ಲೇಖಕ: admin

ಸುಂಟಿಕೊಪ್ಪ,ಆ.11 : ಐಗೂರು ಗ್ರಾ.ಪಂ ಯ 2ನೇ ಅವಧಿಯ ಅಧ್ಯಕ್ಷರಾಗಿ ಜಿ.ಕೆ.ವಿನೋದ್(ವಿನು) ಹಾಗೂ ಉಪಾಧ್ಯಕ್ಷರಾಗಿ ಯಡವನಾಡಿನ ಗೌರಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಸ್ಥಾನ ಬಿಸಿಎಂಎಗೆ ಮೀಸಲಾಗಿತ್ತು. ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿತ್ತು. ಅಧ್ಯಕ್ಷ–ಉಪಾಧ್ಯಕ್ಷ ಚುನಾವಣೆಗೆ ತಲಾ ಒಂದೊಂದು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿರುವುದರಿಂದ ಚುನಾವಣಾಧಿಕಾರಿಯಾದ ಸೋಮವಾರಪೇಟೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಬಾಲಕೃಷ್ಣ ರೈ ಅವರು ಅಧ್ಯಕ್ಷರಾಗಿ ವಿನೋದ್ ಹಾಗೂ ಉಪಾಧ್ಯಕ್ಷರಾಗಿ ಗೌರಮ್ಮ ಆಯ್ಕೆಯಾಗಿದ್ದಾರೆಂದು ಘೋಷಿಸಿದರು. ಐಗೂರು ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಿ.ಎಸ್.ಬಾಲಕೃಷ್ಣ ರೈ, ಗ್ರಾ.ಪಂ ಸದಸ್ಯರುಗಳಾದ ವಿನೋದ್, ಗೌರಮ್ಮ, ಲಿಂಗೇರಿ ರಾಜೇಶ, ಬಾರನ ಪ್ರಮೋದ್, ಜಾನಕಿಮೇದಪ್ಪ, ಬೇಬಿ, ಜುನೈದ್, ಜೋಯಪ್ಪ, ಪೂರ್ಣಿಮ, ಪವಿತ್ರ ಹಾಗೂ ಪಾರ್ವತಿ ಹಾಗೂ ಗ್ರಾ.ಪಂ.ಸಿಬ್ಬಂದಿಗಳು ಉಪಸ್ಥಿತರಿದ್ದರು. ಸೋಮವಾರಪೇಟೆ ತಾಲೂಕು ಬಿಜೆಪಿ ಉಪಾಧ್ಯಕ್ಷ ಎಂ.ಎ.ಪ್ರಭಾಕರ, ಟಿ.ಕೆ.ರಮೇಶ ಉಪಸ್ಥಿತರಿದ್ದರು.

Read More

ಗೋಣಿಕೊಪ್ಪ, ಆ.11 : ನಮ್ಮ ಸುತ್ತಮುತ್ತಲಿನ ಪ್ರದೇಶದಲ್ಲಿ ಸ್ವಚ್ಛತೆ ಹಾಗೂ ನೈರ್ಮಲ್ಯ ಕಾಪಾಡುವ ಮೂಲಕ ಯಾವುದೇ ಸೊಳ್ಳೆಗಳು ಉತ್ಪತ್ತಿಯಾಗದಂತೆ ಮುಂಜಾಗ್ರತೆ ವಹಿಸುವ ಮೂಲಕ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ಸಾಧ್ಯ. ಸಾಂಕ್ರಾಮಿಕ ರೋಗ ತಡೆಗೆ ಮುಂಜಾಗ್ರತೆಯೇ ಮದ್ದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಂ.ಸತೀಶ್ ಕುಮಾರ್  ಹೇಳಿದರು. ಜಿಲ್ಲಾ ಮತ್ತು ತಾಲ್ಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಿರಾಜಪೇಟೆ ತಾಲ್ಲೂಕು ಶಾಲಾ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಕೊಡಗು ಜಿಲ್ಲಾ ಸಮಿತಿಯ ಸಂಯುಕ್ತಾಶ್ರಯದಲ್ಲಿ ಮಲೇರಿಯಾ ಮಾಸಾಚರಣೆ ಅಂಗವಾಗಿ ಡೆಂಗ್ಯೂ, ಮಲೇರಿಯಾ ಇನ್ನಿತರ ಸಾಂಕ್ರಾಮಿಕ ರೋಗಗಳ ಕುರಿತಂತೆ “ಆರೋಗ್ಯ ಅರಿವು” ಕಾರ್ಯಕ್ರಮದಡಿ “ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣದಲ್ಲಿ ಸಹಭಾಗಿತ್ವ”ದ ಕುರಿತು ವಿರಾಜಪೇಟೆ ತಾಲ್ಲೂಕು ಮಟ್ಟದ ಶಿಕ್ಷಕರ ಅಡ್ವೊಕೆಸಿ ಕಾರ್ಯಾಗಾರದಲ್ಲಿ “ರೋಗವಾಹಕಗಳ ನಿಯಂತ್ರಣ” ಕುರಿತ ಕೈಪಿಡಿ ಬಿಡುಗಡೆಗೊಳಿಸಿ ಆರೋಗ್ಯ ಮಾಹಿತಿ ನೀಡಿದರು. ಡೆಂಗ್ಯೂ, ಮಲೇರಿಯಾ, ಚಿಕುನ್ ಗುನ್ಯ ರೋಗಗಳು ಹರಡುವ ಕ್ರಮ ಮತ್ತು ಇವುಗಳನ್ನು ತಡೆಗಟ್ಟುವ…

Read More

ಮಡಿಕೇರಿ,ಆ.11 :   ಸಹಕಾರ ಸಂಘಗಳು ವಿವಿಧೊದ್ಧೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘವಾಗಿ ಮಾರ್ಪಾಡಾಗಿರುವದರಿಂದ ಸಂಘದ ಸದಸ್ಯರುಗಳಿಗೆ ವಿವಿಧ ಯೋಜನೆಗಳಡಿ ಸೌಲಭ್ಯಗಳನ್ನು ಹೊಂದಿಕೊಳ್ಳಲು ಅವಕಾಶವಿರುವದಾಗಿ ಕೊಕ್ಕಲೇರ ಸುಜು ತಿಮ್ಮಯ್ಯ ಹೇಳಿದರು. ಮಕ್ಕಂದೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2022-23ನೇ ಸಾಲಿನ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಇದುವರೆಗೆ ಕೃಷಿ ಪ್ರಾಥಮಿಕ ಸಹಕಾರ ಸಂಘವಾಗಿದ್ದ ಎಲ್ಲ ಸಹಕಾರ ಸಂಘಗಳನ್ನು ವಿವಿಧೊದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರವೆಂದು ಮಾರ್ಪಡಿಸಿ ಏಕರೂಪದ ಬೈಲಾ ಜಾರಿಗೆ ತರಲಾಗಿದೆ. ಇದುವರೆಗೆ ಕೃಷಿಗೆ ಸಂಬಂಧಿಸಿದಂತೆ ಮಾತ್ರ ಸೌಲಭ್ಯಗಳನ್ನು ಹೊಂದಿಕೊಳ್ಳಬಹುದಾಗಿತ್ತು. ಇದೀಗ ನೂತನ ಮಾರ್ಪಾಡಿನಿಂದಾಗಿ ಬೇರೆ, ಬೇರೆ ವಿವಿಧ ರೀತಿಯ ಸೌಲಭ್ಯಗಳನ್ನು ಹೊಂದಿಕೊಳ್ಳಬಹುದು ಎಂದು ತಿಳಿಸಿದರು. ಸಂಘವು 2022-23ನೇ ಸಾಲಿನಲ್ಲಿ ಸದಸ್ಯರ ಪಾಲು ಹಣ, ವಿವಿಧ ಸಾಲ ನೀಡಿಕೆ, ವಿವಿಧ ನಿಧಿಗಳ ಸಹಿತ ಒಟ್ಟು ರೂ.18,63,404ರಷ್ಟು ಲಾಭ ಗಳಿಸಿದೆ. ಲಾಭಾಂಶದಲ್ಲಿ ಸದಸ್ಯರುಗಳಿಗೆ ಶೇ.10 ರಷ್ಟು ಡಿವಿಡೆಂಡ್ ನೀಡಲಾಗಿದೆ ಎಂದು ಮಾಹಿತಿ ನೀಡಿದರು. ಸಂಘದ ಪರವಾಗಿ ಮಕ್ಕಂದೂರು ಹಾಗೂ ಮುಕ್ಕೋಡ್ಲು…

Read More

ಮಡಿಕೇರಿ ಆ.11 : ಚೆಯ್ಯಂಡಾಣೆಯ ನರಿಯಂದಡ ಕೇಂದ್ರ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಮನೋಹರ್ ನಾಯ್ಕ ಅವರ ಮೇಲೆ ಹಲ್ಲೆ, ನಡೆಸಿ, ಸುಳ್ಳು ಪೋಕ್ಸೋ ಪ್ರಕರಣ ದಾಖಲಿಸಲಾಗಿದೆ ಎಂದು ಆರೋಪಿಸಿರುವ ಕರ್ನಾಟಕ ರಾಜ್ಯ ಬಂಜಾರ ಯುವಕರ ಮತ್ತು ವಿದ್ಯಾರ್ಥಿ ಸಂಘದ ರಾಜ್ಯಾಧ್ಯಕ್ಷ ಡಿ.ಆರ್.ಗಿರೀಶ್, ಒಟ್ಟು ಪ್ರಕರಣವನ್ನು ಸಿಐಡಿಗೆ ವಹಿಸಬೇಕೆಂದು ಆಗ್ರಹಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯೋಪಾಧ್ಯಾಯ ಮನೋಹರ್ ನಾಯ್ಕ್ ಅವರು ತಮ್ಮ ಮೇಲೆ ಹಲ್ಲೆ, ದೌರ್ಜನ್ಯ ನಡೆಸಿರುವ ಬಗ್ಗೆ ದೂರು ದಾಖಲಿಸಿದ್ದಾರೆ. ಆರೋಪಿಗಳಲ್ಲಿ ಎಂಟು ಮಂದಿ ಜಾಮೀನು ಪಡೆದುಕೊಂಡಿದ್ದು, ಉಳಿದ ಇಬ್ಬರನ್ನು ವಾರದ ಒಳಗಾಗಿ ತನಿಖಾಧಿಕಾರಿಯಾದ ಡಿವೈಎಸ್‍ಪಿ ಅವರು ಬಂಧಿಸಬೇಕು. ಇಲ್ಲವಾದಲ್ಲಿ ರಾಜ್ಯ ಮಟ್ಟದ ‘ಮಡಿಕೇರಿ ಚಲೋ’ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು. ನರಿಯಂದಡ ಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ ಕಾರ್ಯನಿರ್ವಹಿಸುತ್ತಿದ್ದ ಮನೋಹರ್ ನಾಯ್ಕ್ 2017 ರಲ್ಲಿ ‘ಉತ್ತಮ ಶಿಕ್ಷಕ’ ಪ್ರಶಸ್ತಿಯನ್ನು ಪಡೆದುಕೊಂಡಿದ್ದರು. ನಿಯಮ ಬಾಹಿರ ಕಾರ್ಯಗಳ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾದ ಕಾರಣಕ್ಕೆ ಅವರ ಮೇಲೆ ಸುಳ್ಳು ಪ್ರಕರಣ ದಾಖಲಿಸಲಾಗಿದೆ ಎಂದು ಆರೋಪಿಸಿದರು. ಒಟ್ಟು…

Read More

ಮಡಿಕೇರಿ ಆ.11 : ಜಿಲ್ಲಾಡಳಿತ ಭವನದ ಕಳಪೆ ತಡೆಗೋಡೆ ಪ್ರಕರಣದ ತನಿಖೆ ಪ್ರಗತಿಯಲ್ಲಿರುವ ಹಂತದಲ್ಲೆ ಸಾಕ್ಷ್ಯಾಧಾರಗಳ ನಾಶ ಪಡಿಸುವ ಬೆಳವಣಿಗೆ ನಡೆದಿದೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ವಕ್ತಾರ ತೆನ್ನಿರ ಮೈನಾ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಹೊಸ ಸರ್ಕಾರ ರಚಿತವಾಗಿದ್ದು, ಜಿಲ್ಲೆಯ ನೂತನ ಶಾಸಕರ ಪ್ರಯತ್ನದಿಂದ ಜಿಲ್ಲಾಡಳಿತ ಭವನದ ತಡೆಗೋಡೆ ಕಾಮಗಾರಿ ಕುರಿತು ತನಿಖೆ ಚುರುಕು ಪಡೆದುಕೊಂಡಿದೆ. ಈ ನಡುವೆ ಲೋಕೋಪಯೋಗಿ ಇಲಾಖೆಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷ್ಯ ನಾಶವಾಗಿದೆ ಎಂದು ತಿಳಿಸಿದರು. ಎಂಬಿ ಪುಸ್ತಕವೊಂದರ ಹಾಳೆಗಳು ಹರಿದು ಹೋಗಿರುವುದು ಕಂಡು ಬಂದಿದ್ದು, ಅಧಿಕಾರಿಗಳೆ ದಾಖಲೆಯನ್ನು ನಾಶಪಡಿಸಿದ್ದಾರೆ ಎಂದು ಆರೋಪಿಸಿದರು. ಸಾಕ್ಷ್ಯ ನಾಶವಾಗುವುದಕ್ಕೂ ಮೊದಲೇ ದೃಢೀಕೃತ ಎಂಬಿ ಪುಸ್ತಕದ ಪ್ರತಿಯನ್ನು ತಾನು ಪಡೆದುಕೊಂಡಿದ್ದೆ ಎಂದು ದಾಖಲೆ ಪ್ರದರ್ಶಿಸಿದರು. ಜಿಲ್ಲಾಡಳಿತ ಭವನದ ತಡೆಗೊಡೆಗೆ ಸಂಬಂಧಿಸಿಂತೆ 6.25 ಕೊಟಿ ಹಣ ಡ್ರಾ ಆಗಿದೆ. ಈ ಬಗ್ಗೆ ಜಾರಿ ನಿರ್ದೇಶನಾಲಯಕ್ಕೆ ಅಗತ್ಯ ಮಾಹಿತಿಯನ್ನು ನೀಡಲಾಗಿದೆ ಎಂದು ತಿಳಿಸಿದ ಮೈನಾ, ಒಟ್ಟು ಪ್ರಕರಣಕ್ಕೆ…

Read More

ನಾಪೋಕ್ಲು ಆ.11 : ನರಿಯಂದದ ಗ್ರಾ.ಪಂ ಯ ಎರಡನೇ ಅವಧಿಗೆ ಬಿಜೆಪಿ ಬೆಂಬಲಿತ ಅಭ್ಯರ್ಥಿ ಪೆಮ್ಮಂಡ ಕಾವೇರಮ್ಮ ಅಧ್ಯಕ್ಷರಾಗಿ ಹಾಗೂ ಉಪಾಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಕೋಡಿರ ಎಂ. ನಾಣಯ್ಯ ಆಯ್ಕೆಯಾದರು. ಗ್ರಾ.ಪಂ ಸಭಾಂಗಣದಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು. ಎರಡನೇ ಅವಧಿಗೆ ಅಧ್ಯಕ್ಷರಾಗಿ ಆಯ್ಕೆಯಾದ ಪೆಮ್ಮಂಡ ಕಾವೇರಮ್ಮ ಮಾತನಾಡಿ, ಈ ಹಿಂದೆ ಕೊಕೇರಿ ಗ್ರಾಮ ಪಂಚಾಯಿತಿ ಜವಾಬ್ದಾರಿ ಮಾತ್ರ ಇತ್ತು ಈಗ ಕೋಕೇರಿ ಸೇರಿದಂತೆ ಏಳು ಗ್ರಾಮಗಳ ಜವಾಬ್ದಾರಿಯನ್ನು ನಿರ್ವಹಿಸಬೇಕಾಗಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಸದಸ್ಯರ ಬೆಂಬಲದೊಂದಿಗೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುವುದು ಎಂದರು. ನೋಡಲ್ ಅಧಿಕಾರಿಯಾಗಿ ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಹೇಮಂತ್ ಕುಮಾರ್ ಕಾರ್ಯ ನಿರ್ವಹಿಸಿದರು. ಈ ಸಂದರ್ಭ ಗ್ರಾ.ಪಂ ಮಾಜಿ ಅಧ್ಯಕ್ಷ ಬಿದ್ದಂಡ ರಾಜೇಶ್ ಅಚ್ಚಯ್ಯ, ಓಬಿಸಿ ತಾಲೂಕು ಅಧ್ಯಕ್ಷ ಕೋಳೆಯ0ಡ ಗಿರೀಶ್ ಜಿ.ಪಂ ಮಾಜಿ ಸದಸ್ಯರಾದ ನೆಲ್ಲಚಂಡ ಕಿರಣ್ ಕಾರ್ಯಪ್ಪ, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ನೆರೆಯಡಮ್ಮಂಡ ಉಮಾ ಪ್ರಭು, ಶಕ್ತಿ ಕೇಂದ್ರದ ಅಧ್ಯಕ್ಷರಾದ ಉಪಾಧ್ಯಕ್ಷರಾದ ಪ್ಕೋಳoಡ್ರ ಧನುಜ್,…

Read More

ಮಡಿಕೇರಿ ಆ.11 : ಎಸ್‍ವೈಎಸ್ ಕೊಡಗು ಜಿಲ್ಲಾ ಸಮಿತಿ ವತಿಯಿಂದ “ಜಾತ್ಯಾತೀತತೆ ಭಾರತದ ಧರ್ಮ” ಎಂಬ ಘೋಷಣೆಯೊಂದಿಗೆ ಆ.15 ರಂದು ನೆಲ್ಯಹುದಿಕೇರಿಯಲ್ಲಿ “ರಾಷ್ಟ್ರ ರಕ್ಷಾ ಸಂಗಮ” ಕಾರ್ಯಕ್ರಮ ನಡೆಯಲಿದೆ ಎಂದು ಸಮಿತಿಯ ಕಾರ್ಯದರ್ಶಿ ಸಿ.ಎಂ.ಹಮೀದ್ ಮೌಲವಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಸಂಜೆ 4 ಗಂಟೆಗೆ ನೆಲ್ಯಹುದಿಕೇರಿಯ ಶಾದಿ ಮಹಲ್ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಸಹಾಯಕ ಖಾಝಿಗಳಾದ ಎಂ.ಎಂ.ಅಬ್ದುಲ್ಲ ಫೈಝಿ ಉದ್ಘಾಟಿಸಲಿದ್ದು, ಸಂಘಟನೆಯ ಜಿಲ್ಲಾಧ್ಯಕ್ಷ ಬಶೀರ್ ಹಾಜಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು. ಮುಖ್ಯ ಅತಿಥಿಗಳಾಗಿ ಕೊಡ್ಲಿಪೇಟೆಯ ಕಿರಿಕೊಡ್ಲಿಮಠದ ಶ್ರೀ ಸದಾಶಿವ ಸ್ವಾಮೀಜಿ, ಚೆಟ್ಟಳ್ಳಿಯ ಕ್ರೈಸ್ತ ಧರ್ಮ ಗುರುಗಳಾದ ಫಾದರ್ ಜೆರಾಲ್ಡ್ ಸ್ಕ್ವೇರಿಯ, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂಥರ್ ಗೌಡ, ಮಾಜಿ ಶಾಸಕ ಕೆ.ಎಂ.ಇಬ್ರಾಹಿಂ ಮಾಸ್ಟರ್ ಪಾಲ್ಗೊಳ್ಳಲಿದ್ದಾರೆ. ಮುಖ್ಯ ಭಾಷಣಕಾರರಾಗಿ ಸಕಲೇಶಪುರದ ಆನೆಮಹಲ್ ಇಬ್ರಾಹಿಂ ಮುಸ್ಲಿಯಾರ್ ಭಾಗವಹಿಸಲಿದ್ದು, ಜಿಲ್ಲೆಯ ಸರ್ವ ಜನಾಂಗದ ಬಂಧುಗಳು ಕಾರ್ಯಕ್ರಮಕ್ಕೆ ಆಗಮಿಸುವಂತೆ ಮನವಿ ಮಾಡಿದರು. ಕಾರ್ಯಕ್ರಮದಲ್ಲಿ ಜಿಲ್ಲೆಯ…

Read More

ಬೆಂಗಳೂರು ಆ.11 : ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸಿ, ಜನರಿಗೆ ಗುಣಮಟ್ಟದ ಆರೋಗ್ಯ ಸೌಲಭ್ಯಗಳನ್ನು ನೀಡುವ ಉದ್ದೇಶದಿಂದ ರಾಜ್ಯದ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಎಂ.ಆರ್.ಐ ಹಾಗೂ ಸಿಟಿ ಸ್ಕ್ಯಾನ್ ಸೇವೆಗಳನ್ನು ಹೆಚ್ಚುವರಿಯಾಗಿ ಆರಂಭಿಸಲು ರೂ.47 ಕೋಟಿ ವೆಚ್ಚದ ಪ್ರಸ್ತಾವನೆಗೆ ಮುಖ್ಯಮಂತ್ರಿ Siddaramaiah ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯು ಅನುಮೋದನೆ ನೀಡಿದೆ.

Read More

ಮಡಿಕೇರಿ ಆ.11 :  ಪೊನ್ನಂಪೇಟೆ ತಾಲೂಕಿನ ನಿಟ್ಟೂರು ಗ್ರಾ.ಪಂ  ಎರಡನೇ ಅವಧಿಗೆ ನಡೆದ ಚುನಾವಣೆಯಲ್ಲಿ  ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಪಿ.ಆರ್.ಅಮ್ಮಣಿ, ಉಪಾಧ್ಯಕ್ಷರಾಗಿ ಚಕ್ಕೇರ ಸೂರ್ಯ ಅಯ್ಯಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Read More

ಮಡಿಕೇರಿ ಆ.11 : ಯುವಕನೊಬ್ಬನ ಮೃತದೇಹ ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ – ಪಾಲಿಬೆಟ್ಟ ರಸ್ತೆ ಬದಿಯಲ್ಲಿ ಪತ್ತೆಯಾಗಿದ್ದು, ಹಲ್ಲೆಯಿಂದ ಮೃತಪಟ್ಟಿರುವ ಬಗ್ಗೆ ಸಂಶಯ ವ್ಯಕ್ತವಾಗಿದೆ. ಸಿದ್ದಾಪುರದ ಅಂಬೇಡ್ಕರ್ ನಗರ ಬಡಾವಣೆ ನಿವಾಸಿ ಕ್ರಿಸ್ಟಲ್ (28) ಮೃತ ಯುವಕ. ಸಿದ್ದಾಪುರ ಪೊಲೀಸ್ ಠಾಣಾಧಿಕಾರಿ ರಾಘವೇಂದ್ರ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ತನಿಖೆ ಆರಂಭಿಸಿದ್ದಾರೆ.

Read More