ಲೇಖಕ: admin

ನಾಪೋಕ್ಲು ಜು.18 :    ದಿನನಿತ್ಯ ನೂರಾರು ವಾಹನಗಳು ಸಂಚರಿಸುವ ಮುಖ್ಯ ರಸ್ತೆಯ ಬದಿಯಲ್ಲಿ ಒಣಗಿದ ಮರವೊಂದು ಬೀಳುವ ಸ್ಥಿತಿಯಲ್ಲಿದ್ದು, ಅಪಾಯಕ್ಕೆ ಆಹ್ವಾನ ನೀಡುವಂತಿದೆ. ನಾಪೋಕ್ಲು ಬಳಿಯ ಬಾವಲಿ ಗ್ರಾಮದಿಂದ ಎಡಪಾಲ, ಚೆಂಯ್ಯಂಡಾಣೆ ಮಾರ್ಗವಾಗಿ ವಿರಾಜಪೇಟೆಗೆ ತೆರಳುವ ಮುಖ್ಯ ರಸ್ತೆಯ ಬದಿಯಲ್ಲಿ ಕೆಲವು ವರ್ಷಗಳಿಂದ ಒಣಗಿದ ಮರವೊಂದು  ಬೀಳುವ ಸ್ಥಿತಿಗೆ ತಲುಪಿದ್ದರೂ ಸಂಬಂಧಪಟ್ಟ ಇಲಾಖೆಯ ಗಮನಕ್ಕೆ ಬಾರದೇ ಇರುವುದು ವಿಪರ್ಯಾಸ. ಮಳೆಗಾಲ ಪ್ರಾರಂಭವಾಗಿದ್ದು, ಹೆಚ್ಚಿನ ಮಳೆ ಬೀಳುವ ಸಂದರ್ಭ ಮರ ಧರೆಗುರುಳುವ  ಸಾಧ್ಯತೆಗಳು ಕಂಡು ಬರುತ್ತಿದೆ. ಇದರಿಂದ  ರಸ್ತೆಯಲ್ಲಿ ಸಂಚರಿಸುವ ಸಾರ್ವಜನಿಕರು, ವಾಹನ ಸವಾರರು ಭಯದಿಂದ ಸಂಚರಿಸುವ ಪರಿಸ್ಥಿತಿ ಉದ್ಭವವಾಗಿದೆ. ಈ ರಸ್ತೆಯಲ್ಲಿ ಪ್ರತಿನಿತ್ಯ ನಾಪೋಕ್ಲು, ಮೂರ್ನಾಡು ಭಾಗಗಳಿಂದ ಶಾಲಾ ವಾಹನಗಳು, ಖಾಸಗಿ ಮತ್ತು ಸರ್ಕಾರಿ ಬಸ್ಸುಗಳು ಸೇರಿದಂತೆ ನೂರಾರು ವಾಹನಗಳು ಸಂಚರಿಸುತ್ತಿದ್ದು, ಮರ ಬಿದ್ದರೆ ಭಾರಿ ಅನಾಹುತ ಅನುಭವಿಸುವ ಸಾಧ್ಯತೆ ಎದ್ದು ಕಾಣುತ್ತಿದೆ. ಆದ್ದರಿಂದ ಸಂಬಂಧಪಟ್ಟ ಇಲಾಖೆಯವರು ತಕ್ಷಣ ಮರವನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕೆಂದು ವಾಹನಸವಾರರು ಮತ್ತು ಸಾರ್ವಜನಿಕರು ಆಗ್ರಹಿಸಿದ್ದಾರೆ.…

Read More

ಮಡಿಕೇರಿ ಜು.18 : ಬೆಂಗಳೂರಿನ ಕೋರಮಂಗಲ ಒಳಕ್ರೀಡಾಂಗಣದಲ್ಲಿ ನಡೆದ 40ನೇ ರಾಜ್ಯ ಮಟ್ಟದ ಟೆಕ್ವಾಂಡೋ ಸ್ಪರ್ಧೆಯಲ್ಲಿ ಮಡಿಕೇರಿಯ ಮರ್ಕರ ಟೆಕ್ವಾಂಡೋ ಕ್ಲಬ್‍ನ ವಿದ್ಯಾರ್ಥಿಗಳು ಚಿನ್ನ, ಬೆಳ್ಳಿ ಹಾಗೂ ಕಂಚಿನ ಪದಕ ಗೆದ್ದಿದ್ದಾರೆ. ಕ್ಲಬ್‍ನ ವಿದ್ಯಾರ್ಥಿಗಳಾದ ಎನ್.ಕೆ.ಪ್ರಜ್ಞಾ, ಪಿ.ಜಿ.ನಿಕ್ಷಾ, ಮಿಜಲ್, ಮಿಶಾಲ್, ವಿರಂಜನ್, ಅರುಶ್ ಪರ್ವಿನ್ ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡಿದ್ದು, ಎಂ.ಆರ್.ಮೃದುಲ್, ಎನ್.ಕೆ.ದಿವಿತ್, ಅನ್ಯ ಪರ್ವಿನ್, ಮೊಹಮ್ಮದ್ ಜಿಸಾನ್, ಮೋಹಿತ್, ವಿರಾಟ್ ಬೆಳ್ಳಿಯ ಪದಕವನ್ನು ಗೆದ್ದುಕೊಂಡಿದ್ದಾರೆ. ಮೊಹಮ್ಮದ್ ಅಸ್ಲಮ್, ಹಿಬಾ, ಬಿಲಾಲ್, ಹರ್ಷ ಕರುಂಬಯ್ಯ, ಅಯಾನ್ ಖಾನ್, ಮೊಹಮ್ಮದ್ ಅಯಾನ್, ಫರ್ಶನ್, ತನ್ವಿತ್, ದಕ್ಷ್, ಅಲುಫ್, ಪಶುಪತಿ ಕಂಚಿನ ಪದಕವನ್ನು ಪಡೆದುಕೊಂಡಿದ್ದಾರೆ. ಇವರು ಕ್ಲಬ್ ನ ಮಾಸ್ಟರ್ ಕುಶಾಲ್ ಕುಮಾರ್ ಅವರಲ್ಲಿ ತರಬೇತಿ ಪಡೆಯುತ್ತಿದ್ದಾರೆ. 

Read More

ಮಡಿಕೇರಿ ಜು.17 : ನಗರದ ಸಂತ ಮೈಕಲರ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಸುಮಾರು 30ಕ್ಕೂ ಹೆಚ್ಚು ವಿಜ್ಞಾನ ವರ್ಕಿಂಗ್ ಮಾಡೆಲ್‍ಗಳ ಪ್ರದರ್ಶನ ಗಮನ ಸೆಳೆಯಿತು. ಕಾಲೇಜಿನ ಪ್ರಾಂಶುಪಾಲ ಕೆ.ಎಸ್.ಸುಮಂತ್ ಕಾರ್ಯಕ್ರಮ ಉದ್ಘಾಟಿಸಿದರು. ಪ್ರೌಢಶಾಲಾ ಮುಖ್ಯೋಪಾಧ್ಯಾಯ ಕೆ.ಎ.ಜಾನ್ಸನ್, ಕೊಡಗು ವಿದ್ಯಾಲಯದ ಪ್ರಾಂಶುಪಾಲರಾದ ಸುಮಿತ್ರ ಹಾಗೂ ಆಡಳಿತ ಮಂಡಳಿ ವ್ಯವಸ್ಥಾಪಕ ರವಿ ಹಾಜರಿದ್ದರು. ತೀರ್ಪುಗಾರರಾಗಿ ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಭೌತಶಾಸ್ತ್ರ ವಿಭಾಗದ ಉಪನ್ಯಾಸಕರಾದ ಪಲ್ಲವಿ, ಸಂತ ಜೋಸೆಫರ ಕಾಲೇಜಿನ ಉಪನ್ಯಾಸಕರಾದ ಎಂ.ಸಿ. ಚೈತ್ರ, ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ಉಪನ್ಯಾಸಕರಾದ ಬಿ.ವಿ.ವೀಕ್ಷಿತ ಪಾಲ್ಗೊಂಡಿದ್ದರು. ವಿದ್ಯಾರ್ಥಿ ಮಾರ್ಗದಶಕರು, ಉಪನ್ಯಾಸಕರಾದ ಟಿ.ಡಿ.ಗಾನವಿ, ಶ್ವೇತ ರುಮಾಲೆ, ಸಿ.ಸಿ.ಶ್ವೇತಾ, ಮನಿಷ ಮೊರಾಸ್ ಸಹಕಾರದೊಂದಿಗೆ ವಿದ್ಯಾರ್ಥಿಗಳು ತ್ರೀಡಿ ಪ್ರಿಂಟರ್, ಡಿ.ಸಿ.ಸ್ಮಾರ್ಟ್‍ಬಿನ್, ಎ.ಸಿ.ಕನ್‍ವರ್ಟರ್, ಟಿಸ್ಲ ಕಾಯಿಲ್, ರೆಕಾರ್ಡ್, ವಿವಿಧ ನೆನ್ಸರ್‍ಗಳು ಜಿಡ್ರೋ ಇಲೆಕ್ಟ್ರಿಸಿಟಿ, ಅರ್ತ್‍ಕ್ವೇಕ್ ಡಿಟೆಕ್ಟರ್, ಮೆಟಲ್ ಡಿಟೆಕ್ಟರ್, ಆ್ಯಂಟಿ ಸ್ಲೀಪ್, ಅಲಾರ್ಮ್‍ಗಳು, ವೀಟ್‍ಸ್ಟನ್ಸ್ ಬ್ರಿಡ್ಜ್, ಕ್ಲಪ್ ಸ್ವಿಚ್, ಲೇಸರ್ ಸೆಕ್ಯುರಿಟಿ ಅಲಾವರ್ಗ್,…

Read More

ಮಡಿಕೇರಿ ಜು.18 : ವಿದ್ಯುತ್ ತಗುಲಿ 19 ಕುರಿಗಳು ಸಾವನ್ನಪಿರುವ ಘಟನೆ ಪಾವಗಡ ತಾಲ್ಲೂಕಿನ ನಾಗಲಮಡಿಕೆ ಹೋಬಳಿ ಶ್ರೀರಂಗಪುರದಲ್ಲಿ ನಡೆದಿದೆ. ಸ್ಥಳೀಯ ರೈತ ಮಂಜುನಾಥ್ ಎಂಬುವವರಿಗೆ ಸೇರಿದ ಕುರಿಗಳನ್ನು ವಿದ್ಯುತ್ ಕಂಬದ ಸಮೀಪದಲ್ಲೇ ಇದ್ದ ಶೆಡ್ ನಲ್ಲಿ ಬಿಡಲಾಗಿತ್ತು. ತಡರಾತ್ರಿ ಧಾರಾಕಾರವಾಗಿ ಮಳೆ ಸುರಿದ ಪರಿಣಾಮ ಶೆಡ್ ಗೆ ವಿದ್ಯುತ್ ಹರಿದು ಕುರಿಗಳು ಸಾವನ್ನಪ್ಪಿವೆ. ಸುಮಾರು 2 ಲಕ್ಷ ರೂ. ನಷ್ಟ ಸಂಭವಿಸಿದ್ದು, ಪರಿಹಾರ ನೀಡಬೇಕೆಂದು ಮಂಜುನಾಥ್ ಮನವಿ ಮಾಡಿದ್ದಾರೆ.

Read More

ಮಡಿಕೇರಿ ಜು.18 : ಮಾಜಿ ಯೋಧ, ಗ್ರಾ.ಪಂ ಮಾಜಿ ಸದಸ್ಯ ಹಾಗೂ ಹಾಕಿ ಪಟು ಎಂ.ಪಿ.ಪೂಣಚ್ಚ(61) ಅವರು ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ. ಹುಣಸೂರು ತಾಲ್ಲೂಕಿನ ಹನಗೋಡು ಹೋಬಳಿಯ ಕೆ.ಜಿ.ಹಬ್ಬನಕುಪ್ಪೆಯ ನಿವಾಸಿ ಪೂಣಚ್ಚ ಅವರು ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

Read More

ಮಡಿಕೇರಿ ಜು.18 : ಜಿಲ್ಲಾಧಿಕಾರಿ ಕಚೇರಿ ತಡೆಗೋಡೆ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತದ ಕಾರ್ಯಪಾಲಕ ಅಭಿಯಂತರರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಕೋಟ್ಯಾಂತರ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ತಡೆಗೋಡೆ ಕಾಮಗಾರಿ ಕಳಪೆ ಎಂದು ಆರೋಪಿಸಿ ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಅಭಿಯಂತರರು ಹಾಗೂ ಕಿರಿಯ ಅಭಿಯಂತರರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ತೆನ್ನಿರ ಮೈನಾ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು. ದೂರಿಗೆ ಸಂಬಂಧಿಸಿದಂತೆ ಲೋಕಾಯುಕ್ತ ತನಿಖಾಧಿಕಾರಿಗಳು ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದರು.

Read More

ಮಡಿಕೇರಿ ಜು.18 :  ಜೀವನದಲ್ಲಿ ಸುಖ, ದುಃಖ, ನೋವು ನಲಿವು ಸಹಜ. ಗೆದ್ದಾಗ ಬೀಗದೆ, ಸೋತಾಗ ಕುಗ್ಗದೆ ಇರುವವನು ಸ್ಥಿತಪ್ರಜ್ಞ. ಎಂದರೆ ಸ್ಥಿರವಾದ ಬುದ್ದಿಯುಳ್ಳವ, ಶಾಂತಚಿತ್ತತೆಯನ್ನು ಹೊಂದಿರುವವ, ರಾಗ ದ್ವೇಷ ರಹಿತ, ಸುಖ ಹಾಗೂ ದುಃಖಗಳಲ್ಲಿ ವಿಚಲಿತನಾಗದ, ಯಾವಾಗಲೂ ಸಂತೃಪ್ತಿಯನ್ನು ಹೊಂದಿರುವವ ಹಾಗೂ ಆನಂದವನ್ನು ಹೊಂದಿರುವವನು . ಇದು ಎಲ್ಲರಿಗೂ ಸಾಧ್ಯವಿಲ್ಲದ ಮಾತು. ನಮ್ಮ ಕಷ್ಟ ಕಾರ್ಪಣ್ಯಗಳಿಗೆ ಪ್ರತಿಯೊಬ್ಬರೂ ಒಂದೊಂದು ತರಹ ಸ್ಪಂದಿಸುತ್ತಾರೆ. ಕೆಲವು ಭಾವುಕರು ಅತಿಯಾಗಿ ಸ್ಪಂದಿಸುವುದು ನೋವಿಗೆ ಮತ್ತು ದುಃಖಕ್ಕೆ. ಇದರ ಶಮನಕ್ಕೆ ಹೆಚ್ಚಿನವರು ಮೊದಲು ಉಪಯೋಗಿಸುವುದು ಮದ್ಯ ಪಾನ, ಇನ್ನು ಕೆಲವರು ಕಷ್ಟ ಪಟ್ಟು ದೊರಕಿಸಿದ ಮಾದಕ ದ್ರವ್ಯಗಳು. ಮೊದಲು ತತ್ಕಾಲಕ್ಕೆ ಅದನ್ನು ಉಪಯೋಗಿಸುವ ಇವರು ಕೊನೆಗೆ ಅದರ ಹಿಡಿತಕ್ಕೆ ಸಿಲುಕಿ ಹೋಗುವರು. ಕುಡಿತ, ಮಾದಕಗಳಲ್ಲಿ ಮೊದಲು ನೀವು ಅದನ್ನು ಕುಡಿಯುವಿರಿ , ಸೇವಿಸುವಿರಿ. ಆದರೆ ನಂತರದ ದಿನಗಳಲ್ಲಿ ಅದು ನಿಮ್ಮನ್ನೇ ದಾಸರನ್ನಾಗಿಸಿ, ನಿಮ್ಮನ್ನು ಅದರ ಹಿಡಿತದಲ್ಲಿ ಇಟ್ಟು ಕೊಳ್ಳುತ್ತದೆ. ಒಮ್ಮೆ ಆ ಚಕ್ರವ್ಯೂಹದ ಒಳ ಹೊಕ್ಕರೆ,ಅದರಿಂದ…

Read More

ಕಡಂಗ ಜು.18 :   ಕಡಂಗ ಬದ್ರಿಯಾ ಸುನ್ನೀ ಮುಸ್ಲಿಂ ಜಮಾಅತ್ ನ ವಾರ್ಷಿಕ ಮಹಾಸಭೆ ಸ್ಥಳೀಯ ಬದ್ರಿಯಾ ಮದರಸ  ಸಭಾಂಗಣದಲ್ಲಿ ನಡೆಯಿತು. ಹುಸೈನ್ ಸಖಾಫಿ ಎಮ್ಮೆಮಾಡು ಅಧ್ಯಕ್ಷತೆಯಲ್ಲಿ ನಡೆದ  ಸಭೆಯನ್ನು ಸ್ಥಳೀಯ ಮಸೀದಿಯ ಖತೀಬ್ ಇಸ್ಮಾಯಿಲ್ ಲತೀಫಿ ಉದ್ಘಾಟಿಸಿದರು.  ಪ್ರಾರ್ಥನೆಯನ್ನು ಕೊಡಗು ಜಿಲ್ಲಾ ನಾಇಬ್ ಖಾಝಿ ಶಾದುಲಿ ಫೈಝಿ ನೆರವೇರಿಸಿದರು. ನಂತರ ಹಲವಾರು ಚರ್ಚೆಗಳು ನಡೆದು ಅದಕ್ಕೆ ಜಮಾಅತ್ ಅಧ್ಯಕ್ಷ ಸುಲೈಮಾನ್ ಪ್ರತಿಕ್ರಿಯೆಸಿ ಉತ್ತರಿಸಿದರು. ಅಬ್ದುಲ್ ಸಲಾಂ  ಸ್ವಾಗತಿಸಿದರು. ಕಾರ್ಯದರ್ಶಿ ಆಶಿಕ್  ವರದಿ ವಾಚಿಸಿದರು. ಜೊತೆ ಕಾರ್ಯದರ್ಶಿ ನೌಶಾದ್ ಲೆಕ್ಕ ಪತ್ರವನ್ನು ಮಂಡಿಸಿದರು. ನಂತರ 2023-24 ಸಾಲಿನ ನೂತನ ಆಡಳಿತ ಮಂಡಳಿಯ ಆಯ್ಕೆ ಪ್ರಕ್ರಿಯೆ ನಡೆಯಿತು. ಅಧ್ಯಕ್ಷರಾಗಿ ಅಬ್ದುಲ್ ರೆಹಮಾನ್ ಅರಫಾ, ಉಪಾಧ್ಯಕ್ಷರಾಗಿ ಕೆ.ಇ.ಉಸ್ಮಾನ್, ಪ್ರಧಾನ ಕಾರ್ಯದರ್ಶಿಯಾಗಿ ಯು.ಇ.ರಾಶೀದ್, ಕೋಶಾಧಿಕಾರಿ  ಸಿ.ಎ.ರಜಾಕ್,  ಜೊತೆ ಕಾರ್ಯದರ್ಶಿ ಎಂ.ಬಿ.ನೌಫಲ್ ಹಾಗೂ ಕಾರ್ಯಕಾರಿಣಿ ಸದಸ್ಯರಾಗಿ ಹಾಶಿಮ್, ಕರೀಂ, ಅಶ್ರಫ್, ಸುಹೈಲ್, ರಝಕ್ ಕೆ.ಎ.ಸಹದ್ ಅವರನ್ನು ಆಯ್ಕೆ ಮಾಡಲಾಯಿತು. ನಿರೂಪಣೆಯನ್ನು ಅಶ್ರಫ್ ಹಾಗೂ ರಶೀದ್ ಐಬಿಎಂ ನೆರವೇರಿಸಿದರು. ವರದಿ :…

Read More

ಬೆಂಗಳೂರು, ಜು 18: ಹಿರಿಯ ರಾಜಕೀಯ ಮುತ್ಸದ್ದಿ ಕೇರಳ ರಾಜ್ಯದ ಮಾಜಿ ಮುಖ್ಯಮಂತ್ರಿ‌ ಉಮ್ಮನ್ ಚಾಂಡಿ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ನನಗೆ ಅತ್ಯಂತ ಆತ್ಮೀಯರಾಗಿದ್ದ ಉಮ್ಮನ್ ಚಾಂಡಿಯವರ ನಿಧನದ ಸುದ್ದಿ ಆಘಾತಕಾರಿ. ಕೇರಳ‌ ರಾಜ್ಯವನ್ನು ಮಾನವ ಅಭಿವೃದ್ಧಿಯ ಸೂಚ್ಯಂಕಗಳಲ್ಲಿ ಉನ್ನತ ಸ್ಥಾನದಲ್ಲಿ ಇರಿಸಲು ಕಾರಣರಾದ ಮುಖ್ಯಮಂತ್ರಿಗಳಲ್ಲಿ  ಉಮ್ಮನ್ ಚಾಂಡಿ ಕೂಡ ಒಬ್ಬರಾಗಿದ್ದರು. ಎರಡು ಬಾರಿ ಕೇರಳ ರಾಜ್ಯದ ಮುಖ್ಯಮಂತ್ರಿಗಳಾಗಿ ಅಪಾರ ಸಾಧನೆ ಮಾಡಿದವರಾಗಿದ್ದರು. 2004 ರಿಂದ 2006 ಮತ್ತು 2011 ರಿಂದ 2016 ರವರೆಗೆ ಕೇರಳದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿ, ಕೇರಳ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ನಿರಂತರವಾಗಿ ಸಂವಿಧಾನದ ಆಶಯಗಳ, ಮೌಲ್ಯಗಳ‌ ರಕ್ಷಣೆಗೆ ಶ್ರಮಿಸಿ ಹೋರಾಟ ರಾಜಕಾರಣದ ಪರಂಪರೆಯನ್ನು ಪರಿಣಾಮಕಾರಿಯಾಗಿ ಮುನ್ನಡೆಸುತ್ತಿದ್ದರು. 1970 ರಿಂದ ಕೇರಳ ರಾಜ್ಯ ವಿಧಾನಸಭೆಗೆ ನಿರಂತರವಾಗಿ ಆಯ್ಕೆಯಾಗುತ್ತಾ ಅತ್ಯಂತ ದೀರ್ಘಾವಧಿ ಶಾಸಕರಾಗಿ ಪುತ್ತುಪ್ಪಲ್ಲಿ ಕ್ಷೇತ್ರವನ್ನು ಪ್ರತಿನಿಧಿಸುತ್ತಾ ಬಂದಿದ್ದರು. ವಿಶ್ವಸಂಸ್ಥೆಯಿಂದ ಸಾರ್ವಜನಿಕ ಸೇವೆಗಾಗಿ ಪ್ರಶಸ್ತಿಯನ್ನು ಗಳಿಸಿದ…

Read More

ಮಡಿಕೇರಿ ಜು.18 :  ಸಿದ್ದಾಪುರ ಸಮೀಪದ ಗುಹ್ಯ ಗ್ರಾಮದಲ್ಲಿ ಕಾಡಾನೆ ಹಿಂಡು ಬೀಡುಬಿಟ್ಟಿದ್ದು, ಗ್ರಾಮಸ್ಥರು ಆತoಕಗೊಂಡಿದ್ದಾರೆ.  26ಕ್ಕೂ ಹೆಚ್ಚು ಕಾಡಾನೆಗಳಿರುವ ಹಿಂಡನ್ನು ಅರಣ್ಯ ಸಿಬ್ಬಂದಿಗಳು ಕಾಡಿಗೆ ಹಟ್ಟಿಸುವ ಪ್ರಯತ್ನ ಇಂದು ಮುಂದುವರೆಯಿತು. 14 ಅರಣ್ಯ ಸಿಬ್ಬಂದಿಗಳ ಕಾರ್ಯಾಚರಣೆಯಲ್ಲಿ 18ಕ್ಕೂ ಕಾಡಾನೆಯ ಹಿಂಡುನ್ನು ಬೀಟಿ ಕಾಡಿಗೆ ಅಟ್ಟಿಸಲಾಯಿತು. ಉಳಿದ ಕಾಡಾನೆಗಳ  ಕಾರ್ಯಚರಣೆ ಮುಂದುವರಿಸಲಾಗುವುದು ಎಂದು ಅರಣ್ಯ ವಲಯ ಅರಣ್ಯ ಅಧಿಕಾರಿ ಕೆ.ಎಂ.ದೇವಯ್ಯ ತಿಳಿಸಿದ್ದಾರೆ. ವರದಿ : ಗುಹ್ಯ ಸುರೇಶ್ 

Read More