ಮಡಿಕೇರಿ ಜು.21 : ನೌಕರರ ಹಿತಕಾಯುತ್ತಿರುವ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ, ಜಿಲ್ಲಾ, ತಾಲೂಕು ಘಟಕಗಳ ವಿರುದ್ಧ ಆಧಾರ ರಹಿತವಾಗಿ ಸಾಮಾಜಿಕ ಜಾಲತಾಣದಲ್ಲಿ ತೇಜೋವಧೆ ಮಾಡುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕೊಡಗು ಜಿಲ್ಲಾ ಘಟಕ ಒತ್ತಾಯಿಸಿದೆ. ಸಂಘದ ಜಿಲ್ಲಾಧ್ಯಕ್ಷ ಪೊನ್ನಚನ ಶ್ರೀನಿವಾಸ್ ನೇತೃತ್ವದಲ್ಲಿ ಜಿಲ್ಲಾಧಿಕಾರಿ ವೆಂಕಟ್ರಾಜಾ ಅವರಿಗೆ ಮನವಿ ಸಲ್ಲಿಸಿದ ಸಂಘಟನೆಯ ಪ್ರಮುಖರು, ಸಂಘಟನೆಯ ವಿರುದ್ಧ ಸುಳ್ಳು ಆರೋಪ ಮಾಡಿರುವ ಅಧಿಕಾರಿಗಳ ವಿರುದ್ಧ ತಕ್ಷಣವೇ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು 1920ರಲ್ಲಿ ಸ್ಥಾಪನೆಯಾಗಿದ್ದು, ಸರ್ಕಾರಿ ಮಾನ್ಯತೆಯನ್ನು ಹೊಂದಿ ಸುಮಾರು 5.25 ಲಕ್ಷ ಸರ್ಕಾರಿ ನೌಕರರನ್ನು ಪ್ರತಿನಿಧಿಸುವ ರಾಷ್ಟ್ರದಲ್ಲಿಯೇ ಮಾದರಿ ಸಂಘಟನೆಯಾಗಿದೆ. ಸಂಘವು ರಾಜ್ಯಾದ್ಯಂತ ಎಲ್ಲಾ ಜಿಲ್ಲೆ, ತಾಲೂಕು ಕೇಂದ್ರಗಳಲ್ಲಿ ಶಾಖೆಗಳನ್ನು ಹೊಂದಿದ್ದು, ರಾಜ್ಯಾದ್ಯಂತ 2000ಕ್ಕೂ ಹೆಚ್ಚಿನ ವಿವಿಧ ವೃಂದ ಸಂಘಗಳ ಸಂಯೋಜನೆಯನ್ನು ಹೊಂದಿದೆ. ಹಿಂದಿನ ಹಲವಾರು ಅಧ್ಯಕ್ಷರುಗಳ ಶ್ರಮದಿಂದ ಅತ್ಯಂತ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತಿದೆ…
ಲೇಖಕ: admin
ಮಡಿಕೇರಿ ಜು.21 : ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದ ವತಿಯಿಂದ ಜಿಲ್ಲೆಯ ದೇವರಕಾಡು ಪ್ರದೇಶದಲ್ಲಿ ಸ್ಥಳೀಯ ಸಸಿಗಳನ್ನು ನೆಡುವ ಅಭಿಯಾನವನ್ನು ಆಯೋಜಿಸುತ್ತಿದೆ. ಕೊಡಗಿನ ದೇವರಕಾಡುಗಳಲ್ಲಿ ಅಪರೂಪದ ಹಾಗೂ ಅಳಿವಿನಂಚಿನಲ್ಲಿರುವ ಕರಿಮರ, ಕರಡಿ ಮರ, ಬಿಳಿ ದೂಪ, ಕರಿ ದೂಪ, ಕಚಂಪುಳ್ಳಿ, ಅಂಟುವಾಳ, ನೇರಳೆ, ಹೊನ್ನೆ, ಬಳಂಜಿ, ಮುಂತಾದ ಸಸಿಗಳನ್ನು ನೆಡಲಾಗುವುದು. ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಸಕ್ತಿಯುಳ್ಳ ದೇವರಕಾಡು/ದೇವಸ್ಥಾನ ಸಮಿತಿಗಳು ತಮ್ಮ ದೇವರಕಾಡುಗಳಲ್ಲಿ ಯೋಜನೆಯನ್ನು ಕಾರ್ಯಗತಗೊಳಿಸಲು ನಾಣಯ್ಯ ಕೋಣೇರಿರ, (8105919596) ಸಹಾಯಕ ಪ್ರಾಧ್ಯಾಪಕರು, ಅರಣ್ಯ ಮಹಾವಿದ್ಯಾಲಯ, (Forestry College) ಪೊನ್ನಂಪೇಟೆ ಅವರನ್ನು ಸಂಪರ್ಕಿಸಬಹುದು. ಈ ಯೋಜನೆಯನ್ನು ಕುಶಾಲನಗರದ ಸಕ್ಡೆನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ (SUCDEN India Pvt. LTD)ಪ್ರಾಯೋಜಿಸುತ್ತಿದೆ.
ಹಾಗಲಕಾಯಿ ಬರಿ ಆಹಾರವಾಗಿ ಮಾತ್ರವಲ್ಲ ಕೂದಲ ಕಾಂತಿ ಹಾಗೂ ಆರೋಗ್ಯಕರ ಕೇಶಕ್ಕಾಗಿ ಕೂಡ ಬಳಸಬಹುದು. ಇದಕ್ಕೆ ಹಾಗಲಕಾಯಿ ಜ್ಯೂಸ್ ಉತ್ತಮ ಪರಿಣಾಮ ಬೀರಬಲ್ಲದು. ಹಾಗಲಕಾಯಿಯನ್ನು ಜಜ್ಜಿ ಅದರಿಂದ ದಪ್ಪ ರಸವನ್ನು ತೆಗೆದು ಬಾಲ ನೆರೆ ಉಂಟಾಗಿದ್ದರೆ ಅದಕ್ಕೆ ಈ ರಸವನ್ನು ಲೇಪಿಸಿ. ಒಂದೆರಡು ತಾಸು ಕಳೆದ ಬಳಿಕ ಸ್ನಾನ ಮಾಡಿ. ಪ್ರತಿ ಹತ್ತು ದಿನಕ್ಕೊಮ್ಮೆ ಈ ರೀತಿ ಮಾಡುತ್ತಿದ್ದರೆ ಬಾಲ ನೆರೆಯ ಸಮಸ್ಯೆ ಕಡಿಮೆಯಾಗುತ್ತದೆ. ಸೀಳು ಕೂದಲಿನ ಸಮಸ್ಯೆಯಿದ್ದವರು ಹಾಗಲಕಾಯಿಯನ್ನು ಕತ್ತರಿಸಿ ನೆತ್ತಿಯ ಮೇಲೆ ಚೆನ್ನಾಗಿ ಉಜ್ಜಬೇಕು. ಜತೆಗೆ ಇದರ ರಸವನ್ನು ಕೂದಲಿಗೆ ಹಚ್ಚಬೇಕು. ಗಮನಾರ್ಹವಾದ ಫಲಿತಾಂಶಕ್ಕಾಗಿ ಈ ರೀತಿ ವಾರಕ್ಕೆರಡು ಬಾರಿ ಮಾಡಿದರೆ ಸೀಳು ಕೂದಲಿನಿಂದ ಮುಕ್ತಿ ಪಡೆಯಬಹುದು. ಸಾಮಾನ್ಯವಾಗಿ ಕೂದಲು ಹೊಳಪು ಕಳೆದುಕೊಳ್ಳುವುದು ಸಹಜ. ಇದಕ್ಕೂ ಹಾಗಲಕಾಯಿಂದ ಪರಿಹಾರ ಇದೆ. ಹಾಗಲಕಾಯಿಯನ್ನು ಚಿಕ್ಕದಾಗಿ ಕತ್ತರಿಸಿ ಕೊಬ್ಬರಿ ಎಣ್ಣೆಯಲ್ಲಿ ಹಾಕಿ ಕಂದು ಬಣ್ಣ ಬರುವವರೆಗೆ ಕರೆಯಿರಿ. ಅದು ತಣ್ಣಗಾದ ಬಳಿಕ ಹಾಗಲಕಾಯಿಯನ್ನು ತೆಗದು ಚೆನ್ನಾಗಿ ಹಿಂಡಿ. ಆ ಎಣ್ಣೆಯನ್ನು ಕೂದಲಿಗೆ…
ಮಡಿಕೇರಿ ಜು.20 : ಭಾರೀ ಗಾಳಿ ಮಳೆಯಿಂದಾಗಿ ಕೆದಕಲ್ ಗ್ರಾಮದ ವಿಕ್ರಂ ಬಡಾವಣೆಯ ವಸಂತಿ ಎಂಬವರ ಮನೆಮೇಲೆ ಬೃಹತ್ ಗಾತ್ರದ ಮರ ಬಿದ್ದು, ಸಂಪೂರ್ಣ ಹಾನಿಯಾಗಿದೆ.
ಮಡಿಕೇರಿ ಜು.21 : ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 44.37 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 9.48 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1030.81 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1836.40 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 22.55 ಮಿ.ಮೀ. ಕಳೆದ ವರ್ಷ ಇದೇ ದಿನ 23.38 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1540.76 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2566.81 ಮಿ.ಮೀ. ಮಳೆಯಾಗಿತ್ತು. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 71.17 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 3.50 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 771.63 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1454.56 ಮಿ.ಮೀ. ಮಳೆಯಾಗಿತ್ತು. ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 39.40 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 1.57 ಮಿ.ಮೀ.…
ಮಡಿಕೇರಿ ಜು.21 : ನಾಪೋಕ್ಲು ಸಮೀಪದ ಮರಂದೋಡ ಗ್ರಾಮದ ಭಾಗದಲ್ಲಿ ಗುರುವಾರ ಸುರಿದ ಭಾರೀ ಗಾಳಿ ಮಳೆಗೆ ಬೃಹತ್ ಮರ ಮುರಿದುಬಿದ್ದು 3-4 ವಿದ್ಯುತ್ ಕಂಬಗಳು ತುಂಡಾಗಿ ಬಿದ್ದಿವೆ. ಮರ ಮುರಿದು ಬಿದ್ದ ಪರಿಣಾಮ ಕೆರೆತಟ್ಟು ಸಂಪರ್ಕ ರಸ್ತೆ ಸಂಚಾರಕ್ಕೆ ಅಡ್ಡಿಯಾಗಿತ್ತು. ಗ್ರಾಮಸ್ಥರಾದ ಬಾಲಕೃಷ್ಣ ಹಾಗೂ ಕೆ.ಕೆ.ಗಿರೀಶ್, ಸಿ.ಹರೀಶ್ ಅವರ ನೇತೃತ್ವದಲ್ಲಿ ಗ್ರಾಮಸ್ಥರು ಒಗ್ಗೂಡಿ ಮರವನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಮರ ಬಿದ್ದ ಪರಿಣಾಮ ವಿದ್ಯುತ್ ಸಂಪರ್ಕ ಕಡಿತ ಉಂಟಾಗಿ ಗ್ರಾಮಸ್ಥರು ಕತ್ತಲೆಯಲ್ಲಿ ಕಳೆಯುವಂತಾಗಿದೆ. ಗ್ರಾ.ಪಂ ಸದಸ್ಯ ಹರೀಶ್ ಮೊಣ್ಣಪ್ಪ ಸ್ಥಳಕ್ಕೆ ಭೇಟಿ ನೀಡಿ ಸೆಸ್ಕ್ ಇಲಾಖೆಯ ಎಂಜಿನಿಯರ್ ಅವರನ್ನು ಸಂಪರ್ಕಿಸಿ ಶೀಘ್ರ ವಿದ್ಯುತ್ ಸಂಪರ್ಕ ಕಲ್ಪಿಸಿ ಕೊಡುವುದಾಗಿ ಭರವಸೆ ನೀಡಿದರು. ವರದಿ : ದುಗ್ಗಳ ಸದಾನಂದ
ನಾಪೋಕ್ಲು ಜು.21 : ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಹಿಂದಕ್ಕೆ ಪಲ್ಟಿಯಾಗಿ ಬಿದ್ದಿರುವ ಘಟನೆ ನಾಪೋಕ್ಲು-ಮಡಿಕೇರಿ ಮುಖ್ಯರಸ್ತೆಯ ಅಪ್ಪಂಗಳದಲ್ಲಿ ನಡೆದಿದೆ. ನಾಪೋಕ್ಲುವಿನಿಂದ ಕುಶಾಲನಗರಕ್ಕೆ ಕಾಫಿ ಸಾಗಿಸುತ್ತಿದ್ದ ಲಾರಿ ಅಪ್ಪಂಗಳದ ಏಲಕ್ಕಿ ಸಂಶೋಧನಾ ಕೇಂದ್ರದ ಬಳಿ ಹಿಂದಕ್ಕೆ ಚಲಿಸಿ ರಸ್ತೆಯಂಚಿಗೆ ಬಿದ್ದಿದ್ದು, ಚಾಲಕ ಹಾಗೂ ಸಹಾಯಕ ಅಪಾಯದಿಂದ ಪಾರಾಗಿದ್ದಾರೆ. ವರದಿ : ದುಗ್ಗಳ ಸದಾನಂದ
ಮಡಿಕೇರಿ ಜು.20 : ನಿವೃತ್ತ ನ್ಯಾಯಮೂರ್ತಿ ಪಿ.ಪಿ.ಬೋಪಣ್ಣ ಅವರು ಬೆಂಗಳೂರಿನಲ್ಲಿ ಇಂದು ನಿಧನ ಹೊಂದಿದರು. ಮೃತರ ಅಂತ್ಯಕ್ರಿಯೆ ಜು.21 ರಂದು ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.
ಸುಂಟಿಕೊಪ್ಪ,ಜು.20 : ಇಂದಿನ ದಿನಗಳಲ್ಲಿ ನಾವು ಎಷ್ಟೇ ಸಿರಿವಂತಿಕೆಯನ್ನು ಹೊಂದಿದ್ದರು ಶಿಕ್ಷಣ ಇಲ್ಲದಿದ್ದರೆ ಆತ ಬಡವನೆಂದು ಸಮಾಜದಲ್ಲಿ ಪರಿಗಣಿಸುತ್ತದೆ ಎಂದು ಕಾನೂನು ಸಲಹೆಗಾರ ಎ.ಲೋಕೇಶ್ ಕುಮಾರ್ ಹೇಳಿದರು. ಸುಂಟಿಕೊಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ವಿದ್ಯಾರ್ಥಿ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ಉದ್ಘಾಟನೆ ಮತ್ತು ಪ್ರಥಮ ಪಿಯುಸಿ ವಿದ್ಯಾರ್ಥಿಗಳನ್ನು ಸ್ವಾಗತಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಜೀವನದಲ್ಲಿ ಹೊಂದಿರಬೇಕು. ಅದರ ಸಕಾರಕ್ಕೆ ಶ್ರದ್ಧೆಯಿಂದ ಅಭ್ಯಾಸ ಮಾಡಬೇಕು ಎಂದು ಸಲಹೆ ನೀಡಿದರಲ್ಲದೆ, ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಕಿವಿ ಮಾತು ಹೇಳಿದರು. ವಿದ್ಯಾರ್ಥಿಯಾಗಿದ್ದಾಗ ಮಾಡಿದ ಸಾಧನೆಯನ್ನು ಉದಾಹರಣೆಯಾಗಿ ತೆಗೆದುಕೊಂಡು ವಿದ್ಯಾರ್ಥಿಗಳನ್ನು ಉತ್ತೇಜಿಸಿದರು. ಕಾನೂನು ಮಹತ್ವತೆಯ ಬಗ್ಗೆ ಮಾಹಿತಿ ನೀಡಿದರು. ಸುಂಟಿಕೊಪ್ಪ ಪೊಲೀಸ್ ಠಾಣೆಯ ಎ ಎಸ್ ಐ ಶಿವಣ್ಣ ಮಾತನಾಡಿ, ಮಾದಕ ವ್ಯಸನದಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ತಿಳುವಳಿಕೆ ನೀಡಿದರು. ಮಾದಕ ವ್ಯಸಗಳಿಗೆ ದಾಸರಾದರೆ ವಿದ್ಯಾರ್ಥಿ ಜೀವನವು ನರಕ ಸದೃಶ್ಯವಾಗಿತ್ತದೆ ಎಂದರು. ಅಧ್ಯಕ್ಷತೆ ವಹಿಸಿ ಮಾತನಾಡಿದ…
ಬೆಂಗಳೂರು ಜು.20 : ವಿಧಾನಸಭಾ ಸ್ಪೀಕರ್ ಅವರು 10 ಮಂದಿ ಶಾಸಕರನ್ನು ಅಮಾತುಗೊಳಿಸಿದ ಕ್ರಮವನ್ನು ವಿರೋಧಿಸಿ ಬಿಜೆಪಿಯ ಶಾಸಕರು ವಿಧಾನಸೌಧದ ಮುಂಭಾಗದ ಗಾಂಧಿ ಪ್ರತಿಮೆ ಬಳಿ ಧರಣಿ ಸತ್ಯಾಗ್ರಹ ನಡೆಸಿದರು. ಬಸವರಾಜ ಬೊಮ್ಮಾಯಿ ಹಾಗೂ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಶಾಸಕರು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ಶಾಸಕರಾದ ಆರಗ ಜ್ಞಾನೇಂದ್ರ, ಮುನಿರತ್ನ. ಸುರೇಶ್ ಕುಮಾರ್, ಸುನೀಲ್ ಕುಮಾರ್, ಭೈರತಿ ಬಸವರಾಜ್ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.






