ಮಡಿಕೇರಿ ಜು.13 : ಕೊಡಗು ಜಿಲ್ಲಾ ಪೊಲೀಸ್ ಮತ್ತು ಪೊನ್ನಂಪೇಟೆ ಕೂರ್ಗ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಇಂಜಿನಿಯರಿಂಗ್ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ವಿದ್ಯಾರ್ಥಿಗಳಿಗೆ ಡ್ರಗ್ ದುರುಪಯೋಗ ಮತ್ತು ಸೈಬರ್ ಅಪರಾಧದ ಕುರಿತು ಅರಿವು ಮೂಡಿಸಲಾಯಿತು. ಈ ಸಂದರ್ಭ ಕಾಲೇಜು ವಿದ್ಯಾರ್ಥಿಗಳೊಂದಿಗೆ ಡ್ರಗ್ ದುರುಪಯೋಗ ಮತ್ತು ಸೈಬರ್ ಅಪರಾಧ ಕುರಿತು ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಸಂವಾದ ನಡೆಸಿದರು. ಕಾರ್ಯಾಗಾರದಲ್ಲಿ ಸಿಐಟಿ ಕಾಲೇಜಿನ ಅಧ್ಯಕ್ಷ ಡಾ. ಕಾರ್ಯಪ್ಪ, ಉಪಾಧ್ಯಕ್ಷ ರಾಜೇಶ್ ಪೂವಯ್ಯ, ಪ್ರಾಂಶುಪಾಲ ಡಾ: ಬಸವರಾಜು, ಕಾಲೇಜಿನ ವಿದ್ಯಾರ್ಥಿವರ್ಗ, ಬೋಧಕ ವರ್ಗ ಮತ್ತು ಸ್ಥಳೀಯ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ಪಾಲ್ಗೊಂಡಿದ್ದರು.
ಲೇಖಕ: admin
ಏಡಿ ಕೇವಲ ರುಚಿಕರ ಮಾತ್ರವಲ್ಲ ಪ್ರೋಟೀನ್ ಸಮೃದ್ಧ ಆಹಾರವೂ ಆಗಿದೆ. ಜೊತೆಗೆ ಹಲವಾರು ಅಮೈನೋ ಆಮ್ಲಗಳಿದ್ದು ಇವು ಪ್ರೋಟೀನ್ ಉತ್ಪಾದನೆಗೆ ನೆರವಾಗುತ್ತವೆ. ವಿಶೇಷವಾಗಿ, ಕೊರೆಯುವ ಮಳೆ ಹಾಗೂ ಚಳಿಗೆ ಬಿಸಿ ಬಿಸಿ ಏಡಿ ಸಾಂಬಾರು ಸೂಪರ್ ಆಗಿರುತ್ತದೆ. ಬೇಕಾಗುವ ಸಾಮಗ್ರಿಗಳು : ಸಾಂಬಾರಿಗೆ ಬೇಕಾಗುವಷ್ಟು ಏಡಿ. (ಹಳ್ಳದ ಏಡಿ, ಸಮುದ್ರದ ಏಡಿ ಯಾವುದಾದರೂ), ಟೊಮೋಟೊ 2, ತೆಂಗಿನತುರಿ ಸ್ವಲ್ಪ, ಈರುಳ್ಳಿ-1 (ಕತ್ತರಿಸಿದ್ದು), ಬೆಳ್ಳುಳ್ಳಿ-5 ಎಸಳು , ಶುಂಠಿ ಅಗತ್ಯಕ್ಕೆ ತಕ್ಕಷ್ಟು (ಕತ್ತರಿಸಿದ್ದು), ಹುಣಸೆಹಣ್ಣು-ಅಗತ್ಯಕ್ಕೆ ತಕ್ಕಷ್ಟು, ಜೀರಿಗೆ-ಅಗತ್ಯಕ್ಕೆ ತಕ್ಕಷ್ಟು, ಕಾಳುಮೆಣಸು-ಅಗತ್ಯಕ್ಕೆ ತಕ್ಕಷ್ಟು, ಬ್ಯಾಡಿಗೆ ಮೆಣಸಿನಕಾಯಿ-5, ಕೊತ್ತಂಬರಿ ಬೀಜ-ಅಗತ್ಯಕ್ಕೆ ತಕ್ಕಷ್ಟು, ಕರಿಬೇವಿನ ಸೊಪ್ಪು, ಕೊತ್ತಂಬರಿ ಸೊಪ್ಪು (ಕತ್ತರಿಸಿದ್ದು-ಸ್ವಲ್ಪ). ಮಾಡುವ ವಿಧಾನ :: ಮೊದಲಿಗೆ ಏಡಿಯನ್ನು ಚೆನ್ನಾಗಿ ತೊಳೆದುಕೊಳ್ಳಬೇಕು, ನಂತರ ಬ್ಯಾಡಗಿ ಮೆಣಸಿನಕಾಯಿ ಕೊತ್ತಂಬರಿ ಮತ್ತು ಈರುಳ್ಳಿ, ಕೊತ್ತಂಬರಿಸೊಪ್ಪು ಮತ್ತು ಜೀರಿಗೆ ಬೆಳ್ಳುಳ್ಳಿ ಶುಂಠಿ ಎಲ್ಲವನ್ನೂ ಹಾಕಿ ಚೆನ್ನಾಗಿ ರುಬ್ಬಿಕೊಳ್ಳಬೇಕು. ಟೊಮೊಟೊ ಮತ್ತು ತೆಂಗಿನ ತುರಿ ಹಾಕಿ ಚೆನ್ನಾಗಿ ರುಬ್ಬಿಕೊಳ್ಳಬೇಕು. ಅದಾದ ಮೇಲೆ ಒಂದು ಪಾತ್ರೆ ಇಟ್ಟು ಅದಕ್ಕೆ ಸ್ವಲ್ಪ ಎಣ್ಣೆ ಹಾಕಿ ಕರಿಬೇವಿನ…
ಸುಂಟಿಕೊಪ್ಪ,ಜು.13: ನಾಕೂರು ಶಿರಂಗಾಲ ಗ್ರಾ.ಪಂ ಯ 2023-24ನೇ ಸಾಲಿನ ಗ್ರಾಮ ಸಭೆಯು ಜು.14 ರಂದು ಗ್ರಾ.ಪಂ. ಅಧ್ಯಕ್ಷ ಎಂ.ಸಿ.ಜಗನ್ನಾಥ್ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಬೆಳಿಗ್ಗೆ 11 ಗಂಟೆಗೆ ಕಾನ್ಬೈಲ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಸಭೆ ನಡೆಯಲಿದ್ದು, ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಪಂಚಾಯಿತಿ ಆಡಳಿತ ಮಂಡಳಿ ಹಾಗೂ ಅಭಿವೃದ್ಧಿ ಅಧಿಕಾರಿ ತಿಳಿಸಿದ್ದಾರೆ.
ಮಡಿಕೇರಿ ಜು.13 : ಕುಡಿದ ಅಮಲಿನಲ್ಲಿ ಪುತ್ರನೇ ತಾಯಿಯನ್ನು ಹತ್ಯೆ ಮಾಡಿರುವ ಆರೋಪದಡಿ ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಲಲಿತ (45) ಎಂಬುವವರು ಮೃತ ದುರ್ದೈವಿಯಾಗಿದ್ದಾರೆ. ಸೋಮವಾರಪೇಟೆ ತಾಲ್ಲೂಕಿನ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ಕಟ್ಟೆಪುರ ಹಾಡಿಯಲ್ಲಿ ಘಟನೆ ನಡೆದಿದ್ದು, ಆರೋಪಿ ಜೇನುಕುರುಬರ ರಾಜಶೇಖರ್ (22) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ತಾಯಿ, ಮಗನ ನಡುವೆ ಕಲಹ ತಾರಕಕ್ಕೇರಿದಾಗ ಆರೋಪಿ ದೊಣ್ಣೆಯಿಂದ ತಲೆಗೆ ಹೊಡೆದು ಲಲಿತಳನ್ನು ಕೊಲೆ ಮಾಡಿರುವುದಾಗಿ ಆರೋಪಿಸಲಾಗಿದೆ. ಸ್ಥಳಕ್ಕೆ ಶನಿವಾರಸಂತೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಡಿಕೇರಿ ಜು.13 : ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಪ್ರಯುಕ್ತ ಜು.25 ರಂದು ಪಾಲಿಬೆಟ್ಟ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಬೃಹತ್ ರಕ್ತದಾನ ಶಿಬಿರ ಆಯೋಜಿಸಲಾಗಿದೆ. ಪತ್ರಕರ್ತರು ಸೇರಿದ್ದಂತೆ ಸಾರ್ವಜನಿಕರು ರಕ್ತದಾನ ಮಾಡಲಿದ್ದಾರೆಂದು ಕಾರ್ಯಕ್ರಮ ಸಂಚಾಲಕ ಪುತ್ತಂ ಪ್ರದೀಪ್ ಬಾಲನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ, ಪಾಲಿಬೆಟ್ಟ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ರಕ್ತನಿಧಿ ಕೇಂದ್ರ ಹಾಗೂ ವಿರಾಜಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತಾಶ್ರಯದಲ್ಲಿ ಶಿಬಿರ ಆಯೋಜಿಸಲಾಗಿದೆ. ಪಾಲಿಬೆಟ್ಟ ಸಮುದಾಯ ಆರೋಗ್ಯ ಕೇಂದ್ರಕ್ಕೆ ಬಂದು ರಕ್ತಧಾನ ಮಾಡುವವರು ಜು.20 ರೊಳಗೆ ಹೆಸರು ನೋಂದಾಯಿಸಿಕೊಳ್ಳಬೇಕು. ತಮ್ಮ ಹೆಸರನ್ನ ಪೊನ್ನಂಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಖಜಾಂಚಿ ವಿ.ವಿ.ಅರುಣ್ ಕುಮಾರ್ (9448331229) ಅವರಲ್ಲಿ ನೋಂದಾಯಿಸಿಕೊಳ್ಳಬಹುದು.
ವಿರಾಜಪೇಟೆ ಜು.13 : ಮಡಿಕೇರಿ ನಗರಸಭಾ ಸದಸ್ಯ ಹಾಗೂ ಮಡಿಕೇರಿ ಕೊಡವ ಸಮಾಜದ ನಿರ್ದೇಶಕ ಕಾಳಚಂಡ ಅಪ್ಪಣ್ಣ ಅವರ ಮೇಲಿನ ಹಲ್ಲೆಗೆ ಖಂಡನೆ ವ್ಯಕ್ತಪಡಿಸಿದರುವ ವಿರಾಜಪೇಟೆ ಕೊಡವ ಸಂಘ ಹಲ್ಲೆ ಮಾಡಿದವರನ್ನು ಗಡಿಪಾರು ಮಾಡುವಂತೆ ಒತ್ತಾಯಿಸಿದೆ. ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೊಡವ ಸಂಘಗಳ ಒಕ್ಕೂಟದ ಅಧ್ಯಕ್ಷ ಮೆಕೇರಿರ ರವಿ ಪೆಮ್ಮಯ್ಯ, ಪೊಲೀಸ್ ಇಲಾಖೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಹಲ್ಲೆ ಮಾಡಿದವರನ್ನು ರೌಡಿ ಶೀಟರ್ ಪಟ್ಟಿಗೆ ಸೇರಿಸಬೇಕು ಮತ್ತು ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿದರು. ಕಾಳಚಂಡ ಅಪ್ಪಣ್ಣ ಅವರು ಕೊಡವ ಜನಾಂಗಕ್ಕೆ ಸೇರಿದವರಾಗಿದು,್ದ ಜನ ಸಾಮಾನ್ಯರಿಂದ ಚುನಾಯಿಸಲ್ಪಟ್ಟ ಜನಪ್ರತಿನಿಧಿ. ಓರ್ವ ಜನಪ್ರತಿನಿಧಿಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಾಡುಹಗಲೆ ನಡುರಸ್ತೆಯಲ್ಲಿ ಹಲ್ಲೆ ಮಾಡಿರುವುದು ಖಂಡನೀಯ ಎಂದರು. ಐಟಿಐ ಬಳಿ ಇರುವ ಕ್ಯಾಂಟೀನ್ ಜಾಗದ ಸಮಸ್ಯೆ ಹಲವಾರು ವರ್ಷಗಳ ಹಿಂದಿನದು. ಅದನ್ನು ಕಾನೂನು ರೀತಿಯಲ್ಲಿ ವ್ಯವಹರಿಸಬೇಕೆ ವಿನಾಃ ಕಾನೂನುನ್ನು ಕೈಗೆತ್ತಿಕೊಳ್ಳುವುದು ಎಷ್ಟು ಸರಿ ಎಂದು ಪ್ರಶ್ನಿಸಿದ ಅವರು, ಬುಡಕಟ್ಟು ಜನಾಂಗದ ಮೇಲೆ ಇದೇ ರೀತಿ ಮುಂದುವರೆದರೆ…
ಮಡಿಕೇರಿ ಜು.13 : ಪುತ್ತೂರಿನ ಖಿದ್ಮಾ ಫೌಂಡೇಶನ್ ಕರ್ನಾಟಕ ರಾಜ್ಯ ಸಮಿತಿ ವತಿಯಿಂದ ನಡೆದ ರಾಜ್ಯ ಮಟ್ಟದ ಕಾವ್ಯ ಮತ್ತು ಸಾಂಸ್ಕೃತಿಕ ಸಂಭ್ರಮ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕೊಡಗು ಜಿಲ್ಲೆಯ ಸಾಹಿತಿ ಹಾಗೂ ಚಲನಚಿತ್ರ ನಿರ್ಮಾಪಕಿ ಈರಮಂಡ ಹರಿಣಿ ವಿಜಯ್ ಅವರು ಪಾಲ್ಗೊಂಡು ಕವನ ವಾಚಿಸಿ ಗಮನ ಸೆಳೆದರು. ಬೆಂಗಳೂರಿನ ಚಾಮರಾಜಪೇಟೆ ರಸ್ತೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಅಕ್ಕಮಹಾದೇವಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಎಂಪವರ್ಡ್ ಮೈಂಡ್ಸ್ ಎಡು ಸೆಲ್ಯೂಷನ್ಸ್ ಸಂಸ್ಥಾಪಕ ಅಧ್ಯಕ್ಷರಾದ ಡಾ.ಲತಾ ಮೂರ್ತಿ ಉದ್ಘಾಟಿಸಿದರು. ಕವಿಗಳು ಮತ್ತು ಚಿಂತಕರಾದ ಹೆಚ್.ಬಿ. ಯೂಸಫ್ ಕವಿಗೋಷ್ಠಿಯ ಅಧ್ಯಕ್ಷತೆಯನ್ನು ವಹಿಸಿದರೆ, ತುಮಕೂರು ಮಾತೃಭೂಮಿ ಸೇವಾ ಟ್ರಸ್ಟ್ ಸಂಸ್ಥಾಪಕ ಜ್ಯೋತಿ ಶ್ರೀನಿವಾಸ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಮೈಸೂರು ಸಮಾಜ ವಿಜ್ಞಾನ ವಿಭಾಗದ ಮುಖ್ಯಸ್ಥ ಎನ್. ಮೊಹಮ್ಮದ್ ಹುಮಾಯೂನ್ ವಹಿಸಿದ್ದರು. ವಿಮರ್ಶಕರು ಹಾಗೂ ಉಪನ್ಯಾಸಕರಾದ ವೈ.ಜೆ.ಮೈಜೂಬಸಾಹೇಬ ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ಡಾ.ಎಪಿಜೆ ಅಬ್ದುಲ್ ಕಲಾಂ ಫೌಂಡೇಶನ್ನ ರಾಜ್ಯಾಧ್ಯಕ್ಷ ಡಾ.ಎಂ.ಎಂ.ಭಾಷ ನಂದಿ, ದಾಸನಪುರ…
ಮಡಿಕೇರಿ ಜು.13 : ತೆಕ್ಕಿಲ್ ಮಾದರಿ ಶಾಲೆಯಲ್ಲಿ ತರಕಾರಿಗಳ ದಿನವನ್ನು ಆಚರಣೆ ಆಚರಿಸಲಾಯಿತು. ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಅತ್ಯಂತ ಉತ್ಸಾಹ ದಿಂದ ಪಾಲ್ಗೊಂಡು ತಂದ ತರಕಾರಿಗಳ ಮಹತ್ವವನ್ನು ವಿವರಿಸಿದರು. ಶಾಲೆಯ ಸಹ ಶಿಕ್ಷಕಿ ಸೌಮ್ಯ ಮಕ್ಕಳಿಗೆ ಹಲವು ತರಕಾರಿಗಳ ಮಹತ್ವವನ್ನು ತಿಳಿಸಿದರು. ಈ ಸಂದರ್ಭ ಶಾಲೆಯ ಮುಖ್ಯೋಪಾಧ್ಯಾಯ ಜೆ.ಡಿ.ಸಂಪತ್ ಮತ್ತು ಎಲ್ಲಾ ಶಿಕ್ಷಕ ವೃಂದದವರು ಮತ್ತು ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಉನೈಸ್ ಪೆರಾಜೆ ಉಪಸ್ಥಿತರಿದ್ದರು.
ಮಡಿಕೇರಿ ಜು.13 : ಸೋಮವಾರಪೇಟೆ ಹಾಗೂ ಕುಶಾಲನಗರ ತಾಲ್ಲೂಕಿನ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಳಿಗೆ ಕ್ಷಯ ರೋಗದ ಬಗ್ಗೆ ಅರಿವು ಮೂಡಿಸಲಾಯಿತು. ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ತಾಲ್ಲೂಕು ಅಧಿಕಾರಿ ಶ್ರೀನಿವಾಸ್ ಕ್ಷಯ ರೋಗದ ಬಗ್ಗೆ ಮಾಹಿತಿ ನೀಡಿದರು. ತಾಲ್ಲೂಕು ಆರೋಗ್ಯ ಅಧಿಕಾರಿ ಕ್ಷಯ ಮುಕ್ತ ಗ್ರಾ.ಪಂ ಅಭಿಯಾನದ ಬಗ್ಗೆ ಗ್ರಾ.ಪಂ ಅಭಿವೃದ್ಧಿ ಅಧಿಕಾರಿಗಳಿಗೆ ತಿಳಿಸಿದರು. ಕಾರ್ಯಕ್ರಮದಲ್ಲಿ NTEP ಸಿಬ್ಬಂದಿಗಳಾದ ಉಮೇಶ್ ಶ್ರೀಧರ್, ಅರಳಪ್ಪ ಹಾಜರಿದ್ದರು. ಇ.ಒ.ಶಾಂತಿ ಸ್ವಾಗತಿಸಿದರು. ಹಿರಿಯ ಚಿಕಿತ್ಸ ಮೇಲ್ವಿಚಾರಕ ಉಮೇಶ್ ಸರ್ವರನ್ನು ವಂದಿಸಿದರು.
ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಫ್ರಾನ್ಸ್ ಪ್ರವಾಸ ಆರಂಭಿಸಿದ್ದಾರೆ. ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಅವರ ಆಹ್ವಾನದ ಮೇರೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಗುರುವಾರ ಫ್ರಾನ್ಸ್ಗೆ ತೆರಳಿದ್ದಾರೆ. ಇಂದು ಮತ್ತು ನಾಳೆ ಅವರು ಫ್ರಾನ್ಸ್ ನಲ್ಲಿಯೇ ಇದ್ದು ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ನಾಳೆ ಮೋದಿಯವರು ಫ್ರಾನ್ಸ್ ನ ವಾರ್ಷಿಕ ಬಾಸ್ಟಿಲ್ ಡೇ ಪರೇಡ್ನಲ್ಲಿ ಗೌರವಾನ್ವಿತ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಇದರಲ್ಲಿ 269 ಸದಸ್ಯರನ್ನೊಳಗೊಂಡ ಭಾರತೀಯ ಸೇನೆಯ ಮೂರೂ ಸೇವೆಗಳ ತುಕಡಿ ಭಾಗವಹಿಸಲಿವೆ.






