ಮಡಿಕೇರಿ ಜೂ.22 : ಭಾರೀ ಗಾಳಿ ಮಳೆಗೆ ಮೂರ್ನಾಡುವಿನ ಎಂ.ಬಾಡಗ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೇಲೆ ಮರ ಉರುಳಿಬಿದ್ದಿದ್ದು, ಶಾಲೆಯ ಒಂದು ಭಾಗಕ್ಕೆ ಹಾನಿಯಾಗಿದೆ. ಮಡಿಕೇರಿ-ವಿರಾಜಪೇಟೆ ರಸ್ತೆಗೆ ಅಡ್ಡಲಾಗಿ ಬಿದ್ದಿದ್ದು, ಸ್ಥಳೀಯರು ಮರ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಲೇಖಕ: admin
ಮಡಿಕೇರಿ ಜು.21 : ಕೊಡಗು ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಕಡಿಮೆ ಇದ್ದರೂ ಭಾರೀ ಗಾಳಿ ಬೀಸುತ್ತಿದೆ. ಇದರ ಪರಿಣಾಮ ಮರಗಳು ಬಿದ್ದು ಮನೆ ಮತ್ತು ವಾಹನಗಳಿಗೆ ಹಾನಿಯಾಗಿದೆ. ಮಡಿಕೇರಿ ನಗರದ ಜಿಲ್ಲಾಧಿಕಾರಿ ನಿವಾಸದ ಹಿಂಭಾಗ ಬೃಹತ್ ಮರವೊಂದು ರಸ್ತೆಗೆ ಉರುಳಿ ಬಿದ್ದಿದೆ. ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ 3 ದ್ವಿಚಕ್ರ ವಾಹನಗಳು ಮರದಡಿಯಲ್ಲಿ ಸಿಲುಕಿಕೊಂಡವು. ಆದರೆ ಯಾವುದೇ ವಾಹನಗಳಿಗೆ ಹಾನಿಯಾಗಿಲ್ಲ. ಅರಣ್ಯ ಇಲಾಖೆ ಮರವನ್ನು ತೆರವುಗೊಳಿಸಿ ವಾಹನಗಳ ಸಂಚಾರವನ್ನು ಸುಗಮಗೊಳಿಸಿತು. ಸುಂಟಿಕೊಪ್ಪ ಸಮೀಪದ ಕೆದಕಲ್ ಗ್ರಾಮ ಪಂಚಾಯತಿಗೆ ಸೇರಿದ 7ನೇ ಮೈಲು ವಿಕ್ರಂ ಬಡಾವಣೆಯ ನಿವಾಸಿ ವಸಂತಿ ಎಂಬುವರ ಮನೆಯ ಮೇಲೆ ಭಾರಿ ಗಾತ್ರದ ಮರ ಮುರಿದು ಬಿದ್ದು ಹಾನಿ ಸಂಭವಿಸಿದೆ. ಶುಕ್ರವಾರ ಮುಂಜಾನೆ 3.30 ಗಂಟೆಯ ವೇಳೆಗೆ ಭಾರಿ ಗಾಳಿಗೆ ಬೀಟೆ ಮರವೊಂದು ಮುರಿದು ಬಿದ್ದಿದೆ. ಮರ ಬಿದ್ದ ಪರಿಣಾಮ ಅಡುಗೆ ಕೋಣೆ ಮತ್ತು ಶೌಚಾಲಯಕ್ಕೆ ಹಾನಿಯಾಗಿದೆ. ಮನೆಯ ಪಕ್ಕ ನಿಲ್ಲಿಸಿದ್ದ ಕಾರು ಅಲ್ಪ ಪ್ರಮಾಣದಲ್ಲಿ ಜಖಂಗೊಂಡಿದೆ. ಸ್ಥಳಕ್ಕೆ ನಾಡ ಕಚೇರಿ…
ಮಡಿಕೇರಿ ಜು.21 : ಮನೆಯೊಂದರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ ಘಟನೆ ಪೊನ್ನಂಪೇಟೆ ತಾಲ್ಲೂಕಿನ ಬಲ್ಯಮಂಡೂರು ಗ್ರಾ.ಪಂ ವ್ಯಾಪ್ತಿಯ ಕೊಡ್ಚೆ ಗ್ರಾಮದಲ್ಲಿ ನಡೆದಿದೆ. ಇಲ್ಲಿನ ನಿವಾಸಿ ಮಾಚಿಮಾಡ ಡಿ.ಮಾಚಯ್ಯ ಎಂಬುವವರ ಮನೆ ಮೇಲೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ ನಡೆದಿದೆ. ಶುಕ್ರವಾರ ನಸುಕಿನ 3.15 ಗಂಟೆಗೆ ಗುಂಡಿನ ದಾಳಿ ನಡೆಸಲಾಗಿದ್ದು, ಮನೆಯ ಬಲಭಾಗದ ಕಿಟಿಕಿಗೆ 2 ಗುಂಡುಗಳು ತಗುಲಿವೆ. ಕಿಟಕಿಯ ಗಾಜುಗಳು ಒಡೆದಿದ್ದು, ಮನೆ ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕುಟ್ಟ ವೃತ್ತ ನಿರೀಕ್ಷಕ ಮತ್ತು ಶ್ರೀಮಂಗಲ ಠಾಣಾಧಿಕಾರಿ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶ್ರೀಮಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
ಮಡಿಕೇರಿ ಜು.21 : ನಗರಸಭೆ ವ್ಯಾಪ್ತಿಯ ಹಿಲ್ ರಸ್ತೆಯ ಹಿರಿಯ ಪ್ರಾಥಮಿಕ ಶಾಲೆಗೆ ಖಾಯಂ ಶಿಕ್ಷಕರನ್ನು ನೇಮಕ ಮಾಡಬೇಕೆಂದು ಮಡಿಕೇರಿ ನಗರ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಒತ್ತಾಯಿಸಿದೆ. ನಗರಸಭೆ ಪೌರಾಯುಕ್ತ ವಿಜಯ ಅವರಿಗೆ ಮನವಿ ಸಲ್ಲಿಸಿದ ಘಟಕದ ಪದಾಧಿಕಾರಿಗಳು, ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದರು. ಈ ಸಂದರ್ಭ ಮಾತನಾಡಿದ ಅಲ್ಪಸಂಖ್ಯಾತರ ಘಟಕದ ನಗರಾಧ್ಯಕ್ಷ ಕೆ.ಜಿ.ಪೀಟರ್, ನಗರದ ಹಿಲ್ ರಸ್ತೆಯ ಹಿರಿಯ ಪ್ರಾಥಮಿಕ ಶಾಲೆಯು 1918ರಲ್ಲಿ ಸ್ಥಾಪನೆಯಾಗಿ 105 ವರ್ಷ ಕಳೆದಿದೆ. ಇಲ್ಲಿ ವ್ಯಾಸಂಗ ಮಾಡಿದ ಸಾವಿರಾರು ವಿದ್ಯಾರ್ಥಿಗಳು ಉನ್ನತ ಹುದ್ದೆಯನ್ನು ಅಲಂಕರಿಸಿದ್ದಾರೆ. ಆದರೆ ಪ್ರಸ್ತುತ ಶಾಲೆಗೆ ಒಬ್ಬರೇ ಖಾಯಂ ಶಿಕ್ಷಕರಿದ್ದು, ಇವರು ಇದೇ ಜು.31ಕ್ಕೆ ನಿವೃತ್ತಿಯಾಗಲಿದ್ದಾರೆ. ಮುಂದಿನ ದಿನಗಳಲ್ಲಿ ಈ ಶಾಲೆಯಲ್ಲಿ ಖಾಯಂ ಶಿಕ್ಷಕರ ಕೊರತೆ ಎದುರಾಗಲಿದೆ. ಬಡ ವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಓದುತ್ತಿದ್ದು, ಖಾಯಂ ಶಿಕ್ಷಕರ ಅವಶ್ಯಕತೆ ಇದೆ. ಆದುದ್ದರಿಂದ ಸರ್ಕಾರದ ಮೂಲಕ ಖಾಯಂ ಶಿಕ್ಷಕರನ್ನು ನೇಮಕ ಮಾಡಿ ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗದಂತೆ…
ಮಡಿಕೇರಿ ಜು.21 : ಕೊಡಗು ಜಿಲ್ಲೆಯಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಗಳಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜು.23 ರಂದು ಮಡಿಕೇರಿ, ವಿರಾಜಪೇಟೆ ಮತ್ತು ಸೋಮವಾರಪೇಟೆ ತಾಲೂಕಿನ ಘಟ್ಟ ಪ್ರದೇಶಗಳಲ್ಲಿ 24 ಗಂಟೆಗಳ ಕಾಲ ಸಾಕಷ್ಟು ವ್ಯಾಪಕವಾಗಿ ಭಾರೀ ಮಳೆಯಾಗುವ ಸಾಧ್ಯತೆಯಿರುವುದಾಗಿ ತಿಳಿಸಲಾಗಿದೆ.
ಮಡಿಕೇರಿ ಜು.21 : ಶಿಕ್ಷಕರು ಹಾಗೂ ಮೂಲಭೂತ ಸೌಲಭ್ಯಗಳ ಕೊರತೆಯ ನಡುವೆ ಸರ್ಕಾರಿ ಕನ್ನಡ ಶಾಲೆಗಳು ಮುಚ್ಚುವ ಹಂತಕ್ಕೆ ಬಂದು ತಲುಪಿವೆ. ಬಡ ವಿದ್ಯಾರ್ಥಿಗಳಿಗೆ ಸರ್ಕಾರಿ ಶಾಲೆಗಳೇ ವರದಾನವಾಗಿದ್ದು, ಕನ್ನಡ ಭಾಷೆಯ ಉಳಿವಿಗೂ ಸಹಕಾರಿಯಾಗಿದೆ. ಆದರೆ ಕೊಡಗು ಮತ್ತು ಕೇರಳದ ಗಡಿ ಭಾಗದಲ್ಲಿರುವ ಕರಿಕೆ ಗ್ರಾಮದ ಸರ್ಕಾರಿ ಕನ್ನಡ ಶಾಲೆಗೆ ಶಿಕ್ಷಕರ ಕೊರತೆ ಎದುರಾಗಿರುವುದರಿಂದ ಇಲ್ಲಿನ ಬಡ ಮಕ್ಕಳು ಪಕ್ಕದ ಮಲೆಯಾಳ ಶಾಲೆಗೆ ಸೇರುವ ಅನಿವಾರ್ಯತೆ ಎದುರಾಗಿದೆ. ಕರಿಕೆ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಸುಮಾರು 70 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಇವರಲ್ಲಿ ಶೇ.75 ರಷ್ಟು ಮಂದಿ ಪರಿಶಿಷ್ಟ ಜಾತಿ, ಪಂಗಡಕ್ಕೆ ಸೇರಿದವರಾಗಿದ್ದಾರೆ. ಶಾಲೆಯಲ್ಲಿ ಮುಖ್ಯೋಪಾದ್ಯಾಯರು, ಹಿಂದಿ, ಕನ್ನಡ, ಗಣಿತ, ದೈಹಿಕ ಶಿಕ್ಷಣ ಹುದ್ದೆಗಳು ಖಾಲಿ ಇವೆ. ಇದರಿಂದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿರಾಗುತ್ತಿದ್ದಾರೆ, ಅಲ್ಲದೆ ಅನಿವಾರ್ಯವಾಗಿ ಪಕ್ಕದಲ್ಲಿರುವ ಕೇರಳ ರಾಜ್ಯದ ಮಲೆಯಾಳ ಶಾಲೆಯಲ್ಲಿ ದಾಖಲಾಗುವ ಆತಂಕವೂ ಎದುರಾಗಿದೆ. ಈ ಬಗ್ಗೆ ಮಡಿಕೇರಿಯಲ್ಲಿ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಮನವಿ ಸಲ್ಲಿಸಿ ಗಮನ ಸೆಳೆದಿರುವ ಕರಿಕೆ…
ಮಡಿಕೇರಿ ಜು.21 : ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (NATIONAL DISASTER RESPONSE FORCE) ವತಿಯಿಂದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ವನಮಹೋತ್ಸವ ಆಚರಿಸಲಾಯಿತು. ವಿವಿಧ ಬಗೆಯ ಹಣ್ಣುಗಳ ಗಿಡ ಮತ್ತು ಔಷದಿ ಸಸ್ಯಗಳನ್ನು ನೆಡುವ ಮೂಲಕ ವನಮಹೋತ್ಸವಕ್ಕೆ ಚಾಲನೆ ನೀಡಲಾಯಿತು. ಪ್ರಾಕೃತಿಕ ವಿಕೋಪ ತಡೆಯಲು ಮರ-ಗಿಡಗಳನ್ನು ಬೆಳಸುವ ಉದ್ದೇಶದಿಂದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯು ವನಮಹೋತ್ಸವ ಯೋಜನೆಯನ್ನು ಅಭಿಯಾನದ ರೀತಿಯಲ್ಲಿ ಕೈಗೊಂಡಿದೆ. ವನಮಹೋತ್ಸವ ಅಭಿಯಾನದಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ಇನ್ಸ್ಪೆಕ್ಟರ್ ಶಾಂತಿಲಾಲ್, ಹೆಡ್ ಕಾನ್ಟೇಬಲ್ ಅರ್ಜನ್, ಕಾಲೇಜಿನ ಪ್ರಾಂಶುಪಾಲರಾದ ಮೇಜರ್ ಪ್ರೊ. ರಾಘವ ಬಿ, ಗಣವಿಜ್ಞಾನ ವಿಭಾಗದ ಹಿರಿಯ ಪ್ರಾಧ್ಯಾಪಕ ರವಿಶಂಕರ್, ಹಿಂದಿ ವಿಭಾಗದ ಡಾ.ಶ್ರೀಧರ್ ಹೆಗಡೆ, ಇಂಗ್ಲಿಷ್ ವಿಭಾಗದ ಪ್ರಾಧ್ಯಾಪಕ ಪೂಣಚ್ಚ ಇತರರು ಇದ್ದರು.
ಮಡಿಕೇರಿ ಜು.21 : ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಹಾಗೂ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸರ್ಕಾರ ಮತ್ತು ಸರ್ಕಾರೇತರ ಸಂಸ್ಥೆಗಳು ಕಾರ್ಯಪ್ರವೃತ್ತವಾಗಬೇಕು. ಆ ಮೂಲಕ ಫಲಾನುಭವಿಗಳಿಗೆ ವಿಮಾ ಯೋಜನೆಯನ್ನು ತಲುಪಿಸುವಂತಾಗಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಮತ್ತು ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆ ಅನುಷ್ಠಾನ ಸಂಬಂಧಿಸಿದಂತೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೃಷಿ ಹಾಗೂ ತೋಟಗಾರಿಕೆ ಇಲಾಖೆ ವತಿಯಿಂದ ಇರುವ ಸರ್ಕಾರದ ಯೋಜನೆಗಳನ್ನು ರೈತರಿಗೆ ತಲುಪಿಸಬೇಕು. ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಮತ್ತು ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ಸಂಬಂಧಿಸಿದಂತೆ ಕೃಷಿಕರಿಗೆ ಹೆಚ್ಚಿನ ಮಾಹಿತಿ ನೀಡುವಂತಾಗಬೇಕು. ಅರ್ಹ ಕೃಷಿಕರೆಲ್ಲರಿಗೂ ಸರ್ಕಾರದ ಸೌಲಭ್ಯ ತಲುಪುವಂತಾಗಬೇಕು ಎಂದು ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು. ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಬಾನಾ ಎಂ.ಶೇಕ್ ಅವರು…
ಮಡಿಕೇರಿ ಜು.21 : ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ನಿರ್ದೇಶನಾಲಯದಲ್ಲಿ ‘ಕಲ್ಯಾಣ ಸಂಘಟಕರು ‘ಸಿ’ ವೃಂದದ ಒಟ್ಟು 14 ಹುದ್ದೆಗಳಿಗೆ ಅರ್ಹ ಮಾಜಿ ಸೈನಿಕರಿಂದ (ಜೆಸಿಒ ಹಾಗೂ ತತ್ಸಮಾನ ರ್ಯಾಂಕ್) ಅರ್ಜಿ ಆಹ್ವಾನಿಸಲಾಗಿದೆ. ಸರ್ಕಾರಿ ಮುದ್ರಣಾಲಯಗಳಲ್ಲಿ ಲಭ್ಯವಿರುವ ಸರ್ಕಾರದಿಂದ ನಿಗಧಿಪಡಿಸಿದ ಅರ್ಜಿ ನಮೂನೆ 1 ನ್ನು ಭರ್ತಿ ಮಾಡಿ, ದ್ವಿಪ್ರತಿಯಲ್ಲಿ ಆ.5 ರೊಳಗೆ ಅಧ್ಯಕ್ಷರು, ಇಲಾಖಾ ನೇಮಕಾತಿ ಸಮಿತಿ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ನಂ.58, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಭವನ, ಬೆಂಗಳೂರು-560025 ಇವರಿಗೆ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರಾದ ಬಾಲಸುಬ್ರಮಣ್ಯಂ ತಿಳಿಸಿದ್ದಾರೆ.
ಮಡಿಕೇರಿ ಜು.21 : ಮಡಿಕೇರಿ ತಾಲೂಕಿನಲ್ಲಿರುವ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ನೋಂದಣಿ ಮಾಡುವುದು ಕಡ್ಡಾಯವಾಗಿದೆ ಎಂದು ತಾಲ್ಲೂಕು ಕಾರ್ಮಿಕ ಅಧಿಕಾರಿ ಎಂ.ಎಂ.ಯತ್ನಟ್ಟಿ ಅವರು ತಿಳಿಸಿದ್ದಾರೆ. ಈಗಾಗಲೇ ತಮ್ಮ ಅಂಗಡಿ ಅಥವಾ ವಾಣಿಜ್ಯ ಸಂಸ್ಥೆಯನ್ನು ಹಿರಿಯ ಕಾರ್ಮಿಕ ನಿರೀಕ್ಷಕರ ಕಚೇರಿ ಮಡಿಕೇರಿಯಲ್ಲಿ ನೋಂದಣಿ ಮಾಡಿಸಿಕೊಂಡ ಸಂಸ್ಥೆಗಳನ್ನು ಹೊರತುಪಡಿಸಿ ನೋಂದಣಿಯಾಗದಿರುವ ಸಂಸ್ಥೆಗಳು 15 ದಿನಗಳೊಳಗೆ ಕರ್ನಾಟಕ ಸರ್ಕಾರದ ಇ-ಕಾರ್ಮಿಕ ತಂತ್ರಾಂಶದಲ್ಲಿ http://www.ekarmika.Karnataka.gov.in/ekarmika/static/home.aspx ನಿಗಧಿತ ಆನ್ಲೈನ್ ಮೂಲಕ ಶುಲ್ಕ ಮತ್ತು ಅವಶ್ಯಕ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಿ ಸಂಸ್ಥೆಗಳ ನೋಂದಣಿ ಪತ್ರ ಪಡೆಯುವಂತೆ ಮಾಡಿಸಿಕೊಳ್ಳಬೇಕೆಂದು ಮಡಿಕೇರಿ ತಾಲೂಕಿನ ಉದ್ದಿಮೆದಾರರಿಗೆ ತಿಳುವಳಿಕೆ ನೀಡಲಾಗಿದೆ ಎಂದು ಹಿರಿಯ ಕಾರ್ಮಿಕ ನಿರೀಕ್ಷಕರಾದ ಎಂ.ಎಂ.ಯತ್ನಟ್ಟಿ ತಿಳಿಸಿದ್ದಾರೆ.






