ಸೋಮವಾರಪೇಟೆ ಆ.10 : ಹಾನಗಲ್ಲು ಗ್ರಾ.ಪಂ ಯ 2ನೇ ಅವಧಿಯ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಯಶಾಂತ್ಕುಮಾರ್, ಉಪಾಧ್ಯಕ್ಷರಾಗಿ ರೇಣುಕಾ ವೆಂಕಟೇಶ್ ಅವರುಗಳು ಆಯ್ಕೆಯಾದರು. 12 ಸದಸ್ಯ ಬಲದ ಗ್ರಾ.ಪಂ.ನಲ್ಲಿ ವಿಜೇತರು ತಲಾ 7 ಮತಗಳನ್ನು ಪಡೆದರು. ಕಾಂಗ್ರೆಸ್ ಬೆಂಬಲಿತ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಮಿಥುನ್ ಹಾನಗಲ್ ಹಾಗು ಅನ್ನಪೂರ್ಣ ತಲಾ 5 ಮತಗಳನ್ನು ಪಡೆದು ಪರಾಜಯಗೊಂಡರು. ಚುನಾವಣಾಧಿಕಾರಿಯಾಗಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಾಚಪ್ಪ ಚುನಾವಣಾ ಪ್ರಕ್ರಿಯೆ ನಡೆಸಿದರು. ಕಳೆದ ಬಾರಿ ಕಾಂಗ್ರೆಸ್ ಬೆಂಬಲಿತ ಸದಸ್ಯರು ಅಧಿಕಾರಿ ನಡೆಸಿದ್ದರು. ಈ ಬಾರಿ ಆಡಳಿತ ಬಿಜೆಪಿ ತೆಕ್ಕೆಗೆ ಬಂದಿದ್ದು, ಸ್ಥಳೀಯ ಮುಖಂಡರು, ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು. ಗ್ರಾ. ಪಂ. ಸದಸ್ಯರುಗಳಾದ ಲಕ್ಷ್ಮೀ ಪಾಂಡಿಯನ್, ಕೆ.ಎಸ್. ಪ್ರಕಾಶ್, ಸುದೀಪ್, ಬಿ.ಎಸ್. ಸುರೇಶ್, ರಘು, ಜಿ. ವಿಜಯ ಚುನಾವಣೆಯಲ್ಲಿ ಭಾಗವಹಿಸಿದ್ದರು. ಬಿಜೆಪಿ ಮುಖಂಡರಾದ ಬಿ.ಜೆ. ದೀಪಕ್, ಮಹೇಶ್ ತಿಮ್ಮಯ್ಯ, ಜಗದೀಶ್ ಹಾಜರಿದ್ದರು.
ಲೇಖಕ: admin
ಮಡಿಕೇರಿ ಆ.9 : ನಗರದ ದಾಸವಾಳ ಬಡಾವಣೆಯಲ್ಲಿ ನೂತನವಾಗಿ ನಿರ್ಮಿಸಲು ಉದ್ದೇಶಿಸಿರುವ ಉದ್ಯಾನವನ ಯೋಜನೆಯನ್ನು ಶೀಘ್ರ ಪೂರ್ಣಗೊಳಿಸಬೇಕೆಂದು ಮಡಿಕೇರಿ ನಗರ ಕಾಂಗ್ರೆಸ್ ಮಹಿಳಾ ಘಟಕದ ನಗರಾಧ್ಯಕ್ಷೆ ಹೊಟ್ಟೆಯಂಡ ಫ್ಯಾನ್ಸಿ ಪಾರ್ವತಿ ಬೆಳ್ಯಪ್ಪ ಮನವಿ ಮಾಡಿದ್ದಾರೆ. ಉದ್ದೇಶಿತ ಯೋಜನೆಯ ಸ್ಥಳಕ್ಕೆ ಭೇಟಿ ನೀಡಿದ್ದ ಅವರು ಅಲ್ಲಿನ ಅವ್ಯವಸ್ಥೆಯನ್ನು ಕಂಡು ಬೇಸರ ವ್ಯಕ್ತಪಡಿಸಿದರು. ಮಾಜಿ ಶಾಸಕ ಎಂ.ಪಿ.ಅಪಚ್ಚು ರಂಜನ್ ಅವರು 2022 ಮೇ ತಿಂಗಳಿನಲ್ಲಿ ಉದ್ಯಾನವನ ನಿರ್ಮಾಣಕ್ಕಾಗಿ ಭೂಮಿಪೂಜೆ ನೆರವೇರಿಸಿದ್ದರು. ಅಂದಿನ ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು ಸುಂದರವಾದ ಉದ್ಯಾನವನ ನಿರ್ಮಿಸಬೇಕೆಂದು ಯೋಜನೆಗೆ ಅನುಮೋದನೆ ನೀಡಿದ್ದರು. ಆದರೆ ಭೂಮಿಪೂಜೆ ನೆರವೇರಿಸಿ ಒಂದು ವರ್ಷ ಕಳೆದಿದ್ದರೂ ಇಲ್ಲಿಯವರೆಗೆ ಉದ್ಯಾನವನ ನಿರ್ಮಾಣಗೊಂಡಿಲ್ಲ. ಸುಮಾರು 15 ಲಕ್ಷ ರೂ. ವೆಚ್ಚದಲ್ಲಿ ತಡೆಗೋಡೆ ಮತ್ತು ಬೇಲಿ ಮಾತ್ರ ನಿರ್ಮಿಸಿ ಕಾಮಗಾರಿಯನ್ನು ಅಪೂರ್ಣಗೊಳಿಸಲಾಗಿದೆ ಎಂದು ಆರೋಪಿಸಿದರು. ಇದೀಗ ನೂತನ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರ ಗಮನ ಸೆಳೆಯುವುದಾಗಿ ತಿಳಿಸಿದರು. ನಗರದ ಸೌಂದರ್ಯದ ಹಿತದೃಷ್ಟಿಯಿಂದ ಮತ್ತು…
ಮಡಿಕೇರಿ ಜು.9 : ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಜಿಲ್ಲಾಧ್ಯಕ್ಷರಾಗಿ ಎಂ.ಜಿ.ಅಜಿತ್ ಕುಮಾರ್ ಅವರನ್ನು ನೇಮಕಮಾಡಲಾಗಿದೆ ಎಂದು ಪಕ್ಷದ ಜಿಲ್ಲಾ ಉಸ್ತುವಾರಿ ಹಾಗೂ ರಾಜ್ಯ ಸಂಘಟನಾ ಕಾರ್ಯದರ್ಶಿ ಕೇಶವ್ ಮೂರ್ತಿ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂದು ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ಹೆಚ್ಚಾಗಿ ಕಂಡುಬರುತ್ತಿದ್ದು, ಇದನ್ನು ತೆಡೆಗಟ್ಟುವ ಸಲುವಾಗಿ ಕೆ.ಆರ್.ಎಸ್ ಪಕ್ಷ ತೊಡಗಿಸಿಕೊಂಡಿದೆ. ಜಿಲ್ಲಾದ್ಯಂತ ಪಕ್ಷವನ್ನು ಸದೃಢವಾಗಿ ಸಂಘಟಿಸುವ ಹಿನ್ನೆಲೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಿದರು. ಉಪಾಧ್ಯಕ್ಷರಾಗಿ ಸಿ.ಜೆ.ಸತೀಶ್, ಪ್ರಧಾನ ಕಾರ್ಯದರ್ಶಿ ಎಚ್.ಡಿ.ದಿಲೀಪ್ ಕುಮಾರ್, ಕಾರ್ಯದರ್ಶಿಯಾಗಿ ಎನ್.ಬಿ.ಪ್ರದೀಪ್, ಎನ್.ಜೆ.ಗಿರೀಶ್ ಕುಮಾರ್, ಎನ್.ಎಸ್.ರಾಜಶೇಖರ್ ಗೌಡ, ಎ.ಎ.ಹುಸೇನ್ ಆಲೀರ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು. ಈಗಾಗಲೇ 100ಕ್ಕೂ ಅಧಿಕ ಯುವಕರು ಪಕ್ಷದ ಸದಸ್ಯತ್ವ ಪಡೆದುಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ವಿಧಾನಸಭೆಗೆ ನಮ್ಮ ಪಕ್ಷದ ಕಾರ್ಯಕರ್ತರನ್ನು ಆಯ್ಕೆ ಮಾಡಿ ಭ್ರಷ್ಟಾಚಾರ ಮುಕ್ತವಾಗಿಸಲು ಜನತೆ ಸಹಕರಿಸಬೇಕು ಎಂದು ಮನವಿ ಮಾಡಿದರು. ಪಕ್ಷದ ನೂತನ ಜಿಲ್ಲಾಧ್ಯಕ್ಷ ಎಂ.ಜಿ.ಅಜಿತ್ ಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ಸಾಕಷ್ಟು…
ಮಡಿಕೇರಿ ಆ.9 : ಡಿವೈನ್ ಪಾರ್ಕ್ ಟ್ರಸ್ಟ್(ರಿ)ಸಾಲಿಗ್ರಾಮ ಅಂಗಸಂಸ್ಥೆಗಳಾದ ವಿವೇಕ ಜಾಗೃತ ಬಳಗ ಮಡಿಕೇರಿ, ಮೂರ್ನಾಡು, ಕುಶಾಲನಗರ, ಸೋಮವಾರಪೇಟೆ ಬಳಗದ ವತಿಯಿಂದ ಆ.12ರಂದು “ಯೋಗ ಪರ್ಯಟನ’ ಕಾರ್ಯಕ್ರಮ ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾರ್ಯಕ್ರಮದ ಸಂಚಾಲಕ ಡಿ.ಎಸ್.ಯಶವಂತ್, ಅಂದು ಬೆಳಿಗ್ಗೆ 11 ಗಂಟೆಗೆ ಮೂರ್ನಾಡುವಿನ ಗೌಡ ಸಮಾಜದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಸರ್ವಕ್ಷೇಮ ಆಸ್ಪತ್ರೆ ಮತ್ತು ಸಂಶೋಧನಾ ಮತ್ತು ಪ್ರಕೃತಿ ಚಿಕಿತ್ಸೆ ಆಯುರ್ವೇದ ಆಸ್ಪತ್ರೆಯ ಮುಖ್ಯಸ್ಥ ಡಾ.ವಿವೇಕ ಉಡುಪ ದಿವ್ಯ ಉಪಸ್ಥಿತರಿರಲಿದ್ದಾರೆ ಎಂದರು. ಕಾರ್ಯಕ್ರಮಕ್ಕೆ ಬಳಗದ ಸದಸ್ಯರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದ ಅವರು, ಸಾಂಸಾರಿಕ ಭಿನ್ನಭಿಪ್ರಾಯಗಳು, ಯುವ ಜನತೆಯಲ್ಲಿ ನಡೆಯುವ ಸಂದಿಗ್ನ ಪರಿಸ್ಥಿತಿಗಳು ಸೇರಿದಂತೆ ಸರ್ವ ಸಮಸ್ಯೆಗಳನ್ನು ಆಧ್ಯಾತ್ಮದ ಜಾಗೃತಿ ಮೂಡಿಸುವುದು ಮತ್ತು ಯೋಗದಿಂದ ಮಾತ್ರ ಉಪಶಮನ ಮಾಡಲು ಸಾಧ್ಯ ಎಂದರು. ವ್ಯಕ್ತಿತ್ವ ನಿರ್ಮಾಣ ಹಾಗೂ ಲೋಕೋದ್ದಾರದ ಪವಿತ್ರ ಗುರಿಯನ್ನು ಡಿವೈನ್ ಪಾರ್ಕ್ ಹೊಂದಿದೆ. ಎಲ್ಲರೂ ಸುಖ ಶಾಂತಿಯಿಂದ ಜೀವನ ನಡೆಸುವಂತೆ ಮಾಡುವುದು…
ಬೆಂಗಳೂರು : ಮುಖ್ಯಮಂತ್ರಿಸಿದ್ದರಾಮಯ್ಯ ಅವರು ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು, ಕುಟುಂಬದವರಿಗೆ ಸಾಂತ್ವನ ಹೇಳಿದರು. ಈ ಸಂದರ್ಭ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಹಾಜರಿದ್ದರು.
ಮಡಿಕೇರಿ ಆ.9 : ಪ್ರಧಾನಮಂತ್ರಿ ಅವರ 15 ಅಂಶಗಳ ಕಾರ್ಯಕ್ರಮಗಳ ಅನುಷ್ಠಾನ ಸಂಬಂಧ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಅಲ್ಪಸಂಖ್ಯಾತರಿಗಾಗಿ ಇರುವ ಸರ್ಕಾರದ ಕಾರ್ಯಕ್ರಮಗಳನ್ನು ತಲುಪಿಸುವಲ್ಲಿ ಎಲ್ಲಾ ಇಲಾಖೆ ಹಂತದ ಅಧಿಕಾರಿಗಳು ಶ್ರಮಿಸಬೇಕಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದರು. ವಿವಿಧ ಇಲಾಖೆ ವ್ಯಾಪ್ತಿಯಲ್ಲಿ ಅಲ್ಪಸಂಖ್ಯಾತರಿಗಾಗಿ ಇರುವ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಕಿರುಹೊತ್ತಿಗೆ ಮುದ್ರಣ ಮಾಡಿ ಎಲ್ಲೆಡೆ ವಿತರಿಸಿ ಹೆಚ್ಚಿನ ಜಾಗೃತಿ ಮೂಡಿಸುವಂತೆ ಜಿಲ್ಲಾಧಿಕಾರಿ ಸಲಹೆ ಮಾಡಿದರು. ಪ್ರಸಕ್ತ ಸಾಲಿನಲ್ಲಿ ವಿವಿಧ ಇಲಾಖೆಗಳಿಗೆ ಅಲ್ಪಸಂಖ್ಯಾತರಿಗಾಗಿ ಬಿಡುಗಡೆಯಾಗುವ ಅನುದಾನವನ್ನು ಸಮರ್ಪಕವಾಗಿ ತಲುಪಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದರು. ಸಮಿತಿ ಸದಸ್ಯರಾದ ಕೆ.ಟಿ.ಬೇಬಿಮ್ಯಾಥ್ಯೂ ಅವರು ಮಾಹಿತಿ ನೀಡಿ ಸರ್ಕಾರದಿಂದ ಅಲ್ಪಸಂಖ್ಯಾತರಿಗಾಗಿ ಸಾಕಷ್ಟು ಕಾರ್ಯಕ್ರಮಗಳು ಇದ್ದು, ಕಾರ್ಯಕ್ರಮಗಳ ಬಗ್ಗೆ ಹೆಚ್ಚಿನ ಮಾಹಿತಿ ದೊರೆಯುವಂತಾಗಬೇಕು. ಆ ನಿಟ್ಟಿನಲ್ಲಿ ಜಿಲ್ಲೆಯ 5 ತಾಲ್ಲೂಕುಗಳಲ್ಲಿಯೂ ವಿಶೇಷ ಕಾರ್ಯಾಗಾರ ಏರ್ಪಡಿಸುವಂತಾಗಬೇಕು ಎಂದು ಕೋರಿದರು. ಈ ಸಂದರ್ಭದಲ್ಲಿ ಮಾತನಾಡಿದ ಮತ್ತೊಬ್ಬ…
ಮಡಿಕೇರಿ ಆ.9 : ಗಾಳಿಬೀಡು ಜವಾಹರ ನವೋದಯ ವಿದ್ಯಾಲಯದಲ್ಲಿ ಪರಮಾಣು ಜ್ಯೋತಿ ಕಾರ್ಯಕ್ರಮ ನಡೆಯಿತು. ಮುಂಬಯಿ ಬಾಬಾ ಅಣುಶಕ್ತಿ ಸಂಶೋಧನಾ ಕೇಂದ್ರ(ಬಾರ್ಕ್) ಇಲ್ಲಿಂದ ಬಂದ ಪರಮಾಣು ವಿಜ್ಞಾನಿಗಳಾದ ಜಸರಾಜ್ ವೈಷ್ಣವ ಮತ್ತು ಊರ್ವಶಿ ಕರ್ನಾಣಿ ಗೋರ್ ಇವರುಗಳು ವಿದ್ಯಾಲಯದ ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿದರು. ಸಂವಾದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದರು. ವಿಜ್ಞಾನಕ್ಕೆ ಸಂಬಂಧಿಸಿದ ಪ್ರಶ್ನೆಗಳನ್ನು ಕೇಳಿ ತಮ್ಮ ಅನುಮಾನಗಳನ್ನು ಪರಿಹರಿಸಿಕೊಂಡರು. ಆಗಮಿಸಿದ ಅತಿಥಿಗಳು ವಿದ್ಯಾರ್ಥಿಗಳಿಗಾಗಿ ವಿಜ್ಞಾನ ರಸಪ್ರಶ್ನೆಗಳನ್ನು ನಡೆಸಿ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ನೀಡಿ ಪ್ರೋತ್ಸಾಹಿಸಿದರು. ವಿಜ್ಞಾನಿಗಳು ವಿದ್ಯಾರ್ಥಿಗಳ ಜೊತೆ ನೇರ ಸಂವಾದ ನಡೆಸಿದರು. ವಿದ್ಯಾರ್ಥಿಗಳಿಗೆ ಮೂಲ ವಿಜ್ಞಾನದಲ್ಲಿ ವಿಶೇಷವಾಗಿ ಪರಮಾಣು ವಿಜ್ಞಾನದಲ್ಲಿ ಆಸಕ್ತಿ ಹೆಚ್ಚುವ ಹಾಗೆ ಮಾಡಿದರು. ಕಾರ್ಯಕ್ರಮದಲ್ಲಿ ವಿದ್ಯಾಲಯದ ಪ್ರಾಂಶುಪಾಲರಾದ ಪಂಕಜಾಕ್ಷನ್ ಹಾಗೂ ವಿಜ್ಞಾನ ಶಿಕ್ಷಕರು ಹಾಜರಿದ್ದರು. ಆಗಮಿಸಿದ ಅತಿಥಿಗಳು ವಿದ್ಯಾಲಯದ ಚಟುವಟಿಕೆಗಳನ್ನು ವೀಕ್ಷಿಸಿದರು. ನಂತರ ವಿದ್ಯಾರ್ಥಿಗಳ ಹಾಸ್ಟೇಲ್ಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಪ್ರಾಚಾರ್ಯರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಸಂಭ್ರಮಿಸಿದ ವಿಜ್ಞಾನಿಗಳಿಗೆ ವಿದ್ಯಾಲಯದ ಸಿಬ್ಬಂದಿ ಮತ್ತು…
ಮಡಿಕೇರಿ ಆ.9 : ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆ ಇವರ ವತಿಯಿಂದ ರಾಷ್ಟ್ರೀಯ ಶಿಶು ಕಲ್ಯಾಣ ಸಂಸ್ಥೆಯ ಕಾರ್ಯಕ್ರಮದ ಅಂಗವಾಗಿ ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆ, ಇನ್ನರ್ ವೀಲ್, ರೋಟರಿ ಮಿಸ್ಟಿಹಿಲ್ಸ್, ಲಯನ್ಸ್ ಕ್ಲಬ್ ಇವರ ಸಂಯುಕ್ತ ಆಶ್ರಯದಲ್ಲಿ “ರಾಷ್ಟ್ರೀಯ ವರ್ಣಚಿತ್ರ ಸ್ಪರ್ಧೆ”ಯು ಆ.27 ರಂದು ನಡೆಯಲಿದೆ. ಸ್ಪರ್ಧೆಗೆ ಹೆಸರು ನೋಂದಾಯಿಸಲು ಆ.25 ಕೊನೆ ದಿನವಾಗಿದೆ. ಸ್ಪರ್ಧಾ ವಿವರ ಮತ್ತು ಹೆಚ್ಚಿನ ಮಾಹಿತಿಗೆ ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆ “ಚೇತನ ಚಿಲುಮೆ” (ಕೆಎಸ್ಆರ್ಟಿಸಿ ಬಸ್ಸು ನಿಲ್ದಾಣದ ಹತ್ತಿರ) ದೂ.ಸಂ.9880985939, 9480745776 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿ ತಿಳಿಸಿದೆ.
ಮಡಿಕೇರಿ ಆ.9 : “ವಿಶ್ವ ಆದಿಮಸಂಜಾತ ಸ್ಥಳೀಯ ಜನರ” ಅಂತರಾಷ್ಟ್ರೀಯ ದಿನದ ಪ್ರಯುಕ್ತ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಶಾಂತಿಯುತ ಧರಣಿ ಸತ್ಯಾಗ್ರಹ ನಡೆಸಿತು. ಧರಣಿಯ ನೇತೃತ್ವ ವಹಿಸಿ ಮಾತನಾಡಿದ ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ, ಕೊಡವ ಸ್ವಯಂ ನಿರ್ಣಯ ಹಕ್ಕು ಮತ್ತು ಕೊಡವ ಲ್ಯಾಂಡ್ ಭೂ ರಾಜಕೀಯ ಸ್ವಾಯತತ್ತೆಯನ್ನು ಒಳಗೊಂಡ ವಿವಿಧ ರಾಜ್ಯಾಂಗದತ್ತ ಹಕ್ಕುಗಳ ಬೇಡಿಕೆಗಳ ಕುರಿತು ಸರ್ಕಾರಗಳು ಸೂಕ್ತ ಸ್ಪಂದನೆಯನ್ನು ನೀಡಬೇಕೆಂದು ಒತ್ತಾಯಿಸಿದರು. ಕೊಡವರು ವಿಶಿಷ್ಟವಾದ ಸಾಮಾಜಿಕ, ಸಾಂಸ್ಕೃತಿಕ ವ್ಯವಸ್ಥೆಯನ್ನು ಹೊಂದಿರುವ ಬುಡಕಟ್ಟು ಜನಾಂಗದವರಾಗಿದ್ದಾರೆ. ವಿಭಿನ್ನ ಭಾಷೆ ಮತ್ತು ನಂಬಿಕೆಗಳನ್ನು ಹೊಂದಿದ್ದಾರೆ. ಸಾಂಪ್ರದಾಯಿಕವಾಗಿ ಅವರು ಕೊಡವ ಭೂಮಿಯಲ್ಲೇ ಉಳಿದುಕೊಂಡಿದ್ದಾರೆ. ನಂಬಿಕೆ ಮತ್ತು ಸಂಸ್ಕೃತಿಯನ್ನು ತಮ್ಮ ಹೊಸ ಪೀಳಿಗೆಗೆ ರವಾನಿಸಿದ್ದಾರೆ. ಈ ರೀತಿಯ ವಿಶಿಷ್ಟ ಮತ್ತು ಅತಿಸೂಕ್ಷ್ಮ ಜನಾಂಗದ ಹಕ್ಕುಗಳನ್ನು ಆಡಳಿತ ವ್ಯವಸ್ಥೆ ಮುಂದೆ ಪ್ರತಿಪಾದಿಸುವುದು ನಮ್ಮ ಕರ್ತವ್ಯವಾಗಿದೆ ಎಂದರು. ಸ್ಥಳೀಯ ಜನರ ಹಕ್ಕುಗಳ ಕುರಿತು ವಿಶ್ವ ರಾಷ್ಟ್ರಸಂಸ್ಥೆ (UNDRIP) 2007 ಸೆಪ್ಟಂಬರ್ ನಲ್ಲಿ UN…
ಮಡಿಕೇರಿ ಆ.9 : ಮಡಿಕೇರಿ ಆಕಾಶವಾಣಿಯಲ್ಲಿ ಸಾಂದರ್ಭಿಕ ಉದ್ಘೋಷಕರಾಗಿ ಕೆಲಸ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವಯೋಮಿತಿ ಕನಿಷ್ಠ 20 ವರ್ಷ ಹಾಗೂ ಗರಿಷ್ಠ 50 ವರ್ಷ. ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು. ಕನ್ನಡವನ್ನು ಚೆನ್ನಾಗಿ ಓದಲು ಮತ್ತು ಬರೆಯಲು ಗೊತ್ತಿರಬೇಕು. ಸ್ಪಷ್ಟ ಉಚ್ಛಾರಣೆ ಹೊಂದಿರಬೇಕು. ಕಂಪ್ಯೂಟರ್ ಬಳಸುವ ಜ್ಞಾನ ಇರಬೇಕು. ಇಂಗ್ಲೀಷ್ ಭಾಷೆಯಿಂದ ಕನ್ನಡಕ್ಕೆ ಮತ್ತು ಕನ್ನಡದಿಂದ ಇಂಗ್ಲೀಷ್ಗೆ ಭಾಷಾಂತರ ಮಾಡುವ ಸಾಮಥ್ರ್ಯ ಇರಬೇಕು. ಪ್ರಚಲಿತ ವಿದ್ಯಮಾನ, ಕಲೆ, ಸಂಸ್ಕೃತಿ , ಸಂಗೀತ, ರಂಗಭೂಮಿ, ಚಲನಚಿತ್ರ, ಸಾಹಿತ್ಯ, ವಿಜ್ಞಾನ ಮತ್ತು ತಂತ್ರಜ್ಞಾನಗಳಲ್ಲಿ ಸಾಮಾನ್ಯ ಜ್ಞಾನ ಹೊಂದಿರಬೇಕು. ಮಡಿಕೇರಿ ನಿವಾಸಿಗಳಿಗೆ ಆದ್ಯತೆ. ಅರ್ಜಿ ಶುಲ್ಕ ರೂ.354 ಗಳನ್ನು ಅರ್ಜಿಯಲ್ಲಿ ನಮೂದಿಸಿರುವ ಪ್ರಸಾರ ಭಾರತಿ ಬ್ಯಾಂಕ್ ಖಾತೆಗೆ ವರ್ಗಾಯಿಸಬೇಕು. ಲಿಖಿತ ಪರೀಕ್ಷೆ, ಧ್ವನಿ ಪರೀಕ್ಷೆ ಹಾಗೂ ಸಂದರ್ಶನ ಒಳಗೊಂಡ ಮೂರು ಹಂತಗಳಲ್ಲಿ ಆಯ್ಕೆ ಪ್ರಕ್ರಿಯೆ ನಡೆಸಲಾಗುವುದು. ನಿಗದಿತ ಅರ್ಜಿ ಫಾರಂಗಳನ್ನು ಸೋಮವಾರದಿಂದ ಶುಕ್ರವಾರದವರೆಗೆ ಬೆಳಗ್ಗೆ 11 ಗಂಟೆಯಿಂದ ಸಂಜೆ…






