ಮಡಿಕೇರಿ ಜು.11 : ಊರಿಗೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೊರಹೋದ ವ್ಯಕ್ತಿ ಕಾಣೆಯಾಗಿರುವುದಾಗಿ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂಪಾಜೆ ಗ್ರಾಮದ ಅರಮನೆತೋಟ ಕಾಲೋನಿ ನಿವಾಸಿ ಮಂಜುನಾಥ (37) ಜು.10 ರಂದು ಮಧ್ಯಾಹ್ನ ಊರದ ಮರಗೋಡು ಗ್ರಾಮಕ್ಕೆ ಹೋಗಿ ಬರುವುದಾಗಿ ಹೇಳಿ ಹೋದವರು ಇದುವರೆಗೂ ಮನೆಗೆ ಬಂದಿರುವುದಿಲ್ಲ. ಮನೆಗೆ ಕರೆಮಾಡಿ ವಿಚಾರಿಸಿದಾಗ ಬಂದಿರುವುದಿಲ್ಲ ಎಂಬುದಾಗಿ ತಿಳಿಸಿದ್ದು, ಅಲ್ಲದೆ ಮೊಬೈಲ್ ಫೋನ್ ಸ್ವೀಚ್ ಆಫ್ ಆಗಿದೆ ಎಂದು ಮಂಜುನಾಥ ಅವರ ಪತ್ನಿ ಎಂ.ಎಂ.ಆಶಾ ದೂರಿನಲ್ಲಿ ತಿಳಿಸಿದ್ದಾರೆ. ಮಂಜುನಾಥ್ ಕನ್ನಡ, ತುಳು, ಮಲಯಾಳ, ಕೊಡವ ಭಾಷೆ ಮಾತನಾಡುವವರಾಗಿದ್ದು, 5.6 ಅಡಿ ಎತ್ತರ, ಎಣ್ಣೆಗೆಂಪು ಮೈಬಣ್ಣ, ಧೃಡಕಾಯ ಶರೀರ ಹೊಂದಿರುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಡಿಕೇರಿ ಪೊಲೀಸ್ ಠಾಣೆ-08272-228777, ಪೊಲೀಸ್ ಅಧೀಕ್ಷಕರು -08272-229000 ಸಂಪರ್ಕಿಸುವಂತೆ ಮನವಿ ಮಾಡಿದ್ದಾರೆ.
ಲೇಖಕ: admin
ಮಡಿಕೇರಿ ಜು.11 : ಕೊಡವ ಎಂ.ಎ.ಸ್ನಾತಕೋತ್ತರ ವಿಭಾಗ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು, ಕೊಡವ ಮಕ್ಕಡ ಕೂಟದ ಸಹಯೋಗದಲ್ಲಿ ಜು.15 ರಂದು ನಾಲ್ಕು ಕೊಡವ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ. ಅಂದು ಬೆಳಿಗ್ಗೆ 10.30 ಗಂಟೆಗೆ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಸಭಾಂಗಣದಲ್ಲಿ ಲೇಖಕಿ ಐಚಂಡ ರಶ್ಮಿ ಮೇದಪ್ಪ (ತಾಮನೆ-ಕೈಪಟ್ಟಿರ) ಬರೆದಿರುವ ಕೊಡವ ಮಕ್ಕಡ ಕೂಟದ 67ನೇ ಪುಸ್ತಕ “ಚೆರ್ ಕತೆ ಮತ್ತು ಚೆರ್ ನಾಟಕ”, ಲೇಖಕಿ ಕರವಂಡ ಸೀಮಾ ಗಣಪತಿ (ತಾಮನೆ-ಮಡೆಯಂಡ) ಬರೆದಿರುವ ಕೊಡವ ಮಕ್ಕಡ ಕೂಟದ 68ನೇ ಪುಸ್ತಕ “ಕವನ ಪೊಟ್ಟಿ”, ಕೊಡವ ಎಂ.ಎ ವಿದ್ಯಾರ್ಥಿಗಳಾದ ಬೊಪ್ಪಂಡ ಶ್ಯಾಮ್ ಪೂಣಚ್ಚ, ಲೆ.ಕರ್ನಲ್ ಬಿ.ಎಂ.ಪಾರ್ವತಿ (ಬಲ್ಯಡಿಚಂಡ), ಐಚಂಡ ರಶ್ಮಿ ಮೇದಪ್ಪ, ಪುತ್ತರಿರ ವನಿತ ಮುತ್ತಪ್ಪ (ತಾಮನೆ-ಮನೆಯಪಂಡ), ಆಪಾಡಂಡ ಎನ್.ಹೇಮಾವತಿ(ಜಾನ್ಸಿ-ತಾಮನೆ-ಬೊಳ್ಳಾರ್ಪಂಡ), ಬೊಳ್ಳಜಿರ ಅಯ್ಯಪ್ಪ, ಚೌಂಡಿರ ಶಿಲ್ಪ ಪೊನ್ನಪ್ಪ (ತಾಮನೆ-ಚಿಕ್ಕಂಡ), ಬೊಳ್ಳಜಿರ ಯಮುನ ಅಯ್ಯಪ್ಪ (ತಾಮನೆ-ಮನ್ನೆರ) ಕರವಂಡ ಸೀಮಾ ಗಣಪತಿ ಬರೆದ ಕೊಡವ ಮಕ್ಕಡ ಕೂಟದ 69ನೇ ಪುಸ್ತಕ “ದೇವತೆಯಡ ಮತ್ತು ಕೇಳಿಪೋನಯಿಂಗಡ…
ಮಡಿಕೇರಿ ಜು.11 : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಗೌರಮ್ಮ ದತ್ತಿ ಕಾರ್ಯಕ್ರಮವಾಗಿ ಕಥೆಗಾರ್ತಿ ಕೊಡಗಿನ ಗೌರಮ್ಮ ಅವರ ಹೆಸರಿನಲ್ಲಿ ಜಿಲ್ಲೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸಣ್ಣ ಕಥೆ ಬರೆಯುವ ಸ್ಪರ್ಧೆ ನಡೆಯಲಿದೆ. ಸಣ್ಣ ಕತೆಗಳ ಗೌರಮ್ಮ ದತ್ತಿ ಸ್ಪರ್ಧೆ* ಯು ವಿದ್ಯಾರ್ಥಿಗಳಲ್ಲಿ ಸಾಹಿತ್ಯಿಕ ಬೆಳವಣಿಗೆ ಉಂಟಾಗಲು ಮತ್ತು ಆಸಕ್ತಿ ಮೂಡಲು ಇದು ಉತ್ತಮ ಕಾರ್ಯಕ್ರಮ. ವಿದ್ಯಾರ್ಥಿಗಳಲ್ಲಿ ಸಾಹಿತ್ಯಾಸಕ್ತಿ ಬೆಳೆಸಲು ಮತ್ತು ಕನ್ನಡ ನಾಡು, ನುಡಿ, ಸಂಸ್ಕೃತಿಯ ಪರಿಚಯ ಮಾಡಿಕೊಡುವ ಉದ್ದೇಶದಿಂದ ಜಿಲ್ಲೆಯ ಶಾಲೆ ಕಾಲೇಜುಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ತಿಳಿಸಿದ್ದಾರೆ. *ಕೊಡಗು ಜಿಲ್ಲೆಯ ಪ್ರೌಡಶಾಲಾ ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದು. • ಸ್ಥಳದಲ್ಲೆ ಕತೆ ರಚಿಸತಕ್ಕದ್ದು. • ಎ4 ಅಳತೆಯ ಹಾಳೆಯಲ್ಲಿ 2 ಪುಟ ಮೀರದಂತೆ ಕತೆ ರಚಿಸತಕ್ಕದ್ದು. • ಕತೆ ಬರೆಯಲು ಹಾಳೆಯನ್ನು ಸ್ಥಳದಲ್ಲಿ ನೀಡಲಾಗುವುದು. • ಕತೆಯ ವಿಷಯದ ಆಯ್ಕೆಗೆ…
ಮಡಿಕೇರಿ ಜು.11 : ಆನ್ ಲೈನ್ ಮಾರುಕಟ್ಟೆ ಅವಲಂಬಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ವಿದ್ಯಾರ್ಥಿಗಳು ಸೇರಿದಂತೆ ಯುವ ಜನಾಂಗ ಇ-ಕಾಮರ್ಸ್ ಕುರಿತು ಹೆಚ್ಚಿನ ಜ್ಞಾನ ಪಡೆದುಕೊಂಡು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ವಿಫುಲ ಅವಕಾಶಗಳಿವೆ ಎಂದು ಉದ್ಯಮಿ ಬಾಲಾಜಿ ಕಶ್ಯಪ್ ಕರೆ ನೀಡಿದರು. ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಸ್ನಾತಕೋತ್ತರ ವಾಣಿಜ್ಯ ವಿಭಾಗದ ವತಿಯಿಂದ ‘ಇ-ಕಾಮರ್ಸ್ ಎಂಡ್ ಇಟ್ಸ್ ಡೈವರ್ಸಿಫಿಕೇಶನ್’ ಕುರಿತು ನಡೆದ ಒಂದು ದಿನದ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದ ಅವರು, ಯುವಕರು ತಾವೇ ಉತ್ಪನ್ನಗಳನ್ನು ತಯಾರಿಸಿ ಅದಕ್ಕೆ ತಮ್ಮದೇ ಆದ ಬ್ರಾಂಡ್ ಸೃಷ್ಟಿಸಿ ಮಾರಾಟ ಮಾಡಲು ಆನ್ ಲೈನ್ ಮಾರುಕಟ್ಟೆ ಉತ್ತಮ ವೇದಿಕೆ ಎಂದು ಅಭಿಪ್ರಾಯಪಟ್ಟರು. ಓಪನ್ ನೆಟ್ವರ್ಕ್ ಫಾರ್ ಡಿಜಿಟಲ್ ಕಾಮರ್ಸ್, ನಮ್ಮ ಯಾತ್ರಿ ಮುಂತಾದ ಇ-ಕಾಮರ್ಸ್ ತಾಣಗಳು ವಿವಿಧ ಉತ್ಪನ್ನ ಹಾಗೂ ಸೇವೆಗಳಿಗೆ ನ್ಯಾಯಬದ್ದ ಸಂಭಾವನೆ ದೊರಕಿಸುವಲ್ಲಿ ಅನುಕೂಲ ಮಾಡಿಕೊಡುವುದರಿಂದ, ಇಂತಹಾ ಅವಕಾಶಗಳನ್ನು ಯುವ ಉದ್ಯಮಿಗಳು ಸಮರ್ಪಕವಾಗಿ ಬಳಸಿಕೊಂಡರೆ ಇಂದಿನ ಪೈಪೋಟಿ ಆಧಾರಿತ ಮಾರುಕಟ್ಟೆಯಲ್ಲೂ…
ಮಡಿಕೇರಿ ಜು.11 : ನಗರದ ಐಟಿಐ ಜಂಕ್ಷನ್ನಲ್ಲಿ ಧನಲಕ್ಷ್ಮಿ ಎಂಬವರಿಗೆ ಸೇರಿದ ಅಂಗಡಿ ಮಳಿಗೆಯ ಜಾಗಕ್ಕೆ ವಾರದ ಒಳಗಾಗಿ ಫಾರಂ ನಂ.3 ದಾಖಲೆಯನ್ನು ನಗರಸಭೆ ಒದಗಿಸಬೇಕು. ಇಲ್ಲವಾದಲ್ಲಿ ನೊಂದ ಮಹಿಳೆಗೆ ನ್ಯಾಯ ಒದಗಿಸಲು ನಗರಸಭೆ ಮುಂಭಾಗ ಪ್ರತಿಭಟನೆ ನಡೆಸುವುದಾಗಿ ಮಡಿಕೇರಿ ನಗರಸಭೆಯ ಮಾಜಿ ಉಪಾಧ್ಯಕ್ಷ ಕೆ.ಎಂ.ಗಣೇಶ್ ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಧನಲಕ್ಷ್ಮಿ ಅವರಿಗೆ ಸೇರಿದ ಜಾಗದ ದಾಖಲೆ ಗೊಂದಲ ಮುಂದುವರೆದಿದೆ, ಈ ನಡುವೆ ಇತ್ತೀಚೆಗೆ ನಗರಸಭಾ ಸದಸ್ಯರೊಬ್ಬರ ಮೇಲೆ ಹಲ್ಲೆ ಕೂಡ ನಡೆದಿದ್ದು, ಇದನ್ನು ಖಂಡಿಸುತ್ತೇನೆ. ಕಂದಾಯ ಇಲಾಖೆ ಜಾಗಕ್ಕೆ 2017ರಲ್ಲೆ ಜಾಗಕ್ಕೆ ಪಟ್ಟೆಯನ್ನು ನೀಡಿದೆ. ಹೀಗಿದ್ದೂ ನಗರಸಭೆಯಿಂದ ಫಾರಂ ನಂ.3 ರನ್ನು ನೀಡಲು ವಿಳಂಬ ಧೋರಣೆ ತಳೆಯಲಾಗುತ್ತಿದೆ ಎಂದು ಆರೋಪಿಸಿದರು. ಐಟಿಐ ಜಂಕ್ಷಣ್ ಬಳಿಯಲ್ಲಿ 1975 ರಲ್ಲೆ ಮಣಿ ಎಂಬವರು ಅಂಗಡಿಯನ್ನಿರಿಸಿಕೊಂಡು ವ್ಯಾಪಾರ ನಡೆಸುತ್ತಿದ್ದರು. ಆ ಸಂದರ್ಭವೆ ಅವರು ಅಂದಿನ ಪುರಸಭೆಗೆ ಜಾಗಕ್ಕೆ ಸಂಬಂಧಿಸಿದಂತೆ ಟಿಟಿ ದಂಡವನ್ನು ಪಾವತಿಸಿದ್ದರು. ಇವರಿಗೆ 2017 ರಲ್ಲಿ ಕಂದಾಯ ಇಲಾಖೆ…
ಮಡಿಕೇರಿ ಜು.11 : ಹೈದಾರಬಾದ್ನಲ್ಲಿ ನಡೆದ 12ನೇ ರಾಷ್ಟ್ರೀಯ ವೋವಿನಮ್ ಕರಾಟೆ ಚಾಂಪಿಯನ್ ಶಿಪ್ನಲ್ಲಿ ಸೋಮವಾರಪೇಟೆಯ ಕುವೆಂಪು ಶಾಲೆ ವಿದ್ಯಾರ್ಥಿನಿ ಜಿ.ಎಸ್.ಮಾನಸ ಕಂಚಿನ ಪದಕ ಗೆದ್ದುಕೊಂಡಿದ್ದಾರೆ. ಇವರಿಗೆ ಕೊಡಗು ವುಶು ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ತರಬೇತುದಾರ ಎನ್.ಸಿ.ಸುದರ್ಶನ್ ತರಬೇತಿ ನೀಡಿದ್ದಾರೆ.
ಮಡಿಕೇರಿ ಜು.11 : ಚೆಟ್ಟಳ್ಳಿಯ ಎಸ್.ಎ.ಎಸ್ ಡಯೋಗ್ನೋಸ್ಟಿಕ್ ಕೇಂದ್ರದಲ್ಲಿ ಜು.12 ರಂದು ಮೂಳೆ ಖನಿಜಾಂಶ ಸಾಂದ್ರತೆಯ ಉಚಿತ ತಪಾಸಣಾ ಶಿಬಿರ ನಡೆಯಲಿದೆ. ಬೆಳಗ್ಗೆ 9.30 ಗಂಟೆಯಿಂದ ಮಧ್ಯಾಹ್ನ 12.30 ಗಂಟೆಯವರೆಗೆ ಶಿಬಿರ ನಡೆಯಲಿದ್ದು, 35 ವಷ೯ ಮೀರಿದ ನಾಗರಿಕರು ಶಿಬಿರದ ಪ್ರಯೋಜನ ಪಡೆದುಕೊಳ್ಳುವಂತೆ ಆಯೋಜಕರಾದ ಶ್ರೀ ಲಕ್ಷ್ಮಿ ಕ್ಲಿನಿಕ್, ಎಸ್ ಎ ಎಸ್ ಡಯೋಗ್ನೋಸ್ಟಿಕ್ ಕೇಂದ್ರ,ಎನ್. ಐ.ಎಂ.ಎ. ಕೊಡಗು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ. ಹೆಚ್ಚಿನ ಮಾಹಿತಿಗೆ 97310 23896 ಸಂಪರ್ಕಿಸಬಹುದಾಗಿದೆ.
ಬೆಂಗಳೂರು ಜು.11 : ಅಪಘಾತಗಳ ಮೂಲಕವೇ ಸುದ್ದಿಯಲ್ಲಿರುವ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಯಲ್ಲಿ ಇಲ್ಲಿಯವರೆಗೆ ನಡೆದ ಅಪಘಾತಗಳಲ್ಲಿ ಒಟ್ಟು 100 ಮಂದಿ ಮೃತಪಟ್ಟಿದ್ದಾರೆ. ಸುಮಾರು 335 ಮಂದಿ ಗಾಯಗೊಂಡಿದ್ದಾರೆ ಎಂದು ರಾಜ್ಯ ಸರ್ಕಾರ ಮಾಹಿತಿ ನೀಡಿದೆ. ವಿಧಾನಸಭಾ ಅಧಿವೇಶನದಲ್ಲಿ ರಾಜಾಜಿನಗರದ ಶಾಸಕ ಸುರೇಶ್ ಕುಮಾರ್ ಅವರ ಪ್ರಶ್ನೆಗೆ ಉತ್ತರ ನೀಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅಪಘಾತಗಳ ಕುರಿತು ವಿವರಿಸಿದರು. ಬೆಂಗಳೂರು-ಮೈಸೂರು ಹೆದ್ದಾರಿ ನಿರ್ಮಾಣ ಮಾಡಿಲ್ಲ. ಬಹಳಷ್ಟು ನ್ಯೂನತೆಗಳೊಂದಿಗೆ ದಶಪಥ ನಿರ್ಮಾಣ ಮಾಡಲಾಗಿದೆ. ರಸ್ತೆ ತಿರುವುಗಳಿಗೆ, ವೇಗ ಮಿತಿ ಇಳಿಕೆಗೆ ಯಾವುದೇ ಸೂಚನಾ ಫಲಕಗಳಿಲ್ಲ. ವೇಗವಾಗಿ ವಾಹನ ಓಡಿಸಿ ಬಂದಾಗ ಅಪಘಾತಗಳಾಗುತ್ತಿವೆ ಎಂದು ಅಭಿಪ್ರಾಯಪಟ್ಟರು.
ಮಡಿಕೇರಿ ಜು.11 : ಮಡಿಕೇರಿ ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಮುಂದಿನ ಒಂದು ವರ್ಷದ ಅವಧಿಗೆ ಬಿಜೆಪಿಯ ಎಸ್.ಸಿ.ಸತೀಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸ್ಥಾಯಿ ಸಮಿತಿ ಸದಸ್ಯರುಗಳು ಸತೀಶ್ ಅವರನ್ನು ಒಮ್ಮತದಿಂದ ಆಯ್ಕೆ ಮಾಡಿದರು. ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ, ಉಪಾಧ್ಯಕ್ಷೆ ಸವಿತಾ ರಾಕೇಶ್, ಪೌರಾಯುಕ್ತ ವಿಜಯ್ ಸೇರಿದಂತೆ ಸದಸ್ಯರುಗಳು ಸತೀಶ್ ಅವರಿಗೆ ಪುಷ್ಪಗುಚ್ಛ ನೀಡಿ ಅಭಿನಂದಿಸಿದರು. ::: ಅಭಿವೃದ್ಧಿಗೆ ಸಹಕಾರ ::: ನಗರದ 23 ವಾರ್ಡ್ಗಳ ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯ ಸಹಕಾರ ನೀಡುವುದರೊಂದಿಗೆ ಮೂಲಭೂತ ಸೌಲಭ್ಯಗಳಿಗೆ ಆದ್ಯತೆ ನೀಡುವುದಾಗಿ ಸತೀಶ್ ಇದೇ ಸಂದರ್ಭ ಭರವಸೆ ನೀಡಿದರು.
ಮಡಿಕೇರಿ ಜು.11 : ಮಡಿಕೇರಿ ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಮುಂದಿನ ಒಂದು ವರ್ಷದ ಅವಧಿಗೆ ಬಿಜೆಪಿಯ ಎಸ್.ಸಿ.ಸತೀಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸ್ಥಾಯಿ ಸಮಿತಿ ಸದಸ್ಯರುಗಳು ಸತೀಶ್ ಅವರನ್ನು ಒಮ್ಮತದಿಂದ ಆಯ್ಕೆ ಮಾಡಿದರು. ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ, ಉಪಾಧ್ಯಕ್ಷೆ ಸವಿತಾ ರಾಕೇಶ್, ಪೌರಾಯುಕ್ತ ವಿಜಯ್ ಸೇರಿದಂತೆ ಸದಸ್ಯರುಗಳು ಸತೀಶ್ ಅವರಿಗೆ ಪುಷ್ಪಗುಚ್ಛ ನೀಡಿ ಅಭಿನಂದಿಸಿದರು. ::: ಅಭಿವೃದ್ಧಿಗೆ ಸಹಕಾರ ::: ನಗರದ 23 ವಾರ್ಡ್ಗಳ ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯ ಸಹಕಾರ ನೀಡುವುದರೊಂದಿಗೆ ಮೂಲಭೂತ ಸೌಲಭ್ಯಗಳಿಗೆ ಆದ್ಯತೆ ನೀಡುವುದಾಗಿ ಸತೀಶ್ ಇದೇ ಸಂದರ್ಭ ಭರವಸೆ ನೀಡಿದರು.






