ನಾಪೋಕ್ಲು ಜು.12 : ಜೀವನದಲ್ಲಿ ಪ್ರತಿಯೊಂದು ಕ್ಷಣವು ಅತ್ಯಮೂಲ್ಯವಾದದ್ದು, ಸಮಯವನ್ನು ವ್ಯರ್ಥ ಮಾಡದೆ ಅನುಭವಿಸಿ ಸಂಭ್ರಮಿಸುವುದರ ಮೂಲಕ ಸಾಧನೆ ಮಾಡಿ ಉನ್ನತಿಯನ್ನು ಹೊಂದಬೇಕು ಎಂದು ಕರ್ನಾಟಕ ಜನಪದ ಪರಿಷತ್ ಕೊಡಗು ಜಿಲ್ಲಾಧ್ಯಕ್ಷ, ಶಕ್ತಿ ಪತ್ರಿಕೆಯ ಸಲಹಾ ಸಂಪಾದಕ ಬಿ.ಜಿ.ಅನಂತಶಯನ ಹೇಳಿದರು. ನಾಪೋಕ್ಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕ್ರೀಡಾ ಸಾಂಸ್ಕೃತಿಕ ಮತ್ತು ಸಹಪಠ್ಯ ಚಟುವಟಿಕೆಗಳ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಗಿಡಕ್ಕೆ ನೀರು ಹಾಕುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಪ್ರತಿಯೊಬ್ಬರಲ್ಲೂ ಅಪಾರವಾದ ಶಕ್ತಿ ಇದೆ. ಅಸಾಧ್ಯವಾದದನ್ನು ಸಾಧ್ಯ ಮಾಡಿಕೊಂಡು ಹೆಜ್ಜೆ ಗುರುತು ಮೂಡಿಸಿ ಮಾದರಿಯಾಗಬೇಕು ಎಂದ ಅವರು ಗುರುಹಿರಿಯರಿಗೆ ಹಾಗೂ ಸೈನಿಕರನ್ನು ಗೌರವಿಸುವುದರ ಮೂಲಕ ಸತ್ಪ್ರಜೆಯಾಗಿ ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿ, ಹಾಡು ಹಾಡುವುದರ ಮೂಲಕ ಮನೋರಂಜನೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ಕಾವೇರಿ ಪ್ರಕಾಶ್ ವಹಿಸಿದ್ದು, ವೇದಿಕೆಯಲ್ಲಿ ಅತಿಥಿಗಳಾಗಿ ಜನಪದ ಪರಿಷತ್ ಕಾರ್ಯದರ್ಶಿ ಅಂಬೆಕಲ್ ಕುಶಾಲಪ್ಪ, ಮಡಿಕೇರಿ ರೋಟರಿ ಕ್ಲಬ್, ಮಿಸ್ಟ್…
ಲೇಖಕ: admin
ಮಡಿಕೇರಿ ಜು.12 : ವಿರಾಜಪೇಟೆ ತಾಲೂಕಿನ ನೂತನ ಕ್ಷೇತ್ರ ಶಿಕ್ಷಣ ಅಧಿಕಾರಿಗಳಾಗಿ ಅಧಿಕಾರ ವಹಿಸಿಕೊಂಡಿರುವ ಎಂ.ಪ್ರಕಾಶ್ ಅವರನ್ನು ಕೊಡಗು ಅನುದಾನ ರಹಿತ ಶಾಲೆಯ ಒಕ್ಕೂಟದ ವತಿಯಿಂದ ಅಭಿನಂದಿಸಿದಲಾಯಿತು. ಒಕ್ಕೂಟದ ಪ್ರಧಾನ ಕಾರ್ಯದರ್ಶಿ ತಿಮ್ಮಯ್ಯ ಕೋಟ್ರಂಗಡ ಹಾಗೂ ಕಾನೂನು ಸಲಹೆಗಾರ ಎಂ.ಎಸ್ ಪೂವಯ್ಯ ಪುಷ್ಪ ಗುಚ್ಚ ನೀಡಿ ಅಭಿನಂದಿಸಿದರು.
ಮಡಿಕೇರಿ ಜು.11 : ಕೊಡಗು ಜಿಲ್ಲೆಯಲ್ಲಿ ರಿವರ್ ರ್ಯಾಪ್ಟಿಂಗ್ ನಿರ್ವಹಣೆ ಮತ್ತು ಮೇಲುಸ್ತುವಾರಿ ಸಮಿತಿ ಸಭೆಯು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ರಿವರ್ ರ್ಯಾಪ್ಟಿಂಗ್ ನಿರ್ವಹಣೆ ಮತ್ತು ಮೇಲುಸ್ತುವಾರಿ ಸಂಬಂಧಿಸಿದಂತೆ ಸುದೀರ್ಘ ಚರ್ಚೆ ನಡೆಯಿತು. ವರ್ಷದಿಂದ ವರ್ಷಕ್ಕೆ ಕೊಡಗು ಜಿಲ್ಲೆಗೆ ಪ್ರವಾಸಿಗರು ದುಬಾರೆ, ಬರಪೊಳೆ, ಕುಮಾರಳ್ಳಿ, ಮಾಂದಲ್ಪಟ್ಟಿ, ಅಬ್ಬಿ ಜಲಪಾತ, ರಾಜಾಸೀಟು ಹೀಗೆ ವಿವಿಧ ಪ್ರವಾಸಿ ಸ್ಥಳಗಳ ವೀಕ್ಷಣೆಗೆ ಆಗಮಿಸಲಿದ್ದಾರೆ. ಪ್ರವಾಸಿಗರಿಗೆ ಯಾವುದೇ ರೀತಿಯ ಕಹಿ ಘಟನೆ ಉಂಟಾಗದಂತೆ ಸರಿಯಾದ ರೀತಿಯಲ್ಲಿ ನಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು. ಪ್ರವಾಸಿ ಸ್ಥಳಗಳಲ್ಲಿ ಪ್ರವಾಸಿಗರ ಜೊತೆ ಅನುಚಿತವಾಗಿ ವರ್ತಿಸಿದರೆ ಇಡೀ ಕೊಡಗು ಜಿಲ್ಲೆಗೆ ಕೆಟ್ಟ ಹೆಸರು ಬರಲಿದೆ. ಇದರಿಂದ ಸ್ಥಳೀಯರಿಗೆ ಉದ್ಯೋಗಾವಕಾಶಕ್ಕೆ ತೊಂದರೆಯಾಗಲಿದೆ ಎಂದು ಜಿಲ್ಲಾಧಿಕಾರಿ ಎಚ್ಚರಿಸಿದರು. ಪ್ರವಾಸಿ ಸ್ಥಳಗಳಲ್ಲಿ ಪ್ರವಾಸಿಗರ ಜೊತೆಗೆ ಸೌಜನ್ಯ, ವಿನಯ, ವಿನಮ್ರತೆಯಿಂದ ನಡೆದುಕೊಳ್ಳಬೇಕು. ಇದರಿಂದ ಮತ್ತಷ್ಟು ಪ್ರವಾಸಿಗರನ್ನು ಸೆಳೆಯಲು ಸಾಧ್ಯ. ಇದರಿಂದ ಉದ್ಯೋಗಗಳು ಹೆಚ್ಚಾಗಲಿದೆ ಎಂದು ತಿಳಿಸಿದರು.…
ಮಡಿಕೇರಿ ಜು.11 : ಕೃಷಿ ಕ್ಷೇತ್ರದಲ್ಲಿ ವಿನೂತನ ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ವಿಶಿಷ್ಟ ಮತ್ತು ಗಮನಾರ್ಹ ಸಾಧನೆ ಮಾಡಿರುವ ಮತ್ತು ರೈತ ಸಮುದಾಯದ ಶ್ರೇಯೋಭಿವೃದ್ಧಿಗೆ ಅಪಾರ ಕೊಡುಗೆ ನೀಡುತ್ತಿರುವ ಪರಿಣಿತರಿಗೆ ಕೃಷಿ ಇಲಾಖೆಯಿಂದ ಕೃಷಿ ಪಂಡಿತ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಕೃಷಿ ಪಂಡಿತ ಪ್ರಶಸ್ತಿಗೆ ಭಾಗವಹಿಸಲು ಇಚ್ಛಿಸುವ ರೈತರ ಸಂಶೋಧನೆ ಸಾಧನೆಗಳು ಮೂಲ ಸ್ವರೂಪವಾದದ್ದು ಬೇರೆಯವರ ಸಾಧನೆಗಿಂತ ವಿಭಿನ್ನವಾಗಿರಬೇಕು. ಹಾಗೂ ವ್ಯಾಪಕವಾಗಿ ಕೃಷಿ ಕ್ಷೇತ್ರದ ಏಳಿಗೆಗೆ ಕಾರಣವಾಗಿರಬೇಕು. ಈ ಪ್ರಶಸ್ತಿಗೆ ನಾಮನಿರ್ದೇಶನ ಸಲ್ಲಿಸ ಬಯಸುವ ರೈತ/ ರೈತ ಮಹಿಳೆಯರು ಸ್ಥಳೀಯ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಿಂದ ನಿಗದಿತ ಅರ್ಜಿ ನಮೂನೆಯನ್ನು ಪಡೆದುಕೊಂಡು ಮಾಹಿತಿಯನ್ನು ಭರ್ತಿ ಮಾಡಿ ಜುಲೈ, 24 ರೊಳಗೆ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದಾಗಿದೆ. .ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಬಾನಾ ಎಂ.ಶೇಖ್ ತಿಳಿಸಿದ್ದಾರೆ.
ಮಡಿಕೇರಿ ಜು.11 : ಕೃಷಿ ವಲಯದಲ್ಲಿ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ ಕೃಷಿ ಪ್ರಶಸ್ತಿ ಕೃಷಿ ಉತ್ಪಾದನಾ ಬಹುಮಾನ ಯೋಜನೆಯನ್ನು ಕೃಷಿ ಇಲಾಖೆಯಿಂದ ಅನುಷ್ಠಾನಗೊಳಿಸಲಾಗುತ್ತದೆ. ಪ್ರತಿ ವರ್ಷದಂತೆ ಈ ವರ್ಷವೂ (2023-24) ಸಹ ರೈತ ಮಹಿಳೆಯರಿಂದ ಪ್ರತ್ಯೇಕವಾಗಿ ಬೆಳೆ ಸ್ಪರ್ಧೆಗೆ ಅರ್ಜಿ ಆಹ್ವಾನಿಸಲಾಗಿದೆ. ನೋಂದಣಿ ಶುಲ್ಕ ಸಾಮಾನ್ಯ ರೈತ/ ರೈತ ಮಹಿಳೆಯರಿಗೆ 100 ರೂ, ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ರೈತ ಮಹಿಳೆಯರಿಗೆ 25 ರೂ, ಕನಿಷ್ಠ ಒಂದು ಎಕರೆ ಪ್ರದೇಶದಲ್ಲಿ ಸ್ಪರ್ಧೆ ಬೆಳೆ ಬೆಳೆದಿರಬೇಕು. ಸ್ವಂತ ಜಮೀನು ಇರುವ ಬಗ್ಗೆ ಪಹಣಿ ಪತ್ರ ಹೊಂದಿರಬೇಕು. ಯಾವುದೇ ಹಂತದಲ್ಲಿ ಒಮ್ಮೆ ಬಹುಮಾನ ಪಡೆದ ರೈತ/ ರೈತ ಕುಟುಂಬದವರು ಮುಂದಿನ ಐದು ವರ್ಷಗಳ ಅವಧಿಗೆ ಆ ಹಂತದ ಬೆಳೆ ಸ್ಪರ್ಧೆಯ ಬಹುಮಾನಕ್ಕೆ ಅರ್ಹನಾಗಿರುವುದಿಲ್ಲ. ಆದರೆ ಆ ಬೆಳೆಯ ಮೇಲಿನ ಹಂತದ ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿರುತ್ತದೆ. ತಾಲೂಕು ಮಟ್ಟದಲ್ಲಿ ಬಹುಮಾನ ಪಡೆದವರು ಜಿಲ್ಲಾ ಮಟ್ಟಕ್ಕೆ ಸ್ಪರ್ಧಿಸಬಹುದಾಗಿದೆ. ಮತ್ತು ಜಿಲ್ಲಾ ಮಟ್ಟದಲ್ಲಿ…
ಮಡಿಕೇರಿ ಜು.11 : ಕೊಡಗು ಜಿಲ್ಲಾ ಪಂಚಾಯತ್ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ವರ್ಣಿತ್ ನೇಗಿ ಅಧಿಕಾರ ವಹಿಸಿಕೊಂಡಿದ್ದಾರೆ. ವರ್ಣಿತ್ ನೇಗಿ ಅವರು ಈ ಹಿಂದೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಜಿ.ಪಂ.ಸಿಇಒ, ಮೈಸೂರಿನ ಆಡಳಿತ ತರಬೇತಿ ಸಂಸ್ಥೆಯಲ್ಲಿ ಜಂಟಿ ನಿರ್ದೇಶಕರಾಗಿ, ಹುಣಸೂರಿನಲ್ಲಿ ಉಪ ವಿಭಾಗಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಛತ್ತೀಸ್ಗಢ ಮೂಲದವರಾದ ವರ್ಣಿತ್ ನೇಗಿ ಸುರತ್ಕಲ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಬಿಟೆಕ್(ಸಿವಿಲ್) ಪದವಿ ಪಡೆದಿದ್ದಾರೆ.
ಮಡಿಕೇರಿ ಜು.11 : ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯು 2023-24 ನೇ ಸಾಲಿನಲ್ಲಿಯೂ ಜಾರಿಯಲ್ಲಿರುತ್ತದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಶಬನಾ ಎಂ.ಶೇಕ್ ತಿಳಿಸಿದ್ದಾರೆ. ಅತಿವೃಷ್ಟಿ, ಅನಾವೃಷ್ಟಿ, ಅಕಾಲಿಕ ಮಳೆ, ಮುಂತಾದ ಪ್ರಾಕೃತಿಕ ವಿಕೋಪ ಸೇರಿದಂತೆ ಹಲವಾರು ಕಾರಣಗಳಿಂದ ಬೆಳೆ ನಷ್ಟ ಉಂಟಾದಾಗ ರೈತರಿಗೆ ವಿಮಾ ರಕ್ಷಣೆ ಮತ್ತು ಆರ್ಥಿಕ ಬೆಂಬಲ ನೀಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕರು ಹೇಳಿದ್ದಾರೆ. ಈ ಯೋಜನೆಯಡಿಯಲ್ಲಿ ರೈತರ ವಿಮಾ ಕಂತನ್ನು ಆಹಾರ ಮತ್ತು ಎಣ್ಣೆ ಕಾಳು ಬೆಳೆಗಳಿಗೆ ಮುಂಗಾರು ಹಂಗಾಮಿಗೆ ಶೇ.2 ಎಂದು ಪರಿಗಣಿಸಲಾಗಿದೆ. ಮುಖ್ಯ ಬೆಳೆಗಳಿಗೆ ಯೋಜನೆಯನ್ನು ಗ್ರಾಮ ಪಂಚಾಯಿತಿ ಮಟ್ಟಕ್ಕೆ ಅಳವಡಿಸಲಾಗುವುದು. ಈ ಯೋಜನೆಯು ಸಾಲ ಪಡೆದ ಹಾಗೂ ಸಾಲ ಪಡೆಯದ ರೈತರಿಗೆ ಐಚ್ಛಿಕವಾಗಿದ್ದು, ವಿಮಾ ಮೊತ್ತವು ಒಂದೇ ಆಗಿದೆ ಎಂದು ವಿವರಿಸಿದ್ದಾರೆ. ಬಿತ್ತನೆ ಅಥವಾ ನಾಟಿ ಕಾಲಕ್ಕೆ ಆಗುವ ನಷ್ಟ, ಬೆಳವಣಿಗೆ ಹಂತದಲ್ಲಿ ಆಗುವ ನಷ್ಟ ಹಾಗೂ…
ಮಡಿಕೇರಿ ಜು.11 : ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ (ಕೆಸ್ಟೆಪ್ಸ್) ವತಿಯಿಂದ ಸರ್ಕಾರದ ನಿರ್ದೇಶನದಂತೆ ಕೊಡಗು ಜಿಲ್ಲಾಡಳಿತದ ಸಹಯೋಗದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಉದ್ದೇಶಿತ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಹಾಗೂ ಮಿನಿ ತಾರಾಲಯ ನಿರ್ಮಾಣ ಕಾರ್ಯ ಕೈಗೊಳ್ಳುವ ನಿಟ್ಟಿನಲ್ಲಿ ಉತ್ತಮ ವಾಸ್ತುಶಿಲ್ಪಿ ವಿನ್ಯಾಸದೊಂದಿಗೆ ಕೊಡಗಿನ ಭೌಗೋಳಿಕ ಪರಿಸರ ಹಾಗೂ ಹವಾಮಾನಕ್ಕೆ ಅನುಗುಣವಾಗಿ ಕಟ್ಟಡದ ವಿನ್ಯಾಸ ರೂಪಿಸಿ ಸುಸ್ಸಜ್ಜಿತ ವಿಜ್ಞಾನ ಕೇಂದ್ರ ನಿರ್ಮಿಸಲಾಗುವುದು ಎಂದು ಜಿಲ್ಲಾ ವಿಜ್ಞಾನ ಕೇಂದ್ರದ ಸಮಿತಿ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ. ಕೊಡಗು ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಹಾಗೂ ಮಿನಿ ತಾರಾಲಯ ಸ್ಥಾಪನೆಗೆ ಸಂಬಂಧಿಸಿದಂತೆ ರೂಪುರೇಷೆಗಳು ಹಾಗೂ ಮುಂದಿನ ಕಾರ್ಯಯೋಜನೆಗಳ ಕುರಿತು ಚರ್ಚಿಸಲು ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ವಿಜ್ಞಾನ ಕೇಂದ್ರದ ಸಮಿತಿ ಸದಸ್ಯರೊಂದಿಗೆ ನಡೆಸಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರ್ಕಾರದ ಯೋಜನೆಯಂತೆ ಕೆಸ್ಟೆಪ್ಸ್ ವತಿಯಿಂದ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ನಿರ್ಮಾಣಕ್ಕೆ…
ಮಡಿಕೇರಿ ಜು.11 : ಕುತಂತ್ರದಿಂದ ಕೊಡವರ ಹತ್ಯೆಯಾದ ದೇವಟ್ ಪರಂಬು ಸ್ಮಾರಕ ಪ್ರದೇಶದಲ್ಲಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಪುಷ್ಪ ನಮನ ಸಲ್ಲಿಸಿತು. ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದಲ್ಲಿ ದೇವಟ್ ಪರಂಬುವಿಗೆ ತೆರಳಿದ ಪ್ರಮುಖರು ಹಿರಿಯರಿಗೆ ಪುಷ್ಪನಮನ ಸಲ್ಲಿಸಿ ವಿವಿಧ ಹಕ್ಕೊತ್ತಾಯಗಳನ್ನು ಮಂಡಿಸಿದರು. ಕೊಡವಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆ ನೀಡಬೇಕು, ಕೊಡವ ಜನಾಂಗೀಯ ಬುಡಕಟ್ಟು ಜನಾಂಗಕ್ಕೆ ಎಸ್ಟಿ ಟ್ಯಾಗ್ ಕಲ್ಪಿಸಬೇಕು, ಕೊಡವ ಭೂಮಿ, ಭಾಷೆ, ಸಾಂಸ್ಕೃತಿಕ ಪರಂಪರೆಯ ಆರ್ಥಿಕ ಮತ್ತು ರಾಜಕೀಯ ಸ್ವಾತಂತ್ರ್ಯಕ್ಕಾಗಿ ಸಾಂವಿಧಾನಿಕ ಭದ್ರತೆ ಒದಗಿಸಬೇಕು, ಟಿಪ್ಪು ಸಂಚಿನಿಂದ ದೇವಟ್ ಪರಂಬುವಿನಲ್ಲಿ ನಡೆದ ನರಮೇಧದ ಸ್ಮರಣಾರ್ಥ ಅಂತರರಾಷ್ಟ್ರೀಯ ಸ್ಮಾರಕ ನಿರ್ಮಾಣ ಮಾಡಬೇಕು ಹಾಗೂ ಕೊಡವ ನರಮೇಧವನ್ನು ಯುಎನ್ಒ ಅಂತರರಾಷ್ಟ್ರೀಯ ಹತ್ಯಾಕಾಂಡದ ನೆನಪಿನ ಪಟ್ಟಿಯಲ್ಲಿ ಸೇರಿಸಬೇಕು ಎಂದು ನಾಚಪ್ಪ ಒತ್ತಾಯಿಸಿದರು. ಸಿಎನ್ಸಿ ಪ್ರಮುಖರಾದ ಕಲಿಯಂಡ ಪ್ರಕಾಶ್, ಪಟ್ಟಮಾಡ ಕುಶ, ಅರೆಯಡ ಗಿರೀಶ್, ಮಂದಪಂಡ ಮನೋಜ್, ಕಾಟುಮಣಿಯಂಡ ಉಮೇಶ್ ಮತ್ತಿತರರು ಪುಷ್ಪ ನಮನ ಸಲ್ಲಿಸಿದರು. ಎನ್.ಯು.ನಾಚಪ್ಪ ಅವರು ಹಿರಿಯರ ಸ್ಮರಣಾರ್ಥ ಗಾಳಿಯಲ್ಲಿ ಗುಂಡು…
ಮಡಿಕೇರಿ ಜು.11 : ಸಂಪಾಜೆ ವಲಯದ ಡಬ್ಬಡ್ಕ ಪಟ್ಟಿಘಾಟ್ ಮೀಸಲು ಅರಣ್ಯಕ್ಕೆ ಅಕ್ರಮವಾಗಿ ಪ್ರವೇಶಿಸಿ ವಿನಾಶದಂಚಿನಲ್ಲಿರುವ ಮಲಬಾರ್ ದೈತ್ಯ ಅಳಿಲು ಹಾಗೂ ಹಾರುವ ಅಳಿಲುಗಳನ್ನು ಬೇಟೆಯಾಡಿ ಮಾಂಸವನ್ನಾಗಿ ಪರಿವರ್ತಿಸಿದ ಪ್ರಕರಣವನ್ನು ಸಂಪಾಜೆ ವಲಯ ಅರಣ್ಯ ಇಲಾಖೆ ಬಯಲಿಗೆಳೆದಿದೆ. ವನ್ಯ ಜೀವಿಗಳನ್ನು ಕೆಲವರು ಬೇಟೆಯಾಡಿರುವ ಬಗ್ಗೆ ಸಂಪಾಜೆ ವಲಯ ಅರಣ್ಯ ಇಲಾಖೆಗೆ ಖಚಿತ ಮಾಹಿತಿ ಲಭಿಸಿತ್ತು. ಅದರಂತೆ ಆರೋಪಿಗಳಾದ ದಬ್ಬಡ್ಕ ಗ್ರಾಮದ ಮದನ್ ಕುಮಾರ್(38), ಗಣಪತಿ ಬಿನ್ ಮಾಚಯ್ಯ(50) ಹಾಗೂ ಪ್ರಸನ್ನ ಕುಮಾರ್(35) ಎಂಬುವವರ ಮನೆಗಳ ಮೇಲೆ ಅರಣ್ಯ ಇಲಾಖೆ ಸಿಬ್ಬಂದಿಗಳು ದಾಳಿ ನಡೆಸಿದರು. ಈ ಸಂದರ್ಭ ಮೂವರು ಆರೋಪಿಗಳು ಪರಾರಿಯಾಗಿದ್ದಾರೆ. ಮನೆಯಲ್ಲಿದ್ದ 2 ವನ್ಯಜೀವಿಗಳ ಮಾಂಸವನ್ನು ಪಾತ್ರೆ ಸಹಿತ ಅರಣ್ಯ ಇಲಾಖೆ ವಶಕ್ಕೆ ಪಡೆದಿದೆ. ಆರೋಪಿಗಳ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯಿದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎ.ಟಿ ಪೂವಯ್ಯ ಮತು ವಲಯ ಅರಣ್ಯಾಧಿಕಾರಿ ಮಧುಸೂದನ ಮಾರ್ಗದರ್ಶನದಲ್ಲಿ ಉಪ ವಲಯ ಅರಣ್ಯಾಧಿಕಾರಿ ನಿಸಾರ್ ಮಹಮ್ಮದ್,…






