ಲೇಖಕ: admin

ಮಡಿಕೇರಿ ನ.21 NEWS DESK : ಕೊಡಗು ಜಿಲ್ಲೆಯ ಕೆಲವು ಗ್ರಾ.ಪಂ ವ್ಯಾಪ್ತಿಯಲ್ಲಿ ಕೇಂದ್ರ ಸರಕಾರದ ಮಹಾತ್ವಾಕಾಂಕ್ಷೆಯ ಜಲ್ ಜೀವನ್ ಮಿಷನ್ ಯೋಜನೆಗೆ ಹಿನ್ನಡೆಯಾಗಿದ್ದು, ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳ ಹಾಗೂ ಗುತ್ತಿಗೆದಾರರ ನಿರ್ಲಕ್ಷ್ಯವೇ ಕಾರಣವೆಂದು ದಿಶಾ ಸಮಿತಿಯ ಸದಸ್ಯ ಚೆಪ್ಪುಡಿರ ರಾಕೇಶ್ ದೇವಯ್ಯ ಅವರು ಆರೋಪಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಈ ಯೋಜನೆಯ ಬಗ್ಗೆ ಆಸಕ್ತಿ ತೋರದೆ ಬೇಜವಾಬ್ದಾರಿತನ ತೋರುತ್ತಿರುವ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲು ಹಿರಿಯ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಜಲ್ ಜೀವನ್ ಮಿಷನ್ ಅತ್ಯಂತ ಮಹತ್ವದ ಯೋಜನೆಯಾಗಿದೆ, ಜಿಲ್ಲೆಯ ಕೆಲವು ಭಾಗಗಳಲ್ಲಿ ಈ ಯೋಜನೆ ಹಿನ್ನಡೆ ಅನುಭವಿಸುತ್ತಿರುವುದನ್ನು ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ. ಕೆಲವು ಗುತ್ತಿಗೆದಾರರು ಅಧಿಕಾರಿಗಳು ನೀಡಿದ ನೋಟಿಸ್ ಗೆ ತಲೆ ಕೆಡಿಸಿಕೊಳ್ಳದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಕೊಡಗಿನ ಯಾವುದೇ ಗ್ರಾಮದಲ್ಲಿ ಜಲ್ ಜೀವನ್ ಮಿಷನ್ ಯೋಜನೆ ವಿಳಂಬವಾಗುತ್ತಿದ್ದರೆ ಅಥವಾ ಗುತ್ತಿಗೆದಾರರಿಂದ ಸೂಕ್ತ ಸ್ಪಂದನೆ ಸಿಗದೇ ಇದ್ದರೆ ದಾಖಲೆ ಸಹಿತ ದಿಶಾ ಸಮಿತಿಯ ಸದಸ್ಯರ ಗಮನಕ್ಕೆ ತರಬಹುದು.…

Read More

ಮಡಿಕೇರಿ ನ.21 NEWS DESK : ನೂತನವಾಗಿ ರಚನೆಗೊಂಡಿರುವ ಚೇರಂಬಾಣೆಯ ಬೇಂಗ್ ನಾಡ್ ಕೊಡವ ಸಮಾಜದ ಪೊಮ್ಮಕ್ಕಡ ಕೂಟದ ಉದ್ಘಾಟನಾ ಸಮಾರಂಭ ಸಂಭ್ರಮದಿಂದ ನಡೆಯಿತು. ಬೇಂಗ್ ನಾಡ್ ಕೊಡವ ಸಮಾಜದ ಸಭಾ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಬೇಂಗ್ ನಾಡ್ ಕೊಡವ ಸಮಾಜದ ಅಧ್ಯಕ್ಷ ಬಾಚರಣಿಯಂಡ ದಿನೇಶ್ ಗಣಪತಿ, ಚೇರಂಬಾಣೆಯ ನಿವೃತ್ತ ಮುಖ್ಯೋಪಾಧ್ಯಾಯಿನಿ ಪಟ್ಟಮಾಡ ಸೀತಮ್ಮ ಗಣಪತಿ ಹಾಗೂ ಕಾರುಗುಂದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ನಿರ್ದೇಶಕರಾದ ಪೊಡನೋಳಂಡ ತುಳಸಿ ಉತಪ್ಪ ಪೊಮ್ಮಕ್ಕಡ ಕೂಟವನ್ನು ದೀಪ ಬೆಳಗುವ ಮೂಲಕ ಉದ್ಘಾಟಿಸಿದರು. ನಂತರ ಮಾತನಾಡಿದ ಬಾಚರಣಿಯಂಡ ದಿನೇಶ್ ಗಣಪತಿ ಅವರು ನೂತನವಾಗಿ ಪೊಮ್ಮಕ್ಕಡ ಕೂಟವನ್ನು ರಚಿಸಿರುವ ಉದ್ದೇಶದ ಕುರಿತು ವಿವರಿಸಿದರು. ಮಹಿಳೆಯರು ಸಮಾಜದ ಶಕ್ತಿಯಾಗಿದ್ದಾರೆ, ನಮ್ಮ ಆಚಾರ, ವಿಚಾರ, ಪದ್ಧತಿ, ಪರಂಪರೆಯನ್ನು ಉಳಿಸಿ ಬೆಳೆಸಲು ಮತ್ತು ಕಲಿಸಲು ಪೊಮ್ಮಕ್ಕಡ ಕೂಟ ವೇದಿಕೆಯಾಗಲಿದೆ ಎಂದರು. ಪಟ್ಟಮಾಡ ಸೀತಮ್ಮ ಗಣಪತಿ ಅವರು ಮಾತನಾಡಿ ಮಹಿಳೆಯರಲ್ಲಿ ಅಡಗಿರುವ ಪ್ರತಿಭೆಯನ್ನು ಅನಾವರಣಗೊಳಿಸುವ ಕಾರ್ಯ…

Read More

ಮಡಿಕೇರಿ ನ.21 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ವಿರಾಜಪೇಟೆ ತಾಲ್ಲೂಕು ವತಿಯಿಂದ ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕಿ ಗಾಯತ್ರಿ ನರಸಿಂಹ ಅವರನ್ನು ಸನ್ಮಾನಿಸಲಾಯಿತು. ಗಾಯತ್ರಿ ನರಸಿಂಹ ಅವರು ಕಳೆದ 20 ವರ್ಷಗಳಿಂದ ಸಮಾಜ ಸೇವೆಯಲ್ಲಿ ತೊಡಗಿಕೊಂಡಿರುವುದನ್ನು ಪರಿಗಣಿಸಿ ಗೋಣಿಕೊಪ್ಪದ ಉಮಾಮಹೇಶ್ವರಿ ದೇವಾಲಯದ ಸಭಾಂಗಣದಲ್ಲಿ ನಡೆದ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮದಲ್ಲಿ ಅತಿಥಿ ಗಣ್ಯರು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭ ಗೋಣಿಕೊಪ್ಪ ಗ್ರಾ.ಪಂ ಅಧ್ಯಕ್ಷ ಪ್ರಮೋದ್ ಗಣಪತಿ, ಮಾಜಿ ಅಧ್ಯಕ್ಷೆ ಸೌಮ್ಯ ಬಾಲಕೃಷ್ಣ, ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ಹರೀಶ್, ಜ್ಞಾನ ವಿಕಾಸ ಕೇಂದ್ರದ ಸಮನ್ವಯಾಧಿಕಾರಿ ಉಷಾರಾಣಿ, ಗೋಣಿಕೊಪ್ಪ ಪೊಲೀಸ್ ಇಲಾಖೆಯ ಕಾವೇರಮ್ಮ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಮುದಾಯ ಇಲಾಖೆಯ ವೈದ್ಯಾಧಿಕಾರಿ ಡಾ.ಗ್ರೀಷ್ಮಾ, ಗೋಣಿಕೊಪ್ಪ ಸರಕಾರಿ ಪ್ರೌಢಶಾಲೆಯ ಶಿಕ್ಷಕರಾದ ಚಂದನ ಹಾಗೂ ಇತರರು ಇದ್ದರು.

Read More

ಮಡಿಕೇರಿ ನ.21 NEWS DESK : ನಗರದ ಎಎಲ್‌ಜಿ ಕ್ರೆಸೆಂಟ್ ಶಾಲೆಯಲ್ಲಿ “ಕನ್ನಡ ಕಲರವ” ರಸಪ್ರಶ್ನೆ ಸ್ಪರ್ಧೆ ನಡೆಯಿತು. ಬ್ರಹ್ಮಗಿರಿ ಸಹೋದಯ ಒಕ್ಕೂಟದ ವತಿಯಿಂದ ಸಿಬಿಎಸ್‌ಇ ಶಾಲೆಗಳ ವಿದ್ಯಾರ್ಥಿಗಳಿಗೆ ಆಯೋಜಿಸಲಾದ ರಸಪ್ರಶ್ನೆ ಸ್ಪರ್ಧೆಯಲ್ಲಿ  ಅಂಕುರ್ ಪಬ್ಲಿಕ್ ಸ್ಕೂಲ್ ನಾಪೋಕ್, ಎಸ್.ಎಂ.ಎಸ್ ಶಾಲೆ ಅರಮೇರೀ, ನ್ಯಾಷನಲ್ ಅಕಾಡೆಮಿ ಗೋಣಿಕೊಪ್ಪ, ಕೊಡಗು ವಿದ್ಯಾಲಯ, ಸೈನಿಕ ಶಾಲೆ ಕೊಡಗು, ಕೆವಿಜಿ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ಸುಳ್ಯ ಹಾಗೂ ಸೇಂಟ್ ಆನ್ಸ್ ಸಿಬಿಎಸ್‌ಇ ಶಾಲೆ ಸಿದ್ದಾಪುರ ಸೇರಿದಂತೆ ಜಿಲ್ಲೆಯ ಹಲವು ಶಾಲೆಗಳ ತಂಡಗಳು ಭಾಗವಹಿಸಿ, ತೀವ್ರ ಸ್ಪರ್ಧೆ ನಡೆಸಿದವು.  ಕನ್ನಡ ಭಾಷೆ, ಸಾಹಿತ್ಯ, ನಾಡಿನ ಸಂಸ್ಕೃತಿ, ಇತಿಹಾಸ ಮತ್ತು ಸಾಮಾನ್ಯ ಜ್ಞಾನ ಸೇರಿದಂತೆ ಒಟ್ಟು ಹನ್ನೊಂದು ಸುತ್ತು ಗಳಲ್ಲಿ ಸ್ಪರ್ಧೆ ನಡೆದಿದ್ದು, ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾಗಿರುವ ಕನ್ನಡ ಶಿಕ್ಷಕಿ ಕುಮಾರಿ ಸುಲ್ಹತ್ ಅವರು ರಸಪ್ರಶ್ನೆಯನ್ನು ನಡೆಸಿಕೊಟ್ಟರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಎ ಎಲ್ ಜಿ ಶಾಲೆಯ ಪ್ರಾಂಶುಪಾಲರಾದ ಜಾಯ್ಸ್ ವಿನಯ, “ಕನ್ನಡ ಕಲರವವು ಭಾಷಾಭಿಮಾನವನ್ನು…

Read More

ಮಡಿಕೇರಿ ನ.21 NEWS DESK : ಪಾರಾಣೆಯಲ್ಲಿ ಶಾಸಕರ ಅನುದಾನ ರೂ.20 ಲಕ್ಷಗಳಲ್ಲಿ ನೂತನವಾಗಿ ನಿರ್ಮಾಣಗೊಂಡ ಪೆವಿಲಿಯನ್ ಕಟ್ಟಡವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಉದ್ಘಾಟಿಸಿದರು. ನಂತರ  ಕೇಂದ್ರ ಕ್ರೀಡಾ ಮಂಡಳಿಯ ಗ್ರಾಮಾಂತರ ಕ್ರೀಡಾಕೂಟದ ದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಶಾಸಕರು ಕ್ರೀಡಪಟುಗಳಿಗೆ ಶುಭಹಾರೈಸಿದರು. ನೂತನ ಪೆವಿಲಿಯನ್ ಕಟ್ಟಡವನ್ನು ಲೋಕಾರ್ಪಣೆ ಮಾಡಿ ಮಾತನಾಡಿದ ಶಾಸಕರು, ಕ್ರೀಡಾಪಟುಗಳ ಉತ್ಸಾಹ ಹೆಚ್ಚಿಸಲು ಪ್ರೇಕ್ಷಕರ ಅಗತ್ಯತೆ ತುಂಬಾ ಮುಖ್ಯ. ಕ್ರೀಡೆಯನ್ನು ವೀಕ್ಷಿಸಲು ಪ್ರೇಕ್ಷಕರಿಗೆ ಅನುಕೂಲವಾಗಲೆಂದು ಈ ಪೆವಿಲಿಯನ್ ಕಟ್ಟಡದ ನಿರ್ಮಾಣವಾಗಿದ್ದು, ಇದರ ಸದುಪಯೋಗವನ್ನು ಕ್ರೀಡಾಪಟುಗಳು ಹಾಗೂ ಕ್ರೀಡಾಭಿಮಾನಿಗಳು ಪಡೆದುಕೊಳ್ಳಬೇಕೆಂದು ಕರೆ ನೀಡಿದರು. ಕ್ಷೇತ್ರದಲ್ಲಿನ ಆಟದ ಮೈದಾನಗಳಿಗೆ ಹಾಗೂ ಕ್ರೀಡಾ ಅಭಿವೃದ್ಧಿಗೆ ತಾನು ಸರಕಾರದಿಂದ ಅನೇಕ ಯೋಜನೆಗಳನ್ನು ತಂದಿದ್ದು, ಇದರಲ್ಲಿ ಕ್ರೀಡಾ ತರಬೇತಿ ಕೇಂದ್ರ, ಕ್ರೀಡಾ ವಸತಿ ನಿಲಯಗಳ ನಿರ್ಮಾಣ ಹಾಗೂ ನೂತನ ಕ್ರೀಡಾಂಗಣ ನಿರ್ಮಾಣಕ್ಕೆ ಒತ್ತು ನೀಡುತ್ತಿರುವುದಾಗಿ ಹೇಳಿದರು. ಇಂತಹ ಕ್ರೀಡಾಂಗಣಗಳು ಸ್ಥಳೀಯ ಕ್ರೀಡಾ ಪ್ರತಿಭೆಗಳ ಏಳಿಗೆಗೆ ಸಹಕಾರಿಯಾಗಲಿದ್ದು…

Read More

ಮಡಿಕೇರಿ ನ.21 NEWS DESK : ಚಿಕ್ಕಬಳ್ಳಾಪುರದಲ್ಲಿ ನಡೆದ ಪ್ರೌಢಶಾಲಾ ವಿದ್ಯಾರ್ಥಿಗಳ ರಾಜ್ಯ ಮಟ್ಟದ ಕ್ರೀಡಾಕೂಟದ ಕರಾಟೆ ಪಂದ್ಯಾವಳಿಯಲ್ಲಿ ವಿರಾಜಪೇಟೆಯ ಕಾವೇರಿ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಸಣ್ಣುವಂಡ ಎಸ್.ರಶ್ಮಿ ಪೆÇನ್ನಮ್ಮ ಕೊಡಗು ಜಿಲ್ಲೆಯನ್ನು ಪ್ರತಿನಿಧಿಸಿದ್ದಾಳೆ. ಇವಳಿಗೆ ಕರಾಟೆ ಬೋಧಕರಾದ ಸೋಮಣ್ಣ ತರಬೇತಿ ನೀಡಿದ್ದಾರೆ. ವಿದ್ಯಾರ್ಥಿಯ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕಿ, ಸಂಯೋಜಕಿ, ಬೋಧಕ ಬೋಧಕೇತರ ವೃಂದದವರು ಹಾಗೂ ಪೋಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Read More

ಮಡಿಕೇರಿ ನ.21 NEWS DESK :  ಬೆಂಗಳೂರಿನಲ್ಲಿ ನಡೆದ ಮೂರು ದಿನದ ಅದ್ದೂರಿಯ ಪುಸ್ತಕ ಸಂತೆಯ ಒಂದು ಭಾಗವಾಗಿ, ಆಜೂರ ಪ್ರಶಸ್ತಿ ವಿಜೇತೆ, ಕೊಡಗಿನ ಬರಹಗಾರ್ತಿ ಕೃಪಾ ದೇವರಾಜ್ ಅವರು ಬರೆದ ಐದನೇ ಪುಸ್ತಕ “ಮಂತ್ರಪುಷ್ಪ” ಬಿಡುಗಡೆ ಕಂಡಿತು. ಜಯನಗರದ ಚಂದ್ರಗುಪ್ತ ಮೌರ್ಯ ಮೈದಾನದಲ್ಲಿ, ವೀರಲೋಕ ಪ್ರಕಾಶನದ ವೀರಕಪುತ್ರ ಶ್ರೀನಿವಾಸ್ ಅವರ ನೇತೃತ್ವದಲ್ಲಿ ಏರ್ಪಟ್ಟ ಬೃಹತ್ ಪುಸ್ತಕ ಸಂತೆಯ ಎರಡನೇ ದಿನದ ಸಮಾರಂಭದಲ್ಲಿ ಖ್ಯಾತ ಚಲನಚಿತ್ರ ನಿರ್ದೇಶಕ ಪಿ.ಶೇಷಾದ್ರಿ ಅವರು ಕೃಪಾ ದೇವರಾಜ್ ಅವರು ಬರೆದ ಕಥಾ ಸಂಕಲನ “ಮಂತ್ರ ಪುಷ್ಪ” ವನ್ನು ಲೋಕಾರ್ಪಣೆಗೊಳಿಸಿದರು. ವೀರಕಪುತ್ರ ಶ್ರೀನಿವಾಸ್ ಮತ್ತು ಹೆಸರಾಂತ ಕವಿಗಳು, ಬರಹಗಾರರು ವೇದಿಕೆಯಲ್ಲಿ ಪಾಲ್ಗೊಂಡಿದ್ದರು. ಇದೇ ಸಂದರ್ಭ ಕನ್ನಡದ ಹಿರಿಯ ಕಥೆಗಾರ ಎಸ್.ದಿವಾಕರ್ ಅವರು ಬರೆದ “ಎರಡು ರಟ್ಟುಗಳ ನಡುವೆ”, ಕಲಾವಿದ ಮತ್ತು ಲೇಖಕ ಪುಂಡಲೀಕ ಕಲ್ಲಿಗನೂರು  ಅವರ “ಶಿಲ್ಪಕಲೆಯಲ್ಲಿ ರಾಮಾಯಣ”,  ಲೇಖಕಿ ದೀಪಾ ಹಿರೇಗುತ್ತಿ ಅವರ “ಸೋಲು ಗೆಲುವಿನ ಗೆಳೆಯ” ಎಂಬ ಕೃತಿಗಳು ಬಿಡುಗಡೆಗೊಂಡವು. ಮೂರು ದಿನದ ಪುಸ್ತಕ ಸಂತೆಗೆ…

Read More

ವಿರಾಜಪೇಟೆ ಸೆ.21 NEWS DESK : ಹೆಗ್ಗಳ ಗ್ರಾಮದ ಪಾಲೆಟ್ ಮಕ್ಕಿಯಲ್ಲಿರುವ ನಾಗ ದೇವಾಲಯದಲ್ಲಿ ನ.25 ರಂದು  ಸ್ಕಂದ ಪಂಚಮಿಯ ದಿವಸ ವಾರ್ಷಿಕ ಮಹಾಪೂಜೆ ಜರುಗಲಿದೆ. ಬೆಳಿಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 12.30ರ ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿದೆ. ನಂತರ ಮಹಾ ಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ಹಾಗೂ ಅನ್ನ ಸಂತರ್ಪಣಾ ಸೇವೆ ನೆರವೇರಲಿದೆ. ಹರಕೆ ವಸ್ತುಗಳು ದೇವಸ್ಥಾನದಲ್ಲಿಯೇ ದೊರೆಯಲಿದ್ದು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ದೇವಾಲಯದ ಆಡಳಿತ ಮಂಡಳಿ ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.

Read More

ಸೋಮವಾರಪೇಟೆ ನ.21 NEWS DESK : ಸೋಮವಾರಪೇಟೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಮತ್ತು ಸಂತ ಜೋಸೆಫರ ವಿದ್ಯಾಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ನ.22 ರಿಂದ 29ರ ವರೆಗೆ ಸಾಹಿತ್ಯ ಸಂಭ್ರಮ-2025 ನಡೆಯಲಿದ್ದು, ನ.22ರಂದು ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ವಿವಿಧ ಸ್ಪರ್ಧೆಗಳು ನಡೆಯಲಿದೆ ಎಂದು ಪರಿಷತ್ ನ ಗೌರವ ಕಾರ್ಯದರ್ಶಿ ಜ್ಯೋತಿ ಅರುಣ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಂದು ಬೆಳಿಗ್ಗೆ 10ಗಂಟೆಗೆ ವಿದ್ಯಾಸಂಸ್ಥೆಯ ವ್ಯವಸ್ಥಾಪಕರಾದ ಧರ್ಮಗುರು ಅವಿನಾಶ್ ಸ್ಪರ್ಧಾ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಎಲ್ಲಾ ಸ್ಪರ್ಧೆಗಳು ಕನ್ನಡ ನಾಡು ನುಡಿಗೆ ಸಂಬಂಧ ಪಟ್ಟಿರುತ್ತವೆ. ಪ್ರಾಥಮಿಕ, ಪ್ರೌಢಶಾಲೆ, ಕಾಲೇಜು ವಿಭಾಗದಲ್ಲಿ ಸ್ಪರ್ಧೆಗಳು ನಡೆಯುತ್ತವೆ. ಚಿತ್ರಕಲಾ ಸ್ಪರ್ಧೆ, ಪ್ರಬಂಧಸ್ಪರ್ಧೆ, ಛದ್ಮವೇಷ ಸ್ಪರ್ಧೆ, ಜಾನಪದ ಗೀತೆ, ಸಮೂಹಗಾಯನ, ಜಾನಪದ ಅಥವಾ ಕನ್ನಡ ಹಾಡುಗಳಿಗೆ ನೃತ್ಯ ಸರ್ಧೆಗಳು ನಡೆಯುತ್ತವೆ. ಹೆಚ್ಚಿನ ಮಾಹಿತಿಗಾಗಿ, 8861550444, 8050252033 ಸಂಪರ್ಕಿಸಬಹುದು. :: ಸಮ್ಮೇಳನ ಪೂರ್ವಭಾವಿ ಸಭೆ :: ಕೊಡಗು ಜಿಲ್ಲೆ, ಸೋಮವಾರಪೇಟೆ ತಾಲ್ಲೂಕು, ಕ.ಸ.ಬಾ ಹೋಬಳಿ ಘಟಕದ ಆಶ್ರಯದಲ್ಲಿ ಐಗೂರಿನಲ್ಲಿ ನಡೆಯಬೇಕಾಗಿರುವ ತಾಲ್ಲೂಕು 9ನೇ…

Read More

ಸೋಮವಾರಪೇಟೆ ನ.21 NEWS DESK : ದೊಡ್ಡಮಳ್ತೆ ಗ್ರಾಮ ಪಂಚಾಯಿತಿ ವತಿಯಿಂದ ಅಂಗನವಾಡಿಗಳಿಗೆ ಕುರ್ಚಿಗಳನ್ನು ಕೊಡುಗೆಯಾಗಿ ನೀಡಲಾಯಿತು. ಪಂಚಾಯಿತಿ ವ್ಯಾಪ್ತಿಯ ದೊಡ್ಡಮಳ್ತೆ, ಕಾಗಡೀಕಟ್ಟೆ, ಗೆಜ್ಜೆಹಣಕೋಡು, ವಳಗುಂದ, ಕೂೀಗೆಕೋಡಿ ಗ್ರಾಮಗಳ ಅಂಗನವಾಡಿಗಳ ಕಾರ್ಯಕರ್ತರಿಗೆ ಪಂಚಾಯಿತಿ ಅಧ್ಯಕ್ಷ ಡಿ.ಎಂ.ಗೋಪಾಲಕೃಷ್ಣ ಕುರ್ಚಿಗಳನ್ನು ವಿತರಿಸಿದರು. ನಂತರ ಮಾತನಾಡಿದ ಅವರು, ಕಳೆದ ಸಾಲಿನಲ್ಲಿ ಸರ್ಕಾರಿ ಶಾಲೆಗಳ ಮಕ್ಕಳಿಗೆ ಸಮವಸ್ತ್ರ ವಿತರಿಸಲಾಗಿತ್ತು. ಪ್ರಸಕ್ತ ಸಾಲಿನಲ್ಲೂ ಸಮವಸ್ತ್ರ ವಿತರಿಸುವ ಬಗ್ಗೆ ಚರ್ಚೆ ಮಾಡಲಾಗಿದೆ. ಪಂಚಾಯಿತಿ ಕಟ್ಟಡದ ಮೇಲಂತಸ್ತಿನಲ್ಲಿ ಮೂರೂವರೆ ಲಕ್ಷ ರೂ, ವೆಚ್ಚದಲ್ಲಿ ಸೀಟ್‍ಗಳನ್ನು ಅಳವಡಿಸಲಾಗಿದೆ. ಸಿಕ್ಕ ಅನುದಾನದಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ ಎಂದು ಹೇಳಿದರು. ಪಂಚಾಯಿತಿ ಉಪಾಧ್ಯಕ್ಷೆ ಬಿ.ಕೆ.ರಶೀದ, ಪಂಚಾಯಿತಿ ಸದಸ್ಯರು, ಪಿಡಿಒ ಎಚ್.ಆರ್.ಮೋಹನ್, ಅಂಗನವಾಡಿ ಕಾರ್ಯಕರ್ತರಾದ ನಾಗಮಣಿ, ಸವಿತ, ಪೂರ್ಣಿಮ, ಬಿಲ್ ಕಲೆಕ್ಟರ್ ವಿಶ್ವರೂಪಚಾರ್ಯ ಇದ್ದರು.

Read More