ಬೆಂಗಳೂರು ಆ.14 : ಶ್ರೀಮದ್ ಜಗದ್ಗುರು ರೇವಣಸಿದ್ದೇಶ್ವರ ಸಿಂಹಾಸನ, ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ಚಂದ್ರಾಲೇಔಟ್ ನ ಶಾಖಾ ಮಠದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕನಕ ಭವನ ಮತ್ತು ಶಾಖಾ ಮಠದ ವೀಕ್ಷಣೆ ಮಾಡಿದರು.
ಲೇಖಕ: admin
ಮಡಿಕೇರಿ ಆ.14 : ದಾಂಪತ್ಯ ಜೀವನಕ್ಕೆ ಕಾಲಿಡಲು ಹರ್ಷಿಕಾ ಪೂಣಚ್ಚ ಹಾಗೂ ಭುವನ್ ಪೊನ್ನಣ್ಣ ರೆಡಿ ಆಗಿದ್ದಾರೆ. ದೀರ್ಘ ಕಾಲದವರೆಗೆ ಸ್ನೇಹಿತರಾಗಿದ್ದ ಭುವನ್ ಮತ್ತು ಹರ್ಷಿಕಾ ಆ.24ರಂದು ವಿರಾಜಪೇಟೆಯ “ಅಮ್ಮತಿ ಕೊಡವ ಸಮಾಜ”ದಲ್ಲಿ ಹಸೆಮಣೆ ಏರಲಿದ್ದಾರೆ. ಈಗಾಗಲೇ ಸಿನಿಮಾ ಹಾಗೂ ರಾಜಕೀಯ ಗಣ್ಯರಿಗೆ ಮದುವೆ ಆಮಂತ್ರಣ ನೀಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಹಾಗೂ ಬಸವರಾಜ್ ಬೊಮ್ಮಾಯಿ, ಸಿನಿಮಾ ತಾರೆಯರಾದ ಶಿವರಾಜ್ ಕುಮಾರ್, ರವಿಚಂದ್ರನ್, ಗಣೇಶ್ , ದೊಡ್ಡಣ್ಣ, ಶ್ರೀನಾಥ್ ಜಯಮಾಲ, ಸುಧಾರಾಣಿ, ತಾರಾ, ಮಾಲಾಶ್ರೀ, ಅನುಪ್ರಭಾಕರ್ ಅಮೂಲ್ಯ, ದಿಗಂತ್ ,ಅಶ್ವಿನಿ ಪುನೀತ್ ರಾಜ್ ಕುಮಾರ್ , ರಾಘವೇಂದ್ರ ರಾಜ್ ಕುಮಾರ್ ,ಉಪೇಂದ್ರ ಹಾಗೂ ಪ್ರಿಯಾಂಕಾ ಉಪೇಂದ್ರ, ರಮೇಶ್ ಅರವಿಂದ್, ದುನಿಯಾ ವಿಜಯ್ ಸೇರಿದಂತೆ ಅನೇಕ ಗಣ್ಯರಿಗೆ ಆಮಂತ್ರಣ ನೀಡಿದ್ದಾರೆ.
ಮಡಿಕೇರಿ ಆ.14 : ದೇಶಕ್ಕೆ ಸ್ವಾತಂತ್ರ್ಯ ದೊರೆತು 77 ವರ್ಷಗಳಾಗಿದೆ. ಹಿರಿಯರು ಗಳಿಸಿಕೊಟ್ಟ ಸ್ವಾತಂತ್ರ್ಯವನ್ನು ಉಳಿಸಿ ಬೆಳೆಸುವುದಕ್ಕಾಗಿ ನಾವೆಲ್ಲರೂ ಪಣ ತೊಡೋಣ. ದೇಶದ ರಕ್ಷಣೆ ಮತ್ತು ದೇಶದ ಅಭ್ಯುದಯಕ್ಕಾಗಿ ಶ್ರಮಿಸೋಣ. (ತೇಲಪಂಡ ಶಿವಕುಮಾರ್ ನಾಣಯ್ಯ, ಕಾರ್ಯಕಾರಿ ಸಮಿತಿ ಸದಸ್ಯರು, ಕೊಡಗು ಜಿಲ್ಲಾ ಬಿಜೆಪಿ)
ಮಡಿಕೇರಿ ಆ.14 : ಕೊಡಗು ಪ್ರೆಸ್ ಕ್ಲಬ್, ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ ವತಿಯಿಂದ ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಪ್ರಯುಕ್ತ “ಕದನ ಕಲಿಗಳಿಗೆ ಗೌರವ” ಕಾರ್ಯಕ್ರಮ ನಡೆಯಿತು. ನಗರದ ಕೊಹಿನೂರು ರಸ್ತೆಯಲ್ಲಿರುವ ರೆಡ್ಬ್ರಿಕ್ಸ್ ಇನ್ನ ಸತ್ಕಾರ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಏರ್ ಮಾರ್ಷಲ್ ನಂದ ಕಾರ್ಯಪ್ಪ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಒಬ್ಬ ಉತ್ತಮ ಸೇನಾನಿ ನಮ್ಮ ದೇಶದಲ್ಲಿ ಕಾರ್ಯನಿರ್ವಹಿಸಲು ಧನಾತ್ಮಕ ಚಿಂತನೆ, ಸಮಗ್ರತೆ, ಸ್ವಯಂ ನಿಯಂತ್ರಣವನ್ನು ಅಳವಡಿಸಿಕೊಳ್ಳಬೇಕಾಗುತ್ತದೆ ಎಂದರು. ಈಗಾಗಲೇ ಮಾಜಿ ಸೈನಿಕರ ಕುಂದುಕೊರತೆಗಳ ಬಗ್ಗೆ ಜಿಲ್ಲಾಧಿಕಾರಿಗಳ ಗಮನದಲ್ಲಿದ್ದು, ಅವರು ಸ್ಪಂಧಿಸುತ್ತಾರೆ ಎಂಬ ನಂಬಿಕೆ ನನಗಿದೆ ಎಂದರು. ಕೊಡಗು ಪ್ರೆಸ್ ಕ್ಲಬ್ ಯೋಧರನ್ನು ಸನ್ಮಾನಿಸಿ ಗೌರವಿಸುತ್ತಿರುವುದು ಸಂತೋಷದಾಯಕ ವಿಚಾರ ಎಂದು ಶ್ಲಾಘೀಸಿದರು. ರಾಷ್ಟ್ರಪತಿಗಳ ಗೌರವ ಚಿಕಿತ್ಸಕರು, ಆಸ್ಪತ್ರೆ ಸೇವಾ ವಿಭಾಗ ಮತ್ತು ಮುಖ್ಯ ಸಮಾಲೋಚಕರು, ಮಾಜಿ ಮಹಾ ನಿರ್ದೇಶಕರಾದ ಲೆ/ಜ/ ಡಾ. ಬಿ.ಎನ್ ಬಿ.ಎಂ.ಪ್ರಸಾದ್ ಮಾತನಾಡಿ, ಸಮವಸ್ತ್ರದಲ್ಲೇ ದೇಶ ಸೇವೆ ಮಾಡಬೇಕೆಂದೇನಿಲ್ಲ, ವಿದ್ಯಾಭ್ಯಾಸ ಹಾಗೂ ಜೀವನದ ಅನೇಕ…
ಮಡಿಕೇರಿ ಆ.14 : ಅರೆಕಾಡುವಿನಲ್ಲಿ ಆನೆ ತುಳಿತಕ್ಕೆ ಸಾವನ್ನಪ್ಪಿದ ಕಟ್ಟೆಮಾಡು ಗ್ರಾಮದ ನಿವಾಸಿ ದೇವಪ್ಪ ಎಂಬುವ ನಿವಾಸಕ್ಕೆ ಮಡಿಕೇರಿ ತಾಲೂಕು ದಂಡಧಿಕಾರಿ ಪ್ರವೀಣ್ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು.
ಕುಶಾಲನಗರ,ಆ.14 : ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಕೊಡಗು ಪ್ರೆಸ್ ಕ್ಲಬ್ ಬೆಳ್ಳಿಮಹೋತ್ಸವ ಆಚರಣಾ ಸಮಿತಿ ಇವರ ಸಹಯೋಗದಲ್ಲಿ ಪತ್ರಕರ್ತರ ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ ಮಿಂಟನ್ ಪಂದ್ಯಾವಳಿಯು, ಕುಶಾಲನಗರದ ಜಂಪ್ ಸ್ಮಾಷ್ ಬ್ಯಾಡ್ ಮಿಂಟನ್ ಅಕಾಡೆಮಿಯ ಕ್ರೀಡಾಂಗಣದಲ್ಲಿ ನಡೆಯಿತು. ಪತ್ರಕರ್ತರ ಜಿಲ್ಲಾ ಮಟ್ಟದ ಶಟಲ್ ಬ್ಯಾಟ್ ಮಿಂಟನ್ ಪಂದ್ಯಾವಳಿಯ ಸಿಂಗಲ್ಸ್ ವಿಭಾಗದಲ್ಲಿ ಆದರ್ಶ್ ಅವರು ಪ್ರಥಮ ಸ್ಥಾನ ಪದೆಡು, ಟ್ರೋಫಿ ಹಾಗೂ 5 ಸಾವಿರ ನಗದನ್ನು ಸ್ವೀಕರಿಸಿದರು. ಸಿಂಗಲ್ಸ್ ನಲ್ಲಿ ಲೋಕೇಶ್ ಕಾಟಲೇರಿಯವರು ದ್ವಿತೀಯ ಸ್ಥಾನ ಪಡೆದು, ಟ್ರೋಫಿ ಹಾಗೂ 3 ಸಾವಿರ ರೂ ನಗದನ್ನು ಸ್ವೀಕರಿಸಿದರು. ಸುಬ್ರಮಣಿಯವರು ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟು, ಟ್ರೋಫಿ ಹಾಗೂ 1 ಸಾವಿರ ನಗದನ್ನು ಪಡೆದುಕೊಂಡರು. ನಾಲ್ಕನೇ ಸ್ಥಾನ ಪಡೆದ ವಿನೋದ್ ಅವರು, ಟ್ರೋಫಿ ಹಾಗೂ 500 ರೂನಗದನ್ನು ಪಡೆದುಕೊಂಡರು. ಡಬಲ್ಸ್ ನಲ್ಲಿ ನವೀನ್ ಹಾಗೂ ವಿಶ್ವ ಕುಂಬೂರು ಅವರು ಪ್ರಥಮ ಸ್ಥಾನವನ್ನು ಅಲಂಕರಿಸಿ, ಟ್ರೋಫಿ ಹಾಗೂ 5 ಸಾವಿರ ನಗದನ್ನು…
ಮಡಿಕೇರಿ ಆ.14 : ನೇರಪ್ರಸಾರ ಕಾರ್ಯಕ್ರಮದಲ್ಲಿ ನಟ ಹಾಗೂ ನಿರ್ದೇಶಕ ಉಪೇಂದ್ರ ಅವರು ದಲಿತ ಸಮುದಾಯಕ್ಕೆ ನೋವಾಗುವ ರೀತಿಯಲ್ಲಿ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದು, ಇವರನ್ನು ತಕ್ಷಣ ಬಂಧಿಸಬೇಕೆoದು ದಲಿತ ಸಂಘರ್ಷ ಸಮಿತಿಯ ಐಕ್ಯತಾ ಚಾಲನಾ ಸಮಿತಿಯ ಸೋಮವಾರಪೇಟೆ ತಾಲ್ಲೂಕು ಅಧ್ಯಕ್ಷ ಜೆ.ಎಲ್.ಜನಾರ್ಧನ್ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ದಲಿತರನ್ನು ಗುರಿಯಾಗಿಸಿಕೊಂಡು ಪದ ಬಳಕೆ ಮಾಡಿರುವುದರಿಂದ ಉಪೇಂದ್ರ ಅವರ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲಾಗಿದೆ. ಆದರೆ ಇಲ್ಲಿಯವರೆಗೆ ಅವರನ್ನು ಬಂಧಿಸದೆ ಇರುವುದು ಖಂಡನೀಯವೆoದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಮಾಜದ ಸಮಾನತೆಗೆ ದಕ್ಕೆ ತಂದು ಜಾತೀಯತೆಗೆ ಆಸ್ಪದ ನೀಡಿರುವ ಈ ನಟನ ಚಿತ್ರಗಳು ಮತ್ತು ಪ್ರಜಾಕೀಯ ಎನ್ನುವ ರಾಜಕೀಯ ಪಕ್ಷವನ್ನು ಬಹಿಷ್ಕರಿಸಬೇಕೆಂದು ಜನಾರ್ಧನ್ ಕರೆ ನೀಡಿದ್ದಾರೆ.
ಮಡಿಕೇರಿ ಆ.14 : “ಜಾತ್ಯಾತೀತತೆ ಭಾರತದ ಧರ್ಮ” ಎಂಬ ಧ್ಯೇಯ ವಾಕ್ಯದೊಂದಿಗೆ ಆಗಸ್ಟ್ 15 ರ ಸ್ವಾತಂತ್ರ್ಯೋತ್ಸವದಂದು SYS ಕೊಡಗು ಜಿಲ್ಲಾ ಸಮಿತಿಯ ವತಿಯಿಂದ ನೆಲ್ಯಹುದಿಕೇರಿಯಲ್ಲಿ ನಡೆಯಲಿರುವ ರಾಷ್ಟ್ರ ರಕ್ಷಾ ಸಂಗಮ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ SKSSF ಕೊಡಗು ಜಿಲ್ಲಾ ಸಮಿತಿಯು ಕರೆ ನೀಡಿದೆ. ಭಾರತ ಮಣ್ಣಿನ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರ ಪುರುಷರನ್ನು ಎಂದಿಗೂ ನೆನಪಿಸಬೇಕಾಗಿದೆ. ಜಾತಿ ಭೇದ ಮರೆತು ಒಗ್ಗಟ್ಟಿನ ಹೋರಾಟ ನಡೆಸಿದ ಫಲವಾಗಿ ದೇಶ 1947ರಲ್ಲಿ ಪಡೆದ ಸ್ವಾತಂತ್ರ್ಯ, ಹಲವಾರು ಹೋರಾಟಗಾರರ ಪ್ರಾಣತ್ಯಾಗದ ಫಲವಾಗಿದೆ ಎಂಬುದನ್ನು ಪ್ರತ್ಯೇಕವಾಗಿ ಸ್ಮರಿಸಬೇಕಾಗಿದೆ. ದೇಶದ ಸೌಹಾರ್ದತೆಯ ಉಳಿವಿಗಾಗಿ, ಜಾತ್ಯಾತೀತ ಬಲಿಷ್ಠ ಭಾರತದ ನಿರ್ಮಾಣಕ್ಕಾಗಿ ಎಸ್ ವೈ ಎಸ್ ಕೊಡಗು ಜಿಲ್ಲಾ ಸಮಿತಿಯು ಹಮ್ಮಿಕೊಂಡಿರುವ ರಾಷ್ಟ್ರ ರಕ್ಷಾ ಸಂಗಮವನ್ನು ಯಶಸ್ವಿಗೊಳಿಸುವುದು ನಮ್ಮೆಲ್ಲರ ಕರ್ತವ್ಯ. ಸರ್ವ ಧರ್ಮ ಮುಖಂಡರುಗಳು, ಜಿಲ್ಲೆಯ ಶಾಸಕರುಗಳು, ರಾಜಕೀಯ, ಧಾರ್ಮಿಕ, ಸಾಮಾಜಿಕ ನೇತಾರರು ಭಾಗವಹಿಸುವ ಪ್ರಸ್ತುತ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಎಸ್ ಕೆ ಎಸ್ ಎಸ್ ಎಫ್ ಜಿಲ್ಲಾಧ್ಯಕ್ಷರಾದ ತಮ್ಲೀಖ್ ದಾರಿಮಿ ಮಡಿಕೇರಿ ಹಾಗೂ…
ಮಡಿಕೇರಿ. ಆ.14 : ಮಡಿಕೇರಿ ವಕೀಲರ ಸಂಘದ ವತಿಯಿಂದ ನ್ಯಾಯಾಲಯದಲ್ಲಿ ಹರ್ ಘರ್ ತಿರಂಗ ಕಾಯ೯ಕ್ರಮದಡಿಯಲ್ಲಿ ರಾಷ್ಟ್ರದ್ವಜವನ್ನು ಪ್ರತೀ ಮನೆಯಲ್ಲಿ ಹಾರಿಸುವ ಕಾಯ೯ಕ್ರಮಕ್ಕೆ ಚಾಲನೆ ನೀಡಲಾಯಿತು. ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಶ್ಯಾಮ್ ಪ್ರಸಾದ್, ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶೆ ಶ್ರೀಮತಿ ಪ್ರಶಾಂತಿ, ಕಾನೂನು ಸೇವಾ ಪ್ರಾಧಿಕಾರದ ಕಾಯ೯ದಶಿ೯ ಕೆ.ಬಿ. ಪ್ರಸಾದ್, ಸಿವಿಲ್ ನ್ಯಾಯಾಧೀಶರಾದ ಶ್ರೀಮತಿ ಮುನಿರತ್ನ, ಸಿವಿಲ್ ನ್ಯಾಯಾಧೀಶರಾದ ನಾಗೇಶ್, ವಕೀಲರ ಸಂಘದ ಅಧ್ಯಕ್ಷ ಎಂ.ಎ.ನಿರಂಜನ್, ಕಾಯ೯ದಶಿ೯ ಡಿ.ಎಂ.ಕೇಶವ, ಸಂಘದ ಸದಸ್ಯರು, ನ್ಯಾಯಾಲಯದ ಆಡಳಿತಾಧಿಕಾರಿ ಕೆಂಪರಾಜು, ನ್ಯಾಯಾಲಯದ ಸಿಬ್ಬಂದಿವಗ೯ದವರು ಕಾಯ೯ಕ್ರಮದಲ್ಲಿ ಪಾಲ್ಗೊಂಡಿದ್ದರು.
ಕುಶಾಲನಗರ ಆ.14 : ಸಮಾಜದಲ್ಲಿ ಜನರಿಗೆ ಮೌಢ್ಯ ಬಿತ್ತುವ ಕೆಲಸ ನಿರಂತರವಾಗಿ ನಡೆಯುತ್ತಿದ್ದು, ಇದನ್ನು ತಡೆಯಬೇಕಾದರೆ ವೈಜ್ಞಾನಿಕ ಮನೋಭಾವನೆ ಮತ್ತು ಮೌಢ್ಯಾಚರಣೆಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕಾಗಿದೆ ಎಂದು ಹೆಸರಾಂತ ವಿಚಾರವಾದಿಯೂ ಆದ ಅಖಿಲ ಭಾರತ ವಿಚಾರವಾದಿ ಒಕ್ಕೂಟದ ಅಧ್ಯಕ್ಷ ಪ್ರೊ|| ನರೇಂದ್ರನಾಯಕ್ ಹೇಳಿದರು. ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಕೊಡಗು ಜಿಲ್ಲಾ ಸಮಿತಿ ಹಾಗೂ ಅಖಿಲ ಭಾರತ ವಿಚಾರವಾದಿ ಒಕ್ಕೂಟದ ವತಿಯಿಂದ ಕುಶಾಲನಗರ ಕನ್ನಿಕಾ ಹೋಟೆಲ್ ಸಭಾಂಗಣದಲ್ಲಿ ಸುಂಟಿಕೊಪ್ಪ ಜೆಸಿಐ, ಕುಶಾಲನಗರ ಕಾವೇರಿ ಜೆಸಿಐ ಹಾಗೂ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಎನ್.ಎಸ್.ಎಸ್.ಘಟಕದ ಸಹಯೋಗದೊಂದಿಗೆ “ಮೌಢ್ಯದ ವಿರುದ್ಧ ವಿಜ್ಞಾನ ನಡಿಗೆ” ಎಂಬ ಕಾರ್ಯಕ್ರಮದಡಿ ವೈಜ್ಞಾನಿಕ ಮನೋಭಾವನೆ ಕುರಿತು ಉಪನ್ಯಾಸ ಹಾಗೂ ಪವಾಡಗಳ ರಹಸ್ಯ ಬಯಲು ಕಾರ್ಯಕ್ರಮ ನಡೆಯಿತು. ವೈಜ್ಞಾನಿಕ ಚಿಂತನೆಗಳು ಜನರಿಗೆ ತಲುಪುತ್ತಿದ್ದು ಅರಿವು ಉಂಟಾಗುತ್ತಿದೆ. ಆದರೆ, ಕೆಲವರು ವಿಚಾರವಾದಿಗಳ ಧ್ವನಿ ಹತ್ತಿಕ್ಕುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ನರೇಂದ್ರನಾಯಕ್ ವಿಷಾದಿಸಿದರು. ಸಮಾಜದಲ್ಲಿ ಹೆಚ್ಚುತ್ತಿರುವ ಕೋಮುವಾದ ಹಾಗೂ ಮೌಢ್ಯತೆಯನ್ನು ಹತ್ತಿಕ್ಕಬೇಕಾದಲ್ಲಿ ಯುವ ಜನರು ಮುಂದೆ ಬಂದು…






