ಲೇಖಕ: admin

ಕಡಂಗ ಜು.12 :  ಕೂಡಿಗೆ ಸದ್ಗುರು ಅಪ್ಪಯ್ಯಸ್ವಾಮಿ ಪ್ರೌಢಶಾಲೆಯಲ್ಲಿ ವನಮಹೋತ್ಸವ ಹಾಗೂ ಪೋಷಕರ ಸಭೆ ನಡೆಯಿತು. ವ್ಯವಸ್ಥಾಪಕ  ಎಂ.ಬಿ.ಪೊನ್ನಪ್ಪ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ  ಶಾಲಾ ಶಿಕ್ಷಕ ವೃಂದದವರು,ಆಡಳಿತ ಮಂಡಳಿ ಸದಸ್ಯರು, ಪೋಷಕರು,ಪೋಷಕರ ಪರಿಷತ್ ಅಧ್ಯಕ್ಷರು, ಉಪಾಧ್ಯಕ್ಷರು ಮಕ್ಕಳ ಸುರಕ್ಷಾ ಸಮಿತಿ ಉಪಾಧ್ಯಕ್ಷರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು. ಪ್ರಭಾರ ಮುಖ್ಯ ಶಿಕ್ಷಕಿ ಎನ್. ಪುಷ್ಪ ಸ್ವಾಗತಿಸಿದರು.  ಎ.ಪಿ ಸೋಮಯ್ಯ ನಿರೂಪಿಸಿದರು.  ಎಂ. ಎಸ್ . ಕುಸುಮ ಸರ್ವರನ್ನು ವಂದಿಸಿದರು.  ವರದಿ : ನೌಫಲ್ ಕಡಂಗ 

Read More

ಮಡಿಕೇರಿ ಜು.12 : ರಾಷ್ಟ್ರೀಯ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಿರುದ್ಧ ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರ ರಾಜಕೀಯ ಷಡ್ಯಂತ್ರ ನಡೆಸುತ್ತಿದೆ ಎಂದು ಆರೋಪಿಸಿ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ಮೌನ ಪ್ರತಿಭಟನೆ ನಡೆಸಿತು. ರಾಹುಲ್ ಗಾಂಧಿ ಅವರಿಗೆ ನೈತಿಕ ಬೆಂಬಲ ಸೂಚಿಸಿದ ಪಕ್ಷದ ಪ್ರಮುಖರು ಕೇಂದ್ರ ಸರ್ಕಾರದ ನಡೆಯನ್ನು ಖಂಡಿಸಿದರು. ನಗರದ ಗಾಂಧಿ ಮೈದಾನದಲ್ಲಿ ಜಮಾಯಿಸಿದ ಕಾಂಗ್ರೆಸ್ ಪ್ರಮುಖರು ಹಾಗೂ ಕಾರ್ಯಕರ್ತರು, ರಾಹುಲ್ ಗಾಂಧಿ ವಿರುದ್ಧ ರಾಜಕೀಯ ಪ್ರೇರಿತ ದುರುದ್ದೇಶದ ದೂರುಗಳನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಆರೋಪಿಸಿ ಭಿತ್ತಿಪತ್ರಗಳನ್ನು ಪ್ರದರ್ಶಿಸಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಹಿರಿಯ ಮುಖಂಡ ಟಿ.ಪಿ.ರಮೇಶ್, ಕೆಪಿಸಿಸಿ ಸದಸ್ಯರಾದ ಮಂಜುನಾಥ್ ಗುಂಡೂರಾವ್, ಹೆಚ್.ಎಂ.ನಂದಕುಮಾರ್, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ.ಹಂಸ, ನಗರ ಕಾಂಗ್ರೆಸ್ ಆಧ್ಯಕ್ಷ ರಾಜೇಶ್ ಯಲ್ಲಪ್ಪ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮುನೀರ್ ಅಹಮದ್, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನಿರ ಮೈನಾ, ಮುಖಂಡರಾದ ಕೊಲ್ಯದ ಗಿರೀಶ್, ಸತೀಶ್, ಕಾನೆಹಿತ್ಲು…

Read More

ಮಡಿಕೇರಿ ಜು.12 : ಕಾನೂನು ಮಾಪನಶಾಸ್ತ್ರ ಇಲಾಖೆ ವತಿಯಿಂದ ತಾತ್ಕಾಲಿಕ ಸತ್ಯಾಪನೆ ಮುದ್ರೆ ಶಿಬಿರವು ಜು.13 ರಿಂದ 21 ರವರೆಗೆ ಶ್ರೀಮಂಗಲದ ನಾಲ್ಕೇರಿ ಜಂಕ್ಷನ್‍ನ ಮಣಿ ಕಾಂಪ್ಲೆಕ್ಸ್‍ನಲ್ಲಿ ನಡೆಯಲಿದೆ. ತಮ್ಮಲ್ಲಿ ಉಪಯೋಗಿಸುವ ಅಳತೆ, ತೂಕ ಮತ್ತು ತೂಕದ ಸಾಧನಗಳನ್ನು ಹಾಜರುಪಡಿಸಿ ಸತ್ಯಾಪನೆ ಮುದ್ರೆ ಮಾಡಿಸಿಕೊಳ್ಳುವಂತೆ ಕಾನೂನು ಮಾಪನಶಾಸ್ತ್ರ ನಿರೀಕ್ಷಕರು ತಿಳಿಸಿದ್ದಾರೆ.

Read More

ಮಡಿಕೇರಿ ಜು.12 : ಕರ್ನಾಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ 2002 ರ ನವೆಂಬರ್, 4 ರಂದು ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಪ್ರಾರಂಭಗೊಂಡ ಸಾಂತ್ವನ ಮಹಿಳಾ ಸಹಾಯವಾಣಿ ಕೊಡಗು ಜಿಲ್ಲೆಯಾದ್ಯಂತ ಸಮಾಜದ ನೊಂದ ಮಹಿಳೆಯರು ಪ್ರತಿಯೊಂದು ಸ್ತರದಲ್ಲಿ ಎದುರಿಸುತ್ತಿರುವ ಹಲವಾರು ಸಮಸ್ಯೆಗಳನ್ನು ದಾಖಲಿಸಿಕೊಂಡು ತಕ್ಷಣಕ್ಕೆ ಸರಿಯಾದ ಸಲಹೆ ಸೂಚನೆಗಳನ್ನು ನೀಡಿ ನೆರವು ಕಲ್ಪಿಸುತ್ತಾ ಬಂದಿರುತ್ತದೆ. ಸಾಂತ್ವನ ಕೇಂದ್ರದಲ್ಲಿ ಈವರೆಗೆ 4,873 ವಿವಿಧ ಸ್ವರೂಪದ ಪ್ರಕರಣಗಳು ದಾಖಲಾಗಿದ್ದು 4,856 ಪ್ರಕರಣಗಳು ಇತ್ಯರ್ಥಗೊಂಡಿರುತ್ತದೆ. 2023-24 ನೇ ಆರ್ಥಿಕ ಸಾಲಿನಲ್ಲಿ 2023 ರ ಏಪ್ರಿಲ್, 01 ರಿಂದ ಜೂನ್ ತಿಂಗಳ ಅಂತ್ಯದವರೆಗೆ 69 ಪ್ರಕರಣಗಳು ದಾಖಲೆಗೆ 58 ಪ್ರಕರಣಗಳು ಇತ್ಯರ್ಥಗೊಂಡು ಹಿಂದಿನ ಸಾಲಿನ ಉಳಿಕೆ ಪ್ರಕರಣಗಳು ಸೇರಿ ಉಳಿದ 17 ಪ್ರಕರಣಗಳು ಇತ್ಯರ್ಥದ ಹಂತದಲ್ಲಿ ಇರುತ್ತದೆ. ಮಹಿಳಾ ಸಹಾಯವಾಣಿಯ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಸಾಂತ್ವನ ಕೇಂದ್ರದ ಅಧ್ಯಕ್ಷರಾದ ಕೆ.ಎಸ್.ಪ್ರಕಾಶ್ ಹಾಗೂ ಪ್ರಧಾನ ಕಾರ್ಯದರ್ಶಿಯವರಾದ ನಮಿತ ಆರ್. ರೈ ಅವರು ಕೋರಿದ್ದಾರೆ.…

Read More

ಮಡಿಕೇರಿ ಜು.12  : ಕೇಂದ್ರ ಪುರಸ್ಕೃತ ಯೋಜನೆಯಾದ ಕೃಷಿ ತಂತ್ರಜ್ಞಾನ ನಿರ್ವಹಣಾ ಸಂಸ್ಥೆ(ಆತ್ಮ) ಯೋಜನೆಯಡಿ ಜಂಟಿ ಕೃಷಿ ನಿರ್ದೇಶಕರ ಕಚೇರಿ, ಕೊಡಗು ಜಿಲ್ಲೆ, ಮಡಿಕೇರಿಯಲ್ಲಿ ಖಾಲಿ ಇರುವ ಒಂದು ಉಪ ಯೋಜನಾ ನಿರ್ದೇಶಕರ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ 2023-24 ನೇ ಸಾಲಿನ ಸೀಮಿತ ಅವಧಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಎಂ.ಎಸ್ಸಿ(ಕೃಷಿ/ ತೋಟಗಾರಿಕೆ/ಮೀನುಗಾರಿಕೆ/ ಅರಣ್ಯ, ರೇಷ್ಮೆ) ವಿದ್ಯಾರ್ಹತೆ ಹೊಂದಿರಬೇಕು. ಕನಿಷ್ಟ 5 ವರ್ಷ ಕೃಷಿ ವಿಸ್ತರಣಾ ಮತ್ತು ಸಂಬಂಧಿತ ಚಟುವಟಿಕೆಯಲ್ಲಿ ಅನುಭವ ಹೊಂದಿರಬೇಕು. ಎಂ.ಎಸ್ ಆಫೀಸ್‍ನಲ್ಲಿ ಪರಿಣಿತಿ ಇರಬೇಕು. ಗರಿಷ್ಠ 45 ವರ್ಷದೊಳಗಿರಬೇಕು. ಮಾಸಿಕ ರೂ.42 ಸಾವಿರ ಗೌರವ ಧನ ನೀಡಲಾಗುತ್ತದೆ. ಉಪ ಯೋಜನಾ ನಿರ್ದೇಶಕರ ಹುದ್ದೆಗೆ ಅರ್ಹರಿರುವ ಅಭ್ಯರ್ಥಿಗಳು ಜುಲೈ, 25 ರೊಳಗೆ ಕಚೇರಿ ವೇಳೆಯಲ್ಲಿ ಜಂಟಿ ಕೃಷಿ ನಿರ್ದೇಶಕರ ಕಚೇರಿ, ಕೊಡಗು ಜಿಲ್ಲೆ, ಮಡಿಕೇರಿ ಇಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಜಂಟಿ ಕೃಷಿ ನಿರ್ದೇಶಕರು, ಕೊಡಗು ಜಿಲ್ಲೆ, ಮಡಿಕೇರಿ ಇವರನ್ನು ಸಂಪರ್ಕಿಸಬಹುದು ಎಂದು ಕೃಷಿ ಇಲಾಖೆಯ ಜಂಟಿ…

Read More

ಮಡಿಕೇರಿ ಜು.12 : ಪೊನ್ನಂಪೇಟೆ ತಾಲ್ಲೂಕು ಕಚೇರಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಭೇಟಿ ನೀಡಿ ಪರಿಶೀಲಿಸಿದರು. ಪೊನ್ನಂಪೇಟೆ ತಾಲ್ಲೂಕು ಆಡಳಿತ ಭವನ ನಿರ್ಮಾಣ ಸಂಬಂಧ ತಹಶೀಲ್ದಾರರ ಜೊತೆ ಚರ್ಚಿಸಿದರು. ಕಂದಾಯ ಇಲಾಖೆ ವ್ಯಾಪ್ತಿಯಲ್ಲಿನ ನ್ಯಾಯಾಲಯ ಪ್ರಕರಣಗಳನ್ನು ನಿಯಮಾನುಸಾರ ಆದಷ್ಟು ತ್ವರಿತವಾಗಿ ಇತ್ಯರ್ಥ ಪಡಿಸುವಂತೆ ತಹಶೀಲ್ದಾರರಿಗೆ ಸೂಚಿಸಿದರು. ದಕ್ಷಿಣ ಕೊಡಗಿನ ವಿವಿಧ ಹಾಡಿಗಳಲ್ಲಿ ಆದಿವಾಸಿಗಳು ಹೆಚ್ಚಿನ ಸಂಖ್ಯೆಯಲ್ಲಿ ವಾಸ ಮಾಡುತ್ತಿದ್ದು, ಅಗತ್ಯ ಮೂಲ ಸೌಲಭ್ಯ ಕಲ್ಪಿಸಬೇಕು. ಹಾಡಿ ಜನರ ಜೀವನ ಮಟ್ಟ ಸುಧಾರಣೆಗೆ ಕಂದಾಯ, ಐಟಿಡಿಪಿ, ಸಮಾಜ ಕಲ್ಯಾಣ, ಅರಣ್ಯ ಹೀಗೆ ಎಲ್ಲಾ ಇಲಾಖೆಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ನಿರ್ದೇಶನ ನೀಡಿದರು. ತಾಲ್ಲೂಕು ಕಚೇರಿಗೆ ಸಾರ್ವಜನಿಕರು ಭೇಟಿ ನೀಡಿದ ಸಂದರ್ಭದಲ್ಲಿ ಆಗಬೇಕಿರುವ ಸರ್ಕಾರಿ ಕೆಲಸವನ್ನು ನಿಯಮಾನುಸಾರ ಕಾಲಮಿತಿಯಲ್ಲಿ ಒದಗಿಸಬೇಕು. ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಗಳು ಉಂಟಾಗದಂತೆ ಸಕಾಲದಲ್ಲಿ ಅಗತ್ಯ ಪ್ರಮಾಣ ಪತ್ರವನ್ನು ನೀಡುವಂತೆ ತಹಶೀಲ್ದಾರರಿಗೆ ಸೂಚಿಸಿದರು. ಕೃಷಿಕರು, ಕಾರ್ಮಿಕರು, ಆದಿವಾಸಿಗಳು ಹೀಗೆ ಯಾರನ್ನೂ ಸತಾಯಿಸದೆ ಕಾಲಮಿತಿಯಲ್ಲಿ ಸರ್ಕಾರದ…

Read More

ಮಡಿಕೇರಿ ಜು.12 : ತಾಲ್ಲೂಕಿನ ಗಾಳಿಬೀಡು ಬಳಿ ಇರುವ ಜವಾಹರ್ ನವೋದಯ ವಿದ್ಯಾಲಯಕ್ಕೆ 2024-25 ನೇ ಸಾಲಿಗೆ 6 ನೇ ತರಗತಿಗೆ ಪ್ರವೇಶ ಪಡೆಯಲು ಜಿಲ್ಲೆಯ ಸರ್ಕಾರಿ ಹಾಗೂ ಮಾನ್ಯತೆ ಪಡೆದ ಶಾಲೆಗಳಲ್ಲಿ 5 ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್, 10 ಕೊನೆಯ ದಿನವಾಗಿದೆ. ಅರ್ಜಿಯನ್ನು https://navodaya.gov.in ಮತ್ತು https://cbseitms.rcil.gov.in/nvs ವೆಬ್‍ಸೈಟ್‍ನಲ್ಲಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಜವಾಹರ್ ನವೋದಯ ವಿದ್ಯಾಲಯ ಇರುವ ಜಿಲ್ಲೆಯ ನಿವಾಸಿಯಾಗಿರಬೇಕು. 2023-24 ರ ಶೈಕ್ಷಣಿಕ ಅವಧಿಯಲ್ಲಿ 5 ನೇ ತರಗತಿಯಲ್ಲಿ ಓದುತ್ತಿರಬೇಕು. ಅಭ್ಯರ್ಥಿಯು 01-05-2012 ರಿಂದ 31-07-2014 ರ ನಡುವೆ ಜನಿಸಿರಬೇಕು. ಹೆಚ್ಚಿನ ಮಾಹಿತಿಗೆ ಪ್ರಾಂಶುಪಾಲರು, ಜವಾಹರ್ ನವೋದಯ ವಿದ್ಯಾಲಯ, ಗಾಳಿಬೀಡು ಇಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಪ್ರಾಂಶುಪಾಲರಾದ ಪಂಕಜಾಕ್ಷನ್ ಅವರು ತಿಳಿಸಿದ್ದಾರೆ.

Read More

ಮಡಿಕೇರಿ ಜು.12 : 2023-24ನೇ ಸಾಲಿನ 31ನೇ ರಾಜ್ಯಮಟ್ಟದ ಮುಕ್ತ ಕೆಸರು ಗದ್ದೆ ಕ್ರೀಡಾಕೂಟ ಮತ್ತು ಆಟೋಟ ಸ್ಪರ್ಧೆಗಳು ಆ.12 ರಂದು ಕಗ್ಗೋಡ್ಲು ಗ್ರಾಮದ ದಿ.ಸಿ.ಡಿ.ಬೋಪಯ್ಯ ಅವರ ಗದ್ದೆಯಲ್ಲಿ ನಡೆಯಲಿದೆ ಎಂದು ಕೊಡಗು ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಪಿ.ಪಿ.ಸುಕುಮಾರ್ ಹಾಗೂ ಮಡಿಕೇರಿ ತಾಲೂಕು ಅಧ್ಯಕ್ಷ ಬಾಳಾಡಿ ದಿಲೀಪ್ ಕುಮಾರ್ ತಿಳಿಸಿದ್ದಾರೆ. ಕೊಡಗು ಜಿಲ್ಲಾ ಪಂಚಾಯತ್, ಜಿಲ್ಲಾಡಳಿತ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಯೂತ್ ಹಾಸ್ಟೇಲ್ ಅಸೋಸಿಯೇಶನ್ ಆಫ್ ಇಂಡಿಯಾ (ಮಡಿಕೇರಿ ಘಟಕ), ಕೊಡಗು ಜಿಲ್ಲಾ ಯುವ ಒಕ್ಕೂಟ, ಮಡಿಕೇರಿ, ವಿರಾಜಪೇಟೆ ಮತ್ತು ಸೋಮವಾರಪೇಟೆ ತಾಲ್ಲೂಕು ಯುವ ಒಕ್ಕೂಟ ಹಾಗೂ ಕಗ್ಗೊಡ್ಲು ಕಾವೇರಿ ಯುವಕ ಸಂಘ ಸಂಯುಕ್ತಾಶ್ರಯದಲ್ಲಿ ಬೆಳಗ್ಗೆ 9.30 ರಿಂದ ಸ್ಪರ್ಧೆಗಳು ನಡೆಯಲಿವೆ. ಸಾರ್ವಜನಿಕ ಪುರುಷ ಮತ್ತು ಮಹಿಳೆಯರ ಹಗ್ಗ ಜಗ್ಗಾಟ (9 ಜನರ ತಂಡ), ಸಾರ್ವಜನಿಕ ಪುರುಷರ ವಾಲಿಬಾಲ್ (4 ಜನರ ತಂಡ), ಸಾರ್ವಜನಿಕ ಮಹಿಳೆಯರಿಗೆ ಥ್ರೋಬಾಲ್ (6 ಜನರ ತಂಡ), ಪ್ರೌಢ ಶಾಲಾ ಬಾಲಕಿಯರಿಗೆ…

Read More

ಮಡಿಕೇರಿ ಜು.12 : ಬಿಳಿಗೇರಿ ಪ್ಲಾಂಟರ್ಸ್ ಕ್ಲಬ್ ವತಿಯಿಂದ ಜು.16 ರಂದು 3ನೇ ವರ್ಷದ “ಹಿಂದೂ ಕೆಸರುಗದ್ದೆ ಕ್ರೀಡಾಕೂಟ” ನಡೆಯಲಿದೆ ಎಂದು ಪ್ಲಾಂಟರ್ಸ್ ಕ್ಲಬ್ ಅಧ್ಯಕ್ಷ ಅರವಿಂದ್ ಸೋಮಣ್ಣ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಬಿಳಿಗೇರಿಯ ತುಂತಜೆ ಕುಟುಂಬಸ್ಥರ ಗದ್ದೆಯಲ್ಲಿ ಕೆಸರುಗದ್ದೆ ಕ್ರಿಕೆಟ್, ವಾಲಿಬಾಲ್, ಓಟದ ಸ್ಪರ್ಧೆ, ಹಗ್ಗಜಗ್ಗಾಟ, ತೆಂಗಿನ ಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆ ನಡೆಯಲಿದೆ ಎಂದು ಹೇಳಿದ್ದಾರೆ. ಬೆಳಗ್ಗೆ 9 ಗಂಟೆಗೆ ಆರಂಭಗೊಳ್ಳಲಿರುವ ಕ್ರೀಡಾಕೂಟವನ್ನು ಕೃಷಿಕರಾದ ತುಂತಜೆ ಚಂದ್ರಶೇಖರ್, ತುಂತಜೆ ಜನಾರ್ಧನ, ಮಾಜಿ ಕ್ಯಾಪ್ಟನ್ ತುಂತಜೆ ದಯಾನಂದ, ಅರ್ವತ್ತೋಕ್ಲು ಪೆರಾತ ಕ್ಲಬ್ ಅಧ್ಯಕ್ಷ ಬಾಲಾಡಿ ಪ್ರತಾಪ್, ತಾ.ಪಂ ಮಾಜಿ ಸದಸ್ಯೆ ತುಂತಜೆ ಕುಮುದ, ಪ್ಲಾಂಟರ್ಸ್ ಕ್ಲಬ್ ಅಧ್ಯಕ್ಷ ಅರವಿಂದ್ ಉದ್ಘಾಟಿಸಲಿದ್ದಾರೆ. ಸಂಜೆ 4.30ಕ್ಕೆ ಸಮಾರೋಪ ಸಮಾರಂಭ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಕೊಡಗು-ಮೈಸೂರು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ, ಶಾಸಕದ್ವಯರಾದ ಎ.ಎಸ್.ಪೊನ್ನಣ್ಣ, ಡಾ.ಮಂಥರ್ ಗೌಡ, ಮಾಜಿ ಶಾಸಕ ಕೆ.ಜಿ.ಬೋಪಯ್ಯ, ಬೆಂಗಳೂರು ಅಲ್ಟ್ರ ಗ್ರೂಪ್ಸ್‍ನ ರಾಜೇಶ್ ತೇನನ, ಮಕ್ಕಳ ತಜ್ಞ…

Read More

ಮಡಿಕೇರಿ ಜು.12  : ಮಡಿಕೇರಿಯ ಸಮರ್ಥ ಕನ್ನಡಿಗರು ಸಂಸ್ಥೆಯ ವತಿಯಿಂದ   ಆನ್ ಲೈನ್ ಗಾಯನ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಈ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ನವೆಂಬರ್ ತಿಂಗಳಲ್ಲಿ ಸಂಸ್ಥೆ ಹಮ್ಮಿಕೊಳ್ಳುವ ಪ್ರತಿಭೋತ್ಸವದಲ್ಲಿ ಬಹುಮಾನ ನೀಡಲಾಗುವುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ. ಗಾಯನ ಸ್ಪರ್ಧೆಯ ನಿಯಮಗಳು :  ಭಕ್ತಿಗೀತೆಗಳನ್ನೇ ಹಾಡಬೇಕು. ಕಾಲಾವಕಾಶ 3 ನಿಮಿಷ. ಕರೋಕೆ ಬಳಸಿ ಹಾಡುವಂತಿಲ್ಲ, . ವೈಯಕ್ತಿಕ ಸ್ಪರ್ಧೆ, ಸ್ಪರ್ಧೆಗೆ ಯಾವುದೇ ಶುಲ್ಕವಿಲ್ಲ, ಹಾಡಿನ ವೀಡಿಯೋ ಕಳುಹಿಸಲು ಕೊನೆಯ ದಿನಾಂಕ ಜು.30. ವೀಡಿಯೋ ಕಳುಹಿಸಬೇಕಾದ ಮೊಬೈಲ್ ಸಂಖ್ಯೆ :  9740875383 (5 ರಿಂದ 10 ವರ್ಷದ ಮಕ್ಕಳಿಗೆ), 9632870102 (11 ರಿಂದ 18 ವರ್ಷ), 8150007006 (18 ವರ್ಷ ಮೇಲ್ಪಟ್ಟವರು),   ಹೆಚ್ಚಿನ ಮಾಹಿತಿಗೆ  ಸಮಥ೯ ಕನ್ನಡಿಗರು ಜಿಲ್ಲಾ ಸಂಚಾಲಕಿ ಕೆ.ಜಯಲಕ್ಷಿ 9663119670  ಸಂಪರ್ಕಿಸಬಹುದಾಗಿದೆ.

Read More