ಸೋಮವಾರಪೇಟೆ ಜು.26 : ಸಣ್ಣ ಕಾಫಿ ಬೆಳೆಗಾರರ 10ಹೆಚ್.ಪಿ.ವರೆಗಿನ ಪಂಪ್ಸೆಟ್ಗಳಿಗೆ ಉಚಿತ ವಿದ್ಯುತ್ ನೀಡಬೇಕು. ಬಾಕಿ ವಿದ್ಯುತ್ ಬಿಲ್ ಮನ್ನಾ ಮಾಡದ್ದಿದ್ದರೆ ಹೋರಾಟಕ್ಕೆ ಕರೆ ನೀಡಲಾಗುವುದು ಎಂದು ರಾಜ್ಯ ರೈತ ಸಂಘದ ಸೋಮವಾರಪೇಟೆ ತಾಲ್ಲೂಕು ಘಟಕ ಎಚ್ಚರಿಸಿದೆ. ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ತಾಲ್ಲೂಕು ಘಟಕದ ಅಧ್ಯಕ್ಷ ಕೆ.ಎಂ.ದಿನೇಶ್ ಪತ್ರಿಕಾಗೋಷ್ಠಿಯಲ್ಲಿ, ಪ್ರತಿವರ್ಷ ಅಕಾಲಿಕ ಮಳೆ, ಫಸಲು ಹಾನಿಯಿಂದ ನಷ್ಟದಲ್ಲಿರುವ ಸಣ್ಣ ಕಾಫಿ ಬೆಳೆಗಾರರ 10ಎಚ್.ಪಿ.ಪಂಪ್ಸೆಟ್ಗಳಿಗೆ ಉಚಿತ ವಿದ್ಯುತ್ ಮತ್ತು ವಿದ್ಯುತ್ ಬಾಕಿ ಬಿಲ್ ಮನ್ನಾ ಬೇಡಿಕೆಯಿಟ್ಟು ಹೋರಾಟ ಮಾಡುತ್ತಿದ್ದೇವೆ. ಹಿಂದಿನ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಕೆಲವು ನಿಂಬಂಧನೆ ಹಾಕಿ ಉಚಿತ ವಿದ್ಯುತ್ ನೀಡುತ್ತೇವೆ ಎಂದು ಹೇಳಿತ್ತು. ಆದರೆ ಇದುವರಗೆ ಯವುದೇ ಕ್ರಮ ಆಗಿಲ್ಲ. ಇಂದಿನ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿವೇಶನದಲ್ಲಿ ಯಾವುದೇ ತೀರ್ಮಾನ ತೆಗೆದುಕೊಳ್ಳುತ್ತಿಲ್ಲ ಎಂದು ಹೇಳಿದರು. ಜಿಲ್ಲೆಯ ಶಾಸಕರಿಬ್ಬರೂ ಮೌನಕ್ಕೆ ಶರಣಾಗಿದ್ದಾರೆ. ಚಿಕ್ಕಮಗಳೂರು, ಹಾಸನ ಜಿಲ್ಲೆಯ ಶಾಸಕರನ್ನು ಸೇರಿಸಿಕೊಂಡು ಸರ್ಕಾರದ ಮೇಲೆ ಒತ್ತಡ ತಂದು, ಉಚಿತ ವಿದ್ಯುತ್ಗೆ ಕಾನೂನಾತ್ಮಕ ಮಂಜೂರಾತಿ…
ಲೇಖಕ: admin
ಬೆಂಗಳೂರು: ಕಾರ್ಗಿಲ್ ವಿಜಯ ದಿವಸದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಿದ್ದಾರೆ. ಬೆಂಗಳೂರಿನ ಇಂದಿರಾಗಾಂಧಿ ಉದ್ಯಾನವನದಲ್ಲಿರುವ ಹುತಾತ್ಮ ಯೋಧರ ಪ್ರತಿಮೆಗೆ ಪುಷ್ಪಗುಚ್ಛ ಇಟ್ಟು ನಮನ ಸಲ್ಲಿಸಿದರು. ಈ ಸಂದರ್ಭ ಗೃಹ ಸಚಿವ ಡಾ. ಜಿ. ಪರಮೇಶ್ವರ ಹಾಜರಿದ್ದರು. ನಂತರ ಟ್ವೀಟ್ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಈ ನೆಲದ ಅಖಂಡತೆ ಮತ್ತು ಸಾರ್ವಭೌಮತೆಯ ರಕ್ಷಣೆಗಾಗಿ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಭಾರತಾಂಬೆಯ ವೀರ ಪುತ್ರರಿಗೆ ನನ್ನ ಗೌರವ ನಮನಗಳು. ಭಾರತೀಯ ಯೋಧರ ತ್ಯಾಗ- ಬಲಿದಾನ, ಸಮರ್ಪಣಾಭಾವವನ್ನು ಕಾರ್ಗಿಲ್ ವಿಜಯ ದಿನದಂದು ಹೆಮ್ಮೆಯಿಂದ ಸ್ಮರಿಸೋಣ ಎಂದರು.
ಸೋಮವಾರಪೇಟೆ ಜು.25 : ಡಾ. ಮಂಥರ್ ಗೌಡ ಅಭಿಮಾನಿ ಬಳಗದ ಉದ್ಘಾಟನೆ ಹಾಗೂ ಶಾಸಕರಿಗೆ ಸನ್ಮಾನ ಕಾರ್ಯಕ್ರಮ ಸ್ಥಳೀಯ ಕೊಡವ ಸಮಾಜದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಶಾಸಕ ಡಾ.ಮಂಥರ್ ಗೌಡ, ಯುವ ಸಮುದಾಯವನ್ನು ದೇಶದ ಶಕ್ತಿಯನ್ನಾಗಿಸುವ ಜವಾಬ್ದಾರಿ ನಮ್ಮ ಮೇಲಿದೆ. ಡ್ರಗ್ಸ್ ಮುಕ್ತ ಕೊಡಗು ನಿರ್ಮಾಣದ ಸಂಕಲ್ಪ ನನ್ನದಾಗಿದ್ದು, ಇದಕ್ಕೆ ಜನತೆ ಸಹಕಾರ ನೀಡಬೇಕು ಎಂದರು. ಕ್ಷೇತ್ರದ ಅಭಿವೃದ್ಧಿಗೆ ಸದಾ ಬದ್ಧವಾಗಿದ್ದು, ಗ್ರಾಮಗಳ ಅಭಿವೃದ್ಧಿಗೆ ಒತ್ತು ನೀಡಲಾಗುವುದು. ಡ್ರಗ್ಸ್ ಮುಕ್ತ ಕೊಡಗು ನಿರ್ಮಾಣ, ಶಾಲಾ ಕಾಲೇಜುಗಳಲ್ಲಿ ಉತ್ತಮ ಪರಿಸರ ನಿರ್ಮಾಣ, ಪ್ರತಿ ಗ್ರಾಮಗಳಲ್ಲಿ ಯುವಕ ಸಂಘಗಳ ಬಲವರ್ಧನೆಗೆ ಶ್ರಮಿಸಲಾಗುವುದು ಎಂದರು. ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡ ಹೆಚ್.ಆರ್. ಸುರೇಶ್, ವಿ.ಪಿ. ಶಶಿಧರ್, ಕೆ.ಎಂ. ಲೋಕೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ. ಸತೀಶ್, ಪ್ರಮುಖರಾದ ನಾಗೇಂದ್ರ ಬಾಬು, ಎಸ್.ಎಂ. ಚಂಗಪ್ಪ, ಕೆ.ಎ. ಯಾಕೂಬ್, ಬಿ.ಈ. ಜಯೇಂದ್ರ, ಡಾ. ಮಂಥರ್ ಗೌಡ ಅಭಿಮಾನಿ ಬಳಗದ ಅಧ್ಯಕ್ಷ ಸುಜಿತ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಮಡಿಕೇರಿ ಜು.26 : ಸೋಮವಾರಪೇಟೆಯ ಹಾನಗಲ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾನಗಲ್ಲು ಬಾಣೆ ಯಲ್ಲಿ ಮಳೆಹಾನಿ ಸಂಭವಿಸಿದ ಸ್ಥಳಕ್ಕೆ ಶಾಸಕ ಡಾ.ಮಂತರ್ ಗೌಡ ಅಧಿಕಾರಿಗಳೊಂದಿಗೆ ಭೇಟಿ ನೀಡಿದರು. ಮಳೆಯಿಂದ ಹಾನಿಗೊಳಗಾದ ಮನೆಗಳನ್ನು ಪರಿಶೀಲಿಸಿ, ಜಿಲ್ಲೆಯಲ್ಲಿ ಇನ್ನೂ ಮಳೆಯಾಗುವುದರಿಂದ ಹೆಚ್ಚಿನ ಮುನ್ನೆಚ್ಚರ ವಹಿಸಬೇಕಿದೆ ಎಂದು ಶಾಸಕರು ಹೇಳಿದರು.
ಮಡಿಕೇರಿ ಜು.26 : ಹಿಂದು ಜಾಗರಣ ವೇದಿಕೆ, ಮಡಿಕೇರಿ ಮಾಜಿ ಸೈನಿಕರ ಸಂಘದ ಸಹಯೋಗದಲ್ಲಿ ಮಡಿಕೇರಿಯಲ್ಲಿ ಕಾರ್ಗಿಲ್ ವಿಜಯ್ ದಿವಸ್ ಆಚರಿಸಲಾಯಿತು. ನಗರದ ಮುಖ್ಯ ರಸ್ತೆಯಲ್ಲಿರುವ ಯುದ್ಧ ಸ್ಮಾರಕಕ್ಕೆ ನಿವೃತ್ತ ಯೋಧರು, ಹಿಂದು ಜಾಗರಣ ವೇದಿಕೆ, ಹಿಂದು ಯುವ ವಾಹಿನಿ ಹಾಗೂ ದೇಶಾಭಿಮಾನಿಗಳು ಪುಷ್ಪರ್ಚನೆ ಮಾಡಿ ಗೌರವ ನಮನ ಸಲ್ಲಿಸಿ, ಸೈನಿಕರ ತ್ಯಾಗ ಬಲಿದಾವನ್ನು ಸ್ಮರಿಸಿದರು. ಈ ಸಂದರ್ಭ ಮಾತನಾಡಿದ ಮಾಜಿ ಸೈನಿಕಾಧಿಕಾರಿ ಮೇಜರ್ ಬಿದ್ದಂಡ ನಂಜಪ್ಪ, ಗಡಿಯಲ್ಲಿದ್ದು ನಮ್ಮ ಜೀವವನ್ನು ಉಳಿಸುವ ಕೆಲಸ ಯೋಧರು ಮಾಡುತ್ತಿದ್ದು ಅವರನ್ನು ನಿತ್ಯ ಸ್ಮರಿಸಬೇಕು ಹಾಗೂ ಮುಂದಿನ ಪಿಳಿಗೆಗೆಗೂ ಇದರ ಬಗ್ಗೆ ಅರಿವು ಮೂಡಬೇಕು ಎಂದರು. ಈ ಸಂದರ್ಭ ಮಾಜಿ ಸೈನಿಕರು, ಗಣ್ಯರು ಹಾಗೂ ಸಂಘ-ಸಂಸ್ಥೆಗಳ ಪ್ರಮುಖರು ಪಾಲ್ಗೊಂಡಿದ್ದರು. ವಿಜಯ್ ದಿವಸ್ ಅಂಗವಾಗಿ ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ರಕ್ತದಾನ ಶಿಬಿರ ನಡೆಯಿತು.
ಮಡಿಕೇರಿ ಜು.26 : ಗಾಳಿಬೀಡು ಗ್ರಾ.ಪಂ ವ್ಯಾಪ್ತಿಯ ಕಾಲೂರು ಗ್ರಾಮದ ಮಳೆ ಹಾನಿ ಪ್ರದೇಶಕ್ಕೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ಜಿಲ್ಲಾಧಿಕಾರಿ ವೆಂಕಟ್ ರಾಜಾ ಹಾಗೂ ಅಧಿಕಾರಿಗಳು ಇದ್ದರು.
ಮಡಿಕೇರಿ ಜು.26 : ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2859 ಅಡಿಗಳು, ಇಂದಿನ ನೀರಿನ ಮಟ್ಟ 2853.13 ಅಡಿಗಳು. ಕಳೆದ ವರ್ಷ ಇದೇ ದಿನ 2856.33 ಅಡಿಗಳು. ಹಾರಂಗಿಯಲ್ಲಿ ಬಿದ್ದ ಮಳೆ 15.60 ಮಿ.ಮೀ., ಕಳೆದ ವರ್ಷ ಇದೇ ದಿನ 1.20 ಮಿ.ಮೀ. ಇಂದಿನ ನೀರಿನ ಒಳಹರಿವು 12861 ಕ್ಯುಸೆಕ್, ಕಳೆದ ವರ್ಷ ಇದೇ ದಿನ 2648 ಕ್ಯುಸೆಕ್, ಇಂದಿನ ನೀರಿನ ಹೊರ ಹರಿವು ನದಿಗೆ 12625 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 2800 ಕ್ಯುಸೆಕ್. ನಾಲೆಗೆ 20 ಕ್ಯುಸೆಕ್.
ಮಡಿಕೇರಿ ಜು.26 : ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 48.50 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 3.94 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1463.33 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1877.77 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 74.20 ಮಿ.ಮೀ. ಕಳೆದ ವರ್ಷ ಇದೇ ದಿನ 11.07 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2130.95 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2635.58 ಮಿ.ಮೀ. ಮಳೆಯಾಗಿತ್ತು. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 28.57 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.00 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1097.78 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1484.20 ಮಿ.ಮೀ. ಮಳೆಯಾಗಿತ್ತು. ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 42.72 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.76 ಮಿ.ಮೀ.…
ಮಡಿಕೇರಿ ಜು.26 : ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆ ಸರಹದ್ದಿನಲ್ಲಿ ನಿಷೇಧಿತ ಮಾದಕ ವಸ್ತು ಮಾರಟ ಮಾಡುತ್ತಿದ್ದ ಎಂಟು ಮಂದಿಯನ್ನು ಕೊಡಗು ಜಿಲ್ಲಾ ಪೊಲೀಸರು ಬಂಧಿಸಿ, 1 ಕೆ.ಜಿ 243 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಅರೇಕಾಡು ನಿವಾಸಿ ರಶೀದ್ (23), ಒಂಟಿಯಾಂಗಡಿ ನಿವಾಸಿ ಹೆಚ್.ಆರ್ ಸುದೀಶ್ (23), ಮೈಸೂರಿನ ಕೆಸಿಪಿ ಕಾಲೋನಿ ನಿವಾಸಿ ಇಮ್ರಾನ್ ಖಾನ್ (35), ಮುರ್ತಾಮುಡಿಯ ಎಂ.ಪ್ರಕಾಶ್ (24), ಚೇರಂಬಾಂಣೆಯ ಹೆಚ್.ಎಂ.ಶಾಂತಕುಮಾರ್ (27), ಕಡಗದಾಳುವಿನ ಎಸ್.ಎಂ.ಸಜೀರ್ (37), ಎಂ.ಇ.ನಿಯಾಜ್ (35), ಮೈಸೂರಿನ ಶಾಂತಿನಗರ ನಿವಾಸಿ ಇಮ್ರಾನ್ ಖಾನ್ (46) ಎಂಬುವವರೇ ಬಂಧಿತ ಆರೋಪಿಗಳು. ಕದನೂರು ನಾಪೋಕ್ಲು ರಸ್ತೆ ಜಂಕ್ಷನ್ ಬಳಿ ನಿಷೇಧಿತ ಮಾದಕ ವಸ್ತುಗಳನ್ನು ಮಾರಟ ಮಾಡುತ್ತಿರುವ ಖಚಿತ ಮಾಹಿತಿ ಹಿನ್ನಲೆಯಲ್ಲಿ ದಾಳಿ ನಡೆಸಿ ಆರೋಪಿಗಳಿಂದ 1 ಕೆ.ಜಿ 243 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ವಿರಾಜಪೇಟೆ ವೃತ್ತ ಸಿಪಿಐ ಬಿ.ಎಸ್.ಶಿವರುದ್ರಪ್ಪ, ಮತ್ತು ಪಿಎಸ್ಐ ಮಂಜುನಾಥ.ಸಿ.ಸಿ, ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆ ಹಾಗೂ ಸಿಬ್ಬಂದಿಗಳ ವಿಶೇಷ ತಂಡವನ್ನು…
ಮಡಿಕೇರಿ ಜು.26 : ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು ಗ್ರಾ.ಪಂ ವ್ಯಾಪ್ತಿಯ ಕೂಡ್ಲುರು ವಾರ್ಡ್ ನಂ.1ರ ಉಪಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಕೆ.ಆರ್.ಸುರೇಶ್ ಗೆಲುವು ಸಾಧಿಸಿದ್ದಾರೆ. ಈ ಹಿಂದೆ ಇದ್ದ ಸದಸ್ಯ ಅಕಾಲಿಕ ಮರಣದಿಂದ ತೆರವಾಗಿದ್ದ ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಕೆ.ಆರ್.ಸುರೇಶ್ ಬಿಜೆಪಿ ಅಭ್ಯರ್ಥಿಯನ್ನು ಮಣಿಸಿ 82 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಈ ಸಂದರ್ಭ ಮಾತನಾಡಿದ ಸುರೇಶ್ ಗೆಲುವಿಗೆ ಸಹಕರಿಸಿದ ಶಾಸಕ ಡಾ. ಮಂತರ್ ಗೌಡ, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರಾದ ವಿ ಪಿ ಶಶಿಧರ್, ಕೊಡಗು ಜಿಲ್ಲಾ ಕಾಂಗ್ರೆಸ್ ನ ಮಾಜಿ ಅಧ್ಯಕ್ಷ ಕೆ.ಕೆ.ಮಂಜುನಾಥ್, ಕೆಪಿಸಿಸಿ ಸದಸ್ಯ ಮಂಜುನಾಥ್ ಗುಂಡೂರಾವ್, ವಲಯ ಘಟಕಾಧ್ಯಕ್ಷ ಹೀರಪ್ಪ ಹಾಗೂ ಸ್ಥಳೀಯ ಮುಖಂಡರು, ಗ್ರಾಮ ಪಂಚಾಯಿತಿ ಸದಸ್ಯರುಗಳು ಮತ್ತು ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ಹಾಗೂ ಪ್ರಮುಖರು ಸುರೇಶ್ ಗೆ ಶುಭಹಾರೈಸಿ, ಮತದಾರರಿಗೆ ಅಭಿನಂದನೆ ಸಲ್ಲಿಸಿದ್ದಾರೆ.






