ಸೋಮವಾರಪೇಟೆ ಜು.29 : ಸೋಮವಾರಪೇಟೆ ತಾಲ್ಲೂಕು ಸಾಮಾಜಿಕ ಅರಣ್ಯ ವಲಯದ ವತಿಯಿಂದ ಹುದುಗೂರು ಗ್ರಾಮದ ಸಾಮಾಜಿಕ ಅರಣ್ಯ ವಲಯ ಕ್ಷೇತ್ರದಲ್ಲಿ 2023-24ನೇ ಸಾಲಿನ ಮಳೆಗಾಲದಲ್ಲಿ ನಡೆಸಲು ವಿವಿಧ ಸಸಿಗಳನ್ನು ಬೆಳೆಸಲಾಗಿದ್ದು, ರೈತರಿಗೆ ಪರಿಸ್ಕೃತ ದರದಲ್ಲಿ ವಿತರಿಸಲಾಗುತ್ತಿದೆ. ನೇರಳೆ, ಮಹಾಗನಿ, ಬಿದಿರು, ನೆಲ್ಲಿ, ಸೀಬೆ, ಬಿದಿರು, ಶಿವನಿ, ಕಹಿಬೇವು, ಬಿಲ್ವಪತ್ರೆ, ರಕ್ತಚಂದನ, ಹೊನ್ನೆ, ಚಕ್ಕೆ, ಮುಳ್ಳು ಸಂಪಿಗೆ, ತೇಗ, ಹೆಬ್ಬೇವು, ಹಲಸು, ಹೆಬ್ಬಲಸು ಸೇರಿದಂತೆ ವಿವಿಧ ಜಾತಿಯ ಸಸಿಗಳನ್ನು ಬೆಳೆಸಲಾಗಿದೆ. ಸಾರ್ವಜನಿಕರಿಗೆ ಸರ್ಕಾರ ನಿಗಧಿ ಪಡಿಸಿರುವ 6*9 ಅಳತೆಯ ಚೀಲದ ಸಸಿ ಒಂದಕ್ಕೆ ರೂ. 3 ( ಪರಿಸ್ಕೃತ ದರ) ಹಾಗೂ 8*12ರ ಅಳತೆಯ ಸಸಿ ಒಂದಕ್ಕೆ ರೂ 6( ಪರಿಸ್ಕೃತ ದರ)ನ್ನು ಪಾವತಿಸಿ ಪಡೆದುಕೊಳ್ಳಬಹುದಾಗಿದೆ. ರೈತರು ತಮ್ಮ ಆಧಾರ್ ಪ್ರತಿ, ರಾಷ್ಟ್ರೀಕೃತ ಬ್ಯಾಂಕ್ ಪಾಸ್ ಬುಕ್ ಪ್ರತಿ ತಮ್ಮ ಜಮೀನಿನ ಆರ್ಟಿಸಿ ಪ್ರತಿಯನ್ನು ನೀಡಿ ಸಸಿಗಳನ್ನು ಪಡೆಯಬಹುದು. ಬಿಪಿಎಲ್ ಕಾರ್ಡ್ ಮತ್ತು ನರೇಗಾ ಉದ್ಯೋಗ ಚೀಟಿ ಹೊಂದಿರುವ ರೈತರಿಗೆ ನೆಟ್ಟ 100…
ಲೇಖಕ: admin
ಸೋಮವಾರಪೇಟೆ ಜು.29 : ಸೋಮವಾರಪೇಟೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ,ಸಿ ಟ್ರಸ್ಟ್ ವತಿಯಿಂದ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮವನ್ನು ಕರ್ಕಳ್ಳಿ ರುದ್ರ ಭೂಮಿಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಾಚಪ್ಪ ಗಿಡಗಳನ್ನು ನೆಡುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಕೊಡಗು ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷ ಅಭಿಮನ್ಯು ಕುಮಾರ್, ಸಾಮಾಜಿಕ ಅರಣ್ಯ ಇಲಾಖೆ ರೇಂಜರ್ ಕೆ.ವಿ.ಗಾನಶ್ರೀ, ಬೇಳೂರು ಗ್ರಾ.ಪಂ ಸದಸ್ಯರಾದ ಪಾರ್ವತಿ, ಯೋಗೇಂದ್ರ, ಸೋಮವಾರಪೇಟೆ ವಲಯದ ಮೇಲ್ವಿಚಾರಕರಾದ ಜಯಶ್ರೀ, ಕೃಷಿ ಮೇಲ್ವಿಚಾರಕರಾದ ರಾಜಣ್ಣ ಮತ್ತಿತರರು ಇದ್ದರು.
ಸಿದ್ದಾಪುರ ಜು.29 : ವಿರಾಜಪೇಟೆ ತಾಲೂಕಿನ ಸಿದ್ದಾಪುರ ಸಮೀಪದ ಇಂಜಿಳಗೆರೆ ನಿವಾಸಿ ಟಿ.ಎ.ಪ್ರಕಾಶ್ ಎಂಬವರ ಮನೆ ಅಂಗಳದಲ್ಲಿ ಕಾಡಾನೆ ಪ್ರತ್ಯಕ್ಷಗೊಂಡು ಆತಂಕ ಸೃಷ್ಟಿಸಿದೆ. ನಡುರಾತ್ರಿ ಮನೆಯ ಅಂಗಳದಲ್ಲಿ ಕಾಣಿಸಿಕೊಂಡ ಕಾಡಾನೆ ಪಕ್ಕದ ತೋಟಕ್ಕೆ ತೆರಳಿ ಬಾಳೆ, ಅಡಿಕೆ ಮತ್ತಿತರ ಸಸಿಗಳನ್ನು ಧ್ವಂಸ ಮಾಡಿದೆ. ಈ ಭಾಗದಲ್ಲಿ ಕಾಡಾನೆಗಳ ದಾಂಧಲೆ ಮಿತಿ ಮೀರಿದ್ದು, ಕೃಷಿಕರ ತೋಟಕ್ಕೆ ನುಗ್ಗಿ ತೆಂಗಿನ ಸಸಿ, ಅಡಿಕೆ ಹಾಗೂ ಬಾಳೆ ಸಸಿಗಳನ್ನು ತಿಂದು ಹಾನಿಗೊಳಿಸುತ್ತಿವೆ. ಇದೇ ವ್ಯಾಪ್ತಿಯ ಬೆಳೆಗಾರ ಮೋಹನ್ ಎಂಬುವವರ ತೋಟಕ್ಕೆ ಲಗ್ಗೆಯಿಟ್ಟಿದ್ದ ಕಾಡಾನೆ ಹಲಸಿನ ಮರ ಸೇರಿದಂತೆ ಕಾಫಿ ಫಸಲನ್ನು ನಾಶಪಡಿಸಿತ್ತು. ಕಾಡಾನೆ ಹಾವಳಿಯನ್ನು ತಡೆಯಲು ಅರಣ್ಯ ಇಲಾಖೆ ವಿಫಲವಾಗಿದೆ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಮ್ಮ ವ್ಯಾಪ್ತಿಯಲ್ಲಿ ಹಲವು ಸಮಯದಿಂದ ಕಾಡಾನೆ ಹಾವಳಿ ಮಿತಿ ಮೀರಿದೆ. ಈ ಬಗ್ಗೆ ಅರಣ್ಯ ಇಲಾಖೆಗೂ ಮಾಹಿತಿ ನೀಡಿದ್ದೇವೆ ಆದರೂ ಯಾವುದೇ ಕ್ರಮ ಕೈಗೊಂಡಿಲ್ಲ. ತಕ್ಷಣವೇ ಇಲಾಖೆ ಕಾಡಾನೆಗಳನ್ನು ಕಾಡಿಗಟ್ಟುವ ಕಾರ್ಯ ಮಾಡುವಂತೆ ಒತ್ತಾಯಿಸಿದ್ದಾರೆ. :: ಟಿ.ಎ.ಪ್ರಕಾಶ್, ಸಣ್ಣ ಕೃಷಿಕ ಇಂಜಿಳಗೆರೆ…
ಮಡಿಕೇರಿ ಜು.24 : ಕೊಡಗು ಜಿ.ಪಂ, ಕರ್ನಾಟಕ ರಾಜ್ಯ ಪ್ರೌಢ ಸಹ ಶಿಕ್ಷಕರ ಸಂಘ , ಮಡಿಕೇರಿ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಸಂಯುಕ್ತಶ್ರಯದಲ್ಲಿ 2022-23ನೇ ಸಾಲಿನಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಪಡೆದ ಶಾಲೆ, ಶಿಕ್ಷಕರು ಮತ್ತು ಅತ್ಯುನ್ನತ ಸಾಧನೆಗೈದ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ ಮತ್ತು ಶೈಕ್ಷಣಿಕ ಕಾರ್ಯಾಗಾರ ನಡೆಯಿತು. ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಬೋಜೆಗೌಡ ಉದ್ಘಾಟಿಸಿ, ಎಸ್ಎಸ್ಎಲ್ಸಿಯಲ್ಲಿ ಶೇ.100ರಷ್ಟು ಅಂಕ ಪಡೆಯಲು ಕಾರಣರಾದ ಶಿಕ್ಷಕರನ್ನು ಹಾಗೂ ಉತ್ತಮ ಅಂಕ ಪಡೆದ ವಿಧ್ಯಾರ್ಥಿಗಳನ್ನು ಸನ್ಮಾನಿಸಿ, ಅಭಿನಂದಿಸಿದರು.
ಮಡಿಕೇರಿ ಜು.28 : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಮಡಿಕೇರಿ ಕಚೇರಿಯಲ್ಲಿ ಕಳೆದ 6 ವರ್ಷ 8 ತಿಂಗಳ ಕಾಲ ಪ್ರಥಮ ದರ್ಜೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ರಾಜು ಯಲ್ಲಪ್ಪ ಭೋವಿ ಅವರು ಉತ್ತರ ಕನ್ನಡ ಜಿಲ್ಲೆಯ ಕಾರವಾರಕ್ಕೆ ವರ್ಗಾವಣೆಗೊಂಡಿರುವ ಹಿನ್ನೆಲೆ ನಗರದ ವಾರ್ತಾ ಭವನ ಕಚೇರಿಯಲ್ಲಿ ಆತ್ಮೀಯವಾಗಿ ಬೀಳ್ಕೊಡಲಾಯಿತು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಯಲ್ಲಿ ರಾಜು ಯಲ್ಲಪ್ಪ ಭೋವಿಗೆ ಶಾಲೂ, ಫಲ ತಾಂಬೂಲ ನೀಡಿ ಸನ್ಮಾನಿಸಲಾಯಿತು. ವಾರ್ತಾಧಿಕಾರಿ ಚಿನ್ನಸ್ವಾಮಿ ಅವರು ಮಾತನಾಡಿ ರಾಜು ಯಲ್ಲಪ್ಪ ಭೋವಿ ಅವರು ಪ್ರಥಮ ದರ್ಜೆ ಸಹಾಯಕರಾಗಿ ಕಚೇರಿ ಕೆಲಸ ನಿರ್ವಹಣೆ, ಸಭೆ-ಸಮಾರಂಭ ಹಾಗೂ ಚುನಾವಣಾ ಸಂದರ್ಭದಲ್ಲಿ ಉತ್ತಮವಾಗಿ ಕೆಲಸ ನಿರ್ವಹಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಪ್ರಥಮ ದರ್ಜೆ ಸಹಾಯಕರಾದ ರಾಜು ಯಲ್ಲಪ್ಪ ಭೋವಿ ಅವರು ಸನ್ಮಾನ ಸ್ವೀಕರಿಸಿ ಮಾತನಾಡಿ ಕಳೆದ 6 ವರ್ಷ 8 ತಿಂಗಳಿಂದ ಮಡಿಕೇರಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸಿ ವರ್ಗಾವಣೆ ಹೊಂದಿದ್ದು, ಇಂದು ಬಿಡುಗಡೆ ಹೊಂದಿ ಹೋಗುತ್ತಿದ್ದೇನೆ.…
ಮಡಿಕೇರಿ ಜು.28 : ಪ್ರವಾಸಿತಾಣಗಳಲ್ಲಿ ಸುರಕ್ಷತಾ ಕ್ರಮಗಳನ್ನು ಪಾಲಿಸದ ಪ್ರವಾಸಿಗರ ಮೇಲೆ ನಿಯಮಾನುಸಾರ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಎಚ್ಚರಿಕೆ ನೀಡಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆ ಹಿನ್ನಲೆಯಲ್ಲಿ ಜಿಲ್ಲೆಯ ಬಹುತೇಕ ಜಲಾಶಯಗಳು, ಜಲಪಾತಗಳು, ನದಿಗಳು ಉಕ್ಕಿ ಹರಿಯುತ್ತಿವೆ, ಕಲ್ಲು ಬಂಡೆಗಳು ಜಾರುತ್ತಿವೆ. ಜಿಲ್ಲೆಯ ಪ್ರಕೃತಿ ಸೌಂದರ್ಯ ಮತ್ತಷ್ಟು ಹೆಚ್ಚಾಗಿದ್ದು, ಇವುಗಳನ್ನು ವಿಕ್ಷೀಸಲು ಬರುವಂತಹ ಸಾರ್ವಜನಿಕರು/ ಪ್ರವಾಸಿಗರು ಸೌಂದರ್ಯಕ್ಕೆ ಮನಸೋತು ಬಹಳ ಹತ್ತಿರದಿಂದ ಫೋಟೋ ಅಥವಾ ವಿಡಿಯೋ ತೆಗೆಯುವ, ರೀಲ್ಸ್ ಮಾಡುವ ಅನಗತ್ಯ ಸಾಹಸ ಮಾಡದಿರಿ, ಪ್ರವಾಸಿಗರು ಮತ್ತು ಸ್ಥಳೀಯರು ಹೊಸ ಪ್ರದೇಶದಲ್ಲಿ ಅಲ್ಲಿನ ಪರಿಸರದ ಬಗ್ಗೆ ಅರಿವಿರುವುದಿಲ್ಲ ಸ್ಥಳೀಯರ ಮಾತುಗಳನ್ನು ಗೌರವಿಸಿ, ಪ್ರವಾಸಿ ತಾಣಗಳಲ್ಲಿ ಅನುಸರಿಸಬೇಕಾದ ಕನಿಷ್ಠ ನಿಯಮಗಳ ಅನುಸರಿಸಿ, ಅಲ್ಲದೇ ಪ್ರವಾಸೋದ್ಯಮ ಇಲಾಖೆಯಿಂದ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ದೇಶಿಯ ಹಾಗೂ ವಿದೇಶಿಯ ಪ್ರವಾಸಿಗರಿಗೆ, ಸೂಕ್ತ ಸುರಕ್ಷತೆ ಮತ್ತು ಭದ್ರತೆಯನ್ನು ಕಲ್ಪಿಸುವ ದೃಷ್ಟಿಯಿಂದ ಪ್ರವಾಸಿ ಮಿತ್ರರನ್ನೂ…
ಮಡಿಕೇರಿ ಜು.28 : ನಗರದ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಬೋಧಕ ಆಸ್ಪತ್ರೆ ಬಳಿ 29 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ‘ಕ್ರಿಟಿಕಲ್ ಕೇರ್ ಯೂನಿಟ್ ಆಸ್ಪತ್ರೆ’ ನಿರ್ಮಾಣ ಸಂಬಂಧ ಸಂಸದರಾದ ಪ್ರತಾಪ್ ಸಿಂಹ ಅವರು ಅಧಿಕಾರಿಗಳಿಂದ ಮಾಹಿತಿ ಪಡೆದರು. ಈ ಕುರಿತು ಮಾತನಾಡಿದ ಸಂಬಂಧಪಟ್ಟ ಎಂಜಿನಿಯರ್ ರಾಜೇಶ್ ಅವರು ಕ್ರಿಟಿಕಲ್ ಕೇರ್ ಯೂನಿಟ್ ಆಸ್ಪತ್ರೆಯನ್ನು 45 ಸೆಂಟು ಜಾಗದಲ್ಲಿ ಬೋಧಕ ಆಸ್ಪತ್ರೆ ಹತ್ತಿರ ನಿರ್ಮಿಸಲು ಉದ್ದೇಶಿಸಲಾಗಿದೆ. ಈಗಾಗಲೇ ಟೆಂಡರ್ ಪ್ರಕ್ರಿಯೆ ಮುಗಿದಿದೆ ಎಂದರು. ಸದ್ಯ ಈಗಾಗಲೇ ನಿರ್ಮಾಣ ಆಗುತ್ತಿರುವ 450 ಹಾಸಿಗೆ ಆಸ್ಪತ್ರೆಯ ಜನರಲ್ ವಿಭಾಗದಲ್ಲಿ 100 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಆಸ್ಪತ್ರೆ ನವೆಂಬರ್ ವೇಳೆಗೆ ಪೂರ್ಣಗೊಳ್ಳಲಿದೆ. ಈಗಾಗಲೇ 100 ಕೋಟಿ ರೂ. ಬಿಡುಗಡೆಯಾಗಿದ್ದು, ಹೆಚ್ಚುವರಿಯಾಗಿ ಅನುದಾನ ಬೇಕಿದೆ ಎಂದು ಹೇಳಿದರು. ‘ಕ್ರಿಟಿಕಲ್ ಕೇರ್ ಯೂನಿಟ್ ಆಸ್ಪತ್ರೆ’ 15 ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದು ಮಾಹಿತಿ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಂಸದರಾದ ಪ್ರತಾಪ್ ಸಿಂಹ ಅವರು…
ಮಡಿಕೇರಿ ಜು.28 : ಕೊಡಗು ಜಿಲ್ಲೆಯ 62 ಕಡೆಗಳಲ್ಲಿ 4ಜಿ ಟವರ್ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದ್ದು, ಇದೇ ನವೆಂಬರ್ ಮೊದಲ ವಾರದಲ್ಲಿ ಚಾಲನೆಗೊಳ್ಳಲಿದೆ ಎಂದು ಲೋಕಸಭಾ ಸದಸ್ಯರಾದ ಪ್ರತಾಪ್ ಸಿಂಹ ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಅಧಿಕಾರಿಗಳ ಜೊತೆ ಸಭೆಯಲ್ಲಿ ಜಾಗ ಸಂಬಂಧಿಸಿದಂತೆ ಮಾಹಿತಿ ಪಡೆದು ಅವರು ಮಾತನಾಡಿದರು. ಈಗಾಗಲೇ ಕಂದಾಯ ಇಲಾಖೆಯಿಂದ 6 ಕಡೆಗಳಲ್ಲಿ ಹೊರತುಪಡಿಸಿ ಉಳಿದಂತೆ ಎಲ್ಲಾ ಕಡೆ ಭೂಮಿ ಕಾಯ್ದಿರಿಸಿದ್ದು, ಆ ನಿಟ್ಟಿನಲ್ಲಿ ಟವರ್ ನಿರ್ಮಾಣ ಮಾಡಿ ಅಂತರ್ಜಾಲ ಸಂಪರ್ಕ ಕಲ್ಪಿಸಲಾಗುತ್ತದೆ ಎಂದು ಸಂಸದರು ಹೇಳಿದರು. ಜಿಲ್ಲೆಯ 6 ಕಡೆಗಳಲ್ಲಿ ಮಾತ್ರ ಅರಣ್ಯ ಹಾಗೂ ಅರಣ್ಯ ಪೈಸಾರಿ ಜಾಗದಲ್ಲಿ ಅರಣ್ಯ ಇಲಾಖೆಯವರು ಜಾಗ ಕಾಯ್ದಿರಿಸುವ ಸಂಬಂಧ ಮಾಹಿತಿ ನೀಡಲಿದ್ದಾರೆ. ಆ ನಿಟ್ಟಿನಲ್ಲಿ ‘ಕೊಡಗು ಜಿಲ್ಲೆ ಜನತೆಯ ಬಹು ದಿನದ ಬೇಡಿಕೆ ಸದ್ಯ ಈಗ ಈಡೇರುತ್ತಿದೆ ಎಂದು ಸಂಸದರು ನುಡಿದರು.’ ಈ 62 ಸ್ಥಳಗಳ ಜೊತೆಗೆ ಉಳಿದಂತೆ ಪೆರಾಜೆ, ಚೆಂಬು, ಮೇಲ್ಚೆಂಬು,…
ಕುಶಾಲನಗರ ಜು.28 : ಸಮಾಜದಲ್ಲಿ ಉತ್ತಮ ನಾಗರೀಕರಾಗಿ ಜೀವನ ರೂಪಿಸಲು “ವಚನ ಸಾಹಿತ್ಯ” ಉತ್ತಮ ವೇದಿಕೆಯಾಗಿದ್ದು, ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಹೆಚ್ಚು ಸಹಕಾರಿಯಾಗಿದೆ ಎಂದು ಕೊಡಗು ವಿಶ್ವ ವಿದ್ಯಾನಿಲಯದ ಕನ್ನಡ ಉಪನ್ಯಾಸಕ ಡಾ. ಜಮೀರ್ ಅಹಮದ್ ಹೇಳಿದರು. ಕೊಡಗು ಜಿಲ್ಲಾ ವಚನ ಸಾಹಿತ್ಯ ವೇದಿಕೆ ವತಿಯಿಂದ ಕುಶಾಲನಗರದ ಮೂಕಾಂಬಿಕ ವಿದ್ಯಾಸಂಸ್ಥೆಯಲ್ಲಿ ಹಮ್ಮಿಕೊಂಡಿದ್ದ ” ಶಾಲಾ ಕಾಲೇಜುಗಳೆಡೆಗೆ ವಚನ ಸಾಹಿತ್ಯದ ನಡಿಗೆ ” ಎಂಬ ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು, ಹನ್ನೆರಡನೇ ಶತಮಾನದಲ್ಲಿ ಲಿಂಗ, ವರ್ಣ ಹಾಗೂ ವರ್ಗ ತಾರತಮ್ಯ ಇಲ್ಲದೇ ಎಲ್ಲರನ್ನೂ ಸರಿ ಸಮಾನವಾಗಿ ಕಾಣುವಂತಹ ವ್ಯವಸ್ಥೆಯನ್ನು ಅನುಭವ ಮಂಟಪದ ಮೂಲಕ ಸಮಾಜಕ್ಕೆ ಸಾರಿದವರು ಬಸವಾದಿ ಶರಣರು. ಇಂತಹ ಮಹಾ ಪುರುಷರಿಂದ ರೂಪುಗೊಂಡ ವಚನ ಸಾಹಿತ್ಯದ ಅರಿವು ಇಂದು ಅಗತ್ಯ ಎಂದು ಜಮೀರ್ ಹೇಳಿದರು. ಇಂದಿನ ವಿದ್ಯಾರ್ಥಿಗಳು ಹಾಗೂ ಯುವ ಜನಾಂಗ ವಿವೇಕಾನಂದರ ವಿವೇಕವಾಣಿ, ಬಸವಾದಿ ಶರಣರ ವಚನವಾಣಿ ಗಳನ್ನು ಅರಿತು ಅದರಂತೆ ನಡೆದಲ್ಲಿ ಸಮಾಜದಲ್ಲಿ ತಲೆ ಎತ್ತಿ ನಡೆಯುವಂತೆ ಮಾಡುತ್ತವೆ. ಹಾಗೆಯೇ…
ಮಡಿಕೇರಿ ಜು.28 : ಸರ್ಕಾರಿ ದಾಖಲೆಗಳಲ್ಲಿ ಕೊಡವರನ್ನು “ಕೊಡವ” ಎಂದು ನಮೂದಿಸುವ ಕುರಿತು ಕ್ಯಾಬಿನೆಟ್ ಅನುಮೋದನೆ ನೀಡಿದೆ. ಸರ್ಕಾರದ ಈ ಕ್ರಮಕ್ಕೆ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಶ್ಲಾಘನೆ ವ್ಯಕ್ತಪಡಿಸಿದೆ. ಕಳೆದ 15 ವರ್ಷಗಳ ಸಿಎನ್ಸಿಯ ಸತತ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ ಎಂದು ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಹರ್ಷ ವ್ಯಕ್ತಪಡಿಸಿದ್ದಾರೆ. ಕೊಡವರ ಕುಲ ಸಮಸ್ಯೆಗೆ ಸಂಬಂಧಿಸಿದ ಅತಿ ಪ್ರಧಾನ ಬೇಡಿಕೆಗಳಲ್ಲಿ ಒಂದಾದ “ಕೊಡವ” ಪದವನ್ನು ಕ್ಯಾಬಿನೆಟ್ ನಿರ್ಣಯದ ಮೂಲಕ ಅಧಿಕೃತಗೊಳಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದಂತೆ ನಡೆದಿದ್ದಾರೆ. “ಕೊಡವ” ಎನ್ನುವ ಉಜ್ವಲ ಶಾಸ್ತ್ರೀಯ ನಾಮಕ್ಕೆ ಶಾಸನಬದ್ಧ ಸ್ಥಿರೀಕರಣ ದೊರೆತ್ತಿದ್ದು, ಇದು ಸಿಎನ್ಸಿಯ ಮಹತ್ವದ ಮೈಲುಗಲ್ಲಾಗಿದೆ. ಕೊಡವರನ್ನು “ಕೊಡವ” ಎಂದು ನಮೂದಿಸದೆ “ಕೊಡಗರು” ಎಂದು ನಮೂದಿಸುವ ಮೂಲಕ ಕೊಡವ ಬುಡಕಟ್ಟು ಆದಿಮ ಸಂಜಾತ ಮೂಲನಿವಾಸಿಗಳ ಅಸ್ತಿತ್ವದ ಬಗ್ಗೆ ಆತಂಕ ಮೂಡಿಸಲಾಗುತ್ತಿತ್ತು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಸಿಎನ್ಸಿ ಸಂಘಟನೆ 2008 ರಿಂದಲೇ ಹೋರಾಟವನ್ನು ಆರಂಭಿಸಿತು. ಕೊಡವರ ಭಾವನೆಯನ್ನು ಅರ್ಥ ಮಾಡಿಕೊಂಡು ನಮ್ಮ ಬೇಡಿಕೆಯನ್ನು…






