ಮಡಿಕೇರಿ ಜು.10 : ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆ ಸರಹದ್ದಿನಲ್ಲಿ ಅಕ್ರಮವಾಗಿ ಮಾದಕ ವಸ್ತುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಕೊಡಗು ಜಿಲ್ಲಾ ಪೊಲೀಸರು ಬಂಧಿಸಿ, 241.4 ಗ್ರಾಂ. ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಪಂಚವಳ್ಳಿ ನಿವಾಸಿಗಳಾದ ಸದ್ದಾಂ ಹುಸೇನ್ (35) ಹಾಗೂ ಜಾಬಿಯ ಉಲ್ಲಾಖಾನ್ (40) ಎಂಬುವವರೇ ಬಂಧಿತ ಆರೋಪಿಗಳು. ಮೂರ್ನಾಡುವಿನಿಂದ-ಕೊಂಡಂಗೇರಿಗೆ ಹೋಗುವ ರಸ್ತೆಯಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿರುವ ಕುರಿತು ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಮಾಲು ಸಹಿತ ವಶಕ್ಕೆ ಪಡೆದಿದ್ದಾರೆ. ಮಡಿಕೇರಿ ಉಪ ವಿಭಾಗದ ಡಿವೈಎಸ್ಪಿ ಎಂ.ಜಗದೀಶ್, ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆ, ಪಿಐ ಯು.ಉಮೇಶ್ ಹಾಗೂ ಸಿಬ್ಬಂದಿಗಳ ತಂಡವನ್ನು ರಚಿಸಿ ತನಿಖೆ ಕೈಗೊಳ್ಳಲಾಗಿತ್ತು. ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕಾರ್ಯಕ್ಷಮತೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಶ್ಲಾಘಿಸಿದ್ದಾರೆ. ::: ಮಾಹಿತಿ ನೀಡಿ ::: ಯುವಕ-ಯುವತಿಯರು ಮಾದಕ ವ್ಯಸನಿಗಳಾಗಿ ತಮ್ಮ ಜೀವನವನ್ನು ಹಾಳು ಮಾಡಿಕೊಳ್ಳುವುದನ್ನು ತಡೆಗಟ್ಟುವ ಸಲುವಾಗಿ ಮಾದಕ ವಸ್ತುಗಳನ್ನು ಬಳಸುವ…
ಲೇಖಕ: admin
ಮಡಿಕೇರಿ ಜು.10 : ಮನೆಯ ಆವರಣದಲ್ಲಿ ಗಾಂಜಾ ಗಿಡಗಳನ್ನು ಬೆಳೆದಿದ್ದ ವ್ಯಕ್ತಿಯನ್ನು ಗೋಣಿಕೊಪ್ಪ ಪೊಲೀಸರು ಬಂಧಿಸಿದ್ದಾರೆ. ಮಾಯಮುಡಿ ಗ್ರಾಮದ ದಾಸ ಕಾಲೋನಿ ನಿವಾಸಿ ಸುಜಯ್ (29)ಬಂಧಿತ ಆರೋಪಿ. ತನ್ನ ಮನೆಯ ಆವರಣದಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆದಿರುವ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನೆಲೆ ದಾಳಿ ನಡೆಸಿದ ಪೊಲೀಸರು 49 ಗ್ರಾಂ ತೂಕದ ಹಸಿ ಗಾಂಜಾ ಗಿಡಗಳನ್ನು ವಶಕ್ಕೆ ಪಡೆದರು. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ವಿರಾಜಪೇಟೆ ಉಪ ವಿಭಾಗ ಡಿವೈಎಸ್ಪಿ ಆರ್.ಮೋಹನ್ಕುಮಾರ್, ಗೋಣಿಕೊಪ್ಪ ವೃತ್ತ ಸಿಪಿಐ ಗೋವಿಂದರಾಜು, ಪಿಎಸ್ಐ ಕೆ.ಪಿ.ದಿಕ್ಷೀತ್ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಪೊಲೀಸರ ಕರ್ತವ್ಯ ನಿಷ್ಠೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಶ್ಲಾಘಿಸಿದ್ದಾರೆ.
ಬೆಂಗಳೂರು : ಪವಿತ್ರ ಅಮರನಾಥ ಯಾತ್ರೆಗೆ ತೆರಳಿ ಹವಾಮಾನ ವೈಪರೀತ್ಯದಿಂದ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ನಾಡಿಗೆ ಕರೆತರಲು ಸರ್ಕಾರ ಬದ್ಧವಾಗಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಗದಗ್ ನಿಂದ ತೆರಳಿರುವ 23 ಮಂದಿ ಸೇರಿ ಒಟ್ಟು 80 ಮಂದಿ ಕನ್ನಡಿಗರು ಅಮರನಾಥ ಮಂದಿರದಿಂದ 6 km ದೂರದಲ್ಲಿರುವ ಪಂಚತಾರ್ನಿ ಟೆಂಟ್ ನಲ್ಲಿ ಸಿಲುಕಿದ್ದಾರೆ ಎನ್ನುವ ಮಾಹಿತಿ ಲಭ್ಯವಿದ್ದು, ಈ ಹಿನ್ನೆಲೆಯಲ್ಲಿ ಕೂಡಲೇ ರಕ್ಷಣಾ ಕಾರ್ಯ ಕೈಗೊಂಡು, ಎಲ್ಲರನ್ನೂ ಸುರಕ್ಷಿತವಾಗಿ ವಾಪಸು ಕರೆತರುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದಿದ್ದಾರೆ.
ಮಡಿಕೇರಿ ಜು.10 : ಕೊಡಗಿನಲ್ಲಿ ಮಳೆಯ ತೀವ್ರತೆ ಕಡಿಮೆಯಾಗಿದ್ದು, ಬೆಳಗ್ಗೆ ಮತ್ತು ಮಧ್ಯಾಹ್ನ ಬಿಸಿಲಿನ ವಾತಾವರಣ ಕಂಡು ಬಂದಿತ್ತು. ಮುಂದಿನ 2-3 ದಿನಗಳಲ್ಲಿ ರಾಜ್ಯದಾದ್ಯಂತ ಮಳೆಯ ಪ್ರಮಾಣ ಗಣನೀಯವಾಗಿ ಕಡಿಮೆಯಾಗುವ ಸಾಧ್ಯತೆಯಿದೆ. ಅದರ ನಂತರ, 2023 ರ ಜು.13 ರಿಂದ 15 ರವರೆಗೆ ಕರಾವಳಿ, ಮಲೆನಾಡು ಮತ್ತು ಉತ್ತರ ಕರ್ನಾಟಕದ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ತಿಳಿಸಿದೆ. ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 9.60 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 98 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 818.51 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1281.69 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 21.65 ಮಿ.ಮೀ. ಕಳೆದ ವರ್ಷ ಇದೇ ದಿನ 134.53 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1273.12 ಮಿ.ಮೀ, ಕಳೆದ ವರ್ಷ…
ಮಡಿಕೇರಿ ಜು.10 : ಕುಶಾಲನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ ಸಂಭ್ರಮದಿಂದ ನಡೆಯಿತು. ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಆಗಮಿಸಿ ವಿದ್ಯಾರ್ಥಿಗಳು ಪದವಿ ಜೊತೆಗೆ ಸ್ನಾತಕೋತ್ತರ ಶಿಕ್ಷಣದ ಕಡೆ ಗಮನಹರಿಸಬೇಕು, ಪಠ್ಯ ಪುಸ್ತಕ ಗಳಿಗೆ ಮಾತ್ರ ಸೀಮಿತರಾಗದೆ ಪಠ್ಯೇತರ ಚಟುವಟಿಕೆಗಳಲ್ಲೂ ಬಹುಮುಖ ಪ್ರತಿಭಾವಂತರಾಗಬೇಕು ಎಂದರು. ಕೊಡಗು ವಿಶ್ವ ವಿದ್ಯಾಲಯದ ಜೀವ ರಾಸಾಯನ ಶಾಸ್ತ್ರ ಪ್ರಾಧ್ಯಾಪಕರು ಹಾಗೂ ನಿರ್ದೇಶಕ ಪ್ರೊ. ಕೆ.ಕೆ.ಧರ್ಮಪ್ಪ ಮಾತನಾಡಿ, ಇದು ಸ್ಪರ್ಧಾತ್ಮಕ ಯುಗ. ವಿದ್ಯಾರ್ಥಿಗಳು ಆರೋಗ್ಯಕರ ಸ್ಪರ್ಧಾ ಮನೋಭಾವದಿಂದ ಅಧ್ಯಯನ ಮಾಡಬೇಕು ಎಂದರು. ನಿವೃತ್ತ ಪ್ರಾಂಶುಪಾಲ ಹೆಚ್.ಬಿ.ಲಿಂಗಮೂರ್ತಿ ಮಾತನಾಡಿ, ವಿದ್ಯಾರ್ಥಿಗಳು ಶಿಸ್ತಿನ ಜೀವನಕ್ಕೆ ಹೆಚ್ಚು ಒತ್ತುಕೊಡಬೇಕೆಂದರು. ಮಾಜಿ ಜಿ.ಪಂ ಸದಸ್ಯ ವಿ.ಕೆ.ಶಶಿಧರ್ ಮಾತನಾಡಿ, ವಿದ್ಯಾರ್ಥಿಗಳು ಜಾತಿ, ಮತ, ಧರ್ಮ, ಲಿಂಗ, ಭಾಷೆ, ಪ್ರಾದೇಶಿಕತೆ ಮುಂತಾದ ಸಂಕುಚಿತ ಮನೋಭಾವಕ್ಕೆ ಎಡೆಗೊಡದೆ ವಿಶ್ವ ಮಾನವರಾಗಿ ಬದುಕಬೇಕು ಎಂದರು. ಪ್ರಾಂಶುಪಾಲ ಬಿ.ಎಂ.ಪ್ರವೀಣ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಸಮಿತಿ ಸಂಚಾಲಕ ಡಾ. ಬಿ.ಡಿ.ಹರ್ಷ ವಾರ್ಷಿಕ ವರದಿಯನ್ನು ವಾಚಿಸಿದರು.…
ನಾಪೋಕ್ಲು ಜು.10 : ಕಕ್ಕಬೆ ಗ್ರಾ.ಪಂ ವ್ಯಾಪ್ತಿಯ ಮರಂದೋಡು ಗ್ರಾಮದಲ್ಲಿ ಬೀಡುಬಿಟ್ಟಿರುವ ಆನೆಗಳು ಚಂಡೀರ ಗಪ್ಪುಗಣಪತಿಯವರ ಅಡಿಕೆ ತೋಟಕ್ಕೆಕೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ನಷ್ಟ ಉಂಟುಮಾಡಿವೆ. ಇದೇ ರೀತಿಯಾಗಿ ಗ್ರಾಮದ ಕಾಫಿ ಬೆಳೆಗಾರರಾದ ಚಂಡೀರ ಜಗದೀಶ್, ರನ್ನು ಉತ್ತಪ್ಪ, ದೇವರಾಜ್, ಪೂಣಚ್ಚ ಸೇರಿದಂತೆ ಇತರರ ತೋಟಗಳಿಗೂ ಕಾಡಾನೆಗಳು ನುಗ್ಗಿ ಕಾಫಿ ,ಅಡಿಕೆ, ತೆಂಗು, ಕರಿಮೆಣಸು,ಬಾಳೆ ಸೇರಿದಂತೆ ಕೃಷಿ ಉತ್ಪನ್ನ ಗಿಡಗಳನ್ನು ಧ್ವಂಸ ಮಾಡಿ ಬೆಳೆಗಳನ್ನು ನಾಶ ಪಡಿಸಿ ನಷ್ಟ ಸಂಭವಿಸಿದೆ. ಚೆಯ್ಯಂಡಾಣೆ ನರಿಯಂಡಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮದಲ್ಲಿ ಕಾಡಾನೆಗಳ ಉಪಟಳ ದಿಂದ ಗ್ರಾಮಸ್ಥರು ನಲುಗುವಂತಾಗಿ ಕಳೆದ ಕೆಲವು ದಿನಗಳಿಂದ ಕಾಡಾನೆಗಳ ಹಿಂಡು ಪ್ರತ್ಯಕ್ಷಗೊಂಡು ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದೆ. ಕಾಡಾನೆಗಳ ಉಪಟಳದಿಂದ ಕಾರ್ಮಿಕರು ಕೆಲಸಕ್ಕೆ ತೆರಳು ಹಿಂದೇಟು ಹಾಕುತ್ತಿದ್ದು, ಮನೆಯಲ್ಲಿ ಕೂರುವ ಪ್ಪರಿಸ್ಥಿತಿ ಉದ್ಭವಿಸಿದೆ. ಆದ್ದರಿಂದ ಅರಣ್ಯ ಇಲಾಖೆಯ ಅಧಿಕಾರಿಗಳು ಆನೆಗಳ ಸ್ಥಳಾಂತರ ಅಥವಾ ಪರ್ಯಾಯ ವ್ಯವಸ್ಥೆಗೆ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ತಪ್ಪಿದಲ್ಲಿ ಕಕ್ಕಬೆ ಪಟ್ಟಣದಲ್ಲಿ ಹುಣಸೂರು -…
ವಿರಾಜಪೇಟೆ ಜು.10 : ವಿರಾಜಪೇಟೆ ಪಟ್ಟಣದ ಸೆಂಟ್ ಆನ್ಸ್ ಪದವಿ ಕಾಲೇಜಿನ ಅಂತಿಮ ಬಿಬಿಎ ವಿಭಾಗದ ವಿದ್ಯಾರ್ಥಿಗಳು ಮೈಸೂರು ಬನ್ನಿಮಂಟಪದಲ್ಲಿರುವ ಜೆ.ಎಸ್.ಎಸ್. ಕಾಲೇಜ್ ಆಫ್ ಹೈಯರ್ ಎಜುಕೇಶನ್ ಅಕಾಡೆಮಿ ಆಂಡ್ ರಿಸರ್ಚ್ ವಿಭಾಗಕ್ಕೆ ಭೇಟಿ ನೀಡಿ ಉದ್ಯಮಶೀಲತೆಯ ಬಗ್ಗೆ ತಿಳಿದುಕೊಂಡರು. ಇದೊಂದು ಶೈಕ್ಷಣಿಕ ಭೇಟಿಯಾಗಿದು,್ದ ವಿದ್ಯಾರ್ಥಿಗಳಿಗೆ ಜೆ.ಎಸ್.ಎಸ್. ಸಂಸ್ಥೆಯ ವೃಕ್ಷ ಘಟಕದ ನಿರ್ದೇಶಕರು ಹಾಗೂ ವ್ಯವಸ್ಥಾಪಕ ರಾದ ಗಿರೀಶ್, ಉದ್ಯಮಶೀಲತೆಯ ಮಾರ್ಗಗಳನ್ನು ಉದಾಹರಣೆ ಸಮೇತ ವಿವರಿಸಿದರು. ಉದ್ಯಮಶೀಲತೆ ಎಂಬುವುದು ಸ್ವಂತ ವ್ಯವಹಾರ ದೃಷ್ಟಿಕೋನವನ್ನು ಬೆಳೆಸಿಕೊಂಡರೆ ಮಾತ್ರ ಸಾಧ್ಯ, ವಿದ್ಯಾರ್ಥಿಗಳು ಈ ಹಂತದಿಂದಲೇ ಉದ್ಯಮದ ಸ್ಥಾಪನಾ ವಿಧಾನವನ್ನು ಅರಿಯಬೇಕೆಂದರು. ಸ್ವಂತ ಉದ್ಯಮಿ ಆಗಲು ಇಂದು ಹಲವು ಅವಕಾಶಗಳಿದ್ದು ಅದನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಸಂಶೋಧನೆಯತ್ತ ವಿದ್ಯಾರ್ಥಿಗಳು ಗಮನ ಹರಿಸಬೇಕು. ಅಭಿವೃದ್ಧಿಶೀಲ ಭಾರತಕ್ಕೆ ಉದ್ಯಮ ಘಟಕದ ಪಾತ್ರ ಅಪಾರವಾಗಿದೆ ಎಂದರು. ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಪ್ರಶ್ನೆಗಳನ್ನು ಕೇಳುವುದರ ಮೂಲಕ ತಮ್ಮ ಸಂದೇಹಗಳನ್ನು ಬಗೆಹರಿಸಿಕೊಂಡರು. ವಿದ್ಯಾರ್ಥಿಗಳು ಫಾರ್ಮಸಿ ವಿಭಾಗಕ್ಕೂ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು. ಈ ಸಂದರ್ಭದಲ್ಲಿ…
ಮಡಿಕೇರಿ ಜು.10 : ಮುಂದಿನ 2-3 ದಿನಗಳಲ್ಲಿ ರಾಜ್ಯದಾದ್ಯಂತ ಮಳೆಯ ಪ್ರಮಾಣ ಗಣನೀಯವಾಗಿ ಕಡಿಮೆಯಾಗುವ ಸಾಧ್ಯತೆಯಿದೆ. ಅದರ ನಂತರ, 2023 ರ ಜುಲೈ 13 ರಿಂದ 15 ರವರೆಗೆ ಕರಾವಳಿ, ಮಲೆನಾಡು ಮತ್ತು ಉತ್ತರ ಕರ್ನಾಟಕದ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದೆ.
ನಾಪೋಕ್ಲು ಜು.9 : ನಾಪೋಕ್ಲು ಸಮೀಪದ ಚೆಯ್ಯಂಡಾಣೆ ನರಿಯಂಡಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮದಲ್ಲಿ ಕಾಡಾನೆಗಳ ಉಪಟಳ ದಿಂದ ಗ್ರಾಮಸ್ಥರು ನಲುಗುವಂತಾಗಿದೆ. ಕಳೆದ ಕೆಲವು ದಿನಗಳಿಂದ ಗ್ರಾಮದಲ್ಲಿ ಬೀಡು ಬಿಟ್ಟಿರುವ ಕಾಡಾನೆಗಳು ತೋಟಗಳಿಗೆ ನುಗ್ಗಿ ಕಾಫಿ ,ಅಡಿಕೆ, ತೆಂಗು, ಕರಿಮೆಣಸು,ಬಾಳೆ ಸೇರಿದಂತೆ ಕೃಷಿ ಉತ್ಪನ್ನ ಗಿಡಗಳನ್ನು ಧ್ವಂಸ ಪಡಿಸುತ್ತಿವೆ ಎಂದು ಗ್ರಾಮಸ್ಥರು ಅವಲತ್ತುಕೊಂಡಿದ್ದಾರೆ.ಈಚೆಗೆಹಲವು ತೋಟಗಳಿಗೆ ನುಗ್ಗಿರುವ ಕಾಡಾನೆಗಳು ಬಾಳೆ ಗಿಡಗಳನ್ನು ದ್ವಂಸಪಡಿಸಿ ರಸ್ತೆಗಳಲ್ಲಿ ಎಳೆದೊಯ್ದಿರುವ ದೃಶ್ಯಗಳು ಕಂಡುಬಂದಿವೆ. ಭತ್ತದ ಬಿತ್ತನೆಗಾಗಿ ಗದ್ದೆಗಳನ್ನು ಸಿದ್ಧಪಡಿಸಲಾಗಿದ್ದು ಬಿತ್ತನೆಗೂ ಮುನ್ನವೇ ಆನೆಗಳು ಗದ್ದೆಗಳಲ್ಲಿ ಅಡ್ಡಾಡಿವೆ.ಬಿತ್ತನೆ ಮುಗಿದ ನಂತರ ಮತ್ತೆ ಕಾಡಾನೆಗಳು ಪೈರುಗಳನ್ನು ಧ್ವಂಸ ಮಾಡುವ ಆತಂಕವಿದ್ದು ಭತ್ತದ ಕೃಷಿ ಮಾಡುವುದು ಸಹ ಅಸಾಧ್ಯವಾಗಿದೆ, ಈ ನಿಟ್ಟಿನಲ್ಲಿ ಸಂಬಂಧಪಟ್ಟವರು ಯಾರು ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮಸ್ಥರು ಸಮಾಧಾನ ವ್ಯಕ್ತಪಡಿಸಿ ರಸ್ತೆ ತಡೆ ಪ್ರತಿಭಟನೆಗೆ ಮುಂದಾಗಿದ್ದಾರೆ. ಕಾಡಾನೆಗಳಿಂದ ಉಪಟಳದಿಂದ ಕಂಗೆಟ್ಟ ಕೋಕೇರಿ, ಮರಂದೋಡ,ನರಿಯಂದಡ ಹಾಗೂ ಚೇಲಾವರ ಗ್ರಾಮಸ್ಥರು ಸೋಮವಾರ ವಿರಾಜಪೇಟೆ – ನಾಪೋಕ್ಲು ಮುಖ್ಯರಸ್ತೆಯ ಚೆಯ್ಯಂಡಾಣೆಯ ಕೂಡ…
ನಾಪೋಕ್ಲು ಜು.9 : ಕಾಡಾನೆಗಳ ಹಿಂಡು ಸಮೀಪದ ಚೆಯ್ಯಂಡಾಣೆ ನರಿಯಂಡಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಸ್ಥರ ನಿದ್ದೆಗೆಡಿಸಿದೆ. ಪಂಚಾಯಿತಿ ವ್ಯಾಪ್ತಿಯ ಕೋಕೇರಿ, ಚೆಯ್ಯಂಡಾಣೆ, ಚೇಲಾವರ, ನರಿಯಂದಡ ಗ್ರಾಮಗಳಲ್ಲಿ ಕಾಡಾನೆ ಹಾವಳಿ ಮಿತಿಮೀರಿದ್ದು, ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದೆ. ಕೋಕೇರಿ ಗ್ರಾಮದ ಮಚ್ಚಂಡ ಸುಮತಿ ಎಂಬವರ ತೋಟಗಳಲ್ಲಿ ನಿರಂತರ ದಾಳಿ ನಡೆಸಿರುವ ಕಾಡಾನೆಗಳು ಕಾಫಿ ಗಿಡ ಸೇರಿದಂತೆ ಇನ್ನಿತರ ಕೃಷಿ ಗಿಡಗಳನ್ನು ತುಳಿದು ನಾಶ ಮಾಡಿದೆ. ತೋಟಕೆ ತೆರಳುವ ಗೇಟ್ ಅನ್ನು ತುಳಿದು ಹಾನಿ ಪಡಿಸಿ ಗ್ರಾಮದಲ್ಲಿ ತೋಟಗಳಿಗೆ ಲಗ್ಗೆ ಇಟ್ಟಿರುವ ಕಾಡಾನೆಗಳ ಹಿಂಡು ಗ್ರಾಮಸ್ಥ ಮುಕ್ಕಾಟಿ ಚಿನ್ನಪ್ಪ ಅವರ ಮನೆಯ ಆವರಣದಲ್ಲಿದ್ದ ದೊಡ್ಡ ಗಾತ್ರದ ಕಂಚಿನ ಕಡಾಯವನ್ನು ತುಳಿದು ಹಾನಿ ಪಡಿಸಿದೆ. ಈ ವ್ಯಾಪ್ತಿಯ ಚೋಯಮಂಡ, ಮೇರಿಯಂಡ, ಮುಕ್ಕಾಟಿ, ಕನ್ನಡಿಯಂಡ, ಮಾರ್ಚಂಡ ಕುಟುಂಬಸ್ಥರ ತೋಟಗಳಿಗೆ ಕಾಡಾನೆಗಳ ಹಾವಳಿಯಿಂದ ಅಪಾರ ನಷ್ಟ ಉಂಟಾಗಿದೆ. ಕೃಷಿ ಪಸಲುಗಳು ಹಾನಿಯಾಗಿದೆ.ಚೆಯ್ಯಂಡಾಣೆ,ಚೇಲಾವರ ಭಾಗದ ತೋಟಗಳಿಗೆ ಕಾಡಾನೆಗಳ ಹಿಂಡು ಲಗ್ಗೆ ಇಟ್ಟು ದಾಂದಲೆ ಮಾಡುತ್ತಿರುವುದರಿಂದ ಕಾರ್ಮಿಕರು ಭಯಗೊಂಡು ತೋಟಕೆ ಕೆಲಸಕ್ಕೆ…






