ಲೇಖಕ: admin

ಪ್ಯಾರಿಸ್(ಫ್ರಾನ್ಸ್): ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಫ್ರಾನ್ಸ್‌ನ ಅತ್ಯುನ್ನತ ಗೌರವವಾದ ಗ್ರ್ಯಾಂಡ್ ಕ್ರಾಸ್ ಆಫ್ ದಿ ಲೀಜನ್ ಆಫ್ ಆನರ್ ನ್ನು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರು ನೀಡಿ ಗೌರವಿಸಿದ್ದಾರೆ. ಎರಡು ದಿನಗಳ ಭೇಟಿಗಾಗಿ ನಿನ್ನೆ ಗುರುವಾರ ಪ್ಯಾರಿಸ್‌ಗೆ ಆಗಮಿಸಿದ ಮೋದಿಯವರಿಗೆ ಅಲ್ಲಿನ ನಾಯಕರು ಅಭೂತಪೂರ್ವ ಸ್ವಾಗತ ನೀಡಿದರು. ಇಂದು ಪ್ರಧಾನಿಯವರು ಫ್ರೆಂಚ್ ರಾಷ್ಟ್ರೀಯ ದಿನಾಚರಣೆಯಲ್ಲಿ ಗೌರವ ಅತಿಥಿಯಾಗಿ ಮ್ಯಾಕ್ರನ್ ಜೊತೆಗೆ ಭಾಗಿಯಾಗಲಿದ್ದಾರೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಒಇಂ) ವಕ್ತಾರ ಅರಿಂದಮ್ ಬಾಗ್ಚಿ ಅವರು ಇಲ್ಲಿನ ಎಲಿಸೀ ಅರಮನೆಯಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದ ಚಿತ್ರಗಳನ್ನು ಟ್ವೀಟ್ ಮಾಡಿದ್ದಾರೆ, “ಪಾಲುದಾರಿಕೆಯ ಮನೋಭಾವವನ್ನು ಸಾಕಾರಗೊಳಿಸುವ ಹೆಜ್ಜೆಯಿದು, ಫ್ರಾನ್ಸ್ ಅಧ್ಯಕ್ಷರಿಂದ ಅತ್ಯುನ್ನತ ಪ್ರಶಸ್ತಿ” ಎಂದು ಬರೆದುಕೊಂಡಿದ್ದಾರೆ.

Read More

ಬೆಂಗಳೂರು ಜು.14 : ಕೊಡಗು ಜಿಲ್ಲೆಯ ಕೆಲವೆಡೆ ಕೊಳೆತ ಮೊಟ್ಟೆ ವಿತರಣೆ ಮಾಡಿರುವ ವರದಿಗಳು ಬಂದಿರುವ ಹಿನ್ನಲೆಯಲ್ಲಿ,  ಕೊಡಗು ಜಿಲ್ಲಾ ಉಸ್ತುವಾರಿ ಸಚಿವ  ಬೋಸರಾಜು ಅವರು ಜಿಲ್ಲಾಧಿಕಾರಿಗಳಿಗೆ ದೂರವಾಣಿ ಮೂಲಕ ಮಾತನಾಡಿ ಕೊಳೆತ ಮೊಟ್ಟೆಗಳನ್ನು ಸರಬರಾಜು ಮಾಡಿರುವವರ ವಿರುದ್ದ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಬಾಣಂತಿಯರಿಗೆ ಪೌಷ್ಟಿಕಾಂಶ ದೊರಕಬೇಕು ಎನ್ನುವ ಉದ್ದೇಶದಿಂದ ಮೊಟ್ಟೆಗಳನ್ನು ನೀಡಲಾಗುತ್ತಿದೆ. ಆದರೆ, ಕೆಲವೆಡೆ ಕೊಳೆತ ಮೊಟ್ಟೆಗಳನ್ನು ನೀಡುತ್ತಿರುವುದು ಮಾಧ್ಯಮಗಳ ವರದಿಯಿಂದ ತಿಳಿದು ಬಂದಿದೆ. ಈ ರೀತಿಯ ಬೇಜವಾಬ್ದಾರಿಯ ನಡವಳಿಕೆಯನ್ನು ಸಹಿಸುವುದು ಸಾಧ್ಯವಿಲ್ಲ. ಈ ಬಗ್ಗೆ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ. ಮುಂದಿನ ದಿನಗಳಲ್ಲಿ ಇದು ಪುನರಾವರ್ತನೆ ಆದರೆ ಅಧಿಕಾರಿಗಳ ವಿರುದ್ದವೂ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಸಚಿವರು ತಿಳಿಸಿದ್ದಾರೆ.

Read More

ಮಡಿಕೇರಿ ಜು.12 : ಪ್ರಸಕ್ತ(2023) ಸಾಲಿನಲ್ಲಿ ವಿಕಲಚೇತನರ ಸಬಲೀಕರಣಕ್ಕಾಗಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವ್ಯಕ್ತಿ/ ಸಂಸ್ಥೆಗಳಿಗೆ ರಾಷ್ಟ್ರ ಪ್ರಶಸ್ತಿ ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ, 31 ಕೊನೆಯ ದಿನವಾಗಿದೆ. www.awards.gov.in ವೆಬ್‍ಸೈಟ್‍ನಲ್ಲಿ ಆನ್‍ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದು. ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಿದ ಒಂದು ಪ್ರತಿಯನ್ನು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಚೈನ್‍ಗೇಟ್ ಹತ್ತಿರ, ಮೈಸೂರು ರಸ್ತೆ, ಮಡಿಕೇರಿ ಈ ಕಚೇರಿಗೆ ನೀಡಬೇಕಾಗಿ ಕೋರಿದೆ. ಹೆಚ್ಚಿನ ಮಾಹಿತಿಗೆ ಕಚೇರಿಯ ದೂ.ಸಂ.08272 295829 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.

Read More

ಮಡಿಕೇರಿ ಜು.12 : ಭಾಗಮಂಡಲದ ಶ್ರೀ ಭಗಂಡೇಶ್ವರ ಮತ್ತು ತಲಕಾವೇರಿ ದೇವಾಲಯದಲ್ಲಿ ಪ್ರತಿ ವರ್ಷ ರೂಢಿ ಸಂಪ್ರದಾಯದಂತೆ “ಪೊಲಿಂಕಾನ” ಉತ್ಸವನ್ನು ಆಚರಿಸಲಾಗುತ್ತಿದೆ. ಅದರಂತೆ ಈ ವರ್ಷವೂ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ಆಷಾಡ ಕೃಷ್ಣ ಪಕ್ಷದ ಗ್ರೀಷ್ಮ ಋತು ದಕ್ಷಿಣಾಯನದ ಕರ್ಕಾಟಕ ಮಾಷ ಒಂದನೇ ಸೋಮವಾರ ಜುಲೈ, 17 ರಂದು ಮಧ್ಯಾಹ್ನ 12 ಗಂಟೆಗೆ ಮಹಾ ಪೂಜೆಯ ನಂತರ ‘ಪೊಲಿಂಕಾನ ಉತ್ಸವ’ ನಡೆಯಲಿದೆ. ಭಕ್ತಾಧಿಗಳು ಪೊಲಿಂಕಾನ ಉತ್ಸವದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಶ್ರೀ ಭಗಂಡೇಶ್ವರ-ತಲಕಾವೇರಿ ಮತ್ತು ಸಮೂಹ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿಯಾದ ಎಂ.ಎಸ್.ದೊರೆ  ಕೋರಿದ್ದಾರೆ.

Read More

ಮಡಿಕೇರಿ ಜು.12 : ಶಿಕ್ಷಕರು ಮನಸ್ಸು ಮಾಡಿದರೆ ವಿದ್ಯಾರ್ಥಿಗಳಲ್ಲಿ ಪರಿಣಾಮಕಾರಿ ಪರಿವರ್ತನೆಯನ್ನು ತರಲು ಸಾಧ್ಯವಿದೆ. ಆ ಮೂಲಕ ಬಲಿಷ್ಠ ರಾಷ್ಟ್ರ ನಿರ್ಮಾಣವನ್ನು ಸಾಧಿಸಬಹುದಾಗಿದೆ. ಹಾಗೆಯೇ ವಿದ್ಯಾರ್ಥಿಗಳು ಸಮಸ್ಯೆಗಳನ್ನು ಸವಾಲಾಗಿ ಸ್ವೀಕರಿಸಿ ಮುಂದೆ ಬರಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಕಿವಿಮಾತು ಹೇಳಿದರು. ಕೊಡಗು ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘದ ಶೈಕ್ಷಣಿಕ ಚಟುವಟಿಕೆಗಳ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವು ಕಾಲೇಜಿನ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾದದ್ದು ಎಂದರು. ಕಾರ್ಯಕ್ರಮದ ಅಂಗವಾಗಿ ಕಳೆದ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಕಲಾ, ವಾಣಿಜ್ಯ, ವಿಜ್ಞಾನ ವಿಭಾಗದಲ್ಲಿ ಜಿಲ್ಲೆಗೆ ಪ್ರಥಮ, ದ್ವಿತೀಯ, ತೃತೀಯ ಸ್ಥಾನವನ್ನು ಪಡೆದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಕ ಬಹುಮಾನಗಳನ್ನು ನೀಡಲಾಯಿತು. ಮತ್ತು ಶೇ.100 ರಷ್ಟು ಫಲಿತಾಂಶ ಪಡೆದ 17 ಕಾಲೇಜಿನ ಪ್ರಾಂಶುಪಾಲರಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು. ನಂತರ ಪ್ರಾಂಶುಪಾಲರ ಸಂಘದ ವತಿಯಿಂದ…

Read More

ಮಡಿಕೇರಿ ಜು.12 : ಕೊಡಗು ಜಿಲ್ಲೆಯಲ್ಲಿ ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆ ಕಾರ್ಮಿಕರ ತಪಾಸಣೆ ನಡೆಸಿ, ಸಮೀಕ್ಷೆಯಲ್ಲಿ ಪತ್ತೆಯಾದ ಬಾಲ ಕಾರ್ಮಿಕರನ್ನು ಜಿಲ್ಲೆಯಲ್ಲಿರುವ ಮಕ್ಕಳ ಕಲ್ಯಾಣ ಸಮಿತಿಯ ಬಾಲಕರ ಹಾಗೂ ಬಾಲಕಿಯರ ಬಾಲಮಂದಿರಗಳಲ್ಲಿ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ವಸತಿ ಶಾಲೆಗಳಲ್ಲಿ ಹಾಗೂ ಮುಖ್ಯವಾಹಿನಿ ಶಾಲೆಗಳಲ್ಲಿ ದಾಖಲಿಸಲು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ ಸಂಬಂಧ ಗುರುವಾರ ನಡೆದ ಜಿಲ್ಲಾ ಮಟ್ಟದ ಕಾರ್ಯಕಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆ ಕಾರ್ಮಿಕರ ಕಾಯ್ದೆಯಂತೆ ತಪಾಸಣೆ ಕೈಗೊಂಡ ವರದಿಯನ್ನು ಪ್ರತೀ ಮಾಹೆ ಒದಗಿಸುವಂತೆ ಕಾರ್ಮಿಕ ಅಧಿಕಾರಿಗೆ ಸೂಚಿಸಿದರು. ಜಿಲ್ಲೆಯಲ್ಲಿ ಯಾವುದೇ ಕ್ಷೇತ್ರದಲ್ಲಿ ಬಾಲ ಕಾರ್ಮಿಕರನ್ನು ದುಡಿಸಿಕೊಳ್ಳಬಾರದು. 14 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಕಡ್ಡಾಯವಾಗಿ ಶಿಕ್ಷಣ ನಿಡಬೇಕು. ಆ ನಿಟ್ಟಿನಲ್ಲಿ ಹೆಚ್ಚಿನ ತಪಾಸಣೆಯನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು. ‘ಪ್ರತಿಯೊಬ್ಬ ಮಕ್ಕಳಿಗೂ ಶಿಕ್ಷಣ ದೊರೆತಲ್ಲಿ ಸಮಾಜದಲ್ಲಿ ಬದಲಾವಣೆ…

Read More

ಮಡಿಕೇರಿ ಜು.13 : ಜಿಲ್ಲಾಧಿಕಾರಿ ಕಚೇರಿ ತಡೆಗೋಡೆ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಜು.18 ಮತ್ತು 19 ರಂದು ಕರ್ನಾಟಕ ಲೋಕಾಯುಕ್ತದ ಕಾರ್ಯಪಾಲಕ ಅಭಿಯಂತರರಾದ ಆರ್.ರವಿಶಂಕರ್ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಕೋಟ್ಯಾಂತರ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ತಡೆಗೋಡೆ ಕಾಮಗಾರಿ ಕಳಪೆ ಎಂದು ಆರೋಪಿಸಿ ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಅಭಿಯಂತರರು ಹಾಗೂ ಕಿರಿಯ ಅಭಿಯಂತರರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ತೆನ್ನಿರ ಮೈನಾ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು. ದೂರಿಗೆ ಸಂಬಂಧಿಸಿದಂತೆ ಜು.18 ಮತ್ತು 19 ರಂದು ಲೋಕಾಯುಕ್ತ ತನಿಖಾಧಿಕಾರಿಗಳಾದ ಕಾರ್ಯಪಾಲಕ ಅಭಿಯಂತರ ಆರ್.ರವಿಶಂಕರ್ ಸ್ಥಳ ಪರಿಶೀಲನೆ ಮಾಡಲಿದ್ದಾರೆ. ಲೋಕಯುಕ್ತದಿಂದ ಪ್ರಕರಣದ ತನಿಖೆ ನಡೆಯಲಿದ್ದು, ಈ ಸಂಬಂಧ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ, ಹಿರಿಯ ವಕೀಲ ಹೆಚ್.ಎಸ್.ಚಂದ್ರಮೌಳಿ ಕೂಡ ಶ್ರಮವಹಿಸಿದ್ದಾರೆ ಎಂದು ತೆನ್ನಿರ ಮೈನಾ ತಿಳಿಸಿದ್ದಾರೆ.

Read More

ಸಿದ್ದಾಪುರ ಜು.13 : ಸಿದ್ದಾಪುರ ಗ್ರಾಮ ಪಂಚಾಯಿತಿಯ ಗುಹ್ಯ 2ನೇ ವಾರ್ಡ್ ಸದಸ್ಯ ಹಸ್ಸನ್  137 ಕುಟುಂಬಗಳಿಗೆ ಉಚಿತವಾಗಿ ತನ್ನ ಸ್ವಂತ ಖರ್ಚಿನಲ್ಲಿ ಮನೆ ಮನೆಗೆ ಗೃಹಜ್ಯೋತಿ ಯೋಜನೆಯನ್ನು ಮಾಡಿಕೊಡುವ ಮೂಲಕ ಗ್ರಾಮಸ್ಥರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಸದಸ್ಯನ ಸಕಾಲದ ಸ್ಪಂದನೆಯಿಂದಾಗಿ ಕೆಲಸ ರಜೆ ಮಾಡಿ ನಾಗರೀಕ ಸೇವಾಕೇಂದ್ರಕ್ಕೆ ಅಲೆದಾಡುವುದು ತಪ್ಪಿದ್ದು, ಸೇವಾಕೇಂದ್ರಗಳಿಗೆ ಖರ್ಚು ಮಾಡಬೇಕಾದ ನೂರಾರು ರೂಪಾಯಿ ಹಣವನ್ನು ತಾವೇ ಭರಿಸಿ ಮಾದರಿಯಾಗಿದ್ದಾರೆ.

Read More

ಬೆಂಗಳೂರು: ಬೆಂಗಳೂರಿನಲ್ಲಿ ಕಾನೂನು ವಿರೋಧಿ ಕೃತ್ಯಗಳು ನಡೆಯದಂತೆ ತಡೆಯಲು ನಾವು ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಬಗ್ಗೆ ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿರುವ ಅವರು,ದುಡ್ಡಿನ ವ್ಯವಹಾರದ ಕಾರಣಕ್ಕಾಗಿ ನಡೆದಿದೆ ಎನ್ನಲಾದ ಜೈನಮುನಿ ಕಾಮಕುಮಾರ ನಂದಿ ಮಹರಾಜರ ಹತ್ಯೆಯ ಆರೋಪಿಗಳನ್ನು ಕೊಲೆ ನಡೆದ 6 ಗಂಟೆಗಳ ಒಳಗೆ ಬಂಧಿಸಲಾಗಿದೆ. ವೈಯಕ್ತಿಕ ದ್ವೇಷದ ಕಾರಣಕ್ಕಾಗಿ ಟಿ. ನರಸೀಪುರದ ವೇಣುಗೋಪಾಲ್ ಅವರನ್ನು ಹತ್ಯೆಗೈದ ಆರೋಪಿಗಳನ್ನು ಕೊಲೆ ನಡೆದ 24 ಗಂಟೆಯೊಳಗೆ ಬಂಧಿಸಲಾಗಿದೆ. ಬೆಂಗಳೂರಿನ ಏರೋನಿಕ್ಸ್ ಸಂಸ್ಥೆಯ ಎಂ.ಡಿ ಹಾಗೂ ಸಿ.ಇ.ಒ ಹತ್ಯೆಯ ಆರೋಪಿಗಳನ್ನು ಕೊಲೆ ನಡೆದ 24 ಗಂಟೆಗಳೊಳಗೆ ಬಂಧಿಸಲಾಗಿದೆ. ಪ್ರಕರಣವನ್ನು ಕೂಲಂಕುಷವಾಗಿ ತನಿಖೆ ನಡೆಸಿ, ಅಪರಾಧಿಗಳಿಗೆ ಗರಿಷ್ಠ ಶಿಕ್ಷೆಯಾಗುವಂತೆ ಕ್ರಮವಹಿಸಲು ರಾಜ್ಯದ ಪೊಲೀಸ್ ಇಲಾಖೆ ಸಮರ್ಥವಾಗಿದೆ. ಈ ಬಗ್ಗೆ ಯಾವ ಸಂದೇಹವೂ ಬೇಡ. ಹತ್ಯೆ, ಅಪಹರಣ ಮುಂತಾದ ಅಪರಾಧ ಕೃತ್ಯಗಳು ದುರದೃಷ್ಟಕರ. ಆದರೆ ಒಂದು ಸರ್ಕಾರವಾಗಿ ಇಂಥ ಕಾನೂನು ವಿರೋಧಿ ಕೃತ್ಯಗಳು ನಡೆಯದಂತೆ ತಡೆಯಲು ನಾವು ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದೇವೆ. ಸಮಾಜದಲ್ಲಿ…

Read More

ಮಡಿಕೇರಿ ಜು.13 : ಕುಶಾಲನಗರ ತಾಲೂಕು ವ್ಯಾಪ್ತಿಯ ಕೆಲವು ಅಂಗನವಾಡಿ ಕೇಂದ್ರಗಳಿಗೆ ಕೊಳೆತ ಮೊಟ್ಟೆಗಳನ್ನು ಸರಬರಾಜು ಮಾಡಿರುವ ಬಗ್ಗೆ ಆರೋಪಗಳು ಕೇಳಿ ಬಂದಿದೆ. ತಾಲ್ಲೂಕಿನ ಕೂಡಿಗೆ, ಬಸವನತ್ತೂರು ಸೇರಿದಂತೆ ಕೆಲವು ಅಂಗನವಾಡಿಗಳಲ್ಲಿ ಗರ್ಭಿಣಿ ಮಹಿಳೆಯರು, ಬಾಣಂತಿಯರು ಹಾಗೂ ಕೇಂದ್ರದ ಮಕ್ಕಳಿಗೆ ಕೊಳೆತ ಮೊಟ್ಟೆಗಳನ್ನು ಸರಬರಾಜು ಮಾಡಿರುವ ಬಗ್ಗೆ ಸಾರ್ವಜನಿಕರಿಂದ ಅಸಮಾಧಾನ ವ್ಯಕ್ತವಾಗಿದೆ. ಮೊಟ್ಟೆಗಳನ್ನು ಬೇಯಿಸಿದ ಸಂದರ್ಭ ದುರ್ವಾಸನೆಯಿಂದ ಕೂಡಿದ್ದು ಈ ಬಗ್ಗೆ ತನಿಖೆ ನಡೆಸಿ ಸಂಬಂಧಿಸಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೂಲಕ ರಾಜ್ಯ ಮಟ್ಟದಲ್ಲಿ ಟೆಂಡರ್ ಪಡೆದಿರುವ ಹೊರ ಜಿಲ್ಲೆಯ ಗುತ್ತಿಗೆದಾರರ ನಿರ್ಲಕ್ಷವೇ ಇದಕ್ಕೆ ಕಾರಣ ಎಂದು ಆರೋಪಿಸಲಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಟೆಂಡರ್ ವಹಿಸಿರುವ ಸಂಸ್ಥೆಗೆ ನೋಟಿಸ್ ನೀಡಿದ್ದಾರೆ. ಇಲಾಖೆ ಅಧಿಕಾರಿಗಳಾದ ನಟರಾಜ್ ಹಾಗೂ ವಿಮಲಾ ಅವರುಗಳು ಕುಶಾಲನಗರ ಸಮೀಪದ ಬಸವನತ್ತೂರು ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಂಗನವಾಡಿ…

Read More