ವಿರಾಜಪೇಟೆ ಜು.25 : ಸಮಾಜದಲ್ಲಿ ಗೌರವಯುತವಾದ ಜವಾಬ್ದಾರಿ ಶಿಕ್ಷಕರ ಮೇಲಿದ್ದು, ಪೋಷಕರು ಶಿಕ್ಷಕರನ್ನೆ ದೇವರು ಎಂದು ಭಾವಿಸಿರುತ್ತಾರೆ. ಶಿಕ್ಷಕರು ಸಮಾಜಮುಖಿಯಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ನೈರುತ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಬೋಜೇಗೌಡ ಅಭಿಪ್ರಾಯಪಟ್ಟರು. ಶಾಲಾ ಶಿಕ್ಷಣಾ ಇಲಾಖೆ, ವಿರಾಜಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘ, ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ, ಅನುದಾನಿತ ನೌಕರರ ಸಂಘದ ವತಿಯಿಂದ ವಿರಾಜಪೇಟೆಯ ಸಂತ ಅನ್ನಮ್ಮ ವಿದ್ಯಾ ಸಂಸ್ಥೆಯ ಸಭಾಂಗಣದಲ್ಲಿ ನಡೆದ ಸರ್ಕಾರಿ ಅನುದಾನಿತ ಹಾಗೂ ಅನುದಾನ ರಹಿತ ಮುಖ್ಯ ಶಿಕ್ಷಕರು ಹಾಗೂ ಸಹ ಶಿಕ್ಷಕರಿಗೆ ಶೈಕ್ಷಣಿಕ ಕಾರ್ಯಾಗಾರ ಹಾಗೂ 2022-23ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಶೇಕಡ 100ರಷ್ಟು ಫಲಿತಾಂಶ ಪಡೆದ ಶಾಲೆಯ ಮುಖ್ಯ ಶಿಕ್ಷಕರಿಗೆ, ವಿಷಯ ಬೋಧನಾ ಶಿಕ್ಷಕರಿಗೆ, ದೈಹಿಕ ಶಿಕ್ಷಕರಿಗೆ ಅಭಿನಂದನಾ ಸಮಾರಂಭವನ್ನು ನೈರುತ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಬೋಜೇಗೌಡ ಉದ್ಘಾಟಿಸಿ ಮಾತನಾಡಿದರು. ನಾವೇಲ್ಲರೂ…
ಲೇಖಕ: admin
ಕಡಂಗ ಜು.25 : ಅರಪಟ್ಟು ಪೋದವಾಡ ಗ್ರಾಮದ ಕೋಡಿರ ಕುಟುಂಬಸ್ಥರಿಂದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಐಮುಡಿಯಂಡ ರಾಣಿ ಮಾಚಯ್ಯ ಅವರನ್ನು ಸನ್ಮಾನಿಸಲಾಯಿತು. ಕೋಡಿರ ಐನ್ ಮನೆಯಲ್ಲಿ ಕುಟುಂಬದ ಮಹಿಳಾ ಒಕ್ಕೂಟ ಹಿರಿಯರಾದ ಮುತ್ತವ್ವ ಪೊನ್ನಪ್ಪ , ಸರಸ್ವತಿ , ಅಧ್ಯಕ್ಷೆ ಪೊನ್ನು ಮಂದಣ್ಣ, ಉಪಾಧ್ಯಕ್ಷೆ ಹೇಮಾ ಮಂದಣ್ಣ ಹಾಗೂ ಕುಟುಂಬದ ಅಧ್ಯಕ್ಷರಾದ ಪ್ರವೀಣ್ ಚಂಗಪ್ಪ ಅವರ ಸಮ್ಮುಖದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ರಾಣಿ ಮಾಚಯ್ಯ, ಪ್ರತಿಯೊಂದು ಕುಟುಂಬದಲ್ಲಿ ಒಗ್ಗಟ್ಟು ಬಹಳ ಮುಖ್ಯ ಹಾಗೂ ಒಗ್ಗಟ್ಟಿದ್ದರೆ ಏನನ್ನು ಸಾಧಿಸಬಹುದು ಎಂದು ನುಡಿದರು. ಕುಟುಂಬದ ಅನೇಕ ಹಿರಿಯ ಕಿರಿಯ ಕಲಾವಿದರಿಂದ ಹಾಡುಗಾರಿಕೆ ನಡೆಯಿತು. ವಿಶೇಷವಾಗಿ ಕೊಡಗಿನ ಹೆಸರಾಂತ ಕಲಾವಿದೆ ಲಲಿತಾ ಅವರ ಹಾಡುಗಳು ಗಮನ ಸೆಳೆಯಿತು. ಶಿಲ್ಪಕುಮಾರಿ ಕಾರ್ಯಕ್ರಮ ನಿರೂಪಿಸಿದರು. ಟೀನಾಹರ್ಷಸ್ವಾಗತಿಸಿದರು ಹಾಗೂ ವೀಣಾಶಶಿ ವಂದಿಸಿದರು. ವರದಿ : ನೌಫಲ್ ಕಡಂಗ
ನಾಪೋಕ್ಲು ಜು.25 : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಪಾಜೆ ಸಂಸ್ಥೆಯ 2022 -23ನೇ ಸಾಲಿಗೆ ವಾರ್ಷಿಕ ಮಹಾಸಭೆಯು ನಾಪೋಕ್ಲುವಿನ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ನಡೆಯಿತು. ಶಾಲೆಯ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆಯನ್ನು ಸಂಪಾಜೆ ಸಂಸ್ಥೆಯ ಅಧ್ಯಕ್ಷರಾದ ಎಂ.ಧನಂಜಯ ವಹಿಸಿದ್ದರು. ಸಭೆಯಲ್ಲಿ ಮುಖ್ಯವಾಗಿ ಕೇಂದ್ರ ಕಚೇರಿಯಿಂದ ಹಾಗೂ ಗ್ರಾಮ ಪಂಚಾಯಿತಿಗಳಿಂದ ದೊರೆಯಬೇಕಾಗಿರುವ ಅನುದಾನಗಳ ಬಗ್ಗೆ ಚರ್ಚಿಸಿ ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆಯುವಂತೆ, ಈ ವರ್ಷ ನಡೆಸಬೇಕಾಗಿರುವ ಕಾರ್ಯ ಚಟುವಟಿಕೆಗಳ ಬಗ್ಗೆ ಚರ್ಚಿಸಲಾಯಿತು. ಜಿಲ್ಲಾ ಪ್ರಧಾನ ಆಯುಕ್ತ ಬೇಬಿ ಮ್ಯಾತ್ಯು, ಕೆ ಪಿ ಎಸ್ ಎಸ್ ಡಿಎಮ್ ಸಿ ಉಪಾಧ್ಯಕ್ಷ ಹಾಗೂ ಭಾರತ್ ಸ್ಕೌಟ್ ಗೈಡ್ಸ್ ಎಡಿಸಿ ತರಬೇತಿ ಹೊಂದಿರುವ ಕೆ.ಎ. ಹಾರಿಸ್, ಉಪ ಪ್ರಾಂಶುಪಾಲ ಶಿವಣ್ಣ, ಜಿಲ್ಲಾ ಸಂಘಟಕರಾದ ದಮಯಂತಿ, ಜಿಲ್ಲಾ ಕಾರ್ಯದರ್ಶಿ ವಸಂತಿ, ಸ್ಕೌಟ್ ಮತ್ತು ಗೇಟ್ಸ್ ದಳ ನಡೆಸುತ್ತಿರುವ ಶಿಕ್ಷಕರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಕೆ.ಬಿ ಉಷಾರಾಣಿ ಸ್ವಾಗತಿಸಿ ವರದಿ ವಾಚಿಸಿದರು. ಬಳಿಕ ಪ್ರಸಕ್ತ…
ಮಡಿಕೇರಿ ಜು.24 : ಕಾವೇರಿನಾಡು ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವು ಪ್ರದೇಶಗಳು ಜಲಾವೃತಗೊಂಡಿದ್ದು, ಸಂಪರ್ಕ ವ್ಯವಸ್ಥೆ ಕಡಿತಗೊಂಡಿದೆ. ಮುಂಜಾಗೃತಾ ಕ್ರಮವಾಗಿ ಜು.25 ರಂದು ಕೂಡ ಪದವಿ ಮತ್ತು ಸ್ನಾತಕೋತ್ತರ ಪದವಿಗಳನ್ನು ಹೊರತು ಪಡಿಸಿ ಉಳಿದ ಎಲ್ಲಾ ಶಾಲಾ, ಕಾಲೇಜು ಹಾಗೂ ಅಂಗನವಾಡಿಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ. ಜಿಲ್ಲೆಯಾದ್ಯಂತ 24 ಗಂಟೆಗಳಲ್ಲಿ 5 ಇಂಚಿಗೂ ಅಧಿಕ ಮತ್ತು ಭಾಗಮಂಡಲ, ತಲಕಾವೇರಿ ವ್ಯಾಪ್ತಿಯಲ್ಲಿ 9 ಇಂಚಿಗೂ ಅಧಿಕ ಮಳೆಯಾಗಿದೆ. ಉತ್ತಮ ಮಳೆಯಾಗುತ್ತಿರುವುದರಿಂದ ನದಿ, ತೊರೆ, ಹಳ್ಳ, ಕೊಳ್ಳ, ಜಲಪಾತಗಳು ತುಂಬಿ ಹರಿಯುತ್ತಿವೆ. ಜಿಲ್ಲೆಯ ಪ್ರಮುಖ ಜಲಾಶಯಗಳಲ್ಲಿ ಒಂದಾದ ಹಾರಂಗಿ ವ್ಯಾಪ್ತಿಯಲ್ಲಿ ನೀರಿನ ಒಳಹರಿವಿನ ಪ್ರಮಾಣ ಹೆಚ್ಚಳವಾಗಿದೆ. ನೀರಿನ ಹೊರ ಹರಿವು ನದಿಗೆ 23937 ಕ್ಯುಸೆಕ್ ಆಗಿದೆ. ಭಾಗಮಂಡಲ ತ್ರಿವೇಣಿ ಸಂಗಮದಲ್ಲಿ ನೀರಿನ ಹರಿವಿನ ಪ್ರಮಾಣ ಹೆಚ್ಚಳವಾಗಿದೆ. ಜಿಲ್ಲೆಯಲ್ಲಿ ವ್ಯಾಪಕ ಮಳೆ ಮುಂದುವರಿದಿರುವುದರಿಂದ ಅಲ್ಲಲ್ಲಿ ಮರ ಬಿದ್ದು ಮನೆ ಹಾಗೂ ವಿದ್ಯುತ್ ಮಾರ್ಗಕ್ಕೆ ಹಾನಿಯಾಗಿದೆ. ಎಡಡೆಬಿಡದೆ ಸುರಿಯುತ್ತಿರುವ ಮಳೆಯಿಂದ ಭಾಗಮಂಡಲದಲ್ಲಿ…
ಮಡಿಕೇರಿ ಜು.24 : ರಾಷ್ಟ್ರದ ಅಭಿವೃದ್ಧಿ ಮತ್ತು ಶಿಸ್ತು ಬದ್ಧ ಜೀವನಕ್ಕೆ ಸ್ಕೌಟ್ಸ್ ಮತ್ತು ಗೈಡ್ಸ್ ಕಾರ್ಯ ಚಟುವಟಿಕೆಗಳು ಸಹಕಾರಿ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನಗರದ ಗಾಂಧಿ ಭವನದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ವತಿಯಿಂದ ಒಂದು ವಾರಗಳ ಕಾಲ ನಡೆಯುವ ‘ಮೂಲ ತರಬೇತಿ ಶಿಬಿರಕ್ಕೆ ಸೋಮವಾರ ಚಾಲನೆ ನೀಡಿ ಅವರು ಮಾತನಾಡಿದರು. ರಾಷ್ಟ್ರದ ಅಭಿವೃದ್ಧಿ, ಸಂಸ್ಕೃತಿ, ನಾಡು ನುಡಿಯ ಬಗ್ಗೆ ಎಲ್ಲರೂ ಕಲಿಯಲು ಮತ್ತು ಮಕ್ಕಳಿಗೆ ಕಲಿಸಲು ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆ ಅಗತ್ಯ ಎಂದು ತಿಳಿಸಿದರು. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದು, ಪರಿಸರ ಸಂರಕ್ಷಣೆ, ಸಮಯ ಪ್ರಜ್ಞೆ, ಹೀಗೆ ಹಲವು ವಿಚಾರಗಳ ಕುರಿತು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳಲ್ಲಿ ಕಾಣಬಹುದು ಎಂದು ಡಾ.ನಂಜುಂಡೇಗೌಡ ವಿವರಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡೇಗೌಡ ಅವರು ಮಾತನಾಡಿ ಯಾವುದೇ ಸಂಕಷ್ಟದ ಪರಿಸ್ಥಿತಿಯಲ್ಲೂ ತೊಡಗಿಸಿಕೊಂಡು ಸಮಾಜದ ಅಭಿವೃದ್ಧಿಗೆ ಸಹಕಾರಿಯಾಗುವಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಪ್ರಧಾನ ಪಾತ್ರ ವಹಿಸುತ್ತದೆ…
ಸುಂಟಿಕೊಪ್ಪ ಜು.24: ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಸುಂಟಿಕೊಪ್ಪದ ವಿವಿಧೆಡೆ ಹಾನಿಯಾಗಿದೆ. ಕಳೆದ 3 ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಗಾಳಿ ಮಳೆಯ ಹಿನ್ನಲೆಯಲ್ಲಿ ಸ್ವಸ್ಥಶಾಲೆ ಸಮೀಪದಲ್ಲಿ ಟಿಸಿಎಲ್ ತೋಟದ ಮರ ಮುತ್ತ ಎಂಬುವವರ ಮನೆಯ ಮೇಲೆ ಮರ ಬಿದ್ದ ಪರಿಣಾಮ ಮನೆಗೋಡೆಗೆ ಹಾನಿಯಾಗಿದ್ದು, ನಷ್ಟವುಂಟಾಗಿದೆ. ಅದೃಷ್ಟವಶತ್ ಮನೆಯಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಪಂಚಾಯಿತಿ ಉಪಾಧ್ಯಕ್ಷ ಕೆ.ಕೆ.ಪ್ರಸಾದ್ ಕುಟ್ಟಪ್ಪ, ಸದಸ್ಯ ಆಲಿಕುಟ್ಟಿ, ಗ್ರಾಮಲೆಕ್ಕಿಗರಾದ ನಾಗೇಂದ್ರ ಭೇಟಿ ನೀಡಿ ಪರಿಶೀಲಿಸಿ ಬಿದ್ದ ಮರವನ್ನು ತೆರವುಗೊಳಿಸಿದರು. ಸುಂಟಿಕೊಪ್ಪ ಪಂಪ್ಹೌಸ್ ಬಡಾವಣೆಯ ನಿವಾಸಿ ಜಯಮ್ಮ ಎಂಬವವರ ಮನೆಯ ಗೋಡೆಯು ಕುಸಿದು ಬಿದಿದ್ದು, ಸಾವಿರಾರು ರೂ ನಷ್ಟವುಂಟಾಗಿದೆ. ಅದೃಷ್ಟವಶತ್ ಯಾವುದೇ ರೀತಿಯ ಪ್ರಾಣಹಾನಿ ಸಂಭವಿಸಿಲ್ಲ. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವೇಣುಗೋಪಾಲ್, ಪಂಚಾಯಿತಿ ಅಧ್ಯಕ್ಷೆ ಸದಸ್ಯರುಗಳು, ಗ್ರಾಮಲೆಕ್ಕಿಗರಾದ ನಾಗೇಂದ್ರ ಭೇಟಿ ನೀಡಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ವಿವಿಧೆಡೆ ಗಾಳಿಮಳೆಗೆ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿದೆ.
ಸುಂಟಿಕೊಪ್ಪ ಜು.24: ಕೊಡಗು ಜಿಲ್ಲಾ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ವತಿಯಿಂದ ಸುಂಟಿಕೊಪ್ಪದ ಪಕ್ಷದ ಕಚೇರಿಯಲ್ಲಿ ಚುನಾವಣಾ ಪೂರ್ವಭಾವಿ ಸಭೆ ನಡೆಯಿತು. ಪಕ್ಷದ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮಾತನಾಡಿ, ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಯೂ ಮುಂದಿನ ದಿನಗಳಲ್ಲಿ ನಡೆಯಲ್ಲಿದ್ದು, ಪಕ್ಷದ ಕಾರ್ಯಕರ್ತರು ಚುನಾವಣೆಗೆ ಸನ್ನದ್ಧರಾಗಬೇಕು. ಪಕ್ಷವನ್ನು ತಳಮಟ್ಟದಿಂದಲೇ ಸಂಘಟಿಸುವ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕೆಂದು ಕರೆ ನೀಡಿದರು. ಸುಂಟಿಕೊಪ್ಪ ಗ್ರಾ.ಪಂ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಎರಡನೇ ಹಂತದ ಆಯ್ಕೆ ಪ್ರಕ್ರಿಯೆಗೆ ನಮ್ಮ ಪಕ್ಷದವರು ಸ್ಪರ್ದೆಗೆ ಇಳಿಯಬೇಕು. ಕಾಂಗ್ರೆಸ್ ಮತ್ತು ಜೆಡಿಎಸ್ ಬೆಂಬಲವನ್ನು ಪಡೆದು ಅಧಿಕಾರ ನಡೆಸಲು ಒಮ್ಮತದಿಂದ ಸನ್ನದರಾಗಿರುವಂತೆ ಎಂದು ಸಭೆಯಲ್ಲಿ ನಿರ್ಧರಿಸಲಾಯಿತು. ಕಳೆದ 2 ಅವಧಿಯಲ್ಲೂ ಕಾಂಗ್ರೆಸ್ ಜೆಡಿಎಸ್ ಬೆಂಬಲವನ್ನು ನೀಡುತ್ತಾ ಬರುತ್ತಿದ್ದು, ಈ ಬಾರೀ ಪಕ್ಷಕ್ಕೆ ಕಾಂಗ್ರೆಸ್ ಮತ್ತು ಜೆಡಿಎಸ್ ಬೆಂಬಲ ಪಡೆದು ಅಧಿಕಾರಿ ಪ್ರಯತ್ನಿಸಲು ಸಭೆಯಲ್ಲಿ ಚರ್ಚಿಸಲಾಯಿತು. ಸಭೆಯಲ್ಲಿ ರಾಜ್ಯ ನಾಯಕ ಅಬ್ರಾಹರ್, ಜಿಲ್ಲಾಧ್ಯಕ್ಷ ಅಬ್ದುಲ್ ಅಡ್ಕರ್, ಕೊಡಗು ಕಾರ್ಯದರ್ಶಿ ಬಶೀರ್, ಪಂಚಾಯಿತಿ ಸದಸ್ಯೆ ನಾಗರತ್ನ,…
ಮಡಿಕೇರಿ ಜು.24 : ಮಡಿಕೇರಿ ತಾಲೂಕಿನ ಎರಡನೇ ಮೊಣ್ಣಂಗೇರಿ ಗ್ರಾಮದ ವಿವೇಕ ಗಿರಿಯಿಂದ ರಾಮ ಕೊಲ್ಲಿಗೆ ತೆರಳುವ ರಸ್ತೆಯಲ್ಲಿರುವ ಸೇತುವೆಯು ಗುಂಡಿಯಾಗಿದೆ. ಸ್ಥಳಕ್ಕೆ ಕಂದಾಯ ಇಲಾಖೆ ಸ್ಥಳೀಯ ಅಧಿಕಾರಿಗಳು ಭೇಟಿ ನೀಡಿ ವೀಕ್ಷಿಸಿದ್ದಾರೆ.
ನಾಪೋಕ್ಲು ಜು.24 : ಕಳೆದ ಎರಡು ಮೂರು ದಿನಗಳಿಂದ ನಾಪೋಕ್ಲು ವ್ಯಾಪ್ತಿಯಲ್ಲಿ ಪುಷ್ಯ ಮಳೆಯ ಆರ್ಭಟ ಜೋರಾಗಿದ್ದು, ಅಲ್ಲಲ್ಲಿ ಮರ ಬಿದ್ದು ರಸ್ತೆ ಸಂಚಾರ ಸ್ಥಗಿತಗೊಂಡರೆ, ಕಾವೇರಿ ನದಿ ನೀರಿನ ಮಟ್ಟ ಹೆಚ್ಚಳವಾಗಿ ನಾಪೋಕ್ಲು ಮೂರ್ನಾಡು ಮುಖ್ಯರಸ್ತೆಯ ಕೊಟ್ಟಮುಡಿ ಜಂಕ್ಷನ್ ಬಳಿ ಜಲಾವೃತಗೊಂಡಿದೆ. ನಾಪೋಕ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳೆ ತಾಲೂಕುವಿನಿಂದ ಅಜ್ಜಿ ಮುಟ್ಟ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ನೂರಂಬಡ ಉದಯ ಶಂಕರ್ ಅವರ ಮನೆಯ ಪಕ್ಕದಲ್ಲಿದ್ದ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದು ಸಂಚಾರ ಸ್ಥಗಿತಗೊಂಡಿತು. ಗ್ರಾ.ಪಂ ಸದಸ್ಯ ಪ್ರತೀಪ್ ಹಾಗೂ ಜಗದೀಶ್ ತಕ್ಷಣ ಸ್ಥಳಕ್ಕೆ ಧಾವಿಸಿ ರಸ್ತೆಗೆ ಅಡ್ಡಲಾಗಿ ಬಿದ್ದ ಮರವನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿದರು. ನಾಪೋಕ್ಲು ಬಳಿಯ ಚೆರಿಯಪರಂಬು, ಕಲ್ಲುಮೊಟ್ಟೆ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಕಾವೇರಿ ನದಿ ಪ್ರವಾಹ ಮತ್ತೆ ಹೆಚ್ಚಳವಾಗಿದ್ದು, ಗ್ರಾಮದ ಕಾವೇರಿ ನದಿ ದಂಡೆಯ ಪೈಸಾರಿಯಲ್ಲಿ ವಾಸಿಸುವ ಜನರಲ್ಲಿ ಪ್ರವಾಹದ ಭೀತಿ ಎದುರಾಗಿದೆ. ಸ್ಥಳೀಯ ಯುವಕರು ತೆಪ್ಪದ…
ಮಡಿಕೇರಿ ಜು.24 : ಕೊಡಗು ಜಿಲ್ಲೆಯ ಗ್ರಾಮೀಣ ಭಾಗಕ್ಕೆ ಹೆಚ್ಚುವರಿ ಕೆಎಸ್ಆರ್ಟಿಸಿ ಬಸ್ ಗಳನ್ನು ನಿಯೋಜಿಸುವ ಮೂಲಕ ಗ್ರಾಮಸ್ಥರಿಗೂ “ಶಕ್ತಿ” ಯೋಜನೆ ತಲುಪುವಂತೆ ನೋಡಿಕೊಳ್ಳಬೇಕು ಎಂದು ಮಡಿಕೇರಿ ನಗರ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷರಾದ ಹೊಟ್ಟೆಯಂಡ ಪಾರ್ವತಿ ಫ್ಯಾನ್ಸಿ ಬೆಳ್ಳಿಯಪ್ಪ ಮನವಿ ಮಾಡಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಈ ಕುರಿತು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮಡಿಕೇರಿ ಡಿಪೋದ ವ್ಯವಸ್ಥಾಪಕರು ಗಮನ ಹರಿಸಬೇಕು ಎಂದು ಹೇಳಿದ್ದಾರೆ. ಕೊಡಗು ಬೆಟ್ಟ ಗುಡ್ಡಗಳಿಂದ ಕೂಡಿದ ಜಿಲ್ಲೆಯಾಗಿದ್ದು, ಗ್ರಾಮೀಣ ಪ್ರದೇಶಗಳು ಹೆಚ್ಚು ಇವೆ. ರಾಜ್ಯ ಸರ್ಕಾರ ಶಕ್ತಿ ಯೋಜನೆಯ ಮೂಲಕ ಕೆಎಸ್ಆರ್ಟಿಸಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಸೇವೆಯನ್ನು ಒದಗಿಸಿದ್ದು, ರಾಜ್ಯದ ಲಕ್ಷಾಂತರ ಮಹಿಳೆಯರು ಇದರ ಲಾಭ ಪಡೆದುಕೊಳ್ಳುತ್ತಿದ್ದಾರೆ. ಆದರೆ ಕೊಡಗು ಜಿಲ್ಲೆಯ ಗ್ರಾಮೀಣ ಭಾಗದ ಮಹಿಳೆಯರು ಶಕ್ತಿ ಯೋಜನೆಯ ಲಾಭ ಪಡೆಯುವಲ್ಲಿ ವಿಫಲರಾಗುತ್ತಿದ್ದಾರೆ. ಇದಕ್ಕೆ ಕಾರಣ ಗ್ರಾಮೀಣ ಭಾಗದಲ್ಲಿ ಕೆಎಸ್ಆರ್ಟಿಸಿ ಬಸ್ ಗಳ ಸೇವೆ ಇಲ್ಲದೆ ಇರುವುದು. ಕೊಡಗಿನ ಗ್ರಾಮೀಣ ಪ್ರದೇಶದಲ್ಲಿ…






