ಮಡಿಕೇರಿ ಆ.9 : ಕುಶಾಲನಗರ ಪುರಸಭೆ ವ್ಯಾಪ್ತಿಯ ಮಾರುಕಟ್ಟೆ ರಸ್ತೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಶುದ್ಧ ಕುಡಿಯುವ ನೀರಿನ ಘಟಕವನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಉದ್ಘಾಟಿಸಿದರು. ನಂತರ ಮಾತನಾಡಿದ ಶಾಸಕರು, ಕುಶಾಲನಗರ ಭಾಗದಲ್ಲಿ ಕುಡಿಯುವ ನೀರಿನ ಘಟಕ ಆಗದೆ ಉಳಿದಿರುವ ವಾರ್ಡ್ ಹಾಗೂ ಗ್ರಾಮಗಳಲ್ಲಿ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಲಾಗಿದೆ. ಸಾರ್ವಜನಿಕರಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡುವಂತೆ ಸೂಚನೆ ನೀಡಿ ಪುರಸಭೆಯ ಅಧಿಕಾರಿಗಳಿಗೆ ಹಾಗೂ ಜನಪ್ರತಿನಿಧಿಗಳಿಗೆ ಅಭಿನಂದನೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಪುರಸಭೆ ಮುಖ್ಯಧಿಕಾರಿ ಕೃಷ್ಣ ಪ್ರಸಾದ್, ಸಹಾಯಕ ಅಭ್ಯಂತರ ರಂಗರಾಮ್, ಸದಸ್ಯರಾದ ಪ್ರಮೋದ್ ಮುತ್ತಪ್ಪ, ಶೇಕ್ ಕಲೀಮುಲ್ಲ, ಸುಂದರೇಶ್, ಜಯಲಕ್ಷ್ಮಿ, ಜಯಲಕ್ಷ್ಮಮ್ಮ, ಪುಟ್ಟಲಕ್ಷ್ಮಿ, ಕುಶಾಲನಗರ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರು ಹಾಗೂ ಜಿ.ಪಂ ಮಾಜಿ ಸದಸ್ಯ ವಿ.ಪಿ ಶಶಿಧರ್, ಜಿ.ಪಂ ಮಾಜಿ ಅಧ್ಯಕ್ಷರಾದ ಕೆ.ಪಿ ಚಂದ್ರಕಲ, ಕೆ.ಪಿ.ಸಿ.ಸಿ ಸಂಯೋಜಕ ನಟೇಶ್ ಗೌಡ, ಪ್ರಮುಖರಾದ ಶಿವಶಂಕರ್, ಕಿರಣ್ ಕುಮಾರ್, ಮುಸ್ತಫ, ನಂಜುಂಡಸ್ವಾಮಿ, ಹರೀಶ್ ಮುಳ್ಳುಸೋಗೆ ಹಾಗೂ ಮುಖಂಡರು ಮತ್ತು ಹಿತೈಷಿಗಳು ಹಾಜರಿದ್ದರು.
ಲೇಖಕ: admin
ಮಡಿಕೇರಿ ಆ.9 : ಪೊನ್ನಂಪೇಟೆಯ ಕೂರ್ಗ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ವಿದ್ಯಾಸಂಸ್ಥೆಯಲ್ಲಿ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮತ್ತು ಮಶಿನ್ ಲರ್ನಿಂಗ್ ವಿಭಾಗದ ವಿದ್ಯಾರ್ಥಿ ಒಕ್ಕೂಟವಾದ “ಅವಿನ್ಯಂ” ವನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದ ಮೈಸೂರಿನ ಎನ್ಐಈ ಪ್ರಾಧ್ಯಾಪಕರಾದ ಡಾ. ರಘುವೀರ್, ಕೃತಕ ಬುದ್ಧಿಮತ್ತೆಯ ಮಹತ್ವ, ದೈನಂದಿನ ಜೀವನದಲ್ಲಿ ಅಳವಡಿಕೆ, ಮತ್ತು ಸಮಾಜದಲ್ಲಿ ಕೃತಕ ಬುದ್ಧಿಮತ್ತೆಯ ಪ್ರಭಾವದ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಕೊಡವ ಏಜುಕೇಷನ್ ಸೊಸೈಟಿಯ ಅಧ್ಯಕ್ಷರಾದ ಡಾ. ಎಮ್.ಸಿ.ಕಾರ್ಯಪ್ಪ ಮಾತನಾಡಿ, ಹೇಗೆ ಕೃತಕ ಬುದ್ದಿಮತ್ತೆಯು ನಮ್ಮ ಸಮಾಜದಲ್ಲಿ ಬದಲಾವಣೆಗಳನ್ನು ತರುತ್ತಿದೆ ಎಂಬುದನ್ನು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಟ್ಟರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಎಂ.ಬಸವರಾಜ್ ಮಾತನಾಡಿ, ವಿದ್ಯಾರ್ಥಿ ಒಕ್ಕೂಟದಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣ ಬೆಳೆಸಿಕೊಳ್ಳಲು ಸಹಕಾರಿಯಾಗಿದೆ ಎಂದರು. ವಿದ್ಯಾರ್ಥಿ ಒಕ್ಕೂಟದ ಲಾಂಛನವನ್ನು ಡಾ.ಎಂ.ಸಿ ಕಾರ್ಯಪ್ಪ ಬಿಡುಗಡೆ ಮಾಡಿದರು. ಸಂಯೋಜಕರಾದ (ಸಹ ಪ್ರಾಧ್ಯಾಪಕ) ಬಿ.ಎಂ. ಮುರಳೀಧರ್ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿ ಸದಸ್ಯರುಗಳಿಗೆ ಪ್ರಮಾಣ ವಚನ ಭೋದಿಸಿದರು. ಇದೇ ಸಂದರ್ಭ ವಿವಿಧ ಸ್ವರ್ಧೆಗಳಲ್ಲಿ ವಿಜೇತರಾದ ಸ್ವರ್ಧಿಗಳಿಗೆ ಬಹುಮಾನವನ್ನು…
ಮಡಿಕೇರಿ ಆ.9 : ಅರಣ್ಯದಂಚಿನಲ್ಲಿ ವಾಸಿಸುತ್ತಿರುವ ಗ್ರಾಮಸ್ಥರಿಗೆ ವಿದ್ಯುತ್ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಯಾವುದೇ ಅಡ್ಡಿ ಇಲ್ಲದೆ ಪೂರೈಸಬೇಕೆಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಚೆಂಬು ಗ್ರಾ.ಪಂ ಸಭಾಂಗಣದಲ್ಲಿ ನಡೆದ ಜನಸ್ಪಂದನ ಸಭೆ ಮತ್ತು ಶಾಸಕರ ಸನ್ಮಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಸ್ಥಳೀಯ ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಿದ ಶಾಸಕರು ಸ್ಥಳದಲ್ಲೇ ಬಹುತೇಕ ಅಹವಾಲುಗಳಿಗೆ ಪರಿಹಾರ ಸೂಚಿಸಿದರು. ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಅರಣ್ಯದಂಚಿನಲ್ಲಿ ವಾಸಿಸುತ್ತಿರುವ ಗ್ರಾಮಸ್ಥರಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಅರಣ್ಯ ಇಲಾಖೆ ಅಡ್ಡಿಪಡಿಸಬಾರದು. ಬಡಕುಟುಂಬಗಳಿಗೆ ವಿದ್ಯುತ್ ನೀಡಲು ಚೆಸ್ಕಾಂ ಇಲಾಖೆ ತ್ವರಿತ ಕ್ರಮಗಳನ್ನು ಕೈಗೊಳ್ಳಬೇಕು. ಆನೆ ಹಾವಳಿ ತೀವ್ರಗೊಂಡಿರುವ ಭಾಗದಲ್ಲಿ ಅರಣ್ಯ ಅಧಿಕಾರಿಗಳು ಸೋಲಾರ್ ಬೇಲಿ ಅಳವಡಿಸಲು ಕ್ರಮ ಕೈಗೊಳ್ಳಬೇಕು ಎಂದು ಎ.ಎಸ್.ಪೊನ್ನಣ್ಣ ತಿಳಿಸಿದರು. ಅರಣ್ಯ ಹಕ್ಕು ಪತ್ರದ ಬಗ್ಗೆ ಈಗಾಗಲೇ ಅರಣ್ಯ ಸಚಿವರು ಹಲವು ಜಿಲ್ಲೆಯ ಪ್ರತಿನಿಧಿಗಳೊಂದಿಗೆ ಚರ್ಚಿಸಿದ್ದು, ಮುಂದಿನ ದಿನಗಳಲ್ಲಿ ಅಗತ್ಯ…
ಮಡಿಕೇರಿ ಆ.9 : ಪ್ರತಿಯೊಬ್ಬ ಭಾರತೀಯ ಪ್ರಜೆ ದೇಶಾಭಿಮಾನ ಬೆಳೆಸಿಕೊಳ್ಳುವುದರೊಂದಿಗೆ ರಾಷ್ಟ್ರಧ್ವಜ ಮತ್ತು ರಾಷ್ಟ್ರಗೀತೆಯನ್ನು ಗೌರವದಿಂದ ಕಾಣಬೇಕೆಂದು ಭಾರತ ಸೇವಾದಳದ ರಾಜ್ಯ ಸಂಪನ್ಮೂಲ ವ್ಯಕ್ತಿ, ವಲಯ ಸಂಘಟಕ ಈರಯ್ಯ ಅವರು ಕರೆ ನೀಡಿದ್ದಾರೆ. ಭಾರತ ಸೇವಾದಳದ ವಿರಾಜಪೇಟೆ ತಾಲ್ಲೂಕು ಸಮಿತಿ ಮತ್ತು ವಿರಾಜಪೇಟೆ ತಾಲ್ಲೂಕು ಪಂಚಾಯ್ತಿ ವತಿಯಿಂದ ತಾ.ಪಂ ವ್ಯಾಪ್ತಿಯ ಗ್ರಾ.ಪಂ ಸಿಬ್ಬಂದಿಗಳಿಗೆ ರಾಷ್ಟ್ರಧ್ವಜ ಮತ್ತು ರಾಷ್ಟ್ರಗೀತೆ ಕುರಿತು ಮಾಹಿತಿ ಕಾರ್ಯಾಗಾರ ಹಾಗೂ ಪ್ರಾತ್ಯಕ್ಷಿಕೆ ನಡೆಯಿತು. ಕಾರ್ಯಾಗಾರದಲ್ಲಿ ಪಾಲ್ಗೊಂಡು ಮಾತನಾಡಿದ ಈರಯ್ಯ ಅವರು ರಾಷ್ಟ್ರಧ್ವಜವನ್ನು ಆರೋಹಣ ಮತ್ತು ಅವರೋಹಣ ಮಾಡುವ ಸಂದರ್ಭ ಅತ್ಯಂತ ಗೌರವದಿಂದ ನಡೆದುಕೊಳ್ಳಬೇಕು ಎಂದರು. ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ತಾ.ಪಂ ಕಾರ್ಯನಿರ್ವಹಣಾಧಿಕಾರಿ ಕೆ.ಸಿ.ಅಪ್ಪಣ್ಣ, ರಾಷ್ಟ್ರಧ್ವಜವನ್ನು ಕಟ್ಟುವ ವಿಧಾನ ಮತ್ತು ಆರೋಹಣ, ಅವರೋಹಣ ಮಾಡುವ ರೀತಿಯನ್ನು ಪ್ರತಿಯೊಬ್ಬರು ತಿಳಿದುಕೊಂಡಿರಬೇಕು. ರಾಷ್ಟ್ರಧ್ವಜ ಹಾಗೂ ರಾಷ್ಟ್ರಗೀತೆಗೆ ಎಲ್ಲೂ ಅಗೌರವ ಆಗದಂತೆ ಎಚ್ಚರ ವಹಿಸಬೇಕು ಎಂದು ಕರೆ ನೀಡಿದರು. ಖಾದಿ ಭಂಡಾರದಲ್ಲಿ ದೊರೆಯುವ ಐಎಸ್ಐ ಚಿಹ್ನೆ ಹೊಂದಿರುವ ನಿರ್ದಿಷ್ಟ ಅಳತೆಯ ರಾಷ್ಟ್ರಧ್ವಜವನ್ನೇ ಖರೀದಿಸಬೇಕು ಮತ್ತು…
ಮಡಿಕೇರಿ ಆ.9 : ಸಮಾಜದ ಅಗತ್ಯತೆಗಳಿಗೆ ತಕ್ಕಂತೆ ಜನರಪರವಾಗಿ ಕಾಯ೯ಪ್ರವೖತ್ತವಾಗಲು ಕೊಡಗು ಪೊಲೀಸ್ ಇಲಾಖೆ ಬದ್ದವಾಗಿದೆ. ಕೊಡಗಿನಲ್ಲಿ ಹೆಚ್ಚುತ್ತಿದ್ದ ಗಾಂಜಾ ಮಾದಕ ದ್ರವ್ಯ ಮಾರಾಟಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಪೊಲೀಸರು ಕೈಗೊಂಡಿರುವ ಸಮರಕ್ಕೆ ಸಾವ೯ಜನಿಕರೂ ಸಹಕಾರ ನೀಡಬೇಕಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕೆ.ರಾಮರಾಜನ್ ಮನವಿ ಮಾಡಿದ್ದಾರೆ. ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ರೋಟರಿ ಸಭಾಂಗಣದಲ್ಲಿ ಆಯೋಜಿತವಾಗಿದ್ದ ಪೊಲೀಸ್ ವರಿಷ್ಟಾಧಿಕಾರಿಗಳೊಂದಿಗೆ ವಿವಿಧ ಸಂಘಸಂಸ್ಥೆಗಳ ಪ್ರಮುಖರ ಸಂವಾದ ಕಾಯ೯ಕ್ರಮದಲ್ಲಿ ಪಾಲ್ಗೊಂಡು ರಾಮರಾಜನ್ ಹಲವಾರು ವಿಚಾರಗಳನ್ನು ವಿನಿಮಯ ಮಾಡಿಕೊಂಡರು. ಕೊಡಗಿನಲ್ಲಿ ಮಾದಕ ದ್ರವ್ಯ ಸೇವನೆ, ಮಾರಾಟ ಪ್ರಕರಣಗಳು ಹೆಚ್ಚಾದರೇ ಅದು ಪ್ರವಾಸೋದ್ಯಮದ ಮೇಲೂ ಗಂಭೀರ ಪರಿಣಾಮ ಬೀರುವ ಸಾಧ್ಯತೆಯಿದೆ. ಕೌಟುಂಬಿಕ ಪ್ರವಾಸೋದ್ಯಮಕ್ಕೆ ಧಕ್ಕೆ ಬರಲಿದೆ ಎಂದು ಎಚ್ಚರಿಸಿದ ರಾಮರಾಜನ್ ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಮಾದಕ ದ್ರವ್ಯ ಮಾರಾಟಗಾರರನ್ನು ಬಗ್ಗು ಬಡಿಯುತ್ತಿದೆ. ಮಾದಕ ದ್ರವ್ಯ ಸೇವನೆ ಮಾಡುವವರ ಬಗ್ಗೆಯೂ ಮಾಹಿತಿ ಸಂಗ್ರಹಿಸಲಾಗುತ್ತಿದ್ದು ಮುಂದಿನ ದಿನಗಳಲ್ಲಿ ಅಂಥವರ ವಿರುದ್ದವೂ ಕಾನೂನು ಕ್ರಮಕ್ಕೆ ಮುಂದಾಗುತ್ತೇವೆ ಎಂದು…
ಮಡಿಕೇರಿ ಆ.9 : ನಗರದ ದೇಚೂರಿನಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ನಾಲ್ವರನ್ನು ಕೊಡಗು ಜಿಲ್ಲಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳಾದ ದೇಚೂರು ಗ್ರಾಮದ ಹೆಚ್.ಎಸ್. ಪ್ರತಾಪ್ (22 ), ಇಬ್ಬಿವಳವಾಡಿ ಗ್ರಾಮದ ಐ.ಆರ್. ಮೋನಿಶ್ ( 20), ಕರ್ಣಂಗೇರಿ ಗ್ರಾಮ ಲಿಖಿತ್ ಡಿ (23), ಪಿ.ಎಸ್.ಅಕ್ಷಯ್ (23) ಎಂಬವರನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಗಾಂಜಾ ಸೇವನೆ ಮಾಡುತ್ತಿರುವ ಬಗ್ಗೆ ಪೊಲೀಸರಿಗೆ ಲಭಿಸಿದ ಖಚಿತ ಮಾಹಿತಿ ಹಿನ್ನೆಲೆ ಡಿವೈಎಸ್ಪಿ ಗಂಗಾಧರಪ್ಪ, ಮಡಿಕೇರಿ ನಗರ ವೃತ್ತ ಪಿ. ಸಿ.ಪಿ.ಐ ಅನೂಪ್ ಮಾದಪ್ಪ, ಮಡಿಕೇರಿ ನಗರ ಪೊಲೀಸ್ ಠಾಣೆಯ ಪಿಎಸ್ಐ ಶ್ರೀನಿವಾಸ್ ಹಾಗೂ ಅಪರಾಧ ವಿಭಾಗದ ಪಿಎಸ್ಐ ಎ.ಬಿ.ರಾಧ ಹಾಗೂ ಡಿ.ಸಿ.ಆರ್.ಬಿ. ಘಟಕದ ಸಿಬ್ಬಂಧಿಯವರುಗಳ ವಿಶೇಷ ತಂಡವನ್ನು ರಚಿಸಿ, ತನಿಖೆ ಕೈ ಗೊಳ್ಳಲಾಗಿತ್ತು. ಪ್ರಕರಣದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂಧಿಗಳನ್ನು ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಶ್ಲಾಘಿಸಿದ್ದಾರೆ.
ಸೋಮವಾರಪೇಟೆ ಜು.9 : ಗೌಡಳ್ಳಿ ಗ್ರಾಮ ಪಂಚಾಯಿತಿ 2ನೇ ಅವಧಿಗೆ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಎ.ಎಸ್.ನವೀನ್ ಕುಮಾರ್(ಅಜ್ಜಳ್ಳಿ ನವೀನ್) ಹಾಗೂ ಉಪಾಧ್ಯಕ್ಷರಾಗಿ ಕೆ.ಡಿ.ವಿಶಾಲಾಕ್ಷಿ ಅವಿರೋಧವಾಗಿ ಆಯ್ಕೆಯಾದರು. ಹತ್ತು ಸದಸ್ಯ ಬಲದ ಪಂಚಾಯಿತಿಯಲ್ಲಿ ಬಿಜೆಪಿ ಬೆಂಬಲಿತ 9 ಹಾಗೂ ಓರ್ವ ಜೆಡಿಎಸ್ ಬೆಂಬಲಿತ ಸದಸ್ಯರಿದ್ದರು. ಈ ಹಿಂದೆ ಜೆಡಿಎಸ್ ಭದ್ರಕೋಟೆಯಾಗಿದ್ದ ಗೌಡಳ್ಳಿ ಪಂಚಾಯಿತಿ ಆಡಳಿತ ಚುಕ್ಕಾಣಿಯನ್ನು ಬಿಜೆಪಿ ಪಡೆದುಕೊಂಡಿದೆ. ಅಧ್ಯಕ್ಷ ಸ್ಥಾನ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿತ್ತು. ಗ್ರಾಮೀಣಾಭಿವೃದ್ಧಿಗೆ ಹೆಚ್ಚಿನ ಅದ್ಯತೆ ನೀಡಲಾಗುವುದು. ಸದಸ್ಯರ ಸಹಕಾರದಿಂದ ಕೆಲಸ ನಿರ್ವಹಿಸಲಾಗುವುದು ಎಂದು ಅಧ್ಯಕ್ಷ ನವೀನ್ ಹೇಳಿದರು. ಚುನಾವಣಾಧಿಕಾರಿಯಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕೆ.ಜಿ.ನಿರ್ಮಲ ಕಾರ್ಯನಿರ್ವಹಿಸಿದರು. ಸದಸ್ಯರಾದ ಜಿ.ಜಿ.ಮಲ್ಲಿಕಾ, ಜಿ.ಜಿ.ಗಣೇಶ್, ಜಿ.ಎಸ್.ನಾಗರಾಜು, ಬಿಎಚ್.ಮಂಜುನಾಥ್, ಕೆ.ಎಂ.ರೋಹಿಣಿ, ಕೆ.ಕೆ.ಸುಮಾ, ಪಿಡಿಒ ಎಸ್.ಪಿ.ಲಿಖಿತಾ ಇದ್ದರು. ಸ್ಥಳೀಯ ಪ್ರಮುಖರಾದ ಜಿ.ಪಿ.ಸುನಿಲ್, ಎಚ್.ಎಂ.ಜಿತೇಂದ್ರ, ಗಿರೀಶ್ ಮಲ್ಲಪ್ಪ, ವಸಂತ್, ನಾಗರತ್ನ, ವಿನಯ್, ಪೃಥ್ವಿ ಮತ್ತಿತರರು ಇದ್ದರು.
ಮಡಿಕೇರಿ ಆ.8 : ಬ್ರೈನೋಬ್ರೈನ್ ಇಂಟರ್ ನ್ಯಾಷನಲ್ ದುಬೈ ಸಂಸ್ಥೆಯ ವತಿಯಿಂದ ಇತ್ತೀಚೆಗೆ ಬೆಂಗಳೂರಿನ ನಿಮ್ಹಾನ್ಸ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ “142ನೇ ರಾಜ್ಯ ಮಟ್ಟದ ಬ್ರೈನೋಬ್ರೈನ್ ಸ್ಪರ್ಧೆ-2023” ರಲ್ಲಿ ಮಡಿಕೇರಿಯ ಬ್ರೈನೋಬ್ರೈನ್ ಕೇಂದ್ರದ 43 ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿ ಪದಕ ಗೆದ್ದಿದ್ದಾರೆ. ಮಡಿಕೇರಿ ಕೇಂದ್ರದ ತರಬೇತುದಾರರಾದ ಮಾಪಂಗಡ ಕವಿತಾ ಕರುಂಬಯ್ಯ ಅವರ ನೇತೃತ್ವದಲ್ಲಿ ವಿವಿಧ ವಿಭಾಗಗಳಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ಕೇವಲ 3 ನಿಮಿಷದಲ್ಲಿ ವಿವಿಧ ರೀತಿಯ ಲೆಕ್ಕಗಳನ್ನು ಅತಿ ಚುರುಕಾಗಿ ಮಾಡುವ ಮೂಲಕ ಅತ್ಯುತ್ತಮ ಸಾಧನೆ ಮಾಡಿದ್ದಾರೆ. 22 ಚಾಂಪಿಯನ್ ಟ್ರೋಫಿ, 14 ಚಿನ್ನದ ಪದಕ ಮತ್ತು 17 ಬೆಳ್ಳಿಯ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಮಡಿಕೇರಿ ಕೇಂದ್ರಕ್ಕೆ ಬೆಸ್ಟ್ ಫ್ರಾಂಚೈಸಿ ಮತ್ತು ಬೆಸ್ಟ್ ಫ್ಯಾಕಲ್ಟಿ ಪ್ರಶಸ್ತಿ ದೊರೆಯಿತು. ತರಬೇತುದಾರರಾದ ಕವಿತಾ ಕರುಂಬಯ್ಯ ಅವರು ಪ್ರಶಸ್ತಿ ಸ್ವೀಕರಿಸಿ ಮಾತನಾಡಿ ಬ್ರೈನೋಬ್ರೈನ್ ಇಂಟರ್ ನ್ಯಾಷನಲ್ ದುಬೈ ಸಂಸ್ಥೆ ಪ್ರಾರಂಭವಾಗಿ ಕೇವಲ 20 ವರ್ಷಗಳಲ್ಲಿ 45 ದೇಶಗಳಲ್ಲಿ 1000ಕ್ಕೂ ಹೆಚ್ಚು ಕೇಂದ್ರಗಳನ್ನು ಹೊಂದಿದ್ದು, ಇದು ಶ್ಲಾಘನೀಯ ಸಾಧನೆಯಾಗಿದೆ…
ಮಡಿಕೇರಿ ಆ.8 : ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿ ಸ್ವೀಕರಿಸಲು ನಿರಾಕರಿಸಿದ ಬಿಲ್ ಕಲೆಕ್ಟರ್ ಅನ್ನು ಅಮಾನತುಗೊಳಿಸುವಂತೆ ಆಗ್ರಹಿಸಿ ಕೊಡಗು ಜಿಲ್ಲಾ ಕರ್ನಾಟಕ ದಲಿತ ಸಂಘರ್ಷ ಸಮಿತಿ, ಮಡಿಕೇರಿ ತಾಲ್ಲೂಕು ಘಟಕ, ಸಂಪಾಜೆ ಹೋಬಳಿ ಹಾಗೂ ಗ್ರಾಮ ಸಮಿತಿಗಳ ಆಶ್ರಯದಲ್ಲಿ ಸಂಪಾಜೆಯಲ್ಲಿ ಪ್ರತಿಭಟನೆ ನಡೆಯಿತು. ಸಂಪಾಜೆ ಗೇಟ್ ಬಳಿಯಿಂದ ಮೆರವಣಿಗೆ ಮೂಲಕ ಬಂದ ಪ್ರತಿಭಟನಾಕಾರರು ಗ್ರಾ.ಪಂ ಆವರಣದಲ್ಲಿ ಜಮಾಯಿಸಿ, ಬಿಲ್ ಕಲೆಕ್ಟರ್ ವಿರುದ್ಧ ಘೋಷಣೆ ಕೂಗಿ ಅಸಮಾಧಾನ ವ್ಯಕ್ತಪಡಿಸಿದರು. ಈ ಸಂದರ್ಭ ಮಾತಾನಾಡಿದ ಸಮಿತಿ ಜಿಲ್ಲಾಧ್ಯಕ್ಷ ಹೆಚ್.ಎಲ್.ದಿವಾಕರ್, ಸಂಪಾಜೆ ಗ್ರಾಮ ಪಂಚಾಯತ್ ನಲ್ಲಿ ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಲು ತೆರಳಿದಾಗ ಮನೆ ತೆರಿಗೆ, ನೀರಿನ ತೆರಿಗೆ ಪಾವತಿ ಮಾಡದೇ ಅರ್ಜಿ ಸ್ವೀಕರಿಸಲು ನಿರಾಕರಿಸಿದ ಬಿಲ್ ಕಲೆಕ್ಟರ್ ಅನ್ನು ಅಮಾನತುಗೊಳಿಸುವಂತೆ ಆಗ್ರಹಿಸಿದರು. ದಲಿತರನ್ನು ಕಡೆಗಣಿಸುವ ಪ್ರಕರಣಗಳು ಕೊಡಗು ಜಿಲ್ಲೆಯ ಪಂಚಾಯತ್ ಗಳಲ್ಲಿ ಕಂಡು ಬರುತ್ತಿದ್ದು, ಇದು ಮುಂದುವರಿದರೆ ಹೋರಾಟವನ್ನು ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದರು. ಮಡಿಕೇರಿ ತಾಲ್ಲೂಕು ಅಧ್ಯಕ್ಷ ದೀಪಕ್ ಪೊನ್ನಪ್ಪ ಮನವಿ…
ಮಡಿಕೇರಿ ಆ.8 : ಬೆಂಗಳೂರು ಕೊಡಗು ಗೌಡ ಸಮಾಜ ಆಶ್ರಯದಲ್ಲಿ ಜರುಗಿದ “ಆಟಿ ಹಬ್ಬ 2023” ಕಾರ್ಯಕ್ರಮದಲ್ಲಿ ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭ ಶಾಸಕ ಮಂತರ್ ಗೌಡ ಅವರ ಪತ್ನಿ ದಿವ್ಯಾ ಹಾಜರಿದ್ದರು.






