ಮಡಿಕೇರಿ ಜು.24 : ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಪ್ರಯುಕ್ತ ಜು.31 ರಂದು ಮಡಿಕೇರಿಯಲ್ಲಿರುವ ಪತ್ರಿಕಾ ಭವನದಲ್ಲಿ ಒಂದು ಪ್ರೇಮ ಕಥೆ ನಾಟಕ ಪ್ರದರ್ಶನಗೊಳ್ಳಲಿದೆ. ಅಂದು ಸಂಜೆ 7 ಗಂಟೆಗೆ ಸರಿಯಾಗಿ ನಾಟಕ ಪ್ರದರ್ಶನ ಪ್ರಾರಂಭವಾಗಲಿದೆ. ಸಾರ್ವಜನಿಕರಿಗೆ ನಾಟಕ ವೀಕ್ಷಿಸಲು ಉಚಿತ ಪ್ರವೇಶ ಕಲ್ಪಿಸಲಾಗಿದ್ದು, ಪ್ರದರ್ಶನ ಪ್ರಾರಂಭವಾಗುವ 10 ನಿಮಿಷ ಮುಂಚಿತವಾಗಿ ಪ್ರೇಕ್ಷಕರು ಆಗಮಿಸಬೇಕೆಂದು ಕೊಡಗು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಕೆ.ಕೆ.ರೆಜಿತ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಿಂಬರ್ಲಿ ಕೂರ್ಗ್ ಪ್ರಾಯೋಜಕತ್ವದಲ್ಲಿ ಬೆಂಗಳೂರಿನ ರಂಗಪಯಣ ತಂಡದಿಂದ ನಾಟಕ ಪ್ರದರ್ಶನಗೊಳ್ಳಲಿದೆ. 55 ನಿಮಿಷದ ಅವಧಿಯಲ್ಲಿ ಕಲಾವಿದ ಭರತ್ ಅಕಿರಾ ಅಭಿನಯಿಸಲಿದ್ದಾರೆ. ಕೇಂದ್ರ ಸಾಹಿತ್ಯ ಅಕಾಡೆಮಿಯ ಉಸ್ತಾದ್ ಜಸ್ಮಿಲಾ ಖಾನ್ ಪ್ರಶಸ್ತಿ ಪುರಸ್ಕೃತ ರಂಗಭೂಮಿ ಕಲಾವಿದ ರಾಜ್ಗುರು ರಚನೆ, ಸಂಗೀತದೊಂದಿಗೆ ನಿರ್ದೇಶನ ಮಾಡಿದ್ದಾರೆ. ರಂಗಪಯಣ ತಂಡದ 14ನೇ ವರ್ಷದ ಸಂಭ್ರಮ ಪ್ರಯುಕ್ತ ರಾಜ್ಯದ 31 ಜಿಲ್ಲೆಗಳಲ್ಲಿ ಏಕಕಾಲಕ್ಕೆ ಈ ನಾಟಕ ಪ್ರದರ್ಶನಗೊಳ್ಳಲಿದೆ. ಲಿಮ್ಕಾ ಬುಕ್ ಆಫ್ ರೆಕಾರ್ಡ್ನಲ್ಲಿ ದಾಖಲೆ ಮಾಡುವ ಉದ್ದೇಶದಿಂದ 31…
ಲೇಖಕ: admin
ಮಡಿಕೇರಿ ಜು.24 : ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಪ್ರಯುಕ್ತ ಪಾಲಿಬೆಟ್ಟ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಜು.25 ರಂದು ಪತ್ರಕರ್ತರು ಸೇರಿದ್ದಂತೆ ಒಟ್ಟು 80 ಸಾರ್ವಜನಿಕರು ರಕ್ತದಾನ ಮಾಡಲಿದ್ದಾರೆ. ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ, ಪಾಲಿಬೆಟ್ಟ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಹುಣಸೂರಿನ ಕಾವೇರಿ ಆಸ್ಪತ್ರೆ, ಕೊಡಗು ಹಿಂದೂ ಮಲಯಾಳಿ ಸಮಾಜ ಪಾಲಿಬೆಟ್ಟ ಉಪಸಮಿತಿ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ರಕ್ತನಿಧಿ ಕೇಂದ್ರ, ಪಾಲಿಬೆಟ್ಟ ಸಮುದಾಯ ಆರೋಗ್ಯ ಕೇಂದ್ರ ಹಾಗೂ ವಿರಾಜಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರ ಆಯೋಜಿಸಲಾಗಿದೆ ಎಂದು ಕಾರ್ಯಕ್ರಮ ಸಂಚಾಲಕ ಪುತ್ತಂ ಪ್ರದೀಪ್ ಬಾಲನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬೆಳಗ್ಗೆ 10 ಗಂಟೆಗೆ ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ ಅಧ್ಯಕ್ಷ ಡಾ.ಉಳ್ಳಿಯಡ ಎಂ. ಪೂವಯ್ಯ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ಆಯೋಜಿಸಲಾಗಿದೆ. ಪಾಲಿಬೆಟ್ಟ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಅಧ್ಯಕ್ಷ ಅಜ್ಜಿನಿಕಂಡ ಶ್ಯಾಮ್ಚಂದ್ರ…
ಮಡಿಕೇರಿ ಜು.24 : ಮಡಿಕೇರಿ ನಗರಸಭೆ ಸಿಬ್ಬಂದಿಗಳ ಕೊರತೆಯನ್ನು ಎದುರಿಸುತ್ತಿದೆ, ಇದರ ನಡುವೆಯೇ ಇರುವ ಸಿಬ್ಬಂದಿಗಳನ್ನು ಸರ್ಕಾರದ “ಗೃಹಲಕ್ಷ್ಮಿ” ಯೋಜನೆಯ ಸೇವೆಗಾಗಿ ನಿಯೋಜಿಸಿ ಸಾರ್ವಜನಿಕರಿಗೆ ತೊಂದರೆ ನೀಡಲಾಗುತ್ತಿದೆ ಎಂದು ನಗರಸಭಾ ಮಾಜಿ ಉಪಾಧ್ಯಕ್ಷರಾದ ಲೀಲಾ ಶೇಷಮ್ಮ ಆರೋಪಿಸಿದ್ದಾರೆ. ನಗರಸಭೆಗೆ ಭೇಟಿ ನೀಡಿದ್ದ ಅವರು ಕಚೇರಿಯಲ್ಲಿ ಸಿಬ್ಬಂದಿಗಳಿಲ್ಲದೆ ಖಾಲಿ ಕುರ್ಚಿಗಳಿರುವುದನ್ನು ಮತ್ತು ಅರ್ಜಿದಾರರು ಪರದಾಡುತ್ತಿರುವುದನ್ನು ಕಂಡು ಅಸಮಾಧಾನ ವ್ಯಕ್ತಪಡಿಸಿದರು. ಅರ್ಜಿದಾರರು ಪ್ರತಿದಿನ ಅಲೆದಾಡಬೇಕಾದ ದುಸ್ಥಿತಿ ಬಂದೊದಗಿದೆ, ಫಾರಂ ನಂ.3 ಸೇರಿದಂತೆ ಯಾವುದೇ ಅರ್ಜಿಗಳು ವಿಲೇವಾರಿಯಾಗುತ್ತಿಲ್ಲ. ಕಂದಾಯ ಸ್ವೀಕಾರ ಮಾಡಲು ಕೂಡ ಅಧಿಕಾರಿಗಳಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು. ನಗರಸಭೆಯಲ್ಲಿ ಶೇ.50 ಕ್ಕಿಂತಲೂ ಅಧಿಕ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕೊರತೆ ಇದೆ. ಇದರ ನಡುವೆಯೇ ಇರುವ ಸಿಬ್ಬಂದಿಗಳನ್ನು “ಗೃಹಲಕ್ಷ್ಮಿ” ಯೋಜನೆಯೆ ಸೇವೆಗೆ ನಿಯೋಜಿಸಲಾಗಿದೆ. ಇದರಿಂದ ನಗರಸಭೆಯ ಕೆಲಸ ಕಾರ್ಯಗಳಿಗೆ ತೀವ್ರ ಹಿನ್ನಡೆಯಾಗಿದೆ. ನಗರದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಅನೇಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ತಮ್ಮ ಕಷ್ಟ ಹೇಳಿಕೊಳ್ಳಲು ನಗರಸಭೆಗೆ ಬಂದರೆ ಸಿಬ್ಬಂದಿಗಳೇ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು…
ಮಡಿಕೇರಿ ಜು.24 : ಮಡಿಕೇರಿ ನಗರಸಭೆ ಸಿಬ್ಬಂದಿಗಳ ಕೊರತೆಯನ್ನು ಎದುರಿಸುತ್ತಿದೆ, ಇದರ ನಡುವೆಯೇ ಇರುವ ಸಿಬ್ಬಂದಿಗಳನ್ನು ಸರ್ಕಾರದ “ಗೃಹಲಕ್ಷ್ಮಿ” ಯೋಜನೆಯ ಸೇವೆಗಾಗಿ ನಿಯೋಜಿಸಿ ಸಾರ್ವಜನಿಕರಿಗೆ ತೊಂದರೆ ನೀಡಲಾಗುತ್ತಿದೆ ಎಂದು ನಗರಸಭಾ ಮಾಜಿ ಉಪಾಧ್ಯಕ್ಷರಾದ ಲೀಲಾ ಶೇಷಮ್ಮ ಆರೋಪಿಸಿದ್ದಾರೆ. ನಗರಸಭೆಗೆ ಭೇಟಿ ನೀಡಿದ್ದ ಅವರು ಕಚೇರಿಯಲ್ಲಿ ಸಿಬ್ಬಂದಿಗಳಿಲ್ಲದೆ ಖಾಲಿ ಕುರ್ಚಿಗಳಿರುವುದನ್ನು ಮತ್ತು ಅರ್ಜಿದಾರರು ಪರದಾಡುತ್ತಿರುವುದನ್ನು ಕಂಡು ಅಸಮಾಧಾನ ವ್ಯಕ್ತಪಡಿಸಿದರು. ಅರ್ಜಿದಾರರು ಪ್ರತಿದಿನ ಅಲೆದಾಡಬೇಕಾದ ದುಸ್ಥಿತಿ ಬಂದೊದಗಿದೆ, ಫಾರಂ ನಂ.3 ಸೇರಿದಂತೆ ಯಾವುದೇ ಅರ್ಜಿಗಳು ವಿಲೇವಾರಿಯಾಗುತ್ತಿಲ್ಲ. ಕಂದಾಯ ಸ್ವೀಕಾರ ಮಾಡಲು ಕೂಡ ಅಧಿಕಾರಿಗಳಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು. ನಗರಸಭೆಯಲ್ಲಿ ಶೇ.50 ಕ್ಕಿಂತಲೂ ಅಧಿಕ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕೊರತೆ ಇದೆ. ಇದರ ನಡುವೆಯೇ ಇರುವ ಸಿಬ್ಬಂದಿಗಳನ್ನು “ಗೃಹಲಕ್ಷ್ಮಿ” ಯೋಜನೆಯೆ ಸೇವೆಗೆ ನಿಯೋಜಿಸಲಾಗಿದೆ. ಇದರಿಂದ ನಗರಸಭೆಯ ಕೆಲಸ ಕಾರ್ಯಗಳಿಗೆ ತೀವ್ರ ಹಿನ್ನಡೆಯಾಗಿದೆ. ನಗರದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಅನೇಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ತಮ್ಮ ಕಷ್ಟ ಹೇಳಿಕೊಳ್ಳಲು ನಗರಸಭೆಗೆ ಬಂದರೆ ಸಿಬ್ಬಂದಿಗಳೇ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು…
ಮಡಿಕೇರಿ ಜು.24 : ಕೊಡಗು ಜಿ.ಪಂ, ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘ ಹಾಗೂ ವಿರಾಜಪೇಟೆ ಅನದಾನಿತ ನೌಕರರ ಸಂಘದ ಸಂಯುಕ್ತಶ್ರಯದಲ್ಲಿ 2022-23ನೇ ಸಾಲಿನಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಪಡೆದ ಶಾಲೆ, ಶಿಕ್ಷಕರು ಮತ್ತು ಅತ್ಯುನ್ನತ ಸಾಧನೆಗೈದ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ ಮತ್ತು ಶೈಕ್ಷಣಿಕ ಕಾರ್ಯಾಗಾರ ನಡೆಯಿತು. ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಕಾರ್ಯಕ್ರಮವನ್ನು ಉದ್ಘಾಟಿಸಿ, ಎಸ್ಎಸ್ಎಲ್ಸಿಯಲ್ಲಿ ಶೇ.100ರಷ್ಟು ಅಂಕ ಪಡೆಯಲು ಕಾರಣರಾದ ಶಿಕ್ಷಕರನ್ನು ಹಾಗೂ ಉತ್ತಮ ಅಂಕ ಪಡೆದ ವಿಧ್ಯಾರ್ಥಿಗಳನ್ನು ಸನ್ಮಾನಿಸಿ, ಅಭಿನಂದಿಸಿದರು.
ಬೆಂಗಳೂರು: ಮಹಾತ್ಮಗಾಂಧಿ, ಅಂಬೇಡ್ಕರ್ ಅವರೂ ಪತ್ರಕರ್ತರಾಗಿ ಪತ್ರಿಕಾ ವೃತ್ತಿಗೆ ಮಾದರಿ ರೂಪಿಸಿಕೊಟ್ಟಿದ್ದಾರೆ. ಧ್ವನಿ ಇಲ್ಲದವರಿಗೆ ಧ್ವನಿ ನೀಡುವುದೇ ಪತ್ರಿಕಾ ವೃತ್ತಿಯ ಉದ್ದೇಶ, ಆಶಯ, ಜವಾಬ್ದಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಪ್ರೆಸ್ ಕ್ಲಬ್ ಆಫ್ ಬೆಂಗಳೂರು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಮತ್ತು ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇವತ್ತಿನ ಬಹಳಷ್ಟು ಪತ್ರಕರ್ತರು ಪತ್ರಿಕಾ ವೃತ್ತಿಯ ಆಶಯಕ್ಕೆ ತಕ್ಕಂತೆ ಇದ್ದೇವಾ? ಇಲ್ಲವಾ? ಎನ್ನುವ ಆತ್ಮಾವಲೋಕನ ಮಾಡಿಕೊಳ್ಳುವ ಅಗತ್ಯ ಇದೆ. ಸಮಾಜದಲ್ಲಿ ಇನ್ನೂ ಶೇ25 ರಷ್ಟು ಮಂದಿಗೆ ಶಿಕ್ಷಣ ಸಿಕ್ಕಿಲ್ಲ. ಆರ್ಥಿಕ ಅಸಮಾನತೆ ಇನ್ನೂ ಹೆಚ್ಚಾಗಿದೆ. ಹೀಗಾಗಿ ಅವಕಾಶ ವಂಚಿತರನ್ನು ಮುಖ್ಯವಾಹಿನಿಗೆ ತರುವ, ಸಮಾಜದ ಎಲ್ಲರಿಗೂ ನ್ಯಾಯ ದೊರಕಿಸಿಕೊಡುವ ಪ್ರಯತ್ನವನ್ನು ನಿರಂತರವಾಗಿ ಮಾಡುತ್ತಿದ್ದೇನೆ. ಸಾಮಾಜಿಕ ಅಸಮಾನತೆ ಹಿಂದಿನಿಂದ ಸಾಂಪ್ರದಾಯಿಕವಾಗಿ ನಡೆದುಕೊಂಡು ಬಂದಿದೆ. ಹೀಗಾಗಿ ಸಮಾಜದ ಬಹುಪಾಲು ಮಂದಿ ಆರ್ಥಿಕ ಮತ್ತು ಸಾಮಾಜಿಕ ಅಸಮಾನತೆ ಮತ್ತು ತಾರತಮ್ಯಕ್ಕೆ ಬಲಿಯಾಗಿದ್ದಾರೆ. ಇದಕ್ಕಾಗಿಯೇ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನ…
ಮಡಿಕೇರಿ ಜು.24 : ಬ್ಯಾಂಕ್ನಲ್ಲಿ ಗುಮಾಸ್ತರಾಗಬೇಕೆಂದು ಕನಸು ಹೊತ್ತವರಿಗೆ ಇಲ್ಲಿದೆ ಮತ್ತೊಂದು ಸಿಹಿ ಸುದ್ದಿ. ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ ದೇಶದ 11 ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಖಾಲಿ ಇರುವ ಗುಮಾಸ್ತ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಸರಿ ಸುಮಾರು 4,545 ಹುದ್ದೆಗಳಿಗೆ ಪೂರ್ವಭಾವಿ ಹಾಗೂ ಮುಖ್ಯ ಪರೀಕ್ಷೆ ನಡೆಸಲು ತೀರ್ಮಾನಿಸಿದೆ. 2022-23ರಲ್ಲಿ 6,035 ಹುದ್ದೆಗಳಿಗೆ ನೇಮಕ ನಡೆಸಲು ಅಧಿಸೂಚನೆ ಹೊರಡಿಸಲಾಗಿತ್ತು. ಆದರೆ ಈ ವರ್ಷ ಕೇವಲ 4,545 ಹುದ್ದೆಗಳಿಗೆ ನೇಮಕ ನಡೆಯಲಿದೆ. ಇದರಿಂದ ವರ್ಷದಿಂದ ವರ್ಷಕ್ಕೆ ನೇಮಕಾತಿಯಲ್ಲಿ ಇಳಿಮುಖ ವಾಗಿರೋದನ್ನು ಕಾಣಬಹುದು. ಕಳೆದ ಬಾರಿ ರಾಜ್ಯದಲ್ಲಿ 358 ಹುದ್ದೆಗಳಿದ್ದರೆ ಈ ಬಾರಿ ಕೇವಲ 253 ಹುದ್ದೆಗಳಿಗೆ ಮಾತ್ರ ನೇಮಕ ನಡೆಯಲಿದೆ. ಇದರಿಂದ ಆಕಾಂಕ್ಷಿಗಳು ನಿರಾಸೆಯಾಗುವ ಅಗತ್ಯವಿಲ್ಲ. ವಿಲೀನದ ನಂತರದ ಈ ಹಿಂದಿನ ಕಾರ್ಪೋರೇಷನ್ ಬ್ಯಾಂಕ್ ವಿಲೀನವಾದ ಯೂನಿಯನ್ ಬ್ಯಾಂಕ್ ಇನ್ನು ಹುದ್ದೆಗಳ ಮಾಹಿತಿಯನ್ನು ಐಬಿಪಿಎಸ್ ಗೆ ನೀಡಿಲ್ಲ.ಕೊನೆಯ ಕ್ಷಣದಲ್ಲಿ ಬದಲಾವಣೆ ಆಗಲುಬಹುದು. ರಾಜ್ಯದಲ್ಲಿ ಪರೀಕ್ಷಾ ಕೇಂದ್ರಗಳೆಲ್ಲಿ..? ರಾಜ್ಯದ 11 ಜಿಲ್ಲಾ ಕೇಂದ್ರಗಳಲ್ಲಿ…
ಮಡಿಕೇರಿ ಜು.24 : ಕುಂಜಿಲ ಸ್ಪೋರ್ಟ್ಸ್ ಕ್ಲಬ್ ವತಿಯಿಂದ 10ನೇ ವರ್ಷದ ರಾಜ್ಯ ಮಟ್ಟದ ಕ್ರೀಡಾಕೂಟ ನಡೆಯಿತು. ಕ್ರೀಡಾಕೂಟದಲ್ಲಿ ಸುಮಾರು 38 ತಂಡಗಳು ಭಾಗವಹಿಸಿದ್ದು, ಕೌ-ಟೈಗರ್ ತಂಡ ಚಾಂಪಿಯನ್ ಪಟ್ಟವನ್ನು ತನ್ನದಾಗಿಸಿಕೊಂಡಿದ್ದು, ನಿಹಾ ಫ್ರಂಡ್ಸ್ ಕುಂಜಿಲ ತಂಡ ದ್ವಿತೀಯ ಬಹುಮಾನಕ್ಕೆ ತೃಪ್ತಿಪಟ್ಟುಕೊಂಡಿತು. ನಾಪೋಕ್ಲು ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಮಂಜುನಾಥ್ ಕ್ರೀಡಾಕೂಟದಲ್ಲಿ ಸೋಲ, ಗೆಲುವು ಮುಖ್ಯವಲ್ಲ. ದೈಹಿಕ ಸಾಮರ್ಥ್ಯದ ವೃದ್ಧಿಗೆ ಸಹಕಾರಿಯಾಗಲಿದೆ ಎಂದರು. ಈ ಸಂದರ್ಭ ಕಕ್ಕಬ್ಬೆ ಗ್ರಾ.ಪಂ ಅಧ್ಯಕ್ಷ ಕಲಿಯಂಡ ಸಂಪ, ಸೌಕತ್ ಮಕ್ಕಿ, ಬಶೀರ್ ಪೊಯಕರೆ, ರಶೀದ್ ವಯಕೋಲ್ ಹಾಗೂ ಹಲವಾರು ಗಣ್ಯ ವ್ಯಕ್ತಿಗಳು ಪಾಲ್ಗೊಂಡಿದ್ದರು. ವರದಿ:ಸಾಜಿದ್ ಪಯ್ಯಡಿ
ಮಡಿಕೇರಿ ಜು.24 : ಭಾಗಮಂಡಲ ವ್ಯಾಪ್ತಿಯ ಬೆಂಗೂರು ಗ್ರಾಮದ ದೋಣಿ ಕಾಡು ಪ್ರದೇಶಕ್ಕೆ ತಹಶೀಲ್ದಾರ್ ಕಿರಣ್ ಗೌರಯ್ಯ ಮತ್ತು ಎನ್ಡಿಆರ್ಎಫ್ ತಂಡ ಭೇಟಿ ನೀಡಿ ವೀಕ್ಷಿಸಿದರು.
ಚೆಯ್ಯಂಡಾಣೆ ಜು.24 : ಎಡಪಾಲದ ನಜ್ಮುಲ್ ಹುದಾ ಮದರಸದ “ಮುಅಲಿಂ ಡೇ” ಕಾರ್ಯಕ್ರಮ ಎಡಪಾಲ ಜುಮಾ ಮಸೀದಿಯಲ್ಲಿ ನಡೆಯಿತು. ಪೊಯಾಪಳ್ಳಿ ಜುಮಾ ಮಸೀದಿಯ ಅಧ್ಯಕ್ಷ ಕೆ.ಯು.ಶಾಫಿ ಧ್ವಜಾರೋಹಣ ನೆರವೇರಿಸಿದರು. ಸಮಸ್ತ ಕೇಂದ್ರ ಮುಶಾವರ ಸದಸ್ಯರು ಹಾಗೂ ಕೊಡಗು ಜಿಲ್ಲಾ ನಾಇಬ್ ಖಾಝಿಗಳಾದ ಅಬ್ದುಲ್ಲ ಫೈಝಿ ಕಾರ್ಯಕ್ರವನ್ನು ಉದ್ಘಾಟಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಬೂಬಕ್ಕರ್ ಮುಸ್ಲಿಯಾರ್ ವಹಿಸಿ ಮಾತನಾಡಿದರು. ನೌಫಲ್ ಹುದವಿ ಮುಅಲಿಂ ಡೇ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಇದಕ್ಕೂ ಮೊದಲು ಎಡಪಾಲ ಜುಮಾ ಮಸೀದಿ ಮುದರ್ರಿಸ್ ನಿಝಾರ್ ಫೈಝಿ ನೇತೃತ್ವದಲ್ಲಿ ಅಂಡತ್ ಮಾನಿ ದರ್ಗಾ ಹಾಗೂ ಸಮೀಪದ ಖಬರ್ ಸ್ಥಾನಕ್ಕೆ ತೆರಳಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಈ ಸಂದರ್ಭ ಜಮಾಅತ್ ಪ್ರಧಾನ ಕಾರ್ಯದರ್ಶಿ ಶಾಹುಲ್ ಹಮೀದ್, ಎನ್.ಎಚ್.ವೈಎ ಅಧ್ಯಕ್ಷ ರಿಯಾಝ್, ಮದರಸ ಅಧ್ಯಾಪಕರು, ಮತಿತ್ತರರು ಉಪಸ್ಥಿತರಿದ್ದರು. ಸ್ವಾಗತ ಹಾಗೂ ವಂದನೆಯನ್ನು ಸದರ್ ಮುಅಲಿಂ ಹಮೀದ್ ಮುಸ್ಲಿಯಾರ್ ನೆರವೇರಿಸಿದರು. ವರದಿ : ಅಶ್ರಫ್






