ಮಡಿಕೇರಿ ಜು.19 : ನಗರದ ಜನರಲ್ ತಿಮ್ಮಯ್ಯ ಮ್ಯೂಸಿಯಂಗೆ ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಭೇಟಿ ನೀಡಿದರು. ಜನರಲ್ ತಿಮ್ಮಯ್ಯ ಅವರ ಸೇನಾ ಸಾಧನೆ ಬಗ್ಗೆ ಮಾಹಿತಿ ಪಡೆದ ಅಖಿಲೇಶ್ ಯಾದವ್, ತಿಮ್ಮಯ್ಯ ಅವರ ಅಪ್ರತಿಮ ಸೇನಾ ಸೇವೆ ಎಲ್ಲರಿಗೂ ಮಾದರಿ ಎಂದು ಶ್ಲಾಘಿಸಿದರು. ಮೈಸೂರಿನಲ್ಲಿ ವಿಧ್ಯಾಭ್ಯಾಸ ಪಡೆದಿದ್ದೆ. ಹೀಗಾಗಿ ಆಗಾಗ್ಗೆ ಕೊಡಗಿಗೆ ಭೇಟಿ ನೀಡುತ್ತಿದ್ದೆ. ಮಡಿಕೇರಿಯ ದಸರಾ ಉತ್ಸವಕ್ಕೂ ಭೇಟಿ ನೀಡಿದ್ದೇನೆ. ಬಹಳ ಸುಂದರವಾದ ಜಿಲ್ಲೆ ಇದಾಗಿದೆ ಆದರೆ ಇದೇ ಮೊದಲ ಬಾರಿಗೆ ಜನರಲ್ ತಿಮ್ಮಯ್ಯ ಮ್ಯೂಸಿಯಂಗೆ ಭೇಟಿ ನೀಡಿರುವೆ. ಸೇನೆಯಲ್ಲಿರುವ ಕೊಡಗಿನ ಸೈನಿಕರ ಸಾಹಸಗಾಥೆಯನ್ನು ಸೈನಿಕಶಾಲೆಯಲ್ಲಿ ಓದುತ್ತಿರುವ ಸಂದಭ೯ ಸಹಪಾಠಿಗಳಿಂದ ಕೇಳಿತಿಳಿದಿದ್ದೆ. ಆದರೆ ಭಾರತದ ಪಾಲಿಗೆ ಮಹಾನ್ ಸೇನಾಧಿಕಾರಿಯಾಗಿದ್ದ ಜನರಲ್ ತಿಮ್ಮಯ್ಯ ಅವರ ಜೀವನ, ಸೇನಾ ಸಾಧನೆಗಳ ಬಗ್ಗೆ ಪ್ರತ್ಯಕ್ಷವಾಗಿ ವಸ್ತುಸಂಗ್ರಹಾಲಯದಲ್ಲಿ ವೀಕ್ಷಿಸಿ ಸಂತೋಷವಾಗಿದೆ. ವಿದೇಶಗಳಲ್ಲಿಯೂ ಭಾರತದ ಕೀತಿ೯ಪತಾಕೆ ಹಾರಿಸಿರುವ ತಿಮ್ಮಯ್ಯ ಅವರ ಜನ್ಮನಿವಾಸದಲ್ಲಿಯೇ ಆ ಮಹಾನ್ ಸೇನಾನಿಗೆ ಗೌರವ ನಮನ ಸಲ್ಲಿಸುವ ಅಪೂವ೯…
ಲೇಖಕ: admin
ಮಡಿಕೇರಿ ಜು.19 : ಕಾಂಗ್ರೆಸ್, ಸಮಾಜವಾದಿ ಪಕ್ಷಗಳೂ ಸೇರಿದಂತೆ 26 ಪಕ್ಷಗಳ ಹೊಸ ಘಟ್ ಬಂಧನ್ ಬಿಜೆಪಿ ಮಿತ್ರ ಪಕ್ಷಗಳಿಗೆ ಭಯ ಉಂಟು ಮಾಡಿದ್ದು ಸೋಲಿನ ಹತಾಶೆಯಿಂದ ವಿದಾಯದ ಕೂಟ ನಡೆಸುತ್ತಿವೆ ಎಂದು ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಮಡಿಕೇರಿಯಲ್ಲಿ ಜನರಲ್ ತಿಮ್ಮಯ್ಯ ಮ್ಯೂಸಿಯಂಗೆ ಭೇಟಿ ನೀಡಿ ಮಹಾನ್ ಸೇನಾನಿಯ ಸೇನಾಜೀವನದ ಮಾಹಿತಿ ಪಡೆದ ಬಳಿಕ ಮಾಧ್ಯಮದವರೊಂದಿಗೆ ಅಖಿಲೇಷ್ ಯಾದವ್ ಪ್ರತಿಕ್ರಿಯಿಸಿದರು. ಬೆಂಗಳೂರಿನಲ್ಲಿ ಹವಾಮಾನದಂತೆ ಮೈತ್ರಿ ಕೂಟದ ಸಭೆಯ ವಾತಾವರಣವೂ ಬಹಳ ಉತ್ತಮವಾಗಿತ್ತು. ಲೋಕಸಭಾ ಚುನಾವಣೆಯನ್ನು ಮೈತ್ರಿಕೂಟದ ಪಕ್ಷಗಳು ಒಟ್ಟಾಗಿ ಎದುರಿಸುತ್ತೇವೆ ಎಂದು ಅವರು ಹೇಳಿದರು. .ಮೈತ್ರಿಕೂಟದ ಸಭೆಯ ದಿನದಂದೇ ಬಿಜೆಪಿಯು ತನ್ನ ಮಿತ್ರ ಪಕ್ಷಗಳ ಸಭೆ ಕರೆದಿದ್ದು ಅವರಿಗೆ ಮೈತ್ರಿ ಕೂಟದ ಬಗ್ಗೆ ಬಿಜೆಪಿ ಮುಖಂಡರಿಗೆ ಪ್ರಾರಂಭವಾಗಿರುವ ಭಯಕ್ಕೆ ನಿದಶ೯ನವಾಗಿದೆ. ಬಿಜೆಪಿ ನೇತೖತ್ವದ ಪಕ್ಷಗಳ ಸಭೆ ವಿದಾಯ ಕೂಟದ ಸಭೆಯಾಗಲಿದೆ. ಇಲ್ಲಿಯವರೆಗೆ ಮೋಜುಮಸ್ತಿ ಅನುಭವಿಸಿದ್ದಾಯಿತು. ಇನ್ನು ಅಧಿಕಾರದಿಂದ ವಿದಾಯ ಹೇಳುವ ಕಾಲ ಬರುತ್ತಿದೆ. ಹೊಸ ಘಟ್…
ಮಡಿಕೇರಿ ಜು.19 : ಮಡಿಕೇರಿ ಲಯನ್ಸ್ ಸಂಸ್ಥೆಯ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನಗರದ ಲಯನ್ಸ್ ಸಭಾಂಗಣದಲ್ಲಿ ನಡೆಯಿತು. ಅಧ್ಯಕ್ಷರಾಗಿ ಲಯನ್ ಡಿ.ಮಧುಕರ್ ಶೇಟ್, ಕಾರ್ಯದರ್ಶಿಯಾಗಿ ಲಯನ್ ನಟರಾಜ್ ಕೆಸ್ತೂರು, ಜಂಟಿ ಕಾರ್ಯದರ್ಶಿಯಾಗಿ ಎಂ.ಪಿ.ನಾಗೇಂದ್ರ, ಖಜಾಂಚಿಯಾಗಿ ಲಯನ್ ಎನ್.ಬಿ.ರವಿ, ಉಪಾಧ್ಯಕ್ಷರಾಗಿ ಲಯನ್ ದಿನೇಶ್ ರಾವ್, ಲಯನ್ ಜೆ.ವಿ.ಕೋಟಿ, ಟೇಮರ್ ಆಗಿ ಲಯನ್ ಹೆಚ್.ಟಿ.ಚಾಮ, ಟೈಲ್ ಟ್ವಿಸ್ಟರ್ ಆಗಿ ಲಯನ್ ಕಮಲಾ ಮುರುಗೇಶ್, ಸಾರ್ವಜನಿಕ ಸಂಪರ್ಕ ಅಧಿಕಾರಿಯಾಗಿ ಲಯನ್ ಮೋಹನ್ ಕುಮಾರ್, ಸದಸ್ಯತ್ವ ಸಮಿತಿಯ ಅಧ್ಯಕ್ಷರಾಗಿ ಲಯನ್ ಎಂ.ಎ.ನಿರಂಜನ್, ಕ್ಲಬ್ ಮೆಲ್ವಿಚರಕಾಗಿ ಲಯನ್ ಬಿ.ವಿ.ಮೋಹನ್ ದಾಸ್, ಎಲ್ಸಿಐಎಫ್ ಅಧ್ಯಕ್ಷರಾಗಿ ಲಯನ್ ಕವಿತಾ ಕಾವೇರಮ್ಮ, ನಿರ್ದೇಶಕರುಗಳಾಗಿ ಲಯನ್ ಕೆ.ಮಧುಕರ್, ಲಯನ್ ಪಿ.ಪಿ.ಸೋಮಣ್ಣ, ಲಯನ್ ಎಸ್.ಬಿ.ಮುರುಗೇಶ್, ಲಯನ್ ಸಂಗೀತಾ ಮೋಹನ್ದಾಸ್, ಲಯನ್ ಕೆ.ಕೆ.ದಾಮೋದರ್, ಲಯನ್ ಕೆ.ಟಿ.ಬೇಬಿ ಮ್ಯಾಥ್ಯು, ಲಯನ್ ಡಿ.ಜಿ.ಕಿಶೋರ್, ಲಯನ್ ಅಗಸ್ಟಿನ್ ಜಯರಾಜ್ ಪ್ರಮಾಣ ವಚನ ಸ್ವೀಕರಿಸಿದರು. ಲಯನ್ಸ್ ಸಂಸ್ಥೆ 317 ಡಿ ಯ 2ನೇ ಉಪ ರಾಜ್ಯಪಾಲ ಲಯನ್ ಕುಡುಪಿ ಅರವಿಂದ್ ಶೆಣೈ ಅವರು…
ವಿರಾಜಪೇಟೆ ಜು.19 : ಬಿಳುಗುಂದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಕಾರ್ಯನಿರ್ವಹಿಸಿ ವರ್ಗಾವಣೆಯಾದ ಶಿಕ್ಷಕರಾದ ಪಿ.ಕೆ.ಪವಿತ್ರ ಹಾಗೂ ಕಿರಣ್ ಕುಮಾರ್ ಅವರಿಗೆ ಬೀಳ್ಕೊಡಲಾಯಿತು. ಬಿಳುಗುಂದ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಐನಂಡ ಪ್ರತಾಪ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯಶಿಕ್ಷಕಿ ಅರುಣ್ ಆನ್ಸಿ ಡಿಸೋಜ ಶಿಕ್ಷಕರ ಅತ್ಯುತ್ತಮ ಸೇವೆಯ ಬಗ್ಗೆ ಮಾತನಾಡಿದರು. ಪಿ.ಡಿ.ಓ ಚಂದ್ರಶೇಖರ್ ಮಾತನಾಡಿ ಶಿಕ್ಷಕರ ವರ್ಗದಿಂದ ಶಾಲೆಗೆ ಅಪಾರ ನಷ್ಟವಾಗುತ್ತಿದೆ ಎಂದು ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. ಈ ಸಂದರ್ಭ ಶಾಲೆಯ ಎಲ್ಲಾ ಶಿಕ್ಷಕರು ವರ್ಗಾವಣೆಗೊಂಡ ಶಿಕ್ಷಕರ ಉತ್ತಮ ಕಾರ್ಯವೈಖರಿಯ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದರು. ವರ್ಗಾವಣೆಗೊಂಡ ಶಿಕ್ಷಕರು ಮಕ್ಕಳ ಬಿಸಿ ಊಟಕ್ಕೆ ತಟ್ಟೆಗಳನ್ನು ಕೊಡುಗೆಯಾಗಿ ನೀಡಿದರು. ಇವರಿಗೆ ಶಾಲಾ ಮಕ್ಕಳು, ಶಾಲಾ ಸಿಬ್ಬಂದಿಗಳು, ಅಡುಗೆ ಸಹಾಯಕರು, ಪ್ರಾಥಮಿಕ ಶಾಲಾ ಶಿಕ್ಷಕರು ನೆನಪಿನ ಕಾಣಿಕೆ ನೀಡಿ ಗೌರವಿಸಿದರು. ಅಮ್ಮತ್ತಿ ಕ್ಲಸ್ಟರ್ ಸಿ.ಆರ್.ಪಿ. ಪ್ರವೀಣ್ ಶಿಕ್ಷಕರ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತ ಪಡಿಸಿದರು. ಈ ಸಂದರ್ಭದಲ್ಲಿ ಶಿಕ್ಷಕರಾದ ಜ್ಞಾನಮಣಿ, ಲೀಲಾವತಿ, ಲಿನ್ನಿ, ಸಾವಿತ್ರಿ, ಆಶಾರಾಣಿ ಸೇರಿದಂತೆ ಅಡುಗೆ ಸಹಾಯಕರು,…
ಮಡಿಕೇರಿ ಜು.19 : ಬುಲೆಟ್ ಫ್ರೆಂಡ್ಸ್ ಕೊಂಡಂಗೇರಿ ವತಿಯಿಂದ ಆ.14 ಮತ್ತು 15 ರಂದು ಎರಡು ದಿನಗಳ ಕಾಲ ಕೊಂಡಂಗೇರಿಯಲ್ಲಿ ಜಿಲ್ಲಾ ಮಟ್ಟದ ಕೆಸರುಗದ್ದೆ ಕಾಲ್ಚೆಂಡು ಹಾಗೂ ಫುಟ್ಬಾಲ್ ಪಂದ್ಯಾವಳಿಯ ನ ನಡೆಯಲಿದ್ದು, ಆಸಕ್ತ ತಂಡಗಳು 7259499680, 9731311197,9483104412 ಸಂಖ್ಯೆಯನ್ನು ಸಂಪರ್ಕಿಸಿ ತಂಡವನ್ನು ನೋಂದಣಿ ಮಾಡಬಹುದಾಗಿದೆ ಎಂದು ಬುಲೆಟ್ ಫ್ರೆಂಡ್ಸ್ ಪದಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು ಜು.19 : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸಿದ್ದ ಆರೋಪದಡಿ ಐವರು ಶಂಕಿತ ಉಗ್ರರನ್ನು ಪೊಲೀಸರು ಬಂಧಿಸಿದ್ದು, ಮಾಸ್ಟರ್ ಮೈಂಡ್ ತಲೆಮರೆಸಿಕೊಂಡಿದ್ದಾನೆ. ಬೆಂಗಳೂರಿನ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಇಂದು ಬೆಳಗ್ಗೆ ಕರ್ಯಾಚರಣೆ ನಡೆಸಿತು. ಬಂಧಿತರಿಂದ ಅಪಾರ ಪ್ರಮಾಣದ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸಂಭವಿಸಬಹುದಾಗಿದ್ದ ಭಾರೀ ದುರಂತವನ್ನು ಪೊಲೀಸರು ತಪ್ಪಿಸಿದ್ದಾರೆ. ಏಳು ಪಿಸ್ತೂಲ್, 45 ಮದ್ದು ಗುಂಡುಗಳು, ಹನ್ನೆರಡು ಬೇಸಿಕ್ ಸೆಟ್ ಮೊಬೈಲ್ ಫೋನ್, ಡ್ರ್ಯಾಗರ್, ವಾಕಿ ಟಾಕಿ ವಶಕ್ಕೆ ಪಡೆಯಲಾಗಿದೆ. ಬಂಧಿತರು ಬೆಂಗಳೂರು ನಗರದಲ್ಲಿ ದುಷ್ಕೃತ್ಯ ನಡೆಸಲು ಸಂಚು ರೂಪಿಸಿದ್ದರು. ಕೃತ್ಯಗಳಿಗೆ ವಿದೇಶದಿಂದ ಹಣವನ್ನು ಸಂಗ್ರಹಿಸುತ್ತಿದ್ದರು ಎಂದು ತಿಳಿದು ಬಂದಿದೆ. ಸೈಯದ್ ಸುಹೇಲ್, ಉಮರ್, ಜಾನಿದ್, ಮುದಾಸಿರ್ ಹಾಗೂ ಜಾಹಿದ್ ಬಂಧಿತರೆಂದು ಗುರುತಿಸಲಾಗಿದೆ.
ಮಡಿಕೇರಿ ಜು.19 : ಸುಮಾರು 5 ಲಕ್ಷ ರೂ. ಮೌಲ್ಯದ ಶುಂಠಿಯನ್ನು ಕಳ್ಳತನ ಮಾಡಿರುವ ಘಟನೆ ಹುಣಸೂರು ತಾಲ್ಲೂಕಿನ ಸಣ್ಣೇನಹಳ್ಳಿಯಲ್ಲಿ ನಡೆದಿದೆ. ಸಣ್ಣೆನಹಳ್ಳಿಯ ಚಂದ್ರೇಗೌಡ ಮತ್ತಿತರ ರೈತರಿಂದ ಒಟ್ಟು 15 ಎಕರೆ ಜಮೀನನ್ನು ಗುತ್ತಿಗೆ ಪಡೆದ ಚೆನ್ನಸೋಗೆಯ ಪ್ರಸನ್ನಕುಮಾರ್, ಹೊಸಕೋಟೆಯ ಶ್ರೀನಿವಾಸ್ ಹಾಗೂ ದೇವೇಂದ್ರ ಎಂಬುವವರು ಶುಂಠಿ ಬೆಳೆದಿದ್ದರು. ಅರ್ಧ ಏಕರೆಯಷ್ಟು ಪ್ರದೇಶದಲ್ಲಿ ಬೆಳೆಯಲಾಗಿದ್ದ ಸುಮಾರು 5 ಲಕ್ಷ ರೂ. ಮೌಲ್ಯದ ಶುಂಠಿಯನ್ನು ರಾತ್ರಿ ವೇಳೆ ಚೋರರು ಕದ್ದೊಯ್ದಿದ್ದಾರೆ. ಶುಂಠಿಗೆ ಉತ್ತಮ ಧಾರಣೆ ಬಂದಿರುವ ಹಿನ್ನೆಲೆ ಕಳ್ಳರು ಶುಂಠಿ ಕಳ್ಳತನಕ್ಕೂ ಮುಂದಾಗಿದ್ದು, ರೈತರಲ್ಲಿ ಆತಂಕ ಮೂಡಿದೆ. ಈ ಬಗ್ಗೆ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಡಿಕೇರಿ ಜು.19 : ಜಾನುವಾರುಗಳನ್ನು ಭಕ್ಷಿಸಿ ಅಪಾರ ನಷ್ಟ ಉಂಟು ಮಾಡುವ ಮೂಲಕ ಹುಣುಸೂರು ತಾಲ್ಲೂಕಿನ ವದ್ಲಿಮನುಗನಹಳ್ಳಿ ಗ್ರಾಮದಲ್ಲಿ ಆತಂಕ ಮೂಡಿಸಿದ್ದ ಚಿರತೆ ಕೊನೆಗೂ ಸೆರೆಯಾಗಿದೆ. ಅನೇಕ ಮೇಕೆ ಹಾಗೂ ಬೀದಿ ನಾಯಿಗಳನ್ನು ತಿಂದು ಹಾಕಿದ್ದ ಚಿರತೆಯ ಸೆರೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿತು. ಮೂರು ದಿನಗಳ ಹಿಂದೆ ಗ್ರಾಮದ ಕುಮಾರ ನಾಯಕ ಎಂಬುವವರ ಜಮೀನಿನಲ್ಲಿ ಮೇಯಲು ಬಿಟ್ಟಿದ್ದ ಮೇಕೆಯನ್ನು ಚಿರತೆ ಕೊಂದು ಹಾಕಿತ್ತು. ಉಳಿದ ಮೇಕೆ ಮಾಂಸವನ್ನು ಬೋನಿನಲ್ಲಿಟ್ಟು ಸೆರೆಗಾಗಿ ತಂತ್ರ ರೂಪಿಸಲಾಗಿತ್ತು. ಮಾಂಸ ತಿನ್ನಲು ಬಂದ 4 ವರ್ಷದ ಹೆಣ್ಣು ಚಿರತೆ ಕೊನೆಗೂ ಬಂಧಿಯಾಯಿತು. ಸೆರೆಸಿಕ್ಕ ಚಿರತೆಯನ್ನು ನಾಗರಹೊಳೆ ಉದ್ಯಾನವನಕ್ಕೆ ಸುರಕ್ಷಿತವಾಗಿ ಬಿಡಲಾಗಿದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರು: 2021- 22ನೇ ಸಾಲಿಗೆ ಅತ್ಯುತ್ತಮ ಶಾಸಕರಾಗಿ ಆಯ್ಕೆಯಾಗಿರುವ ಮಾಜಿ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ ಹಾಗೂ 2022- 23ನೇ ಸಾಲಿಗೆ ಅತ್ಯುತ್ತಮ ಶಾಸಕರಾಗಿ ಆಯ್ಕೆಯಾಗಿರುವ ಮಾಜಿ ವಿಧಾನ ಪರಿಷತ್ ಸದಸ್ಯ ಶ್ರೀಕಂಠೇಗೌಡ ಅವರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ ಮಾಡಲಾಯಿತು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನ ಪರಿಷತ್ತಿನ 2021 ಮತ್ತು 22 ನೇ ಸಾಲಿನ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ಮಾಜಿ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ್ ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯ ಕೆ.ಟಿ. ಶ್ರೀಕಂಠೇಗೌಡ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರದಾನ ಮಾಡಿ, ಗೌರವಿಸಿದರು. ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಉಪಸಭಾಪತಿ ಎಂ.ಕೆ.ಪ್ರಾಣೇಶ್, ಸಚಿವರಾದ ಹೆಚ್.ಕೆ ಪಾಟೀಲ್ ಹಾಗೂ ಎನ್.ಎಸ್. ಬೋಸ ರಾಜು, ಪರಿಷತ್ ಸದಸ್ಯರಾದ ಭೋಜೇಗೌಡ, ಟಿ. ಎ. ಶರವಣ, ಮುಖ್ಯ ಸಚೇತಕ ಸಲೀಂ ಅಹ್ಮದ್, ವೈ.ಎ. ನಾರಾಯಣಸ್ವಾಮಿ, ಶಾಸಕ ಕೋಟ ಶ್ರೀನಿವಾಸ ಮೂರ್ತಿ ಮೊದಲಾದವರು ಸಮಾರಂಭದಲ್ಲಿ ಉಪಸ್ಥಿತರಿದ್ದರು.
ನಾಪೋಕ್ಲು ಜು.19 : ಮರಂದೋಡ ಗ್ರಾಮದಲ್ಲಿ ಮರವೊಂದು ಮುರಿದು ವಿದ್ಯುತ್ ಕಂಬದ ಮೇಲೆ ಬಿದ್ದ ಪರಿಣಾಮ ವಿದ್ಯುತ್ ತಂತಿಗಳು ತುಂಡಾಗಿ ರಸ್ತೆಯ ಮೇಲೆ ಬಿದ್ದು ಜನರು ಸಂಕಷ್ಟಕ್ಕೆ ಸಿಲುಕುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಮರಂದೋಡ ಗ್ರಾಮದ ಕೆರೆತಟ್ ರಸ್ತೆಯ ಸಮೀಪ ನಾಪೋಕ್ಲು – ವಿರಾಜಪೇಟೆ ಮುಖ್ಯರಸ್ತೆಯ ಮೇಲೆ ಮರ ಮುರಿದುಬಿದ್ದಿದ್ದು, ಸ್ಥಳೀಯರಾದ ಗ್ರಾ.ಪಂ ಸದಸ್ಯ ಹರೀಶ್ ಮೊಣ್ಣಪ್ಪ ಮರ ತೆರವುಗೊಳಿಸುವುದರ ಮೂಲಕ ಬಸ್ಸು ಸಂಚಾರಕ್ಕೆ ಅನುವು ಮಾಡಿಕೊಟ್ಟರು. 11 ಕೆ.ವಿ.ವಿದ್ಯುತ್ ತಂತಿಯ ಮೇಲೆ ಮರ ಬಿದ್ದಿದ್ದು ತಂತಿಗಳು ತುಂಡಾಗಿ ಸಮಸ್ಯೆಗೆ ಕಾರಣವಾಗಿತ್ತು. ಬೆಂಗಳೂರಿನಿಂದ ಮಡಿಕೇರಿಗೆ ಬಸ್ಸು ಬರುವ ಸಂದರ್ಭ ತೊಂದರೆ ಆಗುತ್ತಿದ್ದುದನ್ನು ಮನಗಂಡು ಹರೀಶ್ ಮೊಣ್ಣಪ್ಪ ಸಕಾಲದಲ್ಲಿ ಸ್ಥಳಕ್ಕೆ ತೆರಳಿ ಕಟ್ಟಿಂಗ್ ಮಿಷನ್ ನಿಂದ ಮರ ತೆರವುಗೊಳಿಸಿ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಹರೀಶ್ ಮೊಣ್ಣಪ್ಪ ಅವರ ಕಾರ್ಯಕ್ಕೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದರು. ವರದಿ : ದುಗ್ಗಳ ಸದಾನಂದ






