ಮಡಿಕೇರಿ ಆ.14 : ನಾಡಿನ ಸಮಸ್ತ ಜನತೆಗೆ 77 ನೇ ಸ್ವಾತಂತ್ರ್ಯೋತ್ಸವದ ಶುಭಾಶಯಗಳು. ಶಾಂತಿ, ಸಹಬಾಳ್ವೆಯಿಂದ ದೇಶ ಕಟ್ಟೋಣ, ದೇಶದ ಪ್ರಗತಿಗಾಗಿ ಶ್ರಮಿಸೋಣ. (ಕೆ.ಜಿ.ಪೀಟರ್, ಅಧ್ಯಕ್ಷರು, ಅಲ್ಪಸಂಖ್ಯಾತರ ಘಟಕ, ಮಡಿಕೇರಿ ನಗರ ಕಾಂಗ್ರೆಸ್)
ಲೇಖಕ: admin
ಮಡಿಕೇರಿ ಆ.14 : ನಾಡಿನ ಸಮಸ್ತ ಜನತೆಗೆ 77 ನೇ ಸ್ವಾತಂತ್ರ್ಯೋತ್ಸವದ ಶುಭಾಶಯಗಳು. ದೇಶದ ಪ್ರಗತಿ ಮತ್ತು ಸಮಗ್ರತೆಗಾಗಿ ಒಗ್ಗಟ್ಟಿನಿಂದ ಶ್ರಮಿಸೋಣ. (ಎನ್.ಬಾಲಚಂದ್ರನ್ ನಾಯರ್, ಅಧ್ಯಕ್ಷರು, ಕರಿಕೆ ಗ್ರಾಮ ಪಂಚಾಯ್ತಿ)
ಮಡಿಕೇರಿ ಆ .14 : ಮಾನವನ ಅತ್ಯಂತ ಉತ್ತಮ ಜೀವನಕ್ಕೆ ಹನ್ನೆರಡನೇ ಶತಮಾನದ ಬಸವಾದಿ ಶರಣರ ವಚನಗಳು ಕೈಗನ್ನಡಿ ಇದ್ದಂತೆ. ವಚನಗಳ ಸಾರವನ್ನು ಅನುಸರಿಸಿ ನಡೆದದ್ದೇ ಆದಲ್ಲಿ ಮನುಷ್ಯನ ಜೀವನ ಪಾವನವಾಗುತ್ತದೆ ಎಂದು ಕುಶಾಲನಗರದ ಮಹಾತ್ಮ ಗಾಂಧಿ ಪದವಿ ಕಾಲೇಜಿನ ಉಪನ್ಯಾಸಕ ಕೆ.ಆರ್.ಮಂಜೇಶ್ ಹೇಳಿದರು. ಕೊಡಗು ಜಿಲ್ಲಾ ವಚನ ಸಾಹಿತ್ಯ ವೇದಿಕೆ ವತಿಯಿಂದ ಬಸವನಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ” ಶಾಲಾ ಕಾಲೇಜುಗಳೆಡೆಗೆ ವಚನ ಸಾಹಿತ್ಯದ ನಡಿಗೆ ” ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪ್ರವಚನ ನೀಡಿದ ಅವರು, ಜಗತ್ತಿನ ಮತ್ತು ಮಾನವ ಕುಲದ ಕಲ್ಯಾಣಕ್ಕಾಗಿ ಅನುಭವ ಮಂಟಪದಲ್ಲಿ ಅಲ್ಲಮಪ್ರಭು, ದೇವರ ದಾಸಿಮಯ್ಯ, ಅಕ್ಕಮಹಾದೇವಿ, ಅಂಬಿಗರ ಚೌಡಯ್ಯ, ಹಡಪದ ಅಪ್ಪಣ್ಣ, ಮೋಳಿಗೆ ಮಾರಯ್ಯ ಸೇರಿದಂತೆ ಹಲವು ಜಾತಿಯ ಶರಣರು ರಚಿಸಿದ ವಚನಗಳು ಅಂದು ಬಹು ದೊಡ್ಡ ಚಳುವಳಿಯನ್ನೇ ಉಂಟುಮಾಡಿ ಅಂಧಕಾರದಲ್ಲಿದ್ದ ಜನರ ಬದುಕಿಗೆ ಬೆಳಕಾದವು. ಹಾಗೆಯೇ ಸತ್ಯ ಶುದ್ಧ ಕಾಯಕದೊಂದಿಗೆ ಶರಣರು ಸುಸಂಸ್ಕ್ರತ ಸಮಾಜ ನಿರ್ಮಾಣದ ಬಗ್ಗೆ ನಡೆಸಿದ ಹೋರಾಟದ…
ಮಡಿಕೇರಿ ಆ.14 : ಕೊಡಗಿನ ಜನತೆಗೆ 77 ನೇ ಸ್ವಾತಂತ್ರ್ಯೋತ್ಸವದ ಶುಭಾಶಯಗಳು. ದೇಶದ ಅಭಿವೃದ್ಧಿಗಾಗಿ ನಾವೆಲ್ಲರೂ ಶ್ರಮಿಸೋಣ. (ಅನಿತಾ ಪೂವಯ್ಯ, ಅಧ್ಯಕ್ಷರು, ಮಡಿಕೇರಿ ನಗರಸಭೆ)
ಮಡಿಕೇರಿ ಆ.14 : ಕೊಡಗು ಪತ್ರಕರ್ತರ ಸಂಘದ ಕುಶಾಲನಗರ ತಾಲೂಕು ಘಟಕದ ವತಿಯಿಂದ ಮಾದಾಪುರದ ಶ್ರೀಮತಿ ಡಿ.ಚೆನ್ನಮ್ಮ ಶಿಕ್ಷಣ ಸಂಸ್ಥೆಯಲ್ಲಿ ವಿಶ್ವ ಛಾಯಾಗ್ರಹಣ ದಿನಾಚರಣೆ ಅಂಗವಾಗಿ ಆ.18ರಂದು ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮ ಆಯೋಜಿಸಲಾಗಿದೆ. ಕಾರ್ಯಕ್ರಮವನ್ನು ವಿರಾಜಪೇಟೆಯ ಖ್ಯಾತ ಪಕ್ಷಿ ಛಾಯಾಗ್ರಾಹಕರು, ಲೇಖಕರಾದ ಡಾ.ಎಸ್.ವಿ.ನರಸಿಂಹನ್ ಉದ್ಘಾಟಿಸಲಿದ್ದಾರೆ. ಶ್ರೀಮತಿ ಡಿ.ಚೆನ್ನಮ್ಮ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಕರ್ನಲ್ ಬಿ.ಜಿ.ವಿ ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಎ. ಮುರುಳೀಧರ್, ಡಿ.ಚೆನ್ಮಮ್ಮ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಮಂದಪ್ಪ, ಮುಖ್ಯ ಶಿಕ್ಷಕಿ ರೇವತಿ, ಕುಶಾಲನಗರ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ವಿಘ್ನೇಶ್ ಭೂತನಕಾಡು ಪಾಲ್ಗೊಳ್ಳಲಿದ್ದಾರೆ. ವಿಶ್ವ ಛಾಯಾಗ್ರಹಣ ದಿನಾಚರಣೆ ಅಂಗವಾಗಿ ಕುಶಾಲನಗರ ತಾಲೂಕಿನ ಛಾಯಾಗ್ರಾಹಕರಾದ ಎಂ.ಬಿ. ವಿನ್ಸೆಂಟ್, ವಿಶ್ವಕುಮಾರ್ ಅವರನ್ನು ಸನ್ಮಾನಿಸಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಆಯೋಜಿತ ಛಾಯಾಚಿತ್ರ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮತ್ತು ಆಯ್ದ ಛಾಯಾಚಿತ್ರಗಳ ಪ್ರದರ್ಶನ ಆಯೋಜಿಸಲ್ಪಟ್ಟಿದೆ.
ಮಡಿಕೇರಿ ಆ.14 : ಮಹಾತ್ಮ ಗಾಂಧಿ ಗ್ರಾಮಾಭಿವೃದ್ದಿ ಸಂಘ, ಗೌಡಳ್ಳಿ ಗ್ರಾ.ಪಂ ವತಿಯಿಂದ ನರೇಗಾ ಯೋಜನೆಯಡಿ ಹೆಗ್ಗಳ ಗ್ರಾಮದಲ್ಲಿ ” ವಸುಧಾ ವಟಿಕ “ಕಾರ್ಯಕ್ರಮದಡಿಯಲ್ಲಿ 75 ಗಿಡಗಳನ್ನು ನೆಡಲಾಯಿತು. ಕಾರ್ಯಕ್ರಮದಲ್ಲಿ ಗ್ರಾ.ಪಂಚಾಯಿತಿ ಅಧ್ಯಕ್ಷ ನವೀನ್ ಅಜ್ಜಳ್ಳಿ, ಗ್ರಾಮಾಧ್ಯಕ್ಷ ಉದಯಕುಮಾರ, ಅಭಿವೃದ್ಧಿ ಅಧಿಕಾರಿ ಲಿಖಿತ, ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಲತಾಬಸವರಾಜು, ಗ್ರಾಮಸ್ಥರು, ಮತ್ತು ಗ್ರಾ. ಪಂ ಸಿಬ್ಬಂದಿವರ್ಗದವರು ಹಾಜರಿದ್ದರು.
ಮಡಿಕೇರಿ ಆ.14 : ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಗೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಭೋಸರಾಜು ಹಾಗೂ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಭೇಟಿ ನೀಡಿದರು. ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿರುವ ರೋಗಿಗಳ ಕುಶಲೋಪರಿ ವಿಚಾರಿಸಿ ವೈದ್ಯಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು. ಇದೇ ಸಂದರ್ಭ ಗ್ರಾಮೀಣ ಪ್ರದೇಶ ಹೆಚ್ಚಾಗಿರುವ ಈ ಭಾಗದಲ್ಲಿ ಆಸ್ಪತ್ರೆಗೆ ಇನ್ನೂ ಹೆಚ್ಚಿನ ವೈದ್ಯಕೀಯ ಯಂತ್ರೋಪಕರಣ ಗಳನ್ನು ಅಳವಡಿಸಿ, ಜನತೆಗೆ ಅನುಕೂಲ ಮಾಡಿಕೊಡುವಂತೆ ಶಾಸಕರು ಸಚಿವರಿಗೆ ಮನವಿ ಮಾಡಿದರು. ಉಸ್ತುವಾರಿ ಸಚಿವರು ಈ ಬಗ್ಗೆ ಪೂರಕವಾಗಿ ಸ್ಪಂದಿಸಿ ಸರಕಾರದ ಮಟ್ಟದಲ್ಲಿ ಗಮನ ಸೆಳೆಯುವುದಾಗಿ ಭರವಸೆ ನೀಡಿದರು.
ಮಡಿಕೇರಿ ಆ.14 : ಅಲ್ಪಸಂಖ್ಯಾತರ ನಿರ್ದೇಶನಾಲಯ, ಬೆಂಗಳೂರು ವತಿಯಿಂದ 2023-24 ನೇ ಸಾಲಿನಲ್ಲಿ ಅಲ್ಪಸಂಖ್ಯಾತ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಪಾರ್ಸಿ, ಜೈನ್, ಬೌದ್ಧ ಸಮುದಾಯದ ಕಾನೂನು ಪದವೀಧರರಿಗೆ ನುರಿತ ವಕೀಲರಿಂದ ತರಬೇತಿ ನೀಡಲು ಮಾಸಿಕ ರೂ.5 ಸಾವಿರಗಳ ತರಬೇತಿ ಭತ್ಯೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್, 11 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ಅಲ್ಪಸಂಖ್ಯಾತರ ಇಲಾಖಾ ಕಚೇರಿಯನ್ನು ಹಾಗೂ ಇಲಾಖಾ ವೆಬ್ಸೈಟ್ www.dom.karnataka.gov.in ನ್ನು ಮತ್ತು ಕಚೇರಿ ದೂ.ಸಂ.08272-225528/ 220214 ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕರಿ ಬಿ.ಎಂ.ದಿವಾಕರ ತಿಳಿಸಿದ್ದಾರೆ.
ಮಡಿಕೇರಿ ಆ.14 : ಕರ್ನಾಟಕ ಸರ್ಕಾರ, ಇಂಧನ ಇಲಾಖೆ, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ವತಿಯಿಂದ ಆ.15 ರಂದು ಮಧ್ಯಾಹ್ನ 12.30 ಗಂಟೆಗೆ ನಗರದ ಅಂಬೇಡ್ಕರ್ ಭವನದಲ್ಲಿ ಉಚಿತ ಬೆಳಕು, ಸುಸ್ಥಿರ ಬದುಕು `ಗೃಹ ಜ್ಯೋತಿ ಯೋಜನೆಗೆ ಚಾಲನೆ’ ದೊರೆಯಲಿದೆ. ಸಣ್ಣ ನೀರಾವರಿ ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು, ಶಾಸಕ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕ ಎ.ಎಸ್.ಪೊನ್ನಣ್ಣ, ಲೋಕಸಭಾ ಸದಸ್ಯ ಪ್ರತಾಪ್ ಸಿಂಹ, ಕರ್ನಾಟಕ ವಿಧಾನ ಪರಿಷತ್ ಶಾಸಕ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ನಗರಸಭೆ ಅಧ್ಯಕ್ಷರಾದ ಎನ್.ಪಿ.ಅನಿತಾ, ಸರ್ಕಾರದ ಕಾರ್ಯದರ್ಶಿಗಳು, ಸಾರಿಗೆ ಇಲಾಖೆ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ವರ್ಣಿತ್ ನೇಗಿ ಅವರು ಪಾಲ್ಗೊಳ್ಳಲಿದ್ದಾರೆ. ಮೈಸೂರು ಚಾ.ವಿ.ಸ.ನಿ.ನಿ. ವ್ಯವಸ್ಥಾಪಕ ನಿರ್ದೇಶಕ ಸಿ.ಎನ್.ಶ್ರೀಧರ, ನಿರ್ದೇಶಕ (ತಾಂತ್ರಿಕ) ಕೆ.ವಿ.ಉಮೇಶ್ಚಂದ್ರ, ಮುಖ್ಯ ಎಂಜಿನಿಯರ್(ವಿ) ಕೆ.ಎಂ.ಮಹದೇವಸ್ವಾಮಿ ಪ್ರಸನ್ನ, ಮುಖ್ಯ…
ಮಡಿಕೇರಿ, ಆ.14 : ಸರ್ಕಾರದ ಗೃಹಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳ ಖಾತೆಗೆ ನಗದು ಸೌಲಭ್ಯವನ್ನು ವರ್ಗಾವಣೆ ಮಾಡುವ ಪ್ರಯುಕ್ತ ಆ.17 ರಂದು ಕುಶಾಲನಗರ ಪುರಸಭೆ ವ್ಯಾಪ್ತಿಯ 1 ನೇ ಬ್ಲಾಕ್ ಕಾವೇರಿ ಬಡಾವಣೆಯಲ್ಲಿರುವ ಕಾವೇರಿ ಕಲಾಭವನ, 1ನೇ ಬ್ಲಾಕ್ ಇಂದಿರಾ ಬಡಾವಣೆಯಲ್ಲಿರುವ ದಾರೂಲ್ ಉಲುಂ ಸಮುದಾಯ ಭವನ, 3ನೇ ಬ್ಲಾಕ್ ತ್ಯಾಗರಾಜ ರಸ್ತೆಯಲ್ಲಿರುವ ಗಾಯತ್ರಿ ಕಲ್ಯಾಣ ಮಂಟಪ, 4 ನೇ ಬ್ಲಾಕ್ನಲ್ಲಿರುವ ಗೌಡ ಸಮಾಜ ಕಲ್ಯಾಣ ಮಂಟಪದಲ್ಲಿ ಗೃಹಲಕ್ಷ್ಮೀ ಯೋಜನೆಯ ನೋಂದಣಿ ಕಾರ್ಯಕ್ರಮ ನಡೆಯಲಿದೆ. ಆದ್ದರಿಂದ ಕುಶಾಲನಗರ ಪುರಸಭೆ ವ್ಯಾಪ್ತಿಯ ಸಾರ್ವಜನಿಕರು ಇದರ ಸದುಪಯೋಗಪಡಿಸಿಕೊಳ್ಳುವಂತೆ ಕುಶಾಲನಗರ ಪುರಸಭೆಯ ಮುಖ್ಯಾಧಿಕಾರಿ ಕೃಷ್ಣಪ್ರಸಾದ್ ತಿಳಿಸಿದ್ದಾರೆ.






