ಮಡಿಕೇರಿ ಆ.11 : ನಗರದ ತಹಶೀಲ್ದಾರ್ ಅವರ ಕಚೇರಿಯ ಸಭಾಂಗಣದಲ್ಲಿ ಕರ್ನಾಟಕ ಲೋಕಾಯುಕ್ತ ಠಾಣೆ ಮಡಿಕೇರಿ ವತಿಯಿಂದ ಸಾರ್ವಜನಿಕರ ದೂರು ಸ್ವೀಕಾರ ಮತ್ತು ಕುಂದುಕೊರತೆ ಸಭೆ ನಡೆಯಿತು. ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕ ಎಂ.ಎಸ್.ಪವನ್ ಕುಮಾರ್ ಸಭೆಯಲ್ಲಿ ಪಾಲ್ಗೊಂಡು ತಾಲ್ಲೂಕು ಮಟ್ಟದ ಸರ್ಕಾರಿ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿ, ಸರ್ಕಾರಿ ಅಧಿಕಾರಿಗಳು ತಮ್ಮ ಕಚೇರಿಯಲ್ಲಿ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಕಡ್ಡಾಯವಾಗಿ ಹಾಜರಾತಿ ಪುಸ್ತಕ, ಬಯೋಮೆಟ್ರಿಕ್ ವ್ಯವಸ್ಥೆ, ಚಲನವಲನ ರಿಜಿಸ್ಟರ್, ನಗದು ಘೋಷನಾ ರಿಜಿಸ್ಟರ್ನ್ನು ನಿರ್ವಹಿಸಬೇಕು ಹಾಗೂ ಇದರ ನಿರ್ವಹಣೆಯನ್ನು ಖುದ್ದು ಅಧಿಕಾರಿಗಳೇ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು. ಸರ್ಕಾರಿ ಅಧಿಕಾರಿ ಮತ್ತು ಸಿಬ್ಬಂದಿಗಳು ಯಾವುದೇ ಲಂಚ ಮತ್ತು ಇತರೆ ಆಮೀಷಗಳಿಗೆ ಒಳಗಾಗದೆ ಕರ್ತವ್ಯ ನಿರ್ವಹಿಸಬೇಕು. ಸಾರ್ವಜನಿಕರನ್ನು ವಿನಾ ಕಾರಣ ಸತಾಯಿಸದೆ ಕಾನೂನು ರೀತಿಯಲ್ಲಿ ಕೆಲಸ ಮಾಡಿಕೊಡುವಂತೆ ಸೂಚಿಸಿದರು. ಸಭೆಯಲ್ಲಿ ಸಾರ್ವಜನಿಕರಿಂದ 15 ಅರ್ಜಿಗಳು ಸ್ವೀಕೃತವಾಗಿದ್ದು, ಇವುಗಳನ್ನು ಪರಿಶೀಲಿಸಿ 3 ಅರ್ಜಿದಾರರಿಗೆ ಲೋಕಾಯುಕ್ತ ಸಂಸ್ಥೆಯ ಫಾರಂ 1 ಮತ್ತು 2 ನ್ನು ನೀಡಲಾಯಿತು. ಉಳಿದಂತೆ…
ಲೇಖಕ: admin
ಮಡಿಕೇರಿ ಆ.11 : ಗ್ರಾಮೀಣ ಪುನರ್ವಸತಿ ಯೋಜನೆಯಡಿ ಮಡಿಕೇರಿ ತಾಲ್ಲೂಕಿನ ಬಲ್ಲಮಾವಟಿ, ಕುಂಜಿಲ, ಕೊಣಂಜಗೇರಿ ಹಾಗೂ ಕಡಗದಾಳು ಮತ್ತು ವಿರಾಜಪೇಟೆ ತಾಲ್ಲೂಕಿನ ದೇವರಪುರ, ನಿಟ್ಟೂರು, ಪೊನ್ನಪ್ಪಸಂತೆ, ಕೆ.ಬಾಡಗ, ಕಿರುಗೂರು, ಶ್ರೀಮಂಗಲ ಹಾಗೂ ನಾಲ್ಕೇರಿ ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ (ವಿಆರ್ಡಬ್ಲ್ಯೂ) ಹುದ್ದೆಗಳು ಖಾಲಿ ಇದ್ದು, ಅರ್ಜಿ ಆಹ್ವಾನಿಸಲಾಗಿದೆ. ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಸಲ್ಲಿಸಲು ಸೆ.11 ಕೊನೆಯ ದಿನವಾಗಿದೆ. ವಿದ್ಯಾರ್ಹತೆ ಎಸ್ಎಸ್ಎಲ್ಸಿ ಉತ್ತೀರ್ಣ/ ಅನುತ್ತೀರ್ಣ, ವಿಕಲಚೇತನತೆ ಪ್ರಮಾಣ ಶೇ.40 ಕ್ಕಿಂತ ಮೇಲ್ಪಟ್ಟು ಶೇ.75 ಕ್ಕಿಂತ ಕಡಿಮೆ ಇರಬೇಕು. 18 ರಿಂದ 45 ವರ್ಷ ವಯೋಮಾನದವರಾಗಿರಬೇಕು. ಅರ್ಜಿ ನಮೂನೆಗಳನ್ನು ಸಂಬಂಧಿಸಿದ ತಾಲ್ಲೂಕು ಪಂಚಾಯಿತಿಗಳಲ್ಲಿರುವ ಎಂಆರ್ಡಬ್ಲ್ಯುಗಳಿಂದ ಉಚಿತವಾಗಿ ಪಡೆದು ನಿಗದಿತ ದಿನಾಂಕದೊಳಗೆ ಭರ್ತಿ ಮಾಡಿದ ಅರ್ಜಿಯನ್ನು ಕಚೇರಿಗೆ ಸಲ್ಲಿಸುವಂತೆ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ವಿಮಲ ತಿಳಿಸಿದ್ದಾರೆ.
ಮಡಿಕೇರಿ ಆ.11 : ಜಿಲ್ಲಾ ಅಗ್ರಣೀ ಬ್ಯಾಂಕ್ 2023-24 ನೇ ಸಾಲಿನ ಕೊಡಗು ಜಿಲ್ಲಾ ವಾರ್ಷಿಕ ಸಾಲ ಯೋಜನೆಯನ್ನು ಜಿ.ಪಂ.ಸಿಇಒ ವರ್ಣಿತ್ ನೇಗಿ ಅವರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ವಿಶೇಷ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಬಿಡುಗಡೆಗೊಳಿಸಿದರು. ಕಾರ್ಯಕ್ರಮದ ನಂತರ ಬ್ಯಾಂಕರುಗಳನ್ನು ಉದ್ದೇಶಿಸಿ ಮಾತನಾಡಿದ ಜಿ.ಪಂ.ಸಿಇಒ ವರ್ಣಿತ್ ನೇಗಿ ಅವರು ಜನಸಾಮಾನ್ಯರಿಗೆ ಅಗತ್ಯವಿರುವ ಸಾಲ ವಿತರಿಸುವುದರ ಮೂಲಕ ಜಿಲ್ಲಾ ವಾರ್ಷಿಕ ಸಾಲ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಪ್ರಾಮಾಣಿಕ ಪ್ರಯತ್ನ ನಡೆಸುವಂತೆ ಸಲಹೆ ನೀಡಿದರು. ಈ ಬಾರಿಯ ವಾರ್ಷಿಕ ಸಾಲ ಯೋಜನೆಯು ಜಿಲ್ಲೆಯ ಕೃಷಿಕರಿಗೆ ವರದಾನವಾಗಲಿದೆ ಎಂದು ಸಭೆಗೆ ತಿಳಿಸಿದರು. ಜಿಲ್ಲಾ ಲೀಡ್ ಬ್ಯಾಂಕ್ ಮುಖ್ಯಸ್ಥರಾದ ಗಂಗಾಧರ್ ನಾಯ್ಕ್ ಅವರು ಮಾತನಾಡಿ 2023-24 ನೇ ಸಾಲಿಗೆ ಜಿಲ್ಲಾ ವಾರ್ಷಿಕ ಸಾಲ ಯೋಜನೆಯನ್ವಯ ರೂ.4504 ಕೋಟಿ ಗುರಿ ನಿಗದಿಪಡಿಸಿದ್ದು, ಅದರಲ್ಲಿ 71.56 ಪ್ರತಿಶತ(ರೂ. 3223.95 ಕೋಟಿ) ಆದ್ಯತಾ ವಲಯಕ್ಕೆ ಮೀಸಲಿಟ್ಟಿದ್ದು ಅವುಗಳಲ್ಲಿ ಕೃಷಿ ಚಟುವಟಿಕೆಗಳಿಗೆ ರೂ.2400.56 ಕೋಟಿ, ಕಿರು ಮತ್ತು ಮಧ್ಯಮ…
ಮಡಿಕೇರಿ ಆ.11 : ವಿರಾಜಪೇಟೆ ತಾಲ್ಲೂಕು ಆಸ್ಪತ್ರೆಗೆ ಲೋಕಾಯುಕ್ತ ಡಿವೈಎಸ್ಪಿ ಎಂ.ಎಸ್.ಪವನ್ಕುಮಾರ್ ಅವರು ಅನೀರಿಕ್ಷಿತವಾಗಿ ಭೇಟಿ ನೀಡಿ ವೀಕ್ಷಿಸಿದರು. ಆಸ್ಪತ್ರೆಯ ಹೊರ ರೋಗಿಗಳ ವಿಭಾಗದಲ್ಲಿ ಚಿಕಿತ್ಸೆ ಪಡೆಯಲು ಹೆಚ್ಚಿನ ಸಂಖ್ಯೆಯಲ್ಲಿ ಚೀಟಿಗಾಗಿ ಸಾಲುಗಟ್ಟಿ ನಿಂತಿದ್ದ ಸಾರ್ವಜನಿಕರನ್ನು ಗಮನಿಸಿದ ಲೋಕಾಯುಕ್ತ ಡಿವೈಎಸ್ಪಿ ಅವರು ಹೆಚ್ಚಿನ ಕೌಂಟರ್ ತೆರೆಯುವಂತೆ ವೈದ್ಯಾಧಿಕಾರಿಗೆ ಸೂಚಿಸಿದರು. ವಿರಾಜಪೇಟೆ ಸರ್ಕಾರಿ ಆಸ್ಪತ್ರೆಗೆ ಪ್ರತೀ ನಿತ್ಯ ಸಾರ್ವಜನಿಕರು ಔಷಧಿ ಪಡೆಯಲು ಬರುತ್ತಾರೆ. ಸೂಕ್ತ ಚಿಕಿತ್ಸೆ ಮತ್ತು ಸ್ಪಂದನೆ ದೊರೆಯಬೇಕು. ಯಾರನ್ನು ಕಾಯಿಸಬಾರದು ಎಂದು ಲೋಕಾಯುಕ್ತ ಡಿವೈಎಸ್ಪಿ ಎಂ.ಎಸ್.ಪವನ್ ಕುಮಾರ್ ಅವರು ನಿರ್ದೇಶನ ನೀಡಿದರು. ಬೆಳಗಿನ 9.30 ಗಂಟೆ ವೇಳೆಗೆ ಕೆಲವು ವೈದ್ಯಾಧಿಕಾರಿಗಳು ಆಸ್ಪತ್ರೆಗೆ ಹಾಜರಾಗದಿರುವುದಕ್ಕೆ ಅತೃಪ್ತಿ ವ್ಯಕ್ತಪಡಿಸಿದ ಲೋಕಾಯುಕ್ತ ಡಿವೈಎಸ್ಪಿ ಅವರು ಸರಿಯಾದ ಸಮಯಕ್ಕೆ ವೈದ್ಯಾಧಿಕಾರಿಗಳು ಆಸ್ಪತ್ರೆಗೆ ಹಾಜರಾಗಿ ಸಾರ್ವಜನಿಕರಿಗೆ ಸ್ಪಂದಿಸಬೇಕು ಎಂದು ಅವರು ಸೂಚಿಸಿದರು. ತಾಲ್ಲೂಕು ಆಸ್ಪತ್ರೆಯಲ್ಲಿ ಔಷಧಿಗಾಗಿ ಹೊರಗಡೆಗೆ ಚೀಟಿ ಬರೆಯುತ್ತಾರೆ ಎಂಬ ದೂರುಗಳು ಇದ್ದು, ಇದನ್ನು ಪರಿಹರಿಸಬೇಕು. ಆಸ್ಪತ್ರೆಯಲ್ಲಿ ಔಷಧಿ ಮತ್ತು ಮಾತ್ರೆ ಲಭ್ಯ ಇಲ್ಲದಿದ್ದಲ್ಲಿ ಆಸ್ಪತ್ರೆ…
ಮಡಿಕೇರಿ ಆ.11 : ಕೊಡವ ಸಮಾಜಗಳ ಒಕ್ಕೂಟದ ಮಾಸಿಕ ಸಭೆ ಒಕ್ಕೂಟದ ಅಧ್ಯಕ್ಷ ಕಳ್ಳಿಚಂಡ ವಿಷ್ಣು ಕಾರ್ಯಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಬಾಳುಗೋಡುವಿನಲ್ಲಿ ನಡೆದ ಸಭೆಯಲ್ಲಿ ಸರ್ಕಾರದ ದಾಖಲೆಗಳಲ್ಲಿ “ಕೊಡಗರು” ಎಂದು ಉಲ್ಲೇಖವಾಗಿರುವುದನ್ನು “ಕೊಡವರು” ಎಂದು ಮಾರ್ಪಡಿಸಲು ಕಾರಣಕರ್ತರಾದ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ಪ್ರಯತ್ನವನ್ನು ಶ್ಲಾಘಿಸಲಾಯಿತು. ಅಲ್ಲದೆ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ನಂದಿನೆರವಂಡ ನಾಚಪ್ಪ, ಕೊಡವ ಜನಾಂಗದ ಪರವಾಗಿ ನಿರಂತರವಾಗಿ ಹೋರಾಟ ನಡೆಸುವುದಾಗಿ ತಿಳಿಸಿದರು. ::: ನವೆಂಬರ್ ನಲ್ಲಿ ಕೊಡವ ನಮ್ಮೆ ::: ಬಾಳುಗೋಡು ಕೊಡವ ಸಮಾಜದಲ್ಲಿ ಪ್ರತಿವರ್ಷ ನಡೆಸುವ ಕೈಲುಮೂರ್ತ ಹಬ್ಬವನ್ನು ಈ ಬಾರಿ ಸೆ.9 ರಂದು ನಡೆಸಲು ಮತ್ತು “ಕೊಡವ ನಮ್ಮೆ”ಯನ್ನು ನ.17, 18 ಹಾಗೂ 19 ರಂದು ಆಯೋಜಿಸಲು ಸಭೆ ನಿರ್ಧರಿಸಿತು. ಅಧ್ಯಕ್ಷ ಕಳ್ಳಿಚಂಡ ವಿಷ್ಣು ಕಾರ್ಯಪ್ಪ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗೌರವಾಧ್ಯಕ್ಷ ಪರದಂಡ ಸುಬ್ರಮಣಿ, ಉಪಾಧ್ಯಕ್ಷರಾದ ಮಲಚ್ಚೀರ ಬೋಸ್, ಮಾಳೇಟಿರ ಅಭಿಮನ್ಯು ಕುಮಾರ್, ಕರವಟ್ಟೀರ…
ಮಡಿಕೇರಿ ಆ.11 : ಮಡಿಕೇರಿ 66/11 ಕೆವಿ ವಿದ್ಯುತ್ ಉಪ ಕೇಂದ್ರದಿಂದ ಹೊರಹೋಗುವ ಎಫ್5 ಜಿ.ಟಿ.ರಸ್ತೆ ಫೀಡರ್ನಲ್ಲಿ ತುರ್ತು ನಿರ್ವಹಣೆ ಕಾರ್ಯವನ್ನು ನಿರ್ವಹಿಸಬೇಕಿರುವುದರಿಂದ ಆಗಸ್ಟ್, 12 ರಂದು ಬೆಳಗ್ಗೆ 9.30 ರಿಂದ ಸಂಜೆ 3 ಗಂಟೆಯವರೆಗೆ ವಿದ್ಯುತ್ ಉಪಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಪುಟಾಣಿನಗರ, ದೇಚೂರು, ಚೈನ್ಗೇಟ್, ಎಚ್ಆರ್ಬಿ ಕಾಲೋನಿ, ಅರಣ್ಯಭವನ, ಜಯನಗರ, ಮಂಗಳಾದೇವಿನಗರ, ಅಶೋಕಪುರ ಹಾಗೂ ಸುತ್ತಮುತ್ತಲ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ . ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಇಇ ಅನಿತಾ ಬಾಯಿ ಕೋರಿದ್ದಾರೆ.
ಮಡಿಕೇರಿ ಆ.11 : ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ನಗರದ ಜನರಲ್ ತಿಮ್ಮಯ್ಯ ಮ್ಯೂಸಿಯಂನ್ನು ಆ. 15 ರಂದು ತೆರೆಯಲಾಗಿರುತ್ತದೆ. ಪ್ರತೀ ಮಂಗಳವಾರ ಮ್ಯೂಸಿಯಂಗೆ ರಜೆ ಇದ್ದು, ಆದರೆ ಆ.15 ರಂದು ಮಂಗಳವಾರದ ರಜೆಯನ್ನು ರದ್ದುಗೊಳಿಸಿ ಸಾರ್ವಜನಿಕರಿಗೆ ಎಂದಿನಂತೆ ಮ್ಯೂಸಿಯಂ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ. ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮ್ಯೂಸಿಯಂ ವೀಕ್ಷಣೆಗೆ ಅವಕಾಶವಿದೆ.
ಮಡಿಕೇರಿ ಆ.11 : ಭಾರತ ಸೇವಾದಳದ ಕೊಡಗು ಜಿಲ್ಲಾ ಸಮಿತಿ, ಮಡಿಕೇರಿ ತಾಲ್ಲೂಕು ಸಮಿತಿ ಮತ್ತು ಮಡಿಕೇರಿ ತಾ.ಪಂ ಪಂಚಾಯ್ತಿ ವತಿಯಿಂದ ತಾಲ್ಲೂಕು ವ್ಯಾಪ್ತಿಯ ಗ್ರಾ.ಪಂ ಸಿಬ್ಬಂದಿಗಳಿಗೆ ಕ್ವಿಟ್ ಇಂಡಿಯಾ ಚಳುವಳಿ, ರಾಷ್ಟ್ರಧ್ವಜ, ರಾಷ್ಟ್ರಗೀತೆ ಮತ್ತು ರಾಷ್ಟ್ರ ಲಾಂಛನದ ಕುರಿತು ಕಾರ್ಯಾಗಾರ ನಡೆಯಿತು. ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶೇಖರ್, ಭಾರತ ಸೇವಾದಳದ ಕಾರ್ಯ ಚಟುವಟಿಕೆಯನ್ನು ಶ್ಲಾಘಿಸಿದರು. ಪ್ರಜೆಗಳಲ್ಲಿ ದೇಶಾಭಿಮಾನ, ಜಾತ್ಯಾತೀತತೆ, ಮಾನವೀಯತೆ ಮತ್ತು ಸಾಮಾಜಿಕ ಕಳಕಳಿಯ ಗುಣಗಳನ್ನು ಬೆಳೆಸುತ್ತಾ ಬಂದಿರುವ ಸೇವಾದಳ ಉತ್ತಮವಾದ ಕಾರ್ಯಾಗಾರವನ್ನು ಆಯೋಜಿಸಿದ್ದು, ಇದನ್ನು ಎಲ್ಲರೂ ಸದುಪಯೋಗಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಭಾರತ ಸೇವಾದಳದ ಜಿಲ್ಲಾ ಸಂಘಟಕ ರೇವಣ್ಣ ಜಿ.ಈ ಪ್ರಾಸ್ತವಿಕವಾಗಿ ಮಾತನಾಡಿ ರಾಷ್ಟ್ರಧ್ವಜದ ಮಹತ್ವ ಮತ್ತು ಕ್ವಿಟ್ ಇಂಡಿಯಾ ಚಳುವಳಿಯ ಬಗ್ಗೆ ವಿವರಿಸಿದರು. ರಾಷ್ಟ್ರಧ್ವಜದ ನೀತಿ ಸಂಹಿತೆ ಕುರಿತು ಸೇವಾದಳದ ಸದಸ್ಯರಾದ ರೇವತಿ, ರಾಷ್ಟ್ರಧ್ವಜ ಕಟ್ಟುವ ರೀತಿಯನ್ನು ಸದಸ್ಯ ಕರುಂಬಯ್ಯ ತಿಳಿಸಿದರು. ಜಿಲ್ಲಾ ಸಮಿತಿ ಕೋಶಾಧ್ಯಕ್ಷ ನಾಪಂಡ ರವಿ ಕಾಳಪ್ಪ…
ಮಡಿಕೇರಿ ಆ.11 : ಚೆಟ್ಟಳ್ಳಿ ಗ್ರಾಮ ಪಂಚಾಯಿತಿಯ ಎರಡನೇ ಅವಧಿಯ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಸಿಂಧು ರಾಜನ್, ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ತಂಗಮ್ಮ ಅವಿರೋಧ ಆಯ್ಕೆ ಆಯ್ಕೆಯಾದರು. ಈ ಸಂದರ್ಭ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ.ಶಶಿಧರ್, ಕೆಪಿಸಿಸಿ ಸದಸ್ಯ ಮಂಜುನಾಥ್ ಗುಂಡೂರಾವ್, ಜಿ.ಪಂ ಮಾಜಿ ಸದಸ್ಯೆ ಸುನೀತಾ ಮಂಜುನಾಥ್, ವಲಯಧ್ಯಕ್ಷ ಮೊಹಮ್ಮದ್ ರಫೀಕ್ , ಕಾರ್ಯದರ್ಶಿ ಝುಬೇರ್, ಕಾಂಗ್ರೆಸ್ ಮುಖಂಡರಾದ ಪಪ್ಪು ತಿಮ್ಮಯ್ಯ, ಜೋಸೆಫ್ ವಿಕ್ಟರ್ ಸೋನ್ಸ್ ಮತ್ತು ಪಂಚಾಯಿತಿ ಸದಸ್ಯರುಗಳು ಹಾಜರಿದ್ದರು.
ಸುಂಟಿಕೊಪ್ಪ ಆ.11: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಂಟಿಕೊಪ್ಪ ಒಕ್ಕೂಟದ ವತಿಯಿಂದ ಚೌಡೇಶ್ವರಿ ದೇವಾಲಯದ ಆವರಣ ಸೇರಿದಂತೆ ಸುತ್ತ ಮುತ್ತಲಿನಲ್ಲಿ ಸ್ವಚ್ಛತಾ ಶ್ರಮದಾನ ನಡೆಯಿತು. ಸುಂಟಿಕೊಪ್ಪ ಒಕ್ಕೂಟದ ಅಧ್ಯಕ್ಷೆ ರಮಣಿ ಸ್ವಚ್ಚಾತ ಕಾರ್ಯಕ್ಕೆ ಚಾಲನೆ ನೀಡಿದರು. ಒಕ್ಕೂಟದ ಪದಾಧಿಕಾರಿಗಳು ಹಾಗೂ ಮಹಿಳಾ ಸ್ವ ಸಹಾಯ ಸಂಘಗಳ ಸದಸ್ಯರು ಆವರಣದಲ್ಲಿ ಬೆಳೆದಿದ ಕಾಡು ಗಿಡ ಗಂಟಿಗಳನ್ನು ಕಡಿದು ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಕಾರ್ಯವನ್ನು ನೇರವೇರಿಸಿದರು. ಈ ಸಂದರ್ಭ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಒಕ್ಕೂಟದ ಪದಾಧಿಕಾರಿಗಳು, ಸೇವಾ ಪ್ರತಿನಿಧಿ ಚಿತ್ರಾ ಸುರೇಶ್ ಹಾಗೂ ಮತ್ತಿರರು ಇದ್ದರು.






