ಲೇಖಕ: admin

ಮಡಿಕೇರಿ ಜು.30 : ನಗರದ ಶ್ರೀಕೋಟೆ ಮಾರಿಯಮ್ಮ ಯುವಕ ಮಿತ್ರ ಮಂಡಳಿಯ 48 ನೇ ವರ್ಷದ ದಸರಾ ಉತ್ಸವದ ದಸರಾ ಸಮಿತಿಯ ಅಧ್ಯಕ್ಷರಾಗಿ ಪ್ರಭು ರೈ ಹಾಗೂ ರಾಜಾ ಸುಬ್ಬಯ್ಯ ಆಯ್ಕೆಯಾಗಿದ್ದಾರೆ.

Read More

ಮಡಿಕೇರಿ ಜು.30 : ನಗರದ ಶ್ರೀ ಚೌಡೇಶ್ವರಿ ಬಾಲಕ ಭಕ್ತ ಮಂಡಳಿಯ 61ನೇ ವರ್ಷದ ದಸರಾ ಸಮಿತಿಯ ಅಧ್ಯಕ್ಷರಾಗಿ ವಿಶಾಕ್ ರಮೇಶ್, ಉಪಾಧ್ಯಕ್ಷರಾಗಿ ದೇವಿಪ್ರಸಾದ್ ಅಮೆಮನೆ ಹಾಗೂ ಗಣೇಶ್ ಶೆಟ್ಟಿ ಆಯ್ಕೆಯಾಗಿದ್ದಾರೆ.

Read More

ಮಡಿಕೇರಿ ಜು.29 : ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಶನಿವಾರ ಮಾದಾಪುರ ವ್ಯಾಪ್ತಿಯ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದರು. ವಿಎಸ್‌ಎಸ್‌ಎನ್ ಸಭಾಂಗಣದಲ್ಲಿ ನಡೆದ ಅಹವಾಲು ಸ್ವೀಕಾರ ಸಭೆಯಲ್ಲಿ ಸ್ಥಳೀಯರ ಸಮಸ್ಯೆಗಳಿಗೆ ಸರಕಾರ ಮಟ್ಟದಲ್ಲಿ ಆಗಬೇಕಾದ ಪರಿಹಾರ ಕ್ರಮಗಳನ್ನು ಕೈಗೊಳ್ಳುವುದಾಗಿ ಭರವಸೆ ನೀಡಿದರು. ನಂದಿಮೊಟ್ಟೆ ಕಿರುದಾಳೆ ಗ್ರಾಮದಲ್ಲಿ ಮಳೆಯಿಂದ ಹಾನಿಗೊಳಗಾದ ಮನೆಗಳು ಮತ್ತು ನಂದಿಮೊಟ್ಟೆ ಗ್ರಾಮದ ಕುಸಿದ ಸೇತುವೆಯನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಹರದೂರು ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಸ್ಥಳೀಯರೊಂದಿಗೆ ಸಭೆ ನಡೆಸಿ ಅಹವಾಲುಗಳನ್ನು ಸ್ವೀಕರಿಸಿದರು. ಈ ಸಂದರ್ಭ ಪ್ರಮುಖರಾದ ಕೆ.ಎಂ.ಲೋಕೇಶ್, ಬಿ.ಬಿ.ಸತೀಶ್, ಕೆ.ಎ.ಯಾಕುಬ್, ಎಸ್.ಎಂ.ಚAಗಪ್ಪ, ಮಾದಾಪುರ ವಲಯದ ಪ್ರಮುಖರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

Read More

ಮಡಿಕೇರಿ ಜು.29 : ಮಡಿಕೇರಿ ತಾಲ್ಲೂಕಿನ ನರಿಯಂದಡ ಗ್ರಾಮ ಪಂಚಾಯಿತಿಗೆ ಒಳ ಪಡುವ ಚೇಲಾವರ ಗ್ರಾಮದಲ್ಲಿ ಬಂಡೆಗಲ್ಲುಗಳ ಮೇಲಿನಿಂದ ಸುಮಾರು 100 ಅಡಿ ಎತ್ತರದಿಂದ ಹಾಲ್ನೊರೆಯಂತೆ ದುಮುಕುವ ಚೇಲಾವರ ಜಲಪಾತದ ಸೊಬಗನ್ನು ನೋಡುವುದೇ ವಿಸ್ಮಯ. ಚೋಮಾ ಕುಂದು ಹಾಗೂ ಕಬ್ಬೆ ಬೆಟ್ಟದಿಂದ ಉಗಮವಾಗುವ ಜಲಮೂಲದಿಂದ ಚೇಲಾವರ ಜಲಪಾತ ಉಂಟಾಗಿದೆ. ಸಾಮಾನ್ಯವಾಗಿ ಅಲ್ಲಿನ ನಿವಾಸಿಗಳು ಈ ಜಲಪಾತವನ್ನು “ಏಮೆಪಾರೆ” ಎಂದು ಕರೆಯುತ್ತಾರೆ. ಕಳೆದ ಎರಡು ವಾರಗಳಿಂದ ಸುರಿದ ಮಳೆಯಿಂದ ಚೇಲಾವರ ಜಲಕನ್ಯೆ ಮನ ಮೋಹಕವಾಗಿದೆ. ಮಡಿಕೇರಿಯಿಂದ 37 ಕಿ.ಮೀ ಮತ್ತು ವಿರಾಜಪೇಟೆಯಿಂದ 26 ಕಿ.ಮೀ. ದೂರದಲ್ಲಿ ಜಲಪಾತವಿದೆ. ಚೆಯ್ಯಂಡಾಣೆಗೆ ತೆರಳಿ ಅಲ್ಲಿಂದ ಕವಲು ಹಾದಿಯಲ್ಲಿ 5 ಕಿ.ಮೀ. ದೂರಕ್ಕೆ ಸಾಗಿದರೆ ನಿಸರ್ಗದ ನಡುವೆ ಇರುವ ಅಪೂರ್ವ ಜಲಧಾರೆಯ ಸೊಬಗನ್ನು ಸವಿಯಬಹುದು. (ಅಶೋಕ್ _ಮಡಿಕೇರಿ)

Read More

ಮಡಿಕೇರಿ ಜು.29 : ಪಟ್ಟಣ ಸಹಕಾರ ಬ್ಯಾಂಕಿನ ಮಾಜಿ ಉಪಾಧ್ಯಕ್ಷ ಹಾಗೂ ಹಾಲಿ ನಿರ್ದೇಶಕ ಎಸ್.ಸಿ.ಸತೀಶ್ ಅವರು ನಗರಸಭೆ ಸ್ಥಾಯಿ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆ ಬ್ಯಾಂಕಿನ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಅಧ್ಯಕ್ಷ ಸಿ.ಕೆ.ಬಾಲಕೃಷ್ಣ, ಉಪಾಧ್ಯಕ್ಷ ಬಿ.ಎಂ.ರಾಜೇಶ್, ನಿರ್ದೇಶಕರುಗಳಾದ ಬಿ.ವೈ.ರಾಜೇಶ್, ಬಿ.ಕೆ.ಜಗದೀಶ್, ಕಾವೇರಮ್ಮ ಸೋಮಣ್ಣ, ಕನ್ನಂಡ ಸಂಪತ್, ಬಿ.ಪಿ.ಮಾಚಮ್ಮ, ಆರ್.ಗಿರೀಶ್, ಬಿ.ವಿ.ರೋಷನ್, ಕೆ.ಆರ್.ನಾಗೇಶ್, ಸುಮಂತ್ ಪಾಲಾಕ್ಷ, ಎ.ಗೋಪಾಲಕೃಷ್ಣ, ವ್ಯವಸ್ಥಾಪಕರಾದ ಕೆ.ಪದ್ಮಾಭ ಕಿಣಿ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Read More

ವಿರಾಜಪೇಟೆ  ಜು.29 :  ವಿರಾಜಪೇಟೆ ಪಟ್ಟಣ ಸಹಕಾರ ಬ್ಯಾಂಕ್ ನಿ. ಚುನಾವಣೆಯು ತಿಂಗಳ ಅಂತ್ಯ ದಿನದಂದು ನಡೆಯಲಿದ್ದು, ಬ್ಯಾಂಕ್ ನ ಸರ್ವತೋಮುಖ ಬೆಳವಣಿಗೆಗೆ ತಂಡದ ಸದಸ್ಯರಿಗೆ ಮತದಾರರು ಮತ ಚಲಾವಣೆ ಮಾಡುವಂತೆ ಅಭ್ಯರ್ಥಿಗಳು  ಮನವಿ ಮಾಡಿದರು. ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕರ ಭವನದಲ್ಲಿ  ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಟ್ಟಣ ಸಹಕಾರ ಬ್ಯಾಂಕ್ ನ ಚುನಾವಣೆ ಅಭ್ಯರ್ಥಿಗಳು,  ಬ್ಯಾಂಕ್ ಚುನಾವಣೆ ಗೆ ಅರ್ಹ ಮತದಾರರಿಂದ ಮತ ಚಲಾವಣೆ ಮಾಡಲು ಮನವಿ ಮಾಡಿದರು. ಅಭ್ಯರ್ಥಿ ಪಟ್ಟಡ ರಂಜಿ ಪೂಣಚ್ಚ  ಮಾತನಾಡಿ,   ಸುಮಾರು 20 ವರ್ಷಗಳಿಂದ ಯಾವುದೇ ಚುನಾವಣೆ ನಡೆಯದೆ ಅವಿರೋಧವಾಗಿ ಬ್ಯಾಂಕ್‌ ನ ಆಡಳಿತ ಮಂಡಳಿ ಯ ಸದಸ್ಯ ರ ಆಯ್ಕೆ ನಡೆದಿದೆ. ಬ್ಯಾಂಕ್ ನ ಗ್ರಾಹಕರಿಗೆ ಉತ್ತಮ ಗುಣಮಟ್ಟದ ಪಾರದರ್ಶಕ ಆಡಳಿತ ನೀಡಬೇಕು, ಅಲ್ಲದೆ ಗ್ರಾಹಕರ ಕೈಗೆಟುಕುವ ಕಡಿಮೆ ಬಡ್ಡಿಯಲ್ಲಿ ಸಾಲ ದೊರಬೇಕು, ಗ್ರಾಹಕ ರಿಗೆ ತ್ವರಿತ ವಾಗಿ ವಿವಿದ ಕ್ಷೇತ್ರಕ್ಕೆ ಅನುಗುಣವಾಗಿ ಕಡಿಮೆ ಅವದಿಯಲ್ಲಿ ಸಾಲ ದೊರಕುವಂತೆ ಮಾಡುವುದು ತಂಡದ…

Read More

ಮಡಿಕೇರಿ ಜು.29 : ಉಡುಪಿಯ ಕಾಲೇಜೊಂದರ ಶೌಚಾಲಯದಲ್ಲಿ ಹಿಂದೂ ವಿದ್ಯಾರ್ಥಿನಿಯರನ್ನು ಗುರಿಯಾಗಿಸಿಕೊಂಡು ನಡೆದ ವಿಡಿಯೋ ಚಿತ್ರೀಕರಣ ಪ್ರಕರಣದ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕೊಡಗು ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಅನಿತಾ ಪೂವಯ್ಯ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ವಿದ್ಯಾ ದೇಗುಲದಂತಿರುವ ಕಾಲೇಜ್ ನಲ್ಲಿ ವಿದ್ಯಾರ್ಥಿನಿಯರಿಗೆ ಮುಜುಗರ ಉಂಟು ಮಾಡಿದ ಈ ಪ್ರಕರಣ ಅತ್ಯಂತ ಅಮಾನವೀಯ ಮತ್ತು ಖಂಡನೀಯವೆoದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಿಂದೂ ವಿದ್ಯಾರ್ಥಿನಿಯರನ್ನೇ ಗುರಿಯಾಗಿಸಿಕೊಂಡು ಶೌಚಾಲಯದಲ್ಲಿ ಚಿತ್ರೀಕರಣ ಮಾಡಿರುವುದನ್ನು ಗಮನಿಸಿದರೆ ಆರೋಪಿಗಳ ಹಿಂದೆ ದುಷ್ಟಶಕ್ತಿಗಳು ಕೆಲಸ ಮಾಡಿರುವ ಬಗ್ಗೆ ಶಂಕೆ ವ್ಯಕ್ತವಾಗುತ್ತಿದೆ. ರಾಜ್ಯದ ಜವಾಬ್ದಾರಿಯುತ ಸ್ಥಾನದಲ್ಲಿರುವ ಸಚಿವರೊಬ್ಬರು ಈ ಪ್ರಕರಣವನ್ನು ಲಘುವಾಗಿ ಪರಿಗಣಿಸಿದ್ದಾರೆ, ಅಲ್ಲದೆ ಮಕ್ಕಳಾಟವೆಂದು ಬಾಲಿಶ ಹೇಳಿಕೆ ನೀಡಿದ್ದಾರೆ. ಇವರ ಹೇಳಿಕೆಯನ್ನು ಗಮನಿಸಿದರೆ ಆರೋಪಿಗಳಿಗೆ ಬೆಂಬಲ ನೀಡುತ್ತಿದ್ದಾರೆ ಎನ್ನುವ ಸಂಶಯ ವ್ಯಕ್ತವಾಗುತ್ತಿದೆ ಎಂದು ಆರೋಪಿಸಿದ್ದಾರೆ. ಆರೋಪಿಗಳ ಹಿಂದಿರುವ ಮತಾಂಧ ಶಕ್ತಿಗಳ ವಿರುದ್ಧ ಸರ್ಕಾರ ಉನ್ನತ ಮಟ್ಟದ ತನಿಖೆ ನಡೆಸಿ ಕಠಿಣ ಕ್ರಮ…

Read More

ನವದೆಹಲಿ: ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯು ದೇಶದ ಪ್ರತಿಯೊಂದು ಭಾಷೆಗೆ ಗೌರವ ಮತ್ತು ಮನ್ನಣೆ ನೀಡುತ್ತದೆ ಎಂದು  ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಎನ್‌ಇಪಿ ಮೂರನೇ ವಾರ್ಷಿಕೋತ್ಸವ ಅಂಗವಾಗಿ ‘ಅಖಿಲ ಭಾರತೀಯ ಶಿಕ್ಷಾ ಸಮಾಗಮ್’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಪ್ರಧಾನಿ ಮೋದಿ, ವಿದ್ಯಾರ್ಥಿಗಳ ಸಾಮರ್ಥ್ಯದ ಬದಲಿಗೆ ಅವರ ಭಾಷೆಯ ಆಧಾರದ ಮೇಲೆ ಅವರನ್ನು ನಿರ್ಣಯಿಸುವುದೇ ದೊಡ್ಡ ಅನ್ಯಾಯ ಎಂದು ಹೇಳಿದರು. “ಮಾತೃಭಾಷೆಯಲ್ಲಿನ ಶಿಕ್ಷಣವು ದೇಶದಲ್ಲಿನ ಎಲ್ಲಾ ವಿದ್ಯಾರ್ಥಿಗಳಿಗೆ ನ್ಯಾಯದ ಹೊಸ ರೂಪವಾಗಿದೆ. ಇದು ಸಾಮಾಜಿಕ ನ್ಯಾಯದ ಕಡೆಗೆ ಮಹತ್ವದ ಹೆಜ್ಜೆಯಾಗಿದೆ ಎಂದರು.

Read More

ನಾಪೋಕ್ಲು ಜು.29 : ಲಯನ್ಸ್ ಸಂಸ್ಥೆ ನಾಪೋಕ್ಲು ಮತ್ತು ಲಿಯೋ ಸಂಸ್ಥೆಯ ಆಶ್ರಯದಲ್ಲಿ ಕಾರ್ಗಿಲ್ ವಿಜಯ ದಿವಸವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಮಹಿಳಾ ಸಮಾಜದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿವೃತ್ತ ಯೋಧ ಕೇಟೋಳಿರ ಡಾಲಿ ಅಚ್ಚಪ್ಪ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಲಯನ್ಸ್ ಕ್ಲಬ್ ಅಧ್ಯಕ್ಷ ಕನ್ನಂಬಿರ ಸುಧಿ ತಿಮ್ಮಯ್ಯ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡ ಹಾಗೂ ಕೊವೀಡ್ ಸಂದರ್ಭದಲ್ಲಿ ಮೂವತ್ತಕ್ಕೂ ಅಧಿಕ ಮೃತ ದೇಹಗಳ ಅಂತ್ಯಸಂಸ್ಕಾರಕ್ಕೆ ಸಹಕರಿಸಿರುವುದಲ್ಲದೇ, ಕ್ರೀಡಾ ತರಬೇತಿದಾರರು ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಶ್ಲಾಘೀಸಿದರು. ವೇದಿಕೆಯಲ್ಲಿದ್ದ ಗಣ್ಯರು ಮಾತನಾಡಿ ದೇಶಪ್ರೇಮ ಮತ್ತು ದಿನದ ಮಹತ್ವದ ಬಗ್ಗೆ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಲಯನ್ಸ್ ರಾಜ್ಯಪಾಲ ಸಂಯೋಜಕ ಪಂಚಮ್ ತಿಮ್ಮಯ್ಯ, ಸೇವಾ ಸಂಯೋಜಕ ಮುಕ್ಕಾಟಿರ ವಿನಯ್, ಸದಸ್ಯರಾದ ರತ್ನಾ ಚರ್ಮಣ, ಲಿಯೋ ಸಂಸ್ಥೆಯ ಉಪಾಧ್ಯಕ್ಷ ಮಾದೆಯಂಡ ರೋಹನ್, ಕೇಟೋಳಿರ ಕುಟ್ಟಪ್ಪ, ಡಾ.ಬೋಪ್ಪಂಡ ಜಾಲಿ ಬೋಪಯ್ಯ, ಕುಂಚೆಟ್ಟಿರ ಸುಧಿ, ರೇಷ್ಮಾ, ಅಪ್ಪಾರಂಡ ಸುಭಾಷ್, ಲವ ಕಾಳಪ್ಪ, ಕಾಂಡಂಡ ಪೊನ್ನಣ್ಣ, ತಿಮ್ಮಯ್ಯ, ಮಂದಪಂಡ…

Read More

ಮಡಿಕೇರಿ ಜು.29 :ಯುವ ಬಂಟ್ಸ್ ಅಸೋಸಿಯೇಷನ್ ಕೊಡಗು ಜಿಲ್ಲೆ ವತಿಯಿಂದ, ಕೊಡಗು ಜಿಲ್ಲಾ ಬಂಟರ ಸಂಘ, ಮಡಿಕೇರಿ ನಗರ ಬಂಟರ ಮಹಿಳಾ ಘಟಕ, ಗಾಳಿಬೀಡು ಹೋಬಳಿ ಬಂಟರ ಸಂಘದ ಸಹಯೋಗದಲ್ಲಿ ‘ಆಟಿಡೊಂಜಿ ದಿನ ಕೆಸರ್ದಗೊಬ್ಬು’ ಕಾರ್ಯಕ್ರಮ ನಡೆಯಲಿದೆ. ಗಾಳಿಬೀಡುವಿನ ಹೊರಮಲೆ ಶಿವಪ್ರಸಾದ್ ರೈಅವರ ಭತ್ತದಗದ್ದೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮಹಿಳೆಯರು, ಪುರುಷರು, ಮಕ್ಕಳು, ಹಿರಿಯರಿಗೆ ವಿವಿಧಆಟೋಟ ಸ್ಪರ್ಧೆಜರುಗಲಿದೆ. ಪುರುಷರಿಗೆ ಹ್ಯಾಂಡ್ ಬಾಲ್, ಓಟ(ವಿವಿಧ ವಿಭಾಗದಲ್ಲಿ), ಹಗ್ಗಜಗ್ಗಾಟ, ದಂಪತಿ ಓಟ, ಮಹಿಳೆಯರಿಗೆ 100 ಮೀಟರ್‍ಓಟ, ಹಗ್ಗಜಗ್ಗಾಟ, ನಿಂಬೆ ಚಮಚ, ಪಾಸಿಂಗ್ ಬಾಲ್. ಮಕ್ಕಳಿಗೆ 100 ಮೀ. ಓಟ ಹಾಗೂ ಕೆಸರುಗದ್ದೆಯಲ್ಲಿ ವಿವಿಧ ಮನೋರಂಜನಾ ಸ್ಪರ್ಧೆಜರುಗಲಿದೆ ಎಂದು ಅಸೋಸಿಯೇಷನ್ ಕಾರ್ಯದರ್ಶಿ ಚಂದ್ರಶೇಖರ್ ರೈ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಎತ್ತಿನ ಮೂಲಕ ಉಳುಮೆ ಪ್ರಾತ್ಯಕ್ಷಿಕೆ, ಸಾಂಪ್ರದಾಯಿಕ ಕೃಷಿ ಪರಿಕರಗಳ ಪ್ರದರ್ಶನ, ನಗರ ಬಂಟರ ಮಹಿಳಾ ಘಟಕದಿಂದ ಆಟಿ ವಿಶೇಷ ಖಾದ್ಯಗಳ ಪ್ರದರ್ಶನ, ತುಳುನಾಡಿನ ಜಾನಪದ ಕಲೆ ‘ಆಟಿ ಕಳೆಂಜ’ ಪ್ರದರ್ಶನವಿರಲಿದೆ. ಉದ್ಘಾಟನಾ ಕಾರ್ಯಕ್ರಮ ಬೆಳಗ್ಗೆ 9.30ಕ್ಕೆ ನಡೆಯಲಿದೆ. ಗಾಳಿಬೀಡು…

Read More