ಮಡಿಕೇರಿ ಜು.11 : ಮಳೆಯಿಂದ ತೀರ ಹದಗೆಟ್ಟಿದ್ದ ಮಾಂದಲಪಟ್ಟಿ ವ್ಯೂ ಪಾಯಿಂಟ್ ರಸ್ತೆಯನ್ನು ನಂದಿಮೊಟ್ಟೆ ಜೀಪು ಚಾಲಕರ ಹಾಗೂ ಮಾಲೀಕರ ಸಂಘದ ವತಿಯಿಂದ ಶ್ರಮದಾನ ಮೂಲಕ ಕಲ್ಲು ಮಣ್ಣು ಹಾಕಿ ದುರಸ್ತಿಪಡಿಸಲಾಯಿತು. ಈ ಸಂದರ್ಭ ಚಾಲಕರಾದ ಶರಣು ಅಯ್ಯಪ್ಪ, ಪುಷ್ಪರಾಜ್, ಮನು , ದರ್ಶನ್, ಚರಣ್ ಮತ್ತಿತರರು ಶ್ರಮದಾನದಲ್ಲಿ ಪಾಲ್ಗೊಂಡಿದ್ದರು.
ಲೇಖಕ: admin
ಮಡಿಕೇರಿ ಜು.11 : ಎರಡು ಕುರಿಗಳ ಮೇಲೆ ಚಿರತೆ ದಾಳಿ ಮಾಡಿದ ಘಟನೆ ಹುಣಸೂರು ತಾಲ್ಲೂಕಿನ ರಾಮಪಟ್ಟಣದಲ್ಲಿ ನಡೆದಿದೆ. ಒಂದು ಕುರಿ ಸಾವನ್ನಪ್ಪಿದ್ದು, ಮತ್ತೊಂದು ಕುರಿಗೆ ಗಾಯಗಳಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಭೇಟಿ ನೀಡಿದ್ದು, ಚಿರತೆ ಸೆರೆಗೆ ಕ್ರಮ ಕೈಗೊಂಡಿದ್ದಾರೆ.
ಕುಶಾಲನಗರ, ಜು.11: ಉತ್ತರ ಕೊಡಗಿನ ಕೂಡಿಗೆ ಕ್ಲಸ್ಟರ್ ವ್ಯಾಪ್ತಿಯ ಕೂಡುಮಂಗಳೂರು (ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಚುನಾವಣಾ ಅರಿವು ಮೂಡಿಸಲು ಹಾಗೂ ವಿದ್ಯಾರ್ಥಿ ಸಂಘದ ರಚನೆಗಾಗಿ ಶಾಲಾ ಮತದಾರರ ಸಾಕ್ಷರತಾ ಕ್ಲಬ್ ವತಿಯಿಂದ ವಿದ್ಯಾರ್ಥಿಗಳಿಗೆ ಶಾಲಾ ಸಂಸತ್ ಚುನಾವಣೆ ನಡೆಸಲಾಯಿತು. ವಿದ್ಯಾರ್ಥಿಗಳು ಪ್ರಜಾಪ್ರಭುತ್ವ ವ್ಯವಸ್ಥೆ ಹಾಗೂ ಭಾರತೀಯ ಚುನಾವಣಾ ಆಯೋಗದ ಮಾರ್ಗಸೂಚಿಯನ್ವಯ ನಡೆಯಲಿರುವ ಸಾರ್ವಜನಿಕ ಚುನಾವಣೆ ಮಾದರಿಯಲ್ಲಿ ಶಾಲೆಯಲ್ಲಿ ಸಂಸತ್ತು ಚುನಾವಣೆ ಭಾಗಬಹಿಸಿದ್ದರು. ಶಾಲಾ ಮುಖ್ಯೋಪಾಧ್ಯಾಯ ಟಿ.ಜಿ.ಪ್ರೇಮಕುಮಾರ್, ಮತಗಟ್ಟೆಯ ಅಧ್ಯಕ್ಷಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದರು. ವಿದ್ಯಾರ್ಥಿ ಸಂಘದ ರೆಕ್ಟರ್ , ಸಾಕ್ಷರತಾ ಕ್ಲಬ್ ನ ಉಸ್ತುವಾರಿ ಶಿಕ್ಷಕಿ ಎಸ್.ಎಂ.ಗೀತಾ, ಶಿಕ್ಷಕ ಕೆ.ಗೋಪಾಲಕೃಷ್ಣ, ದಯಾನಂದ ಪ್ರಕಾಶ್, ಬಿ.ಡಿ.ರಮ್ಯ, ಬಿ.ಎಸ್.ಅನ್ಸಿಲಾ ರೇಖಾ ಮತಗಟ್ಟೆ ಅಧಿಕಾರಿಗಳಾಗಿ ಕಾರ್ಯನಿರ್ವಹಿಸಿದರು. ಮಕ್ಕಳು ಇವಿಎಂ ಮತಯಂತ್ರದ ಮೂಲಕ ಮತ ಚಲಾಯಿಸಿ ಶಾಲಾ ಸಂಸತ್ತಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಿರುವುದು ಎಲ್ಲರ ಗಮನ ಸೆಳೆಯಿತು. ಶಾಲಾ ಸಂಸತ್ತು ರಚನೆ ಮಾಡಿ ಚುನಾವಣೆ ಪ್ರಕ್ರಿಯೆ ಅರಿತುಕೊಳ್ಳಲು ಅತ್ಯಾಧುನಿಕ ತಂತ್ರಜ್ಞಾನ ಹಾಗೂ ವೈಜ್ಞಾನಿಕ ಉಪಕರಣಗಳ ಬಳಕೆಯ ಮೂಲಕ…
ಮಡಿಕೇರಿ ಜು.11 : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ರಜತ ಮಹೋತ್ಸವ ಸಮಿತಿ ಹಾಗೂ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಇವರ ಸಹಯೋಗದಲ್ಲಿ ರಾಜ್ಯದ ಪತ್ರಕರ್ತರ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಮಣಿಪಾಲದ ಕೆಎಂಸಿ ಆಸ್ಪತ್ರೆಯ ಡಾ.ಟಿಎಂಎ ಪೈ ಆಡಿಟೋರಿಯಂನಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಮಣಿಪಾಲ ಮಾಹೆ ಸಹಕುಲಾಧಿಪತಿ ಡಾ.ಎಚ್.ಎಸ್.ಬಲ್ಲಾಳ್ ಉದ್ಘಾಟಿಸಿದರು. ಕರ್ನಾಟಕದ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಅವರು ರಾಜ್ಯದ ವಿವಿಧ ಜಿಲ್ಲೆಗಳ ಪತ್ರಕರ್ತರ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಿದರು. ಕೊಡಗು ಜಿಲ್ಲೆಯಿಂದ ಎಸ್.ಎಸ್.ಎಲ್.ಸಿಯಲ್ಲಿ ಸಾಧನೆ ತೋರಿದ ವಿದ್ಯಾರ್ಥಿನಿ ಮಡಿಕೇರಿಯ ಬಿ.ಎಸ್.ರಫೀಕ್ ಅಹಮದ್ ಅವರ ಪುತ್ರಿ ರಿದಾ ಸುಮನ್ ಬಿ.ಆರ್(98.4) ಹಾಗೂ ಪಿ.ಯು.ಸಿಯಲ್ಲಿ ಸಾಧನೆಗೈದ ವಿದ್ಯಾರ್ಥಿನಿ ಕುಶಾಲನಗರದ ಕುಡೆಕಲ್ ಗಣೇಶ್ ಅವರ ಪುತ್ರಿ ಶಿವಾನಿ ಕೆ.ಜಿ(93.87) ಸನ್ಮಾನಕ್ಕೆ…
ನಾಪೋಕ್ಲು ಜು.11 : ನಾಪೋಕ್ಲು ಗ್ರಾ.ಪಂ ಗೆ ಒಳಪಟ್ಟ ಚೆರಿಯ ಪರಂಬು ಗ್ರಾಮದಲ್ಲಿ ರಸ್ತೆಯನ್ನು ಹಗೆದು ಅವೈಜ್ಞಾನಿಕವಾಗಿ ಚರಂಡಿ ನಿರ್ಮಾಣ ಮಾಡಿ ಮಾಡಿದ್ದಾರೆಂದು ಆರೋಪಿಸಿ ಗ್ರಾಮಸ್ಥರು ಪಂಚಾಯಿತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂದರ್ಭ ಮಾತನಾಡಿದ ಗ್ರಾಮಸ್ಥ ಅಬ್ದುಲ್ ಕರೀಮ್ ಕಳೆದ ಹಲವಾರು ವರ್ಷಗಳಿಂದ ಚೆರಿಯಪರಂಬು ಗ್ರಾಮಕ್ಕೆ ಯಾವುದೇ ರೀತಿಯ ಮೂಲಭೂತ ಸೌಕರ್ಯವನ್ನು ಒದಗಿಸಲು ಪಂಚಾಯಿತಿ ವಿಫಲವಾಗಿದೆ. ಗ್ರಾಮಕ್ಕೆ ತೆರಳುವ ಮುಖ್ಯ ರಸ್ತೆಗೆ ಪರ್ಯಾಯ ಚರಂಡಿ ವ್ಯವಸ್ಥೆ ನಿರ್ಮಿಸದೆ ಇರುವ ಕಾರಣ ಪಟ್ಟಣದ ಮಾರುಕಟ್ಟೆ ಹಾಗೂ ಪದವಿ ಪೂರ್ವ ಕಾಲೇಜು ಕಡೆಯಿಂದ ಬರುವ ಕೆಸರು ಮಿಶ್ರಿತ ಮಳೆ ನೀರು ನಮ್ಮ ಗ್ರಾಮಕ್ಕೆ ತೆರಳುವ ರಸ್ತೆಯಲ್ಲೇ ಮದ್ಯದಲ್ಲೇ ಹರಿಯುತ್ತಿದೆ.ಇದರಿಂದ ಬರುವ ಮಣ್ಣು ರಸ್ತೆಯಲ್ಲೇ ಶೇಖರಣೆಗೊಂಡು ಶಾಲಾ ಮಕ್ಕಳು ಹಾಗೂ ಸಾರ್ವಜನಿಕರು ಸಂಚರಿಸಲು ಭವಣೆ ಪಡುವ ಪರಿಸ್ಥಿತಿನಿರ್ಮಾಣವಾಗಿದೆ.ಇದನ್ನು ದುರಸ್ಥಿ ಪಡಿಸಲು ಕೆಲವು ದಿನಗಳ ಹಿಂದೆ ಪಂಚಾಯಿತಿಯ ಗಮನಕ್ಕೆ ತಂದ ಹಿನ್ನಲೆ ಶನಿವಾರ ಚರಂಡಿ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಆದರೆ ರಸ್ತೆಯನ್ನೇ ಹಗೆದು ಅವೈಜ್ಞಾನಿಕವಾಗಿ ಚರಂಡಿ ನಿರ್ಮಿಸುತ್ತಿರುವ…
ಮಡಿಕೇರಿ ಜು.11 : ಸಿದ್ದಾಪುರ ಗುಹ್ಯ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯ ಪಕ್ಕದಲ್ಲಿ ಇರುವ ಏಂಜಲ್ ಫೀಡ್ ಜ್ಯೋತಿ ಪೊನ್ನಪ್ಪ ಅವರ ತೋಟದಲ್ಲಿ ಹಾಡಹಗಲೇ ಧಿಡೀರನೆ ಆನೆ ಪ್ರತ್ಯಕ್ಷಗೊಂಡು ಆತಂಕ ಸೃಷ್ಟಿಸಿದೆ. ಇತ್ತೀಚೆಗೆ ಗುಹ್ಯ ಗ್ರಾಮದಲ್ಲಿ ಕಾಡಾನೆ ಹಾವಳಿ ಹೆಚ್ಚಾಗಿದ್ದು, ಕೂಲಿ ಕಾರ್ಮಿಕರು, ಶಾಲಾ ಮಕ್ಕಳು ಪರದಾಡುವಂತಾಗಿದೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ. ಅರಣ್ಯ ಇಲಾಖೆ ತಕ್ಷಣವೆ ಆನೆಗಳನ್ನು ಕಾಡಿಗಟ್ಟುವ ಕೆಲಸ ಆಗಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ವರದಿ : ಗುಹ್ಯಸುರೇಶ್
ಸೋಮವಾರಪೇಟೆ ಜು.11 : ತಾಲ್ಲೂಕು ಕಚೇರಿಯಲ್ಲಿ ಕೆಲ ಅಧಿಕಾರಿಗಳು ಸಿಬ್ಬಂದಿಗಳಿಂದ ರೈತರ ಶೋಷಣೆ ಆಗುತ್ತಿದೆ ಎಂದು ಆರೋಪಿಸಿರುವ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸಾರ್ವಜನಿಕರು ಹಾಗೂ ರೈತರು ತಕ್ಷಣವೇ ಅಧಿಕಾರಿಗಳನ್ನು ವರ್ಗಾವಣೆಗೊಳಿಸುವಂತೆ ಆಗ್ರಹಿಸಿದ್ದಾರೆ. ಸಾಮಾಜಿಕ ಹೋರಾಟಗಾರ ಬಿ.ಪಿ.ಅನಿಲ್ ಕುಮಾರ್, ರೈತ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ಲಿಂಗೇರಿ ರಾಜೇಶ್, ಕರವೇ ತಾಲ್ಲೂಕು ಅಧ್ಯಕ್ಷ ಫ್ರಾನ್ಸಿಸ್ ಡಿಸೋಜ, ಕಾಫಿ ಬೆಳೆಗಾರರ ಹೋರಾಟ ಸಮಿತಿ ಅಧ್ಯಕ್ಷ ಎಂ.ಸಿ.ಮುದ್ದಪ್ಪ ಹಾಗೂ ರೈತ ಮುಖಂಡರ ನೇತೃತ್ವದಲ್ಲಿ ಸೋಮವಾರಪೇಟೆ ತಾಲ್ಲೂಕು ಆಡಳಿತ ಸೌಧ ಜಮಾಯಿಸಿದ ಪ್ರತಿಭಟನಕಾರರು ಕಂದಾಯ ಇಲಾಖೆಯ ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು. ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಬರುವಂತೆ ಪಟ್ಟು ಹಿಡಿದರು. ಅರ್ಧ ಗಂಟೆಗಳ ಕಾಲ ತಹಶೀಲ್ದಾರ್ ಸ್ಥಳಕ್ಕೆ ಬರದೆ ಇದ್ದಾಗ, ಆಕ್ರೋಶಗೊಂಡ ಪ್ರತಿಭಟನಾಕಾರರು ಕಚೇರಿಗೆ ಬೀಗ ಜಡಿಯುವುದಾಗಿ ಎಚ್ಚರಿಕೆ ನೀಡಿದರು. ಇನ್ಸ್ಪೆಕ್ಟರ್ ರಾಮಚಂದ್ರನಾಯಕ್ ತಹಸೀಲ್ದಾರ್ರನ್ನು ಕರೆತಂದರು. ಪೊಲೀಸ್ ಬಂದೋಬಸ್ತ್ನಲ್ಲಿ ಪ್ರತಿಭಟನಾಕಾರರ ಅಹವಾಲು ಆಲಿಸಿದರು. ಕಚೇರಿಯಲ್ಲಿ ನಡೆಯುತ್ತಿರುವ ಅವ್ಯವಹಾರಗಳು, ಬ್ರೋಕರ್ಗಳ ಹಾವಳಿ, ಬಡ ರೈತರ ಪೋಡಿ ದುರಸ್ತಿ…
ನಾಪೋಕ್ಲು ಜು.10 : ಕಾಡಾನೆಗಳ ನಿರಂತರ ಉಪಟಳದಿಂದ ಬೇಸತ್ತ ಸಮೀಪದ ಚೆಯ್ಯಂಡಾಣೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಸ್ಥರು ಸೋಮವಾರ ವಿರಾಜಪೇಟೆ – ನಾಪೋಕ್ಲು ಮುಖ್ಯ ರಸ್ತೆಯ ಚೆಯ್ಯಂಡಾಣೆಯಲ್ಲಿ ರಸ್ತೆ ತಡೆ ಪ್ರತಿಭಟನೆ ನಡೆಸಿದರು. ಕಾಡಾನೆಗಳ ಉಪಟಳದಿಂದ ಬೇಸತ್ತ ಗ್ರಾಮಸ್ಥರು ಚೆಯ್ಯಂಡಾಣೆ-ನಾಪೋಕ್ಲು ಮುಖ್ಯರಸ್ತೆಯಲ್ಲಿ ಅರಣ್ಯ ಇಲಾಖೆಯ ವಿರುದ್ಧ ಪ್ರತಿಭಟನೆ ನಡೆಸಿದರು. ಬೆಳಿಗ್ಗೆ 10 ಗಂಟೆಯಿಂದ 12 ಗಂಟೆ ವರೆಗೆ ಎರಡು ಗಂಟೆಗಳ ಕಾಲ ಸಂಪರ್ಕ ರಸ್ತೆಯನ್ನು ಸಂಪೂರ್ಣ ಬಂದ್ ಮಾಡಿ ಅರಣ್ಯ ಇಲಾಖೆಯ ವಿರುದ್ಧ ಧಿಕ್ಕಾರ ಕೂಗಿದರು. ಪ್ರತಿಭಟನಾ ಸ್ಥಳಕ್ಕೆ ಅಧಿಕಾರಿಗಳು ಆಗಮಿಸುವಂತೆ ಪಟ್ಟು ಹಿಡಿದರು. ಕಾಡಾನೆಗಳ ನಿರಂತರ ಧಾಳಿಯಿಂದ ಕಾಫಿ, ಬಾಳೆ, ಅಡಿಕೆ ತೋಟಗಳು ನಾಶವಾಗುತ್ತಿವೆ. ಭತ್ತದ ಗದ್ದೆಗಳಲ್ಲಿ ಕೃಷಿ ಮಾಡಲು ಸಾಧ್ಯವಾಗುತ್ತಿಲ್ಲ.ಕಾರ್ಮಿಕರು ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ವನ್ಯಜೀವಿ ದಾಳಿಯಿಂದ ಗ್ರಾಮಸ್ಥರು ನಲುಗುತ್ತಿದ್ದರೂ ಅರಣ್ಯ ಇಲಾಖೆಯ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದರು. ಅಧಿಕಾರಿಗಳು ಕೃಷಿಕರ ಸಮಸ್ಯೆಗೆ ಸ್ಪಂದಿಸಬೇಕು ಮತ್ತು 10 ಆನೆಗಳ ಸ್ಥಳಾಂತರಕ್ಕೆ ಮೇಲಧಿಕಾರಿಗಳ ಅನುಮತಿ ಪಡೆದು ತಕ್ಷಣ…
ಮಡಿಕೇರಿ ಜು.10 : ರೋಟರಿ ಮಡಿಕೇರಿ ವುಡ್ಸ್ ನ 2023-24 ನೇ ಸಾಲಿನ ನೂತನ ಅಧ್ಯಕ್ಷ ರೋಟರಿಯನ್ ಕೆ.ವಸಂತ ಕುಮಾರ್ ಹಾಗೂ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಜು.12 ರಂದು ನಡೆಯಲಿದೆ. ಅಂದು ಸಂಜೆ 6.30 ಗಂಟೆಗೆ ಮಡಿಕೇರಿ ರೋಟರಿ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸಂಸ್ಥೆಯ ಜಿಲ್ಲಾ ಯೋಜನಾ ಜಿಲ್ಲಾಧ್ಯಕ್ಷ ರೋಟರಿಯನ್ ಸತೀಶ್ ಬೋಳಾರ್, ರೋಟರಿ ವಲಯ 6ರ ಸಹಾಯಕ ಗವರ್ನರ್ ರೋಟರಿಯನ್ ಡಿ.ಎಂ.ತಿಲಕ್ ಪೊನ್ನಪ್ಪ ಹಾಗೂ ವಲಯ ಸೇನಾನಿ ಎಸ್.ಎಸ್.ಸಂಪತ್ ಕುಮಾರ್ ಪಾಲ್ಗೊಳ್ಳಲಿದ್ದಾರೆ.
ಮಡಿಕೇರಿ ಜು.10 : ಕೊಡಗು ಜಿಲ್ಲೆಯಲ್ಲಿ ನಿರಂತರವಾಗಿರುವ ವಿದ್ಯುತ್ ಸಮಸ್ಯೆಯನ್ನು ಪರಿಹರಿಸುವಂತೆ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ಕೊಡಗು ಜಿಲ್ಲಾ ಘಟಕ ಮಡಿಕೇರಿಯ ಚೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿತು. ನಗರದಲ್ಲಿ ಮೆರವಣಿಗೆ ಮೂಲಕ ಸಾಗಿದ ಪ್ರತಿಭಟನಾಕಾರರು ಚೆಸ್ಕಾಂ ನಿಗಮದ ವಿರುದ್ಧ ಘೋಷಣೆಯನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು. ಏಕಾಏಕಿ ವಿದ್ಯುತ್ ಬಿಲ್ ಏರಿಕೆ ಮಾಡುವ ಮೂಲಕ ನಷ್ಟದಲ್ಲಿರುವ ರೈತರು ಮತ್ತು ಬೆಳೆಗಾರರ ನೋವಿನ ಮೇಲೆ ಬರೆ ಎಳೆಯಲಾಗುತ್ತಿದೆ. ತಕ್ಷಣವೇ ವಿದ್ಯುತ್ ಬಿಲ್ ಅನ್ನು ಇಳಿಕೆ ಮಾಡಬೇಕು. ಈ ಸಮಸ್ಯೆ ನಿವಾರಣೆಗೆ ರಾಜ್ಯ ಸರಕಾರ ಮಧ್ಯ ಪ್ರವೇಶ ಮಾಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು. ಈ ಸಂದರ್ಭ ಮಾತನಾಡಿದ ರೈತ ಸಂಘದ ಜಿಲ್ಲಾಧ್ಯಕ್ಷ ಕಾಡ್ಯಮಾಡ ಮನು ಸೋಮಯ್ಯ, ಜಿಲ್ಲೆಯಲ್ಲಿ ನಿರಂತರವಾಗಿ ವಿದ್ಯುಚ್ಚಕ್ತಿ ಸಮಸ್ಯೆ ತಲೆದೋರಿದೆ. ಕಳೆದ 20 ವರ್ಷಗಳಿಂದ ಎದುರಾಗಿರುವ ಸಮಸ್ಯೆಗೆ ಇಂದಿಗೂ ಪರಿಹಾರ ದೊರೆತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ತೋಟಗಳಲ್ಲಿ ಜಂಗಲ್ ಕ್ಲಿಯರಿಂಗ್ ಮಾಡದೇ ಇರುವುದರಿಂದ…






