ಲೇಖಕ: admin

ಚೆಯ್ಯಂಡಾಣೆ ಜು.27 :  ಮಳೆ ಗಾಳಿಗೆ ನರಿಯಂದಡ ಗ್ರಾಮದ ಎಡಪಾಲದ  ಕೆ.ಎ.ಜುನೈದ್  ಎಂಬುವವರ ಮನೆಯ ಗೋಡೆ ಕುಸಿದು ಬಿದ್ದಿದ್ದು, ಅಪಾರ ಪ್ರಮಾಣದಲ್ಲಿ ಹಾನಿ ಸಂಭವಿಸಿದೆ. ಮನೆಯ ಒಳಗಡೆ ಇದ್ದ ಪಾತ್ರೆ ಮತ್ತಿತರರು ವಸ್ತುಗಳಿಗೆ ಹಾನಿಯಾಗಿ  ನಷ್ಟ ಉಂಟಾಗಿದೆ.  ಸ್ಥಳಕ್ಕೆ ಕಂದಾಯ ಪರಿವಿಕ್ಷಕ ರವಿಕುಮಾರ್, ಉಪ ತಹಶೀಲ್ದಾರ್ ಸುನಿಲ್ ಕುಮಾರ್, ಗ್ರಾಮ ಲೆಕ್ಕಿಗ ಜನಾರ್ದನ, ಗ್ರಾ.ಪಂ  ಅಭಿವೃದ್ಧಿ ಅಧಿಕಾರಿ ಆಶಾ ಕುಮಾರಿ, ಗ್ರಾ.ಪಂ  ಸದಸ್ಯ ಮಮ್ಮದ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲಿಸಿದರು. ವರದಿ :  ಅಶ್ರಫ್

Read More

ಮಡಿಕೇರಿ ಜು.27 : ಹವಾಮಾನ ಇಲಾಖೆಯಿಂದ ಪ್ರತಿನಿತ್ಯದ ಮಳೆ ಪ್ರಮಾಣದ ಬಗ್ಗೆ ಮಾಹಿತಿ ಲಭ್ಯವಾಗಲಿದ್ದು, ಈ ಮಾಹಿತಿ ಆಧಾರಿಸಿ ಜಿಲ್ಲಾಧಿಕಾರಿ ಅವರು ಹೆಚ್ಚಿನ ಮಳೆಯಿಂದ ಸಂಭವಿಸಬಹುದಾದ ಅನಾಹುತಗಳನ್ನು ತಡೆಯಲು ಮುಂದಾಗುವಂತೆ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ದೇಶನ ನೀಡಿದ್ದಾರೆ. ರಾಜ್ಯದ ಹವಮಾನ, ಮಳೆ-ಬೆಳೆ ಸಂಬಂಧಿತ ಸ್ಥಿತಿಗತಿಗಳ ಕುರಿತು ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಜಿಲ್ಲಾಧಿಕಾರಿಗಳ ಜೊತೆ ನಡೆದ ವಿಡಿಯೊ ಸಂವಾದದಲ್ಲಿ ಮುಖ್ಯಮಂತ್ರಿಗಳು ಮಾತನಾಡಿದರು. ವ್ಯಾಪಕ ಮಳೆಯಿಂದ ಉಂಟಾಗಬಹುದಾದ ಅನಾಹುತ ತಡೆಯಲು ಜಿಲ್ಲಾಧಿಕಾರಿಗಳು ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು. ಹಾಗೆಯೇ ನದಿ ಪಾತ್ರದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವ ಕಾರ್ಯವನ್ನು ಜಿಲ್ಲಾಡಳಿತ ಮಾಡಬೇಕು ಎಂದು ನಿರ್ದೇಶನ ನೀಡಿದರು. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮಾತನಾಡಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿರಬೇಕು. ತುರ್ತು ಸಂದರ್ಭದಲ್ಲಿ ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು. ಈ ಸಂಬಂಧ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಪಿಡಿಒ ಗಳ ದೂರವಾಣಿ ಸಂಖ್ಯೆ ಜನರಿಗೆ ದೊರೆಯುವಂತಿರಬೇಕು ಎಂದು ಸೂಚಿಸಿದರು.…

Read More

ಮಡಿಕೇರಿ ಜು.27 : ನಲ್ಲೂರು ತೋಟದ ಕೂಲಿ ಕಾರ್ಮಿಕ ವಿಜಯ್ ಕುಮಾರ್ ಅವರ ಮೇಲೆ ಬುಧವಾರ ಕಾಡಾನೆ ದಾಳಿಯಾಗಿದ್ದು, ಮೈಸೂರು ಅಪೋಲೋ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂಥರ್ ಗೌಡ ಅವರು ಬುಧವಾರ ರಾತ್ರಿ 12 ಗಂಟೆಗೆ ಮೈಸೂರಿನ ಆಸ್ಪತ್ರೆಗೆ ಆಗಮಿಸಿ ಗಾಯಳು ಯೋಗ ಕ್ಷೇಮ ವಿಚಾರಿಸಿ ಗಾಯಾಳುವಿಗೆ ಧೈರ್ಯ ತುಂಬಿದರು.    ರೋಗಿಯ ಕುಟುಂಬಸ್ಥರಿಗೆ ಬೆಟ್ ಶಿಟ್, ಊಟದ ವ್ಯವಸ್ಥೆ ಮಾಡುವ ಮೂಲಕ ಸ್ಪಂದನೆ ಮಾಡಿದರು. ಅಲ್ಲದೆ ತುರ್ತು ಚಿಕಿತ್ಸೆಗೆ ರು.10 ಸಾವಿರ ನಗದನ್ನು ನೀಡಿದರು.    ದಾಳಿಗೆ ಒಳಗಾಗಿರುವ ಗಾಯಳು ಅವರಿಗೆ ಶ್ವಾಸಕೋಶದ ಭಾಗದಲ್ಲಿ ಪೆಟ್ಟಾಗಿದ್ದು, ಚಿಕಿತ್ಸೆಯ ಮೂಲಕ ಗುಣಮುಖರಾಗಲಿದ್ದಾರೆ. ಯಾವುದೇ ಆತಂಕಕ್ಕೆ ಒಳಗಾಗಬೇಕಿಲ್ಲ ಎಂದು ಆಸ್ಪತ್ರೆಯಲ್ಲಿದ್ದ ಕುಟುಂಬಸ್ಥರಿಗೆ ಧೈರ್ಯ ತುಂಬಿದರು.

Read More

ಮಡಿಕೇರಿ ಜು.26 : ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಜಿಲ್ಲೆಯ ಮಳೆ ಹಾನಿ ಪ್ರದೇಶಗಳಿಗೆ ಬುಧವಾರ ಭೇಟಿ ನೀಡಿ ವೀಕ್ಷಿಸಿ, ಅಲ್ಲಿನ ಸ್ಥಳೀಯರಿಂದ ಮಾಹಿತಿ ಪಡೆದರು. ಗಾಳಿಬೀಡು ಗ್ರಾ.ಪಂ. ವ್ಯಾಪ್ತಿಯ ಕಾಲೂರು ಹಾಗೂ ವಣಚಲು ಪ್ರದೇಶಕ್ಕೆ ತೆರಳಿ ಮಳೆ ಹಾನಿ ಸಂಬಂದ ಮಾಹಿತಿ ಪಡೆದರು. ಮನೆ ಹಾನಿ ಹಾಗೂ ಬರೆ ಕುಸಿತ ಪ್ರದೇಶಕ್ಕೆ ತೆರಳಿ ವೀಕ್ಷಿಸಿದ ಸಚಿವರು. ಮಳೆ ಹಾನಿ ಸಂಬಂಧ ಸರ್ಕಾರದಿಂದ ನಿಯಮಾನುಸಾರ ಪರಿಹಾರ ದೊರೆಯಲಿದೆ ಎಂದು ಸಚಿವರು ಹೇಳಿದರು. ಶಾಸಕರಾದ ಡಾ.ಮಂತರ್ ಗೌಡ ಅವರು ಗಾಳಿಬೀಡು ಪ್ರದೇಶವು ಎತ್ತರ ಪ್ರದೇಶದಲ್ಲಿದ್ದು ಹೆಚ್ಚಿನ ಮಳೆಯಾಗುತ್ತದೆ. ಇದರಿಂದ ಬರೆ ಕುಸಿತ, ಮನೆ ಹಾನಿ ಉಂಟಾಗುತ್ತಿದೆ. ಈ ಸಂಬಂಧ ಸೂಕ್ತ ಪರಿಹಾರ ಕಲ್ಪಿಸಬೇಕಿದೆ ಎಂದು ಹೇಳಿದರು. ಗಾಳಿಬೀಡು ಗ್ರಾ.ಪಂ.ವ್ಯಾಪ್ತಿಯಲ್ಲಿ ಮಳೆ ಹಾನಿ ಸಂಬಂಧಿಸಿದಂತೆ ಮಾಹಿತಿ ಪಡೆದ ಜಿಲ್ಲಾ ಉಸ್ತುವಾರಿ ಸಚಿವರು ಅಗತ್ಯವಿರುವ ಕಡೆಗಳಲ್ಲಿ ಟಾರ್ಪಲ್ ವಿತರಿಸುವಂತೆ ನಿರ್ದೇಶನ ನೀಡಿದರು. ಗಾಳಿಬೀಡು ಬಳಿಯ ಸೇತುವೆ ವೀಕ್ಷಿಸಿದ ಸಚಿವರು, ಬರೆಕುಸಿತ, ಮನೆ ಹಾನಿ,…

Read More

ಮಡಿಕೇರಿ ಜು.26 :  ರಾಜ್ಯದ ಹವಾಮಾನ ಮತ್ತು ಮಳೆ ಬೆಳೆ ಸಂಬಂಧಿತ ಸ್ಥಿತಿಗತಿಗಳ ಕುರಿತು  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಡಿಯೋ ಸಂವಾದ ಮೂಲಕ  ಮಾಹಿತಿ ಪಡೆದರು. ವಿಡಿಯೋ ಸಂವಾದದಲ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಉಪ ವಿಭಾಗಾಧಿಕಾರಿ ಡಾ.ಯತೀಶ್ ಉಳ್ಳಾಲ್, ಜಿ.ಪಂ.ಯೋಜನಾ ನಿರ್ದೇಶಕರಾದ ಜಗದೀಶ್, ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಶಬನಾ ಎಂ.ಶೇಖ್, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಎಚ್.ಆರ್.ನಾಯಕ್, ಹಾರಂಗಿ ಜಲಾಶಯ ಎಂಜಿನಿಯರ್ ಪುಟ್ಟಸ್ವಾಮಿ, ಲೋಕೋಪಯೋಗಿ ಇಲಾಖೆ ಎಂಜಿನಿಯರ್ ಸಿದ್ದೇಗೌಡ, ಸೆಸ್ಕ್ ಎಂಜಿನಿಯರ್ ಅನಿತಾ ಬಾಯಿ, ಪಿಎಲ್‍ಇಡಿ ಎಂಜಿನಿಯರ್ ಸುರೇಶ್‍ಕುಮಾರ್, ಇತರರು ಇದ್ದರು.

Read More

ಸೋಮವಾರಪೇಟೆ ಜು.25 : ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಸ್ವಸಹಾಯ ಸಂಘಗಳ ಗುಂಪುಗಳಿಗೆ ಮತ್ತು ಸಾರ್ವಜನಿಕರಿಗೆ ಪ್ಲಾಸ್ಟಿಕ್ ಮುಕ್ತ ಅಭಿಯಾನದ ಬಗೆಗಿನ ಜಾಗೃತಿ ಸಭೆ ಪಟ್ಟಣ ಪಂಚಾಯಿತಿಯಲ್ಲಿ ನಡೆಯಿತು. ಮುಖ್ಯಾಧಿಕಾರಿ ನಾಚಪ್ಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಈಗಾಗಲೇ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧ ಮಾಡಲಾಗಿದೆ. ಆದರೂ ಅಂಗಡಿ, ಮುಂಗಟ್ಟುಗಳಲ್ಲಿ ಅಕ್ರಮವಾಗಿ ಮಾರಾಟ ಮಾಡುತ್ತಿರುವ ಬಗ್ಗೆ ದೂರುಗಳು ಬಂದಿವೆ. ಅನೇಕ ಕಡೆ ರೈಡ್ ಮಾಡಿ ದಂಡ ವಿಧಿಸಲಾಗುತ್ತಿದೆ. ಸಾರ್ವಜನಿಕರು ಕೂಡ ಪ್ಲಾಸ್ಟಿಕ್ ಖರೀದಿಯನ್ನು ಸಂಪೂರ್ಣವಾಗಿ ನಿಲ್ಲಿಸಬೇಕು. ವಸ್ತುಗಳನ್ನು ಖರೀದಿಸುವ ಸಂದರ್ಭ ಜೊತೆಯಲ್ಲಿ ಬಟ್ಟೆಯ ಬ್ಯಾಗ್‍ಗಳನ್ನು ತೆಗೆದುಕೊಂಡು ಹೋಗಬೇಕು. ಪ್ಲಾಸ್ಟಿಕ್‍ನಿಂದ ಪರಿಸರದ ಮೇಲೆ ದೊಡ್ಡಮಟ್ಟದ ದುಷ್ಪರಿಣಾಮ ಬೀರುತ್ತಿದ್ದು, ಇದನ್ನು ನಾವೆಲ್ಲರೂ ಜವಾಬ್ದಾರಿಯಿಂದ ತಡೆಯಬೇಕಾಗಿದೆ ಎಂದರು. ವೇದಿಕೆಯಲ್ಲಿ ಅರೋಗ್ಯ ನಿರೀಕ್ಷಕ ಜಾಸಿಮ್‍ಖಾನ್, ಸದಸ್ಯರಾದ ಶೀಲಾ ಡಿಸೋಜ, ಮೃತ್ಯುಂಜಯ, ಬಿ.ಆರ್.ಮಹೇಶ್ ಇದ್ದರು. 

Read More

ಸೋಮವಾರಪೇಟೆ: ಜೈಜವಾನ್ ಮಾಜಿ ಸೈನಿಕರ ಸಂಘದ ವತಿಯಿಂದ ಪತ್ರಿಕಾಭವನ ಸಭಾಂಗಣದಲ್ಲಿ ಕಾರ್ಗಿಲ್ ವಿಜಯ್ ದಿವಸ್ ಹಾಗೂ ಯೋಧರಿಗೆ ಸಂತಾಪ ಸಭೆ ನಡೆಯಿತು. ಸಿಆರ್‍ಪಿಎಫ್ ನಿವೃತ್ತ ಡೆಪ್ಯೂಟಿ ಕಮಾಡೆಂಟ್ ಮಂಜುನಾಥ್, ಅಮರ್ ಜವಾನ್ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿದರು. ಸೈನಿಕರಿಗೆ ದೇಶ ಮೊದಲು, ನಂತರ ಕುಟುಂಬ ಎಂಬಂತೆ ಕೆಲಸ ಮಾಡುತ್ತಾರೆ. ನಾನು ಯುವಕನಾಗಿದ್ದಾಗ ಕ್ರೀಡಾಪಟುವಾಗಿದ್ದೆ, ನಂತರ ಸೈನ್ಯಕ್ಕೆ ಸೇರಿ ದೇಶಸೇವೆಯೊಂದಿಗೆ ಕ್ರೀಡೆಯಲ್ಲೂ ಸಾಧನೆ ಮಾಡಿದ್ದೇನೆ. ಜಮ್ಮು ಕಾಶ್ಮೀರದಲ್ಲೂ ಹತ್ತು ವರ್ಷ ಸೇವೆ ಮಾಡಿದ್ದೇನೆ. ನನ್ನ ಸೇವೆ ಸಂದರ್ಭದಲ್ಲೂ ಅನೇಕ ಸ್ನೇಹಿತರ ಬಲಿದಾನವಾಗಿದೆ. ಇವತ್ತು ದೇಶದ ಜನತೆ ನೆಮ್ಮದಿಯಿಂದ ಇರಬೇಕೆಂದರೆ ಸೈನಿಕರ ತ್ಯಾಗ ಪಾಲು ಇದೆ ಎಂದು ಹೇಳಿದರು. ಸಂಘದ ಅಧ್ಯಕ್ಷ ಬಿ.ಆರ್.ಈರಪ್ಪ ಮಾತನಾಡಿ, 24 ವರ್ಷದ ಹಿಂದೆ ನಡೆದ ಕಾರ್ಗಿಲ್ ಯುದ್ದದಲ್ಲಿ 520 ಯೋಧರು ಪ್ರಾಣತ್ಯಾಗ ಮಾಡಿ ಗೆಲುವು ತಂದುಕೊಟ್ಟಿದ್ದಾರೆ. ಪ್ರತಿಯೊಬ್ಬರು ದೇಶವನ್ನು, ದೇಶದ ಯೋಧರನ್ನು ಗೌರವಿಸಬೇಕು. ದೇಶಪ್ರೇಮಿಗಳೆಲ್ಲರೂ ಭಾರತದ ಸೈನಿಕರೆ ಎಂದು ಹೇಳಿದರು. ಬಾಲಪ್ರತಿಭೆ ಶ್ರೀಶಾ ಮಾತನಾಡಿ, ಕಾರ್ಗಿಲ್ ಯುದ್ದದಲ್ಲಿ ಅತ್ಯಂತ ಪರಾಕ್ರಮಿ…

Read More

ಮಡಿಕೇರಿ ಜು.26 : ಕಾಡಾನೆಯೊಂದು ದಾಳಿ ನಡೆಸಿದ ಪರಿಣಾಮ ತೋಟದ ಕಾರ್ಮಿಕರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸುಂಟಿಕೊಪ್ಪ ಸಮೀಪದ ಕಂಬಿಬಾಣೆ ಅತ್ತೂರು ನಲ್ಲೂರು ಗ್ರಾಮದಲ್ಲಿ ನಡೆದಿದೆ. ಕಾರ್ಮಿಕ ವಿಜಯ್ ಕುಮಾರ್  (59) ತೀವ್ರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಅತ್ತೂರು ನಲ್ಲೂರು ಗ್ರಾಮದ ತೋಟಕ್ಕೆ ಕೆಲಸಕ್ಕೆಂದು ಬುಧವಾರ ಬೆಳಗ್ಗೆ ತೆರಳುತ್ತಿದ್ದ ಕಾರ್ಮಿಕರ ಗುಂಪಿನ ಮೇಲೆ ಕಾಡಾನೆ ದಾಳಿ ಮಾಡಿದೆ. ಉಳಿದ ಕಾರ್ಮಿಕರು ಓಡಿ ಹೋದರಾದರೂ ದಾಳಿಯಿಂದ ತಪ್ಪಿಸಿಕೊಳ್ಳಲಾಗದ ವಿಜಯಕುಮಾರ್ ಅವರ ಎದೆಯ ಭಾಗಕ್ಕೆ ಘಾಸಿ ಉಂಟಾಯಿತು. ತಕ್ಷಣ ಅವರಿಗೆ ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ನಂತರ ಮೈಸೂರು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಘಟನೆ ನಡೆದ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡರು.

Read More

ಮಡಿಕೇರಿ ಜು.26 : ಪ್ರಸಕ್ತ(2023-24) ಸಾಲಿನ ಮುಂಗಾರು ಹಂಗಾಮಿನಲ್ಲಿ ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು ಅನುಷ್ಠಾಗೊಳಿಸಲು ಕೊಡಗು ಜಿಲ್ಲೆಯಲ್ಲಿ ಕಾಳುಮೆಣಸು ಹಾಗೂ ಅಡಿಕೆ ಬೆಳೆಗೆ ವಿಮಾ ಘಟಕ ಅಧಿಸೂಚಿಸಲಾಗಿದೆ. ಹವಾಮಾನ ಆಧಾರಿತ ಅಂಶಗಳಾದ ಮಳೆಯ ಪ್ರಮಾಣ, ತಾಪಮಾನ ಮತ್ತಿತರ ಮಾಹಿತಿಯನ್ನು ಸ್ಥಳೀಯವಾಗಿ ಲಭ್ಯವಿರುವ ಟೆಲಿಮೆಟ್ರಿಕ್ ಮಳೆ ಮಾಪನ ಕೇಂದ್ರಗಳಲ್ಲಿ ದಾಖಲಿಸುವ ಅಂಶಗಳ ಆಧಾರದ ಮೇಲೆ ಬೆಳೆ ವಿಮೆ ನಷ್ಟವನ್ನು ತೀರ್ಮಾನಿಸಲಾಗುತ್ತದೆ. 2023-24ನೇ ಸಾಲಿನಲ್ಲಿ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ಬೆಳೆವಾರು ವಿಮಾ ಮೊತ್ತ ಕಾಳುಮೆಣಸು ಬೆಳೆಗೆ ಒಟ್ಟು ರೂ. 47 ಸಾವಿರ ಹಾಗೂ ಅಡಿಕೆ ಬೆಳೆಗೆ ರೂ. 128000 ಆಗಿರುತ್ತದೆ. ವಿಮಾ ಕಂಪನಿಗೆ ಒಟ್ಟು ವಿಮಾ ಮೊತ್ತಕ್ಕೆ ರೈತರು ಕಾಳುಮೆಣಸು ಬೆಳೆಗೆ ಶೇ. 5ರ ವಿಮಾ ಮೊತ್ತ ರೂ. 2350 ಹಾಗೂ ಅಡಿಕೆ ಬೆಳೆಗೆ ರೂ. 6400 ಪ್ರತಿ ಹೆಕ್ಟೇರ್ ಪಾವತಿಸಬೇಕಾಗಿರುತ್ತದೆ. ವಿಮಾ ನೋಂದಣಿಗೆ ಜುಲೈ, 31 ಕೊನೆಯ ದಿನವಾಗಿದೆ.…

Read More

ಮಡಿಕೇರಿ ಜು.26 : ಕರ್ನಾಟಕ ರಾಜ್ಯದ ಕುಟುಂಬದಲ್ಲಿನ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2000 ರೂ ನೀಡುವ “ಗೃಹಲಕ್ಷ್ಮಿ” ಯೋಜನೆ ಅನುಷ್ಠಾನದಲ್ಲಿದ್ದು, ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿರುವ ಬಾಪೂಜಿ ಸೇವಾ ಕೇಂದ್ರ, ಎಲ್ಲಾ ಗ್ರಾಮ ವ್ಯಾಪ್ತಿಯಲ್ಲಿರುವ ಗ್ರಾಮ ಒನ್ ಕೇಂದ್ರಗಳಲ್ಲಿ ಪಡಿತರ ಚೀಟಿ ಹೊಂದಿರುವ ಅರ್ಹ ಫಲಾನುಭವಿಗಳು ಗೃಹಲಕ್ಷ್ಮಿ ಯೋಜನೆಗೆ ಆನ್‍ಲೈನ್ ಮುಖಾಂತರ ಅರ್ಜಿ ಸಲ್ಲಿಸಿ ಮಂಜೂರಾತಿ ಪತ್ರ ಪಡೆಯಬಹುದಾಗಿದೆ. ಮಡಿಕೇರಿ ನಗರಸಭಾ ವ್ಯಾಪ್ತಿಗೆ ಸಂಬಂಧಿಸಿದಂತೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಮಹದೇವಪೇಟೆ, ಬೂಸ್ಟರ್ ಪಂಪ್ ಹೌಸ್ (ಮೈತ್ರಿ ಹಾಲ್ ಹತ್ತಿರ), ಡಾ.ಅಂಬೇಡ್ಕರ್ ಭವನ, ಸುದರ್ಶನ ಸರ್ಕಲ್, ಅಂಬೇಡ್ಕರ್ ಭವನ, ಆಜಾದ್‍ನಗರ, ಮಡಿಕೇರಿ ಇಲ್ಲಿ ಸೇವಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಗೆ ಸಂಬಂಧಿಸಿದಂತೆ ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಕಾರ್ಯಾಲಯ ಮತ್ತು ವಿರಾಜಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಗೆ ಸಂಬಂಧಪಟ್ಟಂತೆ ವಿರಾಜಪೇಟೆ ಪಟ್ಟಣ ಪಂಚಾಯಿತಿ ಕಾರ್ಯಾಲಯಗಳಲ್ಲಿ ಸೇವಾ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿದೆ. ಕುಶಾಲನಗರ ಪುರಸಭೆ ವ್ಯಾಪ್ತಿಗೆ ಸಂಬಂಧಿಸಿದಂತೆ ಕುಶಾಲನಗರ ಪುರಸಭಾ ಕಾರ್ಯಾಲಯ,…

Read More