ಮಡಿಕೇರಿ ಜು.12 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಬಜೆಟ್ ಮಂಡನೆ ಸಂದರ್ಭ ಕೊಡಗು ಜಿಲ್ಲೆಯನ್ನು ಸಂಪೂರ್ಣವಾಗಿ ನಿರ್ಲಕ್ಷ್ಯಿಸಿದೆ ಎಂದು ಆರೋಪಿಸಿರುವ ಕೊಡಗು ಜಿಲ್ಲಾ ಬಿಜೆಪಿ ರೈತ ಮೋರ್ಚಾ, ಈ ಹಿಂದಿನ ಬಿಜೆಪಿ ಸರ್ಕಾರದ ರೈತಪರ ಯೋಜನೆಗಳನ್ನು ಮುಂದುವರೆಸುವಂತೆ ಒತ್ತಾಯಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಜ್ಯ ರೈತ ಮೋರ್ಚಾದ ಕಾರ್ಯದರ್ಶಿ ಡಾ.ಬಿ.ಸಿ.ನವೀನ್ ಕುಮಾರ್, ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಚುನಾವಣೆ ಸಂದರ್ಭ ಘೋಷಿಸಿದ ಹಲವು ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ ಎಂದು ಟೀಕಿಸಿದರು. ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಎಪಿಎಂಸಿ ಕಾಯ್ದೆಯನ್ನು ರದ್ದು ಪಡಿಸಿರುವುದು ಸರಿಯಲ್ಲ. ಏಕಾಏಕಿ ವಿದ್ಯುತ್ ದರ ಏರಿಕೆ ಮಾಡುವ ಮೂಲಕ ಗ್ರಾಹಕರು ಹಾಗೂ ಸಣ್ಣ ಉದ್ದಿಮೆದಾರರಿಗೆ ಆರ್ಥಿಕ ಹೊರೆ ಉಂಟು ಮಡಲಾಗಿದೆ. ರೈತ ವಿದ್ಯಾನಿಧಿ ಯೋಜನೆ, ಜಿಲ್ಲೆಗೊಂದು ಗೋಶಾಲೆ ಯೋಜನೆ, ಭೂ ಸಿರಿ ಯೋಜನೆ, ಕಿಸಾನ್ ಸಮ್ಮಾನ್ ನಿಧಿ ಯೋಜನೆ, ರೈತ ಶಕ್ತಿ ಯೋಜನೆಗಳನ್ನು ರದ್ದುಗೊಳಿಸುವ ಮೂಲಕ ಬಡ ರೈತರ ಮಕ್ಕಳಿಗೆ ಹಾಗೂ ಕೃಷಿಕರಿಗೆ…
ಲೇಖಕ: admin
ಮಡಿಕೇರಿ ಜು.12 : ಮಡಿಕೇರಿ ನಗರಸಭಾ ಸದಸ್ಯ ಹಾಗೂ ಮಡಿಕೇರಿ ಕೊಡವ ಸಮಾಜದ ನಿರ್ದೇಶಕ ಕಾಳಚಂಡ ಅಪ್ಪಣ್ಣ ಅವರ ಮೇಲಿನ ಹಲ್ಲೆಯನ್ನು ಖಂಡಿಸಿ ಜು.14 ರಂದು ಮಡಿಕೇರಿ ಕೊಡವ ಸಮಾಜದ ವತಿಯಿಂದ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಕೊಡವ ಸಮಾಜದ ಅಧ್ಯಕ್ಷ ಮಂಡುವಂಡ ಮುತ್ತಪ್ಪ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗಿನ ಮೂಲ ನಿವಾಸಿಗಳಾದ ಕೊಡವರು, ಕೊಡವ ಭಾಷಿಕರು, ಕೊಡವಾಭಿಮಾನಿಗಳ ಮೇಲೆ ದೌರ್ಜನ್ಯ ನಡೆಯದಂತೆ ಜಾಗೃತಿ ಮೂಡಿಸುವ ಸಲುವಾಗಿ ಶುಕ್ರವಾರ ಬೆಳಗ್ಗೆ 10.30 ಗಂಟೆಗೆ ಮಡಿಕೇರಿ ನಗರಸಭೆ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸುವುದಾಗಿ ಹೇಳಿದರು. ಇಂತಹ ಘಟನೆಗಳಿಂದ ಸಾಮಾಜದ ಸ್ವಾಸ್ಥ್ಯ ಹದಗೆಡಲಿದೆ, ಜನಾಂಗೀಯ ತಾರತಮ್ಯ ಹೆಚ್ಚಾಗಿ ಅಶಾಂತಿ ಮೂಡುವ ಸಾಧ್ಯತೆ ಇದೆ. ಒಬ್ಬ ಜನಪ್ರತಿನಿಧಿಯಾದವರಿಗೆ ಈ ಪರಿಸ್ಥಿತಿಯಾದರೆ ಜನಸಾಮಾನ್ಯರಿಗೆ ಏನು ರಕ್ಷಣೆ ಇದೆ ಎಂದು ಪ್ರಶ್ನಿಸಿದರು. ಹಲ್ಲೆ ನಡೆಸಿದ ವ್ಯಕ್ತಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವ ಮೂಲಕ ಮುಂದೆ ಜಿಲ್ಲೆಯ ಯಾವುದೇ…
ಮಡಿಕೇರಿ ಜು.12 : ಇಂದಿರಾನಗರದ ಕುಂದುರುಮೊಟ್ಟೆ ಶ್ರೀ ಮಾರಿಯಮ್ಮ ದೇವಾಲಯದ ಜೀರ್ಣೋದ್ಧಾರದ ಅಂಗವಾಗಿ ಮೃತ್ಯುಂಜಯ ಹೋಮ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ಶ್ರದ್ಧಾಭಕ್ತಿಯಿಂದ ನಡೆಯಿತು. ದೇವಾಲಯದ ಆವರಣದಲ್ಲಿ ತಂತ್ರಿಗಳಾದ ಕೇರಳದ ಮನೋಹರ್ ಪಣಿಕರ್, ಸುನಿಲ್, ಪ್ರಜಿಶ್ ಅವರ ನೇತೃತ್ವದಲ್ಲಿ ಮುಂಜಾನೆಯಿಂದಲೇ ಗಣಪತಿ ಹೋಮ, ಮೃತ್ಯುಂಜಯ ಹೋಮ, ಭಗವತಿ ಪೂಜೆ ಮತ್ತು ದೇವಿಗೆ ವಿಶೇಷ ಪೂಜೆ ನೆರವೇರಿತು. ಈ ಸಂದರ್ಭ ದೇವಾಲಯದ ಆಡಳಿತ ಮಂಡಳಿ ಪದಾಧಿಕಾರಿಗಳು ಹಾಗೂ ಇಂದಿರಾನಗರ, ತಾಳತ್ತಮನೆ ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರು ಪಾಲ್ಗೊಂಡಿದ್ದರು.
ಮಡಿಕೇರಿ ಜು.12 : ಇನ್ನರ್ ವೀಲ್ ಜಿಲ್ಲೆ 318 ನ ಅಧ್ಯಕ್ಷೆಯಾಗಿ ಮಡಿಕೇರಿಯ ಪೂಣಿ೯ಮಾ ರವಿ ಅಧಿಕಾರ ಸ್ವೀಕರಿಸಿದ್ದಾರೆ. ಮೈಸೂರಿನಲ್ಲಿ ಆಯೋಜಿತ ಕಾಯ೯ಕ್ರಮದಲ್ಲಿ ಮಡಿಕೇರಿಯ ಹೆಸರಾಂತ ವೈದ್ಯ ಡಾ.ರವಿ ಅಪ್ಪಾಜಿ ಅವರ ಪತ್ನಿ ಪೂಣಿ೯ಮಾ ರವಿ ಅವರು ಇನ್ನರ್ ವೀಲ್ ಜಿಲ್ಲೆ 318 ನ ಅಧ್ಯಕ್ಷೆಯಾಗಿ ಭಾರತೀಯ ಇನ್ನರ್ ವೀಲ್ ಸಂಸ್ಥೆಯ ಅಸೋಸಿಯೇಷನ್ ಅಧ್ಯಕ್ಷೆ ಪ್ರೀತಿ ಗುಗ್ನಾನಿ ಅವರಿಂದ ಅಧಿಕಾರ ಪಡೆದರು. ಈ ಸಂದಭ೯ ಮಾತನಾಡಿದ ಪ್ರೀತಿ ಗುಗ್ನಾನಿ, ಇನ್ನರ್ ವೀಲ್ ಸಂಸ್ಥೆಯು ಈ ವಷ೯ ಭಾರತದಾದ್ಯಂತ ರೂಪಿಸಿರುವ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವ ನಿಟ್ಟಿನಲ್ಲಿ ಇನ್ನರ್ ವೀಲ್ ಸದಸ್ಯೆಯರು ಕಾಯ೯ನಿವ೯ಹಿಸುವಂತೆಯೂ ಪ್ರೀತಿ ಗುಗ್ನಾನಿ ಕರೆ ನೀಡಿದರು. ಅದಿಕಾರ ಸ್ವೀಕರಿಸಿ ಮಾತನಾಡಿದ ಪೂಣಿ೯ಮಾ ರವಿ , ಹಲವಷ್ಟು ಮಾಜಿ ಅಧ್ಯಕ್ಷೆಯರು ಇನ್ನರ್ ವೀಲ್ ಸಂಸ್ಥೆಯ ಸವ೯ತೋಮುಖ ಬೆಳವಣಿಗೆಗೆ ಸಹಕಾರ ನೀಡಿದ್ದಾರೆ. ಈ ವಷ೯ ಶಿಕ್ಷಣ, ಮಹಿಳೆಯರ ಆರೋಗ್ಯಕ್ಕೆ ಸಂಬಂಧಿಸಿದಂತೆ ಹಲವಷ್ಟು ಯೋಜನೆಗಳನ್ನು ಜಿಲ್ಲೆಯಾದ್ಯಂತ ಜಾರಿಗೊಳಿಸಲಾಗುತ್ತದೆ. ಹಾಗೇ…
ಮಡಿಕೇರಿ ಜು.12 : ಇನ್ನು ಎರಡು ವಷ೯ಗಳಲ್ಲಿ ಚೀನಾವನ್ನೂ ಮೀರಿಸಿ ಭಾರತದೇಶವು ಜಗತ್ತಿನಲ್ಲಿಯೇ ಅತ್ಯಧಿಕ ಜನಸಂಖ್ಯೆ ಇರುವ ದೇಶವಾಗಲಿದ್ದು, ಕೆಲವೊಂದು ಪ್ರತಿಕೂಲ ಪರಿಣಾಮಗಳನ್ನು ಎದುರಿಸುವ ಸವಾಲು ಎದುರಾಗಲಿದೆ ಎಂದು ಮಡಿಕೇರಿಯ ಸಕಾ೯ರಿ ಆಸ್ಪತ್ರೆಯ ತಜ್ಞ ವೈದ್ಯಾಧಿಕಾರಿ ಡಾ.ಎನ್.ಎಸ್. ನವೀನ್ ಕಳವಳ ವ್ಯಕ್ತಪಡಿಸಿದ್ದಾರೆ. ಮಡಿಕೇರಿಯ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ಜನಸಂಖ್ಯಾ ದಿನಾಚರಣೆಯ ಸಂದಭ೯ ಈವರೆಗೆ 15 ಸಾವಿರದಷ್ಟು ಉದರದಶ೯ಕ ಕುಟುಂಬ ಕಲ್ಯಾಣ ಮತ್ತು ವಾಸೆಕ್ಟಮಿ ಶಸ್ತ್ರಚಿಕಿತ್ಸೆ ನಡೆಸಿದ ಕೀತಿ೯ಗೆ ಡಾ.ಎನ್.ಎಸ್. ನವೀನ್ ಅವರನ್ನು ಸನ್ಮಾನಿಸಲಾಯಿತು. ಈ ಸಂದಭ೯ ಮಾತನಾಡಿದ ಡಾ.ನವೀನ್, ಭಾರತ ದೇಶವು ವಷ೯ದಿಂದ ವಷ೯ಕ್ಕೆ ಜನಸಂಖ್ಯಾ ಸ್ಪೋಟವನ್ನು ಕಾಣುತ್ತಿದೆ. ಇದರಿಂದ ಆಹಾರ, ಉದ್ಯೋಗ ಕ್ಷೇತ್ರ ಸೇರಿದಂತೆ ವಿವಿಧ ರಂಗಗಳಲ್ಲಿ ಸಮಸ್ಯೆ ಎದುರಿಸುವಂತಾಗಿದೆ. ಬಡತನ ನಿಮೂ೯ಲನೆಯ ಉದ್ದೇಶ ಕೂಡ ಜನಸಂಖ್ಯಾ ನಿಯಂತ್ರಣದಲ್ಲಿದೆ ಎಂದರು. ಲಿಂಗಸಮಾನತೆಯ ಶಕ್ತಿಯ ಮಾಹಿತಿ ನೀಡುವುದೇ ಈ ವಷ೯ದ ಘೋಷ ವಾಕ್ಯವಾಗಿದೆ. ಜಗತ್ತಿನಲ್ಲಿ ಪ್ರಸ್ತುತ 800 ಕೋಟಿ ಜನರಿದ್ದು ಈ ಪೈಕಿ 140 ಕೋಟಿ, ಜನ ಭಾರತದಲ್ಲಿದ್ದರೆ, 142…
ಮಡಿಕೇರಿ ಜು.12 : ನಗರಸಭಾ ಸದಸ್ಯ ಕಾಳಚಂಡ ಅಪ್ಪಣ್ಣ ಅವರ ಮೇಲಿನ ಹಲ್ಲೆ ಪ್ರಕರಣವನ್ನು ತೀವ್ರವಾಗಿ ಖಂಡಿಸಿರುವ ಮಡಿಕೇರಿ ನಗರ ಚೇಂಬರ್ ಆಫ್ ಕಾಮರ್ಸ್, ಮಡಿಕೇರಿ ಕೊಡವ ಸಮಾಜ ಹಾಗೂ ಮಡಿಕೇರಿ ಗೌಡ ಸಮಾಜ ಹಲ್ಲೆ ಮಾಡಿದವರನ್ನು ಗಡಿಪಾರು ಮಾಡುವಂತೆ ಒತ್ತಾಯಿಸಿವೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚೇಂಬರ್ ಆಫ್ ಕಾಮರ್ಸ್ ನಗರಾಧ್ಯಕ್ಷ ಎಂ.ಧನಂಜಯ, ಜನಪ್ರತಿನಿಧಿಯೊಬ್ಬರ ಮೇಲೆ ಕ್ಷುಲ್ಲಕ ಕಾರಣಕ್ಕೆ ಹಲ್ಲೆ ಮಾಡಿರುವ ಈ ಘಟನೆ ನಗರದ ಎಲ್ಲಾ ವರ್ತಕರು ಮುಜುಗರಕ್ಕೊಳಗಾಗುವಂತೆ ಮಾಡಿದೆ. ಪೊಲೀಸ್ ಇಲಾಖೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಹಲ್ಲೆ ಮಾಡಿದವರನ್ನು ರೌಡಿ ಶೀಟರ್ ಪಟ್ಟಿಗೆ ಸೇರಿಸಬೇಕು ಮತ್ತು ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿದರು. ಘಟನೆ ನಡೆದ ಐಟಿಐ ಜಂಕ್ಷನ್ ವ್ಯಾಪ್ತಿಯಲ್ಲಿ ಪ್ರತಿಷ್ಠಿತ ಕಾಲೇಜು ಮತ್ತು ಸರ್ಕಾರಿ ಕಚೇರಿಗಳಿದ್ದು, ವಿದ್ಯಾರ್ಥಿಗಳು ಹಾಗೂ ನೌಕರರು ಆತಂಕ ಪಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಸಮಾಜದ ಸ್ವಾಸ್ಥ್ಯ ಕೆಡಿಸುವ ಗುಂಪುಗಳು ನಗರದಲ್ಲಿ ಕಾರ್ಯಾಚರಿಸುತ್ತಿದ್ದು, ಹೆಚ್ಚಿನ ಅನಾಹುತಗಳು ಸಂಭವಿಸುವ ಮೊದಲು ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡು ಅಗತ್ಯ ಮುಂಜಾಗೃತಾ ಕ್ರಮಗಳನ್ನು…
ಮಡಿಕೇರಿ ಜು.12 : ತಿತಿಮತಿಯ ಹೆಬ್ಬಾಲೆ ಭಾಗದಲ್ಲಿ ಕಾಡಾನೆಗಳ ಉಪಟಳ ಮಿತಿ ಮೀರಿದೆ. ಇಂದು ಬೆಳಗ್ಗೆ ಮುಖ್ಯ ರಸ್ತೆಯಲ್ಲಿ ಕಾಣಿಸಿಕೊಂಡ ಕಾಡಾನೆ ವಿದ್ಯಾರ್ಥಿಗಳನ್ನು ಶಾಲೆಗೆ ಕರೆದುಕೊಂಡು ಹೋಗುತ್ತಿದ್ದ ವಾಹನದ ಮೇಲೆ ದಾಳಿ ಮಾಡಿದೆ. ಅಲ್ಲದೆ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವಾಹನಕ್ಕೂ ಹಾನಿ ಮಾಡಿದ್ದು, ಅದೃಷ್ಟವಶಾತ್ ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮಡಿಕೇರಿ ಜು.12 : ನಾಪೋಕ್ಲು ಠಾಣಾ ಸರಹದ್ದಿನ ಕೊಳಕೇರಿ ಗ್ರಾಮದಲ್ಲಿ ಅಕ್ರಮವಾಗಿ ಜೂಜಾಟವಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪೋಕ್ಲು ಪೊಲೀಸರು ಏಳು ಆರೋಪಿಗಳನ್ನು ನಗದು ಸಹಿತ ವಶಕ್ಕೆ ಪಡೆದಿದ್ದಾರೆ. ಜೂಜಾಟವಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನೆಲೆ ದಾಳಿ ನಡೆಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಆರೋಪಿಗಳ ಬಳಿಯಿಂದ 8540 ರೂ.ಗಳನ್ನು ವಶಕ್ಕೆ ಪಡೆದು ಕಾನೂನು ಕ್ರಮ ಕೈಗೊಂಡಿದ್ದಾರೆ.
ಮಡಿಕೇರಿ ಜು.12 : ಕೊಡಗಿನ ಪ್ರತಿ ಮನೆಯಲ್ಲಿ ಓರ್ವ ಸದಸ್ಯರನ್ನು ರಾಜ್ಯ ಮತ್ತು ಕೇಂದ್ರ ಸರಕಾರಿ ಉದ್ಯೋಗಿಯನ್ನಾಗಿ ಮಾಡುವ ಅಗತ್ಯತೆ ಹೆಚ್ಚಿದೆ. ಕೊಡಗಿನ ಯುವಕರು ಕ್ರೀಡೆಯ ಮೂಲಕವೇ ಪೊಲೀಸ್ ಇಲಾಖೆಯಲ್ಲಿ ಹೆಚ್ಚಿನ ಅವಕಾಶವನ್ನು ಪಡೆದುಕೊಳ್ಳಬಹುದು. ಆದರೆ ದುರಾದೃಷ್ಟವಶಾತ್ ಕೊಡಗಿನ ಯುವ ತಲೆಮಾರು ಸರಕಾರಿ ಉದ್ಯೋಗವನ್ನು ಪಡೆದುಕೊಳ್ಳುವ ಬಗ್ಗೆ ತಾತ್ಸಾರ ಮನೋಭಾವನ್ನು ಹೊಂದಿದ್ದಾರೆ. ಈ ಕುರಿತು ನಮ್ಮೊಳಗೆ ನಾವು ನಮ್ಮನ್ನು ಪರಾಮರ್ಶೆಗೆ ಒಳಪಡಿಸಿಕೊಳ್ಳಬೇಕು ಎಂದು ಕೊಡಗು ಜಿಲ್ಲಾ ಕೌಶಲ್ಯ ಅಭಿವೃದ್ಧಿ ಅಧಿಕಾರಿ ಡಾ.ರೂಪಾ ಅಭಿಪ್ರಾಯಪಟ್ಟರು. ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಐಕ್ಯೂಎಸಿ, ಪ್ಲೇಸ್ ಮೆಂಟ್ ಮತ್ತು ಸ್ಕಿಲ್ ಡೆವಲಪ್ಮೆಂಟ್ ಕೋಶ( ವಿಭಾಗದ)ಗಳ ವತಿಯಿಂದ ಜಿಲ್ಲಾ ಉದ್ಯೋಗ ವಿನಿಮಯ ಮಾಹಿತಿ ಕೇಂದ್ರದ ಸಹಯೋಗದಲ್ಲಿ ನಡೆಸಲಾದ ಉದ್ಯೋಗ ಮಾಹಿತಿ ಮತ್ತು ಮಾರ್ಗದರ್ಶನ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸರಕಾರಿ ಮತ್ತು ಖಾಸಗಿ ಔದ್ಯೋಗಿಕ ಅವಕಾಶಗಳ ಕುರಿತು ಸಂಪನ್ಮೂಲ ವ್ಯಕ್ತಿಯಾಗಿ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಆಶಯ ನುಡಿಗಳನ್ನಾಡಿದ ಐಕ್ಯೂಎಸಿ ಕೋಶದ ಸಂಯೋಜಕ ಡಾ. ಆರ್.ರಾಜೇಂದ್ರ ಮಾತನಾಡಿ, ವಿವಿಧ…
ನಾಪೋಕ್ಲು ಜು.20 : ನಾಪೋಕ್ಲುವಿನಲ್ಲಿ ಸಮುದಾಯ ಆರೋಗ್ಯ ಕೇಂದ್ರವಿದ್ದರೂ ಸೂಕ್ತ ಸೌಲಭ್ಯವಿಲ್ಲದೆ ಜನ ಸಾಮಾನ್ಯರಿಗೆ ಪ್ರಯೋಜನವಾಗುತ್ತಿಲ್ಲ. ಗ್ರಾಮೀಣ ಪ್ರದೇಶಗಳಿಂದ ಬರುವ ರೋಗಿಗಳಿಗೆ ಅಗತ್ಯ ಚಿಕಿತ್ಸೆ ಸಿಗದೇ ಪರದಾಡುವಂತಾಗಿದೆ. ಸಮುದಾಯ ಆರೋಗ್ಯ ಕೇಂದ್ರದ ಸಮಸ್ಯೆಗಳನ್ನು ಬಗೆಹರಿಸಿ ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ನಾಪೋಕ್ಲು ಕೊಡವ ಸಮಾಜದಲ್ಲಿ ಜರುಗಿದ ಗ್ರಾಮ ಸಭೆಯಲ್ಲಿ ಆಗ್ರಹಿಸಿದ ಗ್ರಾಮಸ್ಥರು, ಸಮುದಾಯ ಆರೋಗ್ಯ ಕೇಂದ್ರದಲ್ಲಿ ಎರಡು ಅಂತಸ್ತಿನ ಕಟ್ಟಡವಿದೆ. ಆದರೆ ಅಗತ್ಯಕ್ಕೆ ತಕ್ಕಷ್ಟು ಸೌಲಭ್ಯಗಳಿಲ್ಲ. 32 ಸಿಬ್ಬಂದಿಗಳಿದ್ದರೂ ವೈದ್ಯರ ಕೊರತೆಯು ಕಾಡುತ್ತಿದೆ. ನಾಪೋಕ್ಲು ಹೋಬಳಿಯ ಸುಮಾರು 27 ಗ್ರಾಮಗಳ ಮಂದಿ ಚಿಕಿತ್ಸೆಗಾಗಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಬರುತ್ತಿದ್ದು, ಸೂಕ್ತ ಸೌಕರ್ಯವಿಲ್ಲದೆ ಸಮಸ್ಯೆ ಎದುರಿಸುವಂತಾಗಿದೆ. ಈ ಬಗ್ಗೆ ಸಂಬಂಧಪಟ್ಟವರು ಕೂಡಲೇ ಗಮನಹರಿಸಬೇಕು ಎಂದು ಒತ್ತಾಯಿಸಿದರು. ಕಂದಾಯ ಇಲಾಖೆಯಲ್ಲಿ ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದ್ದು, ಸಾರ್ವಜನಿಕರ ಕೆಲಸ ಕಾರ್ಯಗಳು ವಿಳಂಬವಾಗುತ್ತಿದೆ ಎಂದು ಆರೋಪಿಸಿದರು. ಕಸ ವಿಲೇವಾರಿಯ ಸಮಸ್ಯೆ ತಲೆದೋರಿದೆ ಸಮರ್ಪಕ ನಿರ್ವಹಣೆ ಆಗುತ್ತಿಲ್ಲ ಕೂಡಲೇ ಜಾಗ ಗುರುತಿಸಿ ಸಮಸ್ಯೆ ಪರಿಹರಿಸಬೇಕು. ಮಾದಕ ವಸ್ತುಗಳ ಅಕ್ರಮ ಮಾರಾಟವು…






