ಲೇಖಕ: admin

ಸೋಮವಾರಪೇಟೆ ನ.21 NEWS DESK : ಹೊಸೂರು ಬೆಟ್ಟದ ಮೇಲಿರುವ ಶ್ರೀ ಬಸವೇಶ್ವರ ಮೂರ್ತಿಗೆ 2.8 ಕೆಜಿ ತೂಕದ ಬೆಳ್ಳಿಯ ಮುಖವಾಡವನ್ನು ನೀಡಿದ ಸೋಮವಾರಪೇಟೆ ಉದ್ಯಮಿ ಹೆಚ್.ಬಿ.ಹೃಷಿಕೇಶ್ ಅವರನ್ನು ದೇವಾಲಯದ ಕೌಟೆಕಾಯಿ ಜಾತ್ರೋತ್ಸವ ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಲಾಯಿತು. ದೇವಾಲಯ ಆಡಳಿತ ಮಂಡಳಿಯ ರಮೇಶ್, ಎಚ್.ಟಿ.ಪುಟ್ಟೇಗೌಡ, ಜಗದೀಶ್ ಗಣ್ಯರಾದ ಪ್ರತಿಭಾ ಮಂಜು, ಮುರುಳಿ ಮೋಹನ್ ಇದ್ದರು.

Read More

ಸೋಮವಾರಪೇಟೆ ನ.21 NEWS DESK : ಇಂದಿರಾಗಾಂಧಿ ಅಭಿಮಾನಿಗಳ ಸಂಘದ ವತಿಯಿಂದ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ 108ನೇ ಹುಟ್ಟುಹಬ್ಬವನ್ನು ಆಚರಿಸಲಾಯಿತು. ಪಟ್ಟಣದ ಪುಟ್ಟಪ್ಪ ವೃತ್ತದಲ್ಲಿ ಸಂಘದ ಅಧ್ಯಕ್ಷ ಹೆಚ್.ಎ.ನಾಗರಾಜ್ ಅವರು ಇಂದಿರಾಗಾಂಧಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಇಂದಿರಾ ಕ್ಯಾಂಟಿನ್‍ನಲ್ಲಿ ಸೇವೆ ಸಲ್ಲಿಸುತ್ತಿರುವ ನೌಕರ ಪವನ್ ಅವರನ್ನು ಇದೇ ಸಂದರ್ಭ ಸನ್ಮಾನಿಸಲಾಯಿತು. ಸಂಘದ ಪದಾಧಿಕಾರಿಗಳಾದ ರವೀಂದ್ರ, ಅಜಯ್, ರವಿ, ಪಳನಿಸ್ವಾಮಿ, ವೇಲುಸ್ವಾಮಿ, ಧರ್ಮ, ನಾಗರಾಜು, ಶೇಷಪ್ಪ, ಕುಮಾರ, ನವೀನ್ ಇದ್ದರು.

Read More

ಗೋಣಿಕೊಪ್ಪ ನ.21 NEWS DESK : ಮಕ್ಕಳಲ್ಲಿ ನಾಯಕತ್ವ ಗುಣಗಳು ಬೆಳೆಯಬೇಕಾದರೆ ಸಂಘ ಸಂಸ್ಥೆಗಳಲ್ಲಿ ಸೇವೆಯನ್ನು ತೊಡಗಿಸಿಕೊಳ್ಳಬೇಕು ಎಂದು ಲಯನ್ಸ್ ಕ್ಲಬ್ ಪ್ರಾದೇಶಿಕ ಗವರ್ನರ್ ಕುಡುಪಿ ಅರವಿಂದ ಶೆಣೈ ತಿಳಿಸಿದರು. ಅಪ್ಪಚ್ಚು ಕವಿ ವಿದ್ಯಾಲಯದ ಸಭಾಂಗಣದಲ್ಲಿ ಲಯನ್ಸ್ ಕ್ಲಬ್, ಗೋಣಿಕೊಪ್ಪದ ಆಂಗ್ಲ ಸಂಸ್ಥೆಯಾಗಿ ಪೊನ್ನಂಪೇಟೆ ಅಪ್ಪಚ್ಚುಕವಿ ವಿದ್ಯಾಲಯದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದ ಲಿಯೋ ಕ್ಲಬ್ ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳಲ್ಲಿ, ನಾಯಕತ್ವದ ಗುಣಗಳ ಜತೆಗೆ ಸಾಮಾಜಿಕ ಕಳಕಳಿಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಮತ್ತು ಸಾಮಾಜಿಕ ಜವಾಬ್ದಾರಿಯ ಅನುಭವಗಳನ್ನು ನೀಡಲು. ಜತೆಗೆ ತಮ್ಮ ಪ್ರತಿಭೆಗಳಿಗೆ ಅವಕಾಶಗಳನ್ನ ಒದಗಿಸಿಕೊಳ್ಳುವ ವ್ಯವಸ್ಥೆಯನ್ನು ನೀಡುವ ಉದ್ದೇಶದೊಂದಿಗೆ ಲಿಯೋ ಕ್ಲಬ್ ಸ್ಥಾಪನೆ ಮಾಡಲಾಗಿದೆ.ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಂಗಳೂರು, ಹಾಸನ ಜಿಲ್ಲೆಗಳಲ್ಲಿ ಸುಮಾರು 120 ಲಯನ್ಸ್ ಕ್ಲಬ್ ಗಳು ಕಾರ್ಯ ನಿರ್ವಹಿಸುತ್ತಿದೆ. ಅದರ ಜತೆಗೆ 40 ಲಿಯೋ ಕ್ಲಬ್ ಗಳು ಅಸ್ತಿತ್ವಕ್ಕೆ ಬಂದಿದೆ. 41ನೇಯ ಲಿಯೋ ಕ್ಲಬ್ ಸ್ಥಾಪನೆಯನ್ನು ಅಪ್ಪಚ್ಚು ಕವಿ ವಿದ್ಯಾಲಯದ ವಿದ್ಯಾರ್ಥಿಗಳ ಮುಖಾಂತರ ನೆರವೇರಿದೆ ಎಂದು ತಿಳಿಸಿದರು. ಅಪ್ಪಚ್ಚು ಕವಿ…

Read More

ಮಡಿಕೇರಿ ನ.20 NEWS DESK : ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆ ಸೇರಿದಂತೆ ವಿವಿಧ ಸಾಧನೆ ಮಾಡಬೇಕಾದರೆ ಒಳ್ಳೆಯ ಪುಸ್ತಕ ಓದುವ ಅಭ್ಯಾಸ ಬೆಳೆಸಿಕೊಳ್ಳುವಂತಾಗಬೇಕು ಎಂದು ಜಿ.ಪಂ.ಸಿಇಒ ಆನಂದ ಪ್ರಕಾಶ್ ಮೀನಾ ಅವರು ಹೇಳಿದ್ದಾರೆ. ಸಾರ್ವಜನಿಕ ಗ್ರಂಥಾಲಯ ಇಲಾಖೆ, ಜಿಲ್ಲಾ ಕೇಂದ್ರ ಗ್ರಂಥಾಲಯ ವತಿಯಿಂದ ನಗರದ ಮಹಾತ್ಮ ಗಾಂಧಿ ಜಿಲ್ಲಾ ಕೇಂದ್ರ ಗ್ರಂಥಾಲಯದಲ್ಲಿ ನಡೆದ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ-2025 ದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಸಾಹಿತಿ ಕೆ.ಪಿ.ಬಾಲಸುಬ್ರಹ್ಮಣ್ಯ ಕಂಜರ್ಪಣೆ ಅವರು ಮಾತನಾಡಿ ಪ್ರತೀ ವರ್ಷವೂ ನವೆಂಬರ್ 14 ರಿಂದ ಒಂದು ವಾರ ಕಾಲ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹವನ್ನು ನಡೆಸಲಾಗುತ್ತದೆ. ನೆಹರೂ ಅವರ ಜನ್ಮದಿನಾಂಕದಿಂದ ಇದು ಒಂದು ವಾರ ನಡೆಯುತ್ತದೆ ಎಂದರು. ಭಾರತದಲ್ಲಿ ಗ್ರಂಥಾಲಯ ವಿಜ್ಞಾನದ ಪಿತಾಮಹರೆಂದೇ ಹೆಸರಾದ ದಿವಂಗತ ಡಾ.ಎಸ್.ಆರ್.ರಂಗನಾಥನ್ (1892-1972) ಅವರ ನೆನಪಿನಲ್ಲಿ ಈ ಸಪ್ತಾಹ ನಡೆಸಲಾಗುತ್ತದೆ. ಗ್ರಂಥಾಲಯ ವಿದ್ವಾಂಸರಾದದ್ದು ಆನಂತರ, ಮೂಲತಃ ಅವರು ಖ್ಯಾತ ಗಣಿತಶಾಸ್ತ್ರಜ್ಞರೂ ಶಿಕ್ಷಣ ತಜ್ಞರೂ ಆಗಿದ್ದರು. ಕರ್ನಾಟಕದ ಮಂಗಳೂರಿನ ಸರಕಾರಿ ಕಾಲೇಜಿನಲ್ಲೂ ಅವರು…

Read More

ಮಡಿಕೇರಿ ನ.20 NEWS DESK : ಮಡಿಕೇರಿ 8ನೇ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನಾಚರಣೆ ಅಂಗವಾಗಿ ಕೊಡಗು ಜಿಲ್ಲೆಯಲ್ಲಿ ನಡೆದ ಪ್ರಕೃತಿ ಚಿಕಿತ್ಸಾ ಜಾಗೃತಿ ಶಿಬಿರದ ಸಮಾರೋಪ ಸಮಾರಂಭವು ನಗರದ ಜಿಲ್ಲಾ ಆಯುಷ್ ಆಸ್ಪತ್ರೆಯಲ್ಲಿ ಸಂಪನ್ನಗೊಂಡಿತು. ಸಮಾರೋಪ ಸಮಾರಂಭದ ಉದ್ಘಾಟಿಸಿ ಮಾತನಾಡಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್‍ನ ಜಿಲ್ಲಾ ನಿರ್ದೇಶಕರಾದ ಲೀಲಾವತಿ ಮಾತನಾಡಿ, ಪೋಷಕರು ಮಕ್ಕಳಿಗೆ ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳುವಂತೆ ಪ್ರೇರೇಪಿಸಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಶೈಲಜಾ, ದೋಷರಹಿತ ಮಾನವನ ಸರ್ವತೋಮುಖ ಸ್ವಾಸ್ಥ ಕಾಪಾಡುವ ಆಯುಷ್ ಪ್ರಕೃತಿ ಚಿಕಿತ್ಸಾ ವಿಧಾನವನ್ನು ಬಳಸುವಂತೆ ಮಾರ್ಗದರ್ಶನ ನೀಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಆಯುಷ್ ಇಲಾಖೆ ಆಡಳಿತ ಅಧಿಕಾರಿ ಕಾವೇರಪ್ಪ, ಮಡಿಕೇರಿ ಯೋಗ ಒಕ್ಕೂಟದ ಮಹೇಶ್ ಕೆ.ಕೆ. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಜಿಲ್ಲಾ ಬೋಧಕ ಆಸ್ಪತ್ರೆ (KOIMS) ಮಡಿಕೇರಿಯ ಆಯುಷ್ ವಿಭಾಗದ ವೈದ್ಯಾಧಿಕಾರಿ ಡಾ.ಅರುಣ್ ಅವರು ಶಿಬಿರದ ವರದಿ ಮಂಡಿಸಿ ಗಣ್ಯರನ್ನು ಸ್ವಾಗತಿಸಿದರು. ಡಾ.…

Read More

ಮಡಿಕೇರಿ ನ.20 NEWS DESK : ಇದೇ ನ.26 ರಂದು ಸಂವಿಧಾನ ದಿನಾಚರಣೆಯನ್ನು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಆಚರಿಸಲಾಗುತ್ತಿದ್ದು, ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ಸೂಚಿಸಿದ್ದಾರೆ. ವಿಡಿಯೋ ಕಾನ್ಪರೆನ್ಸ್ ಮೂಲಕ ಮಾತನಾಡಿದ ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಸರ್ಕಾರ ಸಂವಿಧಾನ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ಸೂಚಿಸಿದೆ. ಆ ದಿಸೆಯಲ್ಲಿ ಜಾಥ ಹಾಗೂ ಸಭಾ ಕಾರ್ಯಕ್ರಮ ಏರ್ಪಡಿಸಿ ಸಂವಿಧಾನದ ಮಹತ್ವ ಕುರಿತು ಉಪನ್ಯಾಸ ನೀಡುವಂತಾಗಬೇಕು ಎಂದು ಸಲಹೆ ಮಾಡಿದರು. ಕಾರ್ಯಕ್ರಮ ಆಯೋಜನೆ ಸಂಬಂಧ ವಿವಿಧ ಇಲಾಖೆ ಅಧಿಕಾರಿಗಳ ಜೊತೆ ಸರ್ಕಾರೇತರ ಸಂಸ್ಥೆಗಳು ಹಾಗೂ ವಿವಿಧ ಸಮಾಜದ ಮುಖಂಡರನ್ನು ಆಹ್ವಾನಿಸಿ ಸಂವಿಧಾನ ದಿನಾಚರಣೆ ಆಚರಿಸುವಂತೆ ನಿರ್ದೇಶನ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಶೇಖರ್ ಅವರು ನ.26 ರಂದು ಸಂವಿಧಾನ ದಿನಾಚರಣೆ ಪ್ರಯುಕ್ತ ಜಾಥ ಏರ್ಪಡಿಸಬೇಕಿದೆ. ತೆರೆದ ವಾಹನದಲ್ಲಿ ಅಂಬೇಡ್ಕರ್ ವೇಷಧಾರಿ ವಿದ್ಯಾರ್ಥಿ ಒಳಗೊಂಡಂತೆ ಸಂವಿಧಾನ ಪುಸ್ತಕ ಪ್ರದರ್ಶಿಸಿ ತೆರಳಬೇಕಿದೆ. ಅಂಬೇಡ್ಕರ್ ಅವರ ಚಿಂತನೆಗಳು,…

Read More

ಮಡಿಕೇರಿ ನ.20 NEWS DESK : ದೇಶದ ಆರ್ಥಿಕತೆಗೆ ಸಹಕಾರ ಕ್ಷೇತ್ರದ ಕೊಡುಗೆ ಅಪಾರ. ಸಹಕಾರ ಸಂಸ್ಥೆಗಳು ಎಲ್ಲಾ ವಲಯಗಳನ್ನು ವ್ಯಾಪಿಸಿದ್ದು, ಗ್ರಾಮೀಣ ಪ್ರದೇಶಗಳಲ್ಲಿಯೂ ಸೇವೆ ಒದಗಿಸುತ್ತಾ ಸಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುಜಾ ಕುಶಾಲಪ್ಪ ಹೇಳಿದರು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ, ಕೊಡಗು ಜಿಲ್ಲಾ ಸಹಕಾರ ಯೂನಿಯನ್, ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್, ಸಹಕಾರ ಇಲಾಖೆ, ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ಹಾಗೂ ಸ್ಥಳೀಯ ಎಲ್ಲಾ ಸಹಕಾರ ಸಂಘಗಳ ಸಂಯುಕ್ತ ಆಶ್ರಯದಲ್ಲಿ ನಗರದ ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‍ನ ಉನ್ನತಿ ಭವನದ ಪಂದ್ಯಂಡ ಐ.ಬೆಳ್ಯಪ್ಪ ಸ್ಮಾರಕ ಸಭಾಂಗಣದಲ್ಲಿ ನಡೆದ 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಮಾರೋಪ ಹಾಗೂ ಕೊಡಗು ಜಿಲ್ಲಾ ಸಹಕಾರ ಯೂನಿಯನ್‍ನಿಂದ ಆಯ್ಕೆಗೊಂಡ ಕೊಡಗಿನ ಶ್ರೇಷ್ಠ ಸಹಕಾರಿಗಳಿಗೆ ಪ್ರಶಸ್ತಿ ಪ್ರದಾನ ಮಾಡಿ ಅವರು, ಮಾತನಾಡಿದರು. ಸಹಕಾರ ಎಂದರೆ ಸಮೂಹಿಕ ನಂಬಿಕೆ, ಶ್ರಮ, ನ್ಯಾಯದ ಹಂಚಿಕೆ. ಸಹಕಾರ ಚಳುವಳಿ ದೇಶದ ಆರ್ಥಿಕತೆಗೆ…

Read More

ವಿರಾಜಪೇಟೆ ನ.20 NEWS DESK : ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಕೊಡವ ಮುಸ್ಲಿಂ ಸ್ಪೋರ್ಟ್ಸ್ ಅಕಾಡೆಮಿ (ಕೆ.ಎಂ.ಎಸ್.ಎ)ಯ ಅಧಿಕೃತ  ಲಾಂಛನವನ್ನು  ಅನಾವರಣಗೊಳಿಸಲಾಯಿತು. ಸಂಸ್ಥೆಗಾಗಿ ವಿನ್ಯಾಸಗೊಳಿಸಲಾಗಿದ್ದ ನೂತನ ಲಾಂಛನವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಆಗಿರುವ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಬೆಂಗಳೂರಿನ ವಿಧಾನಸೌಧದ 2ನೇ ಮಹಡಿಯಲ್ಲಿರುವ ತಮ್ಮ ಕಚೇರಿಯಲ್ಲಿ  ಅನಾವರಣಗೊಳಿಸಿದರು. ಈ ಸಂದರ್ಭ ಮಾತನಾಡಿದ ಪೊನ್ನಣ್ಣ ಅವರು, ಕ್ರೀಡೆಗಳು ಜನರ ನಡುವೆ ಸೌಹಾರ್ದ ಬೆಳೆಸುತ್ತವೆ. ವಿವಿಧ ಹಿನ್ನೆಲೆಯ ಜನರು ಒಟ್ಟಾಗಿ ಆಡಲು ಮತ್ತು ಒಟ್ಟಿಗೆ ಕೆಲಸ ಮಾಡಲು ಅವಕಾಶ ನೀಡುತ್ತವೆ. ಮುಖ್ಯವಾಗಿ ಕ್ರೀಡಾಕೂಟಗಳು ಸಮುದಾಯಗಳನ್ನು ಒಟ್ಟುಗೂಡಿಸುತ್ತವೆ. ಕ್ರೀಡೆಗಳು ಮನಸ್ಸಿನ ಉಲ್ಲಾಸವನ್ನು ನೀಡುವುದರ ಜೊತೆಗೆ, ಒತ್ತಡವನ್ನು ಕಡಿಮೆ ಮಾಡಲು ಸಹಾಯಕವಾಗಿವೆ. ಇದು ಶಾಂತಿಯುತ ವಾತಾವರಣ ನಿರ್ಮಾಣಕ್ಕೆ ಅವಕಾಶ ಕಲ್ಪಿಸುತ್ತದೆ. ಈ ಕಾರಣಕ್ಕಾಗಿ ಕ್ರೀಡಾ ಸಂಸ್ಥೆಗಳು ಹೆಚ್ಚು ಮೂಡಿ ಬರಬೇಕಾಗಿದೆ ಎಂದು ಹೇಳಿದರು. ಕ್ರೀಡೆಗಳು ಶಿಸ್ತು ಮತ್ತು ಪರಸ್ಪರ ಗೌರವದ ಮೌಲ್ಯಗಳನ್ನು ಕಲಿಸುತ್ತವೆ, ಇದು ಸಮಾಜದಲ್ಲಿ ಉತ್ತಮ ಸಂಬಂಧಗಳನ್ನು ನಿರ್ಮಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಕ್ರೀಡೆಗಳಿಂದ ಕ್ರೀಡಾಪಟುಗಳು…

Read More

ಪುತ್ತೂರು ನ.20 NEWS DESK : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಕಾಲೇಜು ವಾರ್ಷಿಕೋತ್ಸವ ಸಮಾರಂಭ ನವರಂಗ್-2025 ಮತ್ತು ಕಾಲೇಜು ಆವರಣದಲ್ಲಿ ಪ್ರಾರಂಭಗೊಳ್ಳಲಿರುವ ಸ್ಟಾರ್ಟ್-ಅಪ್ ಗಳ ಉದ್ಘಾಟನೆ ನ.21 ನಡೆಯಲಿದೆ. ಬೆಳಿಗ್ಗೆ 9.30ಕ್ಕೆ ಕಾಲೇಜಿನ ಕೃಷ್ಣ ಚೇತನಾ ಕಟ್ಟಡದಲ್ಲಿ ನಿರ್ಮಾಣಗೊಂಡಿರುವ ನೂತನ ಸ್ಟಾರ್ಟ್-ಅಪ್ ವಿಭಾಗ ಲಾಂಚ್‍ವರ್ಸ್‍ನಲ್ಲಿ ದ ವೆಬ್ ಪೀಪಲ್ ಮತ್ತು ಆಕಾಂಕ್ಷಾ ಚಾರಿಟೇಬಲ್ ಟ್ರಸ್ಟ್ ಇದರ ಕಛೇರಿಗಳ ಉದ್ಘಾಟನೆ ನಡೆಯಲಿದೆ. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ ಭಟ್ ಮತ್ತು ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದ ಕ್ಯಾ.ಬೃಜೇಶ್ ಚೌಟ ದೀಪ ಪ್ರಜ್ವಲನೆ ಮಾಡಲಿದ್ದಾರೆ. ದ ವೆಬ್ ಪೀಪಲ್ ಸಂಸ್ಥೆಯ ಮುಖ್ಯ ಕಾರ್ಯನಿರ್ವಣಾಧಿಕಾರಿ ಆದಿತ್ಯ ಕಲ್ಲೂರಾಯ, ಮುಖ್ಯ ಕಾರ್ಯಾಚರಣಾಧಿಕಾರಿ ಶರತ್ ಶ್ರೀನಿವಾಸ್, ಆಕಾಂಕ್ಷಾ ಚಾರಿಟೇಬಲ್ ಟ್ರಸ್ಟ್‍ನ ಕಾರ್ಯನಿರ್ವಹಣಾ ನಿರ್ದೇಶಕ ಡಾ.ಶ್ರೀಶ ಭಟ್, ಕಾಲೇಜು ಆಡಳಿತ ಮಂಡಳಿಯ ಪದಾಧಿಕಾರಿಗಳು, ಪ್ರಾಂಶುಪಾಲರು ಮತ್ತು ಇತರ ಗಣ್ಯರು ಇದರಲ್ಲಿ ಭಾಗವಹಿಸುತ್ತಾರೆ. ಬೆಳಿಗ್ಗೆ 10 ಗಂಟೆಗೆ ಕಾಲೇಜು ವಾರ್ಷಿಕೋತ್ಸವ ಸಮಾರಂಭ ನವರಂಗ್-2025…

Read More

ಬೆಂಗಳೂರು ನ.20 NEWS DESK : ಕರ್ನಾಟಕ ವಿಧಾನಸಭೆಯ 2025 ನೇ ಸಾಲಿನ ಕರ್ನಾಟಕ ಭೂ ಕಂದಾಯ (ಎರಡನೇ ತಿದ್ದುಪಡಿ) ವಿಧೇಯಕದ, ಪರಿಶೀಲನ ಸಮಿತಿಯ ಸಭೆ ಇಂದು ಬೆಂಗಳೂರಿನ ವಿಧಾನಸೌಧದ ಕೊಠಡಿಯಲ್ಲಿ ನಡೆಯಿತು. ಕರ್ನಾಟಕ ರಾಜ್ಯ ಘನ ಸರಕಾರದ  ಕಂದಾಯ ಸಚಿವರು ಹಾಗೂ ಪರಿಶೀಲನ ಸಮಿತಿಯ ಅಧ್ಯಕ್ಷರಾದ ಕೃಷ್ಣಭೈರೇಗೌಡ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಮಿತಿಯ ಎಲ್ಲಾ ಸದಸ್ಯರು ಭಾಗವಹಿಸಿದರು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎಸ್.ಪೊನ್ನಣ್ಣ ಅವರು, ಮಡಿಕೇರಿ ಶಾಸಕರಾದ ಮಂಥರ್ ಗೌಡ  ಉಪಸ್ಥಿತರಿದ್ದರು. ಕೊಡಗು ಜಿಲ್ಲೆಯ ದಶಕಗಳ ಸಮಸ್ಯೆಯಾಗಿರುವ ಪಟ್ಟೇದಾರ್ ಭೂ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮ ವಹಿಸುವ ಸಂಬಂಧ ಇಂದು ಮೂರನೇ ಬಾರಿಗೆ ಕರ್ನಾಟಕ ವಿಧಾನಸಭೆ ಪರಿಶೀಲನಾ ಸಮಿತಿ ಸಭೆಯಲ್ಲಿ ಚರ್ಚಿಸಲಾಯಿತು. ಸಮಿತಿಯವರೊಂದಿಗೆ ಚರ್ಚಿಸಿದ  ಶಾಸಕರಾದ ಎ.ಎಸ್ ಪೊನ್ನಣ್ಣ, ಕೊಡಗಿನ ಜನತೆಗೆ ಮಾರಕವಾದ ಕೆಲವು ತಿದ್ದುಪಡಿಗಳನ್ನು ಕೈ ಬಿಟ್ಟು, ಕಂದಾಯ ವಿಷಯದಲ್ಲಿ ಹಲವು ದಶಕಗಳಿಂದ ಸಂಕಷ್ಟದಲ್ಲಿರುವ ಕೊಡಗಿನ ಜನತೆಗೆ…

Read More