ಲೇಖಕ: admin

ಸುಂಟಿಕೊಪ್ಪ ಜು.14 : ಸುಂಟಿಕೊಪ್ಪ ಹೋಬಳಿ ವ್ಯಾಪ್ತಿಯಲ್ಲಿ ಕಾಡಾನೆಗಳು ದಾಂಧಲೆ ನಡೆಸಿದ್ದು ಓರ್ವ ಕಾರ್ಮಿಕ ಗಾಯಗೊಂಡು ಆಸ್ಪತ್ರಗೆ ದಾಖಲಾದ ಘಟನೆ ಶುಕ್ರವಾರ ಸಂಜೆ ನಡೆದಿದೆ. ಸಮೀಪದ ಅತ್ರೂರು ನಲ್ಲೂರು ಗ್ರಾಮದ ಕಂಬಿಬಾಣೆಯ ವೃಂದಾವನ ತೋಟದ ಬಳಿ  ಸಂಜೆ 6 ಗಂಟೆ ಸುಮಾರಿಗೆ ಕೆಲಸ ಮುಗಿಸಿ ಬರುತ್ತಿದ್ದ ಬೂತನಕಾಡು ನಿವಾಸಿ ರಾಮಸ್ವಾಮಿ ಎಂಬುವವರ ಮೇಲೆ ಕಾಡಾನೆಯೊಂದು ದಿಢೀರ್ ದಾಳಿ ನಡೆಸಿ ಕಾಲಿಗೆ ಹೊಡೆದಿದೆ‌.ಆನೆಯ ಹೊಡೆತದಿಂದ  ಬಲಗಾಲಿಗೆ ಗಂಭೀರ ಗಾಯವಾಗಿದ್ದು, ಎಡ ಕಾಲು, ಎದೆಯ ಭಾಗದಲ್ಲಿ ಗಾಯಗಳಾಗಿವೆ. ಕಾರ್ಮಿಕ ರಾಮಸ್ವಾಮಿಯ ಬೊಬ್ಬೆಗೆ ಹೆದರಿದ ಆನೆಯು ಅಲ್ಲಿಂದ ಕಾಲ್ಕಿತ್ತಿದೆ.ವಿಷಯವರಿತ ಸ್ಥಳೀಯರು ಗಾಯಗೊಂಡಿದ್ದ ಕಾರ್ಮಿಕನನ್ನು ಸುಂಟಿಕೊಪ್ಪ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಿದ್ದಾರೆ. ಹಾಗೆಯೇ ಕಂಬಿಬಾಣೆಯ ಚಿಕ್ಲಿಹೊಳೆಯ ರಸ್ತೆಗೆ ತೆರಳುವ  ಕಾಫಿ  ಬೆಳೆಗಾರ ಎಂ.ಕೆ.ನರೇಂದ್ರ ಅವರ ಮನೆಯ ಗೇಟನ್ನು ಕಾಡಾನೆ ತುಳಿದು ಹಾನಿಗೊಳಿಸಿ ಪರಾರಿಯಾಗಿದೆ. ಕಂಬಿಬಾಣೆ ವ್ಯಾಪ್ತಿಯಲ್ಲಿ ಕಳೆದ ಹಲವು ದಿನಗಳಿಂದ ಕಾಡಾನೆಗಳು ಬೀಡು ಬಿಟ್ಟು ಆತಂಕ ಸೃಷ್ಟಿ…

Read More

ಮಡಿಕೇರಿ ಜು.14 : ಸಹೋದರರ ನಡುವಿನ ಆಸ್ತಿ ಕಲಹ ಅಣ್ಣನ ಕೊಲೆಯಲ್ಲಿ ಅಂತ್ಯ ಕಂಡ ಘಟನೆ ಮಡಿಕೇರಿ ತಾಲೂಕಿನ ಸಂಪಾಜೆಯ ಚೆಂಬು ಗ್ರಾಮದಲ್ಲಿ ನಡೆದಿದೆ. ಪುತ್ತೂರಿನ ಸಂಪ್ಯಾ ನಿವಾಸಿ ಉಸ್ಮಾನ್(65) ಎಂಬುವವರೇ ಕೊಲೆಯಾದ ದುರ್ದೈವಿಯಾಗಿದ್ದು, ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಬ್ಬರು ಸಹೋದರರಿಂದ ಅಣ್ಣನ ಕೊಲೆಯಾಗಿದೆ ಎಂದು ಆರೋಪಿಸಲಾಗಿದೆ. ಆರೋಪಿಗಳು ತಲೆ ಮರೆಸಿಕೊಂಡಿದ್ದಾರೆ. ಮೃತ ಉಸ್ಮಾನ್ ಹಾಗೂ ಸಹೋದರರು ಸಂಪಾಜೆಯ ಕುದ್ರೆಪಾಯದಲ್ಲಿ ಕೃಷಿ ಭೂಮಿ ಹೊಂದಿದ್ದರು. ಉಸ್ಮಾನ್ ಅವರು ಕುಟುಂಬ ಸಹಿತ ಪುತ್ತೂರಿನಲ್ಲಿ ನೆಲೆಸಿದ್ದು, ಪ್ರತಿ ಶುಕ್ರವಾರ ಸಂಪಾಜೆ ಕುದ್ರೆಪಾಯ ತೋಟಕ್ಕೆ ಬಂದು ಹೋಗುತ್ತಿದ್ದರು ಎನ್ನಲಾಗಿದೆ. ಸಹೋದರರ ನಡುವೆ ಜಾಗದ ವಿಚಾರವಾಗಿ ಹಿಂದಿನಿಂದಲೂ ವೈಷಮ್ಯವಿತ್ತು ಎಂಬ ಮಾತುಗಳು ಕೇಳಿ ಬಂದಿದೆ. ಶುಕ್ರವಾರ ಕುದ್ರೆಪಾಯದ ಜಾಗದಲ್ಲಿ ಸರ್ವೆ ಕಾರ್ಯ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಅದಕ್ಕಾಗಿ ಉಸ್ಮಾನ್  ಹಾಗೂ ಇಬ್ಬರು ಸಹೋದರರು ಕೂಡ ಕುದ್ರೆಪಾಯಕ್ಕೆ ಬಂದಿದ್ದರು. ಈ ಸಂದರ್ಭ ಮಾತಿಗೆ ಮಾತು ಬೆಳೆದು ಉಸ್ಮಾನ್ ಅವರನ್ನು ಚೂರಿಯಿಂದ ಇರಿದ ಪರಿಣಾಮ ಸ್ಥಳದಲ್ಲೇ…

Read More

ಮಡಿಕೇರಿ ಜು.14 : ಕೊಡಗು ಜಿಲ್ಲಾ ಕೇಂದ್ರವಾದ ಮಡಿಕೇರಿಯಲ್ಲಿ ರೈಲ್ವೆ ಬುಕ್ಕಿಂಗ್ ಸೆಂಟರ್ ತೆರೆಯುವಂತೆ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಕೊಡಗು ಹಿತರಕ್ಷಣಾ ವೇದಿಕೆ ಒತ್ತಾಯಿಸಿದೆ. ಜಿಲ್ಲಾಧಿಕಾರಿಗಳು ವೆಂಕಟ್ ರಾಜಾ ಹಾಗೂ ಕೊಡಗು ಜಿಲ್ಲಾ ಅಂಚೆ ಅಧೀಕ್ಷಕರಿಗೆ ಮನವಿ ಸಲ್ಲಿಸಿದ ವೇದಿಕೆಯ ಪ್ರಮುಖರು ಹಾಗೂ ಪದಾಧಿಕಾರಿಗಳು, ಭಾರತೀಯ ಸೇನೆಯಲ್ಲಿ ಕೊಡಗಿನ ಸಾವಿರಾರು ಮಂದಿ ಸೈನಿಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕಾಫಿ ತೋಟಗಳಲ್ಲಿ ದುಡಿಯಲು ವಿವಿಧ ರಾಜ್ಯಗಳ ಅಸಂಖ್ಯಾತ ಕಾರ್ಮಿಕರು ಜಿಲ್ಲೆಗೆ ಬರುತ್ತಾರೆ. ಮಡಿಕೇರಿಯಲ್ಲಿ ರೈಲ್ವೆ ಟಿಕೆಟ್ ಬುಕ್ಕಿಂಗ್ ಸೆಂಟರ್ ಇದ್ದಾಗ ಸೈನಿಕರು ಹಾಗೂ ಕಾರ್ಮಿಕರು ತಾವು ತೆರಳಬೇಕಾದ ಪ್ರದೇಶದ ರೈಲ್ವೆ ಟಿಕೆಟ್‍ಗಳನ್ನು ಮುಂಗಡವಾಗಿ ಬುಕ್ ಮಾಡಿ ಪ್ರಯಾಣ ಬೆಳೆಸುತ್ತಿದ್ದರು. ಇದು ಹೆಚ್ಚು ಅನುಕೂಲಕರ ವ್ಯವಸ್ಥೆಯಾಗಿತ್ತು, ಆದರೆ ಪ್ರಸ್ತುತ ದಿನಗಳಲ್ಲಿ ಟಿಕೆಟ್ ಬುಕ್ಕಿಂಗ್‍ಗೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಗಮನ ಸೆಳೆದರು. ಈ ಸಂದಭ ವೇದಿಕೆಯ ಅಧ್ಯಕ್ಷ ರವಿ ಗೌಡ ಮಾತನಾಡಿ, ಜಿಲ್ಲಾ ಕೇಂದ್ರ ಸ್ಥಾನ ಮಡಿಕೇರಿಯ ಹಳೆಯ ಖಾಸಗಿ ಬಸ್ ನಿಲ್ದಾಣದ ನಗರಸಭಾ…

Read More

ಮಡಿಕೇರಿ ಜು.14 : ಮಡಿಕೇರಿ ನಗರಸಭೆ ವ್ಯಾಪ್ತಿಯ 1ನೇ ವಾರ್ಡ್‍ನ ನೂತನ ನ್ಯಾಯಾಲಯ, ಜಿಲ್ಲಾ ಪಂಚಾಯತ್ ಹಾಗೂ ಕೇಂದ್ರೀಯ ವಿದ್ಯಾಲಯಕ್ಕೆ ತೆರಳುವ ರಸ್ತೆಯಲ್ಲಿ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಮಡಿಕೇರಿ ನಗರಸಭೆ ವ್ಯಾಪ್ತಿಯ 1ನೇ ವಾರ್ಡ್ ವಿದ್ಯಾನಗರದಲ್ಲಿ ನೂತನ ಜಿಲ್ಲಾ ನ್ಯಾಯಾಲಯ ಮತ್ತು ಜಿಲ್ಲಾ ಪಂಚಾಯತ್ ಕಟ್ಟಡ ಹಾಗೂ ಕೇಂದ್ರೀಯ ವಿದ್ಯಾಲಯದ ಇದ್ದು, ನಗರದಿಂದ 3 ಕಿ.ಮೀ ಅಂತರವನ್ನು ಕಾಯ್ದುಕೊಂಡಿದೆ. ಇಲ್ಲಿಗೆ ತೆರಳುವ ರಸ್ತೆ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜು ಬಳಿಯಿಂದ ಕಿರಿದಾಗಿದ್ದು, ದ್ವಿಚಕ್ರ ಹಾಗೂ ತ್ರಿಚಕ್ರ ವಾಹನದ ಚಾಲಕರು ಹೊಂದಾಣಿಕೆಯಿಂದ ದ್ವಿಮುಖ ಸಂಚರಿಸುತ್ತಿರುತ್ತಾರೆ. ಇಲ್ಲಿನ ರಸ್ತೆ ಕಾಂಕ್ರೀಟಿಕರಣಗೊಂಡಿದ್ದರು ಲಘು ವಾಹನಗಳಿಗೆ ಮಾತ್ರ ದ್ವಿಮುಖ ಸಂಚಾರಕ್ಕೆ ಯೋಗ್ಯವಾಗಿದೆ. ಆದರೆ ಇತ್ತೀಚಿನ ಮಳೆಯಿಂದಾಗಿ ಮತ್ತು ಘನ ವಾಹನಗಳ ಸಂಚಾರದಿಂದಾಗಿ ವಿದ್ಯಾನಗರ ಸಮೀಪ ರಸ್ತೆ ಮದ್ಯೆ ಹೊಂಡ ಉಂಟಾಗಿದ್ದು, ರಸ್ತೆ ಒಡೆದು ಅಪಾಯದಂಚಿನಲ್ಲಿದೆ. ಅಲ್ಲದೆ ಮಳೆಯ ಸಂದರ್ಭ ನೀರು ರಸ್ತೆಯ ಹೊಂಡದಲ್ಲಿ ಶೇಖರಣೆಗೊಂಡು ಸಂಚರಿಸಲು ಅಸಾಧ್ಯವಾದ ಪರಿಸ್ಥಿತಿ ನಿರ್ಮಾಣವಾಗಿದೆ. ಇದೇ ಮಾರ್ಗದಲ್ಲಿ…

Read More

ಮಡಿಕೇರಿ ಜು.14 : ಬಹು ರಾಷ್ಟ್ರೀಯ ಕಂಪನಿಗಳು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳನ್ನು ಗುರುತಿಸಿ ಅವರ ವಿದ್ಯಾಭ್ಯಾಸಕ್ಕೆ ತಕ್ಕದಾದ ಗೌರವಯುತ ಕೆಲಸವನ್ನು ಒದಗಿಸಿ ಬದುಕು ಕಟ್ಟಿಕೊಳ್ಳಲು ನೆರವಾಗಬೇಕೆಂದು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲರಾದ ಮೇಜರ್ ಡಾ. ಬಿ.ರಾಘವ ಕರೆ ನೀಡಿದರು. ಉದ್ಯೋಗ ಮತ್ತು ಕೌಶಲ್ಯ ಅಭಿವೃದ್ಧಿ ಶಾಖೆ, ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ಮಡಿಕೇರಿ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಕೊಡಗು ಜಿಲ್ಲೆ, ಇದರ ಜಂಟಿ ಸಹಯೋಗದೊಂದಿಗೆ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ಒಂದು ದಿನದ ಉದ್ಯೋಗ ಮೇಳ ನಡೆಯಿತು. ಮೇಳದಲ್ಲಿ ಅಂಥೇಮ್ (Anthem) ಬಯೋ ಸೈನ್ಸ್, ಐಸಿಐಸಿಐ ಬ್ಯಾಂಕ್ ಹಾಗೂ ಕಲ್ಯಾಣಿ ಮೋಟರ್ಸ್ ಕಂಪನಿಗಳು ಭಾಗವಹಿಸಿದ್ದವು. ಸುಮಾರು 250 ವಿದ್ಯಾರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಿದ್ದು, 80ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಮುಂದಿನ ಹಂತಕ್ಕೆ ಆಯ್ಕೆಗೊಂಡಿದ್ದಾರೆ ಎಂದು ಉದ್ಯೋಗ ಶಾಖೆ ಅಧಿಕಾರಿ ಹಾಗೂ ಎಂಕಾಂ ವಿಭಾಗದ ಸಂಯೋಜಕ ಡಾ.ಪ್ರದೀಪ್ ಆರ್.ಭಂಡಾರಿ ಮಾಹಿತಿ ನೀಡಿದರು. ಉದ್ಯೋಗ ಮೇಳದ ನಿರ್ವಹಣೆಯನ್ನು ವಾಣಿಜ್ಯ ವಿಭಾಗದ…

Read More

ಮಡಿಕೇರಿ ಜು.14 :  ಕೊಡಗು  ಜಿಲ್ಲಾ ಪೊಲೀಸ್‌  ಕಚೇರಿಗೆ ದಕ್ಷಿಣ ವಲಯದ ಡಿ.ಐ.ಜಿ.ಪಿ ಡಾ: ಎಂ.ಬಿ. ಬೋರಲಿಂಗಯ್ಯ,  ಭೇಟಿ ನೀಡಿ ಜಿಲ್ಲೆಯ ಪೊಲೀಸ್‌ ಅಧಿಕಾರಿಗಳ ಸಭೆ ನಡೆಸಿದರು. ಈ ಸಂದರ್ಭ ಕಾನೂನು ಸುವ್ಯವಸ್ಥೆ ಹಾಗೂ ಪ್ರಾಕೃತಿಕ ವಿಪತ್ತು ಸಂದರ್ಭ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸೂಕ್ತ ಮಾರ್ಗದರ್ಶನ ನೀಡಿದರು. ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಪುಷ್ಪಗುಚ್ಚ ನೀಡಿ ಸ್ವಾಗತಿಸಿದರು.

Read More

ಮಡಿಕೇರಿ ಜು.14 : ಕುಶಾಲನಗರ ಪಟ್ಟಣದ ಇಂದಿರಾ ಬಡಾವಣೆ, ಪ್ರಥಮ ದರ್ಜೆ ಕಾಲೇಜು ಸಮೀಪದ ವಾಲ್ಮಿಕಿ ಭವನದ ಬಳಿ ಮಾದಕ ವಸ್ತುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೇರಳ ರಾಜ್ಯದ ಸಿಜಿನ್ ಮಂಗಳಸೆರಿ, ಸೋಮವಾರಪೇಟೆ ಕಲ್ಕಂದೂರು ನಿವಾಸಿ ಮುಸ್ತಾಫ(40), ಹಕೀಂ(23), ಗುಮ್ಮನಕೊಲ್ಲಿಯ ವಿನೋದ್(41) ಹಾಗೂ ಶಂಕರ(41) ಎಂಬವರುಗಳನ್ನು ಮಾಲು ಸಹಿತ ಬಂಧಿಸಲಾಗಿದೆ. ಆರೋಪಿಗಳಿಂದ 1.75 ಕೆ.ಜಿ. ಗಾಂಜಾ ಮತ್ತು 5.6 ಗ್ರಾಂ ಎಂ.ಡಿ.ಎಂ.ಎ ನಿಷೇಧಿತ ಮಾದಕ ವಸ್ತುವನ್ನು ವಶಕ್ಕೆ ಪಡೆಯಲಾಗಿದೆ. ಸೋಮವಾರಪೇಟೆ ಡಿವೈಎಸ್‍ಪಿ ಆರ್.ವಿಗಂಗಾಧರಪ್ಪ ನೇತೃತ್ವದಲ್ಲಿ ಕುಶಾಲನಗರ ವೃತ್ತ ನಿರೀಕ್ಷಕ ಬಿ.ಜಿ.ಮಹೇಶ್, ಕುಶಾಲನಗರ ಪಟ್ಟಣ ಠಾಣಾಧಿಕಾರಿ ರವೀಂದ್ರ ಮತ್ತು ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Read More

ಮಡಿಕೇರಿ ಜು.14 : ಕೊಡಗು ಜಿಲ್ಲೆಯಲ್ಲಿ ಅತಿಹೆಚ್ಚು ಮಳೆಯಾಗುವ ಪ್ರದೇಶಗಳಲ್ಲಿ ಗಡಿಗ್ರಾಮ ಕರಿಕೆ ಕೂಡ ಒಂದು. ಮಳೆಗಾಲದಲ್ಲಿ ರೋಗಿಗಳ ಸಂಖ್ಯೆಯೂ ಇಲ್ಲಿ ಹೆಚ್ಚು, ಆದರೆ ಇಲ್ಲಿರುವ ಆರೋಗ್ಯ ಕೇಂದ್ರದಲ್ಲಿ ಸಕಾಲದಲ್ಲಿ ಔಷಧಿ ಲಭಿಸುತ್ತಿಲ್ಲ ಎನ್ನುವ ಆರೋಪವೂ ಇದೆ. ಪ್ರತಿವರ್ಷ ಮಳೆಗಾಲ ಬಂತೆಂದರೆ ಕೊಡಗು- ಕೇರಳ ಗಡಿಯಲ್ಲಿರುವ ಕರಿಕೆ ಗ್ರಾಮದಲ್ಲಿ ವಿವಿಧ ಸಾಂಕ್ರಾಮಿಕ ರೋಗಗಳು ಕಾಣಿಸಿಕೊಳ್ಳುತ್ತವೆ. ಇಲ್ಲಿನ ರೋಗಿಗಳು ಸುಮಾರು 70 ಕಿ.ಮೀ ದೂರದಲ್ಲಿರುವ ಮಡಿಕೇರಿಯ ಜಿಲ್ಲಾಸ್ಪತ್ರೆ ಅಥವಾ ಕೇರಳದ ಪಾಣತ್ತೂರು ಆಸ್ಪತ್ರೆಗೆ ತೆರಳಬೇಕಾಗುತ್ತದೆ. ಕರಿಕೆಯಲ್ಲಿ ಆರೋಗ್ಯ ಕೇಂದ್ರ ಇದೆಯಾದರೂ ಸೂಕ್ತ ಔಷಧಿಗಳು ಸಕಾಲದಲ್ಲಿ ದೊರೆಯುತ್ತಿಲ್ಲ. ದೂರದ ಊರುಗಳಿಗೆ ತೆರಳಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಬಡ ಕುಟುಂಬಗಳಿಗೆ ಸಾಧ್ಯವಾಗುತ್ತಿಲ್ಲ. ಇದನ್ನು ಮನಗಂಡ ಕರಿಕೆ ಗ್ರಾ.ಪಂ ಉಪಾಧ್ಯಕ್ಷ ಎನ್.ಬಾಲಚಂದ್ರ ನಾಯರ್ ಅವರು ಇಂದು ಮಡಿಕೇರಿಯಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿಗಳನ್ನು ಭೇಟಿಯಾಗಿ ಆರೋಗ್ಯ ಕೇಂದ್ರದ ಕುಂದು ಕೊರತೆಗಳನ್ನು ವಿವರಿಸಿದರು. ಕರಿಕೆಯಲ್ಲಿ ಪರಿಶಿಷ್ಟ ಜಾತಿ, ಪಂಗಡದ ಕುಟುಂಬಗಳು ಹಾಗೂ ಕೃಷಿ ಕೂಲಿ ಕಾರ್ಮಿಕರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ರೋಗಗಳು…

Read More

ಮಡಿಕೇರಿ ಜು.14 : ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆಯನ್ನು ಪಾರದರ್ಶಕ ಮತ್ತು ಶಾಂತಿಯುತವಾಗಿ ನಡೆಸುವ ದೃಷ್ಟಿಯಿಂದ ಕುಶಾಲನಗರ ತಾಲೂಕಿನ ಕೂಡುಮಂಗಳೂರು, ಮಡಿಕೇರಿ ತಾಲೂಕಿನ ಕಾಂತೂರು ಮುರ್ನಾಡು ಮತ್ತು ಕಡಗದಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಎಲ್ಲಾ ಶಸ್ತ್ರಾಸ್ತ್ರ ಪರವಾನಗಿದಾರರು ಹೊಂದಿರುವ ಶಸ್ತ್ರಾಸ್ತ್ರಗಳನ್ನು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಠೇವಣಿ ಇಡುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಅವರು ಆದೇಶಿಸಿದ್ದಾರೆ. ವಿನಾಯಿತಿ ಪತ್ರ ಹೊಂದಿರುವವರ ಪೈಕಿ ಕ್ರಿಮಿನಲ್/ ರೌಡಿಶೀಟರ್/ ಕೋಮುಗಲಭೆ ಹಿನ್ನೆಲೆಯುಳ್ಳ ನ್ಯಾಯಾಲಯದಿಂದ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ವ್ಯಕ್ತಿ ಅಥವಾ ಈ ಹಿಂದಿನ ಚುನಾವಣಾ ಸಂದರ್ಭದಲ್ಲಿ ಬಂದೂಕನ್ನು ದುರ್ಬಳಕೆ ಮಾಡಿದ ಹಿನ್ನೆಲೆಯುಳ್ಳ ವ್ಯಕ್ತಿಗಳು ಹೊಂದಿರುವ ಶಸ್ತ್ರಾಸ್ತ್ರಗಳನ್ನು ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಠೇವಣಿ ಇಡಬೇಕು. ಚುನಾವಣಾ ಫಲಿತಾಂಶ ಘೋಷಣೆಯಾಗುವವರೆಗೆ ನೀತಿ ಸಂಹಿತೆ ಜಾರಿಯಲ್ಲಿರುವ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಯಾವುದೇ ವ್ಯಕ್ತಿ ಶಸ್ತ್ರಾಸ್ತ್ರಗಳನ್ನು ಪ್ರದರ್ಶಿಸುವುದು, ಹಿಡಿದುಕೊಂಡು ಓಡಾಡುವುದನ್ನು ಕಡ್ಡಾಯವಾಗಿ…

Read More

ಮಡಿಕೇರಿ ಜು.14 : ಏಕರೂಪ ನಾಗರಿಕ ಸಂಹಿತೆಯಿಂದ ಕೊಡವ ಸಂಸ್ಕೃತಿ, ಆಚಾರ, ವಿಚಾರ ಮತ್ತು ಸಾಂಪ್ರದಾಯಿಕ ಕೋವಿ ಹಕ್ಕಿಗೆ ಯಾವುದೇ ರೀತಿಯಲ್ಲಿ ದಕ್ಕೆಯಾಗಬಾರದು ಎಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಭಾರತದ 22ನೇ ಕಾನೂನು ಆಯೋಗಕ್ಕೆ ಮನವಿ ಸಲ್ಲಿಸಿದೆ. ಆಯೋಗದ ಅಧ್ಯಕ್ಷ ನಿವೃತ್ತ ನ್ಯಾಯಮೂರ್ತಿ ರಿತುರಾಜ್ ಅವಸ್ತಿ ಅವರಿಗೆ ಪತ್ರ ಬರೆದಿರುವ ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ, ಏಕರೂಪ ನಾಗರಿಕ ಸಂಹಿತೆಯ ನೀತಿಗಳು ಅನಾದಿ ಕಾಲದಿಂದ ಬಂದಿರುವ ಕೊಡವ ಸಾಂಪ್ರದಾಯಿಕ ಆಚರಣೆಗಳಿಗೆ ಅಡ್ಡಿಯಾಗಬಾರದು ಮತ್ತು ಕೊಡವ ಬುಡಕಟ್ಟು ಜನಾಂಗದ ಹೆಗ್ಗುರುತುಗಳನ್ನು ಮೊಟಕುಗೊಳಿಸಬಾರದು ಎಂದು ಗಮನ ಸೆಳೆದಿದ್ದಾರೆ. ಕೊಡವರು ಅತ್ಯಂತ ಸೂಕ್ಷ್ಮ ಬುಡಕಟ್ಟು ಜನಾಂಗಕ್ಕೆ ಸೇರಿದವರಾಗಿದ್ದು, ಸರ್ಕಾರದ ಕುಟುಂಬ ಯೋಜನೆಯನ್ನು ಕಟ್ಟುನಿಟ್ಟಾಗಿ ಅನುಸರಿಸುತ್ತಿದ್ದಾರೆ. ಬಹುಪತ್ನಿತ್ವದ ನಿರ್ಮೂಲನೆ ಮತ್ತು ಜನಸಂಖ್ಯೆ ನಿಯಂತ್ರಣ ನೀತಿಯ ಅನುಷ್ಠಾನವನ್ನು ಬೆಂಬಲಿಸುತ್ತಾ ಬಂದಿದ್ದಾರೆ. ಇದೀಗ ಪ್ರಸ್ತಾಪಿಸಲ್ಪಟ್ಟಿರುವ ಏಕರೂಪ ನಾಗರಿಕ ಸಂಹಿತೆಗೆ ಕೊಡವರ ವಿರೋಧವಿಲ್ಲ, ಆತಂಕ ಆದರೆ ಕೆಲವೊಂದು ಆತಂಕಗಳಿವೆ. ಸಿಖ್ ಹಾಗೂ ಪಾರ್ಸಿಗಳಂತಹ ಧಾರ್ಮಿಕ ಅಲ್ಪಸಂಖ್ಯಾತರು ಸಾಂಪ್ರದಾಯಿಕ ಚಟುವಟಿಕೆ ಮತ್ತು…

Read More