ಲೇಖಕ: admin

ನಾಪೋಕ್ಲು ಜು.24 : ನಾಪೋಕ್ಲು ಹೋಬಳಿ ವ್ಯಾಪ್ತಿಯಲ್ಲಿ ನಿರಂತರ ಮಳೆ ಬಿರುಸಿನಿಂದ ಸುರಿಯುತ್ತಿದ್ದು ಜೀವ ನದಿ ಕಾವೇರಿ ಪ್ರವಾಹ ತುಂಬಿ ಬಹುತೇಕ ಕಡೆ ಹಳ್ಳಕೊಳ್ಳಗಳು ಭರ್ತಿಯಾಗಿದೆ. ಕಾವೇರಿ ನದಿತೀರದ ಹಲವು ಗದ್ದೆಗಳು ಜಲಾವೃತವಾಗಿದ್ದು, ನಾಪೋಕ್ಲು, ಬೊಳಿಬಾಣೆ, ಕಕ್ಕಬ್ಬೆ, ಬಲ್ಲಮಾವಟಿ, ಎಮ್ಮೆಮಾಡು, ಬೆಟ್ಟಗೇರಿ. ಪಾಲೂರು ,ಹೊದ್ದೂರು ಬೇತು, ಪಾರಾಣೆ ಗ್ರಾಮದಲ್ಲಿಯ ಗದ್ದೆಗಳಿಗೆ ನೀರು ನುಗ್ಗಿದ್ದು ಜಲಾವೃತವಾಗಿದೆ ನಾಪೋಕ್ಲು – ಮೂರ್ನಾಡು ಸಂಪರ್ಕ ರಸ್ತೆಯ ಬೊಳಿಬಾಣೆ ಎಂಬಲ್ಲಿ ರಸ್ತೆಯ ಮೇಲೆ ಕಾವೇರಿ ಪ್ರವಾಹದ ಹರಿಯುತ್ತಿದ್ದು ವಾಹನಗಳ ಸಂಚಾರ ಕಡಿದುಕೊಂಡಿದೆ. ಇಲ್ಲಿ ಪೊಲೀಸರು ಬ್ಯಾರಿಕೆಡ್ ಅಳವಡಿಸಿ ಮುಂಜಾಗ್ರತ ಕ್ರಮ ಕೈಗೊಂಡಿದ್ದಾರೆ. ಚೆರಿಯಪರಂಬು ಕಲ್ಲುಮೊಟ್ಟೆ ಸಂಪರ್ಕ ರಸ್ತೆಯು ಜಲಾವೃತವಾಗಿ ಸಂಪರ್ಕ ಸ್ಥಗಿತಗೊಂಡಿದ್ದು ಸ್ಥಳೀಯ ಯುವಕರ ತುರ್ತು ಸೇವಾ ತಂಡದ ಮೂಲಕ ತೆಪ್ಪ ಬಳಸಿಕೊಂಡು ಸಾರ್ವಜನಿಕರಿಗೆ ಸಹಕರಿಸುತ್ತಿದ್ದಾರೆ. ಹೊದ್ದೂರು ಗ್ರಾಮದ ಬಲಮುರಿಯಲ್ಲಿ ಹಳೆಯ ಸೇತುವೆ ಮುಳುಗಡೆಯಾಗಿ ಗ್ರಾಮಸ್ಥರು ಸುತ್ತು ಬಳಸಿ ಹೋಗಬೇಕಾದ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗಿದೆ. ಗಾಳಿ ಮಳೆಯಿಂದಾಗಿ ಕುಂಜಿಲ ಗ್ರಾಮದ ಮಕ್ಕಿ ಉಮ್ಮರ್ ಅವರ ವಾಸದ ಮನೆಯ…

Read More

ಮಡಿಕೇರಿ ಜು.24 :   ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ 50 ನೇ ವರ್ಷದ ದಸರಾ ಉತ್ಸವ ಸಮಿತಿಯ 2023-24ನೇ ಸಾಲಿನ ನೂತನ ಅಧ್ಯಕ್ಷರಾಗಿ ರವಿ ಆಯ್ಕೆಯಾಗಿದ್ದಾರೆ.

Read More

ಮಡಿಕೇರಿ ಜು.23 : ಕೊಡಗು ಜಿಲ್ಲೆಯಾದ್ಯಂತ ಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿದ್ದು, ಕಾವೇರಿಯ ಉಗಮ ಸ್ಥಾನ ತಲಕಾವೇರಿಯಲ್ಲಿ 24 ಗಂಟೆಗಳಲ್ಲಿ ದಾಖಲೆಯ 12 ಇಂಚಿಗೂ ಅಧಿಕ ಮಳೆಯಾಗಿದೆ. ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಮುಂಗಾರು ಬಿರುಸುಗೊಳ್ಳುತ್ತಿದ್ದು, ನದಿ, ತೊರೆಗಳು ತುಂಬಿ ಹರಿಯುತ್ತಿವೆ. ಹಲವೆಡೆ ಪ್ರವಾಹದಿಂದಾಗಿ ರಸ್ತೆ ಮತ್ತು ಸೇತುವೆ ಸಂಪರ್ಕ ಕಡಿತಗೊಂಡಿದೆ. ಮರ, ಬರೆ, ವಿದ್ಯುತ್ ಕಂಬಗಳು ಬೀಳುತ್ತಲೇ ಇದ್ದು, ರಸ್ತೆ ಮತ್ತು ಕಾಲು ಸೇತುವೆಗಳು ಕೊಚ್ಚಿ ಹೋದ ಘಟನೆಯೂ ನಡೆದಿದೆ. ಕಾವೇರಿ ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದು, ನದಿ ತೀರದ ನಿವಾಸಿಗಳು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳ್ಳುವಂತೆ ಸ್ಥಳೀಯ ಆಡಳಿತ ಸೂಚನೆ ನೀಡಿದೆ. ::: ಹಾರಂಗಿಯಿoದ ನೀರು ::: ಜಿಲ್ಲೆಯ ಹಾರಂಗಿ ಜಲಾಶಯದಿಂದ 25,500 ಕ್ಯೂಸೆಕ್ಸ್ ನೀರನ್ನು ನದಿಗೆ ಹರಿಯಬಿಡಲಾಗುತ್ತಿದ್ದು, ಜಲಾಶಯದ ಒಳ ಹರಿವು 31,140 ಕ್ಯೂಸೆಕ್ಸ್ ಆಗಿದೆ. ತಲಕಾವೇರಿ ಹಾಗೂ ಭಾಗಮಂಡಲದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ತ್ರಿವೇಣಿ ಸಂಗಮ ಉಕ್ಕಿ ಹರಿಯುತ್ತಿದೆ. ನಾಪೋಕ್ಲು ಮತ್ತು ಮಡಿಕೇರಿ ರಸ್ತೆ ಜಲಾವೃತಗೊಂಡಿದ್ದು, ವಾಹನಗಳ ಸಂಚಾರ ದುಸ್ತರವಾಗಿದೆ.…

Read More

ಮಡಿಕೇರಿ ಜು.23 : ಕುಶಾಲನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಕೆ.ಎಸ್ .ನಾಗೇಶ್ ಅವರನ್ನು ಕಸಾಪ ಜಿಲ್ಲಾಧ್ಯಕ್ಷ ಎಂ.ಪಿ.ಕೇಶವ ಕಾಮತ್ ಅವರು ಆಯ್ಕೆ ಮಾಡಿದ್ದಾರೆ.          ಗೌರವ ಕಾರ್ಯದರ್ಶಿಗಳಾಗಿ ಎಸ್. ನಾಗರಾಜ್ ಮತ್ತು ಟಿ.ವಿ ಶೈಲಾ, ಗೌರವ ಕೋಶಾಧಿಕಾರಿಗಳಾಗಿ  ಕೆ.ವಿ ಉಮೇಶ್, ಸಂಘಟನಾ ಕಾರ್ಯದರ್ಶಿಗಳಾಗಿ  ಕೆ ಬಿ. ದೇವಿಪ್ರಸಾದ್ ಹಾಗೂ ರತ್ನಾವತಿ ಸೂದನ ಅವರನ್ನು ನೇಮಿಸಲಾಗಿದೆ.         ಸುಂಟಿಕೊಪ್ಪ ಹೋಬಳಿ ಅಧ್ಯಕ್ಷ ಪಿ ಎಫ್ ಸಬಾಸ್ಟಿನ್, ಶಿರಂಗಾಲ ಹೋಬಳಿ ಅಧ್ಯಕ್ಷ  ಎಂ.ಎನ್. ಮೂರ್ತಿ ಕಾರ್ಯಕಾರಿ ಮಂಡಳಿಯ ಸದಸ್ಯರಾಗಿರುತ್ತಾರೆ.           ಅಲ್ಲದೆ ಸಂಘ ಸಂಸ್ಥೆಗಳ ಪ್ರತಿನಿಧಿಯಾಗಿ  ವಿ.ಪಿ ಶಶಿಧರ್, ಮಹಿಳಾ ಪ್ರತಿನಿಧಿಗಳಾಗಿ ಸಾವಿತ್ರಿ ಬಿ.ಬಿ, ಕುಮಾರಿ ಫಿಲೋಮಿನಾ,  ಪರಿಶಿಷ್ಟ ಜಾತಿ ಪ್ರತಿನಿಧಿಗಳಾಗಿ  ಹೆಚ್.ಎಂ ವೆಂಕಟೇಶ್, ಗೀತಾ ಬಸಪ್ಪ, ಪರಿಶಿಷ್ಟ ಪಂಗಡ ಪ್ರತಿನಿಧಿಯಾಗಿ  ಪರಮೇಶ್ವರ್ ವೈ.ಟಿ, ಹಿಂದುಳಿದ ವರ್ಗಗಳ ಪ್ರತಿನಿಧಿಯಾಗಿ  ಪರಮೇಶ್ ಬಿ. ಎಸ್.…

Read More

ಮಡಿಕೇರಿ, ಜು.23: ಜಿಲ್ಲೆಯ ಪತ್ರಕರ್ತರಿಗೆ ನಿವೇಶನ ಒದಗಿಸುವ ಬೇಡಿಕೆಗೆ ಸ್ಪಂದಿಸುತ್ತೇನೆ. ಸರಕಾರ ಮಟ್ಟದಲ್ಲಿ ಈ ಬಗ್ಗೆ ಚರ್ಚಿಸುತ್ತೇನೆ ಎಂದು ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಅಜ್ಜಿಕುಟ್ಟೀರ ಎಸ್. ಪೊನ್ನಣ್ಣ ಭರವಸೆ ನೀಡಿದರು. ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ ಪ್ರದಾನ ಹಾಗೂ ಮಹಾಸಭೆ ಕಾರ್ಯಕ್ರಮ ನಗರದ ಪತ್ರಿಕಾ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು  ಉದ್ಘಾಟಿಸಿ ಮಾತನಾಡಿದ ಪೊನ್ನಣ್ಣ ಅವರು, ಮಾಧ್ಯಮ ಸಂಸ್ಥೆ ಮುನ್ನಡೆಸುವುದು ಸವಾಲಿನ ಕೆಲಸ. ಸಂಸ್ಥೆಗಳು ಆರ್ಥಿಕ ಸಂಕಷ್ಟದ ನಡುವೆ ಕೆಲಸ ಮಾಡುತ್ತಿವೆ. ಜಿಲ್ಲಾ ಮಟ್ಟದಲ್ಲಿಯೂ ಪತ್ರಕರ್ತರು ಸಂಕಷ್ಟದಲ್ಲಿ ಕೆಲಸ ಮಾಡುತ್ತಿದ್ದಾರೆ. ಇಷ್ಟೆಲ್ಲ ಸಮಸ್ಯೆಗಳ ನಡುವೆ ಪತ್ರಕರ್ತರು ಬದ್ಧತೆಯಿಂದ ಕೆಲಸ ಮಾಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.   ರಾಜ್ಯದಲ್ಲಿ ಹೆಸರು ಗಳಿಸಿದ ಪತ್ರಿಕೆಯೊಂದು ನಷ್ಟದಿಂದ ವಾರಗಳ ಕಾಲ ಸ್ಥಗಿತಗೊಂಡಿತ್ತು. ಅಂದು ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿ ವಾರ್ತಾ ಇಲಾಖೆ ಮೂಲಕ ಕಚ್ಛಾವಸ್ತು ಖರೀದಿಗೆ ನೆರವು ನೀಡಿದ್ದರು. ಆದರೆ, ಕುಮಾರಸ್ವಾಮಿ ವಿರುದ್ಧವೇ ಮುಖಪುಟದಲ್ಲಿ ವರದಿ ಪ್ರಕಟವಾಗಿತ್ತು. ಇದು ಮಾಧ್ಯಮದ ಜವಾಬ್ದಾರಿ ಪ್ರದರ್ಶಿಸುತ್ತದೆ. ಆಸಕ್ತಿ,…

Read More

ನಾಪೋಕ್ಲು ಜು.23 : ಧಾರಾಕಾರ ಮಳೆಯಿಂದ ಕಾವೇರಿ ನದಿ ಉಕ್ಕಿ ಹರಿಯುತ್ತಿದೆ. ನಾಪೋಕ್ಲು -ಮೂರ್ನಾಡು ಮುಖ್ಯ ರಸ್ತೆಯ ಬೊಳಿಬಾಣೆ ಬಳಿ ರಸ್ತೆಯ ಮೇಲೆ ನೀರು ಹರಿಯುತ್ತಿದ್ದು, ಸಂಚಾರ ಕಡಿತಗೊಂಡಿದೆ. ಚೆರಿಯಪರಂಬು, ಕಲ್ಲು ಮೊಟ್ಟೆ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ನದಿ ಪ್ರವಾಹದಿಂದ ಸಂಚಾರ ಸ್ಥಗಿತಗೊಂಡಿದ್ದು, ಸ್ಥಳೀಯ ನಿವಾಸಿಗಳು ಆತಂಕಗೊಂಡಿದ್ದಾರೆ. ಅದರಂತೆ ನಾಪೋಕ್ಲುವಿನಿಂದ ಬೆಟ್ಟಗೇರಿ ಮಡಿಕೇರಿ ತೆರಳುವ ಕೊಟ್ಟಮುಡಿ ಬಳಿಯಲ್ಲಿ ಕಾವೇರಿ ನದಿ ತುಂಬಿ ಹರಿಯುತ್ತಿದೆ. ಕಕ್ಕಬ್ಬೆ ಗ್ರಾಮದಿಂದ ಕುಂಜಿಲ ಪೈನರಿ ದರ್ಗಾಕ್ಕೆ ಹೋಗುವ ರಸ್ತೆ ಜಲಾವೃತಗೊಂಡಿದೆ. ನಾಪೋಕ್ಲುವಿನಿಂದ ವಿರಾಜಪೇಟೆಗೆ ತೆರಳುವ ಕೈಕಾಡು ಹೊಳೆ ಹಾಗೂ ಎಡಪಾಲ ಮಾರ್ಗವಾಗಿ ಕಡಂಗ ತೆರಳುವ ಅರಪಟ್ಟು ಎಂಬಲ್ಲಿ ರಸ್ತೆಯಲ್ಲಿ ಪ್ರವಾಹ ಉಂಟಾಗಿದೆ. ನಾಪೋಕ್ಲು ಸುತ್ತಮುತ್ತ ಮಳೆ ಆರ್ಭಟ ಮುಂದುವರಿದಿದ್ದು, ನದಿ, ತೊರೆ, ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ಮಳೆಯ ತೀವ್ರತೆ ಹೀಗೆ ಮುಂದುವರೆದರೆ ರಸ್ತೆ ಸಂಪರ್ಕ ಕಡಿತಗೊಳ್ಳುವ ಎಲ್ಲಾ ಸಾಧ್ಯತೆಗಳಿದೆ. (ವರದಿ : ಝಕರಿಯ, ನಾಪೋಕ್ಲು) 

Read More

ನಾಪೋಕ್ಲು ಜು.23 : ಇಲ್ಲಿನ ಕರ್ನಾಟಕ ಪಬ್ಲಿಕ್ ಶಾಲೆಯ ಪದವಿ ಪೂರ್ವ ಮತ್ತು ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ಪೊಲೀಸ್ ಇಲಾಖೆ ವತಿಯಿಂದ ಕಾನೂನು ಅರಿವು ಕಾರ್ಯಕ್ರಮ ನಡೆಯಿತು.  ಶಾಲೆಯ ಸಭಾಂಗಣದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಮಾತನಾಡಿದ ನಾಪೋಕ್ಲು ಠಾಣಾಧಿಕಾರಿ  ಮಂಜುನಾಥ್ ವಿದ್ಯಾರ್ಥಿಗಳಿಗೆ ಕಾನೂನು ಅಂದರೆ ಏನು? ಕಾನೂನು ಉಲ್ಲಂಘಿಸಿದವರಿಗೆ ಆಗುವ ಶಿಕ್ಷೆಯ ಬಗ್ಗೆ ಮಾಹಿತಿನೀಡಿದರು.ಶಿಕ್ಷಣದ ಮಹತ್ವದ ಮೂಲಕ ಗಳಿಸಿಕೊಳ್ಳುವ ಜ್ಞಾನ, ಕಟ್ಟಿಕೊಳ್ಳುವ ಬದುಕು, ರೂಡಿಸಿಕೊಳ್ಳಬೇಕಾದ ಮೌಲ್ಯಗಳು, ಮಾನವೀಯತೆಯ ಮನೋಭಾವದ ಬಗ್ಗೆ ತಿಳಿಸಿದರು. ಮಾದಕ ವಸ್ತುಗಳ ಬಳಕೆಯಿಂದ  ಹಾಗುವ ದುಷ್ಪರಿಣಾಮ ಮತ್ತು ಅದನ್ನು ಬಳಸುವ, ಸರಬರಾಜು ಮಾಡುವವರಿಗೆ ಶಿಕ್ಷೆ ಮತ್ತು ದಂಡಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಟ್ಟ ಅವರು ಮೊಬೈಲ್ ಬಳಸುವುದರಿಂದ ಆಗುವ ಸಾಧಕ ಬಾದಕಗಳ ಬಗ್ಗೆ ಕೂಡ ಮಾಹಿತಿ ನೀಡಿ ಎಲ್ಲಾ ವಿದ್ಯಾರ್ಥಿಗಳು ಕಾನೂನನ್ನು ಪರಿಪಾಲಿಸಿ ಉಲ್ಲಂಘನೆ ಮಾಡದೆ ಶಿಸ್ತಿನಿಂದ ಶಿಕ್ಷಣವನ್ನು ಪಡೆದುಕೊಂಡು ಉಜ್ವಲ ಭವಿಷ್ಯ ರೂಪಿಸಬೇಕೆಂದು ಕರೆ ನೀಡಿದರು. ಪೊಲೀಸ್ ಸಿಬ್ಬಂದಿ  ಲವಕುಮಾರ್ ಮಾತನಾಡಿ ವಿದ್ಯಾರ್ಥಿಗಳು ರಸ್ತೆಯ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕು.…

Read More

ಸುಂಟಿಕೊಪ್ಪ ಜು.23 : ಭಾರೀ ಗಾಳಿ ಮಳೆಗೆ ಮರ ಮನೆಯ ಮೇಲೆ ಬಿದ್ದು ಹಾನಿಯಾಗಿರುವ ಘಟನೆ ಕೆದಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ 7ನೇ ಮೈಲು ಗ್ರಾಮದಲ್ಲಿ ನಡೆದಿದೆ. ನೂತನವಾಗಿ ನಿರ್ಮಿಸಲಾಗುತ್ತಿರುವ ಫ್ರಾನ್ಸಿಸ್ ಎಂಬುವವರ ಮನೆಯ ತಾರಸಿ ಮೇಲೆ ಮರ ಬಿದ್ದ ಪರಿಣಾಮ ಸ್ಟೀಲ್ ಸಿಂಟೆಕ್ಸ್ ಸಂಪೂರ್ಣ ಜಖಂಗೊoಡಿದ್ದು, ಸುಮಾರು 1 ಲಕ್ಷ ರೂ. ನಷ್ಟ ಉಂಟಾಗಿದೆ.

Read More

ಸುಂಟಿಕೊಪ್ಪ ಜು.23 : ಸುಂಟಿಕೊಪ್ಪ ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಎನ್‌ಡಿಆರ್‌ಎಫ್ ರಾಷ್ಟ್ರೀಯ ವಿಪತ್ತು ನಿರ್ವಹಣಾ ಸಮಿತಿ ವತಿಯಿಂದ ವಿಪತ್ತು ಸಂಬಂವಿಸಿದಾಗ ಕೈಗೊಳ್ಳಬೇಕಾದ ಕ್ರಮದ ಬಗ್ಗೆ ಪ್ರಾತ್ಯಕ್ಷಿಕೆ ನಡೆಯಿತು. ಪ್ರವಾಹ, ಭೂಕುಸಿತ, ನೆರೆ, ಕಟ್ಟಡ ಕುಸಿತ ಸಂಭವಿಸಿದಾಗ ಪ್ರಾಣಹಾನಿ ಅನಾಹುತ ತಪ್ಪಿಸಲು ಎನ್‌ಡಿಆರ್‌ಎಫ್ ತಂಡ ಕಾಯೋನ್ಮುಖವಾಗುತ್ತದೆ. ವಿದ್ಯಾರ್ಥಿಗಳು ಆಟವಾಡುವಾಗ ಗಾಯವಾದರೆ ಪ್ರಥಮ ಚಿಕಿತ್ಸೆ ನೀಡುವುದು ಹೇಗೆ ಎನ್ನುವ ಬಗ್ಗೆ ಎನ್‌ಡಿಆರ್‌ಎಫ್ ನ ವಿಜಯವಾಡ ತಂಡದ ಅಧಿಕಾರಿ ಶಾಂತಿಲಾಯ್ ಶಾಲೆಯ ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿಗಳಿಗೆ ಉಪಯುಕ್ತ ಮಾಹಿತಿ ನೀಡಿದರು. ಸುಂಟಿಕೊಪ್ಪ ಗ್ರಾ.ಪಂ ಸದಸ್ಯ ಹಾಗೂ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ರಫೀಕ್‌ಖಾನ್, ಸರಕಾರಿ ಪ್ರೌಢಶಾಲೆಯ ಉಪಪ್ರಾಂಶುಪಾಲ ಬಾಲಕೃಷ್ಣ, ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಗೀತಾ, ಗ್ರಾ.ಪಂ ಮಾಜಿ ಸದಸ್ಯೆ ರಹೆನಾ ಸುಲ್ತಾನ್, ಪ್ರೌಢಶಾಲೆಯ ಶಿಕ್ಷಕ ಪ್ರಕಾಶ್, ಸಹ ಶಿಕ್ಷಕ, ಶಿಕ್ಷಕಿಯರು ಹಾಗೂ ಎನ್‌ಡಿಆರ್‌ಎಫ್ ತಂಡದ ಸಿಬ್ಬಂದಿಗಳು ಇದ್ದರು.

Read More

ಮಡಿಕೇರಿ ಜು.23 : ಶ್ರೀ ದಂಡಿನ ಮಾರಿಯಮ್ಮ ದೇವಾಲಯದ 93ನೇ ವರ್ಷದ ದಸರಾ ಉತ್ಸವದ 2023/24ನೇ ಸಾಲಿನ ನೂತನ ಅಧ್ಯಕ್ಷರಾಗಿ ನವೀನ್ ಅಂಬೇಕಲ್, ಉಪಾಧ್ಯಕ್ಷರಾಗಿ ಕಿಶೋರ್ ಬಾಬು, ಹಾಗೂ ವಾಸುದೇವ್ ಆಯ್ಕೆಯಾಗಿದ್ದಾರೆ. ದೇವಾಲಯದ ಆವರಣದಲ್ಲಿ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

Read More