ಮಡಿಕೇರಿ ಜು.29 : ಕದನೂರು ಪಂಚಾಯಿತಿಯ ಅಧ್ಯಕ್ಷ ಎಂ. ಭರತ್ ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ವಿರಾಜಪೇಟೆ ಶಾಸಕ ಎ.ಎಸ್ ಪೊನ್ನಣ್ಣ ಅವರ ಸಮ್ಮುಖದಲ್ಲಿ ಶಾಸಕ ನಿವಾಸದ ಕಚೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭ ವಿರಾಜಪೇಟೆ ಬ್ಲಾಕ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ಜಾನ್ಸನ್ ಹಾಗೂ ಪಕ್ಷದ ಪ್ರಮುಖರು ಹಾಜರಿದ್ದರು.
ಲೇಖಕ: admin
ಮಡಿಕೇರಿ ಜು.29 : ಬೆಟ್ಟಗೇರಿಯ ಓಂ ಯುವಕ ಸಂಘದ ಕ್ರೀಡಾ ಸಮಿತಿ ವತಿಯಿಂದ 2ನೇ ವರ್ಷದ ಕೆಸರುಗದ್ದೆ ಕ್ರೀಡಾಕೂಟ “ಹಿಂದು ಕಪ್” ಸಂಭ್ರಮದಿಂದ ನಡೆಯಿತು. ಅರ್ವತ್ತೋಕ್ಲುವಿನ (ಅಪ್ಪಂಗಳ) ಶ್ರೀಪತಿ ಹೆಬ್ಬಾರ್ ಅವರ ಗದ್ದೆಯಲ್ಲಿ ಕೆಸರುಗದ್ದೆ ಹಗ್ಗಜಗ್ಗಾಟ, ಕ್ರಿಕೆಟ್, ರಿಲೆ, ವಯೋಮಿತಿಯ ಓಟಗಳು ಗಮನ ಸೆಳೆಯಿತು.
ಮಡಿಕೇರಿ ಜು.29 : ಬಾಳೆಲೆ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಆ.20 ರಂದು ಎರಡನೇ ವರ್ಷದ ಪೊನ್ನಂಪೇಟೆ ತಾಲ್ಲೂಕು ಮಟ್ಟದ ಕೆಸರುಗದ್ದೆ ಕ್ರೀಡಾಕೂಟ ನಡೆಯಲಿದೆ. ಅಂದು ಪೂರ್ವಹ್ನ 9ಗಂಟೆ ನಿಟ್ಟೂರು ಗದ್ದೆಯಲ್ಲಿ ಕ್ರೀಡಾಕೂಟ ನಡೆಯಲಿದ್ದು, ಪೊನ್ನಂಪೇಟೆ ತಾಲ್ಲೂಕು ವ್ಯಾಪ್ತಿಯ ಕ್ರೀಡಾಪಟುಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಪೊನ್ನಂಪೇಟೆ ತಾಲ್ಲೂಕು ವ್ಯಾಪ್ತಿಯ ಕ್ರೀಡಾಪಟುಗಳು ಗುರುತಿನ ಚೀಟಿ ಆಧಾರ್ ಕಾರ್ಡ್/ ಮತದಾರರ ಗುರುತಿನ ಚೀಟಿ/ ಡ್ರೈವಿಂಗ್ ಲೈಸನ್ಸ್ ಹೀಗೆ ಸರ್ಕಾರ ನಿಗದಿಪಡಿಸಿದ ಯಾವುದೇ ಗುರುತಿನ ಚೀಟಿಯನ್ನು ತಂಡ ನೊಂದಾವಣೆಯ ಸಂದರ್ಭದಲ್ಲಿ ನೀಡಬೇಕು. ಆಸಕ್ತ ತಂಡಗಳು ಫಾರ್ಮರ್ಸ್ ಅಸೋಸಿಯೇಷನ್ ಬಾಳೆಲೆ ಇವರಲ್ಲಿ ನೊಂದಾವಣೆ ಶುಲ್ಕ ದೊಂದಿಗೆ ಆ.17 ರೊಳಗೆ ನೋಂದಾಯಿಸಿಕೊಳ್ಳಬಹುದಾಗಿದೆ. ಪುರುಷರ ವಾಲಿಬಾಲ್ ನೊಂದಾವಣೆ ಶುಲ್ಕ 2000, ವಿಜೇತರಿಗೆ ಪ್ರಥಮ ಬಹುಮಾನ 25,000 ರೂ ದ್ವಿತೀಯ 15, 000 ಆಟಗಾರರ ಸಂಖ್ಯೆ 6+2. ಪುರುಷರಿಗೆ ಹಗ್ಗ ಜಗ್ಗಾಟ ನೊಂದಾವಣೆ ಶುಲ್ಕ 2000ರೂ ವಿಜೇತರಿಗೆ ಪ್ರಥಮ ಬಹುಮಾನ 25,000 ದ್ವಿತೀಯ 15,000.ಆಟಗಾರರ ಸಂಖ್ಯೆ 7+2 ಮಹಿಳೆಯರಿಗೆ ಹಗ್ಗಜಗ್ಗಾಟ ನೊಂದಾವಣೆ ಶುಲ್ಕ…
ಮಂಡ್ಯ, ಜು.29: ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ವೇ 158.81 ಕೋಟಿ ರೂ.ಗಳ ವೆಚ್ಚದಲ್ಲಿ ಹೆಚ್ಚುವರಿ ಕಾಮಗಾರಿಗಳನ್ನು ಕೈಗೊಳ್ಳಲಿದ್ದು, ನವೆಂಬರ್ ನಂತರ ಕೆಲಸ ಪ್ರಾರಂಭವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ವೇ ಪರಿಶೀಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಂಗಳೂರು, ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಸ್ಪೀಡ್ ಡಿಟೆಕ್ಟರ್ ಗಳನ್ನು ಅಳವಡಿಸಿರಲಿಲ್ಲ. ಹಾಗಾಗಿ ಅಪಘಾತಗಳು ಹೆಚ್ಚಾಗಿದ್ದವು. ಜುಲೈ ತಿಂಗಳಲ್ಲಿ ಅಪಘಾತಗಳು ಕಡಿಮೆಯಾಗಿವೆ. ಜೂನ್ ತಿಂಗಳಲ್ಲಿ 20 ಅಪಘಾತಗಳಾಗಿದ್ದರೆ, ಜುಲೈನಲ್ಲಿ 5 ಅಪಘಾತಗಳು ಸಂಭವಿಸಿವೆ. ಸ್ಪೀಡ್ ಡಿಟೆಕ್ಟರ್ ಗಳನ್ನು 10 ಕಿಮೀ ಅಂತರದಲ್ಲಿ ಅಳವಡಿಸಿದರೆ ಅಪಘಾತಗಳನ್ನು ಕಡಿಮೆ ಮಾಡಲು ಸಾಧ್ಯ. ಮುಖ್ಯ ಕಾರ್ಯದರ್ಶಿಗಳು ಎನ್.ಹೆಚ್.ಎ. ಐ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ನನ್ನ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಎಕ್ಸ್ ಪ್ರೆಸ್ ವೇ ನಲ್ಲಿ ಕೆಲವು ಸುರಕ್ಷಾ ಕ್ರಮಗಳನ್ನು ಕೈಗೊಳ್ಳಬೇಕಿದ್ದು ಅದಕ್ಕಾಗಿಯೇ ಕಾಮಗಾರಿ ಕೈಗೊಳ್ಳಲು ಸೂಚನೆ ನೀಡಲಾಗಿದೆ. ಸರ್ವಿಸ್ ರಸ್ತೆ ಕಾಮಗಾರಿಗಳನ್ನು ಕೈಗೊಳ್ಳಲು ಪ್ರಸ್ತಾವನೆಯನ್ನು ಕೇಂದ್ರಕ್ಕೆ ಕಳುಹಿಸಲಾಗಿದೆ. ಬಿಡದಿ,…
ಮಡಿಕೇರಿ ಜು.29 : ಬಿಟ್ಟಂಗಾಲ ವಲಯ ಕಾಂಗ್ರೆಸ್ ಸಮಿತಿ ವಿರಾಜಪೇಟೆ ಬ್ಲಾಕ್, ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರಿಂದ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹಾಜರಿದ್ದರು.
ಮಡಿಕೇರಿ ಜು.29 : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕೊಡಗು ಜಿಲ್ಲಾ ಮಟ್ಟದ ಮೂಲ ತರಬೇತಿ ಶಿಬಿರದ ಸಮಾರೋಪ ಸಮಾರಂಭ ನಗರದ ಗಾಂಧಿ ಭವನದಲ್ಲಿ ನಡೆಯಿತು. ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ರಂಗದಾಮಯ್ಯ ಮಾತನಾಡಿ, ಶಿಕ್ಷಕರು ತರಬೇತಿಯಲ್ಲಿ ಪಡೆದ ಮಾಹಿತಿಯನ್ನು ಮಕ್ಕಳಿಗೆ ನೀಡುವುದರ ಮೂಲಕ ಮಕ್ಕಳಲ್ಲಿ ಮೌಲ್ಯ ತುಂಬಬೇಕು, ಆ ಮೂಲಕ ಸದೃಢ ರಾಷ್ಟ್ರದ ನಿರ್ಮಾಣ ಆಗಬೇಕೆಂಬ ಸಂದೇಶ ನೀಡಿದರು. ಜಿಲ್ಲಾ ದೈಹಿಕ ಶಿಕ್ಷಣ ಅಧೀಕ್ಷಕ ಡಾ. ಸದಾಶಿವಯ್ಯ ಎಸ್ ಪಲ್ಲೇದ್ ಮಾತನಾಡಿ, ಕೊಡಗು ಜಿಲ್ಲೆಯಲ್ಲಿ ಉತ್ತಮ ಗುಣಮಟ್ಟದ ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳು ನಡೆಯುತ್ತಿದ್ದು, ರಾಜ್ಯ ಸಂಸ್ಥೆಯಿಂದ ಉತ್ತಮ ಬೆಂಬಲ ವ್ಯಕ್ತವಾಗಿದೆ, ಅದರ ಪ್ರಯೋಜನವನ್ನು ಪಡೆದುಕೊಳ್ಳಲು ಶಿಕ್ಷಕರಿಗೆ ಸಲಹೆ ನೀಡಿದರು. ಮಡಿಕೇರಿ ನಗರಸಭಾ ಸದಸ್ಯರಾದ ಶಾರದಾ ನಾಗರಾಜ್ ಮಾತನಾಡಿ, ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳಿಂದ ಮಕ್ಕಳಲ್ಲಿ ದೇಶ ಸೇವಾ ಮನೋಭಾವ ಬೆಳೆಯುತ್ತದೆ ಎಂಬ ಅಭಿಪ್ರಾಯಪಟ್ಟರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಪ್ರಧಾನ ಆಯುಕ್ತ ಕೆ.ಟಿ ಬೇಬಿ ಮ್ಯಾಥ್ಯು,…
ಮಡಿಕೇರಿ ಜು.29 : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕೊಡಗು ಜಿಲ್ಲಾ ಸಂಸ್ಥೆ ವತಿಯಿಂದ ಕಾರ್ಗಿಲ್ ವಿಜಯೋತ್ಸವ ಆಚರಿಸಲಾಯಿತು. ಕೊಡಗಿನ ಮೂರು ಯೋಧರು ಸೇರಿದಂತೆ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ದೇಶದ ಎಲ್ಲಾ ಯೋಧರಿಗೆ ನಗರದ ಯುದ್ಧ ಸ್ಮಾರಕದಲ್ಲಿ ಪುಷ್ಪ ನಮನ ಸಲ್ಲಿಸಲಾಯಿತು. ಈ ಸಂದರ್ಭ ಸ್ಕೌಟ್ಸ್ ಮತ್ತು ಗೈಡ್ಸ್ನ ಜಿಲ್ಲಾ ಪ್ರದಾನ ಆಯುಕ್ತ ಕೆ.ಟಿ.ಬೇಬಿ ಮ್ಯಾಥ್ಯು, ಮೇಜರ್ ಓಡಿಯಂಡ ಚಿಂಗಪ್ಪ, ಜಿಲ್ಲಾ ಸ್ಕೌಟ್ಸ್ ಆಯುಕ್ತರಾದ ಜಿಮ್ಮಿ ಸೀಕ್ವೆರಾ, ಸಹಾ ಕಾರ್ಯದರ್ಶಿ ಬೊಳ್ಳಜಿರ.ಬಿ.ಅಯ್ಯಪ್ಪ, ಜಿಲ್ಲಾ ಸಂಘಟಕ ದಮಯಂತಿ, ಜಿಲ್ಲಾ ಸ್ಥಾನಿಕ ಆಯುಕ್ತ ಹೆಚ್.ಆರ್.ಮುತ್ತಪ್ಪ, ತರಬೇತಿ ಆಯುಕ್ತ ಮೈಥಿಲಿ ರಾವ್, ಸಹಾಯಕ ತರಬೇತಿ ಆಯುಕ್ತ ಅಲೀಮಾ ಮತ್ತು ರಂಜಿತ್, ಜಿಲ್ಲಾ ಖಜಾಂಚಿ ಪುಷ್ಪವೇಣಿ, ಸ್ಕೌಟ್ಸ್ ಮಾಸ್ಟರ್ ಚೆರುಮಂದಂಡ ಕುಟ್ಟಪ್ಪ, ಗೈಡ್ ಕ್ಯಾಪ್ಟನ್ ವೀಣಾಕುಮಾರಿ, ವಿನಯ್ ಜೋಯಿಸಿ, ಜನಾರ್ದನ್, ರತೀಶ್ ಗೌರವ ನಮನ ಸಲ್ಲಿಸಿದರು.
ಮಡಿಕೇರಿ ಜು.29 : ನಗರದ ಹೊರವಲಯದಲ್ಲಿರುವ ಪ್ರಾದೇಶಿಕ ಸಾರಿಗೆ ಕಚೇರಿ (ಆರ್.ಟಿ.ಓ)ಗೆ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂಥರ್ ಗೌಡ ದಿಢೀರ್ ಭೇಟಿ ನೀಡಿದರು. ಕಚೇರಿಯಲ್ಲಿ ಕಡತಗಳನ್ನು ಇಟ್ಟಿರುವ ಕೊಠಡಿ ಪರಿಶೀಲನೆ ನಡೆಸಿ, ಕಡತಗಳನ್ನು ಸರಿಯಾದ ರೀತಿಯಲ್ಲಿ ಹೊಂದಿಸಿಡಬೇಕೆಂದು ಸೂಚನೆ ನೀಡಿದರು. ಕಚೇರಿಯ ವಿರುದ್ಧ ದೂರುಗಳು ಬಂದ ಹಿನ್ನೆಲೆಯಲ್ಲಿ ಶಾಸಕರು ಭೇಟಿ ನೀಡಿ ಅಧಿಕಾರಿಗಳೊಂದಿಗೆ ಚರ್ಚಿಸಿದರು. ಜನರ ಕೆಲಸ ವಿಳಂಬ ಮಾಡಬಾರದು, ಸಕಾಲದಲ್ಲಿ ಪೂರ್ಣಗೊಳಿಸಿ ಜನರ ಹಿತ ಕಾಪಾಡುವುದು ಸಿಬ್ಬಂದಿಗಳ ಕರ್ತವ್ಯವಾಗಿದೆ. ಭ್ರಷ್ಟಾಚಾರಕ್ಕೆ ಅವಕಾಶ ನೀಡಬಾರದು ಎಂದು ತಾಕೀತು ಮಾಡಿದರು. ನಂತರ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಈ ಸಂದರ್ಭ ಮುಖಂಡರಾದ ಹೆಚ್.ಎ.ಹಂಸ, ಪ್ರಕಾಶ್ ಆಚಾರ್ಯ, ಸದಾ ಮುದ್ದಪ್ಪ, ಮುದ್ದುರಾಜ್, ಜಾನ್ಸನ್ ಪಿಂಟೋ ಸೇರಿದಂತೆ ಮತ್ತಿರರು ಹಾಜರಿದ್ದರು.
ಮಡಿಕೇರಿ ಜು.29 : ಜರ್ಮನಿಯಲ್ಲಿ ಆಗಸ್ಟ್ 18 ರಿಂದ 22ರ ವರೆಗೆ ನಡೆಯಲಿರುವ ಚತುಷ್ಕೋನ ಹಾಕಿ ಸರಣಿಗೆ ಭಾರತ ಜೂನಿಯರ್ ಹಾಕಿ ತಂಡವನ್ನು ಪ್ರಕಟಿಸಲಾಗಿದ್ದು, ತಂಡದಲ್ಲಿ ಕೊಡಗಿನ ಯುವ ಆಟಗಾರ ಚಂದುರ ಪೂವಣ್ಣ ಸ್ಥಾನ ಪಡೆದಿದ್ದಾರೆ. ರಾಜ್ಯದಿಂದ ಪೂವಣ್ಣ ಹಾಗೂ ಗೋಲ್ಕೀಪರ್ ಆಗಿ ಹೆಚ್.ಎಸ್.ಮೋಹಿತ್ ತಂಡದಲ್ಲಿದ್ದಾರೆ. ಈ ವರ್ಷದ ಅಂತ್ಯದಲ್ಲಿ ಜರುಗಲಿರುವ ಜೂನಿಯರ್ ಹಾಕಿ ವಿಶ್ವಕಪ್ಗೆ ಪೂರ್ವ ಸಿದ್ಧತೆಯಾಗಿ ಈ ಪಂದ್ಯಾವಳಿ ಮಹತ್ವದ್ದಾಗಿದೆ. ಭಾರತ, ಜರ್ಮನಿ, ಸ್ಪೇನ್ ಇಂಗ್ಲೆಂಡ್ ತಂಡಗಳು ಈ ಪಂದ್ಯಾವಳಿಯಲ್ಲಿ ಸೆಣಸಲಿದೆ. ಪೂವಣ್ಣ ಕಂಡಂಗಾಲ ನಿವಾಸಿ ಚಂದುರ ಎಸ್.ಬಾಬಿ ಹಾಗೂ ಅನಿಲ ದಂಪತಿ ಪುತ್ರ.
ಮಡಿಕೇರಿ ಜು.29 : ಪ್ರಸಕ್ತ(2023-24) ಸಾಲಿಗೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಕೇಂದ್ರ ಪುರಸ್ಕøತ ಟಾಪ್ ಕ್ಲಾಸ್ ವಿದ್ಯಾರ್ಥಿ ವೇತನ ಕಾರ್ಯಕ್ರಮವನ್ನು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯಿಂದ ನ್ಯಾಷನಲ್ ಸ್ಕಾಲರ್ಶಿಪ್ ಪೋರ್ಟಲ್ ಮುಖಾಂತರ ಅನುಷ್ಠಾನಗೊಳಿಸಲಾಗುತ್ತಿದೆ. ಪ್ರಯುಕ್ತ ಜಿಲ್ಲೆಯ ಟಾಪ್ ಕ್ಲಾಸ್ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಮೂಲಕ ಸೆಪ್ಟೆಂಬರ್, 29 ರಂದು ಪರೀಕ್ಷೆ ನಡೆಸಲಾಗುತ್ತದೆ. ಈ ಯೋಜನೆಗೆ ಅರ್ಹರಿರುವ ವಿದ್ಯಾರ್ಥಿಗಳು ಆಗಸ್ಟ್, 10 ರೊಳಗೆ https://yet.nta.ac.in ಮುಖಾಂತರ ಅರ್ಜಿ ಸಲ್ಲಿಸಿ ಯೋಜನೆಯ ಉಪಯೋಗವನ್ನು ಪಡೆದುಕೊಳ್ಳುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.






