ಲೇಖಕ: admin

ಮಡಿಕೇರಿ ಆ.11 : ಟಿಪ್ಪು ಕಾಲದಲ್ಲಿ ಕೊಡವರ ಹತ್ಯೆಯಾದ ದೇವಟ್ ಪರಂಬು ಪ್ರದೇಶದಲ್ಲಿ ಸ್ಮಾರಕ ನಿರ್ಮಾಣ ಮಾಡಬೇಕೆಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಒತ್ತಾಯಿಸಿದೆ. ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದಲ್ಲಿ ದೇವಟ್ ಪರಂಬುವಿಗೆ ತೆರಳಿದ ಪ್ರಮುಖರು ಕುತಂತ್ರದಿಂದ ಜೀವ ಕಳೆದುಕೊಂಡ ಹಿರಿಯರಿಗೆ ಪುಷ್ಪನಮನ ಸಲ್ಲಿಸಿದರು. ಈ ಸಂದರ್ಭ ಮಾತನಾಡಿದ ನಾಚಪ್ಪ ಅವರು ಸಿಎನ್‍ಸಿಯ ನಿರಂತರ ಹೋರಾಟದ ಫಲವಾಗಿ ಪ್ರಮುಖ ಹಕ್ಕೊತ್ತಾಯಗಳಿಗೆ ಹಂತ ಹಂತವಾಗಿ ಸ್ಪಂದನೆ ದೊರೆಯುತ್ತಿದೆ. ಅರಸರ ಸಂಚಿನಿಂದ ಮೃತಪಟ್ಟ ಅಮಾಯಕ ಹಿರಿಯರ ಆಶೀರ್ವಾದ ಪಡೆದು ಶಾಂತಿಯುತ ಹೋರಾಟವನ್ನು ಮುಂದುವರೆಸಲು ಪುಷ್ಪನಮನದ ಮೂಲಕ ಸಂಕಲ್ಪ ತೊಟ್ಟಿರುವುದಾಗಿ ಹೇಳಿದರು. 1785 ರ ಡಿ.12 ರಂದು ದೇವಟ್ ಪರಂಬುವಿನಲ್ಲಿ ಘೋರ ದುರಂತ ನಡೆದಿದ್ದು, ಸಹಸ್ರ ಸಹಸ್ರ ಸಂಖ್ಯೆಯ ಕೊಡವರು ಅಸುನೀಗಿದ್ದಾರೆ. ಪ್ರಾಣ ಕಳೆದುಕೊಂಡ ಹಿರಿಯರ ಸ್ಮರಣೆಗಾಗಿ ಅಂತರರಾಷ್ಟ್ರೀಯ ಮಟ್ಟದ ಸ್ಮಾರಕವೊಂದನ್ನು ಇಲ್ಲಿ ನಿರ್ಮಿಸಬೇಕು. ಕೊಡವ ನರಮೇಧವನ್ನು ಯುಎನ್‍ಒ ಅಂತರರಾಷ್ಟ್ರೀಯ ಹತ್ಯಾಕಾಂಡದ ನೆನಪಿನ ಪಟ್ಟಿಯಲ್ಲಿ ಸೇರಿಸಬೇಕು. ಕೊಡವ ಬುಡಕಟ್ಟು ಜನಾಂಗದ ಸಮಗ್ರ ಸಬಲೀಕರಣಕ್ಕಾಗಿ ಕೊಡವಲ್ಯಾಂಡ್…

Read More

ಮಡಿಕೇರಿ ಆ.11 : ಸುಂಟಿಕೊಪ್ಪ ಗ್ರಾ.ಪಂ ಯ ಎಸ್‍ಡಿಪಿಐ ಬೆಂಬಲಿತ ಸದಸ್ಯೆ ರೇಷ್ಮಾ ಅವರನ್ನು ಪಕ್ಷದಿಂದ ಅಮಾನತು ಮಾಡಿರುವುದಾಗಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಜಿಲ್ಲಾಧ್ಯಕ್ಷ ಅಬ್ದುಲ್ ಅಡ್ಕರ್ ತಿಳಿಸಿದ್ದಾರೆ. ಎರಡನೇ ಅವಧಿಯ ಆಡಳಿತಕ್ಕಾಗಿ ಸುಂಟಿಕೊಪ್ಪ ಗ್ರಾ.ಪಂ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಯ ಚುನಾವಣೆ ಸಂದರ್ಭ ರೇಷ್ಮಾ  ಅವರು ಎಸ್‍ಡಿಪಿಐ ಬೆಂಬಲಿತ ಅಭ್ಯರ್ಥಿಯನ್ನು ಬೆಂಬಲಿಸದೆ ಪಕ್ಷ ವಿರೋಧಿ ಚಟುವಟಿಕೆ ನಡೆಸಿರುವ ಹಿನ್ನೆಲೆ ಈ ಶಿಸ್ತು ಕ್ರಮ ಕೈಗೊಳ್ಳಲಾಗಿದೆ ಎಂದು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.

Read More

ಮಡಿಕೇರಿ ಆ.11  : ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ಕೊಡಗು ಘಟಕದ ವತಿಯಿಂದ ಆ.14 ರಂದು ಮಡಿಕೇರಿಯಲ್ಲಿ ರಕ್ತದಾನ ಶಿಬಿರ ಆಯೋಜಿತವಾಗಿದೆ. ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮತ್ತು ಬೋಧಕ ಆಸ್ಪತ್ರೆ, ಜಿಲ್ಲಾ ರಕ್ತನಿಧಿ ಕೇಂದ್ರ, ರೋಟರಿ ಮಿಸ್ಟಿ ಹಿಲ್ಸ್ ಸಹಯೋಗದಲ್ಲಿ ಆಯೋಜಿತವಾಗಿರುವ ರಕ್ತದಾನ ಶಿಬಿರವು ಮಡಿಕೇರಿಯ ಸ್ವೀವಟ್೯ ಹಿಲ್ ನಲ್ಲಿರುವ ರೆಡ್ ಕ್ರಾಸ್ ಭವನದಲ್ಲಿ  ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಯಲಿದೆ ಎಂದು ರೆಡ್ ಕ್ರಾಸ್ ಪ್ರಕಟಣೆ ತಿಳಿಸಿದೆ.  ಹೆಚ್ಚಿನ ಮಾಹಿತಿಗೆ  9448108234 ಸಂಪರ್ಕಿಸಬಹುದಾಗಿದೆ.

Read More

ಮಡಿಕೇರಿ ಆ.11 :  ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಗೌರವ ಕೋಶಾಧಿಕಾರಿಯಾಗಿ ಎಸ್.ಎಸ್. ಸಂಪತ್ ಕುಮಾರ್ ಆಯ್ಕೆಯಾಗಿದ್ದಾರೆ. ಹಿಂದಿನ ಕೋಶಾಧಿಕಾರಿ ಎಂ.ಬಿ.ಜೋಯಪ್ಪ ಅವರ  ತೆರವಾದ ಸ್ಥಾನಕ್ಕೆ ಸಂಪತ್ ಕುಮಾರ್  ಅವರನ್ನು ಜಿಲ್ಲಾಧ್ಯಕ್ಷ ಎಂ.ಪಿ.ಕೇಶವ ಕಾಮತ್ ಅವರು ನಿಯುಕ್ತಿಗೊಳಿಸಿದ್ದಾರೆ ಎಂದು ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಎಸ್.ಐ.ಮುನೀರ್ ಅಹ್ಮದ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಬೆಂಗಳೂರು :  ಗೂಗಲ್ ಕ್ರೋಮ್ ಬಳಕೆದಾರರಿಗೆ ಎಲೆಕ್ಟ್ರಾನಿಕ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದಡಿ ಕಾರ್ಯನಿರ್ವಹಿಸುವ CERT ಎಚ್ಚರಿಕೆ ನೀಡಿದೆ. ಕ್ರೋಮ್‌ನ ನಿರ್ದಿಷ್ಟ ಆವೃತ್ತಿಗಳಲ್ಲಿ ದೋಷ ಪತ್ತೆಹಚ್ಚಿರುವ ಕಂಪ್ಯೂಟರ್ ತುರ್ತು ಪ್ರತಿಕ್ರಿಯೆ ತಂಡ, ಸಂಭಾವ್ಯ ಭದ್ರತಾ ಅಪಾಯದ ಬಗ್ಗೆ ಎಚ್ಚರಿಕೆ ರವಾನಿಸಿದೆ. ಫಿಲ್ಡಿಂಗ್ ಅಟ್ಯಾಕ್, ಡೇಟಾ ಉಲ್ಲಂಘನೆಗೆ ಸಂಬಂಧಿಸಿದಂತೆ ಅಪಾಯ ಎದುರಾಗಬಹುದು ಎಂದು ಎಚ್ಚರಿಕೆ ನೀಡಲಾಗಿದೆ. ಆ್ಯಪ್ ಆಪ್‌ಡೇಟ್ ಮಾಡುವಂತೆ ಬಳಕೆದಾರರಿಗೆ ತಿಳಿಸಿದೆ.

Read More

ನಾಪೋಕ್ಲು ಆ.11 : ಬಲ್ಲಮಾವಟಿ ಗ್ರಾ.ಪಂ ಎರಡನೇ ಅವಧಿಗೆ ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಶಾಂತಿ ಪೂವಯ್ಯ ಹಾಗೂ ಉಪಾಧ್ಯಕ್ಷರಾಗಿ ಚೋಕಿರ ಬಾಬಿ ಭೀಮಯ್ಯ ಆಯ್ಕೆಯಾದರು. ಗ್ರಾ.ಪಂಚಾಯಿತಿ ಸಭಾಂಗಣದಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು. ಚುನಾವಣಾ ಅಧಿಕಾರಿಯಾಗಿ ಮಡಿಕೇರಿ ತಾಲೂಕು ತಹಸಿಲ್ದಾರ್ ಪ್ರವೀಣ್ ಕುಮಾರ್ ಕಾರ್ಯನಿರ್ವಹಿಸಿದರು. ಈ ಸಂದರ್ಭ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಅಪ್ಪಚೆಟ್ಟೊಳಂಡ ಮನು ಮುತ್ತಪ್ಪ, ಶಕ್ತಿ ಕೇಂದ್ರದ ಪ್ರಮುಖರಾದ ಚಂಗೆಟ್ಟಿರ ಕುಮಾರ್ ಸೋಮಣ್ಣ, ಬಿಜೆಪಿ ಜಿಲ್ಲಾ ಸಮಿತಿ ಸದಸ್ಯರಾದ ಕರವಂಡ ಲವ ನಾಣಯ್ಯ, ಬಿಜೆಪಿ ಜಿಲ್ಲಾ ಸಾಮಾಜಿಕ ಜಾಲತಾಣಗಳ ಸದಸ್ಯರಾದ ಕರವಂಡ ಅಪ್ಪಣ್ಣ, ಬೂತ್ ಅಧ್ಯಕ್ಷರಾದ ಚಿಯಂಡಿರ ದಿನೇಶ್, ಹಾಗೂ ಗ್ರಾಮ ಪಂಚಾಯಿತಿಯ ಸದಸ್ಯರು ,ಬಿಜೆಪಿಯ ಮುಖಂಡರು ಕಾರ್ಯಕರ್ತರು ಭಾಗಿಯಾಗಿದ್ದರು. ವರದಿ : ದುಗ್ಗಳ ಸದಾನಂದ 

Read More

ಮಡಿಕೇರಿ ಆ.11 : ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಸಂದರ್ಭದಲ್ಲಿ ನಾಡಿನ ಅಧಿದೇವತೆ ಚಾಮುಂಡೇಶ್ವರಿಯನ್ನು ಅಂಬಾರಿಯಲ್ಲಿ ಹೊತ್ತು ಸಾಗಲು ದಸರಾ ಗಜಪಡೆ ಪಟ್ಟಿಯನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ಈ ಬಾರಿ 9 ಆನೆಗಳಿಗೆ ದಸರಾ ಗಜ ಪಡೆಯಲ್ಲಿ ಸ್ಥಾನ ನೀಡಲಾಗಿದ್ದು, ಈ ಪೈಕಿ ಆರು ಆನೆಗಳು ಕೊಡಗಿನ ಶಿಬಿರಗಳಿಂದ ಆಯ್ಕೆಗೊಂಡಿದೆ. ಬೆಂಗಳೂರಿನ ಅಶೋಕಪುರದಲ್ಲಿರುವ ಅರಣ್ಯಭವನದಲ್ಲಿ ಪ್ರಧಾನ ಮುಖ್ಯ ಸಂರಕ್ಷಣಾಧಿಕಾರಿ ಜಿ.ವಿ.ರಂಗರಾವ್ ಅಧ್ಯಕ್ಷತೆಯಲ್ಲಿನ ಸಭೆಯಲ್ಲಿ ಈ ಪಟ್ಟಿಯನ್ನು ಬಿಡುಗಡೆ ಮಾಡಲಾಯಿತು. ಈ ಬಾರಿಯ ದಸರಾ ಮಹೋತ್ಸವದಲ್ಲಿ ಮೊದಲ ತಂಡದಲ್ಲಿ 9 ಆನೆಗಳು ಪಾಲ್ಗೊಳ್ಳಲಿವೆ. ಇವುಗಳಲ್ಲಿ ಏಳು ಗಂಡಾನೆ ಹಾಗೂ ಎರಡು ಹೆಣ್ಣಾನೆಗಳು ಸೇರಿದೆ. ಗಜಪಡೆ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಹೆಣ್ಣಾನೆಗಳ ಗರ್ಭಧಾರಣಾ ಪರೀಕ್ಷಾ ವರದಿ ಬಾರದ ಕಾರಣ ಗಜಪಡೆ ಆಯ್ಕೆ ತಡವಾಗಿತ್ತು. ಆದರೆ ಸೋಮವಾರದಂದು ವರದಿ ಕೈ ಸೇರಿದೆ. ಈ ನಿಟ್ಟಿನಲ್ಲಿ ಗಜಪಡೆಯ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

Read More

ನಾಪೋಕ್ಲು ಆ.11 : ವಿರಾಜಪೇಟೆ ಅರಣ್ಯ ವಲಯ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಕಾಡಾನೆಗಳ ತೋಟಗಳಲ್ಲಿ ಬೀಡು ಬಿಟ್ಟು ಫಸಲು ಹಾಗೂ ಗಿಡಗಳನ್ನು ನಾಶಪಡಿಸುತ್ತಿದ್ದ ಹತ್ತು ಕಾಡಾನೆಗಳ ಹಿಂಡನ್ನು ಕಾಡಿಗೆ ಅಟ್ಟುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಯಿತು. ಕಾರ್ಯಾಚರಣೆಯಲ್ಲಿ ವಿರಾಜಪೇಟೆ, ಅಮ್ಮತ್ತಿ ಅರಣ್ಯ ವಲಯ ಹಾಗೂ ಆನೆಕ್ಷಿಪ್ರ ಕಾರ್ಯಪಡೆಯ ತಂಡಗಳು ಜಂಟಿಯಾಗಿ ಎರಡು ದಿನ ಕಾರ್ಯಾರಣೆ ನಡೆಸಿ ಕಾಡಾನೆಗಳ ಹಿಂಡನ್ನು ಬಲ್ಯಾಯಾಟ್ರ ಕಾಡಿಗೆ ಓಡಿಸಿದರು. ಒಟ್ಟು 30ಕ್ಕ ಹೆಚ್ಚು ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದು, ಆನೆಗಳನ್ನು ಕಾಡಿಗಟ್ಟಲು ಅರಣ್ಯ ಇಲಾಖೆ ಹರಸಾಹಸಪಟ್ಟರು. ಮತ್ತೆ ಕಾಡಾನೆಗಳು ಮರಂದೋಡ ಗ್ರಾಮದ ಮುಕ್ಕಾಟಿರ ಪ್ರಕಾಶ್ ಎಂಬವರ ತೋಟದ ಗೇಟ್ ಅನ್ನು ಜಖಂಗೊಳಿಸಿವೆ. ಮರಂದೋಡ ಶಾಲೆಯ ಗೇಟನ್ನು ಕೂಡ ಜಖಂಗೊಳಿಸಿವೆ. ತೋಟಗಳಲ್ಲಿ ಅಡ್ಡಾಡುತ್ತಿದ್ದ ಕಾಡಾನೆಗಳನ್ನು ಮತ್ತೆ ಕಾಡಿಗಟ್ಟಲಾಗಿದೆ. ಅರಣ್ಯ ಇಲಾಖೆ ನಡೆಸಿದ ಕಾರ್ಯಾಚರಣೆಯಲ್ಲಿ ಅರಣ್ಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕೆ.ಎ ನೆಹರು ಮಾರ್ಗದರ್ಶನದಲ್ಲಿ ವಿರಾಜಪೇಟೆ ವಲಯ ಅರಣ್ಯಾಧಿಕಾರಿ ಕಳ್ಳಿರದೇವಯ್ಯ ನೇತೃತ್ವದಲ್ಲಿ ಅರಣ್ಯ ಆನೆ ಕ್ಷಿಪ್ರ ಕಾರ್ಯಪಡೆ ತಂಡ ಕೆದಮುಳ್ಳೂರು ಹಾಗೂ ಚೆಯ್ಯಂಡಾಣೆ…

Read More

ನಾಪೋಕ್ಲು ಆ.11 : ರಾಜ್ಯದ ಹಲವು ಭಾಗಗಳಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಘಗಳು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದು, ಮಹಿಳೆಯರ ಸಬಲೀಕರಣಕ್ಕೆ ಕಾರಣವಾಗಿದೆ ಎಂದು ನಾಪೋಕ್ಲು ಪೊಲೀಸ್ ಠಾಣೆಯ ಠಾಣಾಧಿಕಾರಿ ಮಂಜುನಾಥ್ ಹೇಳಿದರು. ಶ್ರೀ ಭಗವತಿ ಸಮುದಾಯ ಭವನದಲ್ಲಿ ಏರ್ಪಡಿಸಲಾಗಿದ್ದ ನಾಪೋಕ್ಲು ಸುಭಾಷ್ ನಗರ ಕಾರ್ಯಕ್ಷೇತ್ರದ ಒಕ್ಕೂಟ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಉತ್ತಮ ಕಾರ್ಯಗಳನ್ನು ಹಮ್ಮಿಕೊಳ್ಳುತ್ತಿದೆ. ಕಾರ್ಯಕರ್ತರು ಕೈಗೊಳ್ಳುತ್ತಿರುವ ಕಾರ್ಯ ಶ್ಲಾಘನೀಯ. ಹಲವು ಭಾಗಗಳಲ್ಲಿ ಸಂಘಗಳು ಕ್ರಿಯಾಶೀಲವಾಗಿವೆ. ಕೆಲವೆಡೆ ಅರಿವಿನ ಕೊರತೆಯಿಂದ ಹೆಚ್ಚಿನ ಪ್ರಗತಿ ಸಾಧಿಸಿಲ್ಲ. ಈ ಸಂಘವು 30 ಲಕ್ಷ ಉಳಿತಾಯ ಮಾಡಿದ್ದು, ಹೆಮ್ಮೆಯ ವಿಚಾರ ಎಂದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಡಿಯಲ್ಲಿ ಇರುವ ಸಂಘಗಳು ಗ್ರಾಮೀಣ ಕುಟುಂಬಗಳನ್ನು ಒಗ್ಗೂಡಿಸಲು ನೆರವಾಗಿವೆ ಎಂದರು. ಗ್ರಾ.ಪಂ ಸದಸ್ಯ ಅರುಣ್ ಬೇಬ ಮಾತನಾಡಿ, ಸಮಾಜದಲ್ಲಿ ಕಟ್ಟ ಕಡೆ ಶೋಷಿತ ವ್ಯಕ್ತಿಗೂ ಪಕ್ಷಾತೀತವಾಗಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ನೆರವು ನೀಡಲಾಗುತ್ತಿದೆ ಎಂದರು. ಮೇಲ್ವಿಚಾರಕರಾದ ಸುನಿಲ್ ಮಾತನಾಡಿ, ಬ್ಯಾಂಕಿನವರು ಸಂಘಕ್ಕೆ ಸಹಾಯಧನ ನೀಡುವ…

Read More

ಸುಂಟಿಕೊಪ್ಪ ಆ.11 :  ಸುಂಟಿಕೊಪ್ಪ ಗ್ರಾ.ಪಂ ಸದಸ್ಯೆ, ಎಸ್.ಡಿ.ಪಿ.ಐ ಕಾರ್ಯಕರ್ತೆಯಾಗಿ ಕಳೆದ ಹಲವು ವರ್ಷಗಳಿಂದ ಸೇವೆ ಸಲ್ಲಿಸಿದ್ದ ರೇಷ್ಮಾ  ಅವರು  ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಗ್ರಾಮ ಪಂಚಾಯತಿ ಎರಡನೇ ಹಂತದ ಚುನಾವಣೆಯಲ್ಲಿ ಬಿಜೆಪಿ ಅಧಿಕಾರದ ಗದ್ದುಗೆಗೇರಲು ಕಾರಣರಾದ ಎಸ್.ಡಿ.ಪಿ.ಐ ಪಕ್ಷದ ಮುಖಂಡರ ನಿಲುವನ್ನು ಖಂಡಿಸಿ ಅಸಮಾಧಾನಗೊಂಡು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಇದೇ ವೇಳೆ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ ಶಶಿಧರ್, ಜಿ.ಪಂ  ಮಾಜಿ ಅಧ್ಯಕ್ಷ  ಕೆ.ಪಿ.ಚಂದ್ರಕಲಾ, ಮತ್ತು ಪಿ.ಎಂ ಲತೀಫ್, ಗ್ರಾ.ಪಂ ಉಪಾಧ್ಯಕ್ಷೆ ಶಿವಮ್ಮ, ಸದಸ್ಯ ರಫೀಕ್ ಖಾನ್ ಹಾಗೂ ಪ್ರಮುಖರು ಹಾಜರಿದ್ದರು.

Read More