ಲೇಖಕ: admin

ಮಡಿಕೇರಿ ಜು.26 : ಮಣಿಪುರದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯವನ್ನು ಖಂಡಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ (ಸಿಐಟಿಯು) ಕೊಡಗು ಜಿಲ್ಲಾ ಸಮಿತಿ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಕಾರರು ಮಣಿಪುರದ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು. ಈ ಸಂದರ್ಭ ಸಮಿತಿಯ ಜಿಲ್ಲಾಧ್ಯಕ್ಷ ಪಿ.ಆರ್.ಭರತ್ ಮಾತನಾಡಿ, ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿದರು. ಮಣಿಪುರದಲ್ಲಿ ಕಳೆದ ಮೂರು ತಿಂಗಳಿನಿಂದ ನಿರಂತರವಾಗಿ ನಡೆಯುತ್ತಿರುವ ಕೋಮು ಸಂಘರ್ಷ ಅತ್ಯಂತ ಗಂಭೀರ ಸ್ವರೂಪ ಪಡೆಯುತ್ತಿದ್ದು, ಮಹಿಳೆಯರು ಜೀವ ಕಳೆದುಕೊಳ್ಳುತ್ತಿದ್ದಾರೆ. ಇದೊಂದು ಅಮಾನವೀಯ ಕೃತ್ಯವಾಗಿದ್ದು, ಕೇಂದ್ರ ಸರ್ಕಾರವಾಗಲೀ, ಅಲ್ಲಿನ ರಾಜ್ಯ ಸರ್ಕಾರವಾಗಲೀ ಯಾವುದೇ ಕ್ರಮಗಳನ್ನು ಕೈಗೊಳ್ಳದಿರುವುದು ಖಂಡನೀಯ ಎಂದರು. ಜಿಲ್ಲಾ ಪ್ರಧನಾ ಕಾರ್ಯದರ್ಶಿ ಎ.ಸಿ.ಸಾಬು ಮಾತನಾಡಿ, ಮಣಿಪುರದ ಹಿಂಸಾಚಾರವನ್ನು ನಿಯಂತ್ರಿಸುವಲ್ಲಿ ಅಲ್ಲಿನ ರಾಜ್ಯ ಮತ್ತು ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದರು. ತಕ್ಷಣವೇ ಮಣಿಪುರದಲ್ಲಿ ಶಾಂತಿ ಸ್ಥಾಪಿಸಲು…

Read More

ಮಡಿಕೇರಿ ಜು.26 : ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಮೂಲಕ ಸಮಾಜವನ್ನು ಸರಿದಾರಿಯಲ್ಲಿ ನಡೆಯುವಂತೆ ಮಾಡಲು ಮಾಧ್ಯಮಗಳು ಅತ್ಯವಶ್ಯಕ ಎಂದು ವೀರಾಜಪೇಟೆ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ  ಎ.ಎಸ್.ಪೊನ್ನಣ್ಣ ಹೇಳಿದರು. ಕೊಡಗು ಪತ್ರಕರ್ತರ ಸಂಘದ ವೀರಾಜಪೇಟೆ ತಾಲೂಕು ಘಟಕ ಹಾಗೂ ಅರಮೇರಿ ಕಳಂಚೇರಿ ಮಠದ ಸಂಯುಕ್ತಾಶ್ರಯದಲ್ಲಿ ಅರಮೇರಿ ಮಠದಲ್ಲಿ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸರ್ಕಾರ ದಾರಿ ತಪ್ಪಿದಾಗ ಎಚ್ಚರಿಸಬೇಕಾದುದು ಮಾದ್ಯಮಗಳ ಜವಾಬ್ದಾರಿಯಾಗಿದೆ. ಸಂವಿಧಾನದಲ್ಲಿ ಪತ್ರಿಕಾ ರಂಗವನ್ನು ನಾಲ್ಕನೇಯ ಅಂಗವಾಗಿ ಗುರುತಿಸಲಾಗಿದ್ದು, ಪತ್ರಿಕಾ ರಂಗದ ರಕ್ಷಣೆ ನಮ್ಮೆಲ್ಲರ ಹೊಣೆ ಎಂದು ಪೊನ್ನಣ್ಣ ನುಡಿದರು. ಪತ್ರಿಕೆಗಳನ್ನು ನಡೆಸುವವರು ಇಂದಿನ ಕಾಲಘಟ್ಟದಲ್ಲಿ ಸಂಕಷ್ಟದಲ್ಲಿದ್ದಾರೆ. ಸಾಮಾಜಿಕ ಜಾಲತಾಣಗಳ ಭರಾಟೆಯಿಂದ ಪತ್ರಿಕೆಗಳ ಅಸ್ತಿತ್ವಕ್ಕೆ ಧಕ್ಕೆಯಾಗುತ್ತಿದೆ.ಬಹಳಷ್ಟು ನಕಲಿ ಪತ್ರಕರ್ತರು ಹುಟ್ಟಿಕೊಳ್ಳುತಿದ್ದು, ಪತ್ರಕರ್ತರ ಸಂಘಗಳು ಅಂಥವರಿಗೆ ಕಡಿವಾಣ ಹಾಕುವ ಕೆಲಸ ಮಾಡಬೇಕು. ಉತ್ತಮವಾದ ಪತ್ರಿಕೆಗಳು ಮತ್ತು ಉತ್ತಮ ಪತ್ರಕರ್ತರನ್ನು ಉಳಿಸುವ ಕೆಲಸವಾಗಬೇಕು. ಪತ್ರಕರ್ತರ ಸಂಘಗಳು ಸದೃಢವಾಗಬೇಕು ಎಂದು ಅಭಿಪ್ರಾಯಪಟ್ಟರು. ಮುಖ್ಯ ಭಾಷಣಕಾರರಾಗಿ ಆಗಮಿಸಿದ್ದ ಶಕ್ತಿ ದಿನ…

Read More

ಮಡಿಕೇರಿ ಜು.26 :  ಮಡಿಕೇರಿ ತಾಲೂಕಿನ ಬಾಡಗ ಬಳಿ ಚ.14 ರಿಂದ 16 ಕಿ.ಮೀ ವರೆಗೆ ವಿರಾಜಪೇಟೆ ಬೈಂದೂರು ರಸ್ತೆಯಲ್ಲಿ ಮಳೆ ನೀರು ಸಾರಾಗವಾಗಿ ಹರಿಯುವಂತಾಗಲು ಚರಂಡಿ ಮಾರ್ಗ ವನ್ನು ಸ್ವಚ್ಚಗೊಳಿಸಲಾಯಿತು.

Read More

ಮಡಿಕೇರಿ ಜು.26  : ಕೊಡಗು ಜಿಲ್ಲಾ ಬಂಟರ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜು.30ರಂದು ನಡೆಯಲಿದೆ. ಯುವ ಬಂಟ್ಸ್ ಅಸೋಸಿಯೇಷನ್ ಮುಂದಾಳತ್ವದಲ್ಲಿ ಗಾಳಿಬೀಡುವಿನ ಹೊರಮಲೆ‌ ಶಿವಪ್ರಸಾದ್ ರೈ ಅವರ ಭತ್ತದ ಗದ್ದೆಯಲ್ಲಿ ‘ಆಟಿಡೊಂಜಿ ದಿನ ಕೆಸರ್ದ ಗೊಬ್ಬು’ ಕಾರ್ಯಕ್ರಮ ಆಯೋಜಿಸಲಾಗಿದೆ. ಇದೇ ಕಾರ್ಯಕ್ರಮದಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ ನಡೆಯಲಿದೆ. ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಶೇ.85ಕ್ಕಿಂತ ಹೆಚ್ಚು ಅಂಕ ಪಡೆದ 16 ವಿದ್ಯಾರ್ಥಿಗಳು ಆಯ್ಕೆಯಾಗಿದ್ದು, ಕಾರ್ಯಕ್ರಮದಲ್ಲಿ ಗೌರವಿಸಲಾಗುವುದು ಎಂದು ಜಿಲ್ಲಾ ಬಂಟರ ಸಂಘದ ಅಧ್ಯಕ್ಷ ಬಿ.ಡಿ.ಜಗದೀಶ್ ರೈ ಹಾಗೂ ಕಾರ್ಯದರ್ಶಿ ರವೀಂದ್ರ ವಿ. ರೈ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಮಡಿಕೇರಿ ಜು.26 : ಮುಂಬರುವ ಮಹಾರಾಜ ಟ್ರೋಫಿ- 2023ಕ್ಕಾಗಿ ಸೈಕಲ್ ಪ್ಯೂರ್ ಅಗರಬತ್ತಿ ಒಡೆತನದ ಮೈಸೂರು ವಾರಿಯರ್ಸ್ ತಂಡದಿಂದ ಜು.29 ರಂದು ಮೈಸೂರಿನಲ್ಲಿ ಟ್ಯಾಲೆಂಟ್ ಹಂಟ್ ನಡೆಯಲಿದೆ. ಭಾರತದ ಪ್ರಮುಖ ಅಗರಬತ್ತಿ ತಯಾರಕರು ಮತ್ತು ಮೈಸೂರು ವಾರಿಯರ್ಸ್ನ ಹೆಮ್ಮೆಯ ಮಾಲೀಕರಾದ ಸೈಕಲ್ ಪ್ಯೂರ್ ಅಗರಬತ್ತಿ, ಕರ್ನಾಟಕದ ವಿವಿಧ ಪ್ರದೇಶಗಳಿನ ಕ್ರೀಡಾ ಪ್ರತಿಭೆಗಳಿಗೆ ವೇದಿಕೆ ಒದಗಿಸುವ ಉದ್ದೇಶದಿಂದ ಮುಂಬರುವ ಮಹಾರಾಜ ಟ್ರೋಫಿ ಕೆಎಸ್‌ಸಿಎ ಟಿ-20 2023 ಸರಣಿಗಾಗಿ ಜುಲೈ 29 ರಂದು ಮೈಸೂರು ನಗರದ ಎಸ್‌ಎನ್‌ಡಿಆರ್ ಕ್ರೀಡಾಂಗಣದಲ್ಲಿ ಟ್ಯಾಲೆಂಟ್ ಹಂಟ್ ಅನ್ನು ಆಯೋಜಿಸಿದೆ. ಈ ಕಾರ್ಯಕ್ರಮ ದೂರದ ಪ್ರದೇಶಗಳ ಮಹತ್ವಾಕಾಂಕ್ಷಿ ಕ್ರೀಡಾಪಟುಗಳನ್ನು ವಿಶೇಷವಾಗಿ ಕ್ರಿಕೆಟ್ ಕ್ಷೇತ್ರದಲ್ಲಿನ ಪ್ರತಿಭೆಗಳನ್ನು ಗುರುತಿಸುವ ಗುರಿಯನ್ನು ಹೊಂದಿದೆ. ರಾಜ್ಯದ ಎಲ್ಲಾ ಉದಯೋನ್ಮುಖ ಪ್ರತಿಭೆಗಳನ್ನು ಈ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದ್ದು, ತಮ್ಮ ಕೌಶಲ್ಯಗಳನ್ನು ಪ್ರದರ್ಶಿಸಬಹುದು ಮತ್ತು ಈ ವರ್ಷದ ಮಹಾರಾಜ ಟ್ರೋಫಿ ಪಂದ್ಯಾವಳಿಯಲ್ಲಿ ಸ್ಪರ್ಧಿಸುವ ಅವಕಾಶವನ್ನು ಪಡೆದುಕೊಳ್ಳಬಹುದು. ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (ಕೆಎಸ್‌ಸಿಎ) ಅಡಿಯಲ್ಲಿ ನೋಂದಾಯಿತ ಕ್ಲಬ್‌ಗಳನ್ನು ಪ್ರತಿನಿಧಿಸುವ ಅತ್ಯುತ್ತಮ…

Read More

ಮಡಿಕೇರಿ ಜು.26  : ಕೊಡಗು ಜಿಲ್ಲೆಯ ಮಾಜಿ ಸೈನಿಕರ ಪ್ರಮುಖ ಬೇಡಿಕೆಯಾಗಿರುವ ಮಡಿಕೇರಿಯಲ್ಲಿ ಸಮುದಾಯ ಭವನ ನಿಮಾ೯ಣ ಸಂಬಂಧಿತ ಸಕಾ೯ರದ ಮಟ್ಟದಲ್ಲಿ ಚಚಿ೯ಸಿ ಬೇಡಿಕೆ ಈಡೇರಿಸುವ ಪ್ರಯತ್ನ ಮಾಡುತ್ತೇನೆ ಎಂದು ಮಡಿಕೇರಿ ಶಾಸಕ ಡಾ.ಮಂಥರ್ ಗೌಡ ಹೇಳಿದ್ದಾರೆ. ಮಡಿಕೇರಿಯ ಜನರಲ್ ತಿಮ್ಮಯ್ಯ ಸ್ಮಾರಕ ಭವನದಲ್ಲಿ ರೋಟರಿ ವುಡ್ಸ್ ವತಿಯಿಂದ ನೆಹರು ಯುವಕೇಂದ್ರ ಹಾಗೂ ಕೊಡಗು ಜಿಲ್ಲಾ ಔಷಧಿ ವ್ಯಾಪಾರಸ್ಥರ ಸಂಘದ ಸಹಯೋಗದಲ್ಲಿ ಆಯೋಜಿತ ಕಾಗಿ೯ಲ್ ದಿನಾಚರಣೆ ಕಾಯ೯ಕ್ರಮದಲ್ಲಿ ಪಾಲ್ಗೊಂಡು ನಿವೖತ್ತ ವಾಯುಸೇನಾಧಿಕಾರಿ ಕಿಗ್ಗಾಲು ಗಿರೀಶ್ ಅವರನ್ನು ಸನ್ಮಾನಿಸಿ ಮಂಥರ್ ಗೌಡ ಮಾತನಾಡಿದರು. ಜಿಲ್ಲೆಯಲ್ಲಿ 5000 ಕ್ಕೂ ಅಧಿಕ ನಿವೖತ್ತ ಯೋಧರಿದ್ದಾರೆ. ಬೇರೆ ಜಿಲ್ಲೆಗಳಲ್ಲಿ ನಿವೖತ್ತ ಯೋಧರಿಗೆ ಅವರದ್ದೇ ಆದ ಸಮುದಾಯ ಭವನಗಳಿದೆ. ಆದರೆ ಬಹಳ ವಷ೯ಗಳಿಂದಲೂ ಮಾಜಿ ಸೈನಿಕರ ಮುಖ್ಯ ಬೇಡಿಕೆಯಾಗಿದ್ದ ಸಮುದಾಯ ಭವನದ ಅಗತ್ಯತೆ ಇಂದಿಗೂ ಈಡೇರಿಲ್ಲ. ಆದರೆ ಇದನ್ನು ಗಂಭೀರವಾಗಿ ಪರಿಗಣಿಸಿರುವ ತಾನು ಜಿಲ್ಲಾಡಳಿತದ ಮೂಲಕ ಸೂಕ್ತ ನಿವೇಶನ ಗುರುತಿಸಿ ಸಮುದಾಯ ಭವನವನ್ನು ಮಾಜಿ ಸೈನಿಕರ ಸಂಘಕ್ಕೆ ನೀಡುವ…

Read More

ಮಡಿಕೇರಿ ಜು.26 :  ಭಾರತೀಯ ವಾಯುಪಡೆಯು ವಿಜ್ಞಾನ ಮತ್ತು ವಿಜ್ಞಾನೇತರ ಸ್ಟ್ರೀಮ್‌ಗಳಿಗಾಗಿ ಅಗ್ನಿಪಥ್ ಯೋಜನೆಯಡಿ ವಾಯುಸೇನೆಯಲ್ಲಿ ಅಗ್ನಿವೀರ್ ವಾಯು ಹುದ್ದೆಯಲ್ಲಿ ಸೇವೆಸಲ್ಲಿಸಲು  ಯುವಕ, ಯುವತಿಯರಿಂದ ಆನ್‌ಲೈನ್ ಅರ್ಜಿಗಳನ್ನುಆಹ್ವಾನಿಸಲಾಗಿದೆ. 13 Oct 2023 ರಲ್ಲಿ ನಡೆಯುವ ಆನ್‌ಲೈನ್ ಆಯ್ಕೆ ಪರೀಕ್ಷೆಗಾಗಿ, ಪಿಯುಸಿ (ವಿಜ್ಞಾನ, ವಾಣಿಜ್ಯ, ಕಲೆ ಮತ್ತು ಡಿಪ್ಲೊಮಾ ಯಾವುದೇ ವಿಷಯಗಳಲ್ಲಿ) ಕನಿಷ್ಠ ಶೇ. 50 ಮತ್ತು ಇಂಗ್ಲಿಷ್‌ನಲ್ಲಿ ಶೇ. 50 ಅಂಕಗಳೊಂದಿಗೆ, ಉತ್ತೀರ್ಣರಾದ ಅವಿವಾಹಿತ ಯುವಕ, ಯುವತಿಯರಿಂದ ಆನ್‌ಲೈನ್ ಅರ್ಜಿಗಳನ್ನುಆಹ್ವಾನಿಸಲಾಗಿದೆ. ಆನ್‌ಲೈನ್ ನೋಂದಣಿ ಜು. 27 ರಿಂದ ಆ.17ರ  ವರೆಗೆ ತೆರೆದಿರುತ್ತದೆ. ಅಭ್ಯರ್ಥಿಗಳು  2003 ಜೂನ್ 27  ರಿಂದ 2006  ಡಿಸೆಂಬರ್  27ರ ನಡುವೆ (ಎರಡೂ ದಿನಾಂಕಗಳನ್ನು ಒಳಗೊಂಡಂತೆ) ಜನಿಸಿದವರಾಗಿರಬೇಕು.  ಆನ್‌ಲೈನ್ ಅರ್ಜಿ ನೋಂದಣಿಗಾಗಿ https://agnipathvayu.cdac.in ವೆಬ್ಸೈಟ್ ಗೆ ಭೇಟಿ ನೀಡಿ,  ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ   ನೋಂದಣಿಗೆ 2023 ಆಗಸ್ಟ್ 17 ಕೊನೆಯ ದಿನ. ಹೆಚ್ಚಿನ ವಿವರಗಳಿಗಾಗಿ https://careerindianairforce.cdac.in ವೆಬ್ಸೈಟ್ ಗೆ ಭೇಟಿ ನೀಡಿ.

Read More

ಮಡಿಕೇರಿ ಜು.26 :  ಗಾಳಿಬೀಡು ಗ್ರಾ.ಪಂ ಗೆ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಭೇಟಿ ನೀಡಿದರು. ಗ್ರಾ.ಪಂ  ಅಧಿಕಾರಿಗಳೊಂದಿಗೆ ಹಾಗೂ ಗ್ರಾಮಸ್ಥರೊಂದಿಗೆ ಸಮಾಲೋಚನೆ ಹಾಗೂ ತುರ್ತು ಪರಿಸ್ಥಿತಿಯ ಬಗ್ಗೆ ಚರ್ಚಿಸಿದರು. ನಂತರ ವಣಚಲು ಗ್ರಾಮಕ್ಕೆ ಭೇಟಿ ನೀಡಿ ಬರೆ ಕುಸಿತ ಉಂಟಾದ ಸ್ಥಳ ವನ್ನು ಪರಿಶೀಲಿಸಿದರು. ಇದೇ ಸಂದರ್ಭ  ಗಾಳಿಬೀಡು ಮುಖ್ಯ ರಸ್ತೆಯನ್ನು ದುರಸ್ತಿ ಪಡಿಸಿ ರಸ್ತೆ ಅಗಲೀಕರಣ ಮಾಡಿಸುದಾಗಿ ಸಚಿವರು  ಭರವಸೆ ನೀಡಿದರು. ಶಾಸಕ ಮಂಥರ್ ಗೌಡ, ಜಿಲ್ಲಾಧಿಕಾರಿ ವೆಂಕಟರಾಜಾ, ಪೊಲೀಸ್ ವರಿಷ್ಠಾಧಿಕಾರಿ ರಾಮರಾಜನ್ ಸೇರಿದಂತೆ ಅಧಿಕಾರಿಗಳು ಹಾಜರಿದ್ದರು.

Read More

ಕುಶಾಲನಗರ, ಜು.26: ವಿದ್ಯಾರ್ಥಿ ಸಮುದಾಯದಲ್ಲಿ ಉತ್ತಮ ವ್ಯಕ್ತಿತ್ವ ಹಾಗೂ ಉತ್ತಮ ನಾಗರಿಕನನ್ನಾಗಿ ರೂಪಿಸಲು ಸಹಕಾರಿಯಾಗಿರುವ ರಾಷ್ಟ್ರೀಯ ಸೇವಾ ಯೋಜನೆ( ಎನ್.ಎಸ್.ಎಸ್.)ಯ ಚಟುವಟಿಕೆಗಳು ವಿದ್ಯಾರ್ಥಿಗಳಿಗೆ ಭವಿಷ್ಯದ ಕುರಿತು ಸಾಮಾಜಿಕ ಸವಾಲುಗಳನ್ನು ಸಮರ್ಥವಾಗಿ ಎದುರಿಸಲು ಕಲಿಸುವುದರೊಂದಿಗೆ ಅವರಲ್ಲಿ ಸೇವಾ ಮನೋಭಾವನೆ ಬೆಳೆಸಲು ಸೂಕ್ತ ವೇದಿಕೆ ಒದಗಿಸುತ್ತದೆ ಎಂದು ರಾಜ್ಯ ಎನ್‌ಎಸ್‌ಎಸ್‌  ಕಾರ್ಯಕ್ರಮ ಅಧಿಕಾರಿ ಪ್ರತಾಪ್ ಲಿಂಗಯ್ಯ ಹೇಳಿದರು. ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ  ಮೈಸೂರು ವಿಶ್ವವಿದ್ಯಾಲಯದ ಎನ್‌ಎಸ್‌ಎಸ್‌ ಯೋಜನೆ, ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಹಾಗೂ ಎನ್‌ಎಸ್‌ಎಸ್‌  ಜಿಲ್ಲಾ ಘಟಕದ ವತಿಯಿಂದ ಜಿಲ್ಲಾ ಸರ್ಕಾರಿ ಪ್ರೌಢಶಾಲೆಗಳ ಎನ್‌ಎಸ್‌ಎಸ್‌ ಘಟಕಗಳ ಮುಖ್ಯ ಶಿಕ್ಷಕರು ಹಾಗೂ ಕಾರ್ಯಕ್ರಮ ಅಧಿಕಾರಿಗಳಿಗೆ ಏರ್ಪಡಿಸಿದ್ದ ಎನ್‌ಎಸ್‌ಎಸ್‌ ಕಾರ್ಯಾಗಾರವನ್ನು ಉದ್ಘಾಟಿಸಿ ಎನ್‌ಎಸ್‌ಎಸ್‌.ಕಾರ್ಯ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು. ಎನ್.ಎಸ್.ಎಸ್. ಶಾಲಾ – ಕಾಲೇಜು ವಿದ್ಯಾರ್ಥಿಗಳಲ್ಲಿ ಶಿಸ್ತು- ಸಂಯಮ, ಸೇವಾ ಮನೋಭಾವನೆ, ರಾಷ್ಟ್ರೀಯ ಭಾವೈಕ್ಯತೆ, ಸೇವಾ ಮನೋಭಾವ ಬೆಳೆಸುವುದರೊಂದಿಗೆ ಅವರಲ್ಲಿ ಉತ್ತಮ ನಾಯಕತ್ವ ಹಾಗೂ ವ್ಯಕ್ತಿತ್ವವನ್ನು ಬೆಳೆಸಲು ಉತ್ತಮ ಅವಕಾಶ ಕಲ್ಪಿಸುತ್ತದೆ ಎಂದರು.…

Read More

ಮಡಿಕೇರಿ ಜು.26 : ಕೊಡಗು ಗೌಡ ಸಮಾಜ, ಮಡಿಕೇರಿ ಗೌಡ ಸಮಾಜ ಮತ್ತು ಜಿಲ್ಲೆಯ ಎಲ್ಲಾ ಗೌಡ ಸಮಾಜಗಳ ಸಂಘಟನೆಗಳ ಸಹಯೋಗದಲ್ಲಿ ಜು.28 ರಂದು ಶಾಸಕದ್ವಯರಿಗೆ ಅಭಿನಂದನಾ ಸಮಾಂಭವನ್ನು ಆಯೋಜಿಸಲಾಗಿದೆ ಎಂದು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಸೂರ್ತಲೆ ಆರ್.ಸೋಮಣ್ಣ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಶುಕ್ರವಾರ ಬೆಳಗ್ಗೆ 9.30 ಗಂಟೆಗೆ ಮಡಿಕೇರಿಯ ಕೊಡಗು ಗೌಡ ಸಮಾಜದ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಸನ್ಮಾನಿಸಿ ಗೌರವಿಸಲಾಗುವುದು ಎಂದು ಹೇಳಿದ್ದಾರೆ. ಅಭಿವೃದ್ಧಿಪರ ಚಿಂತನೆಯ ಇಬ್ಬರು ಉತ್ಸಾಹಿ ಶಾಸಕರುಗಳು ಹೊಸ ಭರವಸೆಯನ್ನು ಮೂಡಿಸಿದ್ದು, ಇವರುಗಳನ್ನು ಗೌಡ ಜನಾಂಗದ ಮೂಲಕ ಅಭಿನಂದಿಸಿ ಮತ್ತಷ್ಟು ಪ್ರೋತ್ಸಾಹ ನೀಡುವ ಅಗತ್ಯವಿದೆ. ಆದ್ದರಿಂದ ಅಭಿನಂದನಾ ಸಮಾರಂಭದಲ್ಲಿ ಎಲ್ಲಾ ಗೌಡ ಸಮಾಜಗಳ ಮತ್ತು ಸಂಘಟನೆಗಳ ಅಧ್ಯಕ್ಷರುಗಳು, ಪದಾಧಿಕಾರಿಗಳು, ಜನಾಂಗ ಬಾಂಧವರು ಹಾಗೂ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಸೂರ್ತಲೆ ಸೋಮಣ್ಣ ಮನವಿ ಮಾಡಿದ್ದಾರೆ.

Read More