ಮಡಿಕೇರಿ ಆ.14 : ಮಡಿಕೇರಿ ತಾಲ್ಲೂಕಿನ ಮೇಕೇರಿ ಗ್ರಾ.ಪಂ ಗೆ ಸ್ವಂತ ಕಟ್ಟಡವಿಲ್ಲದೆ ಸಾರ್ವಜನಿಕರ ಕೆಲಸಗಳಿಗೆ ಅಡಚಣೆಯಾಗುತ್ತಿರುವುದರಿಂದ ತಕ್ಷಣ ಸ್ವಂತ ಕಟ್ಟಡ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಗ್ರಾ.ಪಂ ಸದಸ್ಯರುಗಳಾದ ಅಬ್ದುಲ್ ಖಾದರ್, ಎಂ.ಯು.ಹನೀಫ್ ಹಾಗೂ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಂಚಾಯ್ತಿ ಸದಸ್ಯರು, ಸುಮಾರು 7 ವರ್ಷಗಳ ಹಿಂದೆ ಹಾಕತ್ತೂರು ಗ್ರಾ.ಪಂ ಯಿಂದ ಬೇರ್ಪಟ್ಟು ಪ್ರತ್ಯೇಕವಾಗಿ ರಚನೆಯಾದ ಮೇಕೇರಿ ಗ್ರಾ.ಪಂ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಬಳಿ ಕೊಠಡಿಯೊಂದರಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಆದ್ದರಿಂದ ಪಂಚಾಯ್ತಿಗೆ ಸ್ವಂತ ಕಟ್ಟಡದ ಅಗತ್ಯವಿದೆ ಎಂದರು. ಕಿರಿಯ ಪ್ರಾಥಮಿಕ ಶಾಲೆ ಪಕ್ಕದಲ್ಲಿ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರವಿದೆ. ಇದರ ಬಳಿಯೇ ಗ್ರಾ.ಪಂ ಕಟ್ಟಡ ನಿರ್ಮಾಣ ಮಾಡಬೇಕೆನ್ನುವ ಅಭಿಲಾಷೆ ಎಲ್ಲಾ ಗ್ರಾಮಸ್ಥರದ್ದಾಗಿದೆ. ಈ ಹಿನ್ನೆಲೆ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಚರ್ಚೆ ಮಾಡಿ ಆರೋಗ್ಯ ಕೇಂದ್ರದ ಪಕ್ಕದಲ್ಲಿ ಪಂಚಾಯಿತಿ ಕಟ್ಟಡ ನಿರ್ಮಾಣ ಮಾಡುವ ಕುರಿತು ಸರ್ವಾನುಮತದ ನಿರ್ಣಯ ಕೈಗೊಳ್ಳಲಾಗಿತ್ತು. ಇತ್ತೀಚೆಗೆ ಆರೋಗ್ಯ ಕೇಂದ್ರದ ಪಕ್ಕದಲ್ಲಿ ಜಿ.ಪಂ ವತಿಯಿಂದ…
ಲೇಖಕ: admin
ಸುಂಟಿಕೊಪ್ಪ,ಆ.14: ಸುಂಟಿಕೊಪ್ಪ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿ ಆಯ್ಕೆಯಾದ ಪಿ.ಆರ್.ಸುನಿಲ್ ಕುಮಾರ್ ಅವರನ್ನು ಸುಂಟಿಕೊಪ್ಪ ಮೋಟಾರ್ ವಾಹನ ವರ್ಕ್ಶಾಪ್ ಮಾಲೀಕರ ಹಾಗೂ ಕಾರ್ಮಿಕರ ಸಂಘದ ವತಿಯಿಂದ ಮಾಲಾರ್ಪನೆ ಮಾಡಿ ಸನ್ಮಾನಿಸಲಾಯಿತು. ಸುಂಟಿಕೊಪ್ಪ ಮೋಟಾರ್ ವಾಹನ ವರ್ಕ್ಶಾಪ್ ಸಂಘದ ಅಧ್ಯಕ್ಷರಾದ ಪಿ.ಆರ್.ಸುನಿಲ್ಕುಮಾರ್ ಅವರನ್ನು ಸುಂಟಿಕೊಪ್ಪ ವರ್ಕ್ಶಾಪ್ ಮಾಲೀಕ ಸಂಘದ ಗೌರವಧ್ಯಕ್ಷರುಗಳಾದ ವಿ.ಎ.ಸಂತೋಷ್,ವಿನೋದ್, ಪಿ.ಆರ್.ಸುಕುಮಾರ್ ಅವರುಗಳು ಸಭೆಯನ್ನು ಉದ್ದೇಶಿಸಿ ಮಾತನಾಡಿ ಅವರನ್ನು ಶಾಲು ಹೊದಿಸಿ ಫಲತಾಂಬೂಲ ನೀಡಿ ಸನ್ಮಾನಿಸಿ ಗೌರವಿಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಸಂಘದ ಅಧ್ಯಕ್ಷ ಕಳೆದ 25 ವರ್ಷಗಳ ಹಿಂದೆ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳಲು ಮೊದಲ ಪ್ರೇರಣೆಯಾಗಿದ್ದು ವರ್ಕ್ಶಾಪ್ ಮಾಲೀಕರ ಸಂಘ ಎಂದರು. ಪಕ್ಷದಲ್ಲಿ ಅಧ್ಯಕ್ಷ ಸೇರಿದಂತೆ ಆನೇಕ ಹುದ್ದೆಗಳನ್ನು ನಿರ್ವಹಿಸಿದ್ದ ನನಗೆ ಊರಿನ ಅಧ್ಯಕ್ಷ ಪದವಿ ದೊರೆಯಲು ಈ ಸಂಘವೇ ಕಾರಣವಾಗಿದೆ ಎಂದರು. ಸಮಾರಂಭದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಮಣಿಕಂಠ, ಸಹಕಾರ್ಯದರ್ಶಿ ಜಿಬಿನ್, ಬಿ.ಎಸ್.ರಮೇಶ್,ತಂಗವೇಲು,ಜೇಸುದಾಸ್,ಪಿಲಿಪ್, ಸುರೇಶ್, ಹೂವೇಗೌಡ, ಕಿರಣ್, ಸತೀಶ ಮತ್ತಿತರರು ಇದ್ದರು.
ಮಡಿಕೇರಿ ಆ.14 : “ಜಾತ್ಯಾತೀತತೆ ಭಾರತದ ಧರ್ಮ” ಎಂಬ ಧ್ಯೇಯ ವಾಕ್ಯದೊಂದಿಗೆ ಆ.15 ರ ಸ್ವಾತಂತ್ರ್ಯೋತ್ಸವದಂದು ಎಸ್ವೈಎಸ್ ಕೊಡಗು ಜಿಲ್ಲಾ ಸಮಿತಿಯ ವತಿಯಿಂದ ನೆಲ್ಯಾಹುದಿಕೇರಿಯಲ್ಲಿ ನಡೆಯಲಿರುವ ರಾಷ್ಟ್ರ ರಕ್ಷಾ ಸಂಗಮ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಎಸ್ವೈಎಸ್ ಕೊಡಗು ಜಿಲ್ಲಾ ಸಮಿತಿ ಕರೆ ನೀಡಿದೆ. ಭಾರತ ಮಣ್ಣಿನ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರ ಪುರುಷರನ್ನು ಎಂದಿಗೂ ನೆನಪಿಸಬೇಕಾಗಿದೆ. ಜಾತಿ ಭೇದ ಮರೆತು ಒಗ್ಗಟ್ಟಿನ ಹೋರಾಟ ನಡೆಸಿದ ಫಲವಾಗಿ ದೇಶ 1947ರಲ್ಲಿ ಪಡೆದ ಸ್ವಾತಂತ್ರ್ಯ, ಹಲವಾರು ಹೋರಾಟಗಾರರ ಪ್ರಾಣತ್ಯಾಗದ ಫಲವಾಗಿದೆ ಎಂಬುದನ್ನು ಪ್ರತ್ಯೇಕವಾಗಿ ಸ್ಮರಿಸಬೇಕಾಗಿದೆ. ದೇಶದ ಸೌಹಾರ್ದತೆಯ ಉಳಿವಿಗಾಗಿ, ಜಾತ್ಯಾತೀತ ಬಲಿಷ್ಠ ಭಾರತದ ನಿರ್ಮಾಣಕ್ಕಾಗಿ ಎಸ್ ವೈ ಎಸ್ ಕೊಡಗು ಜಿಲ್ಲಾ ಸಮಿತಿಯು ಹಮ್ಮಿಕೊಂಡಿರುವ ರಾಷ್ಟ್ರ ರಕ್ಷಾ ಸಂಗಮವನ್ನು ಯಶಸ್ವಿಗೊಳಿಸುವುದು ನಮ್ಮೆಲ್ಲರ ಕರ್ತವ್ಯ. ಸರ್ವ ಧರ್ಮ ಮುಖಂಡರುಗಳು, ಜಿಲ್ಲೆಯ ಶಾಸಕರುಗಳು, ರಾಜಕೀಯ, ಧಾರ್ಮಿಕ, ಸಾಮಾಜಿಕ ನೇತಾರರು ಭಾಗವಹಿಸುವ ಪ್ರಸ್ತುತ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಎಸ್ ಕೆ ಎಸ್ ಎಸ್ ಎಫ್ ಜಿಲ್ಲಾಧ್ಯಕ್ಷ ತಮ್ಲೀಖ್ ದಾರಿಮಿ ಮಡಿಕೇರಿ ಹಾಗೂ ಪ್ರಧಾನ…
ಮಡಿಕೇರಿ ಆ.13 : ಜಿಲ್ಲಾ ಉಸ್ತುವಾರಿ ಸಚಿವ ಭೋಸರಾಜು ಹಾಗೂ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಅರೆಕಾಡು ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಮೃತಪಟ್ಟ ದೇವಪ್ಪ ಅವರ ಕುಟುಂಬವನ್ನು ಭೇಟಿಯಾಗಿ ಸಾಂತ್ವನ ಹೇಳಿದರು. ಸಿದ್ದಾಪುರ ಆಸ್ಪತ್ರೆಯ ಶವಾಗಾರದಲ್ಲಿ ಮೃತದೇಹವನ್ನು ನೋಡಿದ ನಂತರ ಅರಣ್ಯ ಅಧಿಕಾರಿಗಳೊಂದಿಗೆ ಚರ್ಚಿಸಿದ ಅವರುಗಳು ಕಾಡಾನೆ ಉಪಟಳ ತಡೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.
ಮಡಿಕೇರಿ ಆ.13 : ಕೊಡಗು ಪತ್ರಕರ್ತರ ಸಂಘ ಹಾಗೂ ಕೊಡಗು ಜಿಲ್ಲಾ ಛಾಯಾಗ್ರಾಹಕರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಮಂಜಿನ ನಗರಿ ಛಾಯಾಗ್ರಾಹಕರ ಸಂಘದ ಆಶ್ರಯದಲ್ಲಿ ಆಗಸ್ಟ್ 19ರಂದು ಮಡಿಕೇರಿಯಲ್ಲಿ ವಿಶ್ವ ಛಾಯಾಚಿತ್ರ ದಿನವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮದ ಅಂಗವಾಗಿ ಪತ್ರಕರ್ತರಿಗೆ ಛಾಯಾಚಿತ್ರ ಹಾಗೂ ವೀಡಿಯೋ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಸಂಘದ ಹಿರಿಯ ಸಲಹೆಗಾರರು ಶಕ್ತಿ ದಿನಪತ್ರಿಕೆ ಸಲಹಾ ಸಂಪಾದಕರಾದ ಬಿ.ಜಿ.ಅನಂತಶಯನ ಅವರು ತಮ್ಮ ಪುತ್ರಿ ಡಾ.ಅನುಶ್ರೀ ಅವರ ಹ್ಯಾಪಿ ಟೀತ್ ಡೆಂಟಲ್ ಕ್ಲಿನಿಕ್ ಹೆಸರಿನಲ್ಲಿ ಸ್ಥಾಪಿಸಿರುವ ‘ಮಾನವೀಯ ಮೌಲ್ಯ’ಗಳನ್ನು ಒಳಗೊಂಡ ಅತ್ಯುತ್ತಮ ಛಾಯಾಚಿತ್ರ ಪ್ರಶಸ್ತಿಗೆ ಛಾಯಾ ಚಿತ್ರಗಳನ್ನು ಕಳುಹಿಸಬಹುದಾಗಿದೆ. 2023ರ ಜನವರಿಯಿಂದ 2023ರ ಆಗಸ್ಟ್ 1ರೊಳಗೆ ತೆಗೆದ ಛಾಯಾಚಿತ್ರಗಳನ್ನು ಮಾತ್ರ ಸ್ಪರ್ಧೆಗೆ ಕಳುಹಿಸಬೇಕು. ಛಾಯಾಚಿತ್ರವನ್ನು ಎಡಿಟ್ ಮಾಡುವಂತಿಲ್ಲ. ಅದೇ ರೀತಿ ಕೊಡಗು ಪತ್ರಕರ್ತರ ಸಂಘದ ವತಿಯಿಂದ ಕೊಡಗಿನ ಕೃಷಿಗೆ ಸಂಬಂಧಿಸಿದಂತೆ ನೀಡುವ ಅತ್ಯುತ್ತಮ ಛಾಯಾಚಿತ್ರ ಪ್ರಶಸ್ತಿ ಹಾಗೂ ಕೊಡಗಿನ ಜಲಪಾತಗಳ ವೈಭವಕ್ಕೆ ಸಂಬಂಧಿಸಿದ ವೀಡಿಯೋ ಗ್ರಫಿ ಪ್ರಶಸ್ತಿಗೆ ವೀಡಿಯೋ ಹಾಗೂ ಛಾಯಾಚಿತ್ರಗಳನ್ನು ಕಳುಹಿಸಬಹುದಾಗಿದೆ. 2023ರ…
ಕಡಂಗ ಆ.13 : ಕೊಡಗು ಜಿಲ್ಲಾ ಆಮಿಲಾ ಸಮಿತಿಯ ಅಧ್ಯಕ್ಷ ಹ್ಯಾರಿಸ್ ನೇತೃತ್ವದಲ್ಲಿ ಕಾಕೋಟುಪರಂಬು ಹಾಗೂ ನರಿಯಂದಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಡಂಗ ಪಟ್ಟಣದಲ್ಲಿ 77ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಸ್ವಚ್ಛತ್ತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಸ್ವಚ್ಛತ್ತಾ ಕಾರ್ಯಕ್ರಮವು ವಿಜಯ ಪ್ರೌಢ ಶಾಲೆಯಿಂದ ಆರಂಭ ಗೊಂಡು ಪಟ್ಟಣದ ಕೆಡಿಸಿಸಿ ಬ್ಯಾಂಕ್ ನ ವರೆಗೆ ರಸ್ತೆಯ ಬದಿಗಳಲ್ಲಿದ್ದ ಕಸ,ಕಡ್ಡಿ, ಪ್ಲಾಸ್ಟಿಕ್,ಪ್ಲಾಸ್ಟಿಕ್ ಬಾಟಲ್ ಹಾಗೂ ರಸ್ತೆಯ ಬದಿಯಲ್ಲಿದ್ದ ಕಾಡುಗಳನ್ನು ಕಡಿದು ಸ್ವಚ್ಛ ಗೊಳಿಸಲಾಯಿತು. ವಿರಾಜಪೇಟೆ ತಾಲೂಕು ಕಾಕೋಟುಪರಂಬು ಗ್ರಾಮ ಪಂಚಾಯಿತಿಗೆ ಒಳಪಟ್ಟ ಕಡಂಗ ಮುರೂರು ಗ್ರಾಮಕ್ಕೆ ಒಳಪಟ್ಟ ಕಡಂಗ ಪಟ್ಟಣದ ವಿಜಯ ಪ್ರೌಢ ಶಾಲೆಯ ಸಮೀಪ ಹಾಗೂ ಮಸೀದಿಯ ಸಮೀಪ ಸ್ಥಳೀಯರು ಕಸವನ್ನು ತಂದು ಸುರಿಯುತ್ತಿದ್ದು ಗ್ರಾಮ ಪಂಚಾಯಿತಿ ಇತ್ತ ಗಮನ ಹರಿಸುತ್ತಿಲ್ಲ. ಪ್ರೌಢ ಶಾಲೆಯ ಸಮೀಪದಲ್ಲೇ ಇರುವ ಬಸ್ ತಂಗುದಾಣದಲ್ಲಿ ಮದ್ಯ ಕುಡಿದು ಬಾಟಲಿಗಳನ್ನು ಅಲ್ಲೇ ಹಾಕಿದ್ದಾರೆ ಇದರಿಂದ ನಿತ್ಯ ಬಸ್ ಗಾಗಿ ತಂಗುದಾಣದಲ್ಲಿ ಕಾಯುವ ವಿದ್ಯಾರ್ಥಿಗಳು ಗೋಳು ಹೇಳತಿರದು, ಕೂಡಲೇ ಸಂಬಂಧ ಪಟ್ಟ ಗ್ರಾಮ ಪಂಚಾಯಿತಿ…
ಮಡಿಕೇರಿ ಆ.13 : ಗಾಂಜಾ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಕೊಡಗು ಪೊಲೀಸರು ಬಂಧಿಸಿದ್ದಾರೆ. ವಿರಾಜಪೇಟೆ ನೆಹರು ನಗರದ ನಿವಾಸಿ ಎಂ.ಕೆ.ಸಜೀರ್(31) ಆರೋಪಿಯಾಗಿದ್ದು, 205 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ. ವಿರಾಜಪೇಟೆಯ ಬಿಟ್ಟಂಗಾಲ ಬಳಿ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಲಭಿಸಿದ ಹಿನ್ನೆಲೆ ವಿರಾಜಪೇಟೆ ಗ್ರಾಮಾಂತರ ಪೊಲೀಸರು ದಾಳಿ ನಡೆಸಿ ಎಂ.ಕೆ.ಸಜೀರ್ ನನ್ನು ಮಾಲು ಸಹಿತ ಬಂಧಿಸಿದರು. ಮಡಿಕೇರಿ ಉಪ ವಿಭಾಗದ ಡಿವೈಎಸ್ಪಿ ಎಂ.ಜಗದೀಶ್, ವಿರಾಜಪೇಟೆ ಪಟ್ಟಣದ ವೃತ್ತ ನಿರೀಕ್ಷಕ ಬಿ.ಎಸ್.ಶಿವರುದ್ರಪ್ಪ, ಗ್ರಾಮಾಂತರ ಠಾಣಾಧಿಕಾರಿ ಸಿ.ಸಿ.ಮಂಜುನಾಥ್ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಮಡಿಕೇರಿ ಆ.13 : ಜಗತ್ತಿನ ಜನಸಂಖ್ಯೆ ಕೃಷಿಯನ್ನೇ ಅವಲಂಭಿಸಿದ್ದು, ಕೃಷಿಯೇ ಜನರ ಜೀವಾಳವಾಗಿದೆ. ಈ ಹಿನ್ನೆಲೆಯಲ್ಲಿ ಆಹಾರ ಉತ್ಪಾದನಾ ಕ್ಷೇತ್ರಕ್ಕೆ ತಾಂತ್ರಿಕತೆಯ ಸ್ಪರ್ಶದ ಅಗತ್ಯವಿದೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ವಿರಾಜಪೇಟೆ ಕ್ಷೇತ್ರ ಶಾಸಕ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಅಭಿಪ್ರಾಯಪಟ್ಟಿದ್ದಾರೆ ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವ ವಿದ್ಯಾಲಯ ವಿಸ್ತರಣ ಘಟಕ ಮಡಿಕೇರಿ ಇದರ ವತಿಯಿಂದ ಪೊನ್ನಂಪೇಟೆ ನಲ್ಲೂರು ಗ್ರಾಮದ ಪ್ರಗತಿಪರ ಕೃಷಿಕ ಸೋಮೇಂಗಡ ಗಣೇಶ್ ತಿಮ್ಮಯ್ಯ ಅವರ ಭತ್ತದ ಗದ್ದೆಯಲ್ಲಿ ಯಾಂತ್ರೀಕೃತ ಭತ್ತ ನಾಟಿಯ ತರಬೇತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಾಗಾರ ನಡೆಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಶಾಸಕ ಎ.ಎಸ್.ಪೊನ್ನಣ್ಣ, ಕೊಡಗು ಜಿಲ್ಲೆಯ ಜಮ್ಮಾ ಭೂಮಿಗಳು ಮೊದಲು ಭತ್ತದ ಗದ್ದೆಗಳಾಗಿದ್ದು, ಅತೀ ಹೆಚ್ಚಿನ ಪ್ರಮಾಣದಲ್ಲಿ ಭತ್ತ ಬೆಳೆಯಾಗುತ್ತಿತ್ತು. ಕೃಷಿ ಸಂಬಂಧಿತ ಜಮ್ಮಾಬಾಣೆಗಳನ್ನು ಜಾನುವಾರುಗಳನ್ನು ಮೇಯಿಸಲು ಬಳಸಲಾಗುತ್ತಿತ್ತು. ಕಾಫಿ ಬೆಳೆ ಕಾಲಿಟ್ಟ ಬಳಿಕ ಆರ್ಥಿಕತೆಯ ದೃಷಿಯಿಂದ ಅತ್ತ ಕಡೆ ಕೃಷಿಕರು ಮುಖ ಮಾಡಿದರು ಎಂದು ಹೇಳಿದರು. ಈ ಮೊದಲು ಕೊಡಗು…
ಮಡಿಕೇರಿ ಆ.13 : ಹಾರಂಗಿ ಅಣೆಕಟ್ಟೆಯಿಂದ ಮುಂದಿನ 15 ದಿನಗಳವರೆಗೆ ಪ್ರತಿ ದಿನ 1500 ಕ್ಯೂಸೆಕ್ ನೀರು ನದಿ ಮತ್ತು ಕಾಲುವೆ ಮೂಲಕ ಹರಿಸಲು ಹಾರಂಗಿ ನೀರಾವರಿ ಸಲಹಾ ಸಮಿತಿ ಸಭೆ ನಿರ್ಧರಿಸಿದೆ. ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂಥರ್ ಗೌಡ ಅವರ ಅಧ್ಯಕ್ಷತೆಯಲ್ಲಿ ಮೈಸೂರಿನ ನೀರಾವರಿ ನಿಗಮದ ಮುಖ್ಯ ಇಂಜಿನಿಯರ್ ಕಛೇರಿಯಲ್ಲಿ ಸಲಹಾ ಸಮಿತಿ ಸಭೆ ನಡೆಯಿತು. ಉತ್ತಮ ಮಳೆಯಾಗದ ಕಾರಣ ನೀರಿನ ಅಭಾವ ಉಂಟಾಗಿರುವುದರಿಂದ ರೈತರು ಹಾಗೂ ಜನ, ಜಾನುವಾರುಗಳಿಗೆ ನೀರು ಹರಿಸುವ ಸಂಬಂಧ ಚರ್ಚಿಸಲಾಯಿತು. 15 ದಿನಗಳ ಅಂತರದಲ್ಲಿ ನೀರು ಸ್ಥಗಿತಗೊಳಿಸಿ, ಮುಂದಿನ 15 ದಿನಗಳ ಕಾಲ ಕಟ್ಟುಪದ್ಧತಿಯಲ್ಲಿ ನೀರು ಹರಿಬಿಡಲು ಇಂದಿನಿಂದಲೇ ಕ್ರಮ ಕೈಗೊಳ್ಳುವಂತೆ ನಿಗಮದ ಅಧಿಕಾರಿಗಳಿಗೆ ಸಚಿವರು ಹಾಗೂ ಶಾಸಕರು ಸೂಚನೆ ನೀಡಿದರು. ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಬೋಸರಾಜು, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಪಶುಸಂಗೋಪನೆ ಸಚಿವ ಕೆ.ವೆಂಕಟೇಶ್, ಶಾಸಕರಾದ ಎ.ಮಂಜು, ರವಿಶಂಕರ್, ವಿಧಾನ ಪರಿಷತ್ ಸದಸ್ಯ ಮರಿ ತಿಬ್ಬೇಗೌಡ, ಹಾರಂಗಿ ಜಲಾಶಯ…
ಮಡಿಕೇರಿ ಆ.13 : ಕಾಡಾನೆಯೊಂದು ದಾಳಿ ಮಾಡಿದ ಪರಿಣಾಮ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಅರೆಕಾಡು ಗ್ರಾಮದ ನೇತಾಜಿ ನಗರದಲ್ಲಿ ನಡೆದಿದೆ. ಕಟ್ಟೆಮಾಡು ಗ್ರಾಮದ ಪರಂಬು ನಿವಾಸಿ ದೇವಪ್ಪ (60) ಮೃತ ದುರ್ದೈವಿ. ಅರೆಕಾಡು ಗ್ರಾಮದ ಕೃಷಿಕರೊಬ್ಬರ ಗದ್ದೆ ಹದ ಮಾಡಲೆಂದು ತಮ್ಮ ಟ್ರ್ಯಾಕ್ಟರ್ ನಲ್ಲಿ ಬಂದಿದ್ದ ಅವರು ಕೆಲಸ ಮುಗಿಸಿ ಮರಳುತ್ತಿದ್ದ ಸಂದರ್ಭ ಕಾಡಾನೆ ದಿಢೀರ್ ಪ್ರತ್ಯಕ್ಷವಾಗಿ ದಾಳಿ ಮಾಡಿದೆ. ದೇವಪ್ಪ ಅವರನ್ನು ಎಸೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟರು ಎಂದು ತಿಳಿದು ಬಂದಿದೆ. ಬೆಳಗ್ಗೆಯಿಂದಲೇ ಗ್ರಾಮದಲ್ಲಿ ಓಡಾಡುತ್ತಿದ್ದ ಕಾಡಾನೆ ನೇತಾಜಿ ನಗರದ ಜನನಿಬಿಡ ಪ್ರದೇಶಕ್ಕೆ ಬಂದಾಗ ಜನರು ಬೊಬ್ಬೆ ಹಾಕಿ ತಪ್ಪಿಸಿಕೊಂಡಿದ್ದಾರೆ. ಅಲ್ಲಿಂದ ಕಾಲ್ಕಿತ್ತ ಕಾಡಾನೆ ದೇವಪ್ಪ ಅವರಿದ್ದ ಪ್ರದೇಶಕ್ಕೆ ನುಸುಳಿ ದಾಳಿ ಮಾಡಿದೆ. ಅರಣ್ಯ ಇಲಾಖೆಯ ನಿರ್ಲಕ್ಷ್ಯವೇ ಘಟನೆಗೆ ಕಾರಣವೆಂದು ಸ್ಥಳೀಯ ಗ್ರಾಮಸ್ಥರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಸ್ಥಳಕ್ಕೆ ಭೇಟಿ ನೀಡಿದ ಅರಣ್ಯ ಅಧಿಕಾರಿಗಳು ಗ್ರಾಮಸ್ಥರನ್ನು ಸಮಾಧಾನ ಪಡಿಸುವ ಯತ್ನ ಮಾಡಿದರು. ಅಲ್ಲದೆ ರೂ.15 ಲಕ್ಷ ಪರಿಹಾರ ನೀಡುವುದಾಗಿ…






