ಮಡಿಕೇರಿ ಜು.28 : ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಪ್ರಯುಕ್ತ ಜು.31 ರಂದು ಮಡಿಕೇರಿಯ ಪತ್ರಿಕಾ ಭವನದಲ್ಲಿ ಆಯೋಜಿಸಿರುವ ಒಂದು ಪ್ರೇಮ ಕಥೆ ನಾಟಕ ಪ್ರದರ್ಶನಕ್ಕೆ ವಿಧಾನ ಪರಿಷತ್ ಸದಸ್ಯ ಅಡಗೂರು ಎಚ್.ವಿಶ್ವನಾಥ್ ಚಾಲನೆ ನೀಡಲಿದ್ದಾರೆ. ಅಂದು ರಾತ್ರಿ 7 ಗಂಟೆಗೆ ಬೆಂಗಳೂರಿನ ರಂಗಪಯಣ ತಂಡದಿಂದ ಲಿಮ್ಕಾ ಬುಕ್ ಆಫ್ ರೆಕಾರ್ಡ್ನಲ್ಲಿ ಸ್ಥಾನ ಪಡೆಯುವ ನಾಟಕ ಪ್ರದರ್ಶನ ಪ್ರಾರಂಭವಾಗಲಿದೆ. ಕೊಡಗು ಬೆಳ್ಳಿ ಮಹೋತಸ್ವ ಆಚರಣಾ ಸಮಿತಿ ಅಧ್ಯಕ್ಷ ಡಾ.ಉಳ್ಳಿಯಂಡ ಎಂ. ಪೂವಯ್ಯ ಅಧ್ಯಕ್ಷತೆಯಲ್ಲಿ ಉದ್ಘಾಟನಾ ಕಾರ್ಯಕ್ರಮ ಆಯೋಜಿಸಲಾಗಿದೆ. ಮುಖ್ಯಅತಿಥಿಗಳಾಗಿ ಶಕ್ತಿ ಪತ್ರಿಕೆ ಪ್ರಧಾನ ಸಂಪಾದಕ ಜಿ. ರಾಜೇಂದ್ರ, ವಾಣಿಜ್ಯೋದ್ಯಮಿತಿ ಕೆ.ಎಂ.ಬಿ. ಗಣೇಶ್, ಹಿರಿಯ ಕಲಾವಿದ ನೆರವಂಡ ಉಮೇಶ್ ಪಾಲ್ಗೊಳ್ಳಲಿದ್ದಾರೆ. ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷೆ ಬಿ.ಆರ್. ಸವಿತಾ ರೈ, ಪ್ರಧಾನ ಕಾರ್ಯದರ್ಶಿ ಬಾಚರಣಿಯಂಡ ಅನು ಕಾರ್ಯಪ್ಪ, ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ಪ್ರಧಾನ ಕಾರ್ಯದರ್ಶಿ ಕೆ.ಕೆ. ರೆಜಿತ್ಕುಮಾರ್ ಉಪಸ್ಥಿತರಿರುತ್ತಾರೆಂದು ಪ್ರಕಟಣೆ ತಿಳಿಸಿದೆ.
ಲೇಖಕ: admin
ಮಡಿಕೇರಿ ಜು.28 : ಜನ ಸಾಮಾನ್ಯರ ಮೂಲಭೂತ ಸಮಸ್ಯೆಗಳಿಗೆ ಸಂವಿಧಾನಾತ್ಮಕವಾಗಿ ಮತ್ತು ಕಾನೂನಿಗೆ ಅನುಗುಣವಾಗಿ ಪರಿಹಾರವನ್ನು ಕಂಡುಕೊಳ್ಳಬೇಕಿದೆ. ಜನರ ಭಾವನೆಗಳೊಂದಿಗೆ ಚೆಲ್ಲಾಟವಾಡುವುದಕ್ಕೆ ನಾವೆಂದಿಗೂ ಹೋಗುವುದಿಲ್ಲ ಎಂದು ವಿರಾಜಪೇಟೆ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟೀರ ಎಸ್.ಪೊನ್ನಣ್ಣ ತಿಳಿಸಿದ್ದಾರೆ. ಕೊಡಗು ಗೌಡ ಸಮಾಜಗಳ ಒಕ್ಕೂಟ, ಮಡಿಕೇರಿ ಕೊಡಗು ಗೌಡ ಸಮಾಜ ಸೇರಿದಂತೆ ಜಿಲ್ಲೆಯ ಎಲ್ಲಾ ಗೌಡ ಸಮಾಜ ಮತ್ತು ಗೌಡ ಸಂಘಟನೆಗಳ ವತಿಯಿಂದ ನಗರದ ಗೌಡ ಸಮಾಜದ ಸಭಾಂಗಣದಲ್ಲಿ ಇಬ್ಬರು ಶಾಸಕರುಗಳಾದ ಎ.ಎಸ್. ಪೊನ್ನಣ್ಣ ಹಾಗೂ ಡಾ.ಮಂತರ್ ಗೌಡ ಅವರಿಗೆ ಅಭಿನಂದನಾ ಸಮಾರಂಭ ನಡೆಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಪೊನ್ನಣ್ಣ ಸಮಸ್ಯೆಗಳನ್ನು ಚರ್ಚೆಯಿಂದ ಬಗೆಹರಿಸಿಕೊಳ್ಳಲು ಸಾಧ್ಯವಿದೆ. ಮುಂದಿನ ಐದು ವರ್ಷಗಳ ಆಡಳಿತದ ಅವಧಿಯಲ್ಲಿ ಜಿಲ್ಲೆಯನ್ನು ಪ್ರತಿನಿಧಿಸುವ ನಾವಿಬ್ಬರು ಶಾಸಕರು, ಜಾತಿ ಮತ ಭೇದಗಳನ್ನು ಮರೆತು, ಜನರ ಸಂಕಷ್ಟಗಳಿಗೆ ಸ್ಪಂದಿಸುವ ಮೂಲಕ ಸಾಮರಸ್ಯದ ಸುಭದ್ರ ನಾಡನ್ನು ಕಟ್ಟುವ ಪ್ರಯತ್ನ ಮಾಡಬೇಕಿದೆ. ಇದಕ್ಕೆ ಪೂರಕವಾಗಿ ಜಿಲ್ಲೆಯ ಎಲ್ಲಾ ವರ್ಗದ ಮಂದಿ ಮಾರ್ಗದರ್ಶಕರಾಗಿರಲಿ ಎಂದು…
ಕುಶಾಲನಗರ, ಜು.28 : ಮಳೆಗಾಲದಲ್ಲಿ ಸೊಳ್ಳೆಗಳಿಂದ ಹರಡುವ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಪ್ರತಿಯೊಬ್ಬರೂ ಮುಂಜಾಗ್ರತೆ ವಹಿಸುವ ಮೂಲಕ ಉತ್ತಮ ಆರೋಗ್ಯ ರಕ್ಷಣೆಗೆ ಸೂಕ್ತ ಕ್ರಮ ವಹಿಸಬೇಕು ಎಂದು ಎಂದು ಜಿಲ್ಲಾ ರೋಗವಾಹಕ ಆಶ್ರಿತಾ ರೋಗಗಳ ನಿಯಂತ್ರಣಾಧಿಕಾರಿ ಡಾ|ಬಿ.ಎಲ್. ಶ್ರೀನಿವಾಸ್ ಹೇಳಿದರು. ಕುಶಾಲನಗರ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕುಶಾಲನಗರ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿ, ತಾಲ್ಲೂಕು ಶಾಲಾ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಕೊಡಗು ಜಿಲ್ಲಾ ಸಮಿತಿಯ ಆಶ್ರಯದಲ್ಲಿ ತಾಲ್ಲೂಕಿನ ಪ್ರೌಢಶಾಲಾ ವಿಜ್ಞಾನ ಶಿಕ್ಷಕರಿಗೆ ರಾಷ್ಟ್ರೀಯ ಮಲೇರಿಯಾ ಮಾಸಾಚರಣೆ : 2022 ರ ಅಂಗವಾಗಿ ಡೆಂಗ್ಯೂ, ಮಲೇರಿಯಾ, ಚಿಕುನ್ ಗುನ್ಯ ಇನ್ನಿತರ ಸಾಂಕ್ರಾಮಿಕ ರೋಗಗಳ ಕುರಿತಂತೆ “ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣದಲ್ಲಿ ಸಹಭಾಗಿತ್ವ”ದ ಕುರಿತು ಏರ್ಪಡಿಸಿದ್ದ ತಾಲ್ಲೂಕು ಮಟ್ಟದ ಒಂದು ದಿನದ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದರು. “ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಹಾಗೂ ತಡೆಗಟ್ಟುವ ಕುರಿತು ಮಾಹಿತಿ ನೀಡಿದ…
ಸಿದ್ದಾಪುರ ಜು.28 : ಸಿದ್ದಾಪುರ ಗ್ರಾ.ಪಂ ವ್ಯಾಪ್ತಿಯಲ್ಲಿ ರಾಶಿಗಟ್ಟಲೇ ತ್ಯಾಜ್ಯ ಶೇಖರಣೆಯಾಗಿ ಬಿದ್ದಿದ್ದರೂ ಗ್ರಾ.ಪಂ ಆಡಳಿತ ಮಂಡಳಿ ಕಸವಿಲೇವಾರಿ ಮಾಡದೆ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿರುವ ನಾಗರಿಕ ಹೋರಾಟ ಸಮಿತಿ ತ್ಯಾಜ್ಯವಿಲೇವಾರಿಗೆ ಶಾಶ್ವತ ಪರಿಹಾರ ಕಲ್ಪಿಸದೇ ಇದ್ದರೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಸಮಿತಿಯ ಸಂಚಾಲಕ ಹೆಚ್.ಬಿ.ರಮೇಶ್, ಅತೀ ಹೆಚ್ಚು ಆದಾಯಗಳಿಕೆಯ ಪಂಚಾಯಿತಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದರು, ಕಸವಿಲೇವಾರಿ ಗೆ ಶಾಶ್ವತ ಪರಿಹಾರವಾಗಿ ಜಾಗ ಕಂಡುಕೊಳ್ಳಲು ಸಾಧ್ಯವಾಗಿಲ್ಲ ಎಂದು ಆರೋಪಿಸಿದರು. ಈ ಸಂಬಂಧ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ತಾಲೂಕು ಕಾರ್ಯನಿರ್ವಹಣಾಧಿಕಾರಿಗಳಿಗೆ ದೂರು ನೀಡಿದ್ದರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಗ್ರಾ.ಪಂ ಮಾಜಿ ಉಪಾಧ್ಯಕ್ಷ ಎಂ.ಹೆಚ್, ಮೂಸ ಮಾತನಾಡಿ, ಗ್ರಾ.ಪಂ ಯಲ್ಲಿ ಪೌರಕಾರ್ಮಿಕರ ಕೊರತೆ ಇದ್ದು, ಶುಚ್ಚಿತ್ವ ಕಾರ್ಯ ಸಮರ್ಪಕವಾಗಿ ನಡೆಯುತ್ತಿಲ್ಲ ಇದರಿಂದ ಚಂರಡಿಗಳಲ್ಲಿ ತ್ಯಾಜ್ಯಗಳು ತುಂಬಿ ದುರ್ನಾತ ಬೀರುತ್ತಿದೆ. ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಆಡಳಿತ ಮಂಡಳಿ ಶುಚಿತ್ವ…
ಮಡಿಕೇರಿ ಜು.28 : ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2859 ಅಡಿಗಳು, ಇಂದಿನ ನೀರಿನ ಮಟ್ಟ 2854.77 ಅಡಿಗಳು. ಕಳೆದ ವರ್ಷ ಇದೇ ದಿನ 2856.98 ಅಡಿಗಳು. ಹಾರಂಗಿಯಲ್ಲಿ ಬಿದ್ದ ಮಳೆ 15.20 ಮಿ.ಮೀ., ಕಳೆದ ವರ್ಷ ಇದೇ ದಿನ 16.40 ಮಿ.ಮೀ., ಇಂದಿನ ನೀರಿನ ಒಳಹರಿವು 9926 ಕ್ಯುಸೆಕ್, ಕಳೆದ ವರ್ಷ ಇದೇ ದಿನ 3114 ಕ್ಯುಸೆಕ್, ಇಂದಿನ ನೀರಿನ ಹೊರ ಹರಿವು ನದಿಗೆ 5875 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 1033 ಕ್ಯುಸೆಕ್. ನಾಲೆಗೆ 20 ಕ್ಯುಸೆಕ್.
ಮಡಿಕೇರಿ ಜು.10 : ಕೊಡಗಿನಲ್ಲಿ ಮಳೆಯ ತೀವ್ರತೆ ಕಡಿಮೆಯಾಗಿದ್ದು, ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 23.65 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 20.18 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1521.47 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1900.41 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 38.52 ಮಿ.ಮೀ. ಕಳೆದ ವರ್ಷ ಇದೇ ದಿನ 39.50 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2229.72 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2679.05 ಮಿ.ಮೀ. ಮಳೆಯಾಗಿತ್ತು. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 10.41 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 6.57 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1124.09 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1492.43 ಮಿ.ಮೀ. ಮಳೆಯಾಗಿತ್ತು. ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 22.03 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ…
ಮಡಿಕೇರಿ ಜು.28 : ಕೊಡಗು ಗೌಡ ಸಮಾಜ, ಮಡಿಕೇರಿ ಗೌಡ ಸಮಾಜ ಮತ್ತು ಜಿಲ್ಲೆಯ ಎಲ್ಲಾ ಗೌಡ ಸಮಾಜಗಳ ಸಂಘಟನೆಗಳ ಸಹಯೋಗದಲ್ಲಿ ಶಾಸಕದ್ವಯರನ್ನು ಸನ್ಮಾನಿಸಲಾಯಿತು. ನಗರದ ಕೊಡಗು ಗೌಡ ಸಮಾಜದ ಸಭಾಂಗಣದಲ್ಲಿ ನಡೆದ ಅಭಿನಂದನಾ ಸಮಾಂಭದಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಸೂರ್ತಲೆ ಆರ್.ಸೋಮಣ್ಣ ಹಾಗೂ ಎಲ್ಲಾ ಗೌಡ ಸಮಾಜಗಳ ಮತ್ತು ಸಂಘಟನೆಗಳ ಅಧ್ಯಕ್ಷರುಗಳು, ಪದಾಧಿಕಾರಿಗಳು, ಜನಾಂಗ ಬಾಂಧವರು ಹಾಜರಿದ್ದರು.
ಸುಂಟಿಕೊಪ್ಪ,ಜು.28: ಸುಂಟಿಕೊಪ್ಪದಲ್ಲಿ ಕಾರ್ಗಿಲ್ ವಿಜಯೋತ್ಸವ ಆಚರಣೆ ಮಾಡಲಾಯಿತು. ಮಂಜನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗಣ್ಯರು ಹುತಾತ್ಮ ಯೋಧರಿಗೆ ಪುಷ್ಪ ನಮನ ಸಲ್ಲಿಸಿದರು. ಕಾರ್ಯಕ್ರಮವನ್ನು ಹರದೂರು ಗ್ರಾ.ಪಂ ಅಧ್ಯಕ್ಷ ಬಿ.ಡಿ.ಪದ್ಮನಾಭ ಉದ್ಘಾಟಿಸಿ, ನಮ್ಮ ದೇಶದ ವೀರ ಯೋಧರು ಪಾಕ್ ಸೈನಿಕರ ವಿರುದ್ಧ ಗೆಲುವು ಸಾಧಿಸಿದ ಮಹತ್ವದ ದಿನವಾಗಿದೆ. ಕಾರ್ಗಿಲ್ ಯುದ್ಧದ ಗೆಲುವು ಭಾರತೀಯ ಯೋಧರ ಧೈರ್ಯ, ತ್ಯಾಗ, ಬಲಿದಾನದ ಸಂಕೇತವಾಗಿದೆ ಎಂದರು. ಸುಂಟಿಕೊಪ್ಪ ನಾಡು ಪ್ರೌಢಶಾಲೆಯ ವಿದ್ಯಾರ್ಥಿನಿ ಎ.ಎಸ್.ಶ್ರೀಶಾ ಮಾತನಾಡಿ, ಕಾರ್ಗಿಲ್ ವಿಜಯ್ ದಿವಸ ವಿಜಯ್ ದಿವಸ್ ಮಾತ್ರವಲ್ಲದೆ ಈ ಯುದ್ಧದಲ್ಲಿ ಹುತಾತ್ಮರಾದ 527 ಮಂದಿ ವೀರ ಯೋಧರನ್ನು ನೆನೆಯುವ ಮತ್ತು ಅವರುಗಳಿಗೆ ನಮನಗಳನ್ನು ಸಲ್ಲಿಸುವ ಕಾರ್ಯಕ್ರಮವನ್ನು ಮುಂದಿನ ದಿನಗಳಲ್ಲಿ ಸರಕಾರವು ಗಮನಹರಿಸಿ ಜಿಲ್ಲಾಡಳಿತ ವತಿಯಿಂದ ಸರಕಾರಿ ಕಾರ್ಯಕ್ರಮವಾಗಿ ನಡೆಸುವಂತಾಗಬೇಕೆಂದು ಮನವಿ ಮಾಡಿದರು. ಈ ಕಾರ್ಯಕ್ರಮದಲ್ಲಿ ಮಲ್ಟಿ ಮಿಡಿಯದ ಸಿಬ್ಬಂದಿಗಳು ಹಾಗೂ ಸುಂಟಿಕೊಪ್ಪದ ದೇಶಭಕ್ತ ಬಂಧುಗಳು ಪಾಲ್ಗೊಂಡಿದರು.
ಕುಶಾಲನಗರ ಜು.28 : ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿಗೆ ತಾಲೂಕಿನ ಆರು ಜನ ಪತ್ರಕರ್ತರು ಭಾಜನರಾಗಿದ್ದಾರೆ. ತಾಲೂಕು ಸಂಘದ ವತಿಯಿಂದ ಈ ಬಾರಿ 6 ದತ್ತಿನಿಧಿ ಪ್ರಶಸ್ತಿಗಳನ್ನು ಘೋಷಿಸಲಾಗಿದ್ದು, ಸಂಘದ ಸದಸ್ಯರಾದ ವನಿತಾ ಚಂದ್ರಮೋಹನ್ ಅವರ ತಾಯಿ ಐನಮಂಡ ಲೀಲಾವತಿ ಗಣಪತಿ ಅವರು ತಮ್ಮ ಪತಿ ದಿ. ಐನಮಂಡ ಗಣಪತಿ ಅವರ ಸ್ಮರಣಾರ್ಥ ಅತ್ಯುತ್ತಮ ಮಾನವೀಯ ವರದಿಗೆ ರಘು ಹೆಬ್ಬಾಲೆ ಅವರು ಪ್ರಜಾವಾಣಿ ಪತ್ರಿಕೆಯಲ್ಲಿ ಪ್ರಕಟಗೊಂಡ “ಜಲ ಸಂಕಟಕ್ಕೆ ಸಿಗುವುದೇ ಮುಕ್ತಿ” ವರದಿಗೆ ಲಭಿಸಿದೆ. ಸಂಘದ ಸದಸ್ಯ ಎಂ.ಎನ್ ಚಂದ್ರಮೋಹನ್ ಅವರು ತಮ್ಮ ತಂದೆ ತಾಯಿ ದಿ. ಎಂ ನಾರಾಯಣ, ಎನ್ ಪದ್ಮಾವತಿ ಅವರ ಸ್ಮರಣಾರ್ಥ ಅತ್ಯುತ್ತಮ ತನಿಖಾ ವರದಿ ಪ್ರಶಸ್ತಿಗೆ ವಿಜಯ ಕರ್ನಾಟಕ ದಿನಪತ್ರಿಕೆಯಲ್ಲಿ ಪ್ರಕಟಕೊಂಡ ಹೆಚ್.ವಿ.ವಿನೋದ್ ಬರೆದ ಕುಶಾಲನಗರದಲ್ಲಿ ಅಕ್ರಮ ಬಡಾವಣೆ ದಂಧೆ ವರದಿಗೆ ದೊರೆತಿದೆ. ಮಾಜಿ ಸಚಿವರು ಹಾಗೂ ಮಾಜಿ ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್ ಅವರ ಅತ್ಯುತ್ತಮ ರಾಜಕೀಯ ವರದಿಯ ಪ್ರಶಸ್ತಿ ಕುಶಾಲನಗರ…
ಮಡಿಕೇರಿ ಜು.28 : ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ ಹಾಗೂ ಶೈಕ್ಷಣಿಕ ಸಾಧನೆಗೈದ ಸಂಘದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜು.30 ರಂದು ನಗರದ ಪತ್ರಿಕಾ ಭವನದಲ್ಲಿ ನಡೆಯಲಿದೆ ಎಂದು ಕಾರ್ಯಕ್ರಮ ಸಂಚಾಲಕ ಹೆಚ್.ಜೆ. ರಾಕೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು, ಅಂದು ಬೆಳಿಗ್ಗೆ 10.30ಕ್ಕೆ ಸಂಘದ ಅಧ್ಯಕ್ಷೆ ಬಿ.ಆರ್. ಸವಿತಾ ರೈ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಶಕ್ತಿ ದಿನಪತ್ರಿಕೆ ಪ್ರಧಾನ ಸಂಪಾದಕ ಜಿ. ರಾಜೇಂದ್ರ ಉದ್ಘಾಟಿಸಲಿದ್ದಾರೆ. ಮುಖ್ಯ ಭಾಷಣಗಾರರಾಗಿ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕನ್ನಡ ಪಾಧ್ಯಾಪಕಿ, ಸಾಹಿತಿಯೂ ಆಗಿರುವ ಡಾ. ಕವಿತಾ ರೈ ಪಾಲ್ಗೊಳ್ಳಿದ್ದಾರೆ. ಮುಖ್ಯ ಅತಿಥಿಗಳಾಗಿ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ಸಮಾಜ ಸೇವಕ ಟಿ.ಆರ್. ವಾಸುದೇವ್, ರಾಜ್ಯ ಒಕ್ಕಲಿಗರ ಸಂಘದ ಕಾರ್ಯಾಧ್ಯಕ್ಷ ಹರಪಳ್ಳಿ ರವೀಂದ್ರ, ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶಕ ಜೈರುಸ್ ಥೋಮಸ್ ಅಲೆಗ್ಸಾಂಡರ್ ಭಾಗವಹಿಸಲಿದ್ದಾರೆ.…






