ಮಡಿಕೇರಿ ಜು.23 : ಮಣಿಪುರದಲ್ಲಿ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳು ಮತ್ತು ಇಬ್ಬರು ಮಹಿಳೆಯರನ್ನು ಅವಮಾನಿಸಿದ ಘಟನೆ ಖಂಡನೀಯವೆಂದು ಅಸಮಾಧಾನ ವ್ಯಕ್ತಪಡಿಸಿರುವ ಮಡಿಕೇರಿ ನಗರಸಭಾ ಮಾಜಿ ಉಪಾಧ್ಯಕ್ಷೆ ಲೀಲಾ ಶೇಷಮ್ಮ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಮಹಿಳೆಯರನ್ನು ಬೆತ್ತಲೆ ಮೆರವಣಿಗೆ ಮಾಡಿ ಅಮಾನವೀಯವಾಗಿ ನಡೆದುಕೊಂಡವರಿಗೆ ಕಠಿಣ ಶಿಕ್ಷೆ ವಿಧಿಸುವ ಮೂಲಕ ನೊಂದವರಿಗೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿದ್ದಾರೆ. ಕಾರ್ಗಿಲ್ ಯುದ್ಧದಲ್ಲಿ ಹೋರಾಡಿ ದೇಶವನ್ನು ರಕ್ಷಿಸಿದ ಯೋಧನ ಪತ್ನಿಗೇ ರಕ್ಷಣೆ ನೀಡಲಾಗದಷ್ಟು ಹೀನಾಯ ಸ್ಥಿತಿಯಲ್ಲಿರುವ ಮಣಿಪುರ ಸರ್ಕಾರವನ್ನು ವಜಾಗೊಳಿಸಬೇಕು. ಕೇಂದ್ರ ಸರ್ಕಾರ ಮಧ್ಯ ಪ್ರವೇಶ ಮಾಡಿ ಮತ್ತಷ್ಟು ಅಮಾಯಕ ಜೀವಗಳು ಬಲಿಯಾಗುವುದನ್ನು ತಡೆಯಬೇಕು. ದೇಶವ್ಯಾಪಿ ದ್ವೇಷದ ಕಿಚ್ಚು ಹಬ್ಬುವ ಮುನ್ನ ಪ್ರಧಾನಮಂತ್ರಿಗಳು ಎಚ್ಚೆತ್ತುಕೊಳ್ಳಬೇಕು. “ಬೇಟಿ ಪಡಾವೋ ಬೇಟಿ ಬಚಾವೋ” ಘೋಷಣೆ ಕೇವಲ ಪ್ರಚಾರಕಷ್ಟೇ ಸೀಮಿತವಾಗಬಾರದು. ದೇಶದಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳ ವಾಸ್ತವತೆಯನ್ನು ಅರಿತು ಅಮಾಯಕರ ರಕ್ಷಣೆಗೆ ಬರಬೇಕು ಎಂದು ಲೀಲಾ ಶೇಷಮ್ಮ ಒತ್ತಾಯಿಸಿದ್ದಾರೆ.
ಲೇಖಕ: admin
ಮಡಿಕೇರಿ ಜು.23 : ಚಿನ್ನಾಭರಣ ಕಳ್ಳತನ ಮಾಡಿದ ಆರೋಪದಡಿ ಮಹಿಳೆಯೊಬ್ಬರನ್ನು ಸೋಮವಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಕರ್ಕಳ್ಳಿ ಗ್ರಾಮದ ನಿವಾಸಿ ಜಯಂತಿ ಬಂಧಿತ ಆರೋಪಿಯಾಗಿದ್ದು, ಇವರಿಂದ 120 ಗ್ರಾಂ ನಷ್ಟು ಚಿನ್ನಾಭರಣಗಳನ್ನು ವಶಕ್ಕೆ ಪಡೆಯಲಾಗಿದೆ. ಸೋಮವಾರಪೇಟೆ ಜೂನಿಯರ್ ಕಾಲೇಜು ರಸ್ತೆಯ ಕೆ.ರಾಜೀವನ್ ಎಂಬುವವರ ಮನೆ ಕೆಲಸ ಮಾಡುತ್ತಿದ್ದ ಜಯಂತಿ, ಮಾಲೀಕರ ಮನೆಯಲ್ಲೇ ಕಳ್ಳತನ ಮಾಡಿದ್ದಳು ಎಂದು ಆರೋಪಿಸಲಾಗಿದೆ. ಈ ಬಗ್ಗೆ ಠಾಣೆಯಲ್ಲಿ ದೂರು ದಾಖಲಾಗಿ ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದಾಗ ಚಿನ್ನಾಭರಣ ಕಳ್ಳತನ ಮಾಡಿರುವುದನ್ನು ಒಪ್ಪಿಕೊಂಡಿದ್ದಳು. ಆರೋಪಿ ಜಯಂತಿಯನ್ನು ಬಂಧಿಸಿದ ಪೊಲೀಸರು, ಮಾರಾಟ ಮಾಡಿದ್ದ ಚಿನ್ನಾಭರಣವನ್ನು ವಶಪಡಿಸಿಕೊಂಡರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಎಎಸ್ಪಿ ಸುಂದರ್ ರಾಜ್ ಅವರ ಮಾರ್ಗದರ್ಶನದಲ್ಲಿ, ಡಿವೈಎಸ್ಪಿ ಗಂಗಾಧರಪ್ಪ ನೇತೃತ್ವದಲ್ಲಿ, ಇನ್ಸ್ಪೆಕ್ಟರ್ ರಾಮಚಂದ್ರ ನಾಯಕ್, ಪಿಎಸ್ಐಗಳಾದ ರಮೇಶ್, ವಿರೂಪಾಕ್ಷ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಮಡಿಕೇರಿ ಜು.23 : ಕೊಡವ ಹಾಕಿ ಅಕಾಡೆಮಿಯ ಪ್ರಮುಖರು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡರನ್ನು ಭೇಟಿಯಾಗಿ ನೆನಪಿನ ಕಾಣಿಕೆ ನೀಡಿ ಅಭಿನಂದಿಸಿದರು. ಈ ಸಂದರ್ಭ ಮಾತನಾಡಿದ ಹಾಕಿ ಅಕಾಡೆಮಿಯ ಅಧ್ಯಕ್ಷ ಪಾಂಡಂಡ ಬೋಪಣ್ಣ ಹಾಗೂ ಉಪಾಧ್ಯಕ್ಷ ಕುಕ್ಕೇರ ಜಯ ಚಿಣ್ಣಪ್ಪ ಕೊಡಗು ಜಿಲ್ಲೆ ಕ್ರೀಡಾ ಕಲಿಗಳ ನಾಡಾಗಿದ್ದು, ನೂರಾರು ಹಾಕಿ ಪಟುಗಳು ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದ್ದಾರೆ ಎಂದರು. ಹಾಕಿ ಅಕಾಡೆಮಿ ಹಾಕಿಯನ್ನು ಉತ್ತೇಜಿಸಲು ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬರುತ್ತಿದೆ. ಯುವ ಪ್ರತಿಭೆಗಳನ್ನು ಪ್ರೋತ್ಸಾಹಿಸುತ್ತಿದೆ, ಈ ಕಾರ್ಯಕ್ಕೆ ಶಾಸಕರು ಸಂಪೂರ್ಣ ಸಹಕಾರ ನೀಡಬೇಕೆಂದು ಮನವಿ ಮಾಡಿದರು. ಕ್ಷೇತ್ರದಲ್ಲಿರುವ ಮೈದಾನ ಹಾಗೂ ಕ್ರೀಡಾಂಗಣಗಳ ಅಭಿವೃದ್ಧಿಗೂ ಒತ್ತು ನೀಡಬೇಕೆಂದು ಗಮನ ಸೆಳೆದರು. ಹಾಕಿ ಅಕಾಡೆಮಿಯ ಜಂಟಿ ಕಾರ್ಯದರ್ಶಿ ಚೆಯ್ಯಂಡ ಸತ್ಯ ಗಣಪತಿ, ನಿರ್ದೇಶಕರುಗಳಾದ ಕುಲ್ಲೇಟಿರ ಬೇಬ ಹಾಗೂ ನೆರಪಂಡ ಹರ್ಷ ಉಪಸ್ಥಿತರಿದ್ದರು.
ಮಡಿಕೇರಿ ಜು.22 : ಮಣಿಪುರದಲ್ಲಿ ನಡೆದಿರುವ ಮಹಿಳೆಯರ ಮೇಲಿನ ಅತ್ಯಾಚಾರ ಮತ್ತು ಬೆತ್ತಲೆ ಮೆರವಣಿಗೆ ಖಂಡಿಸಿ ವಿಮೆನ್ ಇಂಡಿಯಾ ಮೂಮೆಂಟ್ ಕೊಡಗು ಘಟಕ ನಗರದಲ್ಲಿ ಪ್ರತಿಭಟನೆ ನಡೆಸಿತು. ನಗರದ ಇಂದಿರಾಗಾಂಧಿ ವೃತ್ತದಲ್ಲಿ ಜಮಾಯಿಸಿ ಸಂಘಟನೆಯ ಕಾರ್ಯಕರ್ತರು ಕೇಂದ್ರ ಹಾಗೂ ಮಣಿಪುರದ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಈ ಸಂದರ್ಭ ಮಾತನಾಡಿದ ರಾಜ್ಯ ಪ್ರಧಾನ ಕಾರ್ಯದರ್ಶಿ ತನುಜಾವತಿ ಮಾತನಾಡಿ, ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರವು ವಿಶ್ವವೇ ತಲೆತಗ್ಗಿಸುವಂತ ಕೃತ್ಯವಾಗಿದೆ. ಘಟನೆ ನಡೆದು ತಿಂಗಳುಗಳೇ ಕಳೆದರು ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದಿರುವುದು ಖಂಡನೀಯ ಎಂದರು. ದೇಶದ ಹೃದಯ ಭಾಗವಾಗಿರುವ ರಾಜಧಾನಿಯಲ್ಲಿ ಮಹಿಳಾ ಕ್ರೀಡಾಪಟುಗಳು ನ್ಯಾಯಕ್ಕಾಗಿ ಮೊರೆಯಿಡುತ್ತಿರಬೇಕಾದರೆ ಪ್ರಧಾನಿ ಮೌನ ವಹಿಸಿದ್ದರು, ಬಿಲ್ಕೀಸ್ ಬಾನು ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೊಳಗಾದವರನ್ನು “ಸನ್ನಡತೆ” ಹೆಸರಿನಲ್ಲಿ ಬಿಡುಗಡೆಗೊಳಿಸಲಾಗಿತ್ತು ಇದು ದುಷ್ಕರ್ಮಿಗಳಿಗೆ ಆಡಳಿತಾತ್ಮಕ ಧೈರ್ಯ ನೀಡಿದಂತಾಗಿದ್ದು, ಅಂತರಾಷ್ಟ್ರೀಯ ಮಟ್ಟದಲ್ಲಿ ದೇಶದ ಮಾನ ಹರಾಜು ಆಗುತ್ತಿದೆ ಎಂದು ಆರೋಪಿಸಿದರು. ಈ ಘಟನೆಯನ್ನು ಸುಪ್ರೀಂ ಕೋರ್ಟ್ ಗಂಭೀರವಾಗಿ ಪರಿಗಣಿಸಬೇಕು ಮತ್ತು ತಪ್ಪಿತಸ್ಥರ ವಿರುದ್ಧ…
ಮಡಿಕೇರಿ ಜು.22 : ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಕೊಡಗಿನ ಏಕೈಕ ಹಾರಂಗಿ ಜಲಾಶಯದ ನೀರಿನ ಸಂಗ್ರಹ ಮಟ್ಟದಲ್ಲಿ ಏರಿಕೆಯಾಗಿದೆ. ಮುಂಜಾಗೃತಾ ಕ್ರಮವಾಗಿ ಯಾವುದೇ ಕ್ಷಣದಲ್ಲಿ ಜಲಾಶಯದಿಂದ ನದಿಗೆ ನೀರನ್ನು ಹರಿ ಬಿಡುವ ಸಾಧ್ಯತೆ ಇದೆ. ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2859 ಅಡಿಗಳಾಗಿದ್ದು, ಈಗಿನ ಮಟ್ಟ 2854.12 ಅಡಿಗಳಾಗಿದೆ. ಜಲಾಶಯದ ಒಳಹರಿವಿನ ಪ್ರಮಾಣ ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದ್ದು, 16,970 ಕ್ಯುಸೆಕ್ ನೀರು ಜಲಾಶಯವನ್ನು ಬಂದು ಸೇರುತ್ತಿದೆ. ಮಳೆಯ ಪ್ರಮಾಣ ಮುಂದುವರಿದು, ಒಳಹರಿವು ಮತ್ತಷ್ಟು ಹೆಚ್ಚಿದಲ್ಲಿ ಶನಿವಾರ ರಾತ್ರಿ ಇಲ್ಲವೆ ಭಾನುವಾರ ನದಿಗೆ ನೀರನ್ನು ಹರಿ ಬಿಡುವ ಸಾಧ್ಯತೆ ಇದೆಯೆಂದು ಹಾರಂಗಿ ಕಾರ್ಯಪಾಲಕ ಅಭಿಯಂತರ ಪುಟ್ಟಸ್ವಾಮಿ ಅವರು ಪತ್ರಿಕೆಗೆ ತಿಳಿಸಿದ್ದಾರೆ. ಈ ಹಿನ್ನೆಲೆ ಹಾರಂಗಿ ಮತ್ತು ಕಾವೇರಿ ನದಿ ಪಾತ್ರದಲ್ಲಿರುವ ಮತ್ತು ನದಿಯ ಎರಡೂ ದಂಡೆಯಲ್ಲಿ ವಾಸಿಸುತ್ತಿರುವ ಜನರು ತಮ್ಮ ಆಸ್ತಿ ಪಾಸ್ತಿ ಮತ್ತು ಜನ ಜಾನುವಾರು ರಕ್ಷಣೆ ಬಗ್ಗೆ ಮುನ್ನೆಚ್ಚರಿಕೆ ವಹಿಸಿ ಸುರಕ್ಷಿತ ಸ್ಥಳಗಳಿಗೆ ತೆರಳಲು ಮನವಿ…
ಮಡಿಕೇರಿ ಜು.22 : ಕೊಡಗು ಜಿಲ್ಲೆಯಲ್ಲಿ ತಡವಾಗಿ ಆರಂಭಗೊಂಡ ಮುಂಗಾರು ಬಿರುಸುಗೊಂಡಿದೆ. ಸತತ ಗಾಳಿ, ಮಳೆಯಾಗುತ್ತಿರುವುದರಿಂದ ಮರ, ಬರೆ ಮತ್ತು ವಿದ್ಯುತ್ ಕಂಬಗಳು ಬಿದ್ದು ಹಾನಿಯುಂಟಾಗಿದೆ. ಕಾವೇರಿಯ ಉಗಮ ಸ್ಥಾನ ತಲಕಾವೇರಿ ಮತ್ತು ಭಾಗಮಂಡಲ ಕ್ಷೇತ್ರ ವ್ಯಾಪ್ತಿ ಸೇರಿದಂತೆ, ಕಾವೇರಿ ನದಿ ಹರಿವಿನ ಪ್ರದೇಶಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಗಣನೀಯ ಹೆಚ್ಚಳವಾಗಿದೆ. ಜಿಲ್ಲಾ ಕೇಂದ್ರ ಮಡಿಕೇರಿ ನಗರದಲ್ಲಿ ಎಡೆಬಿಡದೆ ಗಾಳಿ ಮಳೆಯಾಗುತ್ತಿದ್ದು, ಮುಸುಕಿದ ಮಂಜು ಮತ್ತು ಮೈಕೊರೆಯುವ ಚಳಿಯ ವಾತಾವರಣವಿದೆ. ::: ವಿವಿಧೆಡೆ ಹಾನಿ ::: ಗಾಳಿ ಮಳೆಗೆ ಸುಂಟಿಕೊಪ್ಪ ಮತ್ತು ಸಮೀಪದ ಮಟತ್ ಕಾಡುವಿನಲ್ಲಿ ಎರಡು ವಿದ್ಯುತ್ ಕಂಬಗಳು ಮುರಿದು ಬಿದ್ದಿದೆ. ಸೆಸ್ಕ್ ಸಿಬ್ಬಂದಿ ಸ್ಥಳಕ್ಕೆ ತೆರಳಿ ವಿದ್ಯುತ್ ವ್ಯವಸ್ಥೆಯನ್ನು ಸರಿಪಡಿಸಿದ್ದಾರೆ. ನಾಕೂರು ಶಿರಂಗಾಲ ಗ್ರಾ.ಪಂ ವ್ಯಾಪ್ತಿಯಲ್ಲಿ ಮರ ಬಿದ್ದು, ವಿದ್ಯುತ್ ತಂತಿಗಳಿಗೆ ಹಾನಿಯಾಗಿದೆ. ನಗರದ ಅರಣ್ಯ ಭವನದ ಬಳಿ ಮರ ಬಿದ್ದ ಪರಿಣಾಮ ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ. ಇದರಿಂದ ವಿವಿಧೆಡೆ ವಿದ್ಯುತ್ ಸಂಪರ್ಕದಲ್ಲಿ…
ಮಡಿಕೇರಿ ಜು.22 : ಆಟೋ ಅಪಘಾತಕ್ಕೊಳಗಾಗಿ ಕೋಮಾವಸ್ಥೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿಯ ವೈದ್ಯಕೀಯ ಚಿಕಿತ್ಸೆಗೆ ಕೊಡಗು ಜಿಲ್ಲಾ ಕುಲಾಲ ಕುಂಬಾರ ಯುವ ಘಟಕದಿಂದ ಆರ್ಥಿಕ ನೆರವು ನೀಡಲಾಯಿತು. ಕೆಲವು ದಿನಗಳ ಹಿಂದೆ ಆಟೋ ಅಪಘಾತಕ್ಕೊಳಗಾಗಿ ಇದೀಗ ಮೈಸೂರಿನ ಜೆಎಸ್ಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಂಟನೇ ತರಗತಿ ವಿದ್ಯಾರ್ಥಿ ಭುವಿನ್ ವೈದ್ಯಕೀಯ ಚಿಕಿತ್ಸೆಗೆ ಕೊಡಗು ಜಿಲ್ಲೆ ಅಲ್ಲದೆ ದಕ್ಷಿಣ ಕನ್ನಡ ,ಮೈಸೂರು ಜಿಲ್ಲೆ ಹಾಗೂ ಹೊರದೇಶಗಳಿಂದಲೂ ದಾನಿಗಳಿಂದ ಸಹಾಯಧನ ರೂಪದಲ್ಲಿ ಬಂದ ರೂ.51,701 ರೂಪಾಯಿಗಳನ್ನು ವಿದ್ಯಾರ್ಥಿಯ ತಂದೆ ಸುನಿಲ್ ಅವರಿಗೆ ಕೊಡಗು ಜಿಲ್ಲಾ ಕುಲಾಲ ಕುಂಬಾರ ಯುವ ಘಟಕ ಪದಾಧಿಕಾರಿಗಳು ಹಸ್ತಾಂತರಿಸಿದರು. ಈ ಸಂದರ್ಭ ಸದಸ್ಯರಾದ ಸುರೇಶ್, ಶಶಿ, ಚಂದ್ರಶೇಖರ್, ಪವನ್, ಅರುಣ್, ಜಯಪ್ರಕಾಶ್, ರಾಜೇಶ್,(ವಿಜು)ಪನ್ನೇ, ರಾಜುಮಣಿ, ರಾಮಚಂದ್ರ, ವಿನು ಹಾಜರಿದ್ದರು. ಸುಮಾರು ನಾಲ್ಕು ತಿಂಗಳ ಹಿಂದೆ ಪ್ರಾರಂಭಗೊಂಡ ಕೊಡಗು ಜಿಲ್ಲಾ ಕುಲಾಲ ಕುಂಬಾರ ಯುವ ಘಟಕವು ಹಲವು ಸಮಾಜಮುಖಿ ಕಾರ್ಯದಲ್ಲಿ ತೊಡಗಿದ್ದು, ಜಿಲ್ಲೆಯ ಕುಲಾಲ ಕುಂಬಾರ ಜನಾಂಗದ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿದೆ ಎಂದರು.
ಮಡಿಕೇರಿ ಜು.22 : ನಗರದ ಕ್ರೆಸೆಂಟ್ ಶಾಲೆಯಲ್ಲಿ ಸಂಚಾರಿ ಪೊಲೀಸ್ ಠಾಣೆ ವತಿಯಿಂದ ವಿದ್ಯಾರ್ಥಿಗಳಿಗೆ ಸಂಚಾರಿ ನಿಯಮಗಳು, ಮಾದಕ ವಸ್ತುಗಳ ವಿಚಾರ ಹಾಗೂ ಪೊಲೀಸ್ ಸಹಾಯವಾಣಿ 112 ಗಳ ಬಗ್ಗೆ ಅರಿವು ಮೂಡಿಸಲಾಯಿತು. ಈ ಸಂದರ್ಭ ಸಂಚಾರಿ ಪೊಲೀಸ್ ಠಾಣೆಯ ಎಎಸ್ಐ ನಂದ ವಿವರಿಸಿದರು. ಮಾದಕ ವಸ್ತುಗಳನ್ನು ಬಳಸದಂತೆ ಮತ್ತು ಸಂಚಾರಿ ನಿಯಮ ಉಲ್ಲಂಘಿಸದಂತೆ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಸಂಚಾರಿ ಠಾಣೆ ಪೊಲೀಸ್ ಸಿಬ್ಬಂದಿ ಪ್ರಭಾಕರ್ ಹಾಗೂ ಶಾಲಾ ಶಿಕ್ಷಕರು ಹಾಜರಿದ್ದರು.
ಮಡಿಕೇರಿ ಜು.22 : ಚಾಲಕನ ನಿಯಂತ್ರಣ ಕಳೆದುಕೊಂಡು ರಭಸವಾಗಿ ಚಲಿಸಿದ ಟ್ರ್ಯಾಕ್ಟರ್ 10ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿಯಾದ ಘಟನೆ ಮಡಿಕೇರಿ ನಗರದ ಮಹದೇವಪೇಟೆ ರಸ್ತೆಯಲ್ಲಿ ನಡೆದಿದೆ. ಅಪಘಾತಕ್ಕೆ ಕಾರಣಕರ್ತನಾದ ಟ್ರ್ಯಾಕ್ಟರ್ ಚಾಲಕ ಎಂ.ಹರ್ಷವರ್ಧನ್ (23) ಎಂಬಾತನನ್ನು ನಗರ ಸಂಚಾರಿ ಪೊಲೀಸರು ಟ್ರ್ಯಾಕ್ಟರ್ ಸಹಿತ ವಶಕ್ಕೆ ಪಡೆದಿದ್ದಾರೆ. ನೋಡು ನೋಡುತ್ತಿದ್ದಂತೆ ಅತಿವೇಗದಲ್ಲಿ ಬಂದ ಟ್ರ್ಯಾಕ್ಟರ್ ನಿಲ್ಲಿಸಿದ್ದ ಮತ್ತು ಚಲಿಸುತ್ತಿದ್ದ ವಾಹನಗಳಿಗೆ ಡಿಕ್ಕಿ ಹೊಡೆಯಿತು. ತಕ್ಷಣ ಎಚ್ಚೆತ್ತುಕೊಂಡ ಸಾರ್ವಜನಿಕರು ಹಾಗೂ ಇತರ ವಾಹನ ಚಾಲಕರು ಅಪಾಯದಿಂದ ತಪ್ಪಿಸಿಕೊಂಡು ಟ್ರ್ಯಾಕ್ಟರ್ ಚಾಲಕನನ್ನು ಪೊಲೀಸರಿಗೆ ಒಪ್ಪಿಸಿದರು. ಅದೃಷ್ಟವಶಾತ್ ಭಾರೀ ಅನಾಹುತವೊಂದು ತಪ್ಪಿದೆಯಾದರೂ ಹಲವು ವಾಹನಗಳಿಗೆ ಹಾನಿಯಾಗಿದೆ. ನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಡಿಕೇರಿ ಜು.22 : ಕರ್ನಾಟಕ ವಿಧಾನಸಭಾ ಕಲಾಪದಿಂದ ಹತ್ತು ಮಂದಿ ಬಿಜೆಪಿ ಶಾಸಕರನ್ನು ಅಮಾನತುಗೊಳಿಸಿರುವ ಕ್ರಮಕ್ಕೆ ಆಕ್ಷೇಪ ವ್ಯಕ್ತಪಡಿಸಿ ಕೊಡಗು ಜಿಲ್ಲಾ ಬಿಜೆಪಿ ಪ್ರತಿಭಟನೆ ನಡೆಸಿತು. ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ರಾಜ್ಯ ಸರಕಾರದ ವಿರುದ್ಧ ಘೋಷಣೆ ಕೂಗಿ ಅಸಮಾಧಾನ ವ್ಯಕ್ತಪಡಿಸಿದ ಪ್ರತಿಭಟನಾಕಾರರು ಸ್ಪೀಕರ್ ಕ್ರಮವನ್ನು ಖಂಡಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ ಮಾತನಾಡಿ, ಸರ್ಕಾರದ ನಡೆಯನ್ನು ಪ್ರಶ್ನಿಸಿದಕ್ಕೆ ಬಿಜೆಪಿ ಶಾಸಕರನ್ನು ಕಲಾಪದಿಂದ ಅಮಾನತು ಮಾಡಿರುವುದು ಸರಿಯಲ್ಲ. ಇದು ಸ್ಪೀಕರ್ ಸ್ಥಾನಕ್ಕೆ ಶೋಭೆ ತರುವುದಿಲ್ಲ ಎಂದರು. ಬೆಲೆ ಏರಿಕೆ ಮೂಲಕ ಜನರ ಮೇಲೆ ಸರಕಾರ ಬರೆ ಎಳೆದಿದೆ. 200 ಯೂನಿಟ್ ಉಚಿತ ವಿದ್ಯುತ್ ನೀಡುವುದಾಗಿ ಹೇಳಿ ಇದೀಗ ವಿದ್ಯುತ್ ದರ ಏರಿಕೆ ಮಾಡಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಬೆಂಗಳೂರಿನಲ್ಲಿ ಸೆರೆಸಿಕ್ಕ ಶಂಕಿತ ಉಗ್ರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಪಿ.ಸುನೀಲ್ ಸುಬ್ರಮಣಿ, ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಪಂಡ ರವಿ ಕಾಳಪ್ಪ, ನಗರಾಧ್ಯಕ್ಷ ಮನುಮಂಜುನಾಥ್,…






