ಲೇಖಕ: admin

ಮಡಿಕೇರಿ ಜು.18 : ಭಾರತ ಆಹಾರ ನಿಗಮದಲ್ಲಿ ಲಭ್ಯತೆಯನುಸಾರ ಜುಲೈ-2023 ರ ಮಾಹೆಗೆ ಸಾರ್ವಜನಿಕ ವಿತರಣಾ ಪದ್ಧತಿಯಡಿ ನ್ಯಾಯಬೆಲೆ ಅಂಗಡಿಗಳ ಮೂಲಕ ಪಡಿತರ ಚೀಟಿದಾರರಿಗೆ ‘ಸಾರವರ್ಧಿತ’ (ಪೌಷ್ಟಿಕಾಂಶ) ಅಕ್ಕಿಯನ್ನು ವಿತರಣೆ ಮಾಡಲಾಗುತ್ತಿದ್ದು, ಸಾರ್ವಜನಿಕ ಪಡಿತರದಾರರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗದೇ ಸಾರವರ್ಧಿತ ಅಕ್ಕಿಯನ್ನು ಪಡೆದು ಸದುಪಯೋಗಿಸಿಕೊಳ್ಳಬೇಕೆಂದು ಸಾರ್ವಜನಿಕ ಪಡಿತರದಾರರಲ್ಲಿ ಆಹಾರ ಇಲಾಖೆ ಕೋರಿದೆ. ಅಂತ್ಯೋದಯ ಪಡಿತರ ಚೀಟಿಗಳಿಗೆ (ಎಎವೈ) ಪ್ರತಿ ಪಡಿತರ ಚೀಟಿಗೆ ಅಕ್ಕಿ- 35 ಕೆ.ಜಿ ಉಚಿತ, ಪಿಹೆಚ್‍ಹೆಚ್ ಪಡಿತರ ಚೀಟಿಗಳಿಗೆ (ಬಿಪಿಎಲ್) (ಆದ್ಯತಾ) ಪ್ರತಿ ಸದಸ್ಯರಿಗೆ ಅಕ್ಕಿ-05 ಕೆ.ಜಿ. ಉಚಿತ, ಎನ್‍ಪಿಹೆಚ್‍ಹೆಚ್ ಪಡಿತರ ಚೀಟಿಗಳಿಗೆ (ಎಪಿಎಲ್)(ಒಪ್ಪಿತ ಪಡಿತರ ಚೀಟಿಗಳಿಗೆ) ಏಕ ಸದಸ್ಯ ಪಡಿತರ ಚೀಟಿಗೆ ಅಕ್ಕಿ-05 ಕೆ.ಜಿ, 2 ಮತ್ತು ಹೆಚ್ಚಿನ ಸದಸ್ಯರಿರುವ ಪಡಿತರ ಚೀಟಿಗೆ ಅಕ್ಕಿ-10 ಕೆ.ಜಿ. ಪ್ರತಿ ಕೆ.ಜಿ.ಗೆ ರೂ.15/-, ಅಂತರ್ ನ್ಯಾಯಬೆಲೆ ಅಂಗಡಿ / ಅಂತರ್ ಜಿಲ್ಲೆ /ಅಂತರ್ ರಾಜ್ಯ ಪಡಿತರ ಚೀಟಿಗಳಿಗೆ ಪೋರ್ಟಬಲಿಟಿ ಜಾರಿಯಲ್ಲಿರುವುದರಿಂದ ಯಾವುದೇ ವರ್ಗದ ಪಡಿತರ ಚೀಟಿಗೆ ಜಿಲ್ಲೆಯ/ ರಾಜ್ಯದ…

Read More

ಮಡಿಕೇರಿ ಜು.18 : ಮಡಿಕೇರಿ ಸಾಮಾಜಿಕ ಅರಣ್ಯ ವಲಯದ ಹೊದ್ದೂರು ವಾಟೆಕಾಡು ಸಸ್ಯ ಕ್ಷೇತ್ರದಲ್ಲಿ 2023-24 ನೇ ಸಾಲಿನ ಮಳೆಗಾಲದಲ್ಲಿ ನೆಡಲು ವಿವಿಧ ಹಣ್ಣಿನ, ಔಷಧೀಯ ಹಾಗೂ ಕಾಡು ಜಾತಿಯ ಸಸಿ ಬೆಳೆಸಲಾಗಿರುತ್ತದೆ. ಮಹಾಗನಿ, ಶಿವನೆ, ಸಿಲ್ವರ್, ಬೀಟೆ, ಮಳೆ ಮರ, ನೇರಳೆ, ಸುಬಾಬುಲ್, ಹಲಸು, ದೂಪ, ನಿಂಬೆ, ಅಗಸೆ, ಬೆಟ್ಟದನೆಲ್ಲಿ, ಸೀಬೆ, ಮುಂತಾದ ಸಸಿಗಳು ಲಭ್ಯವಿದ್ದು, ರೈತ ಫಲಾನುಭವಿಗಳಿಗೆ ಸರ್ಕಾರದ ಹೊಸ ಪರಿಸ್ಕೃತ ಆದೇಶದಂತೆ ರೂ.3 ಹಾಗೂ ರೂ.6 ಪ್ರತಿ ಸಸಿಗೆ ರಿಯಾಯಿತಿ ದರದಲ್ಲಿ ಪಡೆದುಕೊಳ್ಳಬಹುದು. ರೈತರು ತಮ್ಮ ಆಧಾರ್ ಪ್ರತಿ, ರಾಷ್ಟ್ರೀಕೃತ ಬ್ಯಾಂಕ್ ಪಾಸ್ ಬುಕ್ ಪ್ರತಿ, ತಮ್ಮ ಜಮೀನಿನ ಆರ್‍ಟಿಸಿ ಪ್ರತಿಯನ್ನು ನೀಡಿ ಸಸಿಗಳನ್ನು ಪಡೆಯಬಹುದು ಹಾಗೂ ಬಿಪಿಎಲ್ ಕಾರ್ಡ್ ಮತ್ತು ನರೇಗಾ ಉದ್ಯೋಗ ಚೀಟಿ ಹೊಂದಿರುವ ರೈತರಿಗೆ ನೆಟ್ಟ 100 ಸಸಿಗಳಿಗೆ ಸುಮಾರು 8000-10,000 ರೂ.ಗಳ ಪ್ರೋತ್ಸಾಹ ಧನ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ ಉಪ ವಲಯ ಅರಣ್ಯ ಅಧಿಕಾರಿಗಳು 9743722646, ಗಸ್ತು ಅರಣ್ಯ ಪಾಲಕರು 7975952388…

Read More

ಮಡಿಕೇರಿ ಜು.18 : ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ 2023-24 ನೇ ಸಾಲಿಗೆ ಪ್ರಥಮ ಬಿ.ಎ ಮತ್ತು ಬಿ.ಕಾಂ ತರಗತಿಗಳಿಗೆ ಪ್ರವೇಶಾತಿ ಆರಂಭಗೊಂಡಿದ್ದು, ನೂತನವಾಗಿ ಪ್ರಾರಂಭವಾಗಿರುವ ಕೊಡಗು ವಿಶ್ವವಿದ್ಯಾನಿಲಯದ ವ್ಯಾಪ್ತಿಗೆ ಒಳಪಡುವ ಈ ಕಾಲೇಜಿಗೆ ಪ್ರವೇಶ ಪಡೆಯಲು ಇಚ್ಛಿಸುವ ವಿದ್ಯಾರ್ಥಿನಿಯರು ಕಚೇರಿಯಿಂದ ಅರ್ಜಿ ಪಡೆದುಕೊಂಡು ಭರ್ತಿ ಮಾಡಿ ಸೂಕ್ತ ದಾಖಲೆಗೊಂದಿಗೆ ಪ್ರವೇಶ ಪಡೆಯಲು ತಿಳಿಸಿದೆ. ಬಿ.ಕಾಂ ತರಗತಿಗೆ ಸೇರಬಯಸುವ 5 ಜನ ವಿದ್ಯಾರ್ಥಿನಿಯರಿಗೆ ಉಚಿತ ಪ್ರವೇಶ ಕಲ್ಪಿಸಲಾಗಿದ್ದು, ಜುಲೈ, 25 ಪ್ರವೇಶಾತಿ ಕೊನೆಯ ದಿನಾಂಕವಾಗಿದೆ ಎಂದು ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಡಿ. ಜೆ. ಜವರಪ್ಪ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 9945185783, 9845907344, 9008180049, 9538506370 ನ್ನು ಸಂಪರ್ಕಿಸಬಹುದು ಎಂದು ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲರು ತಿಳಿಸಿದ್ದಾರೆ.

Read More

ಕಡಂಗ ಜು.18 :  ವಿರಾಜಪೇಟೆ ಜಮಿಯತುಲ್ ನಲ್ಲಿ ಮುಹಲ್ಲಿಮೀನ್ ರೇಂಜ್ ಮಟ್ಟದ ಮುಹ ಲಿಮಿನ್ ಡೇ  ಕಡಂಗ ಶಾದಿಮಹಲ್ ಸಭಾಂಗಣದಲ್ಲಿ ನಡೆಯಿತು. ಜಮಹತ್ ಅಧ್ಯಕ್ಷ ಅಬುಲ್ಲ ಅಧ್ಯಕ್ಷರೆಯಲ್ಲಿ ನಡೆದ ಕಾರ್ಯಕ್ರಮವನ್ನು ಸಿ ಪಿ ಎಂ ಬಷೀರ್ ಹಾಜಿ ಉದ್ಘಾಟಿಸಿದರು. ವಿರಾಜಪೇಟೆ ಖತೀಬ್ ಉಸ್ತಾದ್ ರಹ್ಹೋಫ್ ಹುದವಿ  ಮದರಸ ಅಧ್ಯಪಕರ ಸೇವೆಗಳ ಬಗ್ಗೆ ಸಂಕ್ಷಿಪ್ತವಾಗಿ ವಿವರಣೆ ನೀಡಿದರು. ಕಾರ್ಯಕ್ರಮದಲ್ಲಿ ಪ್ರಮುಖರಾದ ಇಸ್ಮಾಯಿಲ್ ಉಸ್ತಾದ್, ಅಹ್ಮದ್ ಹಾಜಿ, ಯೂಸೂಫ್ ಉಸ್ತಾದ್, ಸುಹೈಬ್ ಫೈಜಿ,ಸಲಾಂ, ಅಬ್ದುಲ್ಲ ಹಾಜಿ ಪಾಲ್ಗೊಂಡಿದ್ದರು. ಪ್ರಾರ್ಥನೆ ಯನ್ನು ಅಬೂಬಕರ್ ಮುಸ್ಲಿಯಾರ್  ನೆರವೇರಿಸಿದರು. ಹನೀಫ್ ಫೈಜಿ ಸ್ವಾಗತಿಸಿ, ಸರ್ವರನ್ನು ವಂದಿಸಿದರು. ವರದಿ : ನೌಫಲ್ ಕಡಂಗ 

Read More

ಮಡಿಕೇರಿ ಜು.18 : ಆಡಳಿತ ವ್ಯವಸ್ಥೆಗಳು ಗ್ರಾಮೀಣ ಪ್ರದೇಶದ ಅಭಿವೃದ್ಧಿಯ ಬಗ್ಗೆಯೇ ಹೆಚ್ಚು ಒತ್ತು ನೀಡಿ ಮಾತನಾಡುತ್ತವೆ. ಆದರೆ ಇಲ್ಲೊಂದು ಗ್ರಾಮಕ್ಕೆ ಬಸ್ ತಂಗುದಾಣದ ಭಾಗ್ಯವೇ ಇಲ್ಲದೆ ಗ್ರಾಮಸ್ಥರು ಪರಿತಪಿಸುವ ಪರಿಸ್ಥಿತಿ ಎದುರಾಗಿದೆ. ವಾಲ್ನೂರು ತ್ಯಾಗತ್ತೂರು ಗ್ರಾ.ಪಂ ವ್ಯಾಪ್ತಿಯ ಬಾಳೆಗುಂಡಿ ಗಿರಿಜನ ಕಾಲೋನಿಯ ನಿವಾಸಿಗಳು ಬಸ್ ತಂಗುದಾಣದ ಕೊರತೆಯನ್ನು ಎದುರಿಸುತ್ತಿದ್ದಾರೆ. ಇಲ್ಲಿರುವ ಸುಮಾರು 30 ಕುಟುಂಬಗಳು ಬಸ್ ಗಾಗಿ ಮಳೆ, ಚಳಿ, ಗಾಳಿಯಲ್ಲೇ ಕಾಯುತ್ತಾ ನಿಲ್ಲಬೇಕಾದ ದುಸ್ಥಿತಿ ಎದುರಾಗಿದೆ. ಬಹಳ ವರ್ಷಗಳ ಹಿಂದೆ ಇಲ್ಲಿದ್ದ ಬಸ್ ತಂಗುದಾಣ ಶಿಥಿಲಾವಸ್ಥೆಗೊಂಡು ಬೀಳುವ ಸ್ಥಿತಿಯಲ್ಲಿತ್ತು. ಇತ್ತೀಚೆಗೆ ಸುರಿದ ಸಣ್ಣ ಮಳೆಗೆ ತಂಗುದಾಣ ಸಂಪೂರ್ಣ ಕುಸಿದು ಬಿದ್ದಿದೆ. ತಂಗುದಾಣದ ಅವ್ಯವಸ್ಥೆಯ ಬಗ್ಗೆ ಗ್ರಾ.ಪಂ, ತಾ.ಪಂ ಮತ್ತು ಜಿ.ಪಂ ಗಮನಕ್ಕೆ ತಂದರೂ ಯಾವುದೇ ಸ್ಪಂದನೆ ದೊರೆತ್ತಿಲ್ಲವೆಂದು ಬೇಸರ ವ್ಯಕ್ತಪಡಿಸಿರುವ ಗ್ರಾ.ಪಂ ಮಾಜಿ ಸದಸ್ಯೆ ಬಿ.ಕೆ.ಬೋಜಿ, ಇಲ್ಲಿ ವಾಸ ಇರುವವರು ದುರ್ಬಲರು ಎನ್ನುವ ಕಾರಣಕ್ಕೆ ನಿರ್ಲಕ್ಷಿಸಲಾಗುತ್ತಿದೆಯೇ ಎಂದು ಪ್ರಶ್ನಿಸಿದ್ದಾರೆ. ಸುರಿಯುವ ಮಳೆಯಲ್ಲೇ ಮಕ್ಕಳು, ವಯೋವೃದ್ಧರು ಬಸ್ ಗಾಗಿ ಕಾರ್ಯಬೇಕಾಗಿದೆ.…

Read More

ಮಡಿಕೇರಿ ಜು.18 : ಕೇಂದ್ರದ ಮಾಜಿ ಸಚಿವ ಹಾಗೂ ಆರ್ಥಿಕ ತಜ್ಞ ಡಾ.ಸುಬ್ರಮಣಿಯನ್ ಸ್ವಾಮಿ ಅವರು ತಮ್ಮ ರಾಜ್ಯಸಭಾ ನಿಧಿಯಿಂದ ನೀಡಿದ ಅನುದಾನದಲ್ಲಿ ಕುಶಾಲನಗರ ತಾಲ್ಲೂಕಿನ “ನೂರೊಕ್ಕನಾಡ್ ಹಿಲ್ಸ್” ರಸ್ತೆ ಮತ್ತು ಮಡಿಕೇರಿ ತಾಲ್ಲೂಕಿನ ಕತ್ತಲೆಕಾಡು ರಸ್ತೆ ಅಭಿವೃದ್ಧಿಯಾಗಿದ್ದು, ಇದರ ಉದ್ಘಾಟನಾ ಕಾರ್ಯಕ್ರಮ ಜು.19 ರಂದು ನಡೆಯಲಿದೆ. ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ಕೋರಿಕೆಯ ಮೇರೆಗೆ ಡಾ.ಸುಬ್ರಮಣಿಯನ್ ಸ್ವಾಮಿ ಅವರು ಸಂಸತ್ ಸದಸ್ಯರ ಸ್ಥಳೀಯ ಪ್ರದೇಶ ಅಭಿವೃದ್ಧಿ ಯೋಜನೆಯ ನಿಧಿಯಡಿ ಕೊಡಗಿನ ಕುಗ್ರಾಮಗಳ “ಬಲ್ಯಮನೆ” ರಸ್ತೆ ಮತ್ತು ಇತರ ರಸ್ತೆಗಳ ಅಭಿವೃದ್ಧಿಗೆ 2.46 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದ್ದರು. ಮೊದಲ ಹಂತದಲ್ಲಿ ಒಂದೂವರೆ ಕೋಟಿ ರೂ. ವೆಚ್ಚದಲ್ಲಿ “ನೂರೊಕ್ಕನಾಡ್ ಹಿಲ್ಸ್” ರಸ್ತೆ ಮತ್ತು ಕತ್ತಲೆಕಾಡು ರಸ್ತೆ ನಿರ್ಮಾಣವಾಗಿದೆ. ಇದನ್ನು ಬುಧವಾರ ಬೆಳಗ್ಗೆ 10 ಗಂಟೆಗೆ ಡಾ.ಸುಬ್ರಮಣಿಯನ್ ಸ್ವಾಮಿ ಅವರ ಆಪ್ತ ಹಾಗೂ ವಿಹೆಚ್‍ಎಸ್ ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜಗದೀಶ್ ಶೆಟ್ಟಿ ಅವರು ಉದ್ಘಾಟಿಸಲಿದ್ದಾರೆ. ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ…

Read More

ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಶತಾಯಗತಾಯ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಒಂದಾಗಿರುವ ಪ್ರತಿಪಕ್ಷಗಳ ಮೈತ್ರಿಕೂಟಕ್ಕೆ ಇಂಡಿಯನ್​ ನ್ಯಾಷನಲ್ ಡೆವಲಪ್ ಮೆಂಟಲ್​​ ಇನ್​ಕ್ಲೂಸಿವ್​​​​ ಅಲೈನ್ಸ್ (INDIA)  ಎಂದು ನಾಮಕರಣ ಮಾಡಿರುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ಘೋಷಿಸಿದ್ದಾರೆ. ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ ಪ್ರತಿಪಕ್ಷಗಳ ಸಭೆಯ ನಂತರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು, ಭಾರತದ ಪ್ರಜಾಪ್ರಭುತ್ವ ಉಳಿವಿಗೆ ನಮ್ಮ ಹೋರಾಟ ನಡೆಯುತ್ತಿದೆ. ಒಂದೇ ಧ್ವನಿಯಲ್ಲಿ ನಾವು ಹೋರಾಟ ಮಾಡುತ್ತಿದ್ದೇವೆ ಎಂದರು.   

Read More

ಮಡಿಕೇರಿ ಜು.18 : ಕೊಡಗಿನ ಕೆಲವು ತೋಟಗಳ ಲೈನ್ ಮನೆಗಳಲ್ಲಿ ಜೀತದಾಳುಗಳಾಗಿ ದುಡಿಯುತ್ತಿರುವ ಆದಿವಾಸಿ ಕಾರ್ಮಿಕರಿಗೆ ಸ್ವಂತ ಮನೆ ಮತ್ತು ಕೃಷಿಭೂಮಿ ನೀಡಬೇಕು ಎಂದು ದಲಿತ ಆದಿವಾಸಿ ಕೃಷಿ ಕಾರ್ಮಿಕ ಸಂಘದ ಕೊಡಗು ಜಿಲ್ಲಾ ಘಟಕ ಒತ್ತಾಯಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಮುಖಂಡ ಡಿ.ಎಸ್.ನಿರ್ವಾಣಪ್ಪ, ಜಿಲ್ಲೆಯ ಮೂಲ ನಿವಾಸಿಗಳಾದ ಪಣಿಯರವ, ಪಂಜರಿಯರವ, ಜೇನುಕುರುಬ, ಬೆಟ್ಟಕುರುಬ, ಮಲೆ ಕುಡಿಯರು, ದಲಿತರು ಸೇರಿದಂತೆ ಸಾವಿರಾರು ಕುಟುಂಬಗಳು ಶಾಶ್ವತ ನಿವೇಶನ, ಸೂರಿಲ್ಲದೆ ಉಳ್ಳವರ ತೋಟದ ಲೈನ್ ಮನೆಗಳಲ್ಲಿ ಜೀತ ಮಾಡುತ್ತಿದ್ದಾರೆ. ಕಾರ್ಮಿಕರ ಮೂಲ ದಾಖಲೆಗಳನ್ನು ಕಸಿದುಕೊಳ್ಳುವ ಪ್ರಕರಣಗಳು ಕೂಡ ಬೆಳಕಿಗೆ ಬಂದಿದೆ ಎಂದು ಆರೋಪಿಸಿದರು. ಮಹಿಳೆಯರು, ಮಕ್ಕಳು, ಬಾಣಂತಿಯರು ಆರೋಗ್ಯ ಮತ್ತು ಜೀವನದ ಭದ್ರತೆ ಇಲ್ಲದೆ ಭೀತಿಯ ವಾತಾವರಣದಲ್ಲಿ ಲೈನ್ ಮನೆಗಳಲ್ಲಿ ವಾಸಿಸುತ್ತಿದ್ದಾರೆ. ಈ ಹಿನ್ನೆಯಲ್ಲ್ಲಿ ಸಂಘಟನೆ ವತಿಯಿಂದ ಲೈನ್ ಮನೆಯ ಕಾರ್ಮಿಕರ ಪಟ್ಟಿಯನ್ನು ಸಂಗ್ರಹಿಸಲಾಗುತ್ತಿದ್ದು, ಅವರ ಸ್ವ ವಿವರ ಹಾಗೂ ದಾಖಲಾತಿಗಳನ್ನು ಸಾಧ್ಯವಾದಷ್ಟು ಸಂಗ್ರಹಿಸಿ ಹಂತ ಹಂತವಾಗಿ ಸರ್ಕಾರಕ್ಕೆ ನೀಡಲಾಗುತ್ತದೆ. ಈಗಾಗಲೇ ಒಂದು…

Read More

ಕುಶಾಲನಗರ,ಜು.18 : ಕೂಡುಮಂಗಳೂರು ಗ್ರಾ.ಪಂ ನ ಕೂಡ್ಲೂರು ನವಗ್ತಾಮದಲ್ಲಿ ಹೈಮಾಸ್ಟ್ ಲೈಟ್ ಅಳವಡಿಸುವ ಕಾಮಗಾರಿಗೆ ವಾರ್ಡ್ ಸದಸ್ಯ ಕೆ.ಬಿ.ಶಂಶುದ್ಧೀನ್  ಚಾಲನೆ ನೀಡಿದರು. ಕೂಡ್ಲೂರಿನ ನವಗ್ರಾಮದ ನ್ಯಾಯಬೆಲೆ ಅಂಗಡಿ ಬಳಿ  ಅಮೃತ ಗ್ರಾಮ ಯೋಜನೆಯ ಒಂದು ಲಕ್ಷ ರೂ .ವೆಚ್ಚದ ಅನುದಾನದಲ್ಲಿ ಹೈಮಾಸ್ಟ್ ಅಳವಡಿಸಲಾಗುತ್ತಿದ್ದು, ಸಾರ್ವಜನಿಕರಿಗೆ ಅನುಕೂಲವಾಗುವ ದೃಷ್ಟಿಯಿಂದ  ಹೈಮಾಸ್ಟ್ ಅಳವಡಿಸಲಾಗುತ್ತಿದೆ. ನಂತರ  ಮಾತನಾಡಿದ ವಾರ್ಡ್ ಸದಸ್ಯ  ಕೆ.ಬಿ.ಶಂಶುದ್ಧೀನ್, ನವಗ್ರಾಮದಲ್ಲಿ ನ್ಯಾಯಬೆಲೆ ಅಂಗಡಿ ಬಳಿ ಹೈಮಾಸ್ಟ್ ಅಳವಡಿಸುವಂತೆ ಗ್ರಾಮಸ್ಥರ ಆಗ್ರಹಿಸಿದ ಹಿನ್ನಲೆ ಸ್ಥಳದಲ್ಲಿ ಅಮೃತ ಗ್ರಾಮ ಯೋಜನೆಯ ಅನುದಾನದಲ್ಲಿ ಹೈಮಾಸ್ಟ್ ಲೈಟನ್ನು ಅಳವಾಡಿಸಲಾಗುತ್ತಿದೆ. ವರ್ಕ್ಸ್ ನಿಂದ ಬರುವ ಕಾರ್ಮಿಕರಿಗೆ, ಮಹಿಳೆಯರಿಗೆ ರಾತ್ರಿ ಹೊತ್ತಿನಲ್ಲಿ ಸಂಚರಿಸಲು ಅನುಕೂಲವಾಗಲಿದೆ ಎಂದರು. ಈ ಸಂದರ್ಭ ಸ್ಥಳೀಯ ಗ್ರಾಮಸ್ಥರು ಇದ್ದರು.

Read More

ಮಡಿಕೇರಿ ಜು.18 :  ವಿಧಾನ ಸೌಧದಲ್ಲಿ ನೆನೆಗುದ್ದಿಗೆ ಬಿದ್ದಿರುವ  ಅರಣ್ಯ ಕಾಯ್ದೆ ಮತ್ತು ಪರಿಹಾರ ಕುರಿತು  ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿದಿಗಳು ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಯಿತು. ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ  ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್ ಪೊನ್ನಣ್ಣ, ಸಚಿವರಿಗೆ ಜಿಲ್ಲೆಯ ಸಮಸ್ಯೆಗಳ ಕುರಿತು ವಿವರಿಸಿದರು. ಈ ಸಂದರ್ಭ ಅರಣ್ಯ ಸಚಿವರು, ಪರಿಶಿಷ್ಟ ವರ್ಗಗಳ ಮತ್ತು ಯುವಜನ ಸಚಿವರು, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು ಹಾಜರಿದ್ದರು.

Read More