ಮಡಿಕೇರಿ ಆ.1 : ಮನೆಯ ಹಿಂಭಾಗದ ಬರೆ ಕುಸಿಯದಂತೆ ರಕ್ಷಣೆಗಾಗಿ ಪಂಚಾಯ್ತಿಯಿಂದ ನಿರ್ಮಿಸಿದ್ದ ತಡೆಗೋಡೆಯ ಮೇಲೆ ಜನ ಪ್ರತಿನಿಧಿಯೊಬ್ಬರು ಕಾಂಪೌಂಡ್ ವಾಲ್ ನಿರ್ಮಿಸುವ ಮೂಲಕ ಆತಂಕ ಸೃಷ್ಟಿಸಿದ್ದಾರೆಂದು ಸುಂಟಿಕೊಪ್ಪದ ಪಂಪ್ ಹೌಸ್ ಬಡಾವಣೆಯ ನಿವಾಸಿ ಜಿ.ಎನ್.ದಿನೇಶ್ ಕುಮಾರ್ ಆತಂಕ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಂಪ್ ಹೌಸ್ ಬಡಾವಣೆಯಲ್ಲಿನ ತಮ್ಮ ಮನೆಯ ಹಿಂಭಾಗದ ಬರೆ ಕುಸಿಯದಂತೆ 2009 ರಲ್ಲಿ ಗ್ರಾಮ ಪಂಚಾಯ್ತಿಯಿಂದ ಸುಮಾರು 30 ಅಡಿ ಉದ್ದದ, 8 ಅಡಿ ಎತ್ತರದ ತಡೆಗೋಡೆಯನ್ನು ನಿರ್ಮಿಸಲಾಗಿತ್ತು. ಈ ತಡೆಗೋಡೆಯ ಮೇಲ್ಭಾಗದಲ್ಲಿ ಸುಮಾರು ಮೂವತ್ತು ಅಡಿ ದೂರದಲ್ಲಿ ಪಂಚಾಯ್ತಿ ಜನಪ್ರತಿನಿಧಿಯೊಬ್ಬರ ಮನೆ ಇದೆ. ಈ ತಡೆಗೋಡೆಯ ಮೇಲೆ ಅನಧಿಕೃತವಾಗಿ ಕಾಂಪೌಂಡ್ ವಾಲ್ ನಿರ್ಮಿಸಿ ಮಣ್ಣು ತುಂಬಲಾಗಿದೆ ಎಂದು ಆರೋಪಿಸಿದರು. ಮಣ್ಣಿನ ಹೆಚ್ಚಿನ ಒತ್ತಡದಿಂದಾಗಿ ಹಳೆಯ ತಡೆಗೋಡೆಯ ಅಲ್ಲಲ್ಲಿ ಬಿರುಕುಗಳು ಮೂಡಿದ್ದು, ಅಪಾಯಕಾರಿ ಸ್ಥಿತಿಯಲ್ಲಿದೆ. ತಡೆಗೋಡೆ ಕುಸಿದಲ್ಲಿ ನಮ್ಮ ಮನೆಗೆ ತೀವ್ರ ಹಾನಿ ಸಂಭವಿಸಲಿದೆ ಎಂದು ಬೇಸರ ವ್ಯಕ್ತಪಡಿಸಿದರು. 2022 ರ ಜ.24 ರಂದು…
ಲೇಖಕ: admin
ಮಡಿಕೇರಿ ಆ.1 : ನಗರದ ಸರಕಾರಿ ಜೂನಿಯರ್ ಕಾಲೇಜಿನ ಪ್ರೌಢಶಾಲಾ ವಿಭಾಗದ ನಿವೃತ್ತ ಉಪ ಪ್ರಾಂಶುಪಾಲರಾದ ನಳಿನಿ ಪೂವಯ್ಯ ಅವರಿಗೆ ಶಾಲಾ ಅಭಿವೃದ್ಧಿ ಸಮಿತಿ ವತಿಯಿಂದ ಆತ್ಮೀಯವಾಗಿ ಬೀಳ್ಕೊಡಲಾಯಿತು. ಶಾಲೆಯ ಸಭಾಂಗಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಸಮಿತಿಯ ಪ್ರಮುಖರು ಹಾಗೂ ಶಿಕ್ಷಕರು ನಳಿನಿ ಪೂವಯ್ಯ ಅವರನ್ನು ಸನ್ಮಾನಿಸಿ ಗೌರವಿಸಿದರು. ನಿವೃತ್ತ ಜೀವನ ಸುಖಕರವಾಗಿರಲೆಂದು ಶುಭ ಹಾರೈಸಿದರು. ಈ ಸಂದರ್ಭ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಆರ್.ಪಿ.ಚಂದ್ರಶೇಖರ್, ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸೋಮವಾರಪೇಟೆ ಆ.1 : ನಿಡ್ತ ಮೀಸಲು ಅರಣ್ಯದಲ್ಲಿ ಶ್ರೀಗಂಧ ಮರವನ್ನು ಕಡಿದು, ಸಾಗಿಸಲು ಕೆತ್ತನೆ ಮಾಡುತ್ತಿದ್ದ ಸಂದರ್ಭ ದಾಳಿ ಮಾಡಿದ ಅರಣ್ಯ ಇಲಾಖೆಯ ಸಿಬ್ಬಂದಿಗಳು ಆರೋಪಿಯನ್ನು ಬಂಧಿಸಿದ್ದಾರೆ. ಬಸುರುಗುಪ್ಪೆ ಗ್ರಾಮದ ಎ.ಸಿ.ಯೋಗೇಶ್ ಬಂಧಿತ ಆರೋಪಿ. ಅರಣ್ಯದಲ್ಲಿ ಶ್ರೀಗಂಧ ಮರವನ್ನು ಬುಡ ಸಮೇತ ಕಡಿದು, 12 ತುಂಡುಗಳನ್ನಾಗಿ ಪರಿವರ್ತಿಸಿ ಸಾಗಿಸುವ ಪ್ರಯತ್ನದಲ್ಲಿದ್ದಾಗ ಬಂಧಿಸಲಾಗಿದೆ. ಎಸಿಎಫ್ ಎ.ಎ.ಗೋಪಾಲ್ ಮಾರ್ಗದರ್ಶನದಲ್ಲಿ ಸೋಮವಾರಪೇಟೆ ವಲಯ ಆರ್ಎಫ್ಒ ಎಚ್.ಪಿ.ಚೇತನ್, ಡಿಆರ್ಎಫ್ಒ ಎಚ್.ಎಂ.ರಾಕೇಶ್, ಗಸ್ತುಪಾಲಕರಾದ ಪ್ರಸಾದ ಕುಮಾರ್, ಎ.ಎಸ್. ಸದಾನಂದ ಹಿಪ್ಪರಗಿ, ಅರಣ್ಯ ವೀಕ್ಷಕರಾದ ಪ್ರವೀಣ್, ಚೆಟ್ಟಿಯಪ್ಪ, ವಿಕಾಸ್, ಧರ್ಮ, ಉದಯ್ ಕುಮಾರ್, ವಾಹನ ಚಾಲಕ ಸಂತೋಷ್ ಕುಮಾರ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಸೋಮವಾರಪೇಟೆ ಆ.1 : ಬೆಜೆಪಿ ರಾಜ್ಯದಲ್ಲಿ ಹೆಮ್ಮರವಾಗಿ ಬೆಳೆಯಲು ಹಿರಿಯ ಮುತ್ಸದಿ ರಾಜಕಾರಣಿ ಬಿ.ಬಿ.ಶಿವಪ್ಪ ಕಾರಣ ಎಂದು ಸಕಲೇಶಪುರ ವಿಧಾನಸಭಾ ಕ್ಷೇತ್ರದ ಶಾಸಕ ಮಂಜು ಬಣ್ಣಿಸಿದರು. ಮಹಿಳಾ ಸಮಾಜದಲ್ಲಿ ಬಿ.ಬಿ.ಶಿವಪ್ಪ ಅಭಿಮಾನಿ ಬಳಗದ ವತಿಯಿಂದ ಆಯೋಜಿಸಿದ್ದ 6ನೇ ವರ್ಷದ ಪುಣ್ಯಸ್ಮರಣಾ ಕಾಯಕ್ರವiದಲ್ಲಿ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದರು. ಶಿವಪ್ಪನವರು ತಮ್ಮ ಆಸ್ತಿ ಮಾರಾಟವಾದರೂ ಪರ್ವಾಗಿಲ್ಲ ಬಿಜೆಪಿಯನ್ನು ರಾಜ್ಯದಲ್ಲಿ ಕಟ್ಟಿ ಬೆಳೆಸುತ್ತೇನೆ ಎಂದು ಪಣ ತೊಟ್ಟು ಪಕ್ಷ ಸಂಘಟನೆಗೆ ಶ್ರಮಿಸಿದವರು. ಈಗ ರಾಜ್ಯದಲ್ಲಿ ಬಿಜೆಪಿ ಹೆಮ್ಮರವಾಗಿ ಬೆಳೆದಿದೆ. ಅವರು ಸಕಲೇಶಪುರದಲ್ಲಿಯೂ ಪಕ್ಷವನ್ನು ಸಂಘಟಿಸಿದರ ಫಲವಾಗಿ ನಾನು ಈ ದಿನ ಶಾಸಕನಾಗಲು ಸಾಧ್ಯವಾಗಿದೆ. ಇಂತಹ ಧೀಮಂತ ವ್ಯಕ್ತಿಯ ಪುಣ್ಯ ಸ್ಮರಣಾ ಕಾರ್ಯಕ್ರಮವನ್ನು ಬಿಜೆಪಿ ರಾಜ್ಯಮಟ್ಟದಲ್ಲಿ ಆಚರಿಸುವಂತಾಗಬೇಕೆಂದರು. ಮಾಜಿ ಸಚಿವ ಅಪ್ಪಚು ರಂಜನ್ ಮಾತನಾಡಿ, ಕರ್ನಾಟಕದ ಬಿಜೆಪಿಗೆ ಶಿವಪ್ಪ ಹಾಗೂ ಸುಶೀಲಮ್ಮ ಮಾತಾ-ಪಿತೃಗಳಿದ್ದಂತೆ. ಶಿವಪ್ಪನವರು ಯಾವತ್ತೂ ಅಧಿಕಾರಕ್ಕಾಗಿ ಪಕ್ಷ ಸಂಘದಸಿದವರಲ್ಲ. ಹಿಂದೆ 44 ಮಂದಿ ಬಿಜೆಪಿ ಶಾಸಕರಿದ್ದ ಸಂದರ್ಭ ಬಿ.ಬಿ.ಶಿವಪ್ಪರವರನ್ನು ವಿರೋಧ ಪಕ್ಷದ ನಾಯಕರಾಗಿ ಆಯ್ಕೆ ಮಾಡುವಾಗ…
ಮಡಿಕೇರಿ ಆ.1 : ಉಡುಪಿಯ ಬನ್ನಂಜೆಯಲ್ಲಿರುವ ದೇವರಾಜ ಅರಸು ಹಿಂದುಳಿದ ವರ್ಗಗಳ ಬಾಲಕಿಯರ ಹಾಸ್ಟೆಲ್ ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿದರು. ಈ ಸಂದರ್ಭ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳ ಜೊತೆ ಮಾತುಕತೆ ನಡೆಸಿ, ಊಟ, ವಸತಿ ಸೇರಿದಂತೆ ಇನ್ನಿತರೆ ಮೂಲಭೂತ ಸೌಕರ್ಯಗಳನ್ನು ಪರಿಶೀಲಿಸಿದರು.
ಮಡಿಕೇರಿ ಆ.1 : ಅಖಿಲ ಕೊಡವ ಸಮಾಜ ಪೊಮ್ಮಕ್ಕಡ ಕೂಟದ ವತಿಯಿಂದ ಕಕ್ಕಡ ಪದ್ನೆಟ್ಟ್ ಆಚರಣೆ ಆ.3 ರಂದು ಅಖಿಲ ಕೊಡವ ಸಮಾಜದ ಕಟ್ಟಡದಲ್ಲಿ ನಡೆಯಲಿದೆ. ಈ ಕುರಿತು ಮಾಹಿತಿ ನೀಡಿರುವ ಅಖಿಲ ಕೊಡವ ಸಮಾಜ ಪೊಮ್ಮಕ್ಕಡ ಕೂಟದ ಅಧ್ಯಕ್ಷೆ ಬಾಚರಣಿಯಂಡ ರಾಣು ಅಪ್ಪಣ್ಣ, ಅಂದು ಬೆಳಗ್ಗೆ 10.30 ಗಂಟೆಗೆ ಕೂಟದ ಅಧ್ಯಕ್ಷೆ ಬಾಚರಣಿಯಂಡ ರಾಣು ಅಪ್ಪಣ್ಣ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದ್ದು, ಮಾಜಿ ವಿಧಾನ ಪರಿಷತ್ ಸದಸ್ಯೆ ಶಾಂತೆಯಂಡ ವೀಣಾ ಅಚ್ಚಯ್ಯ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದಲ್ಲಿ ಮಡಿಕೇರಿ ಅಕಾಶವಾಣಿ ಕೇಂದ್ರದಲ್ಲಿ 30 ವರ್ಷಗಳ ಕಾಲ ಉದ್ಘೋಷಕಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಕೂಪದಿರ ಶಾರದಾ ನಂಜಪ್ಪ ಅವರನ್ನು ಸನ್ಮಾನಿಸಲಾಗುವುದು ಎಂದು ತಿಳಿಸಿದ್ದಾರೆ. ಕಾರ್ಯಕ್ರಮದಲ್ಲಿ ಅಖಿಲ ಕೊಡವ ಸಮಾಜದ ಅಧ್ಯಕ್ಷ ಪರದಂಡ ಸುಬ್ರಹ್ಮಣಿ, ಉಪಾಧ್ಯಕ್ಷ ಅಜ್ಜಿಕುಟ್ಟೀರ ಸುಬ್ರಹ್ಮಣಿ, ಕಾರ್ಯದರ್ಶಿ ಅಮ್ಮಣಿಚಂಡ ರಾಜ ನಂಜಪ್ಪ, ಖಜಾಂಚಿ ಮಂಡೆಪಂಡ ಸುಗುಣ ಮುತ್ತಣ್ಣ ಹಾಗೂ ಪೊಮ್ಮಕ್ಕಡ ಕೂಟದ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ರಾಣು ಅಪ್ಪಣ್ಣ ತಿಳಿಸಿದ್ದಾರೆ. ಕಾರ್ಯಕ್ರಮದಲ್ಲಿ…
ಮಡಿಕೇರಿ ಆ.1 : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಮಡಿಕೇರಿ ಕೊಡಗು ಗೌಡ ಯುವ ವೇದಿಕೆ ಹಾಗೂ ನರಿಯಂದಡ ಅಯ್ಯಪ್ಪ ಯುವಕ ಸಂಘದ ಸಂಯುಕ್ತಾಶ್ರಯದಲ್ಲಿ ಆ.13 ರಂದು ಪಾರಾಣೆಯಲ್ಲಿ ‘ಆಟಿ ಜಂಬರ-2023’ ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅಯ್ಯಪ್ಪ, ಯುವಕ ಸಂಘದ ಗೌರವ ಅಧ್ಯಕ್ಷ ತೋಟಂಬೈಲು ಅನಂತ ಕುಮಾರ್, ಅಂದು ಬೆಳಿಗ್ಗೆ 9 ಗಂಟೆಗೆ ಪಾರಾಣೆ ಗೌಡ ಸಮಾಜದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಪಾರಾಣೆ ಗೌಡ ಸಮಾಜದ ಅಧ್ಯಕ್ಷ ಮುಕ್ಕಾಟಿ ಕುಶಾಲಪ್ಪ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ನರಿಯಂದಡ ಅಯ್ಯಪ್ಪ ಯುವಕ ಸಂಘದ ಅಧ್ಯಕ್ಷ ಬೆಳಿಯಂಡ್ರ ಹರಿಪ್ರಸಾದ್ ವಹಿಸಲಿದ್ದಾರೆ ಎಂದರು. ಮುಖ್ಯ ಅತಿಥಿಗಳಾಗಿ ನರಿಯಂದಡ ಅಯ್ಯಪ್ಪ ಯುವಕ ಸಂಘದ ಸ್ಥಾಪಕ ಅಧ್ಯಕ್ಷ ಹಾಗೂ ಮಾಜಿ ಸೈನಿಕ ಬೆಳಿಯಂಡ್ರ ಲಕ್ಷ್ಮಣ್ ಪಾಲ್ಗೊಳ್ಳಲಿದ್ದು, ಕೊಡಗು ಗೌಡ ಯುವ ವೇದಿಕೆ ಅಧ್ಯಕ್ಷ ಪಾಣತ್ತಲೆ ಜಗದೀಶ್ ಮಂದಪ್ಪ ಗೌರವ ಪಾಲ್ಗೊಳ್ಳಲಿದ್ದಾರೆಂದು ತಿಳಿಸಿದರು. ತೋಟಂಬೈಲ್ ಅನಂತ್ಕುಮಾರ್ ಅವರ ಒಕ್ಕಣೆ ನಂತರ ನಾಟಿ ನೆಡಲಾಗುವುದು. ನಂತರ ಬೆಳಿಗ್ಗೆ…
ಮಡಿಕೇರಿ ಆ.1 : ಪರಿಶುದ್ಧ ಉಮ್ರಾ ನಿರ್ವಹಿಸಲು ಕೊಡಗು ಜಿಲ್ಲೆಯಿಂದ ತೆರಳುತ್ತಿರುವ ಸುಮಾರು 50 ಕ್ಕೂ ಅಧಿಕ ಉಮ್ರ ಯಾತ್ರಾರ್ಥಿಗಳಿಗೆ ಸುಂಟಿಕೊಪ್ಪ ಎಸ್ಎಂಎಸ್ ಅರಬಿಕ್ ಕಾಲೇಜಿನ ವತಿಯಿಂದ ಉಮ್ರಾ ತರಬೇತಿ ಶಿಬಿರ ಮತ್ತು ಬೀಳ್ಕೊಡುಗೆ ಸಮಾರಂಭ ನಡೆಯಿತು. ಎಸ್ಎಂಎಸ್ ಸಂಸ್ಥೆಯ ಕಾರ್ಯದರ್ಶಿ ಸಿ.ಎಂ.ಹಮೀದ್ ಮುಸ್ಲಿಯಾರ್ ಮಾತನಾಡಿ ಎಸ್ಎಂಎಸ್ ಅರಬಿಕ್ ಕಾಲೇಜಿನ ಅಧ್ಯಕ್ಷರಾದ ಉಮ್ಮರ್ ಫೈಝಿ ಅವರ ನೇತೃತ್ವದಲ್ಲಿ ಸುಮಾರು 7 ವರ್ಷಗಳಿಂದ ನೂರಾರು ಮಂದಿಯನ್ನು ಪರಿಶುದ್ಧ ಮಕ್ಕಾಗೆ ಉಮ್ರ ನಿರ್ವಹಿಸಲು ಮತ್ತು ಪ್ರವಾದಿ ಮುಹಮ್ಮದ್ ಪೈಗಂಬರ ಅವರು ಅಂತಿಮ ವಿಶ್ರಾಂತಿ ಪಡೆಯುತ್ತಿರುವ ಮದೀನಾ ಶರೀಫನ್ನು ಸಂದರ್ಶಿಸಲು ಅವಕಾಶವನ್ನು ಕಲ್ಪಿಸಲಾಗುತ್ತಿದೆ. ಕೊಡಗು ಜಿಲ್ಲೆಯಿಂದ ಯಾತ್ರಾರ್ಥಿಗಳನ್ನು ಕರೆದುಕೊಂಡು ಹೋಗಿ ಕರೆ ತರುವ ಕಾರ್ಯವನ್ನು ಉತ್ತಮ ರೀತಿಯಲ್ಲಿ ನಡೆಸುತ್ತಿದೆ ಎಂದರು. ಸಂಸ್ಥೆಯ ಮೂಲಕ ನಡೆಯುತ್ತಿರುವ ಈ ಯಾತ್ರೆ ಪಾರದರ್ಶಕ ಮತ್ತು ಅತ್ಯುತ್ತಮ ಸೇವೆಯಾಗಿ ಯಾತ್ರೆ ಕೈಗೊಂಡವರ ಪ್ರಶಂಸೆಗೆ ಪಾತ್ರವಾಗಿದೆ. ಮಕ್ಕ ಮದೀನದ ಎರಡು ಹರಮ್ ಶರೀಫುಗಳ ಅತಿ ಹತ್ತಿರವೇ ಯಾತ್ರಾರ್ಥಿಗಳಿಗೆ ವಸತಿಗಳನ್ನು ಒದಗಿಸಿಕೊಡಲಾಗುತ್ತಿದೆ. ಉಮ್ರ ತವಾಫ್…
ಸೋಮವಾರಪೇಟೆ ಆ.1 : ಕಾವ್ಯ ಲಲಿತ ಕಲೆ ಗಳಲ್ಲೊಂದು, ಇತರ ಕಲೆಗಳಿಗಿಂತ ಭಿನ್ನವಾಗಿ ಒಂದು ವೈಶಿಷ್ಟ ವನ್ನು ಪಡೆದುಕೊಂಡಿದೆ ಎಂದು ಪ್ರಾದ್ಯಪಕ, ಸಾಹಿತಿ, ಜಾನಪದ ವಿದ್ವಾಂಸ ಡಾ. ಮೋಹನ್ ಪಾಳೇಗಾರ್ ಅಭಿಪ್ರಾಯಪಟ್ಟರು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಸಂಯುಕ್ತ ಆಶ್ರಯದಲ್ಲಿ ಮಹಿಳಾ ಸಮಾಜದಲ್ಲಿ ನಡೆದ “ನೆಲ ಮುಗಿಲು” ಕವನ ಸಂಕಲನ ಬಿಡುಗಡೆಗೊಳಿಸಿ ಮಾತನಾಡಿದರು. ಅನ್ಯ ಕಲೆಗಳಲ್ಲಿ ಒಂದಕ್ಕೊಂದು ಅದರದೆಯಾದ ಮಾದ್ಯಮವುಂಟು, ಕಾವ್ಯಕ್ಕೆ ಹಾಗೆ ಪ್ರತ್ಯೇಕವಾದ ಮಾಧ್ಯಮವಿಲ್ಲ ಕಾವ್ಯ ಸಾರ್ಥಕವಾಗಬೇಕಾದರೆ ಅದು ಓದುಗರ ಹೃದಯಕ್ಕೆ ಮುಖ ಮಾಡಿರಬೇಕು. ಅವರ ಹೃದಯವನ್ನು ಮುಟ್ಟಬೇಕು ತಟ್ಟಬೇಕು ಇಲ್ಲವಾದರೆ ಅಂತಹ ಕಾವ್ಯ ನಿರರ್ಥಕವಾಗುತ್ತದೆ. ಬಾಹ್ಯ ವಸ್ತುಗಳು ಕವಿಗೆ ಮುಖ್ಯವಲ್ಲ ಅವುಗಳು ನಿಮಿತ್ತ ಮಾತ್ರ, ಅವನು ತಾನು ಅನುಭವಿಸಿದಂತೆ ಚಿತ್ರಿಸಬೇಕು ಎಂದರು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಟಿ.ಪಿ. ರಮೇಶ್ ಮಾತನಾಡಿ, ಜಲಜಾ ಶೇಖರ್ ವಿರಚಿತ “ನೆಲಮುಗಿಲು ಕವನ ಸಂಕಲನ ಮೊದಲ ಪ್ರಯತ್ನದಲ್ಲೇ ಸದನ ಕದನ…
ನಾಪೋಕ್ಲು ಆ.1 : ನಾಪೋಕ್ಲು ಕೊಡವ ಸಮಾಜದ ಮೊಮ್ಮಕ್ಕಡ ಪರಿಷತ್ ವತಿಯಿಂದ ಆ.3ರಂದು ಮೂರನೇ ವರ್ಷದ ಕಕ್ಕಡ 18ರ ತೀನಿ ನಮ್ಮೆಯನ್ನು ಹಮ್ಮಿಕೊಳ್ಳಲಾಗಿದ್ದು, ಕೊಡವ ಸಮಾಜದ ಹರದಾಸ ಅಪ್ಪನೆರವಂಡ ಅಪ್ಪಚ್ಚಕವಿ ಸಭಾಂಗಣದಲ್ಲಿ ವಿವಿಧ ತಿನಿಸುಗಳ ಪ್ರದರ್ಶನ ಮತ್ತು ಪೈಪೋಟಿಯನ್ನು ಏರ್ಪಡಿಸಲಾಗಿದೆ ಎಂದು ಪೊಮ್ಮಕ್ಕಡ ಪರಿಷತ್ ಅಧ್ಯಕ್ಷೆ ಮೂವೇರ ರೇಖಾ ಪ್ರಕಾಶ್ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಮಕ್ಕಳು ಹಳೆ ಕಾಲದ ತಿಂಡಿತಿನಿಸುಗಳನ್ನು ಮರೆಯುತ್ತಿದ್ದಾರೆ. ಅಂತಹ ತಿಂಡಿತಿನಿಸುಗಳು ಚರಿತ್ರೆಯಲ್ಲಿ ಮರೆತು ಹೋಗುವ ಸಾಧ್ಯತೆಇದೆ. ಅದನ್ನು ದಾಖಲಿಸುವ ಹಿನ್ನೆಲೆಯಲ್ಲಿ ಕಕ್ಕಡ 18ರ ತೀನಿ ನಮ್ಮೆಯನ್ನು ಹಮ್ಮಿಕೊಳ್ಳಲಾಗಿದೆ ಎಂದರು. ತೀನಿ ನಮ್ಮೆಯ ಪೈಪೋಟಿಯಲ್ಲಿ ಪ್ರದರ್ಶನಕ್ಕಿರಿಸುವ ತಿನಿಸುಗಳನ್ನು ತೀರ್ಪುಗಾರರು ಪರೀಕ್ಷಿಸಲಿದ್ದು, ವಿಜೇತರಿಗೆ ಬಹುಮಾನ ವಿತರಿಸಲಾಗುವುದು. ಈ ಸಂದರ್ಭ ಸಾಧಕ ಮಹಿಳೆಯರನ್ನು ಗೌರವಿಸಲಾಗುವುದು ಎಂದರು. ಅಂದಿನ ಕಾರ್ಯಕ್ರಮವನ್ನು ಪರಿಷತ್ ಖಜಾಂಚಿ ಮೂವೇರ ಧರಣಿ ಗಣಪತಿ ಉದ್ಘಾಟಿಸಲಿದ್ದಾರೆ. ತಿನಿಸುಗಳ ಪ್ರದರ್ಶನವನ್ನು ನಿವೃತ್ತ ಪೋಸ್ಟ್ ಮಾಸ್ಟರ್ ಪೆಬ್ಬಾಟಂಡ ಪುಷ್ಪ ತಮ್ಮಯ್ಯ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೊಡವ ಸಮಾಜದ ಅಧ್ಯಕ್ಷ ಅಪ್ಪಚೆಟ್ಟೋಳಂಡ…






