ಲೇಖಕ: admin

ಮಡಿಕೇರಿ ಜು.15 : ಸರ್ವರಿಗೂ ಸಮಪಾಲು ಸೂತ್ರದಡಿ ಜನಪರವಾಗಿ ಕಾರ್ಯನಿರ್ವಹಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯ ಸರ್ಕಾರ ಕರ್ನಾಟಕ ಕ್ರಿಶ್ಚಿಯನ್ ಅಭಿವೃದ್ಧಿ ನಿಗಮ ಸ್ಥಾಪಿಸಿರುವುದು ಸ್ವಾಗತಾರ್ಹ ಕ್ರಮವಾಗಿದೆ ಎಂದು ಮಡಿಕೇರಿ ನಗರ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕದ ನಗರಾಧ್ಯಕ್ಷ ಕೆ.ಜಿ.ಪೀಟರ್ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕ್ರೈಸ್ತ ಸಮುದಾಯದ ಕಳೆದ ಹಲವು ವರ್ಷಗಳ ಬೇಡಿಕೆಗೆ ಸ್ಪಂದಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ನಲ್ಲಿ ನಿಗಮವನ್ನು ಘೋಷಿಸಿ 100 ಕೋಟಿ ರೂ. ಅನುದಾನವನ್ನು ಮೀಸಲಿಟ್ಟಿರುವುದು ಶ್ಲಾಘನಾರ್ಹ ಎಂದು ಹೇಳಿದ್ದಾರೆ. ಪ್ರತ್ಯೇಕ ನಿಗಮ ಸ್ಥಾಪನೆಯಿಂದ ಹಿಂದುಳಿದಿರುವ ಕ್ರೈಸ್ತರ ಅಭ್ಯುದಯಕ್ಕೆ ಸಹಕಾರಿಯಾಗಲಿದೆ. ಶೈಕ್ಷಣಿಕ ಪ್ರಗತಿಗೂ ಪೂರಕವಾಗಿದೆ ಮತ್ತು ಕ್ರೈಸ್ತ ಮಂದಿರಗಳ ಅಭಿವೃದ್ಧಿಯೂ ಆಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಕ್ರಿಶ್ಚಿಯನ್ ಅಭಿವೃದ್ಧಿ ನಿಗಮ ಸ್ಥಾಪನೆಗೆ ಕಾರಣಕರ್ತರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದ್ದಾರೆ. ಅಲ್ಪಸಂಖ್ಯಾತ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡಲು 60 ಕೋಟಿ ರೂ.ಗಳನ್ನು ಕಾಯ್ದಿರಿಸಲಾಗಿದೆ. ಪ್ರಸಕ್ತ…

Read More

ಮಡಿಕೇರಿ ಜು.14 : ಅಮ್ಮತ್ತಿಯ ಪುಲ್ಲೇರಿ ಗ್ರಾಮದ ಇಂಜಿಲಗೆರೆಯಲ್ಲಿ ಒಂಟಿ ಸಲಗ ದಾಂಧಲೆ ನಡೆಸಿದೆ. ಸ್ಥಳೀಯ ಬೆಳೆಗಾರ ಬಿ.ಎಸ್.ಮೋಹನ ಎಂಬುವವರ ತೋಟಕ್ಕೆ ಲಗ್ಗೆ ಇಟ್ಟ ಕಾಡಾನೆ ಹಲಸಿನ ಮರವೊಂದನ್ನು ಬೀಳಿಸಿದೆ. ಮರ ಬಿದ್ದ ಪರಿಣಾಮ ಅನೇಕ ಕಾಫಿ ಗಿಡಗಳಿಗೆ ಹಾನಿಯಾಗಿದೆ. ಮರಕ್ಕೆ ಹಬ್ಬಿಸಲಾಗಿದ್ದ ಕಾಳುಮೆಣಸಿನ ಬಳ್ಳಿ ನಾಶವಾಗಿದೆ. ಸ್ಪಿಂಕ್ಲರ್ ಪೈಪ್ ಗಳು ಮುರಿದು ಹೋಗಿವೆ, ಬಾಳೆ ಗಿಡಗಳನ್ನು ಆನೆ ತಿಂದು ತೇಗಿದೆ. ಒಂಟಿ ಸಲಗ ತೋಟದ ತುಂಬೆಲ್ಲ ಓಡಾಡಿದ ಪರಿಣಾಮ ಗಿಡಗಳೆಲ್ಲವೂ ಹಾನಿಗೊಳಗಾಗಿದ್ದು, ಅಪಾರ ನಷ್ಟ ಉಂಟಾಗಿದೆ. ಕಾಡಾನೆ ದಾಳಿ ಬಗ್ಗೆ ಬೇಸರ ವ್ಯಕ್ತಪಡಿಸಿರುವ ಬೆಳೆಗಾರ ಮೋಹನ ನಮ್ಮಂತಹ ಸಣ್ಣ ಬೆಳೆಗಾರರಿಗೆ ಇದು ತುಂಬಲಾರದ ನಷ್ಟವಾಗಿದೆ ಎಂದರು. ಪರಿಹಾರಕ್ಕಾಗಿ ಇಲಾಖೆಯಿಂದ ಇಲಾಖೆಗೆ ಅರ್ಜಿ ಹಿಡಿದು ಅಲೆದಾಡಬೇಕಾಗಿದೆ. ಇದರಿಂದ ನಮ್ಮ ಸಮಯವೂ ವ್ಯರ್ಥ, ಹಣವೂ ವ್ಯರ್ಥ, ಪರಿಹಾರವೂ ಅಲ್ಪ ಮೊತ್ತದ್ದಾಗಿರುತ್ತದೆ ಎಂದು ಅಸಹಾಯಕತೆ ವ್ಯಕ್ತಪಡಿಸಿದರು. ಕಾಡಾನೆ ದಾಳಿ ಮಾಡಿದಾಗ ಅಲ್ಪ ಪರಿಹಾರ ನೀಡಿ ಕಣ್ಣೊರೆಸುವ ಬದಲು ವನ್ಯಜೀವಿಯ ಉಪಟಳ ತಡೆಗೆ ಶಾಶ್ವತ ಪರಿಹಾರ…

Read More

ಮಡಿಕೇರಿ ಜು.15 : ಸರ್ವರಿಗೂ ಸಮಪಾಲು ಸೂತ್ರದಡಿ ಜನಪರವಾಗಿ ಕಾರ್ಯನಿರ್ವಹಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯ ಸರ್ಕಾರ ಕರ್ನಾಟಕ ಕ್ರಿಶ್ಚಿಯನ್ ಅಭಿವೃದ್ಧಿ ನಿಗಮ ಸ್ಥಾಪಿಸಿರುವುದು ಸ್ವಾಗತಾರ್ಹ ಕ್ರಮವಾಗಿದೆ ಎಂದು ಮಡಿಕೇರಿ ನಗರ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕದ ನಗರಾಧ್ಯಕ್ಷ ಕೆ.ಜಿ.ಪೀಟರ್ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕ್ರೈಸ್ತ ಸಮುದಾಯದ ಕಳೆದ ಹಲವು ವರ್ಷಗಳ ಬೇಡಿಕೆಗೆ ಸ್ಪಂದಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ನಲ್ಲಿ ನಿಗಮವನ್ನು ಘೋಷಿಸಿ 100 ಕೋಟಿ ರೂ. ಅನುದಾನವನ್ನು ಮೀಸಲಿಟ್ಟಿರುವುದು ಶ್ಲಾಘನಾರ್ಹ ಎಂದು ಹೇಳಿದ್ದಾರೆ. ಪ್ರತ್ಯೇಕ ನಿಗಮ ಸ್ಥಾಪನೆಯಿಂದ ಹಿಂದುಳಿದಿರುವ ಕ್ರೈಸ್ತರ ಅಭ್ಯುದಯಕ್ಕೆ ಸಹಕಾರಿಯಾಗಲಿದೆ. ಶೈಕ್ಷಣಿಕ ಪ್ರಗತಿಗೂ ಪೂರಕವಾಗಿದೆ ಮತ್ತು ಕ್ರೈಸ್ತ ಮಂದಿರಗಳ ಅಭಿವೃದ್ಧಿಯೂ ಆಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಕ್ರಿಶ್ಚಿಯನ್ ಅಭಿವೃದ್ಧಿ ನಿಗಮ ಸ್ಥಾಪನೆಗೆ ಕಾರಣಕರ್ತರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದ್ದಾರೆ. ಅಲ್ಪಸಂಖ್ಯಾತ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡಲು 60 ಕೋಟಿ ರೂ.ಗಳನ್ನು ಕಾಯ್ದಿರಿಸಲಾಗಿದೆ. ಪ್ರಸಕ್ತ…

Read More

ಬೆಂಗಳೂರು: ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್​ ಘೋಷಿಸಿದ್ದ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಜು.19ರಿಂದ ಆರಂಭವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ‌ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಗ್ರಾಮ ಒನ್ ಅಥವಾ ಬಾಪೂಜಿ ಸೇವಾ ಕೇಂದ್ರ, ಕರ್ನಾಟಕ ಒನ್, ಬಿಬಿಎಂಪಿ ವಾರ್ಡ್ ಕಚೇರಿ ಕೇಂದ್ರಗಲ್ಲಿ ಅರ್ಜಿ ಸಲ್ಲಿಸಬಹುದು ಎಂದರು. ಅರ್ಜಿ ಸಲ್ಲಿಕೆಗೆ ಆಧಾರ್ ಕಾರ್ಡ್ ಲಿಂಕ್ ಆದ ಖಾತೆಗೆ ಹಣ ನೇರವಾಗಿ ವರ್ಗಾವಣೆಯಾಗಲಿದೆ ಎಂದು ಮಾಹಿತಿ ನೀಡಿದ್ದಾರೆ. ಸೋಮವಾರ ಅಧಿಕೃತವಾಗಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಾಗುವುದು, ಯೋಜನೆ ಉದ್ಘಾಟಿಸಲು ಕೇಂದ್ರ ಕಾಂಗ್ರೆಸ್ ನಾಯಕರಿಗೆ ಆಹ್ವಾನ ನೀಡಲಾಗಿದೆ , ನಾಯಕರು ಒಪ್ಪಿಗೆ ಕೊಟ್ಟರೆ ಆಗಸ್ಟ್ 17 ರಂದೇ ಖಾತೆಗೆ ಹಣ ವರ್ಗಾವಣೆಯಾಗಲಿದೆ, ಇಲ್ಲದಿದ್ದರೇ ಆಗಸ್ಟ್ 19ಕ್ಕೆ ಹಣ ಜಮಾವಣೆಯಾಗಲಿದೆ ಎಂದು ಹೇಳಿದ್ದಾರೆ.

Read More

ಬೆಂಗಳೂರು: ಚಂದ್ರಯಾನ-3 ಮಿಷನ್‌ನ ಯಶಸ್ವಿ ಉಡಾವಣೆ ಭಾರತಕ್ಕೆ ಹೆಮ್ಮೆಯ ಕ್ಷಣವಾಗಿದೆ. ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಸಂಶೋಧನೆ ಮಾಡಲು ಯುವ ಮನಸ್ಸುಗಳನ್ನು ಪ್ರೇರೇಪಿಸುತ್ತದೆ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದ್ದಾರೆ. ಯಶಸ್ವಿ ಉಡಾವಣೆಗಾಗಿ ಅವರು ಬೆಂಗಳೂರಿನಲ್ಲಿ ಪ್ರಧಾನ ಕಛೇರಿ ಹೊಂದಿರುವ ರಾಷ್ಟ್ರೀಯ ಬಾಹ್ಯಾಕಾಶ ಸಂಸ್ಥೆಯಾದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯನ್ನು (ಇಸ್ರೋ) ಅಭಿನಂದಿಸಿದರು. ‘ಇದು ಭಾರತಕ್ಕೆ ಹೆಮ್ಮೆಯ ಕ್ಷಣ ಮತ್ತು ಭಾರತದ ಬಾಹ್ಯಾಕಾಶ ಸಂಶೋಧನೆ ಮತ್ತು ಆವಿಷ್ಕಾರದಲ್ಲಿ ಹೊಸ ಮೈಲಿಗಲ್ಲು’ ಎಂದು ಮುಖ್ಯಮಂತ್ರಿ ಹೇಳಿದರು.

Read More

ಮಡಿಕೇರಿ ಜು.15 : ಸೋಮವಾರಪೇಟೆ ತಾಲೂಕಿನ ಐಗೂರು ಸರಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಇಕೋ ಕ್ಲಬ್ ವತಿಯಿಂದ ಶ್ರೀಹರಿಕೋಟದಿಂದ ಉಡಾವಣೆಗೊಂಡ ದೇಶದ ಮಹತ್ವಾಕಾಂಕ್ಷೆಯ ಯೋಜನೆಯಾದ ಚಂದ್ರಯಾನ -3 ನ್ನು ವಿದ್ಯಾರ್ಥಿಗಳು ವೀಕ್ಷಿಸಿದರು.

Read More

ಸೋಮವಾರಪೇಟೆ ಜು.14 : ಕಕ್ಕೆಹೊಳೆಯ ಶ್ರೀಮುತ್ತಪ್ಪಸ್ವಾಮಿ ಮತ್ತು ಶ್ರೀ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಜು.17 ರಿಂದ ಭುವನೇಶ್ವರಿ ದೇವಿಗೆ ಆಷಾಢಮಾಸಸದ ದುರ್ಗಾದೀಪ ನಮಸ್ಕಾರ ಪೂಜೆಯು ಒಂದು ತಿಂಗಳು ನಡೆಯಲಿದೆ ಎಂದು ದೇವಾಲಯ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ. ಅಂದು ಬೆಳಗ್ಗೆ 7ಗಂಟೆಗೆ ಗಣಪತಿ ಹೋಮದೊಂದಿಗೆ ಪೂಜಾ ಕೈಂಕರ್ಯಗಳು ಆರಂಭವಾಗಲಿದ್ದು, ಅಂದಿನಿಂದ ಸಂಜೆ 6 ರಿಂದ 8ರವರೆಗೆ ಪ್ರಥಮ ದಿನದ ದುರ್ಗಾದೀಪ ನಮಸ್ಕಾರ ಪೂಜೆಯು ನೆಡೆಯಲಿದ್ದು, ರಾತ್ರಿ 8 ಗಂಟೆಯ ನಂತರ ಅನ್ನದಾನ ಏರ್ಪಡಿಸಲಾಗಿದೆ. ಆಷಾಢ ಮಾಸದ ಪೂಜೆಯು ಆ.15ರಂದು ಬೆಳಗ್ಗೆ 9 ಗಂಟೆಯಿಂದ 12 ಗಂಟೆಯವರೆಗೆ ಹೋಮ ಮತ್ತು ಅನ್ನದಾನಗಳು ನಡೆಯಲಿದೆ. ಕೊನೆಯ ದಿವಸದ ಪೂಜೆಯು ಆ.16ರಂದು ಸಂಪನ್ನಗೊಳಲಿದ್ದು, ಅಂದು ಸಂಜೆ 6ಗಂಟೆಯಿಂದ ಶತ್ರುಸಂಹಾರ ಪೂಜೆಯು ನೆರವೇರಲಿದೆ ಎಂದು ದೇವಾಲಯ ಸಮಿತಿ ಅಧ್ಯಕ್ಷ ಎನ್.ಡಿ.ವಿನೋದ್‍ಕುಮಾರ್ ತಿಳಿಸಿದ್ದಾರೆ.

Read More

ಸೋಮವಾರಪೇಟೆ ಜು.15 : ಚಾಮುಂಡೇಶ್ವರಿ ಬಳಗದ ವತಿಯಿಂದ ಆಷಾಢದ ಕೊನೆಯ ಶುಕ್ರವಾರದ ಪ್ರಯುಕ್ತ ವಿಶೇಷ ಪೂಜೆ ಹಾಗೂ ಅನ್ನ ಸಂತರ್ಪಣೆ ನಡೆಯಿತು. ಪಟ್ಟಣದ ಟ್ಯಾಕ್ಸಿ ನಿಲ್ದಾಣದಲ್ಲಿ ಆಯೋಜಿಸಿದ್ದ ವಿಶೇಷ ಪೂಜಾ ಕಾರ್ಯಕ್ರಮವನ್ನು ಉದ್ಯಮಿ ಗಿರಿಷ್ಮಲ್ಲಪ್ಪ ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ದೇವಿಗೆ ಅರ್ಚನೆ ಯೊಂದಿಗೆ ಮಹಾಮಂಗಳಾರತಿ ನಂತರ ಪ್ರಸಾದ ವಿನಿಯೋಗ ಹಾಗೂ ಅನ್ನ ಸಂತರ್ಪಣೆ ನಡೆಯಿತು. ಈ ಸಂದರ್ಭ ವಾಹನ ಚಾಲಕರು ಮತ್ತು ಮಾಲೀಕರ ಸಂಘದ ಅಧ್ಯಕ್ಷ ಕೆ.ಜಿ.ಸುರೇಶ್, ಉಪಾಧ್ಯಕ್ಷ ಬಾಲಕೃಷ್ಣ ಪೂಜಾರಿ, ಹಿಂದುಜಾಗರಣ ವೇದಿಕೆಯ ಸಂಚಾಲಕ ಸುಭಾμï ತಿಮ್ಮಯ್ಯ, ಚಾಮುಂಡೇಶ್ವರಿ ಬಳಗದ ಸಂಚಾಲಕ ರೋಹಿತ್ ಪೂಜಾರಿ, ಪ್ರಮುಖರುಗಳಾದ ಎಚ್.ಎಸ್.ಗಂಗಾ, ಕಾಶಿ ಗೋಪಾಲ್ ಮತ್ತಿತರರು ಇದ್ದರು.

Read More

ಮಡಿಕೇರಿ ಜು.15 :  ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಅಧ್ಯಕ್ಷರಾಗಿ  ಕಡ್ಲೇರ ತುಳಸಿ ಮೋಹನ್ ಆಯ್ಕೆಯಾಗಿದ್ದಾರೆ. ಗೌರವ ಕಾರ್ಯದರ್ಶಿಗಳಾಗಿ ಪುದಿಯನೆರವನ ರಿಶೀತ್ ಮಾದಯ್ಯ ಮತ್ತು  ಬಾಳೆಯಡ ದಿವ್ಯ ಮಂದಪ್ಪ ಹಾಗೂ ಕೋಶಾಧಿಕಾರಿಯಾಗಿ ಸಿದ್ದರಾಜು ಬೆಳ್ಳಯ್ಯ ರವರನ್ನು ನೇಮಕಗೊಳಿಸಲಾಗಿದೆ. ಸಂಘಟನಾ ಕಾರ್ಯದರ್ಶಿಯಾಗಿ ಚೊಕ್ಕಾಡಿ ಪ್ರೇಮಾ ರಾಘವಯ್ಯ ಮತ್ತು ತಳೂರು ದಿನೇಶ್ ಕರುಂಬಯ್ಯ ರವರನ್ನು ಆಯ್ಕೆಗೊಳಿಸಲಾಗಿದ್ದು, ಸಂಘ ಸಂಸ್ಥೆಗಳ ಪ್ರತಿನಿಧಿಯಾಗಿ ಹೆಚ್. ಟಿ ಅನಿಲ್, ಮಹಿಳಾ ಪ್ರತಿನಿಧಿಗಳಾಗಿ ಶ್ರೀಮತಿ ಶೋಭಾ ಸುಬ್ಬಯ್ಯ,  ಗೌರಮ್ಮ ಮಾದಮಯ್ಯ, ಪರಿಶಿಷ್ಟ ಜಾತಿ ಪ್ರತಿನಿಧಿಗಳಾಗಿ ಬಿ. ಎಲ್ ಸಂದೇಶ್ ಮತ್ತು ಶ್ರೀಮತಿ ಎಚ್.ಪಿ ಜಯಮ್ಮ, ಪರಿಶಿಷ್ಟ ಪಂಗಡ ಪ್ರತಿನಿಧಿಯಾಗಿ ಬಿ.ಎಸ್ ರಂಗಪ್ಪ, ಹಿಂದುಳಿದ ವರ್ಗಗಳ ಪ್ರತಿನಿಧಿಯಾಗಿ ಎಂ.ಎಂ ಅಬ್ದುಲ್ಲಾ, ನಿಕಟ ಪೂರ್ವ ಅಧ್ಯಕ್ಷರಾಗಿ  ಅಂಬೇಕಲ್ ನವೀನ್ ಕಾರ್ಯನಿರ್ವಹಿಸಲಿದ್ದಾರೆ. ಪದನಿಮಿತ ಪ್ರತಿನಿಧಿಗಳಾಗಿ ಸಹಕಾರ ಸಂಘಗಳ ಸಹಾಯಕ ನಿಬಂಧಕರು, ಮಡಿಕೇರಿ. ಮಡಿಕೇರಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳು, ಸರಕಾರಿ ಪ್ರಥಮ ದರ್ಜೆ ಪದವಿ ಕಾಲೇಜಿನ ಪ್ರಾಂಶುಪಾಲರು, ಶ್ರೀ ರಾಜರಾಜೇಶ್ವರಿ ಪದವಿ ಪೂರ್ವ…

Read More

ಮಡಿಕೇರಿ ಜು.14 : ಕುಶಾಲನಗರದ ರಥಬೀದಿಯಲ್ಲಿರುವ ಎರಡು ಚಿನ್ನಾಭರಣ ಮಳಿಗೆಯಲ್ಲಿ ನಕಲಿ ಚಿನ್ನವನ್ನಿಟ್ಟು ಅಸಲಿ ಚಿನ್ನವನ್ನು ಕಳ್ಳತನ ಮಾಡಿರುವ ಆರೋಪಿಗಳನ್ನು ಕುಶಾಲನಗರ ಪೊಲೀಸರು ಬಂಧಿಸಿದ್ದಾರೆ. ವಂಚಕರ ಬಳಿಯಿಂದ 75 ಗ್ರಾಂ ತೂಕದ ಚಿನ್ನಾಭರಣ ವಶ ಪಡಿಸಿಕೊಳ್ಳಲಾಗಿದೆ. ಚಿತ್ರದುರ್ಗದ ಪಾಮರಹಳ್ಳಿ ಗ್ರಾಮದ ನಿವಾಸಿಗಳಾದ ಆನ್ನೆಯಮ್ಮ (36),  ಕೈರುನ್ (46) ಹಾಗೂ  ಜೈರಾಭಿ (36) ಬಂಧಿತ ಆರೋಪಿಗಳಾಗಿದ್ದಾರೆ. ಆರೋಪಿಗಳಿಂದ ವಶಪಡಿಸಿಕೊಳ್ಳಲಾದ ಕಳವು ಮಾಲಿನ ವಿವರ : 1. 12,80 ಗ್ರಾಂ ತೂಕದ ಚಿನ್ನದ ಜುಮಕಿ ಓಲೆ 2, 480 ಗ್ರಾಂ ತೂಕದ ಒಂದು ಜೊತೆ ಚಿನ್ನದ ಕಿವಿ ಓಲೆ 3, 4,74 ಗ್ರಾಂ ತೂಕದ ಒಂದು ಜೊತೆ ಚಿನ್ನದ ಕಿವಿ ಓಲೆ ಒಟ್ಟು ಎರಡೂ ಪ್ರಕರಣಗಳಿಂದ ಸುಮಾರು 75 ಗ್ರಾಂ ತೂಕದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಸದರಿ ಪ್ರಕರಣವನ್ನು ಕೊಡಗು ಜಿಲ್ಲಾ ಪೊಲೀಸ್‌ ಅಧೀಕ್ಷಕ ಕೆ. ರಾಮರಾಜನ್ ಐ.ಪಿ.ಎಸ್ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ  ಸುಂದರರಾಜು ಕೆ.ಎಸ್ ರವರ ನಿರ್ದೇಶನದಂತೆ ಸೋಮವಾರಪೇಟೆ: ಉಪ-ವಿಭಾಗದ ಪೊಲೀಸ್ ಉಪ ಅಧೀಕ್ಷಕರಾದ…

Read More