ಮಡಿಕೇರಿ ಜು.27 : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಸಮೀಪದ ಅಂಗನವಾಡಿ ಕೇಂದ್ರದ ಬಳಿ ಬೃಹತ್ ಮರಗಳು ಅಪಾಯಕ್ಕೆ ಆಹ್ವಾನ ನೀಡುತ್ತಿವೆ. ಅಂಗನವಾಡಿ ಕೇಂದ್ರದ ತಡೆಗೋಡೆ ಬಳಿ ಬೃಹದಾಕಾರದ ಮರಗಳಿದ್ದು, ಇದರ ಕೊಂಬೆಗಳು ಅಂಗನವಾಡಿ ಕೇಂದ್ರದ ಮೇಲೆ ಬಾಗಿ ನಿಂತಿವೆ. ಅಪಾಯದ ಸ್ಥಿತಿಯಲ್ಲಿರುವ ಮರಗಳನ್ನು ತೆರವುಗೊಳಿಸುವಂತೆ ಬಹಳ ಹಿಂದೆಯೇ ಅರಣ್ಯ ಇಲಾಖೆ ಮತ್ತು ಸಂಬಂಧಿಸಿದವರಿಗೆ ಮನವಿ ಸಲ್ಲಿಸಿದರೂ ನಿರ್ಲಕ್ಷ್ಯ ವಹಿಸಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಇಲ್ಲಿರುವ ಅಂಗನವಾಡಿ ಕೇಂದ್ರಕ್ಕೆ ಪ್ರತಿದಿನ 15 ಮಕ್ಕಳು ಹಾಜರಾಗುತ್ತಿದ್ದು, ಗಾಳಿ, ಮಳೆಯಿಂದ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಆತಂಕಗೊಂಡಿದ್ದಾರೆ. ಅರಣ್ಯ ಇಲಾಖೆ ತಕ್ಷಣ ಮರ ತೆರವಿಗೆ ಕ್ರಮ ಕೈಗೊಳ್ಳಬೇಕೆಂದು ಮಕ್ಕಳ ಪೋಷಕರು ಒತ್ತಾಯಿಸಿದ್ದಾರೆ. (ವರದಿ : ದಿನು ಬಾರನ-ಮದೆ)
ಲೇಖಕ: admin
ಮಡಿಕೇರಿ ಜು.27 : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಸಮೀಪದ ಅಂಗನವಾಡಿ ಕೇಂದ್ರದ ಬಳಿ ಬೃಹತ್ ಮರವೊಂದು ಅಪಾಯಕ್ಕೆ ಆಹ್ವಾನ ನೀಡುವಂತಿದೆ. ಅಂಗನವಾಡಿ ಕೇಂದ್ರದ ತಡೆಗೋಡೆ ಪಕ್ಕದಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಗೆ ಸಂಬಂಧಿಸಿದ ವಸತಿ ಗೃಹದ ಬಳಿ ಬೃಹದಾಕಾರದ ಮರಗಳಿದ್ದು, ಇದರ ಕೊಂಬೆಗಳು ಅಂಗನವಾಡಿ ಕೇಂದ್ರದ ಮೇಲೆ ಬಾಗಿ ನಿಂತಿದೆ. ಈ ಬಗ್ಗೆ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಕಾಲೇಜಿನ ಪ್ರಾಂಶುಪಾಲರು ಹಾಗೂ ಅರಣ್ಯ ಇಲಾಖೆಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಇದುವರೆಗೂ ಯಾವುದೇ ಕ್ರಮ ತೆಗೆದುಕೊಳ್ಳದೇ ಇರುವುದು ವಿಪರ್ಯಾಸ. ಈ ಅಂಗನವಾಡಿ ಕೇಂದ್ರಕ್ಕೆ ನಿತ್ಯವೂ 15 ಮಕ್ಕಳು ಹಾಜರಾಗುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳು ಅಪಾಯದಂಚಿನಲ್ಲಿರುವ ಮರಗಳ ಕೊಂಬೆಗಳನ್ನು ತೆರವುಗೊಳಿಸುವಂತೆ ಅಂಗನವಾಡಿ ಕಾರ್ಯಕರ್ತೆ ಹಾಗೂ ಪೋಷಕರು ಒತ್ತಾಯಿಸಿದ್ದಾರೆ. ವರದಿ : ದಿನು ಬಾರನ-ಮದೆ
ಮಡಿಕೇರಿ ಜು.29 : ಭಾರಿ ಗಾಳಿ ಮಳೆಯಿಂದ ಬೃಹತ್ ಮರ ಬಿದ್ದು ಹಾನಿಗೊಳಗಾಗಿದ್ದ ಹಾತೂರು ಗ್ರಾ.ಪಂ ವ್ಯಾಪ್ತಿಯ ಕೊಳತೋಡು ಬೈಗೊಡು ಗ್ರಾಮದ ನಿವಾಸಿ ಮುಕ್ಕಟಿರ ಶೋಭಾ ಎಂಬವರ ಮನೆಯನ್ನು ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಪರಿಶೀಲಿಸಿದರು. ನಂತರ ಕುಟುಂಬಸ್ಥರೊಂದಿಗೆ ಮಾಹಿತಿ ಪಡೆದು ಸೂಕ್ತ ಪರಿಹಾರಕ್ಕೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಈ ಸಂದರ್ಭ ಗ್ರಾ.ಪಂ ಚುನಾಯಿತ ಜನಪ್ರತಿನಿಧಿಗಳು, ಪಕ್ಷದ ಕಾಯ೯ಕತ೯ರು ಹಾಜರಿದ್ದರು.
ಮಡಿಕೇರಿ ಜು.27 : ಸಾರ್ವಜನಿಕರಿಗೆ ತೊಂದರೆ ಮಾಡದೆ ಜನರ ಕಷ್ಟಗಳನ್ನು ನಿವಾರಿಸಲು ಎಲ್ಲಾ ಹಂತದ ಅಧಿಕಾರಿಗಳು ಜವಾಬ್ದಾರಿಯುತ ಮತ್ತು ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುವಂತೆ ಮುಖ್ಯಮಂತ್ರಿಯವರ ಕಾನೂನು ಸಲಹೆಗಾರರು ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಹೇಳಿದ್ದಾರೆ. ಮಡಿಕೇರಿ ತಾಲ್ಲೂಕಿನ ಸಂಪಾಜೆಯಲ್ಲ್ಲಿ ನೂತನವಾಗಿ ನಿರ್ಮಿಸಿರುವ ನಾಡ ಕಚೇರಿ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು. ಕಂದಾಯ ಇಲಾಖೆ ಜೊತೆ ಸಾರ್ವಜನಿಕರು ನೇರ ಸಂಪರ್ಕ ಹೊಂದಿದ್ದು, ಸರ್ಕಾರದ ಹಲವು ಯೋಜನೆಗಳ ಪ್ರಮಾಣ ಪತ್ರಕ್ಕೆ ನಾಡ ಕಚೇರಿಗೆ ಆಗಮಿಸುತ್ತಾರೆ. ಆದ್ದರಿಂದ ನಾಗರಿಕರನ್ನು ಸತಾಯಿಸದೆ ಸ್ಪಂದಿಸುವಂತಾಗಬೇಕು ಎಂದು ಶಾಸಕರು ನುಡಿದರು. ಕಂದಾಯ ಇಲಾಖೆ ಜನರಿಗೆ ನೇರವಾಗಿ ಸ್ಪಂದಿಸಬೇಕು ಸರ್ವೆ ಹಾಗೂ ಇನ್ನಿತರ ದಾಖಲೆಗಳನ್ನು ಜನರಿಗೆ ಕಾಲಮಿತಿಯಲ್ಲಿ ನೀಡಬೇಕು. ಸಂಪಾಜೆಗೆ ಹೊಸ ನಾಡ ಕಚೇರಿ ಕಟ್ಟಡ ಕಲ್ಪಿಸಿದ್ದು, ಜನರು ಹಾಗೂ ಅಧಿಕಾರಿಗಳು ಇದರ ಸದುಪಯೋಗ ಪಡಿಸಿಕೊಳ್ಳಬೇಕು, ಜನ ಸೇವೆ ಅತಿ ಮುಖ್ಯವಾಗಿದ್ದು, ಹಿರಿಯ ಅಧಿಕಾರಿಗಳಿಂದ ಹಿಡಿದು ಗ್ರಾಮ ಲೆಕ್ಕಾಧಿಕಾರಿಗಳು ತಮ್ಮ ಜವಾಬ್ದಾರಿ ಅರಿತು ಜನರ ಸೇವೆ ಮಾಡಬೇಕು, ಜನರ ಕಷ್ಟಗಳಿಗೆ ಸ್ಪಂದಿಸಬೇಕು ಎಂದು…
ಮಡಿಕೇರಿ ಜು.27 : ಶಿಕ್ಷಣ ಸಚಿವಾಲಯ ಮತ್ತು ಕೇಂದ್ರೀಯ ವಿದ್ಯಾಲಯ ಸಂಘಟನೆ, ನವದೆಹಲಿಯಿಂದ ಸ್ವೀಕರಿಸಿದ ಆದೇಶದ ಪ್ರಕಾರ, ಕೇಂದ್ರೀಯ ವಿದ್ಯಾಲಯ ಕೊಡಗು ಎನ್ಇಪಿ 2020ರ 3ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ಎನ್ಇಪಿ 2020 ಉಪಕ್ರಮಗಳು, ಉತ್ತಮ ಅಭ್ಯಾಸಗಳನ್ನು ಎನ್ಇಪಿ 2020 ಅನುಷ್ಠಾನದ ಸಾಧನೆಗಳನ್ನು ಪ್ರಸಾರ ಮಾಡಲು ಕೊಡಗು ಕೇಂದ್ರೀಯ ವಿದ್ಯಾಲಯದ ಆವರಣದಲ್ಲಿ ಜು.28 ರಂದು ಬೆಳಗ್ಗೆ 11 ಗಂಟೆಗೆ ಮಾಹಿತಿ ನೀಡಲಿದ್ದಾರೆ. ಈ ಕಾರ್ಯಕ್ರಮಕ್ಕೆ ಕೊಡಗು ಜಿಲ್ಲೆಯ ಸರ್ಕಾರಿ/ ಖಾಸಗಿ/ ಅನುದಾನಿತ ಶಾಲೆಗಳ ಸಂಸ್ಥೆಯ ಪ್ರಾಂಶುಪಾಲರು/ ಮುಖ್ಯಸ್ಥರು, ಆಯಾಯ ಶಾಲೆಗಳ 2 ಶಿಕ್ಷಕರು ಭಾಗವಹಿಸುವಂತೆ ಪ್ರಕಟಣೆ ತಿಳಿಸಿದೆ.
ಮಡಿಕೇರಿ ಜು.27 : ಪ್ರಸಕ್ತ (2023-24) ಸಾಲಿಗೆ ಕೊಡಗು ಜಿಲ್ಲೆಯಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ/ ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 2ಬಿ, 3ಎ ಹಾಗೂ 3ಬಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮತ್ತು ಇತರೆ ಜನಾಂಗಗಳಿಗೆ ಸೇರಿದ ಸಾಮಾನ್ಯ ಪದವಿ ಕೋರ್ಸಿನ ಅರ್ಹ ವಿದ್ಯಾರ್ಥಿಗಳಿಂದ ಪ್ರವೇಶಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 16 ಕೊನೆ ದಿನಾಂಕವಾಗಿದೆ. ಅರ್ಜಿ ಸಲ್ಲಿಸಬೇಕಾದ ವೆಬ್ಸೈಟ್ ವಿಳಾಸ: https://.shp.karnataka.gov.in ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ:- ಪ್ರವರ್ಗ-1, ಎಸ್.ಸಿ ಮತ್ತು ಎಸ್.ಟಿ. ರೂ.2.50 ಲಕ್ಷ, ಪ್ರವರ್ಗ-2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗ ರೂ.1 ಲಕ್ಷ ಆಗಿದೆ. ತಾಲ್ಲೂಕುವಾರು ವಿದ್ಯಾರ್ಥಿ ನಿಲಯಗಳ ವಿವರ, ವಿದ್ಯಾರ್ಥಿ ನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್ಸೈಟ್ https://.bcwd.karnataka.gov.in ನೋಡಬಹುದು. ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ…
ನಾಪೋಕ್ಲು ಜೂ.27 : ನಾಪೋಕ್ಲು ಗ್ರಾಮ ಪಂಚಾಯಿತಿಗೆ ಒಳಪಟ್ಟ ಕೂರುಳಿ ಸುಭಾಷ್ ನಗರಕ್ಕೆ ತೆರಳುವ ರಸ್ತೆಯಲ್ಲಿರುವ ಅರಮನೆ ಪಾಲೆ ಅಪ್ಪು ಹಾಗೂ ಭೀಮಯ್ಯ ಎಂಬುವವರ ವಾಸದ ಮನೆಯ ಮೇಲೆ ಮನೆಯ ಪಕ್ಕದಲ್ಲಿದ್ದ ಭಾರಿ ಗಾತ್ರದ ಮರ ಬಿದ್ದು ಮನೆಯ ಮೇಲ್ಚಾವಣಿಗೆ ಅಳವಡಿಸಿದ್ದ ಶೀಟ್ ಗಳಿಗೆ ಹಾನಿಯಾಗಿ ಅಪಾರ ನಷ್ಟ ಸಂಭವಿಸಿದೆ. ಗುರುವಾರ ಬೆಳಗ್ಗೆ ಭೀಮಯ್ಯ ಎಂಬುವವರು ಮಕ್ಕಳನ್ನು ಶಾಲೆಗೆ ಕಳುಹಿಸಲು ತಯಾರಿ ನಡೆಸುವ ಸಂದರ್ಭ ಮನೆಯ ಮೇಲೆ ಏಕಾಏಕಿ ಮರ ಬಿದ್ದಿದೆ.ಇದರಿಂದ ಗಾಬರಿಗೊಂಡ ಮನೆ ಮಂದಿ ಮನೆಯಿಂದ ಓಡಿ ಹೊರ ಹೋಗಿದ್ದಾರೆ.ಇದರಿಂದ ಯಾವುದೇ ಅನಾಹುತ ಸಂಭವಿಸದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ನಾಪೋಕ್ಲು ಕಂದಾಯ ಪರಿವೀಕ್ಷಕ ರವಿಕುಮಾರ್, ಗ್ರಾಮ ಲಕ್ಕಿಗೆ ಅಮೃತ, ಗ್ರಾ.ಪಂ ಅಧ್ಯಕ್ಷೆ ಎಚ್.ಎಸ್ ಪಾರ್ವತಿ, ಅಭಿವೃದ್ಧಿ ಅಧಿಕಾರಿ ಚೋಂದಕ್ಕಿ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾ.ಪಂ ಸದಸ್ಯ ಪ್ರತೀಪ್ ಹಾಗೂ ಶಿವಾಚಾಳಿಯಂಡ ಜಗದೀಶ್ ಮನೆಯ ಮೇಲೆ ಬಿದ್ದ ಮರವನ್ನು ಯಂತ್ರೋಪಕರಣಗಳನ್ನು ಬಳಸಿ ತೆರವುಗೊಳಿಸಿದರು. ಬಳಿಕ ಮನೆಯೊಳಗೆ…
ಮಡಿಕೇರಿ ಜು.27 : ಕೊಡವ ಕುಟುಂಬಗಳ ನಡುವಿನ 23ನೇ ವರ್ಷದ `ಅಪ್ಪಚೆಟ್ಟೋಳಂಡ ಕಪ್ ಹಾಕಿ ಉತ್ಸವ-2023’ಕ್ಕೆ ಸರ್ಕಾರದ ಮೂಲಕ ಅನುದಾನ ಬಿಡುಗಡೆಗೊಳಿಸಲು ಸಹಕರಿಸಿದ ಮಾಜಿ ಶಾಸಕ ಕೆ.ಜಿ.ಬೋಪಯ್ಯ ಅವರನ್ನು ಅಪ್ಪಚೆಟ್ಟೋಳಂಡ ಕುಟುಂಬಸ್ಥರು ಸನ್ಮಾನಿಸಿ ಗೌರವಿಸಿದರು. ಕೆ.ಜಿ.ಬೋಪಯ್ಯ ಅವರ ನಿವಾಸಕ್ಕೆ ಭೇಟಿ ಮಾಡಿ ಸನ್ಮಾನಿಸಿದ ಕುಟುಂಬದ ಪ್ರಮುಖರು, ಅನುದಾನ ಬಿಡುಗಡೆಗೆ ಸಹಕಾರ ನೀಡಿದಕ್ಕೆ ಕೃತಜ್ಞತೆ ಸಲ್ಲಿಸಿದರು. ಈ ಸಂದರ್ಭ ಕುಟುಂಬಸ್ಥರು ಹಾಗೂ ಹಾಕಿ ಉತ್ಸವ ಸಮಿತಿಯ ಸಂಚಾಲಕ ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ, ಉಪಾಧ್ಯಕ್ಷ ರಾಜ ಭೀಮಯ್ಯ, ಸದಸ್ಯರಾದ ಶಾಮ್ ಕಾಳಯ್ಯ, ಡಾಲಿ ಬೋಪಯ್ಯ, ರವಿ ಮೊಣ್ಣಪ್ಪ, ಪೂದೇವಯ್ಯ, ಎ.ಕೆ.ಸೋಮಯ್ಯ, ಎ.ಕೆ.ತಿಮ್ಮಯ್ಯ, ಎ.ಕೆ.ಜೋಯಪ್ಪ, ಎ.ಇ.ಜನತ್ ಕುಮಾರ್, ಎ.ಬಿ.ವಸಂತ್ ಮುತ್ತಪ್ಪ, ಎ.ಬಿ.ಉದಯ ನಾಚಪ್ಪ ಹಾಜರಿದ್ದರು.
ಮಡಿಕೇರಿ ಜು.27 : ಹಾಕಿ ಕ್ರೀಡಾ ಚಟುವಟಿಕೆಗಳ ಕೇಂದ್ರ ಸ್ಥಾನವಾಗಿರುವ ನಾಪೋಕ್ಲುವಿನಲ್ಲಿ ಯುವ ಪ್ರತಿಭೆಗಳಿಗೆ ಅನುಕೂಲವಾಗುವಂತೆ ಕ್ರೀಡಾ ಶಾಲೆ ಮತ್ತು ಆಸ್ಟ್ರೋ ಟರ್ಫ್ ಮೈದಾನ ನಿರ್ಮಿಸಬೇಕೆಂದು ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ ಸರ್ಕಾರವನ್ನು ಆಗ್ರಹಿಸಿದರು. ನಾಪೋಕ್ಲುವಿನಲ್ಲಿ ಇಲ್ಲಿಯವರೆಗೆ ನಾಲ್ಕು ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿಗಳು ನಡೆದಿದ್ದು, ಮುಂಬರುವ ವರ್ಷಗಳಲ್ಲಿ ಇನ್ನೂ ಕೆಲ ಕುಟುಂಬಗಳಿಂದ ಪಂದ್ಯಾವಳಿ ನಡೆಯಲಿದೆ. ಹಾಕಿ ಕ್ರೀಡೆಯ ಬಗ್ಗೆ ಹೆಚ್ಚಿನ ಆಸಕ್ತಿ ಕಂಡು ಬರುವ ಈ ವಿಭಾಗದಲ್ಲಿ ಕ್ರೀಡಾ ಶಾಲೆ, ಆಸ್ಟ್ರೋ ಟರ್ಫ್ ಸೌಲಭ್ಯ ಒದಗಿಸಿದಲ್ಲಿ, ರಾಷ್ಟ್ರೀಯ ತಂಡವನ್ನು ಮತ್ತಷ್ಟು ಯುವ ಪ್ರತಿಭೆಗಳು ಪ್ರತಿನಿಧಿಸಲು ಅವಕಾಶ ದೊರಕಿದಂತಾಗುತ್ತದೆ ಎಂದರು.
ಮಡಿಕೇರಿ ಜು.27 : ‘ಹಾಕಿ’ ಪ್ರತಿಭೆಗಳಿಗೆ ಉತ್ತೇಜನವನ್ನು ನೀಡುವ ನಿಟ್ಟಿನಲ್ಲಿ ನಾಪೋಕ್ಲುವಿನಲ್ಲಿ ಆಯೋಜಿತವಾಗಿದ್ದ ‘ಅಪ್ಪಚೆಟ್ಟೋಳಂಡ ಕಪ್ ಹಾಕಿ ಉತ್ಸವ’ಕ್ಕೆ ಸರ್ಕಾರದಿಂದ 1 ಕೋಟಿ ಅನುದಾನ ಬಿಡುಗಡೆಯಾಗಿರುವುದಾಗಿ ಉತ್ಸವ ಸಮಿತಿಯ ಸಂಚಾಲಕರಾದ ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ ಹರ್ಷ ವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಜಿಲ್ಲಾ ಯುವ ಸಬಲೀಕರಣ ಇಲಾಖೆಯಿಂದ ಕೋಟಿ ಅನುದಾನದ ಚೆಕ್ ಇದೇ ಜು.18 ರಂದು ಉತ್ಸವ ಸಮಿತಿಗೆ ದೊರಕಿದೆ. ಮುಂಬರುವ ವರ್ಷಗಳಲ್ಲಿ ನಡೆಯುವ ಕೊಡವ ಕೌಟುಂಬಿಕ ಹಾಕಿ ಉತ್ಸವಕ್ಕು ಇದೇ ರೀತಿ ರಾಜ್ಯದ ನೂತನ ಸರ್ಕಾರ ಅನುದಾನವನ್ನು ಒದಗಿಸಬೇಕೆಂದು ಮನವಿ ಮಾಡಿದರು. ನಾಪೋಕ್ಲುವಿನಲ್ಲಿ ಪ್ರಸಕ್ತ ಸಾಲಿನ ಮಾ.18ರಿಂದ ಒಂದು ತಿಂಗಳ ಕಾಲ ಆಯೋಜಿತ ಹಾಕಿ ಉತ್ಸವಕ್ಕೆ ಒಂದು ಕೋಟಿ ಅನುದಾನವನ್ನು ದೊರಕಿಸಿಕೊಡುವಲ್ಲಿ ಹಿಂದಿನ ವಿರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ಅವರು ಸಾಕಷ್ಟು ಶ್ರಮಿಸಿದ್ದಾರೆ ಮತ್ತು ಇವರ ಪ್ರಯತ್ನಗಳಿಗೆ ಅಂದಿನ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪೂರಕ ಸ್ಪಂದನವನ್ನು ನೀಡಿದ್ದರು. ಇದರ ಫಲಶ್ರುತಿಯಾಗಿ ಇದೀಗ…






