ಲೇಖಕ: admin

ಮಡಿಕೇರಿ ಆ.2 : ಅಧಿಕ ಸದಸ್ಯರನ್ನು ಹೊಂದಿರುವ ಸಿದ್ದಾಪುರ ಗ್ರಾ.ಪಂ ಯ ಎರಡನೇ ಅವಧಿಯ ಆಡಳಿತಕ್ಕೆ ಅಧ್ಯಕ್ಷರಾಗಿ ಪ್ರೇಮ ಗೋಪಾಲ ಹಾಗೂ ಉಪಾಧ್ಯಕ್ಷರಾಗಿ ಪಳನಿಸ್ವಾಮಿ ಹೆಚ್.ಎನ್ ಆಯ್ಕೆಯಾಗಿದ್ದಾರೆ. ಒಟ್ಟು 25 ಸದಸ್ಯ ಬಲದ ಗ್ರಾ.ಪಂ ಯಲ್ಲಿ 15 ಬಿಜೆಪಿ, 9 ಕಾಂಗ್ರೆಸ್ ಬೆಂಬಲಿತರು ಹಾಗೂ ಒಬ್ಬರು ಪಕ್ಷೇತರರು ಇದ್ದಾರೆ. ಎರಡನೇ ಅವಧಿಗೆ ಅಧ್ಯಕ್ಷ ಸ್ಥಾನ ಎಸ್.ಸಿ (ಪರಿಶಿಷ್ಟ ಜಾತಿ) ಮಹಿಳೆಗೆ ಮತ್ತು ಉಪಾಧ್ಯಕ್ಷ ಸ್ಥಾನ ಸಾಮಾನ್ಯಕ್ಕೆ ಮೀಸಲಾಗಿತ್ತು. ಸಂಖ್ಯಾ ಬಲದ ಆಧಾರದಲ್ಲಿ ಎಲ್ಲವೂ ನಡೆದಿದ್ದರೆ ಬಿಜೆಪಿ ಬೆಂಬಲಿತರೇ ಮತ್ತೆ ಅಧಿಕಾರ ಹಿಡಿಯಬೇಕಾಗಿತ್ತು. ಆದರೆ ಅಚ್ಚರಿಯ ಬೆಳವಣಿಗೆಯಲ್ಲಿ ಕಾಂಗ್ರೆಸ್ ಪಕ್ಷ ರಾಜಕೀಯ ತಂತ್ರಗಾರಿಕೆ ಬಳಸಿ ಚುನಾವಣೆಯಲ್ಲಿ ಗೆಲುವು ಸಾಧಿಸುವ ಮೂಲಕ ಸಿದ್ದಾಪುರ ಗ್ರಾ.ಪಂ ಯನ್ನು ತನ್ನದಾಗಿಸಿಕೊಂಡಿದೆ. ಗುಪ್ತ ಮತದಾನದಲ್ಲಿ ಪ್ರೇಮ ಗೋಪಾಲ ಅವರಿಗೆ 14 ಮತಗಳು ಮತ್ತು ಬಿಜೆಪಿ ಬೆಂಬಲಿತ ಹೆಚ್.ಧನಲಕ್ಷ್ಮಿ ಅವರಿಗೆ 11 ಮತಗಳು ಲಭಿಸಿದವು. ಉಪಾಧ್ಯಕ್ಷ ಸ್ಥಾನಕ್ಕಾಗಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಪಳನಿಸ್ವಾಮಿ ಅವರಿಗೆ 14 ಮತಗಳು ಮತ್ತು…

Read More

ಕಡಂಗ ಆ.2 :   ಬದ್ರಿಯಾ ಮದರಸ ಮಸೀದಿಯಲ್ಲಿ ಲತೀಫ್ ಸಹಿದಿ ಅನುಸ್ಮರಣ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬದ್ರಿಯಾ ಜುಮಾ ಮಸೀದಿ ಅಧ್ಯಕ್ಷ ಅಬ್ದುಲ್ ರಹಮಾನ್ ಅರಫರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಬದರ್ ಮೌಲಿದ್ ನ್ನು ಉಸ್ತಾದ್ ಲತೀಫ್ ನೆರವೇರಿಸಿದರು. ಮುಖ್ಯ ಭಾಷಣಗಾರರಾಗಿ ಕೇರಳದ ಪ್ರಸಿದ್ಧ ಭಾಷಣಕಾರ ಶಾಪಿ ಲತಿಫಿ ಆಗಮಿಸಿದ್ದರು. ಕಾರ್ಯಕ್ರಮದಲ್ಲಿ ಊರಿನ ಹಿರಿಯರು ಕಿರಿಯರು ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಬದ್ರಿಯಾ ಜಮಾತ್ ಕಾರ್ಯದರ್ಶಿ ರಾಶಿದ್ ನಿರೂಪಿಸಿದರು. ಕೊನೆಯಲ್ಲಿ ಭಕ್ತಾದಿಗಳಿಗೆ ಅನ್ನದಾನವನ್ನು ನೀಡಲಾಯಿತು. ವರದಿ : ನೌಫಲ್ ಎಂ.ಬಿ. ಕಡಂಗ    

Read More

ಮಡಿಕೇರಿ ಆ.2 : ಕೊಡವ ಎಂ.ಎ ಸ್ನಾತಕೋತ್ತರ ವಿಭಾಗ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಮತ್ತು ಕೊಡವ ಮಕ್ಕಡ ಕೂಟದ ಸಹಯೋಗದಲ್ಲಿ ಆ.5 ರಂದು “ಕರ್ಮ-ಪ್ರಾರಬ್ಧ” ಕೊಡವ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ. ಅಂದು ಬೆಳಗ್ಗೆ 10.30 ಗಂಟೆಗೆ ಕಾರ್ಯಪ್ಪ ಕಾಲೇಜಿನ ಸಭಾಂಗಣದಲ್ಲಿ ಸಾಹಿತಿ ಕೊಟ್ಟುಕತ್ತಿರ ಜಾಲಿ ಸೋಮಣ್ಣ ಬರೆದಿರುವ, ಕೊಡವ ಮಕ್ಕಡ ಕೂಟದ 71ನೇ ಪುಸ್ತಕ “ಕರ್ಮ-ಪ್ರಾರಬ್ಧ” ಅನಾವರಣಗೊಳ್ಳಲಿದೆ. ಫೀ.ಮಾ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲ ಡಾ.ಮೇಜರ್ ರಾಘವ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಎಂ.ಎ ಕೊಡವ ವಿಭಾಗದ ಸಂಯೋಜಕ ಮೇಚಿರ ರವಿಶಂಕರ್ ನಾಣಯ್ಯ, ಸಾಹಿತಿಗಳು ಹಾಗೂ ಎಂ.ಎ ಕೊಡವ ವಿಭಾಗದ ಉಪನ್ಯಾಸಕರಾದ ಬಾಚರಣಿಯಂಡ ಅಪ್ಪಣ್ಣ, ಬಾಚರಣಿಯಂಡ ರಾಣು ಅಪ್ಪಣ್ಣ, “ಕರ್ಮ-ಪ್ರಾರಬ್ಧ” ಪುಸ್ತಕದ ಬರಹಗಾರ ಹಾಗೂ ಸಾಹಿತಿ ಕೊಟ್ಟುಕತ್ತಿರ ಜಾಲಿ ಸೋಮಣ್ಣ, ಕೊಡವ ಎಂ.ಎ ವಿದ್ಯಾರ್ಥಿ ಹಾಗೂ ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮಕ್ಕೆ ಸಾಹಿತ್ಯಾಸಕ್ತರು ಹಾಗೂ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಬೊಳ್ಳಜಿರ ಬಿ.ಅಯ್ಯಪ್ಪ…

Read More

ಮಡಿಕೇರಿ ಆ.2 :  ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸೇರಿದಂತೆ ಸಮಾಜವನ್ನು ಸರಿದಾರಿಯಲ್ಲಿ ಕರೆದೊಯ್ಯುವ ಪ್ರಮುಖ ಅಂಗವೇ ಪತ್ರಿಕಾ ರಂಗ ಎಂದು ಮಡಿಕೇರಿ ಕ್ಷೇತ್ರದ ಮಾಜಿ ಶಾಸಕ ಅಪ್ಪಚ್ಚು ರಂಜನ್ ಅಭಿಪ್ರಾಯಪಟ್ಟರು. ಕುಶಾಲನಗರದ  ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಕುಶಾಲನಗರ ಪ್ರೆಸ್ ಕ್ಲಬ್, ಸಂಗಮ ಟಿವಿ ಚಾನಲ್ ಮತ್ತು ವಂಶಿ ನ್ಯೂಸ್ ಸಹಯೋಗದೊಂದಿಗೆ  ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ, ಕಾವೇರಿ ರತ್ನ ಪ್ರಶಸ್ತಿ ಪ್ರದಾನ  ಮಾಡಿ ಮಾತನಾಡಿದ ಅವರು, ಪತ್ರಿಕೆಯ ವರದಿಗಳಿಗೆ ಇಡೀ ಸಮಾಜದ ಚಿತ್ರಣ ಬದಲಿಸುವ ಶಕ್ತಿ ಇದೆ ಎಂದರು. ಕಾರ್ಯಕ್ರಮದಲ್ಲಿ ಖಾಸಗಿ ವಾಹಿನಿ ವರದಿಗಾರ ಸುರ್ಜಿತ್ ಕುಮಾರ್, ಶಿಕ್ಷಕ ಎಚ್.ಸಿ.ರಮೇಶ್, ಶಿಕ್ಷಕರಾದ ನಗಿನ ಬಾನು, ಮಂಜೇಗೌಡ, ಉಪನ್ಯಾಸಕ ಮೋಹನ್ ಕುಮಾರ್, ಲೀಲಾಕುಮಾರಿ ತೊಡಿಕಾನ, ಸುಶೀಲಾ, ಕೆ.ಬಿ.ರಾಜು, ಮಾಲದೇವಿ ಸೇರಿದಂತೆ 16 ಸಾಧಕರಿಗೆ ಕಾವೇರಿ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರೆಸ್‌ಕ್ಲಬ್ ಅಧ್ಯಕ್ಷ ಎಚ್.ಎಂ. ರಘು ಅಧ್ಯಕ್ಷತೆ ವಹಿಸಿದ್ದರು. ಜಿಪಂ ಮಾಜಿ ಅಧ್ಯಕ್ಷೆ ಕೆ.ಪಿ. ಚಂದ್ರಕಲಾ, ಪುರಸಭಾ…

Read More

ಮಡಿಕೇರಿ ಆ.2 :  ಸೋಮವಾರಪೇಟೆಯ ರಾಜ್ಯ ಹೆದ್ದಾರಿಯಲ್ಲಿರುವ ಕಕ್ಕೆಹೊಳೆ ಸೇತುವೆ ಶಿಥಿಲಗೊಂಡು ಅಪಾಯಕಾರಿ ಸ್ಥಿತಿಯಲ್ಲಿರುವ ಹಿನ್ನೆಲೆ  ಶಾಸಕ ಡಾ.ಮಂತರ್ ಗೌಡ  ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ  ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

Read More

ಮಡಿಕೇರಿ ಆ.2 : ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಒಂದೂವರೆ ವರ್ಷದ ಮಗುವಿನ ಚಿಕಿತ್ಸೆಗೆ ಮಗುವಿನ ಪೋಷಕರು ಆರ್ಥಿಕ ನೆರವಿಗಾಗಿ ಮನವಿ ಮಾಡಿದ್ದಾರೆ. ಚೆಟ್ಟಳ್ಳಿಯ ಪ್ರಕಾಶ್ ಹಾಗೂ ಸುಮಿತ್ರಾ ದಂಪತಿಯ ಒಂದೂವರೆ ವರ್ಷದ ಮಗು ತನುಷ ಹೃದಯ ಸಂಬಂಧಿತ ಖಾಯಿಲೆಯಿಂದ ಬಳಲುತ್ತಿದ್ದು,  ಬೆಂಗಳೂರು ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ನಂತರ ಇಂದಿರಾ ಆಸ್ಪತ್ರೆ ಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.  ಮಗುವಿನ ಚಿಕಿತ್ಸೆಗೆ  ಒಂದೂವರೆ ಲಕ್ಷಕ್ಕೂ ಹೆಚ್ಚು ಹಣ ವೆಚ್ಚವಾಗಲಿದ್ದು,  ದಾನಿಗಳು ಆರ್ಥಿಕ ನೆರವು ನೀಡುವಂತೆ ಮನವಿ ಮಾಡಿದ್ದಾರೆ. ದಾನಿಗಳು  Name : K. R. REENA Bank : Canara Bank, Chettalli A/c No. 11012200041091 IFSC : CNRB 0011101 phonepay or google pay 9141047515 Reena  ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ.

Read More

ಮಡಿಕೇರಿ ಆ.2 :  ಸೋಮವಾರಪೇಟೆ  ಜ್ಞಾನವಿಕಾಸ ಅಂಗ್ಲ ಮಾಧ್ಯಮ ಶಾಲೆಯಲ್ಲಿ  ಲಯನ್ಸ್ ಸಂಸ್ಥೆ ವತಿಯಿಂದ  ಕಾರ್ಗಿಲ್ ವಿಜಯ್ ದಿವಸ್  ಕಾರ್ಯಕ್ರಮದ ಅಂಗವಾಗಿ ಮಾಜಿ ಸೈನಿಕರನ್ನು ಸನ್ಮಾನಿಸಲಾಯಿತು. ಜೈ ಜವಾನ್ ಮಾಜಿ ಸೈನಿಕರ ಸಂಘದ ಅಧ್ಯಕ್ಷ ಈರಪ್ಪ ಮಾತನಾಡಿ, ಕಾರ್ಗಿಲ್ ಗೆಲುವು ದೇಶಪ್ರೇಮಿಗಳಿಗೆ ಮರೆಯದ ಅವಿಸ್ಮರಣೀಯ ದಿನವಾಗಿದೆ. 1999ರ ಮೇ ನಲ್ಲಿ ತಿಂಗಳಲ್ಲಿ ಆರಂಭವಾದ ಕಾರ್ಗಿಲ್ ಯುದ್ಧ ಜುಲೈ ಅಂತ್ಯದ ತನಕ ನಡೆಯಿತು. ಪಾಕಿಸ್ತಾನವನ್ನು ನಮ್ಮ ಭಾರತೀಯ ವೀರ ಯೋಧರು ಸದೆ ಬಡಿದು ಅವರು ಅಕ್ರಮಿಸಿಕೊಂಡಿದ್ದ ಜಾಗವನ್ನು ವಶಕ್ಕೆ ಪಡೆದುಕೊಂಡರು ಎಂದು ಸ್ಮರಿಸಿದರು. ಯುದ್ಧದಲ್ಲಿ ನಮ್ಮ ದೇಶದ 527 ಯೋಧರು ವೀರಮರಣ ಹೊಂದಿದರು. ‘ಅಪರೇಷನ್ ವಿಜಯ್’ ಮೂಲಕ ಕಾರ್ಗಿಲ್-ಡ್ರಾಸ್ ವಲಯದಲ್ಲಿ ಪ್ರದರ್ಶಿಸಿದ ಯೋಧರ ಶೌರ್ಯ ಹಾಗೂ ಗೆಲುವಿನ ನೆನಪಿಗಾಗಿ ಜುಲೈ 26 ಅನ್ನು ಕಾರ್ಗಿಲ್ ವಿಜಯ್ ದಿವಸ್ ಆಗಿ ಆಚರಿಸಲಾಗುತ್ತಿದೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ತನ್ನ ದೇಶವನ್ನು ಪ್ರೀತಿಸಬೇಕು. ದೇಶ ರಕ್ಷಣೆಯಲ್ಲಿ ಸೈನಿಕರ ತ್ಯಾಗ ದೊಡ್ಡದು ಎಂದು ಹೇಳಿದರು. ಸಮಾರಂಭದಲ್ಲಿ ನಿವೃತ್ತ ಸೈನಿಕರಾದ ರಾಜರಾಮ್,…

Read More

ಮಡಿಕೇರಿ ಆ.2 : ಕುಶಾಲನಗರ “ವೀರಶೈವ ಲಿಂಗಾಯತ ಸಮಾಜದ ”  ವತಿಯಿಂದ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭ ಸಮಾಜದ ಜಿಲ್ಲಾಧ್ಯಕ್ಷ  ಶಿವಪ್ಪ, ಜಿಲ್ಲಾ ನಿರ್ದೇಶಕ ಅಮೃತ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Read More

ಮಡಿಕೇರಿ ಆ.1 : ನಗರದ ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜು ಬಳಿಯ ಅಂಗನವಾಡಿಗೆ ಅಪಾಯವನ್ನು ಆಹ್ವಾನಿಸುತ್ತಿದ್ದ ಮೂರು ಮರಗಳನ್ನು ಕೊನೆಗೂ ಅರಣ್ಯ ಇಲಾಖೆ ತೆರವುಗೊಳಿಸಿದೆ. ಮರಗಳಿಂದ ಅಂಗನವಾಡಿಗೆ ಅಪಾಯವಿರುವ ಬಗ್ಗೆ NEWS DESK ವರದಿ ಮಾಡಿ ಅಧಿಕಾರಿಗಳ ಗಮನ ಸೆಳೆದಿತ್ತು. ಕಳೆದ ಅನೇಕ ದಿನಗಳಿಂದ ದೂರು ನೀಡಿದರೂ ಸ್ಪಂದನೆ ದೊರೆಯದೆ ಇರುವ ಬಗ್ಗೆ ಅಂಗನವಾಡಿ ಕೇಂದ್ರದ ಮಕ್ಕಳ ಪೋಷಕರು ಆತಂಕ ವ್ಯಕ್ತಪಡಿಸಿದ್ದರು. NEWS DESK ವರದಿಯಿಂದ ಎಚ್ಚೆತ್ತುಕೊಂಡ ಅರಣ್ಯ ಇಲಾಖೆ ಇಂದು ಮೂರು ಮರಗಳನ್ನು ತೆರವುಗೊಳಿಸಿತು. ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಸಹಕಾರ ನೀಡಿದರು.

Read More

ಮಡಿಕೇರಿ ಆ.1 : ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ 2023 ರ ಆಗಸ್ಟ್ ತಿಂಗಳಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇ.50 ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು. ಪುಸ್ತಕ ಪ್ರಿಯರು ಈ ಅವಕಾಶ ಬಳಸಿಕೊಳ್ಳಲು ಕೋರಿದೆ. ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಈ ರಿಯಾಯಿತಿ ಸೌಲಭ್ಯ ದೊರೆಯಲಿದೆ. ಅಲ್ಲದೆ ಕನ್ನಡ ಪುಸ್ತಕ ಪ್ರಾಧಿಕಾರದ ಆನ್‍ಲೈನ್ www.kannadapustakapradhikara.com  (ನಮ್ಮ ಪುಸ್ತಕಗಳ ವಿಭಾಗ) ನಲ್ಲಿ ಕೂಡ ಈ ಶೇ.50 ರಿಯಾಯಿತಿ ಲಭ್ಯವಿದೆ. ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ, ಎಲ್ಲಾ ಪ್ರಕಾರದ ಸಾಹಿತ್ಯ ಕೃತಿಗಳನ್ನು ಈವರೆಗೆ ಪ್ರಕಟಿಸುತ್ತಾ ಬಂದಿದೆ. ಇವುಗಳಲ್ಲಿ ವ್ಯಕ್ತಿ ಚಿತ್ರಗಳು, ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ, ಪ್ರಾಚೀನ ಕನ್ನಡ ಸಾಹಿತ್ಯ, ಜಾನಪದ, ಪರಿಸರ, ಕೃಷಿ ಹೀಗೆ…

Read More