ಲೇಖಕ: admin

ಮಡಿಕೇರಿ ಜು.26 : ಕೊಡಗು ಜಿಲ್ಲೆಯಲ್ಲಿ ಎಡೆಬಿಡದೆ ಮಳೆಯಾಗುತ್ತಿದ್ದು, ನದಿತೊರೆಗಳು ತುಂಬಿ ಹರಿಯುತ್ತಿವೆ. ಮೂರ್ನಾಡು-ನಾಪೋಕ್ಲು ರಸ್ತೆ ಮಾರ್ಗದ ಹೊದ್ದೂರು ಬಳಿ ನೀರು ತುಂಬಿ ಜಲಾವೃತಗೊಂಡಿದ್ದು, ಸಾರಿಗೆ ಸಂಚಾರಕ್ಕೆ ವ್ಯತ್ಯಯವಾಗಿದೆ.

Read More

ಮಡಿಕೇರಿ ಜು.26 : ಕೊಡಗು ಜಿಲ್ಲಾ ಪಂಚಾಯತ್, ಜಿಲ್ಲಾಡಳಿತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಯೂತ್ ಹಾಸ್ಟೇಲ್ ಅಸೋಸಿಯೇಶನ್ ಆಪ್ ಇಂಡಿಯಾ(ಮಡಿಕೇರಿ ಘಟಕ), ಕೊಡಗು ಜಿಲ್ಲಾ ಯುವ ಒಕ್ಕೂಟ, ಮಡಿಕೇರಿ, ವಿರಾಜಪೇಟೆ ಮತ್ತು ಸೋಮವಾರಪೇಟೆ ತಾಲ್ಲೂಕು ಯುವ ಒಕ್ಕೂಟ ಹಾಗೂ ಕಗ್ಗೋಡ್ಲು ಕಾವೇರಿ ಯುವ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಆ.12 ರಂದು ಮಡಿಕೇರಿ ತಾಲ್ಲೂಕು ಕಗ್ಗೋಡ್ಲು ಗ್ರಾಮದ ದಿ.ಸಿ.ಡಿ.ದೇವಯ್ಯ ಅವರ ಗದ್ದೆಯಲ್ಲಿ 2023-24 ನೇ ಸಾಲಿನ ರಾಜ್ಯ ಮಟ್ಟದ ಮುಕ್ತ ಕೆಸರು ಗದ್ದೆ ಕ್ರೀಡಾಕೂಟ ಮತ್ತು ಆಟೋಟ ಸ್ಪರ್ಧೆ ನಡೆಯಲಿದೆ. ಕ್ರೀಡಾಕೂಟ ಮತ್ತು ಆಟೋಟ ಸ್ಪರ್ಧೆಯ ಉದ್ಘಾಟನಾ ಸಮಾರಂಭವು ಆಗಸ್ಟ್, 12 ರಂದು ಬೆಳಗ್ಗೆ 9 ಗಂಟೆಗೆ ನಡೆಯಲಿದೆ. ಹೆಚ್ಚಿನ ಮಾಹಿತಿಗೆ ಪಿ.ಪಿ.ಸುಕುಮಾರ್, ಅಧ್ಯಕ್ಷರು ಕೊಡಗು ಜಿಲ್ಲಾ ಯುವ ಒಕ್ಕೂಟ ಮಡಿಕೇರಿ 9481213920, ಬಾಳಾಡಿ ದಿಲೀಪ್ ಕುಮಾರ್, ಅಧ್ಯಕ್ಷರು, ತಾಲ್ಲೂಕು ಯುವ ಒಕ್ಕೂಟ, ಮಡಿಕೇರಿ 8618568173, ಕುಂಜಿಲನ ಎಂ.ಮೋಹನ್, ಖಜಾಂಜಿ, ಕೊಡಗು ಜಿಲ್ಲಾ ಯುವ ಒಕ್ಕೂಟ, ಮಡಿಕೇರಿ 9480646382, ನವೀನ್…

Read More

ಮಡಿಕೇರಿ ಜು.26 : ನಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗೆ 2023-24 ನೇ ಸಾಲಿನ ಪ್ರವೇಶಾತಿ ಆರಂಭವಾಗಿದ್ದು, ಟರ್ನರು 13 ಸ್ಥಾನ ಮತ್ತು ಬಿಡಿವಿವಿ 24 ಸ್ಥಾನಗಳು ಖಾಲಿಯಿದ್ದು, ಖಾಲಿ ಉಳಿದಿರುವ ಸ್ಥಾನಗಳನ್ನು ನೇರವಾಗಿ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆ.31 ರವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಮಡಿಕೇರಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ತಿಳಿಸಿದ್ದಾರೆ.  

Read More

ಮಡಿಕೇರಿ ಜು.26 : ರೋಟರಿ ವುಡ್ಸ್ ವತಿಯಿಂದ  ಕಾರ್ಗಿಲ್ ವಿಜಯೋತ್ಸವ ನಡೆಯಿತು. ನಗರದ ಜನರಲ್ ತಿಮ್ಮಯ್ಯ ಮ್ಯೂಸಿಯಂನ ‘ಅಮರ್ ಜವಾನ್’ ಸ್ಮಾರಕದಲ್ಲಿ  ಜಿಲ್ಲಾ ಉಸ್ತುವಾರಿ ಸಚಿವ  ಎನ್.ಎಸ್.ಭೋಸರಾಜು  ಪುಷ್ಪನಮನ‌ ಸಲ್ಲಿಸಿ ಯೋಧರಿಗೆ ಗೌರವ ಸಲ್ಲಿಸಿದರು. ಈ ಸಂದರ್ಭ  ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ರೋಟರಿ ವುಡ್ಸ್ ಅಧ್ಯಕ್ಷ  ವಸಂತ್ ಕುಮಾರ್, ಕಾರ್ಯದರ್ಶಿ ಕಿಗ್ಗಾಲು ಗಿರೀಶ್,  ಮಾಜಿ ಸೈನಿಕರು, ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷರಾದ ಹೊಟ್ಟೆಯಂಡ ಪಾರ್ವತಿ ಫ್ಯಾನ್ಸಿ ಬೆಳ್ಳಿಯಪ್ಪ, ಅಲ್ಪಸಂಖ್ಯಾತರ ಘಟಕದ ನಗರಾಧ್ಯಕ್ಷ ಕೆ.ಜಿ.ಪೀಟರ್, ಯುವ ಒಕ್ಕೂಟದ ಅಧ್ಯಕ್ಷ ಪಿ.ಪಿ.ಸುಕುಮಾರ್ ಹಾಗೂ  ಇತರರು ಇದ್ದರು.

Read More

ಮಡಿಕೇರಿ ಜು.26 : ನೈಸರ್ಗಿಕ ವಿಕೋಪ ನಿರ್ವಹಣೆಗಾಗಿ ಜಿಲ್ಲಾಧಿಕಾರಿ ಅವರ ಪಿಡಿ ಖಾತೆಯಲ್ಲಿ 56 ಕೋಟಿ ರೂ ಇದ್ದು, ಪ್ರಸಕ್ತ ಅವಧಿಯಲ್ಲಿ ಪ್ರಾಕೃತಿಕ ವಿಕೋಪ ನಿರ್ವಹಣೆಗಾಗಿ ಜಿಲ್ಲಾಡಳಿತದಿಂದ ಅಗತ್ಯ ಪ್ರಸ್ತಾವನೆ ಸಲ್ಲಿಸಿದಲ್ಲಿ 20 ಕೋಟಿ ರೂ ಬಿಡುಗಡೆ ಮಾಡಲಾಗುವುದು ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪ್ರಾಕೃತಿಕ ವಿಕೋಪ ನಿರ್ವಹಣೆ ಸಂಬಂಧಿಸಿದಂತೆ ಮಂಗಳವಾರ ಅಧಿಕಾರಿಗಳಿಂದ ಮಾಹಿತಿ ಪಡೆದು ಅವರು ಮಾತನಾಡಿದರು. ಪ್ರಾಕೃತಿಕ ವಿಕೋಪ ನಿರ್ವಹಣೆಗಾಗಿ ಈಗಾಗಲೇ ಬಿಡುಗಡೆ ಆಗಿರುವ ಅನುದಾನವನ್ನು ಸರಿಯಾಗಿ ಬಳಸಬೇಕು. ಒಂದು ತಿಂಗಳಲ್ಲಿ ಮನೆ ಕಾಮಗಾರಿಗಳು ಮತ್ತು ಇತರೆ ಹಳೇ ಕಾಮಗಾರಿಗಳ ಕೆಲಸ ಆಗಿದ್ದಲ್ಲಿ ಹಣ ಪಾವತಿಸಬೇಕು. ಹಾಗೆಯೇ ಕಾಮಗಾರಿ ಆರಂಭಿಸದಿದ್ದಲ್ಲಿ ನೋಟೀಸು ನೀಡಿ ಮಾಹಿತಿ ಪಡೆದು ಮುಕ್ತಾಯಗೊಳಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಕಾಮಗಾರಿ ಬಾಕಿ ಇದ್ದಲ್ಲಿ ಸರ್ಕಾರದ ಹಂತದಲ್ಲಿ ಮಾಹಿತಿ ನೀಡುವುದು ಕಷ್ಟವಾಗುತ್ತದೆ. ಆದ್ದರಿಂದ ಮನೆ ಕಾಮಗಾರಿಗಳು ಸೇರಿದಂತೆ ಇತರೆ ಪ್ರಾಕೃತಿಕ ವಿಕೋಪದಡಿ ತೆಗೆದುಕೊಂಡಿರುವ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಕಂದಾಯ…

Read More

ಮಡಿಕೇರಿ ಜು.25 : ರಾಜ್ಯದ ವಿವಿಧೆಡೆ ಜು.28 ರವರೆಗೆ ಮಳೆ ಮುಂದುವರೆಯುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಅಧಿಕಾರಿಗಳು ಪ್ರತಿಕ್ಷಣ ಸನ್ನದ್ಧರಾಗಿರಬೇಕು ಎಂದು ಕಂದಾಯ ಸಚಿವ ಕೃಷ್ಣಬೈರೇ ಗೌಡ ತಿಳಿಸಿದ್ದಾರೆ.NEWSDESK ಮಡಿಕೇರಿಯಲ್ಲಿ ಮಳೆಹಾನಿ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಳೆದ ಒಂದು ವಾರದಿಂದ ರಾಜ್ಯವ್ಯಾಪಿ ಉತ್ತಮ ಮಳೆಯಾಗಿದೆ. ರಾಜ್ಯದ ನಾಲ್ಕು ಜಲಾಶಯಗಳು ಶೇ.50 ರಷ್ಟು ಭರ್ತಿಯಾಗಿವೆ. ಅತಿಮಳೆಯಿಂದ ದೊಡ್ಡ ಪ್ರಮಾಣದ ಹಾನಿಯಾಗದಿದ್ದರೂ ಅಧಿಕಾರಿಗಳು ಮುಂದಿನ ದಿನಗಳಲ್ಲಿ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಮತ್ತು ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಬೇಕು ಎಂದರು..NEWSDESK ರಾಜ್ಯದ ಯಾವುದೇ ಜಿಲ್ಲೆಯ ಜಿಲ್ಲಾಧಿಕಾರಿಗಳು ಮಳೆಹಾನಿ ಪರಿಹಾರ ಕೋರಿ ಮನವಿ ಸಲ್ಲಿಸಿದರೆ ಹಣ ನೀಡಲು ಸರ್ಕಾರ ಸಿದ್ಧವಿದೆ. ಪರಿಹಾರ ನೀಡಲು ಹಣದ ಕೊರತೆಯಿಲ್ಲ. ರಾಜ್ಯವ್ಯಾಪಿ ಜಿಲ್ಲಾಧಿಕಾರಿಗಳ ಖಾತೆಯಲ್ಲಿ ಮಳೆಹಾನಿ ಪರಿಹಾರದ ಹಣ ಒಟ್ಟು 540 ಕೋಟಿ ರೂ.ಗಳಿದೆ ಎಂದು ತಿಳಿಸಿದರು..NEWSDESK ::: ಉಳಿಕೆ ಸರಿಯಲ್ಲ ::: ಕೊಡಗು ಜಿಲ್ಲಾಧಿಕಾರಿಗಳ ಖಾತೆಯಲ್ಲಿ ಕಳೆದ ವರ್ಷದ ಮಳೆಹಾನಿ ಪರಿಹಾರದ…

Read More

ಸೋಮವಾರಪೇಟೆ ಜು.25 : ಅಬ್ಬೂರುಕಟ್ಟೆ ಒಕ್ಕಲಿಗರ ಸಂಘದ ವತಿಯಿಂದ ನಾಡಪ್ರಭು ಕೆಂಪೇಗೌಡರ ಜಯಂತಿ ಅಂಗವಾಗಿ ಹೊಸಳ್ಳಿಯ ಕುಶಾಲಪ್ಪ ಅವರ ಗದ್ದೆಯಲ್ಲಿ ತಾಲೂಕು ಮಟ್ಟದ ಕೆಸರುಗದ್ದೆ ಕ್ರೀಡಾಕೂಟ ಹಾಗೂ ಸ್ಥಳೀಯರಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆದವು. ಕ್ರೀಡಾಕೂಟವನ್ನು ಉದ್ಘಾಟಿಸಿದ ಆದಿಚುಂಚನಗಿರಿ ಹಾಸನ ಶಾಖಾ ಮಠದ ಶ್ರೀ ಶಂಭುನಾಥ ಸ್ವಾಮೀಜಿ ಮಾತನಾಡಿ, ಒಕ್ಕಲುತನವೇ ಪ್ರಮುಖವಾಗಿರುವ ಒಕ್ಕಲಿಗ ಸಮುದಾಯ ನಾಡಿಗೆ ಅನ್ನ ನೀಡುವ ಅನ್ನದಾತನಿದ್ದಂತೆ. ಸಮುದಾಯ ಬಾಂಧವರು ಕೇವಲ ಕೃಷಿಯಲ್ಲಿ ಮಾತ್ರ ತೊಡಗಿಸಿಕೊಳ್ಳದೇ ಇತರ ಕ್ಷೇತ್ರಗಳತ್ತಲೂ ಗಮನಹರಿಸುತ್ತಿದ್ದಾರೆ. ರಾಜಕೀಯ, ಸಾಮಾಜಿಕ, ಆರ್ಥಿಕ, ಶೈಕ್ಷಣಿಕವಾಗಿ ಸಮುದಾಯ ಮುಂದೆ ಬರಬೇಕಿದೆ ಎಂದರು. ಕೆಸರು ಗದ್ದೆ ಕ್ರೀಡಾಕೂಟಗಳು ಪರಸ್ಪರ ಸಾಮರಸ್ಯ ವೃದ್ಧಿಗೆ ಸಹಕಾರಿಯಾಗಿವೆ. ಮಕ್ಕಳು ಮಹಿಳೆಯರು, ವೃದ್ದರಾದಿಯಾಗಿ ಎಲ್ಲಾ ವಯೋಮಾನದ ಮಂದಿ ಕೆಸರು ಗದ್ದೆಯ ಕ್ರೀಡಾಕೂಟದಲ್ಲಿ ಒಂದುಗೂಡುವುದರಿಂದ ನವ ಚೈತನ್ಯದೊಂದಿಗೆ ದೈಹಿಕ ಕ್ಷಮತೆಯನ್ನು ವೃದ್ಧಿಸಿಕೊಳ್ಳಲು ಸಹಕಾರಿಯಾಗಿದೆ ಎಂದು ಅಭಿಪ್ರಾಯಿಸಿದರು. ಕಾರ್ಯಕ್ರಮದಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂಥರ್ ಗೌಡ, ಹುಣಸೂರು ಕ್ಷೇತ್ರದ ಶಾಸಕ ಹರೀಶ್ ಗೌಡ ಅವರುಗಳು ಭಾಗವಹಿಸಿದ್ದರು. ಮಾತನಾಡಿದರು.…

Read More

ಸುಂಟಿಕೊಪ್ಪ ಜು.25: 7ನೇಹೊಸಕೋಟೆ ಗ್ರಾ.ಪಂ ಗೆ ಸೇರಿದ ಅಂದಗೋವೆ ಪೈಸಾರಿಯಲ್ಲಿ ಹಾಡುಹಗಲೇ ಕಾಡಾನೆಗಳು ಪ್ರತ್ಯಕ್ಷಗೊಂಡು ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿತು. ಉರಗ ತಜ್ಞ ಶಾಜಿ ಅವರ ಮನೆಯ ಮುಂಭಾಗದಲ್ಲಿ ಮರಿಯಾನೆಗೆ ಎರಡು ಕಾಡಾನೆಗಳು ಸಂಚರಿಸುತ್ತಿದ್ದು, ಗ್ರಾಮಸ್ಥರು ಬೊಬ್ಬೆ ಹೊಡೆದ ಪರಿಣಾಮ ಕಾಡಾನೆಗಳು ಊರಿನೊಳಗೆ ಪ್ರವೇಶಿಸಿದ್ದು, ಗ್ರಾಮಸ್ಥರು ಆತಂಕಗೊಂಡರು. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆಯ ಸಿಬ್ಬಂದಿಗಳು ಕಾಡಾನೆಗಳನ್ನು ಕಾಡಿಗೆ ಅಟ್ಟುವಲ್ಲಿ ಯಶಸ್ವಿಯಾದರು.

Read More

ಮಡಿಕೇರಿ ಜು.25 : ಕೊಡಗು ಜಿಲ್ಲೆಯಲ್ಲಿ ಕಳೆದ ಐದು ದಿನಗಳಿಂದ ಎಡೆಬಿಡದೆ ಸುರಿಯುತ್ತಿದ್ದ ಮಳೆಯ ಪ್ರಮಾಣ ಇಳಿಮುಖವಾಗಿದೆ. ಆದರೆ ನದಿ ನೀರಿನ ಪ್ರವಾಹ ತಗ್ಗದೆ ಇರುವುದರಿಂದ ಜನರ ಜೀವನ ಸಹಜ ಸ್ಥಿತಿಗೆ ಮರಳಿಲ್ಲ. ಗಾಳಿ ಮತ್ತು ಪ್ರವಾಹದಿಂದಾಗಿ ಹಲವೆಡೆ ಹಾನಿ ಸಂಭವಿಸಿದ್ದು, ಹಲವು ಕುಟುಂಬಗಳು ಸಂಕಷ್ಟ ಎದುರಿಸುತ್ತಿವೆ. ದಾಖಲೆಯ ಮಳೆಯಾಗಿದ್ದ ಕಾವೇರಿಯ ಉಗಮ ಸ್ಥಾನ ತಲಕಾವೇರಿ ಮತ್ತು ಭಾಗಮಂಡಲದಲ್ಲಿ ಮಂಗಳವಾರ ಸಾಧಾರಣ ಮಳೆಯಾಗಿದೆ. ಶ್ರೀಭಗಂಡೇಶ್ವರ ದೇವಾಲಯವನ್ನು ಆವರಿಸಿದ್ದ ಪ್ರವಾಹದ ನೀರು ತಗ್ಗಿದ್ದು, ಜನರು ಆತಂಕದಿಂದ ಹೊರ ಬಂದಿದ್ದಾರೆ. ಆದರೆ ಸುತ್ತಮುತ್ತಲ ಗ್ರಾಮಗಳ ರಸ್ತೆಗಳು ಹಾಗೂ ಮನೆಗಳು ಜಲಾವೃತಗೊಂಡಿವೆ. ಮಡಿಕೇರಿ ನಗರದಲ್ಲಿ ಮಳೆಯ ಆರ್ಭಟ ಕಡಿಮೆಯಾಗಿದ್ದು, ಸಾಧಾರಣ ಮಳೆ, ಮಂಜು ಮತ್ತು ಚಳಿ ಗಾಳಿಯ ವಾತಾವರಣವಿದೆ. ಹಾರಂಗಿ ಜಲಾಶಯದಿಂದ ಬಿಟ್ಟ ನೀರು ಕುಶಾಲನಗರ ಪಟ್ಟಣದ ಸಾಯಿ ಬಡಾವಣೆ ಮತ್ತು ಕುವೆಂಪು ಬಡಾವಣೆಗೆ ನುಗ್ಗಿದ್ದು, ಇಲ್ಲಿನ ನಿವಾಸಿಗಳು ಕಣ್ಣೀರು ಹಾಕುತ್ತಿದ್ದಾರೆ. ನೀರಿನಿಂದಾಗಿ ವಸ್ತುಗಳಿಗೆ ಹಾನಿಯಾಗಿದ್ದು, ಪ್ರವಾಹಪೀಡಿತ ಪ್ರದೇಶದಲ್ಲಿ ಲೇಔಟ್ ಮಾಡಲು ಆಡಳಿತ ವ್ಯವಸ್ಥೆ ಯಾಕೆ…

Read More

ಮಡಿಕೇರಿ ಜು.25 : ಹಿಂದು ಜಾಗರಣ ವೇದಿಕೆ, ಮಡಿಕೇರಿ ಮಾಜಿ ಸೈನಿಕರ ಸಂಘದ ಸಹಯೋಗದಲ್ಲಿ ಜು.26 ರಂದು ಕಾರ್ಗಿಲ್ ವಿಜಯ್  ದಿವಸ್ ಹಾಗೂ ರಕ್ತದಾನ ಶಿಬಿರ ನಡೆಯಲಿದೆ. ಅಂದು ಬೆಳಿಗ್ಗೆ 9 ಗಂಟೆಗೆ ಹುತಾತ್ಮ ಸೈನಿಕ ಯುದ್ಧ ಸ್ಮಾರಕದಲ್ಲಿ ಕಾಗಿ9ಲ್ ಸಮರದಲ್ಲಿ ಹುತಾತ್ಮರಾದ ಯೋಧರಿಗೆ ಗೌರವ ನಮನ ಸಲ್ಲಿಸಲಾಗುವುದು. ಮಾಜಿ ಸೈನಿಕಾಧಿಕಾರಿ ಮೇಜರ್ ಬಿದ್ದಂಡ ನಂಜಪ್ಪ, ಮಾಜಿ ಸೈನಿಕರು, ಗಣ್ಯರು ಹಾಗೂ ಸಂಘ-ಸಂಸ್ಥೆಗಳ ಪ್ರಮುಖರು ಪಾಲ್ಗೊಳ್ಳಲಿದ್ದು, ಹಿಂದು ಜಾಗರಣ ವೇದಕೆಯ ಪ್ರಾಂತ ಕಾರ್ಯಕಾರಿಣಿ ಸದಸ್ಯ ಕೆ.ಟಿ.ಉಲ್ಲಾಸ್ ದಿಕ್ಸೂಚಿ ಭಾಷಣ ಮಾಡಲಿದ್ದಾರೆ ಎಂದು ಹಿಂದು ಜಾಗರಣ ವೇದಕೆ ಕೊಡಗು ಜಿಲ್ಲಾ ಸಂಯೋಜಕರು ತಿಳಿಸಿದ್ದಾರೆ.

Read More