ಮಡಿಕೇರಿ ಜು.14 : ಬೆಂಗಳೂರು ಆಯುರ್ವೇದ ಅಕಾಡೆಮಿ ಮತ್ತು ನೀಮಾ ಕೊಡಗು ಸಹಯೋಗದಲ್ಲಿ “ಅನ್ವಯ ಆಯುರ್ವೇದ (ಪಂಚಕರ್ಮ ಕೇಂದ್ರ)ದಲ್ಲಿ ಜು.16 ರಂದು ಉಚಿತ ಮಧುಮೇಹ ತಪಾಸಣಾ ಶಿಬಿರ ನಡೆಯಲಿದೆ ಎಂದು ಅನ್ವಯ ಆಯುರ್ವೇದಿಕ್ ಕ್ಲಿನಿಕ್ ಮತ್ತು ಪಂಚಕರ್ಮ ಕೇಂದ್ರದ ಡಾ.ಎಸ್.ಅನುಷಾ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ರೇಸ್ ಕೋರ್ಸ್ ರಸ್ತೆಯಲ್ಲಿರುವ ಅನ್ವಯ ಆಯುರ್ವೇದ ಕೇಂದ್ರದಲ್ಲಿ ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆವರೆಗೆ ಶಿಬಿರ ನಡೆಯಲಿದ್ದು, ಮಧುಮೇಹ ತಪಾಸಣೆ, ಡಯಾಬಿಟಿಕ್ ಫುಟ್, ವಾಸಿಯಾಗದ ಗಾಯ, ಡಯಾಬಿಟಿಕ್ ರೆಟಿನೋಪತಿ, ಆಯುರ್ವೇದ ಆಹಾರ ಪದ್ದತಿ ಮತ್ತು ವ್ಯಾಯಾಮ ಅಲ್ಲದೆ ಮಧುಹೀಗೆ ಬೇಕಾದ ಪಂಚಕರ್ಮ ಚಿಕಿತ್ಸೆಗಳ ಬಗ್ಗೆ ಉತ್ತಮ ಸೇವೆ ನೀಡಲು ನುರಿತ ಆಯುರ್ವೇದ ತಜ್ಞರ ತಂಡ ಲಭ್ಯವಿರಲಿದ್ದಾರೆ. ಇದರೊಂದಿಗೆ ಉಚಿತ ಆಯುರ್ವೇದ ಜೌಷಧಿಗಳು ಮತ್ತು ಪಂಚಕರ್ಮ ಚಿಕಿತ್ಸೆಗಳ ಮೇಲೆ ರಿಯಾತಿ ನೀಡಲಾಗುತ್ತದೆ ಎಂದು ಮಾಹಿತಿ ನೀಡಿದರು. ಭಾರತದ ವೈದ್ಯ ಪದ್ದತಿಯಾದ ಆಯುರ್ವೇದವು ಪುರಾತನ ಕಾಲದಿಂದಲೂ ಮಧುಮೇಹವನ್ನು ಉತ್ತಮ ರೀತಿಯಲ್ಲಿ ಚಿಕಿತ್ಸಿಸುತ್ತಾ ಬಂದಿದೆ.…
ಲೇಖಕ: admin
ಮಡಿಕೇರಿ ಜು.14 : ಸರ್ಕಾರದ ಆದೇಶದಂತೆ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗಳಿಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯನ್ವಯ ವಿತರಿಸಲಾಗುವ 05 ಕೆ.ಜಿ ಆಹಾರ ಧಾನ್ಯದೊಂದಿಗೆ ರಾಜ್ಯ ಸರ್ಕಾರದ ವತಿಯಿಂದ ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗಳಿಗೆ ಪ್ರತಿ ತಿಂಗಳು 05 ಕೆ.ಜಿ ಹೆಚ್ಚುವರಿ ಅಕ್ಕಿಯ ಬದಲಾಗಿ 2023 ರ ಜುಲೈ ಮಾಹೆಯಿಂದ ಪ್ರತಿ ಕೆ.ಜಿ ಗೆ ರೂ.34 ರಂತೆ (34*5 ಕೆ.ಜಿ=170) 170 ರೂ.ಗಳನ್ನು ಪಡಿತರ ಚೀಟಿಯಲ್ಲಿನ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ ಹಣವನ್ನು ವರ್ಗಾಯಿಸಲು ಕ್ರಮವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ. ಅಂತ್ಯೋದಯ ಪಡಿತರ ಚೀಟಿಗಳಿಗೆ ಸಂಬಂಧಿಸಿದಂತೆ ಅಂತ್ಯೋದಯ ಪಡಿತರ ಚೀಟಿಯನ್ನು ಹೊಂದಿರುವ ಮೂರು ಅಥವಾ ಮೂರಕ್ಕಿಂತ ಕಡಿಮೆ ಸದಸ್ಯರಿರುವ ಕುಟುಂಬಗಳ ಪಡಿತರ ಚೀಟಿಗೆ ಈಗಾಗಲೇ 35 ಕೆ.ಜಿ ಅಕ್ಕಿಯನ್ನು ಪ್ರತಿ ತಿಂಗಳು ನೀಡುತ್ತಿರುವುದರಿಂದ ಅಂತಹ ಅಂತ್ಯೋದಯ ಪಡಿತರ ಚೀಟಿಗಳಿಗೆ ನೇರ ನಗದು ವರ್ಗಾವಣೆ ಸೌಲಭ್ಯ ಒಳಪಡುವುದಿಲ್ಲ.…
ಮಡಿಕೇರಿ ಜು.14 : ಸಮಯೋಚಿತ ಲೇಖನಗಳ ಹರಿಕಾರ ಬಾಳೆಯಡ ಕಿಶನ್ ಪೂವಯ್ಯನವರ ಲೇಖನಗಳನ್ನು ಶಕ್ತಿ ಮತ್ತಿತರ ಪತ್ರಿಕೆಗಳಲ್ಲಿ ಓದುತ್ತಿದ್ದಾಗ ಇವರ ಯಾವುದೇ ಲೇಖನದಲ್ಲಿ ಪೂರ್ವಾಗ್ರಹ ಪೀಡಿತ ವಿಷಯಗಳ ಮೆರವಣಿಗೆ ಕಾಣುತ್ತಿರಲಿಲ್ಲ. ಕಾಲಕ್ಕೆ ತಕ್ಕಂತೆ ಮಾತ್ರವಲ್ಲ ಹೇಳಲೇಬೇಕಾದ ವಿಷಯಗಳ ಕುರಿತು ಕೇಳುವವರಾರೂ ಇಲ್ಲವೆಂದು ಭಾವಿಸಿಕೊಂಡಾಗ ಇವರ ಲೇಖನ ಪ್ರತ್ಯಕ್ಷವಾಗುತ್ತಿತ್ತು. ಅಂತಹ ಹಲವಾರು ಲೇಖನಗಳ ಸರಮಾಲೆಯನ್ನು ಸುಂದರ ಮಾಲೆಯಾಗಿ ಪೋಷಿಸಿದ ಕೃತಿಯೇ “ರಾಜಕೀಯ ಮತ್ತು ಪ್ರಕೃತಿ” ಕೃತಿಯಲ್ಲಿ ಅಡಗಿರುವ ಮೊದಲ ಲೇಖನ “ಮಡಿಕೇರಿ ದಸರಾ” ಅಂದು ದೇವಾತಾ ಕಾರ್ಯ ಇಂದು ರಾಜಕೀಯ ಮೇಲಾಟ ಎಂಬ ಶೀರ್ಷಿಕೆಯನ್ನು ಹೊತ್ತು ತಂದಿದೆ. ಪಲ್ಲಕ್ಕಿ ಮತ್ತು ಲ್ಯಾಟಿನ್ ದೀಪಗಳ ಬೆಳಕಿನಲ್ಲಿ ನಡೆಯುತ್ತಿದ್ದ ದಸರಾದ ಇಂದಿನ ವೈಭವವನ್ನು ನಾವೆಲ್ಲರೂ ಕಾಣುತ್ತಿದ್ದೇವೆ. ಶಕ್ತಿ ದೇವತೆಗಳ ನವರಾತ್ರಿಯ ವೈಭವದ ಒಂಬತ್ತು ದಿನಗಳ ಉತ್ಸವದ ಪದಾಧಿಕಾರಿಗಳ ಅಯ್ಕೆಯ ಒಂಬತ್ತು ತಿಂಗಳ ಮೇಲಾಟದ ವಿವರಗಳನ್ನು ಅತ್ಯಂತ ಸೂಕ್ಷ್ಮವಾಗಿ, ಸೂಕ್ತವಾಗಿ ಕಟ್ಟಿಕೊಟ್ಟಿದ್ದಾರೆ. ದೇವತಾ ಕಾರ್ಯ ದಸರಾವನ್ನು ಸಿನಿಮೀಯ ಕೃತ್ಯದಂತೆ ಕಂಗೊಳಿಸಲು ಪ್ರಯತ್ನಿಸಿದವರಿಗೆ ಬೈಲಾ ತಿದ್ದುಪಡಿ ಮಾಡಲು ಏಕೆ…
ಬೆಂಗಳೂರು: ಚಂದಿರನ ಅಂಗಳಕ್ಕೆ ನೌಕೆಯನ್ನು ಕಳುಹಿಸುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ(ಇಸ್ರೋ) ಐತಿಹಾಸಿಕ ಚಂದ್ರಯಾನ-3 ಮಧ್ಯಾಹ್ನ 2.35ಕ್ಕೆ ಆಂಧ್ರ ಪ್ರದೇಶದ ಶ್ರೀಹರಿಕೋಟಾದಿಂದ ಉಡಾವಣೆಯಾಗಿದೆ. ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಇಂದು ಮಧ್ಯಾಹ್ನ ಉಡಾವಣೆಯಾದ ಕೆಲವೇ ಕ್ಷಣಗಳಲ್ಲಿ ಚಂದ್ರಯಾನ-3 ನೌಕೆ ನಿಗದಿತ ಕಕ್ಷೆ ಸೇರಿದೆ. ಇದರೊಂದಿಗೆ ಉಪಗ್ರಹವನ್ನು ಚಂದ್ರನ ಮೇಲ್ಮೈಯಲ್ಲಿ ಸುಲಭವಾಗಿ ಇಳಿಸುವ 6 ವಾರಗಳ ಮಿಷನ್ ಗೆ ಅಧಿಕೃತ ಚಾಲನೆ ಸಿಕ್ಕಿದೆ. ಚಂದ್ರಯಾನ-3 ಲ್ಯಾಂಡರ್, ರೋವರ್ ಮತ್ತು ಪ್ರೊಪಲ್ಷನ್ ಮಾಡ್ಯೂಲ್ ನ್ನು ಹೊಂದಿದ್ದು, ಇದು ಸುಮಾರು 3,900 ಕಿಲೋಗ್ರಾಂಗಳಷ್ಟು ಭಾರವನ್ನು ಹೊಂದಿದೆ.
ಸೋಮವಾರಪೇಟೆ ಜು.14 : ಗೋಣಿಮರೂರು ಸರ್ಕಾರಿ ಪ್ರೌಢಶಾಲೆಯ ಹಳೆ ವಿದ್ಯಾರ್ಥಿಗಳಿಂದ ಗುರುವಂದನೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು. 21 ವರ್ಷಗಳ ಹಿಂದೆ ಬೋಧನೆ ಮಾಡಿದಂತಹ ಶಿಕ್ಷಕರುಗಳಿಗೆ ಹಾಗೂ ಪ್ರಸಕ್ತ ಸಾಲಿನಲ್ಲಿ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡ 100ರಷ್ಟು ಫಲಿತಾಂಶ ಗಳಿಸಲು ಶ್ರಮಿಸಿದ ಶಾಲಾ ಶಿಕ್ಷಕರಿಗೆ ಮತ್ತು ವಿದ್ಯಾರ್ಥಿಗಳಿಗೆ, 2000-2001 ನೇ ಬ್ಯಾಚಿನ ವಿದ್ಯಾರ್ಥಿಗಳಿಂದ ಗೌರವ ನಮನ ಮತ್ತು ಗುರು ವಂದನಾ ಸಲ್ಲಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸರ್ಕಾರಿ ಪ್ರೌಢಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಹರೀಶ್ ವಹಿಸಿದ್ದರು. ಶಾಲೆಯ ಮುಖ್ಯ ಶಿಕ್ಷಕ ನೂತನ್ ಕುಮಾರ್, ಶಿಕ್ಷಕರಾದ ಎಂ.ಎಲ್. ಶ್ರೀಕಾಂತ್, ಕೆ.ಎಂ.ಗಿರಿಜಾಂಬ, ಹಿರಿಯ ಶಿಕ್ಷಕರಾದ ಗಣಪತಿ ಭಟ್, ಉಷಾ, ಸಾಯಿರ ಬಾನು, ದಿನೇಶ್ ಮತ್ತಿತರರು ಹಾಜರಿದ್ದರು. ಸುಮಾರು ನೂರಕ್ಕೂ ಹೆಚ್ಚು ಜನ ಹಳೆಯ ವಿದ್ಯಾರ್ಥಿಗಳು ಗ್ರಾಮಸ್ಥರು ಮತ್ತು ಈ ಹಿಂದೆ ಕರ್ತವ್ಯ ನಿರ್ವಹಿಸಿದಂತಹ ಶಿಕ್ಷಕರುಗಳು ಭಾಗವಹಿಸಿದ್ದರು.
ಸೋಮವಾರಪೇಟೆ ಜು.14 : ಅರಣ್ಯ ಇಲಾಖೆ ಮತ್ತು ಜ್ಞಾನ ವಿಕಾಸ ಆಂಗ್ಲ ಮಾಧ್ಯಮ ಶಾಲೆ ಸಂಯುಕ್ತ ಆಶ್ರಯದಲ್ಲಿ ವನಮಹೋತ್ಸವ ಕಾರ್ಯಕ್ರಮ ನಡೆಯಿತು. ವಲಯ ಉಪ ಅರಣ್ಯಾಧಿಕಾರಿ ಕೆ.ಸಿ.ನಾರಾಯಣ್, ಗಿಡ ನಡೆವು ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಪರಿಸರ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯ. ವಿದ್ಯಾರ್ಥಿಗಳು ತಮ್ಮ ಮನೆಯ ಹತ್ತಿರ, ತೋಟದಲ್ಲಿ ಒಂದೊಂದು ಗಿಡಗಳನ್ನು ನೆಡುವ ಮೂಲಕ ಪರಿಸರಕ್ಕೆ ಕೊಡುಗೆ ನೀಡಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಮಂಡಳಿ ಅಧ್ಯಕ್ಷ ಬಿ.ಎಂ.ಚಂದ್ರಾಜು, ಕಾರ್ಯದರ್ಶಿ ಎಸ್. ವೆಂಕೆಟೇಶ್, ನಿರ್ದೇಶಕರಾದ ಎ.ಎಸ್. ಮಹೇಶ್, ಮುಖ್ಯ ಶಿಕ್ಷಕಿ ಪಿ.ಕೆ. ಲಕ್ಷ್ಮೀ, ಕ್ಷೇಮಾಭಿವೃದ್ಧಿ ಅಧಿಕಾರಿ ವಿಜಯ್ ಮತ್ತಿತರರು ಇದ್ದರು.
ಮಡಿಕೇರಿ ಜು.14 : ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆ ಸರಹದ್ದಿನಲ್ಲಿ ಅಕ್ರಮವಾಗಿ ಮಾದಕ ವಸ್ತುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ನಾಲ್ವರು ವ್ಯಕ್ತಿಗಳನ್ನು ಕೊಡಗು ಜಿಲ್ಲಾ ಪೊಲೀಸರು ಬಂಧಿಸಿ, 1 ಕೆ.ಜಿ.160 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಹೊಸತೋಟ ನಿವಾಸಿಗಳಾದ ಕೆ.ಹೆಚ್.ಫೈಜಲ್(30), ಶರೀಫ್(32), ಗೋಂದಿಬಸವನಹಳ್ಳಿ ನಿವಾಸಿ ಜಿ.ಎ.ಶಶಿಕುಮಾರ್ (31), ಗುಡ್ಡೆಹೊಸೂರು ನಿವಾಸಿ ವಿನೀತ್ (28) ಎಂಬುವವರೇ ಬಂಧಿತ ಆರೋಪಿಗಳು. ಆರೋಪಿಗಳಿಂದ 1 ಕೆ.ಜಿ.160 ಗ್ರಾಂ ಗಾಂಜಾ ಮತ್ತು 6.5 ಗ್ರಾಂ ಎಂಡಿಎಂಎ ನಿಷೇಧಿತ ಮಾದಕ ವಸ್ತುವಿನೊಂದಿಗೆ ವಶಪಡಿಸಿಕೊಳ್ಳಲಾಗಿದೆ. ಗುಡ್ಡೆಹೊಸೂರುನಿಂದ ಸಿದ್ದಾಪುರ ಕಡೆಗೆ ಹೋಗುವ ರಸ್ತೆಯಲ್ಲಿ ಮಾದಕ ವಸ್ತು ಮಾಡರಾಟ ಮಾಡುತ್ತಿರುವ ಕುರಿತು ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿ ಆರೋಪಿಗಳಿಂದ 1 ಕೆ.ಜಿ.160 ಗ್ರಾಂ ಗಾಂಜಾ ಮತ್ತು 6.5 ಗ್ರಾಂ ಎಂಡಿಎಂಎ ನಿಷೇಧಿತ ಮಾದಕ ವಸ್ತುವಿನೊಂದಿಗೆ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣದಲ್ಲಿ ಕಾರ್ಯನಿರ್ವಹಿಸಿದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕಾರ್ಯಕ್ಷಮತೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಶ್ಲಾಘಿಸಿದ್ದಾರೆ. ::: ಮಾಹಿತಿ…
ಮಡಿಕೇರಿ ಜು.14 : ಸುಂಟಿಕೊಪ್ಪದಲ್ಲಿ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಜಾಲವೊಂದನ್ನು ಪೊಲೀಸರು ಯಶ್ವಸಿಯಾಗಿ ಭೇದಿಸಿದ್ದು ಮಾಲು ಹಾಗೂ ವಾಹನ ಸಹಿತ ಐವರನ್ನು ಬಂಧಿಸಿದ್ದಾರೆ. ಸುಂಟಿಕೊಪ್ಪ ಚೆಸ್ಕಾಂ ಬಳಿಯ ನಿವಾಸಿಗಳಾದ ರಫೀಕ್ (40), ನಯನ್ (25), ಅಭಿಷೇಕ್ (20), ಮೊಹಮ್ಮದ್ ಮುಕ್ರಮ್ (40) ಎಂಬವರನ್ನು ಬಂಧಿಸಲಾಗಿದೆ. ಆರೋಪಿಗಳ ಬಳಿಯಿಂದ 1 ಕೆ.ಜಿ.65 ಗ್ರಾಂ ಗಾಂಜಾ, 2.5 ಗ್ರಾಂ ನಿಷೇಧಿತ ಮಾದಕ ಪುಡಿಯನ್ನು ವಶಪಡಿಸಿಕೊಳ್ಳಲಾಗಿದೆ. ಸುಂಟಿಕೊಪ್ಪದ ಮಾರುಕಟ್ಟೆ ರಸ್ತೆ ಬಳಿಯಲ್ಲಿ ವ್ಯಾಪಾರ ನಡೆಸುತ್ತಿರುವ ಸಂದರ್ಭ ಖಚಿತ ಮಾಹಿತಿ ಆಧಾರಿಸಿ ಪೊಲೀಸರು ದಾಳಿ ನಡೆಸಿದ್ದು, ಐವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಕೊಡಗು ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧಿಕ್ಷಕರಾದ ಸುಂದರ್ ರಾಜ್, ಡಿವೈಎಸ್ಪಿ ಆರ್.ವಿ. ಗಂಗಾಧರಪ್ಪ, ಕುಶಾಲನಗರ ವೃತ್ತ ನಿರೀಕ್ಷಕರಾದ ಬಿ.ಜಿ.ಮಹೇಶ್ ನೇತೃತ್ವದಲ್ಲಿ ತಂಡದಲ್ಲಿ ಸುಂಟಿಕೊಪ್ಪ ಠಾಣಾಧಿಕಾರಿ ಎಂ.ಸಿ.ಶ್ರೀಧರ್, ಅಪರಾಧ ವಿಭಾಗದ ಎಸ್.ಐ.ಸ್ವಾಮಿ ಸಿಬ್ಬಂದಿಗಳಾದ ಮುಖ್ಯಪೇದೆ ಎಂ.ವಿ.ಸತೀಶ್, ಜಗದೀಶ್, ಪ್ರವೀಣ್, ಸಂಪತ್, ನಿಶಾಂತ್, ಸತೀಶ್ ಕುಮಾರ್, ಇಳಗೆರೆ, ಅಭಿಲಾಷ್,…
ಮಡಿಕೇರಿ, ಜು.14: ಮಡಿಕೇರಿಯ ಅಶ್ವಿನಿ ಆಸ್ಪತ್ರೆ ಆವರಣದಲ್ಲಿ ಗಿಡಗಳನ್ನು ನೆಡುವ ಮೂಲಕ ವನಮಹೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ನಿಟ್ಟೆ ವಿಶ್ವ ವಿದ್ಯಾಲಯದ ಕುಲಪತಿ ವಿನಯ್ ಹೆಗ್ಡೆ ಹಾಗೂ ವಿ.ವಿ. ಯ ಸಾಮಾಜಿಕ ನಿರ್ವಹಣಾ ವಿಭಾಗದ ಅಧ್ಯಕ್ಷ ಪ್ರೊ. ಡಾ.ಸತೀಶ್ ಕುಮಾರ್ ಭಂಡಾರಿ ಅವರ ನಿರ್ಧಾರದಂತೆ ನಿಟ್ಟ್ಟೆ ಸಂಸ್ಥೆಯ ಎಲ್ಲ ಗ್ರಾಮೀಣ ವಿಭಾಗಗಳಲ್ಲಿ ವನ ಮಹೋತ್ಸವ ಹಮ್ಮಿಕೊಳ್ಳಲಾಗುತ್ತಿದೆ ಎಂದು ಮಡಿಕೇರಿ ಅಶ್ವಿನಿ ಆಸ್ಪತ್ರೆಯಲ್ಲ್ಲಿರುವ ನಿಟ್ಟೆ ಸಂಸ್ಥೆಯ ದಂತ ಚಿಕಿತ್ಸಾ ವಿಭಾಗದ ಮುಖ್ಯಸ್ಥೆ ಡಾ.ಅನುಶ್ರೀ ತಿಳಿಸಿದರು. ಈ ಸಂದರ್ಭ ಮಂಗಳೂರಿನ ವಾಣಿಜ್ಯೋದ್ಯಮಿ ರೊಟೇರಿಯನ್ ಸತೀಶ್ ಬೋಳಾರ್, ಮಡಿಕೇರಿ ನಗರಸಭಾಧ್ಯಕ್ಷೆ ಅನಿತ ಪೂವಯ್ಯ, ಮಡಿಕೇರಿ ರೋಟರಿ ವುಡ್ಸ್ ಅಧ್ಯಕ್ಷ ವಸಂತ್ ಕುಮಾರ್, ಮಿಸ್ಟಿಹಿಲ್ಸ್ಸ್ ಅಧ್ಯಕ್ಷ ಪ್ರಮೋದ್ ಕುಮಾರ್ ರೈ, ಕಾರ್ಯದರ್ಶಿ ರತ್ನಾಕರ್ ರೈ, ಕೊಡಗು ವಿದ್ಯಾಲಯದ ಪ್ರಾಂಶುಪಾಲೆ ಸುಮಿತ್ರ, ವ್ಯವಸ್ಥಾಪಕ ರವಿ, ಮಂಗಳೂರಿನ ರೊಟೇರಿ ಯನ್ ಸೂರ್ಯಕಾಂತ್, ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷ ಬಿ.ಜಿ.ಅನಂತ ಶಯನ, ಶಕ್ತಿ ಪ್ರಧಾನ ಸಂಪಾದಕ ಜಿ.ರಾಜೇಂದ್ರ, ಅಶ್ವಿನಿ ಆಸ್ಪತ್ರೆ ಕಾರ್ಯದರ್ಶಿ ರವೀಂದ್ರ…
ಮಡಿಕೇರಿ ಜು.14 : ಮಡಿಕೇರಿ ನಗರಸಭಾ ಸದಸ್ಯ ಹಾಗೂ ಮಡಿಕೇರಿ ಕೊಡವ ಸಮಾಜದ ನಿರ್ದೇಶಕ ಕಾಳಚಂಡ ಅಪ್ಪಣ್ಣ ಅವರ ಮೇಲಿನ ಹಲ್ಲೆಯನ್ನು ಖಂಡಿಸಿ ಮಡಿಕೇರಿ ಕೊಡವ ಸಮಾಜದ ನೇತೃತ್ವದಲ್ಲಿ ಜಿಲ್ಲೆಯ ಎಲ್ಲಾ ಕೊಡವ ಸಮಾಜ, ಗೌಡ ಸಮಾಜ ಹಾಗೂ ಇತರೆ ಹಲವು ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಪ್ರತಿಭಟನೆ ನಡೆಯಿತು. ಮಡಿಕೇರಿಯ ಕೊಡವ ಸಮಾಜದಲ್ಲಿ ಸಮಾವೇಶಗೊಂಡ ವಿವಿಧ ಸಮಾಜದ ಪ್ರಮುಖರು ಹಾಗೂ ಕೊಡವರು, ಕೊಡವ ಭಾಷಿಕರು, ಜಿಲ್ಲಾಧಿಕಾರಿಗಳ ಕಚೇರಿ ವರೆಗೆ ಮೆರವಣಿಗೆ ಮೂಲಕ ತೆರಳಿ, ಜನರಲ್ತಿಮ್ಮಯ್ಯ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ಹಲ್ಲೆ ನಡೆಸಿದವರ ವಿರುದ್ಧ ಘೋಷಣೆ ಕೂಗಿ ಅಸಮಾಧಾನ ವ್ಯಕ್ತಪಡಿಸಿದರು. ನಂತರ ಮೆರವಣಿಗೆಯಲ್ಲಿ ತೆರಳಿದ ಪ್ರತಿಭಟನಾಕರರು ಜಿಲ್ಲಾಧಿಕಾರಿ ಕಚೇರಿ ಎದುರು ಸಮಾವೇಶಗೊಂಡು, ಮಡಿಕೇರಿ ನಗರಸಭಾ ಸದಸ್ಯ ಹಾಗೂ ಮಡಿಕೇರಿ ಕೊಡವ ಸಮಾಜದ ನಿರ್ದೇಶಕ ಕಾಳಚಂಡ ಅಪ್ಪಣ್ಣ ಅವರ ಮೇಲೆ ಹಲ್ಲೆ ನಡೆಸಿದ ವ್ಯಕ್ತಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವ ಮೂಲಕ ಮುಂದೆ ಜಿಲ್ಲೆಯ ಯಾವುದೇ ಭಾಗದಲ್ಲಿ ಈ ರೀತಿಯ ಪ್ರಕರಣಗಳು ಮರುಕಳಿಸದಂತೆ…






