ಮಡಿಕೇರಿ ಜು.13 : ಇಂದಿನ ಜಾಗತೀಕರಣದ ಅಬ್ಬರದ ದಿನಗಳಲ್ಲಿ ಎಲ್ಲೆಲ್ಲೂ ಕಾಂಕ್ರೀಟ್ ಕಾಡುಗಳೇ ಕಂಡು ಬರುತ್ತಿರುವಾಗ ವನ ಸಂಪತ್ತನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸಸಿಗಳ ನೆಡುವಿಕೆ ಹೆಚ್ಚಾಗಬೇಕಾದ ಅತ್ಯಗತ್ಯವಾಗಿದೆ ಎಂದು ಕೊಡಗು ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಸುಂದರರಾಜ್ ಅಭಿಪ್ರಾಯಪಟ್ಟಿದ್ದಾರೆ. ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ನಗರದ ಪೀಲ್ಡ್ ಮಾಷ೯ಲ್ ಕೆ.ಎಂ.ಕಾಯ೯ಪ್ಪ ವೖತ್ತದಲ್ಲಿನ ಮಿಸ್ಟಿ ಹಿಲ್ಸ್ ನಿವ೯ಹಣೆಯ ಉದ್ಯಾನವನದಲ್ಲಿ ಆಯೋಜಿಸಲಾಗಿದ್ದ ವನ ಮಹೋತ್ಸವವನ್ನು ಸಸಿ ನೆಡುವ ಮೂಲಕ ಸುಂದರ ರಾಜ್ ಉದ್ಘಾಟಿಸಿದರು. ಈ ಸಂದಭ೯ ಮಾತನಾಡಿದ ಸುಂದರರಾಜ್, ನಗರ ಪ್ರದೇಶಗಳು ಮಾತ್ರವಲ್ಲ ಗ್ರಾಮೀಣ ಪ್ರದೇಶಗಳಲ್ಲಿಯೂ ಇತ್ತೀಚಿನ ವಷ೯ಗಳಲ್ಲಿ ಕಾಂಕ್ರೀಟಿಕರಣವಾಗುತ್ತಿರುವುದು ಕಳವಳಕಾರಿ ಬೆಳವಣಿಗೆಯಾಗಿದೆ. ಹೀಗಾಗಿ ವನ ಸಂಪತ್ತನ್ನು ಸಂರಕ್ಷಿಸಬೇಕಾದ ಅಗತ್ಯತೆ ಮನಗಂಡು ಸಸ್ಯ ಸಂಕುಲ ವೖದ್ದಿಸುವ ದೖಷ್ಟಿಯಲ್ಲಿ ವನಮಹೋತ್ಸವದಂಥ ಕಾಯ೯ಕ್ರಮಗಳು ಹೆಚ್ಚಾಗಬೇಕಾಗಿದೆ ಎಂದರು. ರೋಟರಿಯಂಥ ಸಂಸ್ಥೆಗಳು ವನಮಹೋತ್ಸವ ಮೂಲಕ ವಾಷಿ೯ಕ ಸಾವಿರಾರು ಗಿಡಗಳನ್ನು ಬೆಳೆಸುವ ಮೂಲಕ ಸಮಾಜಕ್ಕೆ ಮಹತ್ವದ ಕೊಡುಗೆ ನೀಡುತ್ತಿದೆ ಎಂದೂ ಸುಂದರರಾಜ್ ಶ್ಲಾಘಿಸಿದರು. ಯುವಪೀಳಿಗೆಗೂ ಸಸ್ಯಸಂಕುಲದ ಅಗತ್ಯತೆಯನ್ನು ಮನವರಿಕೆ ಮಾಡಿಕೊಡುವ…
ಲೇಖಕ: admin
ಹೊಸದಿಲ್ಲಿ : ರಾಷ್ಟ್ರ ರಾಜಧಾನಿ ಹೊಸದಿಲ್ಲಿ ಸೇರಿದಂತೆ ದೇಶದ ವಿವಿಧೆಡೆ ಟೊಮೆಟೊ ಧಾರಣೆ ಪ್ರತೀ ಕೆ.ಜಿ ಗೆ ರೂ.200 ದಾಟಿದ್ದು, ಬೆಲೆಏರಿಕೆಗೆ ಕಡಿವಾಣ ಹಾಕಲು ಆಂಧ್ರಪ್ರದೇಶ, ಕರ್ನಾಟಕ ಹಾಗೂ ಮಹಾರಾಷ್ಟ್ರದಿಂದ ಟೊಮೆಟೊಗಳನ್ನು ಖರೀದಿಸುವಂತೆ ಕೇಂದ್ರ ಸರಕಾರವು ಸಹಕಾರಿ ಮಾರುಕಟ್ಟೆ ಸಂಘಟನೆಗಳಾದ ನಾಫೆಡ್ ಹಾಗೂ ಎನ್ಸಿಸಿಎಫ್ಗೆ ಸೂಚನೆ ನೀಡಿದೆ. ನಾಫೆಡ್ ಹಾಗೂ ಎನ್ಪಿಸಿಎಫ್ ಮೂಲಕ ಖರೀದಿಸಲಾದ ಟೊಮೆಟೊ ದಾಸ್ತಾನನ್ನು ದಿಲ್ಲಿ-ಎನ್ಸಿಆರ್ ಪ್ರಾರಂಭದಲ್ಲಿ ಜು.14 ರಿಂದ ದರಕಡಿತದೊಂದಿಗೆ ರಿಟೇಲ್ ಮಳೆಗೆಗಳಲ್ಲಿ ಮಾರಾಟ ಮಾಡಲಾಗುವುದು ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವಾಲಯ ಹೇಳಿಕೆಯೊಂದರಲ್ಲಿ ತಿಳಿಸಿದೆ.
ಮಡಿಕೇರಿ ಜು.13 : ಮೂನಾ೯ಡು ಪ.ಪೂ.ಕಾಲೇಜಿನ ರೋಟರ್ಯಾಕ್ಟ್ ನ ನಿಕಟಪೂವ೯ ಅಧ್ಯಕ್ಷೆ ಶ್ರೀರಕ್ಷಾ ಪ್ರಭಾಕರ್ ಅವರಿಗೆ ರೋಟರ್ಯಾಕ್ಟ್ ನವರತ್ನ -2023 ಎಂಬ ಪ್ರಶಸ್ತಿ ದೊರಕಿದೆ. ಪುತ್ತೂರಿನಲ್ಲಿ ನಡೆದ ಜಿಲ್ಲಾ ರೋಟರಾಕ್ಟ್ ಕ್ಲಬ್ ನ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಮೂರ್ನಾಡು ಪದವಿ ಕಾಲೇಜಿನ ರೋಟರಾಕ್ಟ್ ಕ್ಲಬ್ ನ ನಿಕಟಪೂವ೯ ಅಧ್ಯಕ್ಷೆ ಶ್ರೀ ರಕ್ಷಾ ಪ್ರಭಾಕರ್ ಅವರಿಗೆ ರೋಟರಾಕ್ಟ್ ನ ನವರತ್ನ -2023 ಪ್ರಶಸ್ತಿಯನ್ನು ರೋಟರ್ಯಾಕ್ಟ್ ಜಿಲ್ಲಾ ಸಮಿತಿಯ ನಿಕಟಪೂವ೯ ಅಧ್ಯಕ್ಷ ನಿಖಿಲ್ ಆರ್.ಕೆ., ನೂತನ ಸಾಲಿನ ಸಂಚಾಲಕ ಮಹಮ್ಮದ್ ಅಸ್ಲಂ ಪ್ರಧಾನ ಮಾಡಿದರು. ಶ್ರೀರಕ್ಷಾ ರೋಟರ್ಯಾಕ್ಟ್ ಅಧ್ಯಕ್ಷೆಯಾಗಿ ಕೈಗೊಂಡ ಅನೇಕ ಸಮಾಜಮುಖಿ ಕಾಯ೯ಗಳಿಗಾಗಿ ಈ ಪ್ರಶಸ್ತಿ ಲಭಿಸಿದೆ. ಈ ಹಿನ್ನಲೆಯಲ್ಲಿಯೇ ಶ್ರೀರಕ್ಷಾರನ್ನು 2023-24 ಸಾಲಿನ ಜಿಲ್ಲಾ ರೋಟರ್ಯಾಕ್ಟ್ ನ ಸಾಂಸ್ಕೃತಿಕ ತಂಡದ ಅಧ್ಯಕ್ಷರಾಗಿ ನೇಮಕಮಾಡಲಾಗಿದೆ. ಮೂರ್ನಾಡು ಪದವಿ ಕಾಲೇಜಿನ ರೋಟರಾಕ್ಟ್ ಕ್ಲಬ್ ನ ಸಲಹೆಗಾರರಾಗಿ ರೋಟರಿ ಮಡಿಕೇರಿ ವುಡ್ಸ್ ಸಂಸ್ಥೆಯ ಸಂಪತ್ ಕುಮಾರ್, ವಸಂತ್ ಕುಮಾರ್, ಹರೀಶ್ ಕಿಗ್ಗಾಲು, ಎನ್.ಸಿ.ನವೀನ್, ಬೋಪಣ್ಣ ಕಾರ್ಯ…
ಮಡಿಕೇರಿ ಜು.13 : ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 13.56 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 49.28 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 844.86 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1470.37 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 27.93 ಮಿ.ಮೀ. ಕಳೆದ ವರ್ಷ ಇದೇ ದಿನ 44.40 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1330.92 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2090.56 ಮಿ.ಮೀ. ಮಳೆಯಾಗಿತ್ತು. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 3.08 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 43.83 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 603.83 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1150.15 ಮಿ.ಮೀ. ಮಳೆಯಾಗಿತ್ತು. ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 9.67 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 59.60 ಮಿ.ಮೀ.…
ನಾಪೋಕ್ಲು ಜು.13 : ಪಾರಾಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೂಕಂಡಬಾಣೆಯ ಅಂಗನವಾಡಿ ಸಮೀಪ ಇದ್ದ ನಾಗರಹಾವನ್ನು ಸ್ಥಳೀಯರು ರಕ್ಷಿಸಿದ್ದಾರೆ. ಏಕಾಏಕಿ ಕಾಣಿಸಿಕೊಂಡ ನಾಗರಹಾವನ್ನುಕಂಡು ಪುಟಾಣಿ ಮಕ್ಕಳು ಹಾಗೂ ಸ್ಥಳೀಯರು ಭಯಭೀತರಾದರು. ಸ್ಥಳೀಯರೇ ಚಾಣಾಕ್ಷತನದಿಂದ ಡ್ರಮ್ನಲ್ಲಿ ತುಂಬಿಸಿ ಕಾಡಿಗೆ ಬಿಟ್ಟ ರೋಚಕ ಘಟನೆ ನಡೆದಿದೆ. ವರದಿ : ದುಗ್ಗಳ ಸದಾನಂದ
ನಾಪೋಕ್ಲು ಜು.13 : ಮರಂದೋಡು ಗ್ರಾಮದಲ್ಲಿ ಬೀಡುಬಿಟ್ಟಿರುವ ಆನೆಗಳು ಅನ್ನಾಡಿಯಂಡ ದಿಲೀಪ್ ಅವರ ತೋಟಕ್ಕೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ನಷ್ಟ ಉಂಟುಮಾಡಿವೆ. ಮರಂದೋಡು ಗ್ರಾಮದಲ್ಲಿ ಕಾಡಾನೆಗಳ ಉಪಟಳ ದಿಂದ ಗ್ರಾಮಸ್ಥರು ನಲುಗುವಂತಾಗಿದ್ದು, ಕಾಡಾನೆಗಳು ತೋಟಗಳಿಗೆ ನುಗ್ಗಿ ಕಾಫಿ, ಅಡಿಕೆ, ಬಾಳೆ ಗಿಡಗಳನ್ನು ಧ್ವಂಸ ಪಡಿಸಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು. ಇದೀಗ ಮತ್ತೆ ತೋಟಗಳಿಗೆ ನುಗ್ಗಿರುವ ಕಾಡಾನೆಗಳು ಬಾಳೆ ಗಿಡಗಳನ್ನು ದ್ವಂಸಪಡಿಸಿ ರಸ್ತೆಗಳಲ್ಲಿ ಎಳೆದೊಯ್ದಿರುವ ದೃಶ್ಯಗಳು ಕಂಡುಬಂದಿವೆ. ಹಲಸು, ಕಾಫಿ, ಬಾಳೆ ಮತ್ತಿತರ ಕೃಷಿ ವಸ್ತುಗಳನ್ನು ಕಾಡಾನೆಗಳು ಧ್ವಂಸ ಮಾಡಿದ್ದು ಮಂಗಳವಾರ ರಾತ್ರಿ ಮನೆಯಂಗಳಕ್ಕೆ ಬಂದಿರುವುದರಿಂದ ಜೀವ ಭಯವಾಗುತ್ತಿದೆ ಎಂದು ಕೃಷಿಕ ಅನ್ನಾಡಿಯಂಡ ದಿಲೀಪ್ ಕುಮಾರ್ ತಮ್ಮ ಬೇಸರವನ್ನು ವ್ಯಕ್ತಪಡಿಸಿದರು. ಶಾಶ್ವತವಾಗಿ ಆನೆಗಳನ್ನು ಸ್ಥಳಾಂತರಿಸಲು ಸಂಬಂಧಿಸಿದವರು, ಜನಪ್ರತಿನಿಧಿಗಳು ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಕಾಡಾನೆ ಉಪಟಳದಿಂದ ಕಂಗೆಟ್ಟ ಕೋಕೇರಿ, ಮರಂದೋಡ, ನರಿಯಂದಡ ಹಾಗೂ ಚೇಲಾವರ ಗ್ರಾಮಸ್ಥರು ಕಳೆದ ಸೋಮವಾರ ಚೆಯ್ಯಂಡಾಣೆಯಲ್ಲಿ ರಸ್ತೆತಡೆ ಮಾಡಿ ಪ್ರತಿಭಟನೆ ನಡೆಸಿದ್ದರು. ವರದಿ : ದುಗ್ಗಳ…
ನಾಪೋಕ್ಲು ಜು.13 : ಭವಿಷ್ಯಕ್ಕಾಗಿ ನೀರು ಮತ್ತು ಜೀವ ವೈವಿಧ್ಯ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ ಎಂದು ಅರಣ್ಯ ಇಲಾಖೆಯ ಮುಂಡ್ರೋಟು ವಲಯ ಅರಣ್ಯಾಧಿಕಾರಿ ಮರಿಸ್ವಾಮಿ ಹೇಳಿದರು. ಅರಣ್ಯ ಇಲಾಖೆಯ ಮುಂಡ್ರೋಟು ವಲಯ, ನಾಪೋಕ್ಲು ಲಯನ್ಸ್ ಕ್ಲಬ್, ಗ್ರಾಮ ಪಂಚಾಯಿತಿ ಬಲ್ಲಮಾವಟಿ ಸಂಯುಕ್ತ ಆಶಯದಲ್ಲಿ ಬಲ್ಲಮಾವಟಿ ಗ್ರಾಮದ ನೇತಾಜಿ ಪ್ರೌಢಶಾಲೆಯ ಆವರಣದಲ್ಲಿ ಏರ್ಪಡಿಸಿದ್ದ ವನಮಹೋತ್ಸವದ ಅಂಗವಾಗಿ ಗಿಡಗಳನ್ನು ನೆಡುವ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು. ವನಮಹೋತ್ಸವ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಕಾರ್ಯಕ್ರಮವಾಗಿದೆ. ದೈನಂದಿನ ಜೀವನದಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡಿ ನಿಸರ್ಗಕ್ಕೆ ಪೂರಕವಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ನೀರನ್ನು ಮಿತವಾಗಿ ಬಳಸಬೇಕು ಸೋಲಾರ್ ಬಳಸಿ ವಿದ್ಯುತ್ ಬಳಕೆಯನ್ನು ಕಡಿಮೆ ಮಾಡಬೇಕು ಎಂದರು. ನಾಪೋಕ್ಲು ಲಯನ್ಸ್ ಕ್ಲಬ್ ನ ಕಾರ್ಯ ಯೋಜನೆಗಳ ಆಯೋಜಕರಾದ ಎಂ.ಎಂ. ವಿನಯ್ ಮಾತನಾಡಿ ಕರ್ನಾಟಕ ಅರಣ್ಯ ಇಲಾಖೆ ವನ ಸಂಪತ್ತನ್ನು ವೃದ್ಧಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಿದ್ದು ಎಲ್ಲರೂ ಸ್ಥಳೀಯ ಗಿಡಗಳನ್ನು ನೆಡುವುದರ ಮೂಲಕ ಇಲ್ಲಿನ ಪರಿಸರವನ್ನು ಸಂರಕ್ಷಿಸಬೇಕು. ವಾಣಿಜ್ಯ ಉದ್ದೇಶಕ್ಕಾಗಿ ಗಿಡ ನೆಡುವುದು…
ಮಡಿಕೇರಿ ಜು.13 : ಮಡಿಕೇರಿ ರೋಟರಿ ವತಿಯಿಂದ ನಗರದ ಜಿ.ಟಿ.ರಸ್ತೆಯಲ್ಲಿರುವ ನಗರಸಭಾ ಶಾಲೆಯ 20 ವಿದ್ಯಾರ್ಥಿಗಳಿಗೆ ಪುಸ್ತಕ ಮತ್ತು ಲೇಖನಿಗಳನ್ನು ವಿತರಿಸಲಾಯಿತು. ಅಲ್ಲದೆ ಶಿಕ್ಷಕಿಯರಿಗೆ ಗೌರವ ಸಂಭಾವನೆಯನ್ನು ಡಾ. ಪಾಟ್ಕರ್ ದಂಪತಿಗಳು ಮತ್ತು ಹೆಚ್ ಎಸ್.ಅನಂತಸುಬ್ಬರಾವ್ ನೀಡಿದರು. ಕಾರ್ಯಕ್ರಮದಲ್ಲಿ ರೋಟರಿ ಅಧ್ಯಕ್ಷೆ ಗೀತಾಗಿರೀಶ್, ಕಾರ್ಯದರ್ಶಿ ಎ೦.ಕೆ.ಶರತ್ , ಸದಸ್ಯರಾದ ಮೃಣಾಲಿನಿ ಚಿಣ್ಣಪ್ಪ, ಮಲ್ಲಿಗೆ ಪೈ, ಲಲಿತಾ ರಾಘವನ್ ಹಾಜರಿದ್ದರು.
ಮಡಿಕೇರಿ ಜು.13 : ಉಚ್ಚ ನ್ಯಾಯಾಲಯದ ಹಿರಿಯ ವಕೀಲರು, ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಹೆಚ್.ಎಸ್.ಚಂದ್ರಮೌಳಿ ರವರ ಸಹೋದರಿ ಶನಿವಾರ ಸಂತೆ ಗ್ರಾ.ಪಂ ಸದಸ್ಯರು, ವಿಎಸ್ಎಸ್ಎನ್ ಬ್ಯಾಂಕ್ ಅಧ್ಯಕ್ಷ ಶರತ್ ಶೇಖರ್ ಅವರ ತಾಯಿ ಸರೋಜಾ ಚಂದ್ರಶೇಖರ್ (80) ದೈವಾಧೀನರಾಗಿದ್ದಾರೆ. ಇವರ ಅಂತ್ಯಕ್ರಿಯೆ ಮಧ್ಯಾಹ್ನ 3 ಗಂಟೆಗೆ ಗೆ ಶನಿವಾರ ಸಂತೆಯ ಬೈಪಾಸ್ ರಸ್ತೆಯಲ್ಲಿ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಮಡಿಕೇರಿ ಜು.12 : ಡಾ.ತಿಮ್ಮಯ್ಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕೋಲಾರ್ನ ಕೆಜಿಎಫ್ ನಲ್ಲಿ ನಡೆದ 10km ಕ್ರಾಸ್ ಕಂಟ್ರಿ ಓಟದಲ್ಲಿ ಮೊದಲನೆಯ ಕ್ರಮಾಂಕಿ ಆಗಿ ಗೋಲ್ಡ್ ಮೆಡಲ್ ಪಡೆದು ರಾಷ್ಟ್ರೀಯ ಮಟ್ಟದ ಇಂಟರ್ ಕಾಲೇಜ್ ಆಲ್ ಇಂಡಿಯಾ ಕ್ರಾಸ್ ಕಂಟ್ರಿ ಸ್ಪರ್ಧೆ ಗೆ ಅಂಜೇರಿರ ಟಿಶನ್ ಮಾದಪ್ಪ ಆಯ್ಕೆಯಾಗಿದ್ದಾರೆ. ಟಿಶನ್ ಮಾದಪ್ಪ ಪ್ರಸುತ್ತ ದ.ಕ ಜಿಲ್ಲೆಯ ಸುಳ್ಯದ ಕೆವಿಜಿ ಇಂಜಿನಿಯರಿಂಗ್ ಕಾಲೇಜ್ ನಲ್ಲಿ ದ್ವಿತೀಯ ವರ್ಷದ ಕಂಪ್ಯೂಟರ್ ಸೈನ್ಸ್ ಆಂಡ್ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದು. ಇತ್ತೀಚಿನ ವಿ. ಟಿ.ಯು ಲೆವಲ್ ರಾಜ್ಯ ಮಟ್ಟದ 10 ಕಿ.ಮೀ. ಕ್ರಾಸ್ ಕಂಟ್ರಿ ಓಟದಲ್ಲಿ ಸರಾಸರಿ ಎರಡನೆ ಕ್ರಮ ಅಂಕಿ ಪಡೆದಿದ್ದು, ರಾಷ್ಟ್ರೀಯ ಮಟ್ಟದ ಆಲ್ ಇಂಡಿಯಾ ಅಂತರ ಕಾಲೆಜು ಮಟ್ಟದಲ್ಲಿ ಭಾಗವಹಿಸಿದರು. ಇವರು 2022 ನೇ ಸಾಲಿನ ಚಿಕ್ಕಬಳ್ಳಾಪುರದಲ್ಲಿ ನಡೆದ ವಿ.ಟಿ.ಯು ರಾಜ್ಯ ಮಟ್ಟದ ಅಥ್ಲೆಟಿಕ್ಸ ನಲ್ಲಿ 21ಕಿ.ಮಿ ಹಾಫ್ ಮ್ಯಾರಥಾನ್ ನಲ್ಲಿ ಬ್ರಾನ್ಸ್ ಮಡೆಲ್ ಪಡೆದುಕೊಂಡಿದ್ದಾರೆ. 2023 ನೇ ಸಾಲಿನ ವಿ.ಟಿ.ಯು ರಾಜ್ಯ…






