶಿಸಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ 7 ಜನ ಆಭ್ಯರ್ಥಿಗಳಾಗಿ ಬಿಜೆಪಿ. ಬೆಂಬಲಿತ ಪಕ್ಷದ ಪಿ.ಆರ್.ಸುನಿಲ್, ಬಿ.ಎಂ.ಸುರೇಶ್, ಕಾಂಗ್ರೆಸ್ ಬೆಂಬಲಿತ ರಫೀಕ್ ಖಾನ್, ಆಲಿಕುಟ್ಟಿ, ಪಕ್ಷೇತರರಾಗಿ ಶಬ್ಬೀರ್ ಪ್ರಸಾದ್ ಕುಟ್ಟಪ್ಪ, ಎಸ್ಡಿಪಿಐ ಬೆಂಬಲಿತ ಆಭ್ಯರ್ಥಿಯಾಗಿ ನಾಗರತ್ನ ಸುರೇಶ್ ನಾಮಪತ್ರ…
ಮಡಿಕೇರಿ ಆ.3 : ಚೆಟ್ಟಳ್ಳಿ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಗ್ರಾಮೀಣ ಸಹಕಾರ ಸಂಘವು 2022-23ನೇ ಸಾಲಿನಲ್ಲಿ ಒಟ್ಟು ರೂ.2764.77 ಲಕ್ಷಗಳ ವಹಿವಾಟು ನಡೆಸುವ ಮೂಲಕ ರೂ.53.42 ಲಕ್ಷ ನಿವ್ವಳ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಬಲ್ಲಾರಂಡ ಮಣಿಉತ್ತಪ್ಪ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸದಸ್ಯರಿಗೆ ಶೇ.15ರಂತೆ ಡಿವಿಡೆಂಟ್ ನೀಡಲಾಗುವುದು ಎಂದರು. ಸಂಘದಲ್ಲಿ 2022-23ನೇ ಸಾಲಿನ ಒಟ್ಟು ‘ಎ’ ತರಗತಿಯ 1138 ಸದಸ್ಯರಿದ್ದು, ಸದಸ್ಯರಿಂದ ಪಾಲು ಬಂಡವಾಳವಾಗಿ ರೂ.121.64 ಲಕ್ಷಗಳಿರುತ್ತದೆ. ಕ್ಷೇಮ ನಿಧಿ ಸೇರಿ ಇತರೆ ನಿಧಿಗಳು ರೂ.273.03 ಲಕ್ಷ ಹಾಗೂ ನಿರುಖು ಠೇವಣಿ, ಸಂಚಯ ಠೇವಣಿ ಹಾಗೂ ಇತರೆ ಠೇವಣಿ ಸೇರಿ ಒಟ್ಟು ರೂ.1410.33 ಲಕ್ಷಗಳಿರುತ್ತದೆ. ಸಂಘದ ಬಂಡವಾಳವನ್ನು ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಪಾಲು ಹಣ, ಕ್ಷೇಮ ನಿಧಿ ಹಾಗೂ ನಿರುಖು ಠೇವಣಿಯಲ್ಲಿ ಹಾಗೂ ಇತರೆ ಸಹಕಾರ ಸಂಸ್ಥೆಯಲ್ಲಿ ಪಾಲು ಮತ್ತು ನಿರಖು ಠೇವಣಿ ರೂಪದಲ್ಲಿ ಒಟ್ಟು ರೂ.485.37 ಲಕ್ಷಗಳನ್ನು ಠೇವಣಿ ಮಾಡಲಾಗಿದೆ ಎಂದು ತಿಳಿಸಿದರು.…
ಸುಂಟಿಕೊಪ್ಪ,ಆ.3 : ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ರಸ್ತೆಯಲ್ಲಿ ಹಾಡಹಗಲು ಹಾಗೂ ರಾತ್ರಿಯ ವೇಳೆಯಲ್ಲಿ ಬೀದಿ ದೀಪಗಳು ಕಳೆದ 10 ದಿನಗಳಿಂದ ನಿರಂತರವಾಗಿ ಉರಿಯುತ್ತಿದ್ದು, ಸಾರ್ವಜನಿಕರು ಪಂಚಾಯಿತಿ ಹಾಗೂ ಚೆಸ್ಕಾಂ ಇಲಾಖೆಯ ನಿರ್ಲಕ್ಷ್ಯತೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸುಂಟಿಕೊಪ್ಪ ಗ್ರೇಡ್ 1 ಗ್ರಾಮ ಪಂಚಾಯಿತಿಯು ಸೆಸ್ಕ್ ಇಲಾಖೆಗೆ ಲಕ್ಷಗಟ್ಟಲೇ ಹಣ ಬಾಕಿ ಉಳಿಸಿಕೊಂಡಿದೆ. ಹಗಲಲ್ಲೂ ಬೀದಿದೀಪ ಉರಿಯುತ್ತಿರುವ ಗ್ರಾ.ಪಂ ಗಮನಕ್ಕೆ ತಂದರೂಯಾವುದೇ ಪ್ರಯೋಜನವಾಗಿಲ್ಲ. ಈ ರಸ್ತೆಯಲ್ಲಿ ತುರ್ತು ವೇಳೆಯಲ್ಲಿ ರಾತ್ರಿ ಹೊತ್ತು ಕತ್ತಲಮಯವಾಗಿರುತ್ತದೆ. ಆದರೆ ಇದೀಗ ಹಗಲು ವೇಳೆಯಲ್ಲೂ ಉರುಯುತ್ತಿರುವುದು ಗ್ರಾ.ಪಂ ಮತ್ತು ಸೆಸ್ಕ್ ಇಲಾಖೆಯ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ ಎಂದು ಸಾರ್ವಜನಿಕರು ಆರೋಪಿಸಿದರು. ಸೆಸ್ಕ್ ಕಿರಿಯ ಎಂಜಿನಿಯರ್ ಲವ ಅವರ ಗಮನಕ್ಕೆ ತಂದಾಗ, ಈ ಬಗ್ಗೆ ಯಾವುದೇ ದೂರು ಬಂದಿಲ್ಲ. ಗಮನಹರಿಸುವುದಾಗಿ ಮಾಹಿತಿ ನೀಡಿದರು.
ಮಡಿಕೇರಿ, ಆ.3 : ನಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ಸ್ವಚ್ಛತೆ, ಆರೋಗ್ಯ ಮತ್ತು ನೈರ್ಮಲ್ಯ ಕಾಪಾಡಿಕೊಂಡು ಸೊಳ್ಳೆಗಳ ನಿಯಂತ್ರಣ ಮಾಡುವ ಮೂಲಕ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ಸಾಧ್ಯ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಕೆ.ಎಂ.ಸತೀಶ್ ಕುಮಾರ್ ಹೇಳಿದರು. ಸಾಂಕ್ರಾಮಿಕ ರೋಗಗಳಾದ ಡೆಂಗ್ಯೂ, ಮಲೇರಿಯಾ ಮತ್ತು ಚಿಕೂನ್ಗುನ್ಯಾ ರೋಗ ಹರಡುವಿಕೆ, ನಿಯಂತ್ರಣ ಕುರಿತು ಮಡಿಕೇರಿ ನಗರದ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ರಾಷ್ಟ್ರೀಯ ಮಲೇರಿಯಾ ವಿರೋಧಿ ಮಾಸಾಚರಣೆ ಅಂಗವಾಗಿ ಮಡಿಕೇರಿ ತಾಲ್ಲೂಕಿನ ಪ್ರೌಢಶಾಲಾ ವಿಜ್ಞಾನ ಶಿಕ್ಷಕರಿಗೆ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಹಾಗೂ ಮುಂಜಾಗ್ರತಾ ಕ್ರಮಗಳ ಕುರಿತು ಏರ್ಪಡಿಸಿದ್ದ ಅಡ್ವೊಕೆಸಿ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ಶಿಕ್ಷಕರು ತಮ್ಮ ಸುತ್ತಲಿನ ಪ್ರದೇಶದಲ್ಲಿ ಸ್ವಚ್ಛತೆ, ಆರೋಗ್ಯ ಮತ್ತು ನೈರ್ಮಲ್ಯದ ಕುರಿತು ಮಕ್ಕಳು ಹಾಗೂ ಸಮುದಾಯದಲ್ಲಿ ಅರಿವು ಮೂಡಿಸುವ ಮೂಲಕ ಸಾಂಕ್ರಾಮಿಕ ರೋಗಗಳು ಹರಡದಂತೆ ಜಾಗೃತಿ ಮೂಡಿಸಬೇಕು ಎಂದರು. ಸಾಂಕ್ರಾಮಿಕ ರೋಗಗಳು ಹರಡದಂತೆ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡರೆ ಎಲ್ಲಾ ರೋಗಗಳನ್ನು ತಡೆಗಟ್ಟಲು ಸಾಧ್ಯ…






